AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಈ ರಾಶಿಯವರ ದುಂದು ವೆಚ್ಚಕ್ಕೆ ಸಂಗಾತಿಯೇ ಬ್ರೇಕ್ ಹಾಕಬೇಕಾಗಿಬರಬಹುದು

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಸೆಪ್ಟೆಂಬರ್ 19) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ಈ ರಾಶಿಯವರ ದುಂದು ವೆಚ್ಚಕ್ಕೆ ಸಂಗಾತಿಯೇ ಬ್ರೇಕ್ ಹಾಕಬೇಕಾಗಿಬರಬಹುದು
ದಿನಭವಿಷ್ಯImage Credit source: iStock Photo
TV9 Web
| Updated By: Rakesh Nayak Manchi|

Updated on: Sep 19, 2023 | 12:45 AM

Share

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಸೆಪ್ಟೆಂಬರ್ 19) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ತುಲಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಚತುರ್ಥೀ, ನಿತ್ಯನಕ್ಷತ್ರ: ಅನೂರಾಧಾ, ಯೋಗ: ಆಯುಷ್ಮಾನ್, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 30 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 3:28 ರಿಂದ 04:59 ರವರೆಗೆ, ಯಮಘಂಡ ಕಾಲ ಬೆಳಿಗ್ಗೆ 09:25 ರಿಂದ 10:56ರವರೆಗೆ, ಗುಳಿಕ ಕಾಲ ಮಧ್ಯಾಹ್ನ 12:27 ರಿಂದ 1:57ರ ವರೆಗೆ.

ಧನು ರಾಶಿ: ವ್ಯಾಪಾರದಲ್ಲಿ ಲಾಭವನ್ನು ಕಂಡು ಏನಾದರೂ ಯೋಜನೆಯನ್ನು ಮಾಡಿ ಕಷ್ಟಕ್ಕೆ ಸಿಲುಕಿಕೊಳ್ಳುವಿರಿ. ಪ್ರಶಂಸೆಯಿಂದ ಸಣ್ಣ ಅಹಂಕಾರವು ಬರಬಹುದು. ‌ಮಿತ್ರರಿಗೆ ವಂಚಿಸುವ ಆಲೋಚನೆ ಬರಲಿದೆ. ಯಂತ್ರಗಳನ್ನು ಬಳಸಿಕೊಂಡು ಸಣ್ಣ ಉದ್ಯೋಗವನ್ನು ಆರಂಭಿಸುವಿರಿ. ವಿದೇಶದಲ್ಲಿ ಜೀವನಕ್ಕೆ ಕುತ್ತು ಬರುವ ಸಾಧ್ಯತೆ ಇದೆ. ಪ್ರವಚನಕಾರರಿಗೆ ಉತ್ತಮ ಅವಕಾಶಗಳು ಲಭ್ಯವಿರಲಿದೆ. ದೌರ್ಬಲ್ಯವನ್ನು ನೀವು ಸಕಾರಾತ್ಮಕವಾಗಿ ತೆಗೆದುಕೊಂಡವು ಸಾಧಿಸುವಿರಿ. ವಿದೇಶದ ಬಂಧುಗಳು ನಿಮ್ಮ ಉದ್ಯಮಕ್ಕೆ ಸಹಾಯ ಮಾಡುವರು. ಪೂರ್ವಯೋಜಿತ ಕಾರ್ಯಕ್ಕೂ ನೀವು ಸಮಯವನ್ನು ಹೊಂದಿಸಿಕೊಳ್ಳಲಾಗದು. ನಿಮ್ಮ ದುಂದು ವೆಚ್ಚಕ್ಕೆ ಸಂಗಾತಿಯೇ ಬ್ರೇಕ್ ಹಾಕಬೇಕಾಗಿಬರಬಹುದು. ಇಂದು ನಿಮಗೆ ಎಲ್ಲವನ್ನೂ ಪ್ರತಿಭಟಿಸುವ ಮನೋಭಾವ ಬರುವುದು.

ಮಕರ ರಾಶಿ: ಅನಿರೀಕ್ಷಿತವಾಗಿ ಧನವ್ಯಯವಾಗಿದ್ದು ಆತಂಕವು ಆಗಲಿದೆ. ರಾಜಕೀಯದಿಂದ ನೀವು ಪ್ರೇರಣೆ ಪಡೆಯುವಿರಿ. ಅನಾರೋಗ್ಯದ ಲಕ್ಷಣವು ಕಂಡಾಗಲೇ ಸರಿ ಮಾಡಿಕೊಳ್ಳಲು ಪ್ರಯತ್ನಿಸಿ. ಆರ್ಥಿಕ ಲಾಭದಿಂದ ನೀವು ಸಂತೋಷವಾಗಿ ಇರುವುದು ನಿಮ್ಮ ಮುಖದಲ್ಲಿ ಕಾಣಿಸುವುದು. ಹಳೆಯ ವಾಹನವನ್ನು ನೀವು ಖರೀದಿಸುವಿರಿ. ಸಾಲ ಮಾಡುವಾಗ ನಿಮ್ಮ ಆದಾಯವನ್ನು ಗಮನದಲ್ಲಿ ಇಟ್ಟುಕೊಳ್ಳುವುದು ಒಳ್ಳೆಯದು. ತಾಯಿಯ ಆರೋಗ್ಯದಲ್ಲಿ ಆದ ವ್ಯತ್ಯಾಸದಿಂದ ಚಿಂತೆಗೆ ಒಳಗಾಗುವಿರಿ. ಪ್ರಭಾವೀ ಜನರ ಭೇಟಿಯಿಂದ ಅನೇಕ ಲಾಭವನ್ನು ಮಾಡಿಕೊಳ್ಳುವಿರಿ. ಸಾಮಾಜಿಕ ಕಾರ್ಯಕ್ಕೆ ನಿಮ್ಮ ಸಣ್ಣ ಕೊಡುಗೆ ನೀಡುವಿರಿ. ನಿಮಗೆ ಕೊಟ್ಟ ಜವಾಬ್ದಾರಿಯಿಂದ ಒತ್ತಡದ ಕಾರಣಕ್ಕೆ ನೀವು ಹಿಮ್ಮುಖರಾಗುವಿರಿ.

ಕುಂಭ ರಾಶಿ: ಮನೆಯಲ್ಲಿ ಸಣ್ಣ ವಿಚಾರಕ್ಕೆ ನೀವು ವಿವಾದ ಮಾಡಿಕೊಳ್ಳುವಿರಿ. ನಿಮ್ಮ ನೆಮ್ಮದಿಯನ್ನು ಸಂಗಾತಿಯು ಭಂಗ ಮಾಡಬಹುದು. ಧಾರ್ಮಿಕ ವಿಚಾರದಲ್ಲಿ ನಿಮಗೆ ಸ್ಪಷ್ಟತೆ ಇರದು. ವಂಚನೆಯಲ್ಲಿ ಗೊತ್ತಾಗದಂತೆ ಸಿಕ್ಕಿಕೊಳ್ಳುವಿರಿ. ಅರೋಗ್ಯದ ಸುಧಾರಣೆಗೆ ವೈದ್ಯರ ಭೇಟಿ ಅವಶ್ಯಕ. ಎಲ್ಲರ ಮೇಲೂ ಕೋಪವು ಕಾರಣವಿಲ್ಲದೇ ಬರುವುದು. ರಾಜಕೀಯವನ್ನು ಬಂಧುಗಳ ನಡುವೆಯೂ ಮಾಡುವಿರಿ. ಆಸಕ್ತಿ ಇಲ್ಲದೇ ಇದ್ದರೂ ಕರ್ತವ್ಯದಲ್ಲಿ ಲೋಪವಿರಬಾರದು. ಮನಸ್ಸು ಚಂಚಲದಿಂದ ಯಾರ ಮಾತನ್ನೂ ಕೇಳುವ ಮನಃಸ್ಥಿತಿಯಲ್ಲಿ ಇರಲಾರಿರಿ. ದೂರದ ಬಂಧುಗಳು ಪರಿಚಿತರಾಗಿ ಅವರ ಜೊತೆ ಕಾಲ ಕಳೆಯುವಿರಿ. ನಿಮಗೆ ಕೃತಜ್ಞತೆ ಇರಲಿ. ಕುಲದೇವರ ಆರಾಧನೆಯನ್ನು ಮಾಡುವಿರಿ.

ಮೀನ ರಾಶಿ: ದಿನದ ಕಾರ್ಯದಲ್ಲಿ ಅಡೆತಡೆಯಾಗಲಿದೆ. ಆರ್ಥಿಕ ಸಂಕಟವನ್ನು ಸ್ನೇಹಿತರ ಸಹಾಯವನ್ನು ಪಡೆದು ಸರಿಮಾಡಿಕೊಳ್ಳುವಿರಿ. ನಿಮ್ಮ‌ ಮಾತಿನ ಮೇಲೆ‌ ನಿಯಂತ್ರಣವಿರಲಿ. ನಿಮ್ಮ ವಸ್ತುವು ಕಳ್ಳರಿಂದ ಅಪಹರಣ ಆಗುತಗತದೆವೆಂಬ ಭಯವು ಇರುವುದು. ಇನ್ನೊಬ್ಬರ ಬಳಿ‌ ಇರುವ ನಿಮ್ಮ‌ ವಸ್ತುವನ್ನು ಬಹಳ‌ ಪ್ರಯತ್ನದಿಂದ ಪಡೆಯುವಿರಿ. ಬಂಧುಗಳಿಗಾಗಿ ಸಾಲ ಮಾಡುವ ಹಾಗೆ ಅಸದ ಆಗಬಹುದು. ಕೃಷಿಯಲ್ಲಿ ಆದ ಪ್ರಗತಿಯಿಂದ ಸಂತೋಷವಾಗುವುದು. ಅನಾರೋಗ್ಯವನ್ನು ಸರಿ ಮಾಡಿಕೊಳ್ಳುವಲ್ಲಿ ನಿಮ್ಮ ಪ್ರಯತ್ನವೂ ಬೇಕು. ಇಂದು ನಿಮ್ಮ ವಿವಾಹದ ಮಾತುಕತೆಯನ್ನು ಆಡಲು ಹೋಗಲಿದ್ದೀರಿ. ನಿಮ್ಮ ಬಗ್ಗೆ ಕೆಲವು ಊಹಾಪೋಹಗಳು ಹರಡುವುದು.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?