AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಧನು, ಮಕರ, ಕುಂಭ, ಮೀನ ರಾಶಿಯವರ ಇಂದಿನ ಭವಿಷ್ಯ

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜುಲೈ 27) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಧನು, ಮಕರ, ಕುಂಭ, ಮೀನ ರಾಶಿಯವರ ಇಂದಿನ ಭವಿಷ್ಯ
ಪ್ರಾತಿನಿಧಿಕ ಚಿತ್ರ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Jul 27, 2023 | 12:45 AM

Share

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಕೆಲವರು ಬೆಳಗ್ಗೆ ಎದ್ದ ಕೂಡಲೇ ರಾಶಿ ಭವಿಷ್ಯ (Daily horoscope) ತಪ್ಪದೇ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯದಿಂದ ತಿಳಿದುಕೊಳ್ಳುತ್ತಾರೆ. ಅದರ ಜೊತೆಗೆ ನಿತ್ಯಪಂಚಾಂಗ ಕೂಡ ಓದುತ್ತಾರೆ. ಹಾಗಾದರೆ ಇಂದಿನ (2023 ಜುಲೈ 27) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ?, ಯಾರಿಗೆ ಲಾಭ?, ಯಾರಿಗೆ ನಷ್ಟ?, ಯಾರಿಗೆ ಶುಭ, ಅಶುಭ? ಇಲ್ಲಿ ನೋಡಿ ನಿಮ್ಮ ಭವಿಷ್ಯ.

ಧನಸ್ಸು: ದೂರದ ಬಂಧುಗಳ ಭೇಟಿಯಾಗಲಿದೆ. ಅವರ ಜೊತೆ ಹೆಚ್ಚು ಸಮಯವನ್ನು ಕಳೆಯುವಿರಿ. ನಿಮ್ಮ ನಡವಳಿಕೆಯು ಅಹಂಕಾರದಂತೆ ತೋರೀತು. ವರ್ತನೆಯನ್ನು ಆದಷ್ಟು ಸಂದರ್ಭಕ್ಕೆ ತಕ್ಕಂತೆ ಇಟ್ಟುಕೊಳ್ಳುವುದು ಉತ್ತಮ. ಕೆಲವರ ಮಾತುಗಳು ನಿಮಗೆ ನೋವನ್ನು ತಂದೀತು. ಹೇಳಿಕೊಳ್ಳದೇ ಒಳಗೇ ಇಟ್ಟುಕೊಳ್ಳುವಿರಿ. ಉದ್ಯೋಗದಲ್ಲಿ ಬದಲಾವಣೆಯನ್ನು ಮಾಡಿಕೊಳ್ಳಬೇಕಾದೀತು. ದಿನಗೂಲಿಯವರಿಗೆ ಕಷ್ಟವು ಎದುರಾಗಬಹುದು. ಹಣಕಾಸಿನ‌ ವಿಚಾರದಲ್ಲಿ ಜಾಗರೂಕತೆ ಮುಖ್ಯವಾದೀತು. ನಿಮ್ಮ‌ ಭವಿಷ್ಯದ ಕನಸನ್ನು ಮಿತ್ರರ ಜೊತೆ ಹಂಚಿಕೊಳ್ಳುವಿರಿ.

ಮಕರ: ನಿಮಗೆ ನಿಮ್ಮವರ ಮಾತಿನಿಂದ ಇರುಸು ಮುರುಸಾದೀತು. ರಾಜಕೀಯ ವ್ಯಕ್ತಿಗಳಿಂದ ಕೆಲಸವಾಗಲು ಅವರಿಗೆ ಹಣವನ್ನು ಕೊಡುವಿರಿ. ಸ್ನೇಹಿತ ಸಹವಾಸದಿಂದ ದುರಭ್ಯಾಸವನ್ನು ಕಲಿಯುವ ಸಾಧ್ಯತೆ ಇದೆ. ಆರೋಗ್ಯದ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ವಿಧವಿಧವಾದ ಪ್ರಯತ್ನವನ್ನು ಮಾಡುವಿರಿ. ನಿಮ್ಮ ಯೋಜನೆಗಳು ಹೆಚ್ಚು ಇಷ್ಟವಾಗಲಿದೆ. ನಿಮ್ಮ ಮೇಲೆ ಬರುವ ನಕಾರಾತ್ಮಕ ಮಾತುಗಳನ್ನು ನೀವು ಅಲ್ಲಗಳೆಯುವಿರಿ. ಇಂದೇ ರೀತಿಯ ಕೆಲಸವು ನಿಮಗೆ ನಿರುತ್ಸಾಹವನ್ನು ತಂದೀತು. ನೆರೆ-ಹೊರೆಯವರ ಜೊತೆ ಮಾತು ಮಿತವಾಗಿರಲಿ. ನಿಮ್ಮನ್ನು ಅಳೆಯಬಹುದು.

ಕುಂಭ: ಆಸ್ತಿಯ ವಿಚಾರಕ್ಕೆ ಕುಟುಂಬದಲ್ಲಿ ಪರಸ್ಪರ ಜಗಳವಾಗುವ ಸಾಧ್ಯತೆ ಇದೆ. ಕಾನೂನಾತ್ಮಕ ವಿಷಯವನ್ನು ಚರ್ಚಿಸಿ ಮಾಡುವುದು ಉತ್ತಮ. ಕಡಿಮೆ ಖರ್ಚಿನಲ್ಲಿ ನಿಮ್ಮ ಕೆಲಸವು ಮುಗಿಯುವಂತೆ ನೋಡಿಕೊಳ್ಳುವಿರಿ. ಅತಿಯಾದ ಉತ್ಸಾಹ ಹಾಗೂ ಸಿದ್ಧತೆಯಲ್ಲಿರುವ ನಿಮಗೆ ಮನೆಯವರ ಮಾತು ಉತ್ಸಾಹಕ್ಕೆ ಭಂಗವನ್ನು ಮಾಡಿಸಬಹುದು. ಮಾತನಾಡಿ ಸಿಕ್ಕಿಬೀಳುವ ಸಾಧ್ಯತೆ ಇದೆ. ಮಾತಿನ ಮೇಲೆ ಹಿಡಿತವಿಟ್ಟುಕೊಳ್ಳಿ. ಅಪರಿಚಿಯ ಸ್ಥಳಗಳ ಬಗ್ಗೆ ಮಾಹಿತಿಯನ್ನು ಪಡೆದು ಮುನ್ನಡೆಯುವುದು ಶ್ರೇಯಸ್ಕರ. ಹಣವಿದ್ದ ಮಾತ್ರಕ್ಕೆ ಎಲ್ಲವೂ ಸಾಧ್ಯವಾಗದು ಎಂಬ ಸತ್ಯವು ಗೊತ್ತಾಗುವುದು.

ಮೀನ: ಪಾಲುದಾರಿಕೆಯಲ್ಲಿ ಉಂಟಾದ ಗೊದಲ್ಲವನ್ನು ಬಗೆಹರಿಸಿಕೊಂಡು ಮೈತ್ರಿ ಮಾಡಿಕೊಂಡರೆ ಇಬ್ಬರಿಗೂ ಅನುಕೂಲವಾಗುವುದು. ನಿಮ್ಮ ಸ್ಥಿರಾಸ್ತಿ ಪರಿಶೀಲನೆಯನ್ನು ಮಾಡಿಕೊಳ್ಳುವುದು ಉತ್ತಮ. ನಿಮ್ಮ‌ ಕಷ್ಟವನ್ನು ಸ್ನೇಹಿತರ ಜೊತೆ ಹಂಚಿಕೊಳ್ಳಿ. ನಿಮಗೆ ಕೊಟ್ಟ ಜವಾಬ್ದಾರಿಯನ್ನು ಅತ್ಯಂತ ಕಾಳಜಿಯಿಂದ ಮಾಡುವಿರಿ. ನಿಮ್ಮ ಯಶಸ್ಸು ನಿಮಗೆ ಮುಳುವಾಗಬಹುದು. ಎಚ್ಚರಿಕೆ ಹೆಜ್ಜೆಯನ್ನು ಇಡಿ. ಹಿರಿಯರ ಮಾರ್ಗದರ್ಶನವನ್ನು ಪಡೆಯುವ ಅವಶ್ಯಕತೆ ಇರಲಿದೆ. ಸೌಲಭ್ಯಗಳ ದುರ್ಬಳಕೆಯಾಗದಂತೆ ನೋಡಿಕೊಳ್ಳಿ.

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು