AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ರಾಶಿಭವಿಷ್ಯ, ನಿಮ್ಮಿಂದ ಇಂದು ನಡೆಯುವ ತಪ್ಪಿಗೆ ನೀವೇ ಕಾರಣರಾಗುವಿರಿ

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಅಕ್ಟೋಬರ್ 23) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ರಾಶಿಭವಿಷ್ಯ, ನಿಮ್ಮಿಂದ ಇಂದು ನಡೆಯುವ ತಪ್ಪಿಗೆ ನೀವೇ ಕಾರಣರಾಗುವಿರಿ
ದಿನಭವಿಷ್ಯ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Oct 23, 2023 | 12:45 AM

Share

ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ಅಕ್ಟೋಬರ್ 23) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ದಶಮೀ, ನಿತ್ಯನಕ್ಷತ್ರ:ಶ್ರವಣ, ಯೋಗ: ಧೃತಿ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 26 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 07 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 07:54 ರಿಂದ 09:22ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 10:49 ರಿಂದ 12:17ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 01:44 ರಿಂದ 03:12ರ ವರೆಗೆ.

ಧನು ರಾಶಿ: ಕಛೇರಿಯ ಗೌಪ್ಯವಾದ ಕಾರ್ಯಕ್ಕೆ ನಿಮ್ಮನ್ನು ಬಳಸಿಕೊಳ್ಳುವಿರಿ. ವ್ಯಾಪಾರದಲ್ಲಿ ಚಾಣಕ್ಷತೆಯಿಂದ ಲಾಭವನ್ನು ಪಡೆಯುವಿರಿ. ಗ್ರಾಹಕರಿಗೆ ಅನುಕೂಲವಾಗುವಂತೆ ನಡೆದುಕೊಳ್ಳುವಿರಿ. ಸಾಹಿತ್ಯ ಕ್ಷೇತ್ರದಲ್ಲಿ ನಿಮ್ಮನ್ನು ಗುರುತಿಸುವರು. ನಿಮ್ಮ‌ ವರ್ತನೆಯನ್ನು ಬದಲಿಸಿಕೊಳ್ಳಬೇಕು ಎನಿಸುವುದು. ಸಹೋದರಿಯ ಜವಾಬ್ದಾರಿಯೂ ನಿಮಗೆ ಬರಲಿದ್ದು ನಿಮ್ಮ‌ ಜವಾಬ್ದಾರಿ ಹೆಚ್ಚಾಗುವುದು. ಭೂಮಿಯ ವ್ಯವಹಾರವು ಪಾಲುದಾರರ ಸಹಕಾರದಿಂದ ಸುಗಮವಾಗಿ ಸಾಗಲಿದೆ. ಆರ್ಥಿಕ ಸಮಸ್ಯೆಯನ್ನು ಹೆಚ್ಚಿಸಿಕೊಳ್ಳುವಿರಿ. ಮಕ್ಕಳ ವಿದ್ಯಾಭ್ಯಾಸಕ್ಕೆ ಹಣವನ್ನು ಹಿಂದಿಸುವುದು ಕಷ್ಟವಾದೀತು. ನಿಮ್ಮ ಮಾತಿನಿಂದ ಸಂಗಾತಿಯು ಸಿಟ್ಟಾಗುವರು. ನಿಮ್ಮ ಕಡೆಯಿಂದ ಬಂಧುಗಳು ಅರ್ಥಿಕ ಸಹಾಯವನ್ನು ಕೇಳಲು ಹಿಂದೇಟು ಹಾಕುವರು. ಕೃಷಿಯಲ್ಲಿ ನಿಮಗೆ ಆಸಕ್ತಿಯು ಕಡಿಮೆ‌ ಆದಂತೆ ತೋರುವುದು. ಮಕ್ಕಳ ಜೊತೆಗೆ ಕಳೆಯುವ ಸಮಯವು ಬಹಳ ಆಪ್ತವೆನಿಸುವುದು.

ಮಕರ ರಾಶಿ: ಅನಿರೀಕ್ಷಿತವಾಗಿ ಕನಸನ್ನು ಸಾಕಾರಗೊಳಿಸಿಕೊಳ್ಳುವಿರಿ. ಜಾಣ್ಮೆಯಿಂದ ಮಾಡಿದ ವ್ಯವಹಾರಕ್ಕೆ ಪ್ರಶಂಸೆ ಸಿಗಲಿದೆ. ಶಿಸ್ತನ್ನು ಬಿಡದೇ ಪಾಲಿಸುವುದು ನಿಮಗೆ ಗೌರವವನ್ನು ತಂದು ಕೊಡುವುದು. ಅಲಂಕಾರಿಕ ವಸ್ತುಗಳ ಖರೀದಿಯಿಂದ ಲಾಭವಾಗಲಿದೆ. ಹಲವು ಪ್ರಯತ್ನದ ಬಳಿಕ ಮಾನಸಿಕ ಕಿರಿಕಿರಿಯನ್ನು ನೀವು ದೂರ ಮಾಡಿಕೊಳ್ಳುವಿರಿ. ನಿರೀಕ್ಷಿತ ಸ್ಥಾನವನ್ನು ಪಡೆದುಕೊಳ್ಳುವ ಸಾಧ್ಯತೆ ಇದೆ. ಸಹೋದ್ಯೋಗಿಗಳ ಸಹಕಾರವು ಸಿಗಬಹುದು. ನಿಮ್ಮ ವಿದ್ಯಾಭ್ಯಾಸವನ್ನು ಕಂಡು ಆಚ್ವರಿಯಾಗಬಹುದು. ದೇವತಾರಾಧನೆಗೆ ತಿಳಿದವರ ಜೊತೆ ಚರ್ಚಿಸುವುದು ಸೂಕ್ತ. ಹಣದ ದುಂದುವೆಚ್ಚಕ್ಕೆ ಕಡಿವಾಣ ಹಾಕಿಕೊಳ್ಳಿ. ಪ್ರಯೋಜನವಿಲ್ಲದ ಮಾತುಕತೆಯಲ್ಲಿ ದಿನ‌ವನ್ನು ಕಳಯುವಿರಿ.‌ ನಿಮ್ಮದೇ ವಸ್ತುವಾದರೂ ನಿಮಗೆ ಬೇಕಾದ ಸಮಯಕ್ಕೆ ಲಭ್ಯವಾಗದು.

ಕುಂಭ ರಾಶಿ: ಇಂದು ಮುಖ್ಯ ಕಾರ್ಯದಲ್ಲಿ ತೊಡಗುವುದು ಅಸಾಧ್ಯವಾಗಬಹುದು. ನಿಮ್ಮಿಂದ ಇಂದು ನಡೆಯುವ ತಪ್ಪಿಗೆ ನೀವೇ ಕಾರಣರಾಗುವಿರಿ. ಸಮಯದ ಹೊಂದಾಣಿಕೆಯಿಂದ ಕಾರ್ಯವನ್ನು ಸಾಧಿಸಬಹುದು. ನಿಮ್ಮ ಒರಟಾದ ಮಾತು ಇನ್ನೊಬ್ಬರಿಗೆ ಬೇಸರವನ್ನು ಕೊಡುವುದು. ವಸ್ತುಗಳ ಖರೀದಿಗೆ ಹಣವನ್ನು ಖರ್ಚು ಮಾಡಬಹುದು. ಪರೀಕ್ಷಿಸಿ ಖರೀದಿಸಿ. ಹೊಸ ಉದ್ಯೋಗಕ್ಕೆ ಅವಕಾಶವು ಪ್ರಾಪ್ತವಾಗಲಿದೆ. ಹೊಸ ಉದ್ಯೋಗವನ್ನು ಉತ್ಸಾಹದಿಂದ ಮಾಡುವಿರಿ. ಏಕಾಂತದಲ್ಲಿ ಇರುವುದು ನಿಮಗೆ ಇಷ್ಟವಾಗುವುದು. ಸಹೋದರಿಯ ನಡುವೆ ವಾಗ್ವಾದ ಮಾಡುವಿರಿ. ಆಸ್ತಿಯ ವಿಚಾರದಲ್ಲಿ ಬೇಸರವಿರಲಿದೆ. ಒತ್ತಾಯಕ್ಕೆ ಮಣಿದು ಇಷ್ಟವಿಲ್ಲದ ಕೆಲಸವನ್ನು ಮಾಡುವಿರಿ. ನಿಮ್ಮ ಬಗ್ಗೆ ಹಿಂದಿನಿಂದ‌ ಮಾತನಾಡಿಕೊಳ್ಳುವುದು ಗೊತ್ತಾದೀತು.

ಮೀನ ರಾಶಿ: ಮಕ್ಕಳಿಗೆ ಬೇಕಾದ ವಿದ್ಯಾಭ್ಯಾಸವನ್ನು ಕೊಡಲು ಸಾಲ ಮಾಡಬೇಕಾದೀತು. ಆದಾಯದ ಮೂಲವು ಬದಲಾಗಬಹುದು. ‌ನಿಮ್ಮನ್ನು ಅಪಹಾಸ್ಯ ಮಾಡುವವರಿಗೆ ಪ್ರತ್ಯುತ್ತರ ನೀಡುವಿರಿ. ಕಾನೂನಿಗೆ ಸಂಬಂಧಿಸಿದಂತೆ ಹೆಚ್ಚಿನ ಓಡಾಟವಾಗಬಹುದು. ಬರಬೇಕಾದ ಹಣವನ್ನು ನೀವು ಬಹಳ ಶ್ರಮದಿಂದ ಪಡೆಯಬೇಕಾಗಬಹುದು. ನಿಮ್ಮ ಇಂದಿನ ಕೆಲಸಗಳು ಅಡೆತಡೆಯ ನಡೆವೆಯೂ ಮಾಡಿಕೊಳ್ಳುವಿರಿ. ವಾಹನ ಖರೀದಿಗೆ ಹಣವನ್ನು ಹೊಂದಿಸುವುದು ಸವಾಲಾಗಬಹುದು. ಅಪಘಾತ ಭೀತಿಯು ಕಾಡುವುದು. ನಿಮಗೆ ಸಂಬಂಧವಿಲ್ಲದೇ ಇರುವ ವಿಚಾರಕ್ಕೆ ಮಧ್ಯ ಪ್ರವೇಶ ಬೇಡ. ನಿಮ್ಮ ಬುದ್ಧಿಯು ನಕಾರಾತ್ಮಕ ವಿಚಾರವನ್ನೇ ಯೋಚಿಸುವುದು. ಬಂಧುಗಳ ಭೇಟಿಗೆ ದೂರಪ್ರಯಾಣವನ್ನು ಮಾಡುವಿರಿ.

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ