AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಈ ರಾಶಿಯವರು ಆತುರದ ಪ್ರಯಾಣವನ್ನು ಮಾಡುವುದು ಬೇಡ

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ನವೆಂಬರ್​ 10) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ಈ ರಾಶಿಯವರು ಆತುರದ ಪ್ರಯಾಣವನ್ನು ಮಾಡುವುದು ಬೇಡ
ರಾಶಿ ಭವಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 10, 2023 | 12:45 AM

ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್​ 10) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಹಸ್ತಾ, ಯೋಗ: ವಿಷ್ಕಂಭ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 32 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆಗೆ, ರಾಹು ಕಾಲ ಬೆಳಗ್ಗೆ 10:50 ರಿಂದ ಮಧ್ಯಾಹ್ನ 12:16ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:09 ರಿಂದ 04:35ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:58 ರಿಂದ 09:24ರ ವರೆಗೆ.

ಧನು ರಾಶಿ : ನಿಮ್ಮ ಕಠಿಣ ಪರಿಶ್ರಮದಿಂದ ನೀವು ಉತ್ತಮ ಫಲಿತಾಂಶವನ್ನು ಪಡೆಯುವಿರಿ. ಇಂದು ತಾಯಿಯ ಕಡೆಯಿಂದ ಪ್ರೀತಿ ಮತ್ತು ವಿಶೇಷ ಬೆಂಬಲದ ಸಾಧ್ಯತೆಯಿದೆ. ಮೋಜಿಗಾಗಿ ಹಣವನ್ನು ಖರ್ಚು ಮಾಡುತ್ತೀರಿ. ಇದು ನಿಮ್ಮ ಶತ್ರುಗಳನ್ನು ಅಸಮಾಧಾನಗೊಳಿಸುತ್ತದೆ. ಇಂದು ಪೋಷಕರ ಬಗ್ಗೆ ವಿಶೇಷ ಕಾಳಜಿ ವಹಿಸಿ. ಅಪರಿಚಿತರ ಮಾತನ್ನು ನೀವು ನಂಬುವಿರಿ. ಪರೀಕ್ಷೆಯ ಸಿದ್ಧತೆಯಲ್ಲಿ ವಿದ್ಯಾರ್ಥಿಗಳಿಗೆ ಗೊಂದಲವಾಗಬಹುದು. ಬಂಧುಗಳ ವಿಯೋಗವೂ ಆಗಬಹುದು. ಸ್ನೇಹಿತರು ಕೇಳಿದರೂ ಸಹಾಯ ಮಾಡದೇ ಇರುವುದು ನಿಮಗೆ ಸಂದೇಹ ಬರುವುದು. ಪ್ರೇಮವು ನೀವಂದುಕೊಂಡಂತೆ ಮುಕ್ತಾಯವಾದುದ್ದು ನಿಮಗೆ ಖುಷಿಕೊಡುವುದು. ಅಂದುಕೊಂಡಂತೆ ಆಗಿದ್ದಕ್ಕೆ ಸಂತೋಷವು ಇರಲಿದೆ. ವಿದೇಶದಲ್ಲಿ ಉದ್ಯೋಗಕ್ಕಾಗಿ ಪ್ರಯತ್ನಿಸುವಿರಿ. ಗೌಪ್ಯವಾಗಿ ವ್ಯವಹಾರವನ್ನು ನಡೆಸುವಿರಿ.

ಮಕರ ರಾಶಿ : ಇಂದು ವ್ಯರ್ಥವಾಗಿ ಖರ್ಚು ಮಾಡುವುದನ್ನು ತಪ್ಪಿಸಬೇಕು. ನೀವು ದೈಹಿಕಪೀಡೆಯಿಂದ ಬಳಲುತ್ತಿದ್ದರೆ ದುಃಖವು ಹೆಚ್ಚಾಗಬಹುದು. ಸಾಮಾಜಿಕ ಚಟುವಟಿಕೆಗಳಲ್ಲಿ ಅಡಚಣೆ ಇರುವುದು. ಮಕ್ಕಳ ಕಡೆಯಿಂದ ಸಂತೋಷದ ಸುದ್ದಿ ಇರುತ್ತದೆ. ಸ್ತ್ರೀಯರು ತಾಳ್ಮೆಯನ್ನು ಕಳೆದುಕೊಳ್ಳುವ ಸಂಭವವಿದೆ. ನಿಮ್ಮ ಸಾಮರ್ಥ್ಯದ ಬಗ್ಗೆ ನಿಮಗೇ ಸರಿಯಾಗಿ ಗೊತ್ತಿಲ್ಲದೇ ಹೋಗಬಹುದು. ಮಕ್ಕಳ ಶುಭವಾರ್ತೆಯು ಸಂತಸಕೊಡಬಹುದು. ಬಂಗಾರದ ಮೇಲೆ‌ ಹೂಡಿಕೆ ಮಾಡುವಿರಿ. ಆತುರದ ಪ್ರಯಾಣವನ್ನು ಮಾಡುವುದು ಬೇಡ. ಯಂತ್ರೋಪಕರಣಗಳ ಮಾರಾಟದಿಂದ ನಷ್ಟವಾಗುವ ಸಾಧ್ಯತೆ ಇದೆ. ಬಂದ ಅವಕಾಶಗಳನ್ನು ಕೈ ಬಿಡುವಿರಿ. ನಿಮ್ಮ ಮಾತಿಗೆ ಯಾರೂ ಬೆಲೆ ಕೊಡದೇ ಇರುವುದು ಬೇಸರವಾದೀತು. ಇಂದು ಯಾವ ಕಾರ್ಯಕ್ಕೂ ನಿಮಗೆ ಶ್ರದ್ಧೆಯು ಇಲ್ಲವಾಗುವುದು.

ಕುಂಭ ರಾಶಿ : ಇಂದು ಕಾರ್ಯದಲ್ಲಿ ನಿರತರಾಗುತ್ತಾರೆ. ನಿಮ್ಮ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವು ಇಂದು ನಿಮಗೆ ಪ್ರಯೋಜನವನ್ನು ನೀಡುತ್ತದೆ. ಸ್ಥಗಿತಗೊಂಡ ಕೆಲಸವನ್ನು ಪೂರ್ಣ ಮಾಡುವಿರಿ. ಇಂದು ನಿಮ್ಮ ಕೆಲಸವನ್ನು ಬದಲು ಮಾಡಿಕೊಳ್ಳಲಿದ್ದೀರಿ. ಶುಭ ಸಮಾರಂಭದಲ್ಲಿ ಭಾಗವಹಿಸಲು ನಿಮಗೆ ಅವಕಾಶ ಸಿಗುತ್ತದೆ. ಅಧಿಕಾರಕ್ಕೆ ಸಂಬಂಧಿಸಿದಂತೆ ಮಿತ್ರನಿಂದ ನಿಮಗೆ ವಂಚನೆಯಾಗಿರುವುದು ಗೊತ್ತಾಗುವುದು. ಕಳೆದುದ್ದು ಸಣ್ಣ ವಸ್ತುವೇ ಆದರೂ ಬಹಳ ಬೇಸರಗೊಳ್ಳುವಿರಿ. ಮನೆಯ ಕೆಲಸದಲ್ಲಿ ಸಮಯವನ್ನು ಕಳೆಯುವಿರಿ. ಮಕ್ಕಳಿಗೆ ಉದ್ಯೋಗವನ್ನು ಕೊಡಿಸಲು ಕೆಲವರನ್ನು ಭೇಟಿಯಾಗುವಿರಿ. ಕಣ್ಣಿನ ತೊಂದರೆಯಿಂದ ಕಷ್ಟವಾದೀತು. ನಿರುದ್ಯೋಗದಿಂದ‌ ಮನೆಯಲ್ಲಿಯೇ ಕುಳಿತು ಬೇಸರವಾಗುವುದು. ನಿಮ್ಮ ಬಗ್ಗೆ ಸಕಾರಾತ್ಮಕ ಮಾತುಗಳನ್ನು ಆಡುವರು.

ಮೀನ ರಾಶಿ : ಇಂದು ಯಾವುದೋ ಸಂಸ್ಥೆಯಿಂದ ಸಾಲ ತೆಗೆದುಕೊಳ್ಳಲು ಬಯಸುತ್ತಾರೆ. ಇಂದು ನೀವು ಸರ್ಕಾರದಿಂದ ಗೌರವ ಸಿಗಬಹುದು. ಹಳೆಯ ಸ್ನೇಹಿತರು ಬೆಂಬಲಕ್ಕೆ ನಿಲ್ಲುವರು. ನಿಮ್ಮ ಸಂಗಾತಿಯಿಂದ ಕೆಲವು ಕಾರ್ಯಗಳಿಗೆ ಬೆಂಬಲವನ್ನು ಪಡೆಯಬಹುದು. ಇಂದಿನ ಕಾರ್ಯವನ್ನು ಸಾಧನೆ ಮಾಡಲು ಹೆಚ್ಚಿನ ಓಡಾಟವು ಬರಬಹುದು. ಧಾರ್ಮಿಕ ಆಚರಣೆಯಿಂದ ಸಂಕಷ್ಟಗಳು ದೂರಾಗುವ ನಂಬಿಕೆ ಇರಲಿದೆ. ರಾಜಕಾರಣಿಗಳು ಸಮಾರಂಭಗಳಿಗೆ ಭಾಗವಹಿಸುವರು. ಗೌರವವೂ ಸಿಗಲಿದೆ. ಸರ್ಕಾರದ ಕೆಲಸವನ್ನು ಪ್ರಭಾವಿ ವ್ಯಕ್ತಿಗಳ ಮೂಲಕ ಮುನ್ನಡೆಸುವಿರಿ. ಆರೋಗ್ಯವೂ ಕೆಡಬಹುದು. ನಿಮಗೆ ಬರುವ ಆಸ್ತಿಯಲ್ಲಿ ಹೆಚ್ಚಿನ ಲಾಭವನ್ನು ಅಪೇಕ್ಷಿಸುವಿರಿ. ಮಾತಿನಿಂದ ನಿಮಗೆ ಕಷ್ಟವಾದೀತು. ಖರ್ಚಿನ ವಿಚಾರದಲ್ಲಿ ಗೊಂದಲವಾಗಬಹುದು.

-ಲೋಹಿತಶರ್ಮಾ 8762924271 (what’s app only)

ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ