AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನಭವಿಷ್ಯ, ಈ ರಾಶಿಯವರಿಗೆ ಇಂದು ಸಾಹಸದ ಕೆಲಸದಲ್ಲಿ ಉತ್ಸಾಹ ಇರಲಿದೆ

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜುಲೈ 31) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ, ಈ ರಾಶಿಯವರಿಗೆ ಇಂದು ಸಾಹಸದ ಕೆಲಸದಲ್ಲಿ ಉತ್ಸಾಹ ಇರಲಿದೆ
ಇಂದಿನ ದಿನಭವಿಷ್ಯImage Credit source: iStock Photo
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Jul 31, 2023 | 12:45 AM

Share

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಕೆಲವರು ಬೆಳಗ್ಗೆ ಎದ್ದ ಕೂಡಲೇ ರಾಶಿ ಭವಿಷ್ಯ (Daily horoscope) ತಪ್ಪದೇ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯದಿಂದ ತಿಳಿದುಕೊಳ್ಳುತ್ತಾರೆ. ಅದರ ಜೊತೆಗೆ ನಿತ್ಯಪಂಚಾಂಗ ಕೂಡ ಓದುತ್ತಾರೆ. ಹಾಗಾದರೆ ಇಂದಿನ (2023 ಜುಲೈ 31) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ?, ಯಾರಿಗೆ ಲಾಭ?, ಯಾರಿಗೆ ನಷ್ಟ?, ಯಾರಿಗೆ ಶುಭ, ಅಶುಭ? ಇಲ್ಲಿ ನೋಡಿ ನಿಮ್ಮ ಭವಿಷ್ಯ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ,ಪ ಮಹಾನಕ್ಷತ್ರ: ಪುಷ್ಯಾ, ಮಾಸ: ಅಧಿಕ ಶ್ರಾವಣ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಉತ್ತರಾಷಾಢ, ಯೋಗ: ವೈಧೃತಿ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 16 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆಗೆ, ರಾಹು ಕಾಲ ಬೆಳಗ್ಗೆ 07:52 ರಿಂದ 09:28ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 11:03 ರಿಂದ ಮಧ್ಯಾಹ್ನ 12:39ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:14 ರಿಂದ 03:50ರ ವರೆಗೆ.

ಧನಸ್ಸು ರಾಶಿ: ಸರ್ಕಾರಿ ಉದ್ಯೋಗಿಗಳಿಗೆ ಇಷ್ಟದ ಸ್ಥಳಕ್ಕೆ ವರ್ಗಾವಣೆ ಆಗಲಿದೆ. ಪ್ರಭಾವೀ ವ್ಯಕ್ತಿಗಳಿಂದ ನಿಮ್ಮ ಕೆಲಸವನ್ನು ಮಾಡಿಸಿಕೊಳ್ಳುವಿರಿ. ವಿದ್ಯಾಭ್ಯಾಸಕ್ಕೆ ಹೊರ ನಡೆಯುವ ಮನಸ್ಸನ್ನು ಮಾಡುವಿರಿ. ಸಾಹಸದ ಕೆಲಸಕ್ಕೆ ಉತ್ಸಾಹವು ಇರಲಿದೆ. ಭೂಮಿಯನ್ನು ಮಾರಾಟ ಮಾಡುವ ಯೋಚನೆಯು ನಿಮಗೆ ಬರಲಿದೆ. ಕುಟುಂಬವನ್ನು ನೋಡಿಕೊಳ್ಳುವ ಜವಾಬ್ದಾರಿಯು ಬರಬಹುದು. ನಿಮಗೆ ನಿಶ್ಚಯವಾದ ಮನಸ್ಸನ್ನು ತಂದುಕೊಳ್ಳುವುದು ಕಷ್ಟವಾದೀತು. ಸ್ತ್ರೀಯ ಕಡೆಯಿಂದ ನಿಮಗೆ ಅಧಿಕಾರವು ಪ್ರಾಪ್ತವಾಗುವುದು. ಕಾರ್ಯಗಳನ್ನು ಗುರುತಿಸಿ ನಿಮ್ಮನ್ನು ಗೌರವಿಸುವ ಸಾಧ್ಯತೆ ಇದೆ.

ಮಕರ ರಾಶಿ: ಕಾರ್ಯದ ನಿಮಿತ್ತ ದೂರದ ಊರಿಗೆ ಪ್ರಯಾಣವನ್ನು ಮಾಡಬೇಕಾದೀತು. ಕೆಲಸವು ಪೂರ್ಣವಾಗದೇ ಹಿಂದಿರುಗುವಿರಿ. ನಿಮಗೆ‌ ಮೇಲಧಿಕಾರಿಗಳಿಂದ ಸೂಚನೆ ಸಿಗಲಿದ್ದು ಅದರಂತೆ ಕೆಲಸವನ್ನು ನೀವು ಮಾಡುವಿರಿ. ನಿಮಗೆ ಆಗದ ವಿಚಾರಕ್ಕೆ ವಿರೋಧವನ್ನು ವ್ಯಕ್ತಪಡಿಸುವಿರಿ. ಭೂಮಿಯ ಮೇಲೆ ನಿಮ್ಮ ಹೂಡಿಕೆ ಮಾಡಲು ಬಯಸುವಿರಿ. ದಂಪತಿಗಳು ವೈಮನಸ್ಯವನ್ನು ದೂರಮಾಡಿಕೊಳ್ಳಲು ಎಲ್ಲಿಗಾದರೂ ಹೋಗಬಹುದು. ಆರ್ಥಿಕತೆಯ ಅಭಿವೃದ್ಧಿಗೆ ನಿಮ್ಮ ಯೋಜನೆಗಳು ರೂಪುಗೊಳ್ಳುವುದು. ನಿಮ್ಮ ಕೆಲಸವನ್ನು ಸ್ನೇಹಿತರ ಮೂಲಕ ಮಾಡಿಕೊಳ್ಳುವಿರಿ.

ಕುಂಭ ರಾಶಿ: ವ್ಯಾಪಾರ ವಹಿವಾಟುಗಳಲ್ಲಿ ನಷ್ಟವಾಗಬಹುದು. ಅನಿರೀಕ್ಷಿತ ವಾರ್ತೆಯಿಂದ ಕಷ್ಟವಾದೀತು. ನಿಮ್ಮ ಮೆಚ್ಚಿನವರನ್ನು ಭೇಟಿಯಾಗುವಿರಿ. ವಾಹನ ಚಾಲನೆಯನ್ನು ಮಾಡುವ ಜಾಗರೂಕತೆಯ ಅವಶ್ಯಕತೆ ಇರಲಿದೆ. ಸಹೋದರಿಗೆ ನಿಮ್ಮಿಂದ ಸಹಕಾರವು ಸಿಗಲಿದೆ. ಸ್ವಂತ ಭೂಮಿಯನ್ನು ಕೃಷಿಗೆ ಬಳಸಿಕೊಳ್ಳುವ ಆಲೋಚನೆ ಇರಲಿದೆ. ಸಂಗಾತಿಯನ್ನು ಮನವೊಲಿಸಲು ಬಹಳ ಕಷ್ಟವಾದೀತು. ಬಂಧುಗಳಿಂದ ನಿಮಗೆ ಅಪಮಾನವಾದೀತು. ಆರೋಗ್ಯವು ಸುರಕ್ಷಿತವಾಗಿ ಇರುವಂತೆ ನೋಡಿಕೊಳ್ಳಿ. ಹೆಚ್ಚು ಮಾತನಾಡುವಿರಿ. ಶಿಸ್ತಿನಿಂದ ಇರುವುದು ನಿಮಗೆ ಇಷ್ಡವಾದೀತು.

ಮೀನ ರಾಶಿ: ದೌರ್ಭಾಗ್ಯವನ್ನು ನೆನೆಯುತ್ತ ಇರುವುದಕ್ಕಿಂತ ಬೇರೆಯದಾದ ಉತ್ತಮ ದಾರಿಯನ್ನು ಹುಡುಕುವುದು ಶ್ರೇಯಸ್ಕರ. ವೇತನವು ಅಧಿಕವಾಗಿ ಸಂತೋಷವಾಗುವುದು. ಆಸ್ತಿಯ ವಿಚಾರವನ್ನು ಮಾತನಾಡುವುದು ಬೇಡ. ಕಲಹವಾದೀತು. ನಿಮ್ಮ ಸಂಸ್ಥೆಯ ಮುಖ್ಯಸ್ಥರನ್ನಾಗಿ ಮಾಡುವ ಮಾತುಕತೆಗಳು ನಡೆಯಬಹುದು. ನಿಮಗೆ ಬೆಲೆ ಕಡಿಮೆಯಾಗಿರುವುದು, ಗೌರವವನ್ನು ಕೊಡದೇ ಇರುವುದು ಬೇಸರವಾದೀತು. ನಿಮ್ಮ ಕೆಲಸದ ಪ್ರಗತಿಯಿಂದ ನಿಮಗೆ ಖುಷಿಯಾಗಲಿದೆ. ನೆಮ್ಮದಿಯನ್ನು ಕೊಡುವ ಸಂಗತಿಯನ್ನು ನೀವು ಆಯ್ಕೆ ಮಾಡಿಕೊಳ್ಳುವಿರಿ.

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು