Horoscope: ಈ ರಾಶಿಯವರಿಗೆ ಪ್ರೀತಿ ಪಾತ್ರರಿಂದ ಉಡುಗೊರೆ ಬರಲಿದೆ

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ನವೆಂಬರ್​ 18) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ಈ ರಾಶಿಯವರಿಗೆ ಪ್ರೀತಿ ಪಾತ್ರರಿಂದ ಉಡುಗೊರೆ ಬರಲಿದೆ
ಪ್ರಾತಿನಿಧಿಕ ಚಿತ್ರ
Follow us
| Edited By: Kiran Hanumant Madar

Updated on: Nov 18, 2023 | 12:45 AM

ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್​ 18) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಕಾರ್ತಿಕ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ಪಂಚಮೀ, ನಿತ್ಯನಕ್ಷತ್ರ: ಉತ್ತರಾಷಾಢಾ, ಯೋಗ: ಗಂಡ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 35 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 05-59 ಗಂಟೆ, ರಾಹು ಕಾಲ ಬೆಳಗ್ಗೆ 09:27 ರಿಂದ 10:52ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 01:43 ರಿಂದ 03:09ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:36 ರಿಂದ 08:01ರ ವರೆಗೆ.

ಧನು ರಾಶಿ : ಲೋಹದ ವಸ್ತುಗಳಿಂದ ಘಾಸಿಯಾಗಬಹುದು. ಆದಷ್ಟು ಅಂತಹ ವಸ್ತುಗಳನ್ನು ದೂರವಿರಿಸಿ ಅಥವಾ ಬಹಳ ಜಾಗರೂಕತೆಯಿಂದ ಬಳಸಿ. ನೀವು ಮಾಡಿಕೊಂಡ ಎಡವಟ್ಟಿನಿಂದ ಅವಕಾಶದಿಂದ ವಂಚಿತರಾಗಬೇಕಾಗುವುದು. ಪರಾಧೀನ ಸ್ಥಿತಿಯಿಂದ ಮಾನಸಿಕ ಹಿಂಸೆಯಾದೀತು. ಅಧಿಕಾರದಿಂದ ಮಾತ್ರ ಎಲ್ಲವೂ ಸರಿಯಾಗುವುದು ಎಂಬ ಭ್ರಮೆ‌ ಬೇಡ. ಇಂದಿನ ಕಾರ್ಯವು ಯಾವುದೇ ತೊಂದರೆಗಳಿಲ್ಲದೇ ಮುಗಿಯುವುದು. ಸ್ತ್ರೀಯರು ಅನಾರೋಗ್ಯದಿಂದ ಪೀಡಿತರಾಗುವಿರಿ. ಮುಕ್ತ‌ ಮನಸ್ಸಿನಿಂದ ಮಾತನಾಡುವಿರಿ.‌ ದಾಂಪತ್ಯದಲ್ಲಿ ಹೊಂದಾಣಿಕೆ ಅವಶ್ಯಕತೆ ಅಧಿಕವಾಗಿ ಇರಲಿದೆ. ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತನ್ನು ಕಳೆದುಕೊಳ್ಳುವಿರಿ. ನಿಮಗೆ ಇಂದು ಪ್ರೀತಿ ಪಾತ್ರರಿಂದ ಉಡುಗೊರೆ ಬರಲಿದೆ. ವಿದ್ಯಾಭ್ಯಾಸವನ್ನು ಯೋಗ್ಯರೀತಿಯಲ್ಲಿ ನಡೆಸಲು ಕಷ್ಟವಾದೀತು.

ಮಕರ ರಾಶಿ : ಇಂದು ನೀವು ಅಂದುಕೊಂಡಷ್ಟು ಸರಳವಾಗಿ ಕಾರ್ಯಗಳನ್ನು ಮಾಡಲಾರಿರಿ. ಮಹಿಳೆಯರಿಂದ‌ ನಿಮಗೆ ಗೌರವವು ಸಿಗುವುದು. ಸ್ನೇಹಿತರಿಂದ ಆರ್ಥಿಕತೆಗೆ ಸಹಾಯವು ಸಿಗುವುದು. ಚಿಕಿತ್ಸೆಯಿಂದ ಆರೋಗ್ಯದಲ್ಲಿ ಸುಧಾರಣೆ ಇರಲಿದೆ. ಹಿತಶತ್ರುಗಳಿಂದ ತೊಂದರೆ ಎದುರಾದೀತು. ಹೊಸತರ ಕಲಿಕೆಯಲ್ಲಿ ಆಸಕ್ತಿಯು ಅಧಿಕವಾಗುವುದು. ಸಮಾರಂಭಗಳಿಗೆ ತೆರಳುವಿರಿ. ಕೃಷಿಕರಿಗೆ ಲಾಭದಲ್ಲಿ ಸ್ವಲ್ಪ ಇಳಿಮುಖ ಇರಲಿದೆ‌. ಸಾಮಾಜಿಕ ಕಾರ್ಯಗಳಿಂದ ಮೆಚ್ಚುಗೆ ಪಡೆಯುವಿರಿ. ಸಂಬಂಧದಲ್ಲಿ ಒಡಕು ಬರಬಹುದು.‌ ವ್ಯವಹಾರವು ಸರಿಯಾಗಿ ಇರಲಿ. ಅತಿಯಾದ ಕೋಪದಿಂದ ಎಲ್ಲ ಕೆಲಸವನ್ನು ವ್ಯತ್ಯಾಸ ಮಾಡಿಕೊಳ್ಳುವಿರಿ. ಆಲಂಕಾರಿಕ ವಸ್ತುಗಳನ್ನು ಖರೀದಿಸುವಿರಿ. ಅಧಿಕಾರಿಯ ವಿಶ್ವಾಸವನ್ನು ಪಡೆದು ಹೆಚ್ಚಿನ ಸ್ಥಾನ ಪಡೆಯುವಿರಿ. ಅನಿರೀಕ್ಷಿತ ರಾಜಕಾರಿಣಿಗಳ ಭೇಟಿಯಿಂದ ಕೆಲವು ಬದಲಾವಣೆಯನ್ನು ಕಾಣುವಿರಿ.

ಕುಂಭ ರಾಶಿ : ಮಾತನಾಡುವಾಗ ಎಚ್ಚರಿಕೆಯು ಅಗತ್ಯ. ಉದ್ಯಮದಲ್ಲಿ ಅಧಿಕ ಚಿಂತೆಯು ಇರಲಿದ್ದು ಪ್ರಯತ್ನವು ಅಧಿಕವಾಗಿ ಇರುವುದು. ಸಂಗಾತಿಯ ಮಾತನ್ನು ಇಂದು ಅನುಸರಿಸುವಿರಿ. ಮನೆಯಲ್ಲಿ ಹಿಂದಿನ ಘಟನೆಯೇ ಮರುಕಳಿಸಲಿದ್ದು ಸಣ್ಣ ವಾಗ್ವಾದವೂ ನಡೆಯಬಹುದು. ವ್ಯಾಪಾರವು ಸಾಧಾರಣವಾಗಿ ಇರಲಿದೆ. ಉದ್ಯೋಗವನ್ನು ಬದಲಿಸಲು ಮನಸ್ಸು ಇಲ್ಲದಿದ್ದರೂ ನಿಮಗೆ ಅನಿವಾರ್ಯ ಆಗಬಹುದು. ವಾಹನದಿಂದ ಬಿದ್ದು ಪೆಟ್ಟಾಗಬಹುದು. ದುರ್ಬಲರ‌ ಜೊತೆ ಸಂಘರ್ಷ ಬೇಡ. ಆತುರದಲ್ಲಿ ವಾಹನ ಚಾಲನೆಯಿಂದ ತೊಂದರೆಯಾದೀತು. ಇಂದು ಬಂಧುಗಳನ್ನು ಮನೆಗೆ ಆಹ್ವಾನಿಸುವಿರಿ. ಮನಸ್ಸಿನ ನೋವನ್ನು ಮರೆಯಲು ಒಂಟಿಯಾಗಿ ದೂರ ಹೋಗುವಿರಿ. ಪುಣ್ಯಕ್ಷೇತ್ರಗಳ ದರ್ಶನವನ್ನು ಮಾಡುವಿರಿ. ಅನಾರೋಗ್ಯದಿಂದ ಕೆಲಸಗಳಿಗೆ ವಿಘ್ನವು ಬರುವುದು.

ಮೀನ ರಾಶಿ : ಪ್ರೇಮಿಗಳು ಪರಸ್ಪರ ಮನಸ್ತಾಪದಿಂದ ಇರುವರು. ಸಾಲವನ್ನು ಪಡೆದುಕೊಳ್ಳಲು ಅವಕಾಶ ಲಭ್ಯವಾಗಬಹುದು. ಇಂದು ನಿಮಗೆ ದೇವರ ಕಾರ್ಯವನ್ನು ಮಾಡುವ ಉತ್ಸಾಹವಿರುವುದು. ಅದಕ್ಕಾಗಿ ಹೆಚ್ಚು ಸಮಯ ಕೊಡುವಿರಿ. ದೂರದಲ್ಲಿ ಇದ್ದ ಮಕ್ಕಳ ಆಗಮನದಿಂದ ಮನೆಯಲ್ಲಿ ಸಂತೋಷವು ಇರುವುದು. ಆಸ್ತಿಯನ್ನು ಖರೀದಿಸುವ ಕುರಿತು ಮನೆಯಲ್ಲಿ ಚರ್ಚೆಗಳು ನಡೆಯುವುದು. ಆರ್ಥಿಕ ಒತ್ತಡದಿಂದ ನೀವು ಹೊರಬರುವ ಮಾರ್ಗವನ್ನು ಹುಡುಕುವಿರಿ. ಇಂದಿನ ಉತ್ಸಾಹವು ಕೆಲಸಕ್ಕೆ ಪೂರಕವಾಗವುವುದು. ಹಣದ ಹರಿವು ಸಾಧಾರಣವಾಗಿ ಇರಲಿದೆ. ಪ್ರೀತಿಪಾತ್ರರ ವರ್ತನೆಯಿಂದ ಕಿರಿಕಿರಿ ಆಗಬಹುದು. ಹೇಳಲಾಗದ ಮರೆಯಲಾಗದ ಸ್ಥಿತಿ ಇರಲಿದೆ. ನೀವೇ ನಿಮ್ಮ ಬಗ್ಗೆ ಹೇಳಿಕೊಳ್ಳುವುದು ಉಚಿತವಲ್ಲ.‌

-ಲೋಹಿತಶರ್ಮಾ – 8762924271 (what’s app only)

ತಾಜಾ ಸುದ್ದಿ
ನದಿಯಲ್ಲಿ ಕಳಕೊಂಡಿದ್ದ ಸರ ಮೂಕಾಂಬಿಕೆಯ ಬೇಡಿದ್ದಕ್ಕೆ ತಕ್ಷಣ ಸಿಕ್ತು!
ನದಿಯಲ್ಲಿ ಕಳಕೊಂಡಿದ್ದ ಸರ ಮೂಕಾಂಬಿಕೆಯ ಬೇಡಿದ್ದಕ್ಕೆ ತಕ್ಷಣ ಸಿಕ್ತು!
ಎಂಟು ಜನರ ಮೇಲೆ ಎಲಿಮಿನೇಷನ್​ ತೂಗುಗತ್ತಿ; ಯಾರಾಗಲಿದ್ದಾರೆ ಔಟ್?
ಎಂಟು ಜನರ ಮೇಲೆ ಎಲಿಮಿನೇಷನ್​ ತೂಗುಗತ್ತಿ; ಯಾರಾಗಲಿದ್ದಾರೆ ಔಟ್?
ಈ ರೀತಿಯ ಸಿಕ್ಸ್ ರಿಂಕು ಸಿಂಗ್ ಮಾತ್ರ ಸಿಡಿಸಲು ಸಾಧ್ಯ: ರೋಚಕ ವಿಡಿಯೋ
ಈ ರೀತಿಯ ಸಿಕ್ಸ್ ರಿಂಕು ಸಿಂಗ್ ಮಾತ್ರ ಸಿಡಿಸಲು ಸಾಧ್ಯ: ರೋಚಕ ವಿಡಿಯೋ
ಕೊಪ್ಪಳ: ಹೊತ್ತಿ ಉರಿದ ಮೂರು ಅಂತಸ್ತಿನ ಜ್ಯುವೆಲ್ಲರಿ ಶಾಪ್ ಕಟ್ಟಡ
ಕೊಪ್ಪಳ: ಹೊತ್ತಿ ಉರಿದ ಮೂರು ಅಂತಸ್ತಿನ ಜ್ಯುವೆಲ್ಲರಿ ಶಾಪ್ ಕಟ್ಟಡ
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​