AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಈ ರಾಶಿಯವರು ವಿನಾಕಾರಣ ಶತ್ರುಗಳನ್ನು ಬೆಳೆಸಿಕೊಳ್ಳುವಿರಿ

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ನವೆಂಬರ್​ 24) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ಈ ರಾಶಿಯವರು ವಿನಾಕಾರಣ ಶತ್ರುಗಳನ್ನು ಬೆಳೆಸಿಕೊಳ್ಳುವಿರಿ
ರಾಶಿ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Nov 24, 2023 | 12:45 AM

Share

ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್​ 24) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಕಾರ್ತಿಕ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ರೇವತೀ, ಯೋಗ: ಹರ್ಷಣ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 38 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 05 ಗಂಟೆ 59 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 10:54 ರಿಂದ 12:19ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:09 ರಿಂದ 04:34ರ ವರೆಗೆ, ಗುಳಿಕ ಕಾಲ ಬೆಳಗ್ಗೆ 08:04 ರಿಂದ 09:29ರ ವರೆಗೆ.

ಧನು ರಾಶಿ : ನಿಮ್ಮ ಸಹಾಯಕ್ಕೆ ಯಾರೂ ಬಾರದೇ ಇರುವುದು ನಿಮ್ಮ ಕಾರಣವಾಗಿದ್ದು, ಒಬ್ಬರೇ ಎಲ್ಲ ಕೆಲಸವನ್ನು ನಿಭಾಯಿಸಲು ಇಷ್ಟಪಡುವಿರಿ. ವಾಹನ ಖರೀದಿಗೆ ಆಲೋಚನೆ ಇರಲಿದ್ದು ಸಾಲ ಮಾಡಬೇಕಗಬಹುದು. ನಿಮ್ಮ ವೇಗದ ಮನಸ್ಸನ್ನು ನಿಯಂತ್ರಿಸಬೇಕಾಗುವುದು. ಮನೆಯವರ ಸಣ್ಣ ತಪ್ಪುಗಳನ್ನು ಸಹಿಸಲಾರಿರಿ. ಮತ್ತೆ ಮತ್ತೆ ಉಂಟಾದ ಅನಾರೋಗ್ಯದಿಂದ ನಿಮ್ಮ ದಿನಚರಿಯನ್ನೇ ಬದಲಾಯಿಸಿಕೊಳ್ಳಬೇಕಾಗುವುದು. ಬಂಧುಗಳು ನಿಮ್ಮ ಬಗ್ಗೆ ಏನಾದರೂ ಆಡಿಕೊಂಡಾರು. ಶ್ರಮವು ಯುಕ್ತಿಯಿಂದ ಕೂಡಿರಲಿ. ನಿಯಮಿತ ಆಹಾರವನ್ನು ರೂಢಿಸಿಕೊಳ್ಳುವುದು ಸೂಕ್ತ.‌ ಧನಾತ್ಮಕ ಚಿಂತನೆಯನ್ನು ಪ್ರಯತ್ನಪೂರ್ವಕವಾಗಿ ಮಾಡಿಬೇಕಾದೀತು. ಮನೆತನದ ಗೌರವವನ್ನು ಕಾಪಾಡಿಕೊಳ್ಳುವುದು ನಿಮ್ಮ ಜವಾಬ್ದಾರಿ. ಕಳೆದುಕೊಂಡ ವಸ್ತುವಿಗಾಗಿ ನೀವು ಬಹಳ ಬೇಸರಪಡುವುದು ಬೇಡ.

ಮಕರ ರಾಶಿ : ನೀವು ವಿನಾಕಾರಣ ಶತ್ರುಗಳನ್ನು ಬೆಳೆಸಿಕೊಳ್ಳುವಿರಿ. ತಪ್ಪಿದ ಅವಕಾಶವನ್ನು ಪಡೆಯಲು ಬೇರೆ ಮಾರ್ಗದಿಂದ ಮತ್ತೆ ಮತ್ತೆ ಪ್ರಯತ್ನಿಸಿ. ಪ್ರೀತಿಯ ವಿಚಾರಕ್ಕೆ ನಿಮಗೆ ಬಂದರೆ ಪೂರ್ಣ ಸಮಾಧಾನ‌ ಸಿಗದು.‌ ಸಂಗಾತಿಯ ಮೇಲೆ ಅನುಮಾನವನ್ನು ನಿಮ್ಮ ರೀತಿಯಲ್ಲಿ ವ್ಯಕ್ತಪಡಿಸುವಿರಿ. ನಿಮ್ಮವರ ಪ್ರೀತಿಯು ನಿಮಗೆ ಕಡಿಮೆ ಆದಂತೆ ಅನ್ನಿಸುವುದು. ಕೃಷಿಯಲ್ಲಿ ಉಪಯುಕ್ತ ಯೋಜನೆಯನ್ನು ಹಾಕಿಕೊಳ್ಳುವಿರಿ. ಮಕ್ಕಳ ಬಗ್ಗೆ ಇರುವ ನಿಮ್ಮ ಚಿಂತೆ ನಿವಾರಣೆ ಆಗುವುದು. ಹಣವನ್ನು ಗಳಿಸುವ ಹಂಬಲವು ಇದ್ದು ಅದಕ್ಕಾಗಿ ಮಾರ್ಗವನ್ನೂ ಪರ್ಯಾಲೋಚಿಸಿ. ಸಹೋದರಿಯ ಜೊತೆ ಭಾವನೆಯನ್ನು ತೆರೆದಿಡುವಿರಿ. ಆಗಾಗ ಮಾತನಾಡುತ್ತ ಸಂಬಂಧವನ್ನು ಗಟ್ಟಿಮಾಡಿಕೊಳ್ಳಿ. ಮಂಗಲ ವಾತಾವರಣವು ನಿಮಗೆ ನೆಮ್ಮದಿಯನ್ನು ಕೊಡುವುದು.

ಕುಂಭ ರಾಶಿ : ವಿಶ್ವಾಸವು ಘಾಸಿಯಾಗಿ ನಿಮ್ಮ ಮೂಲಭೂತ ಅಂಶಗಳೇ ಬುಡಮೇಲಾಗಬಹುದು. ಕೆಲಸಕ್ಕಾಗಿ ಅಲೆದಾಡಿ ಆಯಾಸವಾಗುವುದು. ನಿಮ್ಮ ಪಿತ್ರಾರ್ಜಿತ ಆಸ್ತಿಯು ನಷ್ಟವಾಗಬಹುದ ಎಂಬ ಆತಂಕವು ಇರಲಿದೆ. ಹಣಕಾಸಿನ ಒತ್ತಡವು ಕಡಿಮೆ ಆಗಲಿದೆ. ಅನಾರೋಗ್ಯದ ಕಾರಣದಿಂದ ನೀವು ಇಂದಿನ ಪ್ರಯಾಣವನ್ನು ನಿಲ್ಲಿಸುವಿರಿ. ಕಳ್ಳತನದ ಭೀತಿಯು ನಿಮಗೆ ಇರವುದು‌. ಸಜ್ಜನರಿಗೆ ಕೆಲವು ಅಪವಾದದ ಮಾತುಗಳು ಬರಬಹುದು. ಅಧಿಕಾರಿಗಳ ಪ್ರಶಂಸೆಗೆ ಕಾಯುತ್ತಿರುವಿರಿ. ನಿಮ್ಮ ತಾಳ್ಮೆಯ ವರ್ತನೆಯಿಂದ ಸಂಕಟವು ದೂರಾಗುವುದು. ಕಲಿಕೆಯಲ್ಲಿ ಹೊಸತನವನ್ನು ಇರುವುದು. ಸಂತಾನವು ನಿಮಗೆ ಖುಷಿ ಕೊಡುವುದು. ವಿದೇಶಪ್ರಯಾಣವನ್ನು ಮಾಡುವ ಯೋಚನೆಯಲ್ಲಿಯೇ ಇರುವಿರಿ. ಕೆಲಸದಲ್ಲಿ ಪ್ರಾಮಾಣಿಕತೆ ಇರಲಿದೆ.

ಮೀನ ರಾಶಿ : ಸ್ತ್ರೀಯರ ಜೊತೆ ಕಾರ್ಯಗಳಿಗೆ ಒಡನಾಡುವಾಗ ಎಚ್ಚರಿಕೆಯಿಂದ ಇರಿ. ಆರೋಗ್ಯವು ಹದವನ್ನು ಕಳೆದುಕೊಳ್ಳಬಹುದು.‌ ಸ್ತ್ರೀಯರಿಂದ ಇಂದಿನ ನಿಮ್ಮ ಕೆಲಸವನ್ನು ಮಾಡಿಕೊಳ್ಳುವಿರಿ. ಅಗೌರವವನ್ನು ಕೊಟ್ಟಂತೆ ನಿಮಗೆ ಅನ್ನಿಸಬಹುದು. ಸ್ನೇಹಿತರ ಜೊತೆ ಮನಸ್ತಾಪವು ಬರಬಹುದು. ವ್ಯಾಪಾರದ ಏರಿಳಿತಗಳು ನಿಮ್ಮ ಗಮನಕ್ಕೆ ಬಾರದೇ ಹೋಗಬಹುದು. ಆಪ್ತರು ನಿಮ್ಮಿಂದ ಕಾರಣಾಂತರಗಳಿಂದ ದೂರಾಗಬಹುದು. ಮಕ್ಕಳು ಅಡ್ಡದಾರಿಗೆ ಹೋಗುವ ಸನ್ನಿವೇಶವು ಬರಬಹುದು. ಮಾರ್ಗದರ್ಶನದ ಅವಶ್ಯಕತೆ ಇರಲಿದೆ. ಸ್ವಾವಂಬಿಯಾಗಲು ನೀವು ಇಚ್ಛಿಸುವಿರಿ. ಸಿಟ್ಟನ್ನು ಕಡಿಮೆ ಮಾಡಿಕೊಂಡು ಎಲ್ಲವನ್ನೂ ಸ್ವೀಕರಿಸಿದರೆ ಯಶಸ್ಸು ನಿಮ್ಮದೇ. ಉನ್ನತ ಅಧಿಕಾರವು ನಿಮ್ಮನ್ನು ಹುಡುಕಿಕೊಂಡು ಬಂದೀತು.

-ಲೋಹಿತಶರ್ಮಾ – 8762924271 (what’s app only)

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?