AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನಭವಿಷ್ಯ; ಇಂದಿನ ಈ ರಾಶಿಯವರ ವ್ಯವಹಾರವು ಎಂದಿಗಿಂತ ಹೆಚ್ಚು ಚೆನ್ನಾಗಿ ಆಗಲಿದೆ

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಸೆಪ್ಟೆಂಬರ್ 30) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ದಿನಭವಿಷ್ಯ; ಇಂದಿನ ಈ ರಾಶಿಯವರ ವ್ಯವಹಾರವು ಎಂದಿಗಿಂತ ಹೆಚ್ಚು ಚೆನ್ನಾಗಿ ಆಗಲಿದೆ
ಇಂದಿನ ರಾಶಿಭವಿಷ್ಯImage Credit source: iStock Photo
TV9 Web
| Updated By: Rakesh Nayak Manchi|

Updated on: Sep 30, 2023 | 12:45 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಸೆಪ್ಟೆಂಬರ್ 30 ಶನಿವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ರೇವತೀ, ಯೋಗ: ಧ್ರುವ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06-23ಕ್ಕೆ, ಸೂರ್ಯಾಸ್ತ ಸಂಜೆ 06 – 22ಕ್ಕೆ, ರಾಹು ಕಾಲ ಬೆಳಗ್ಗೆ 09:23 – 10:53ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 01:52 – 03:22ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:23 – 07:53ರ ವರೆಗೆ.

ಧನು ರಾಶಿ: ಆರ್ಥಿಕತೆಯು ನಿಮ್ಮ ಕೈ ಮೀರಬಹುದು. ಸ್ವಂತಿಕೆಯನ್ನು ಕಾರ್ಯದಲ್ಲಿ ಬಳಸಿಕೊಳ್ಳಿ. ನಿಮ್ಮ ನಿಧಾನಗತಿಯನ್ನು ಬದಲಿಸಿಕೊಳ್ಳಿ. ನಿಮ್ಮ ಇಂದಿನ ಮಾತು ಕೇಳುಗರಿಗೆ ಹೃದ್ಯವಾಗಬಹುದು. ಅಗ್ನಿಯ ಭೀತಿಯು ನಿಮಗೆ ಅಧಿಕವಾಗಿ ಕಾಡುವುದು. ಮೊದಲು ಆರ್ಥಿಕ ಲಾಭವನ್ನು ನಿರೀಕ್ಷಿಸದೇ ಕಾರ್ಯವನ್ನು ಆರಂಭಿಸಿ. ಆದುದರ ಬಗ್ಗೆ ಆಲೋಚಿಸಿ ಪ್ರಯೋಜನವಿಲ್ಲ. ಮಕ್ಕಳನ್ನು ತಿದ್ದುವುದು ನಿಮಗೆ ಕಷ್ಟವಾದೀತು. ನಿಮ್ಮ‌ ಸ್ವಭಾವವನ್ನು ದುರುಪಯೋಗ ಮಾಡಿಕೊಳ್ಳುವರು. ಹತ್ತಾರು ವಿಚಾರವು ನಿಮ್ಮ ತಲೆಯಲ್ಲಿ ಓಡಾಡುವುದು. ಯಾವುದೇ ನಿರ್ಧಾರಕ್ಕೆ ಬರುವುದು ಸಾಧ್ಯವಾಗದು. ಗೊಂದಲು ಹೆಚ್ಚಿರುವುದು. ಗಂಭೀರವಾದ ಚಿಂತನೆಯನ್ನು ಮಾಡಲು ಮನಸ್ಸು ಸ್ತಿಮಿತದಲ್ಲಿ ಇರದು. ಸಮಾರಂಭದಲ್ಲಿ ಆಪ್ತರ ಭೇಟಿಯಾಗಲಿದೆ. ಹಳೆಯ ಗೆಳತಿಯು ನಿಮ್ಮನ್ನು ಮಾತನಾಡಿಸಲು ಬರಬಹುದು. ನಿಮ್ಮ ಇನ್ನೊಬ್ಬರ ವೈಯಕ್ತಿಕ ವಿಚಾರವನ್ನು ತಿಳಿದುಕೊಳ್ಳುವ ಕುತೂಹಲ ಇರುವುದು.

ಮಕರ ರಾಶಿ: ಭೂಮಿಯ ವಿಚಾರವು ಇತ್ಯರ್ಥವಾಗಿ ಮನಸ್ಸಿಗೆ ಸಮಾಧಾನ ಇರುವುದು. ಕೆಲವು ತೊಂದರೆಗಳನ್ನು ನೀವಾಗಿಯೇ ತಂದುಕೊಳ್ಳಲಿದ್ದೀರಿ. ಉಚಿತವಾದ ಸ್ಥಾನವು ಇಂದು ನಿಮಗೆ ಸಿಗಬಹುದು. ವಿಶ್ವಾಸಘಾತದಿಂದ ನಿಮಗೆ ಬೇಸರವಾಗುವುದು. ಆಹಾರವು ಸರಿಯಾಗಿ ಸಿಗದೇ ನಿಮಗೆ ಸಂಕಟವಾಗಬಹುದು. ದುಡಿಮೆಯ ಬೆನ್ನೇರಿ ಸಂಬಂಧಗಳನ್ನು ಸಡಿಲಮಾಡಿಕೊಳ್ಳುವಿರಿ. ಖಾಸಗಿ ಸಂಸ್ಥೆಯು ನಿಮ್ಮ ಕಾರ್ಯಕ್ಕೆ ಉನ್ನತ ಸ್ಥಾನವನ್ನು ಕೊಡುವುದು. ನಿಮ್ಮ ಮತ್ತು ನೌಕರರ ನಡುವಿನ ಸಂಬಂಧವು ಚೆನ್ನಾಗಿ ಇರದು. ಸಣ್ಣ ವಿಚಾರಗಳಿಂದ ಸಂಗಾತಿಯ ನಡುವೆ ವೈಮನಸ್ಯ ಉಂಟಾಗುವುದು. ವಿಶೇಷ ಕೆಲಸಕ್ಕೆ ಹೊರಡುವ ಮೊದಲು ಕುಲದೇವರ ಸ್ಮರಣೆಯನ್ನು ಮಾಡಿ. ನಿಮ್ಮ ನೇರ ನುಡಿಯು ಎದುರಿನವನನ್ನು ಘಾಸಿ ಮಾಡಬಹುದು.

ಕುಂಭ ರಾಶಿ: ಉದ್ಯೋಗದ ಕಾರಣಕ್ಕೆ ಮಾಡಿದ ಪ್ರಯಾಣದಿಂದ ಆಯಾಸವಾಗುವುದು. ಆರ್ಥಿಕ ತೊಂದರೆಯನ್ನು ನೀವು ಮನೆಯಲ್ಲಿ ಹೇಳಿಕೊಳ್ಳುವಿರಿ. ಕಾನೂನಿಗೆ ವಿದ್ಧವಾದ ಕಾರ್ಯವನ್ನು ಸಮರ್ಥಿಸಿಕೊಳ್ಳುವಿರಿ. ಸಂಗಾತಿಯ ಮಾತುಗಳು ಘಟನೆಯಿಂದ ನಿಮಗೆ ಬಹಳ ಬೇಸರ ತರಿಸಬಹುದು. ಯಾವುದೇ ಫಲಾಪೇಕ್ಷೆ ಇಲ್ಲದೇ ಸ್ನೇಹಿತರನ್ನು ಸಂಪಾದಿಸಿಕೊಳ್ಳುವಿರಿ. ಇಂದಿನ ನಿಮ್ಮ ವ್ಯವಹಾರವು ಎಂದಿಗಿಂತ ಹೆಚ್ಚು ಚೆನ್ನಾಗಿ ಆಗಲಿದೆ. ಹೂಡಕೆಯ ಹಣದಲ್ಲಿ ತೊಡಕಾಗಬಹುದು. ಸರ್ಕಾರದಿಂದ ಬರುವ ಹಣವು ಬಾರದೇ ಇರುವುದು. ನಿಮ್ಮ ಇಂದಿನ ಕಾರ್ಯವು ಪೂರ್ವಯೋಜನೆಯಂತೆ ನಡೆಯದು. ಅಪರೂಪದ ಬಂಧುಗಳು ಸಿಗುವರು.

ಮೀನ ರಾಶಿ: ಲಾಭವಾಗುತ್ತದೆ ಎಂದು ಏನಾದರೂ ಮಾಡುವುದು ಸರಿಯಾಗದು. ಯಾರಾದರೂ ನಿಮ್ಮನ್ನು ಎಚ್ಚರಿಸುವರು. ನಿಮ್ಮ ಬಗ್ಗೆ ಸರಿಯಾಗಿ ತಿಳಿಹೇಳುವರು. ದೇಹಾಯಾಸದಿಂದ ಕಷ್ಟವಾಗಲಿದೆ. ಇಂದು ನೀವು ಕುಲದೇವತಾರಾಧನೆಯಲ್ಲಿ ಮಗ್ನರಾಗುವಿರಿ. ಸಿಟ್ಟಾಗುವ ಸ್ಥಿತಿಯಲ್ಲಿಯೂ ನೀವು ಶಾಂತರಾಗುವಿರಿ. ಮನೆಯ ಕೆಲಸವೆಲ್ಲವೂ ಹಾಗೆಯೇ ಇರಿಸಿಕೊಂಡು ಬಂಧುಗಳ ಮನೆಗೆ ಹೋಗಲಿದ್ದೀರಿ. ಉದ್ಯಮದಲ್ಲಿ ಆದಾಯವನ್ನು ಹೆಚ್ಚಿಸಲು ನೌಕರರ ಜೊತೆ ಮಾತನಾಡುವಿರಿ. ಮನೆಯ ಕಾರ್ಯವನ್ನು ಸರಿದೂಗಿಸುವು ನಿಮಗೆ ಕಷ್ಟ ಎನಿಸಬಹುದು. ಕಟ್ಟಡವನ್ನು ನಿರ್ಮಾಣದವರಿಗೆ ದೊಡ್ಡ ಯೋಜನೆ ಸಿಗಲಿದೆ. ನಿಮಗೆ ಬರುವ ಹಣದ ವಿಚಾರದಲ್ಲಿ ವಂಚನೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ