Horoscope Today: ರಾಶಿಭವಿಷ್ಯ, ಉದ್ಯಮವನ್ನು ಮಾಡುವವರಿಗೆ ಕೆಲವು ತೊಂದರೆಗಳು ಬರಬಹುದು

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜುಲೈ 28) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope Today: ರಾಶಿಭವಿಷ್ಯ, ಉದ್ಯಮವನ್ನು ಮಾಡುವವರಿಗೆ ಕೆಲವು ತೊಂದರೆಗಳು ಬರಬಹುದು
ಇಂದಿನ ದಿನಭವಿಷ್ಯ
Image Credit source: Getty Images
Edited By: Rakesh Nayak Manchi

Updated on: Jul 28, 2023 | 12:45 AM

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಕೆಲವರು ಬೆಳಗ್ಗೆ ಎದ್ದ ಕೂಡಲೇ ರಾಶಿ ಭವಿಷ್ಯ (Daily horoscope) ತಪ್ಪದೇ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯದಿಂದ ತಿಳಿದುಕೊಳ್ಳುತ್ತಾರೆ. ಅದರ ಜೊತೆಗೆ ನಿತ್ಯಪಂಚಾಂಗ ಕೂಡ ಓದುತ್ತಾರೆ. ಹಾಗಾದರೆ ಇಂದಿನ (2023 ಜುಲೈ 28) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ?, ಯಾರಿಗೆ ಲಾಭ?, ಯಾರಿಗೆ ನಷ್ಟ?, ಯಾರಿಗೆ ಶುಭ, ಅಶುಭ? ಇಲ್ಲಿ ನೋಡಿ ನಿಮ್ಮ ಭವಿಷ್ಯ.

ನಿತ್ಯಭವಿಷ್ಯ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಪುಷ್ಯಾ, ಮಾಸ: ಅಧಿಕ ಶ್ರಾವಣ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ದಶಮೀ, ನಿತ್ಯನಕ್ಷತ್ರ: ಜ್ಯೇಷ್ಠಾ, ಯೋಗ: ಶುಕ್ಲ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 15 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 01 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 11:03 ರಿಂದ 12:39ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:50 ರಿಂದ 5:26ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:52 ರಿಂದ 09:27ರ ವರೆಗೆ.

ಧನಸ್ಸು: ಒಂದು ಕಡೆ ಹಣದ ವ್ಯವಹಾರವನ್ನು ಮುಕ್ತಾಯ ಮಾಡಿದರೆ ಮತ್ತೊಂದು ಕಡೆಗೆ ತೆರೆದುಕೊಳ್ಳುವುದು. ಸಂಗಾತಿಯ ಒತ್ತಾಯದ ಮೇರೆಗೆ ಹೊಸ ಉದ್ಯೋಗಕ್ಕೆ ಹೋಗುವ ಮನಸ್ಸು ಮಾಡುವಿರಿ. ವಿದ್ಯಾರ್ಥಿಗಳಿಗೆ ಮನಸ್ಸು ಚಂಚಲವಾಗಿದ್ದು ಗಂಭೀರವಾಗಿ ಇದನ್ನು ಪರಿಗಣಿಸಬೇಕಾದೀತು. ಸಮಾರಂಭಗಳಿಗೆ ಭೇಟಿ ನೀಡುವಿರಿ. ಹೂಡಿಕೆಯ ಹಣವು ಎಷ್ಟೋ ವರ್ಷಗಳ ಅನಂತರ ಸಿಗಲಿದ್ದು ನಿಮ್ಮ ಸರಿಯಾಗಿ ಉಪಯೋಗಕ್ಕೆ ಬರಲಿದೆ. ಸುಲಭವಾದ ಕೆಲಸವನ್ನು ಸಂಕೀರ್ಣ ಮಾಡಿಕೊಳ್ಳುವ ಸಾಧ್ಯತೆ ಇದೆ. ಸಂಗಾತಿಗಳು ಒಂದೆಡೆ ಕುಳಿತು ನಿಮ್ಮ ಮನಸ್ಸನ್ನು ಹಂಚಿಕೊಳ್ಳಿ.

ಮಕರ: ಶತ್ರುಗಳ ಕಾಟವನ್ನು ಕಡಿಮೆ‌ ಮಾಡಿಕೊಳ್ಳಲು ಯೋಜನೆಯನ್ನು ರೂಪಿಸಿಕೊಳ್ಳುವಿರಿ. ಉದ್ಯಮವನ್ನು ಮಾಡುವವರಿಗೆ ಕೆಲವು ತೊಂದರೆಗಳು ಬರಬಹುದು.‌ ಸರ್ಕಾರಿ ಉದ್ಯೋಗದಲ್ಲಿ ಇದ್ದವರಿಗೆ ಕೆಲಸದ ಒತ್ತಡವು ಮೇಲಧಿಕಾರಿಗಳಿಂದ ಬರಲಿದೆ. ದೂರ ಪ್ರಯಾಣವನ್ನು ಮಾಡಲು ಬೇಕಾದ ತಯಾರಿಯ ಜೊತೆ ಹೊರಡಿ. ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ. ಸಹೋದರನಿಗೆ ಸಹಾಯವನ್ನು ಮಾಡುವ ಮನಸ್ಸು ಇರಲಿದೆ. ಅಮೂಲ್ಯ ವಸ್ತುಗಳನ್ನು ಖರೀದಿಸುವಿರಿ. ಕೊಟ್ಟಿರುವ ಹಣದ ನಿರೀಕ್ಷೆಯಲ್ಲಿ ಇರುವಿರಿ. ದೈವಾನುಗ್ರಹದ ಕೊರತೆ ಇರಲಿದೆ.

ಕುಂಭ: ಅಪರೂಪದ ದ್ರವ್ಯಗಳು ಸಿಗಲಿದೆ‌. ಕುಟುಂಬದ ಜೊತೆ ಸಮಯವನ್ನು ಕಳೆದುದಕ್ಕೆ ಮನಸ್ಸು ನೆಮ್ಮದಿಯಿಂದ ಇರಲಿದೆ. ಗಣ್ಯರ ವ್ಯಕ್ತಿತ್ವವು ನಿಮ್ಮ ಮೇಲೆ ಪ್ರಭಾವವನ್ನು ಬೀರಬಹುದು. ಖರ್ಚನ್ನು ಕಡಿಮೆ ಮಾಡಿಕೊಂಡ ಕಾರಣ ಆರ್ಥಿಕತೆಯು ಉತ್ತಮವಾದಂತೆ ಅನ್ನಿಸುವುದು. ಸುಮ್ಮನೇ ಆಡಿದ ಮಾತುಗಳೂ ನಿಮಗೆ ತೊಂದರೆಯಾಗಬಹುದು. ನಿಮ್ಮ ವಿರುದ್ಧ ನಡೆಯುವ ಪಿತೂರಿಯನ್ನು ತಿಳಿದುಕೊಳ್ಳುವಿರಿ. ಹಿರಿಯರಿಗೆ ಅಗೌರವವನ್ನು ತೋರುವಿರಿ. ದೇವರ ಸನ್ನಿಧಿಯಲ್ಲಿ ನಿಮಗೆ ನೆಮ್ಮದಿಯು ಸಿಗಲಿದೆ. ಆಗಿರುವ ನಕಾರಾತ್ಮಕತೆಯನ್ನು ಮರೆತು ಮುನ್ನಡೆಯುವಿರಿ.

ಮೀನ: ನೂತನ ವಸ್ತ್ರಾದಿಗಳು ಬಂಧುಗಳಿಂದ ನಿಮಗೆ ಸಿಗಲಿದೆ. ಕೆಲಸದಲ್ಲಿ ಬದಲಾವಣೆಯನ್ನು ನೀವು ಬಯಸುವಿರಿ. ಅಧಿಕಾರಿಗಳಿಂದ ಪ್ರಶಂಸೆಯು ಸಿಕ್ಕಿ ಕೆಲಸದಲ್ಲಿ ಉತ್ಸಾಹವು ಇರಲಿದೆ. ಖಾಸಗಿ ಉದ್ಯೋಗಿಗೆ ಮುಖ್ಯಸ್ಥರಿಂದ ಕಿರಿಕಿರಿ ಆಗಬಹುದು. ಸ್ನೇಹಿತರ ಸಮಸ್ಯೆಯನ್ನು ಬಿಡಿಸಲು ನೀವು ಮುಂದಾಗುವಿರಿ. ನಿಮ್ಮ ಕೆಲಸಗಳನ್ನು ಮುಗಿಸುವ ಚಿಂತೆಯಲ್ಲಿ ಇರುವಿರಿ. ಹಣಕಾಸಿನ‌ ಹರಿವಿನಿಂದ ಸಂತೋಷವಾಗಲಿದೆ. ಸಂಪಾದನೆಗೆ ಅವಕಾಶಗಳು ನಿಮಗೆ ಸಿಗಬಹುದು. ಇಂದು ಕಾರ್ಯದ ಒತ್ತಡವು ಅಧಿಕವಾಗಿ ಇರಲಿದೆ. ದೈವಬಲಕ್ಕೆ ಪುರುಷಪ್ರಯತ್ನವೂ ಇರಲಿ.

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Lohitha Hebbar

ವಿದ್ವಾನ್​ ಲೋಹಿತ ಶರ್ಮಾ. ಸಾಗರ ಮೂಲದ ಇಡುವಾಣಿ ಗ್ರಾಮ. ವೇದ ಹಾಗೂ ಸಂಸ್ಕೃತ ಅಧ್ಯಯನ, ಜ್ಯೋತಿಷ್ಯದಲ್ಲಿ ವಿದ್ವತ್ತನ್ನು ಸಂಪಾದಿಸಿರುತ್ತಾರೆ. ಹಸ್ತಪ್ರತಿಶಾಸ್ತ್ರದಲ್ಲಿ ಡಿಪ್ಲೋಮಾ ಮಾಡಿರುತ್ತಾರೆ. ಜ್ಞಾನ-ವಿಜ್ಞಾನ ಅಧ್ಯಯನ ಕೇಂದ್ರ ಬೆಂಗಳೂರಿನಲ್ಲಿ ಸಂಶೋಧಕರಾಗಿ ಮೌಲ್ಯಶಿಕ್ಷಣ ಎನ್ನುವ ಪಠ್ಯವನ್ನು ಒಂದರಿಂದ ಹತ್ತನೇ ತರಗತಿಯ ಮಕ್ಕಳಿಗೆ ರಚಿಸಿದ್ದಾರೆ. ಧರ್ಮಭಾರತೀ, ತ್ರಿವಿಕ್ರಮ ಮುಂತಾದ ಮಾಸಪತ್ರಿಕೆಯಲ್ಲಿ ಸಂಪಾದಕನಾಗಿ ಕಾರ್ಯ ಮಾಡಿರುತ್ತಾರೆ. ಹಿತೋಪದೇಶ, ಸಂತಗೋರಕ್ಷನಾಥ, ಮಹರ್ಷಿ ಶಂಖಲಿಖಿತ ಗ್ರಂಥಗಳನ್ನು ಬರೆದಿದ್ದಾರೆ. ಅನೇಕ ಲೇಖನಗಳು, ಕಥೆಗಳು ದಿನಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಆಸಕ್ತಿಯ ವಿಷಯ ಸಂಗೀತ, ನಾಟಕ, ಓದು, ಬರಹ, ಚಾರಣ, ಡಿಜಿಟಲ್ ವಿನ್ಯಾಸ. ಸದ್ಯ ಶಿಕ್ಷಕನಾಗಿ ಕಾರ್ಯ.

Read More
Follow Us