AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today: ಹಿತಶತ್ರುಗಳ ಬಾಧೆಯಿಂದ ತಪ್ಪಿಸಿಕೊಳ್ಳುವ ತನಕ ಈ ರಾಶಿಯವರ ಯಾವ ಉದ್ಯೋಗವೂ ಊರ್ಜಿತವಾಗದು

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಆಗಸ್ಟ್ 16) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope Today: ಹಿತಶತ್ರುಗಳ ಬಾಧೆಯಿಂದ ತಪ್ಪಿಸಿಕೊಳ್ಳುವ ತನಕ ಈ ರಾಶಿಯವರ ಯಾವ ಉದ್ಯೋಗವೂ ಊರ್ಜಿತವಾಗದು
ರಾಶಿಭವಿಷ್ಯImage Credit source: iStock Photo
TV9 Web
| Edited By: |

Updated on: Aug 16, 2023 | 12:45 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಆಗಸ್ಟ್ 16 ಬುಧವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಆಶ್ಲೇಷಾ, ಮಾಸ: ಅಧಿಕ ಶ್ರಾವಣ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಅಮಾವಾಸ್ಯಾ, ನಿತ್ಯನಕ್ಷತ್ರ: ಆಶ್ಲೇಷಾ, ಯೋಗ: ವರೀಯಾನ್, ಕರಣ: ನಾಗವಾನ್, ಸೂರ್ಯೋದಯ ಬೆಳಗ್ಗೆ 06 ರಿಂದ 19 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 53 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:37 ರಿಂದ 02:11ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:54 ರಿಂದ 09:28ರ ವರೆಗೆ, ಗುಳಿಕ ಕಾಲ ಬೆಳಗ್ಗೆ 11:02 ರಿಂದ ಮಧ್ಯಾಹ್ನ 12:37ರ ವರೆಗೆ.

ಧನು ರಾಶಿ: ನೀವು ಅಂದುಕೊಂಡ ಕೆಲಸವು ಆಗದೇಹೋದೀತು. ಸರ್ಕಾರಿ ದಾಖಲೆಗಳನ್ನು ಭದ್ರವಾಗಿ ಇರಿಕೊಳ್ಳಿ. ಹಣಕಾಸಿನ ವಿಚಾರಕ್ಕೆ ಸಹೋದರರ ನಡುವೆ ಚರ್ಚೆಯು ನಡೆಯಬಹುದು. ವಾಹನ ಚಲಾಯಿಸಲು ನಿಮಗೆ ಕಷ್ಟವಾದೀತು. ನಿಮ್ಮವರು ನಿಮ್ಮ ದೋಷವನ್ನೇ ಎತ್ತಿಹೇಳಬಹುದು. ಸಾಹಿತ್ಯದ ಆಸಕ್ತರು ತಮ್ಮ ಕ್ಷೇತ್ರದಲ್ಲಿ ಹೆಚ್ಚು ತೊಡಗಿಕೊಳ್ಳುವರು. ಎಲ್ಲವನ್ನೂ ಬಾಹುಬಲದಿಂದ ಸಾಧಿಸುತ್ತೇನೆ ಎಂಬ ಹುಂಬುತನ ವ್ಯರ್ಥ. ಬುದ್ಧಿಯನ್ನು ಬಳಸಿ ನಿಮ್ಮ ಕಾರ್ಯವನ್ನು ಮಾಡಿಕೊಳ್ಳಿ. ಇನ್ನೊಬ್ಬರ ಮೇಲಿನ ಅಸಮಾಧಾನವನ್ನು ನೀವು ಯಾವುದೋ ಸಂದರ್ಭದಲ್ಲಿ ಹೊರಹಾಕುವಿರಿ.

ಮಕರ ರಾಶಿ: ಹಣಕಾಸಿನ ವ್ಯವಹಾರದಿಂದ ನಿಮಗೆ ಅಪವಾದವು ಬರಬಹುದು. ದಾಂಪತ್ಯದಲ್ಲಿ ಅನಗತ್ಯ ವಾಗ್ವಾದಗಳು ನಡೆಯಬಹುದು. ಕುಟುಂಬದಲ್ಲಿ ಕೆಲವು ವಿಷಯಗಳನ್ನು ನಿಮಗೆ ಹೇಳದೇ ರಹಸ್ಯವಾಗಿ ಇಡುವರು. ಯಾರದೋ ಸಿಟ್ಟನ್ನು ಇನ್ನಾರದೋ ಮೇಲೆ ತೀರಿಸಿಕೊಳ್ಳುವಿರಿ. ಹಿತಶತ್ರುಗಳ ಬಾಧೆಯಿಂದ ತಪ್ಪಿಸಿಕೊಳ್ಳುವ ತನಕ ನಿಮ್ಮ ಯಾವ ಉದ್ಯೋಗವೂ ಊರ್ಜಿತವಾಗದು. ಪಾಲುದಾರಿಕೆಯ ವ್ಯವಹಾರವು ನಿಮಗೆ ಸಾಕು ಎನಿಸಬಹುದು. ಹಳೆಯ ವಾಹನವನ್ನು ನೀವು ಮಾರಾಟ‌ಮಾಡುವಿರಿ. ನೀವು ಇಂದು ಹೆಚ್ಚು ಒಂದೇ ಚಿಂತೆಯಲ್ಲಿ ಮಗ್ನರಾಗಿ ಇರುವಿರಿ. ಮನಸ್ಸು ನಿರ್ಲಿಪ್ತವಾಗಿ ಇರುವುದು.

ಕುಂಭ ರಾಶಿ: ನಿಮ್ಮ ಸ್ಥಾನದ ರಕ್ಷಣೆಗಾಗಿ ಇನ್ನೊಬ್ಬರ ಮೇಲೆ ಆರೋಪವನ್ನು ಮಾಡುವಿರಿ. ಕೆಲವು ಕೆಲಸಗಳಿಗೆ ನೀವು ಆಲಸ್ಯವನ್ನು ತೋರುವಿರಿ. ನಿಮ್ಮ ಸಂಕಟಕ್ಕೆ ಸ್ಪಂದಿಸಿದವರನ್ನು ನೀವು ಗೌರವಿಸಿ. ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ಏಕಾಗ್ರತೆಯ ಕೊರತೆ ಕಾಣಿಸುವುದು. ನಕಾರಾತ್ಮಕ ಆಲೋಚನೆಯನ್ನು ನೀವು ಕಡಿಮೆ ಮಾಡಿಕೊಳ್ಳುವುದು ಉತ್ತಮ. ನಿಮ್ಮ ಆಸಕ್ತಿಯ‌ ಕ್ಷೇತ್ರವೂ ನಿಮಗೆ ಇಷ್ಟವಾಗದೇ ಹೋಗುವುದು. ನಿಮ್ಮ ನಿರ್ಧಾರಗಳು ಬಲವಾದಂತೆ ಕಾರ್ಯಗಳಲ್ಲಿಯೂ ದೃಢತೆ ಇರಲಿ. ಸಿಕ್ಕ ಅಧಿಕಾರವನ್ನು ಸದುಪಯೋಗವಾಗುವಂತೆ ಮಾಡಿಕೊಳ್ಳಿ. ದೂರಾಲೋಚನೆಯನ್ನು ಅತಿಯಾಗಿ ಇಟ್ಟುಕೊಳ್ಳುವುದು ಬೇಡ.

ಮೀನ ರಾಶಿ: ಸಾಮಾಜಿಕ ಕಾರ್ಯಗಳಲ್ಲಿ ನಿಮಗೆ ಹೆಚ್ಚು ಆಸಕ್ತಿಯು ಇರುವುದು. ಪತ್ನಿಯ ಅನಗತ್ಯ ಖರ್ಚಿಗೆ ಕಡಿವಾಣ ಹಾಕುವಿರಿ. ಇದಕ್ಕಾಗಿ ವಾಗ್ವಾದವು ನಡೆಯಬಹುದು. ಮಕ್ಕಳನ್ನು ನಿರ್ಲಕ್ಷಿಸಿದರೆ ಕಷ್ಟವಾದೀತು. ನಿಮ್ಮ ಇಂದಿನ ಕೆಲಸಗಳನ್ನು ಬಾಕಿ ಉಳಿಸಿಕೊಳ್ಳಬೇಕಾದೀತು. ಉದ್ಯಮಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಒಬ್ಬರೇ ತೆಗೆದುಕೊಳ್ಳದೇ ಪರಿಚಿತರನ್ನು ಕೇಳಿ. ಎಂದೋ ಆದ ದೈಹಿಕ ಪೀಡೆಯು ಪುನಃ ಕಾಣಿಸಿಕೊಳ್ಳಬಹುದು. ವಿವಾಹ ಸಂಭ್ರಮದ ವಾತಾವರಣ ಮನೆಯಲ್ಲಿ ಇರಲಿದೆ. ಉದ್ಯೋಗಸ್ಥ ಸ್ತ್ರೀಯರು ಮಾನಸಿಕ ಕಿರಿಕಿರಿಯನ್ನು ಅನುಭವಿಸುವರು.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ