Horoscope: ಈ ರಾಶಿಯವರು ಅನ್ಯರ ಮಾತಿನಿಂದ ನಿಮ್ಮ ಸಂಬಂಧವನ್ನು ಕೆಡಿಸಿಕೊಳ್ಳಬೇಡಿ

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ನವೆಂಬರ್​ 20) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ಈ ರಾಶಿಯವರು ಅನ್ಯರ ಮಾತಿನಿಂದ ನಿಮ್ಮ ಸಂಬಂಧವನ್ನು ಕೆಡಿಸಿಕೊಳ್ಳಬೇಡಿ
ರಾಶಿ ಭವಿಷ್ಯ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 20, 2023 | 12:45 AM

ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್​ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಕಾರ್ತಿಕ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ಧ್ರುವ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 36 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 05 ಗಂಟೆ 59 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 08:02 ರಿಂದ 09:27ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 10:53 ರಿಂದ ಮಧ್ಯಾಹ್ನ 12:18ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 01:43 ರಿಂದ 03:09ರ ವರೆಗೆ.

ಧನು ರಾಶಿ : ವಿವಾಹಕ್ಕೆ ಕೆಲವು ತಡೆಗಳು ಬರಬಹುದು. ವಿದೇಶ ಪ್ರಯಾಣದ ಸಿದ್ಧತೆಯಲ್ಲಿ ಇರುವಿರಿ.‌ ರಾಜಕೀಯವು ನಿಮ್ಮ ದಿಕ್ಕನ್ನೇ ಬದಲಿಸುವ ಸಾಧ್ಯತೆ ಇದೆ. ಇಂದು ಸಾರ್ವಜನಿಕ ಸಭೆಗಳನ್ನು ನಡೆಸಲು ಯೋಜಿಸುವಿರಿ‌. ಪ್ರಭಾವೀ ವ್ಯಕ್ತಿಗಳ ಒಡನಾಟವನ್ನು ಯಾರ ಜೊತೆಯಾದರೂ ಹಂಚಿಕೊಂಡು ಸಮಾಧಾನ ಮಾಡಿಕೊಳ್ಳುವಿರಿ. ಆಭರಣ ಮುಂತಾದ ಬಹು ಮೌಲ್ಯದ ವಸ್ತುವನ್ನು ಖರೀದಿಸುವಿರಿ. ನಿಮ್ಮ ಮನೆಯ ಕಾರ್ಯವು ಹಲವು ದಿನಗಳಿಂದ ನಿಂತಿದ್ದು ಮತ್ತೆ ಆರಂಭಿಸುವಿರಿ. ವೈಯಕ್ತಿಕ ಕಾರ್ಯದಲ್ಲಿ ಗಮನವು ಕಡಿಮೆ ಇರುವುದು. ಇಂದು ನಿಮಗೆ ಅನಿರೀಕ್ಷಿತ ಆನಂದವನ್ನು ತರುವ ವಾರ್ತೆಗಳು ಬರಬಹುದು. ಬಹಳ ದಿನಗಳ ಕಳೆದ ಮೇಲೆ ತಂದೆಯ ಜೊತೆ ಮಾತನಾಡಿ ನೆಮ್ಮದಿಯು ಪಡೆಯುವಿರಿ. ನಿಮ್ಮ ದೂರ ಪ್ರಯಾಣಕ್ಕೆ ಕುಟುಂಬದಿಂದ ಒಪ್ಪಿಗೆ ಸಿಗದು. ಇನ್ನೊಬ್ಬರ‌ ನೋವಿಗೆ ಸ್ಪಂದಿಸುವ ನಿಮ್ಮ ಗುಣದಿಂದ ಪ್ರೀತಿ ಹುಟ್ಟಿಕೊಳ್ಳಬಹುದು.

ಮಕರ ರಾಶಿ : ಅನ್ಯರ ಮಾತಿನಿಂದ ನಿಮ್ಮ ಸಂಬಂಧವನ್ನು ಕೆಡಿಸಿಕೊಳ್ಳಬೇಡಿ. ಸುಖಕ್ಕೆ ನಾನಾ ಮಾರ್ಗಗಳು ತೆರೆಯಬಹುದು. ಇಂದು ನೀವು ಮನೆಯ ಹಿರಿಯರಿಗೆ ಗೌರವ ತರುವ ಕಾರ್ಯವನ್ನು ಮಾಡುವಿರಿ. ನೀವು ಸಾಲವನ್ನು ಮಾಡಿದ್ದರೆ, ಇಂದು ನಿಮ್ಮ ಬಳಿ ಹಣವು ಬಂದು ಸೇರಿದರೂ ಮರುಪಾವತಿಗೆ ಮನಸ್ಸಾಗದು. ಕಾನೂನಿನ ಪಾಠವನ್ನು ಹಿರಿಯರು ಮಾಡುವರು. ಉದ್ಯೋಗಕ್ಕಾಗಿ ಬಂದ ಬಂಧುವಿಗೆ ಮಾರ್ಗದರ್ಶನ ಮಾಡುವಿರಿ. ಸಹೋದರನ ಸಹಕಾರವು ಅನುಕೂಲವೇ ಆಗುವುದು. ನೂತನ ವಾಹನದ‌ ಖರೀದಿಯನ್ನು ಮಾಡುವ ಇಚ್ಛೆಯು ಇಂದು ಪೂರ್ಣವಾಗುವುದು. ಹಿತಶತ್ರು ನಿಮ್ಮ‌ ಪತನವನ್ನೇ ನಿರೀಕ್ಷಿಸುತ್ತ ಕುಳಿತಿರುವರು.‌ ವೈವಾಹಿಕ ಜೀವನ ಆರಂಭದ ದಿನಗಳಲ್ಲಿ ಸಂತೋಷವೇ ಇರುವುದು. ಎಲ್ಲ ಸಂದರ್ಭವು ಒಂದೇ ರೀತಿಯಲ್ಲಿ ಇರದು. ನಕಾರಾತ್ಮಕತೆ ಹೆಚ್ಚು ಕೆಲಸ ಮಾಡೀತು.

ಕುಂಭ ರಾಶಿ : ನೆಮ್ಮದಿಯಿಂದ ಇರಲಿದ್ದು ಏನನ್ನಾದರೂ ಅಸಂಗತವಾದುದನ್ನು ಆಲೋಚಿಸುವಿರಿ. ಇಂದು ನಿಮ್ಮ ದೇಹವು ಆಯಾಸದಿಂದ ದುರ್ಬಲವಾಗಬಹುದು. ಹೆಚ್ಚು ವಿಶ್ರಾಂತಿಯ ಅವಶ್ಯಕತೆ ಇರುವುದು. ಇಂದು ನಿಮ್ಮ ವಾಹನದ ಬಳಕೆಯನ್ನು ಹೆಚ್ಚು ಮಾಡುವಿರಿ. ಕಾರ್ಯದ ನಿಮಿತ್ತ ನಿಮ್ಮ ಓಡಾಟವು ವ್ಯರ್ಥವಾಗಬಹುದು. ದುಷ್ಕೃತ್ಯಕ್ಕೆ ಪ್ರೇರಣೆ ಸಿಗಬಹುದು. ಅಶುಭ ಸೂಚನೆಗಳನ್ನು ಗಮನದಲ್ಲಿ ಇಟ್ಟುಕೊಂಡು ಕಾರ್ಯದಲ್ಲಿ ಪ್ರವೃತ್ತರಾಗಿ. ಆಪ್ತ ಬಂಧುವನ್ನು ಅಕಾಲದಲ್ಲಿ ಕಳೆದುಕೊಳ್ಳುವಿರಿ. ಎಲ್ಲರೆದುರು ಮುಖಭಂಗವನ್ನು ಎದುರಿಸಿಬೇಕಾದೀತು. ವೈವಾಹಿಕ ಜೀವನದ ಕನಸು ಕಾಣುವಿರಿ. ಮಾತನ್ನು ಕಡಿಮೆ ಮಾಡುವಿರಿ. ನಿಮ್ಮ‌ ದೂರಾಲೋಚನೆಯು ವಾಸ್ತವಕ್ಕೆ ಹತ್ತಿರವಾಗಿ ಇರದು.

ಮೀನ ರಾಶಿ : ಅತಿಯಾದ ಕೋಪವು ಇಂದು ಸಹಜವಾಗಿ ಬರುವುದು. ಆದಷ್ಟು ಸುಮ್ಮನೆ ಇರುವುದು ಒಳ್ಳೆಯದು. ಕೋಪದ ಎಂದು ಬಂದಾಗ ಎದ್ದು ಹೋಗಿ. ಇಂದು ನಿಮ್ಮ ವ್ಯಾಪಾರದಲ್ಲಿ ಕಠಿಣ ಶ್ರಮವಿದ್ದೂ ಕಡಿಮೆ ಲಾಭವನ್ನು ಪಡೆಯುವಿರಿ. ಆಗತ್ಯಕ್ಕೆ ಎಲ್ಲೂ ತೊಂದರೆಯಾಗದಂತೆ ಇರುವಿರಿ.‌ ಜವಾಬ್ದಾರಿಯು ಬಂದು ಹೊರೆಯು ಹೆಚ್ಚಾಗುವುದು. ಬಹಳ ಹುಡುಕಾಟದ ಅನಂತರದ ಉತ್ತಮ‌ ವಿವಾಹ ಸಂಬಂಧವು ಬರುವುದು. ಪಾಲುದಾರಿಕೆಯಲ್ಲಿ ಅಧಿಕಾರದ ಬಗ್ಗೆ ಅಸಮಾಧಾನ ಹೆಚ್ಚಾಗುವುದು. ಬಂಧುಗಳಿಂದ ಬೇಗ ಹಣವನ್ನು ಕೊಡುವುದಾಗಿ ಪಡೆಯುವಿರಿ. ಪುರುಷಪ್ರಯತ್ನದಿಂದ ಇಂದು ಹೆಚ್ಚು ಇರುವುದು. ಸಂಗಾತಿಯ ಜೊತೆ ಆಪ್ತವಾದ ಮಾತುಕತೆ ಇರಲಿದೆ. ನಿಮಗೆ ಸಾಕಷ್ಟು ಸಮಯವುವ ಇಂದು ಇರಲಿದ್ದು ಏನು ಮಾಡಬೇಕೆಂದು ತಿಳಿಯದೇ ಕಾಲವನ್ನು ಕಳೆಯುವಿರಿ. ಉತ್ತಮ ಹವ್ಯಾಸವನ್ನು ಬೆಳೆಸಿಕೊಳ್ಳುವುದು ಉತ್ತಮ.

-ಲೋಹಿತಶರ್ಮಾ – 8762924271 (what’s app only)

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್