AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಈ ರಾಶಿಯವರಿಗೆ ಅಹಂಕಾರದ ಮಾತುಗಳು ಶೋಭೆಯಾಗದು

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಅಕ್ಟೋಬರ್ 31) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ಈ ರಾಶಿಯವರಿಗೆ ಅಹಂಕಾರದ ಮಾತುಗಳು ಶೋಭೆಯಾಗದು
ಪ್ರಾತಿನಿಧಿಕ ಚಿತ್ರ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ|

Updated on: Oct 31, 2023 | 12:15 AM

Share

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ಅಕ್ಟೋಬರ್ 31) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ಸ್ವಾತೀ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ತೃತೀಯಾ, ನಿತ್ಯನಕ್ಷತ್ರ: ಕೃತಿಕಾ, ಯೋಗ: ಶುಭ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 28 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 03 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:10 ರಿಂದ 04:37 ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 09: 22 ರಿಂದ 10:49 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:16 ರಿಂದ 13:43ರ ವರೆಗೆ.

ಧನು ರಾಶಿ: ಅಹಂಕಾರದ ಮಾತುಗಳು ನಿಮಗೆ ಶೋಭೆಯಾಗದು. ಕುಟುಂಬದವರ ಜೊತೆ ನಿಮ್ಮ ಒಡಾನಾಟವು ಕಡಿಮೆ ಆಗಬಹುದು. ಕೃಷಿಯ ಚಟುವಟಿಕೆಯಿಂದ ಲಾಭವಾಗುವುದು. ಮಿತ್ರರ ಸಹಾಯವನ್ನು ನೀವು ಉಪೇಕ್ಷಿಸುವಿರಿ. ಓಡಾಟದಿಂದ ಕೆಲಸವಾಗದು. ಜಾಣ್ಮೆಯಿಂದ ಕೆಲಸವನ್ನು ಮುಗಿಸುಕೊಳ್ಳಿ. ನಿಮ್ಮ ಸ್ವಾಭಿಮಾನಕ್ಕೆ ಪೆಟ್ಟು ಬೀಳಬಹುದು. ನೀವು ಆಪ್ತರಿಗೆ ಎಲ್ಲವನ್ನೂ ಹೇಳಬೇಕು ಎಂದುಕೊಂಡರೂ ನಿಮಗೆ ಹೇಳಲಾಗದೆ ದುಃಖವಾಗುವುದು. ಅಪರಿಚಿತರ ಸ್ನೇಹವನ್ನು ಮಾಡುವಾಗ ಜಾಗರೂಕತೆ ಇರಲಿ. ಸ್ನೇಹವೇ ಪ್ರೇಮವಾಗಿ ಬದಲಾಗಬಹುದು. ಮುಖ್ಯ ಕೆಲಸವು ಮರೆತುಹೋಗಬಹುದು. ಮೇಲಧಿಕಾರಿಗಳು ನಿಮ್ಮ ಮೇಲಿಟ್ಟ ವಿಶ್ವಾಸಕ್ಕೆ ಭಂಗಬಾರದಂತೆ ನಿಮ್ಮ ವರ್ತಿಸಿ. ವಿದ್ಯಾರ್ಥಿಗಳು ಓದಿಗೆ ಸರಿಯಾದ ಸಮಯವನ್ನು ನಿರ್ಧರಿಸಿಕೊಳ್ಳಿ. ಉದ್ಯೋಗಸ್ಥರು ವಿದೇಶ ಪ್ರಯಾಣಕ್ಕೆ ಹೋಗಬಹುದು.

ಮಕರ ರಾಶಿ: ಉದ್ಯಮದ ಸ್ಥಳವನ್ನು ಬದಲಾವಣೆ ಮಾಡುವಿರಿ. ಮೇಲಧಿಕಾರಿಗಳ ವರ್ತನೆಯನ್ನು ಸಹಿಸಲು ಕಷ್ಟವಾದೀತು. ಹಿರಿಯರ ಮಾರ್ಗದರ್ಶನವನ್ನು ನೀವು ಅಲ್ಲಗಳೆಯುವಿರಿ. ಧನವ್ಯಯವಾಗುವ ಸಂದರ್ಭವು ಬರಬಹುದು.‌ ತುರ್ತು ಹಣ‌ ಸಂಪಾದನೆಯನ್ನು ಮಾಡಬೇಕಾದೀತು. ಸಂಗಾತಿಯ ಜೊತೆ ವಾಗ್ವಾದ ಮಾಡಿ ಮನಸ್ಸನ್ನು ಕೆಡಿಸಿಕೊಳ್ಳುವಿರಿ. ನಿಮ್ಮ ಸತ್ಯದಿಂದ ಸಹೋದ್ಯೋಗಿಯ ಕೆಲಸವು ಹೋಗಬಹುದು. ನಿಮ್ಮ ನಡೆಯುವುದು ಇತರರಿಗೆ ತೊಂದರೆಯನ್ನು ಉಂಟುಮಾಡೀತು. ಅತಿಯಾದ ನಿದ್ರೆಯಿಂದ ಆರೋಗ್ಯಕ್ಕೆ ತೊಂದರೆ ಆಗಬಹುದು. ಸಾಮಾಜಿಕ ಗೌರವವನ್ನು ನೀವು ಪಡೆಯಲಿದ್ದೀರಿ. ನಿರಂತರ ಕೆಲಸಕ್ಕೆ ಫಲವು ಸಿಗಲಿದೆ. ಯೋಚಿಸಿ ಕಾರ್ಯದಲ್ಲಿ ತೊಡಗಿಕೊಳ್ಳಿ.

ಕುಂಭ ರಾಶಿ: ಪೂರ್ವಾರ್ಜಿತ ಆಸ್ತಿಯ ಬಗ್ಗೆ ನಿಮಗೆ ಪೂರ್ಣ ಸಮಾಧಾನ ಇರದು. ನಿಮ್ಮ ತಪ್ಪುಗಳು ಅರ್ಥವಾಗದೇ ಬೇರೆಯವರ ಮೂಲಕ ನೀವು ತಿಳಿದುಕೊಳ್ಳಬೇಕಾದೀತು. ಸಾಲವನ್ನು ಮಾಡುವಾಗ ಯಾರದ್ದಾದರೂ ಸಲಹೆಯನ್ನು ಪಡೆಯುವುದು ಉತ್ತಮ. ರಾಜಕೀಯ ವ್ಯಕ್ತಿಗಳು ನಿಮ್ಮನ್ನು ಬಳಸಿಕೊಳ್ಳಬಹುದು. ಯಾವ ಕೆಲಸವನ್ನು ಒಪ್ಪಿಕೊಳ್ಳುವಾಗಲೂ ಜಾಗರೂಕತೆ ಇರಲಿ. ಇನ್ನೊಬ್ಬರ ಒತ್ತಾಯಕ್ಕೆ ನೀವು ಮಣಿದು ಹಣದ ಹೂಡಿಕೆಯನ್ನು ಮಾಡುವಿರಿ. ಆದಾಯದ‌ ಮೂಲವು ಬದಲಾಗಬಹುದು. ಚರಾಸ್ತಿಯನ್ನು ಕೊಟ್ಟು ಅಲ್ಪ ಲಾಭವನ್ನು ಮಾಡಿಕೊಳ್ಳುವಿರಿ. ನಿಮ್ಮ ಮಾತಿಗೆ ಬೆಲೆ ಕೊಡದೇ ಇರುವುದರಿಂದ ಬೇಸರವಾದೀತು. ನಿಮ್ಮ ಉದ್ಯಮದ ಬಗ್ಗೆ ಒಂದು ಅವಲೋಕನ ಅವಶ್ಯಕ. ನಿಮ್ಮ ಕೆಲವು ಅಭ್ಯಾಸವನ್ನು ಬಿಡಬೇಕಾದೀತು.

ಮೀನ ರಾಶಿ: ಇಂದು ನಿಮ್ಮ ಸರ್ಕಾರಕ್ಕೆ ಸಂಬಂಧಪಟ್ಟ ಕೆಲಸಗಳು ವೇಗವಾಗಿ ಆಗುತ್ತವೆ. ಆಸ್ತಿಯ ದಾಖಲಾತಿಗಳನ್ನು ಸರಿಯಾಗಿ ರಕ್ಷಿಸಿಕೊಳ್ಳಿ. ರಾಜಕೀಯ ವ್ಯಕ್ತಿಗಳ ಪ್ರಭಾವವನ್ನು ಬಳಸಿಕೊಳ್ಳುವಿರಿ. ನಿಮ್ಮ ಆಸೆಗಳನ್ನು ಪೂರ್ಣ ಮಾಡಿಕೊಳ್ಳಲಾಗದು. ಭಾವನೆಗಳಿಗೆ ಬೆಲೆ ಕೊಡದೇ ಇರುವುದು ನಿನಗೆ ಬೇಸರವಾಗಬಹುದು. ಬಂಧುಗಳ ಆಗಮನದಿಂದ ಇಂದಿನ ವ್ಯವಹಾರದಲ್ಲಿ ಬದಲಾವಣೆ ಇರುವುದು. ಎಲ್ಲ ಸಮಯದಲ್ಲಿಯೂ ನಿಮ್ಮ ಪರಿಸ್ಥಿತಿಯು ಸಕಾರಾತ್ಮಕವಾಗಿ ಇರದು. ಮಾತಿನ ಮೇಲೆ ಹಿಡಿತವು ಬೇಕಾದೀತು. ನಿಮಗೆ ಸಂಗಾತಿಯ ಮೇಲೆ ಸಿಟ್ಟಾಗುವ ಸನ್ನಿವೇಶವು ಬರಲಿದೆ. ಇಂದು ನಿಮ್ಮ ವಿರುದ್ಧ ಮಾತನಾಡುವವರಿಗೆ ಉತ್ತರವನ್ನು ಕೊಡುವ ಅವಶ್ಯಕ ಇರುವುದಿಲ್ಲ. ಉದ್ಯೋಗದಲ್ಲಿ ವಿಶ್ವಾಸಗಳಿಸುವುದು ಮುಖ್ಯ. ವ್ಯವಹಾರವು ಪಾರದರ್ಶಕ ಆಗಿರಲಿ. ಉನ್ನತ ವಿದ್ಯಾಭ್ಯಾಸಕ್ಕೆ ವಿಷಯದ ಆಯ್ಕೆ ಕಷ್ಟವಾದೀತು.

-ಲೋಹಿತಶರ್ಮಾ 8762924271 (what’s app only)

ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?