AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ರಾಶಿಭವಿಷ್ಯ, ಉದ್ಯೋಗದಲ್ಲಿ ಆಯ್ಕೆ ಸಮಸ್ಯೆಯು ಬರಬಹುದು, ಶತ್ರುಗಳ ಸಂಚಿಗೆ ಬಲಿಯಾಗುವಿರಿ

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಸೆಪ್ಟೆಂಬರ್ 15) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ರಾಶಿಭವಿಷ್ಯ, ಉದ್ಯೋಗದಲ್ಲಿ ಆಯ್ಕೆ ಸಮಸ್ಯೆಯು ಬರಬಹುದು, ಶತ್ರುಗಳ ಸಂಚಿಗೆ ಬಲಿಯಾಗುವಿರಿ
ಜ್ಯೋತಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 15, 2023 | 12:40 AM

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಸೆಪ್ಟೆಂಬರ್ 15) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಹಸ್ತಾ, ಯೋಗ: ಐಂದ್ರ, ಕರಣ: ಕಿಂಸ್ತುಘ್ನ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 33 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:57 ರಿಂದ ಮಧ್ಯಾಹ್ನ 12:28 ರವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:31 ರಿಂದ 05:02ರ ವರೆಗೆ, ಗುಳಿಕ ಕಾಲ ಸಂಜೆ 07:54 ರಿಂದ 09:25ರ ವರೆಗೆ.

ಧನು ರಾಶಿ : ಧಾರ್ಮಿಕ ವಿಚಾರವಾಗಿ ನೀವು ದೂರ ಪ್ರಯಾಣವನ್ನು ಮಾಡುವಿರಿ. ಏಕಾಗ್ರತೆಯಿಂದ ನಿಮ್ಮ ಮತ್ತೆಲ್ಲ ಕಾರ್ಯಗಳೂ ನಿಧಾನವಾಗಬಹುದು. ಪರಿಶ್ರಮದಿಂದ ಧನಾರ್ಜನೆ ಮಾಡಿದ್ದು ನಿಮಗೆ ಅಧಿಕ ಸಂತೋಷವಾಗುವುದು. ಉದ್ಯೋಗವಿಲ್ಲದೇ ಬೇಸರಗೊಂಡ ನಿಮಗೆ ಬೇರೆಕಡೆಯಲ್ಲಿ ಕೆಲಸವು ಸಿಗುವುದು. ಇಂದಿನ ಸಂದರ್ಭವನ್ನು ನೋಡಿಕೊಂಡು ಮಾತನಾಡಿ. ನಿಮ್ಮ ಕೆಲಸದ ಸಮಯವು ಬದಲಾಗಲಿದ್ದು ಹೊಂದಿಕೊಳ್ಳುವುದು ಕಷ್ಟವಾದೀತು. ನಿಮ್ಮ ನಿಯಮಗಳನ್ನು ನೀವೇ ದಾಟುವಿರಿ. ರಾಜಕೀಯ ಜೀವನವು ನಿಮಗೆ ಅತಂತ್ರ ಸ್ಥಿತಿಯನ್ನು ತರಬಹುದು. ಹಣಕಾಸಿನ ಕೊರತೆಯನ್ನು ನೀವು ಕುಟುಂಬಕ್ಕೆ ಗೊತ್ತಾಗದಂತೆ ನಿರ್ವಹಿಸುವಿರಿ.

ಮಕರ ರಾಶಿ : ನಮ್ರತೆಯು ನಿಮ್ಮನ್ನು ಎತ್ತರಕ್ಕೆ ಏರಿಸುವುದು. ಹೇಳಿಕೊಳ್ಳಲಾಗದ ಸಂಕಟವನ್ನು ಮನಸ್ಸಿನಲ್ಲಿಯೇ ನುಂಗುವಿರಿ. ಪ್ರಭಾವಿ ಗಣ್ಯರ ಜೊತೆ ಕೆಲವು ಸಮಯವನ್ನು ಕಳೆಯುವಿರಿ. ವ್ಯವಹಾರದಲ್ಲಿ ಚುರುಕು ಸಾಲದು. ಉದ್ಯೋಗದಲ್ಲಿ ದಿನದಿಂದ ದಿನಕ್ಕೆ ಉಂಟಾದ ಒತ್ತಡದಿಂದ ಉದ್ಯೋಗವನ್ನು ಬದಲಿಸಲು ಯೋವಿಸುವಿರಿ. ಯಂತ್ರೋಪಕರಣದ ಮಾರಾಟಗಾರರಿಗೆ ಅಧಿಕ ಲಾಭವಾಗುವುದು. ಮನೆತನದ ಕಾರಣದಿಂದ ನಿಮಗೆ ಗೌರವವು ಪ್ರಾಪ್ತವಾಗಲಿದೆ. ಮೇಲಧಿಕಾರಿಗಳನ್ನು ಮೆಚ್ಚಿಸುವಿರಿ. ನೀವು ಇಂದು ನೋಡಲು ಪ್ರಶಾಂತವಾಗಿ ಕಂಡರೂ ನಿಮ್ಮಳಗೆ ಅಶಾಂತಿಯ ತರಂಗಗಳು ಒಂದೊಂದೊಗಿಯೇ ಮೇಲೆ ಬರುವುದು. ಹಣವನ್ನು ವ್ಯಯಿಸಿ ಉನ್ನತ ಅಧಿಕಾರವನ್ನು ಪಡೆಯುವಿರಿ.

ಕುಂಭ ರಾಶಿ : ಬರುವ ಹಣವು ಕೈಸೇರಿದರೂ ಖರ್ಚಿನ ದಾರಿ ನಿಮಗೆ ತೆರೆದಿರುವುದು. ಮಕ್ಕಳಿಗೆ ಸಿಗುವ ಪುರಸ್ಕಾರದಿಂದ ನಿಮಗೆ ಸಂತೋಷವಾಗುವುದು. ಅಪರೂಪದ ಮಿತ್ರರು ನಿಮ್ಮನ್ನು ಭೇಟಿ ಮಾಡುವರು. ಮನೆಗೆ ಅತಿಥಿಗಳ ಆಗಮನವಾಗಬಹುದು. ನಿಮ್ಮ ಮಕ್ಕಳನ್ನು ಓದಿಸಲು ಹೊರಗೆ ಕಳುಹಿಸುವ ನಿರ್ಧಾರವಿರಲಿದೆ. ಸ್ವಂತ ನಿರ್ಧಾರವನ್ನು ತೆಗೆದುಕೊಳ್ಳಲು ನೀವು ಸಫಲರಾಗುವುದಿಲ್ಲ. ಏಕಪಕ್ಷೀಯವಾದ ನಿರ್ಧಾರದಿಂದ ನಿಮ್ಮವರಿಗೆ ಬೇಸರವಾದೀತು. ಅಹಂಕಾರದಿಂದ ಸಾಧಿಸಲು ಶಕ್ಯವಾಗದ್ದನ್ನು ಪ್ರೀತಿಯಿಂದ ಸಾಧಿಸುವಿರಿ. ಸಂಗಾತಿಯಿಂದ ಪ್ರೀತಿಯು ಸಿಗಲಿದೆ. ವಿದೇಶಪ್ರಯಾಣದ ನಿರೀಕ್ಷೆಯಲ್ಲಿಯೇ ಇರುವಿರಿ‌.

ಮೀನ ರಾಶಿ : ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕೊರತೆಯು ಹೆಚ್ಚು ಕಂಡುಬರುವುದು. ಇಂದಿನ ವ್ಯವಹಾರದಲ್ಲಿ ನಿಮಗೆ ತೊಡಕಿರುವುದು. ಮನೆಯ ಎಷ್ಟೋ ವಿಚಾರಗಳು ನಿಮಗೆ ಗೊತ್ತಾಗದೇ ಹೋಗಬಹುದು. ಆಂತರಿಕ ಕಲಹವನ್ನು ಜಗಜ್ಜಾಹಿರ ಮಾಡಿಕೊಳ್ಳುವಿರಿ. ಇಂದು ಬಂಧುಗಳ ಕಾರಣಕ್ಕಾಹಿ ಧನವ್ಯಯವಾಗುವುದು. ನಿಮ್ಮ ಆಸ್ತಿಯ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳಿ. ಹಳೆಯ ನೋವುಗಳು ಕಾಣಿಸಿಕೊಳ್ಳಬಹುದು. ಉದ್ಯೋಗದಲ್ಲಿ ಆಯ್ಕೆ ಸಮಸ್ಯೆಯು ಬರಬಹುದು. ಶತ್ರುಗಳ ಸಂಚಿಗೆ ಬಲಿಯಾಗುವಿರಿ. ಕಾರ್ಯವನ್ನು ಸಂಕೀರ್ಣ ಮಾಡಿಕೊಳ್ಳುವಿರಿ. ಜವಾಬ್ದಾರಿಯುತ ಸ್ಥಾನವು ನಿಮಗೆ ಬೇಸರ ತರಿಸುವುದು.

-ಲೋಹಿತಶರ್ಮಾ – 8762924271 (what’s app only)

ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್