AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ರಾಶಿಭವಿಷ್ಯ, ಈ ರಾಶಿಯವರಿಗೆ ಇಂದು ಯಶಸ್ಸು ಸುಲಭದಲ್ಲಿ ಲಭ್ಯವಾಗುವುದಿಲ್ಲ

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಆಗಸ್ಟ್ 15) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ರಾಶಿಭವಿಷ್ಯ, ಈ ರಾಶಿಯವರಿಗೆ ಇಂದು ಯಶಸ್ಸು ಸುಲಭದಲ್ಲಿ ಲಭ್ಯವಾಗುವುದಿಲ್ಲ
ಇಂದಿನ ದಿನಭವಿಷ್ಯ (Photo Credit: iStock)
TV9 Web
| Updated By: Rakesh Nayak Manchi|

Updated on: Aug 15, 2023 | 12:45 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಆಗಸ್ಟ್ 15 ಮಂಗಳವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಭವಿಷ್ಯ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಆಶ್ಲೇಷಾ, ಮಾಸ: ಅಧಿಕ ಶ್ರಾವಣ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ಅಮಾವಾಸ್ಯಾ, ನಿತ್ಯನಕ್ಷತ್ರ: ಆಶ್ಲೇಷಾ, ಯೋಗ: ಸಿದ್ಧ, ಕರಣ: ಚತುಷ್ಪಾತ್, ಸೂರ್ಯೋದಯ ಬೆಳಗ್ಗೆ 06 ರಿಂದ 19 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ರಿಂದ 53 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:45 ರಿಂದ 05:20 ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:28 ರಿಂದ 11:02ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:37 ರಿಂದ 02:11ರ ವರೆಗೆ.

ಧನು ರಾಶಿ: ಹಲವು ದಿನಗಳಿಂದ ನಿರೀಕ್ಷಿಸುತ್ತಿದ್ದ ಬಡ್ತಿಯು ಇಂದು ಸಿಗಲಿದೆ. ನಿಮ್ಮ ಧಾರ್ಮಿಕ ಶ್ರದ್ಧೆಗೆ ಫಲ ದೊರೆತಂತಾಗುವುದು. ನಿಮ್ಮ ಸಾಮರ್ಥ್ಯವನ್ನು ತೋರಿಸಲು ಹಿಂದೇಟು ಹಾಕುವಿರಿ. ನಿಮ್ಮ ಯಶಸ್ಸಿಗೆ ಕಾರಣರಾದವರನ್ನು ಸ್ಮರಿಸಿಕೊಳ್ಳುವಿರಿ. ದೈಹಿಕ ಕಸರತ್ತನ್ನು ಅತಿಯಾಗಿ ಮಾಡಲು ಹೋಗುವುದು ಬೇಡ. ಅತಿಯಾದ ಆಪ್ತತೆಯು ನಿಮಗೆ ಮುಳುವಾಗಬಹುದು. ಆರ್ಥಿಕ ವ್ಯವಹಾರವನ್ನು ಯಾರ ಜೊತೆ ಕೂಡ ಹಂಚಿಕೊಳ್ಳುವುದು ಬೇಡ. ಸುಖವಾಗಿರಲು ಮಾರ್ಗವನ್ನು ಹುಡುಕುವಿರಿ. ಅತಿಯಾದ ಲೋಭವು ನಿಮಗೆ ಮಾರಕವಾದೀತು. ಒಂದು ಕ್ಷಣವೂ ಒಂದು ಕಡೆ ಕುಳಿತಿರಲಾರಿರಿ.

ಮಕರ ರಾಶಿ: ಅಪ್ರಸಿದ್ಧ ಸಂಸ್ಥೆಗೆ ಹಣ ಹೂಡಿಕೆ ಮಾಡಿ ನಿಮ್ಮ ಹಣವನ್ನು ಕಳೆದುಕೊಳ್ಳುವಿರಿ. ಕರಕುಶಲ ವ್ಯಾಪಾರಿಗಳು ಅಧಿಕ ಲಾಭವನ್ನು ಪಡೆಯುವರು. ಸರ್ಕಾರಿ‌ ಕೆಲಸಕ್ಕೆ ಪ್ರಯತ್ನಿಸಿದರೂ ಸುಲಭವಾಗಿ ಸಿಗದು. ನಿಮ್ಮ ಆಸ್ತಿಗೆ ಸಂಬಂಧಿಸಿದ ವ್ಯವಹಾರವನ್ನು ಮಾಡಲು ಹೆಚ್ಚು ಓಡಾಟವಾಗುವುದು. ನಿಮ್ಮ ಬಗ್ಗೆ ಪ್ರಶಂಸೆಯ ಮಾತುಗಳು ಕೇಳಿಬರುವುದು. ಎಲ್ಲರನ್ನೂ ಮೆಚ್ಚಿಸಿ ನಿಮ್ಮ ಕೆಲಸವನ್ನು ಸಾಧಿಸಿಕೊಳ್ಳಲು ಸಾಧ್ಯವಾಗದು. ಗೌರವದ ಅಪೇಕ್ಷೆಯು ಇಲ್ಲದಿದ್ದರೂ ನಿಮಗೆ ಸುಕೃತದಿಂದ ಸಿಗುವುದು. ಸ್ನೇಹಿತರ ಜೊತೆ ಹೆಚ್ಚು ಸಮಯವನ್ನು ಕಳೆಯುವಿರಿ. ಆಗಬೇಕಾದ ಕಾರ್ಯಗಳ ಬಗ್ಗೆ ನಿಮಗೆ ಗಮನವು ಕಡಿಮೆ‌ ಇರುವುದು.

ಕುಂಭ ರಾಶಿ: ನಿಮ್ಮ ಪಾಲುದಾರಿಕೆಯ ಒಪ್ಪಂದವನ್ನು ಪುನಃ ಮಾಡಿಕೊಳ್ಳುವ ಸನ್ನಿವೇಶಗಳು ಬರಲಿದ್ದು ಆಲೋಚಿಸಿ ಒಪ್ಪಿಗೆ ನೀಡಿ. ಗುರಿಯ ಬಗ್ಗೆ ಸ್ಪಷ್ಟ ಕಲ್ಪನೆ ಇಲ್ಲದಿರುವುದು ವೈಫಲ್ಯಕ್ಕೆ ಕಾರಣವಾಗಿದೆ. ವಿದ್ಯಾರ್ಥಿಗಳಿಗೆ ಪ್ರೋತ್ಸಾಹವು ಕಡಿಮೆ ಆಗುವುದು. ನಿಮ್ಮೊಳಗೆ ಯಾರೂ ಸಾಧಿಸದ್ದನ್ನು ತಾನು ಸಾಧಿಸಿದೆನೆಂಬ ತೃಪ್ತಿ, ಅದಕ್ಕಿಂತ ಹೆಚ್ಚು ಅಹಂಕಾರವು ಇರಲಿದೆ‌. ಬರಬೇಕಾದ ಹಣದಲ್ಲಿ ವಂಚನೆಯಾಗುವ ಸಾಧ್ಯತೆ ಇದೆ. ಇಂದಿನ ನಿಮ್ಮ ವೈಯಕ್ತಿಕ ಕೆಲಸ ನಡುವೆ ಕಛೇರಿಯ ಕೆಲಸಗಳು ಹಿಂದೆ ಉಳಿಯುವುದು. ನಿಮ್ಮ ಅನಾರೋಗ್ಯದ ಸ್ಥಿತಿಯು ಎಂದಿಗಿಂತ ಹೆಚ್ಚಾಗಬಹುದು. ನಿಮಗೆ ಯಶಸ್ಸು ಸುಲಭದಲ್ಲಿ ಲಭ್ಯವಿಲ್ಲ.

ಮೀನ ರಾಶಿ: ನಿಮ್ಮ ಆತ್ಮೀಯವಾದ ಮಾತುಕತೆಗಳಿಂದ ಅಪರಿಚಿತರು ಆಪ್ತರಾಗುವರು. ಆಕಸ್ಮಿಕ ದ್ರವ್ಯಪ್ರಾಪ್ತಿಯು ಆಗಲಿದೆ. ದಾಂಪತ್ಯದಲ್ಲಿ ಪರಸ್ಪರ ನಂಬಿಕೆಗಳು ದೃಢವಾಗುವುದು. ಆದಾಯದ ಮೂಲವು ಬದಲಾವಣೆ ಆಗಬಹುದು. ಕಲ್ಪನೆಗೆ ಸಿಗದ ಬದಲಾವಣೆಯನ್ನು ನೀವು ನೋಡಬಹುದು. ಸೌಂದರ್ಯದ ಅತಿಶಯದಿಂದ ನೀವು ಆಕರ್ಷಕವಾಗಿ ಕಾಣುವಿರಿ‌. ಒತ್ತಡದಿಂದ ಹೊರ ಬರಲು ವೃತ್ತಿಯಲ್ಲಿ ವಿರಾಮ ಸಮಯವನ್ನು ನಿರೀಕ್ಷಿಸುವಿರಿ. ಉಪಕಾರದ ವಿಸ್ಮತಣೆಯಾಗಿ ಪಶ್ಚಾತ್ತಾಪ ಪಡುವಿರಿ. ದಶರಥನಿಂದ ವಿರಚಿತವಾದ ಶನಿಯ ಸ್ತೋತ್ರವನ್ನು ಪಠಿಸಿ.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್