AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಈ ರಾಶಿಯವರು ಇಂದಿನ ಕಾರ್ಯದಲ್ಲಿ ಜಯವನ್ನು ಗಳಿಸುವಿರಿ

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ನವೆಂಬರ್​ 23) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ಈ ರಾಶಿಯವರು ಇಂದಿನ ಕಾರ್ಯದಲ್ಲಿ ಜಯವನ್ನು ಗಳಿಸುವಿರಿ
ರಾಶಿ ಭವಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 23, 2023 | 12:45 AM

ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್​ 23) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಕಾರ್ತಿಕ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಉತ್ತರಾಭಾದ್ರಾ, ಯೋಗ: ವ್ಯಾಘಾತ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 38 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 05 ಗಂಟೆ 59 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 01:44 ರಿಂದ 03:09ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:38 ರಿಂದ 08:03ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:29 ರಿಂದ 10:54ರ ವರೆಗೆ.

ಧನು ರಾಶಿ : ನಿಷ್ಠುರತೆಯಿಂದ ಎಲ್ಲರ ಮೇಲು ಸಿಟ್ಟಾಗುವಿರಿ. ಹಳೆಯ ಸಾಲವನ್ನು ತೀರಿಸಿ ಮತ್ತೆ ಮಾಡಬೇಕಾದೀತು. ಕೃಷಿಯಲ್ಲಿ ನಿಮ್ಮದೇ ಹೆಸರನ್ನು ಗಳಿಸುವಿರಿ. ನಿಮ್ಮಿಂದಾಗಿ ಕುಟುಂಬದ ಕಲಹವು ನಿಲ್ಲುವುದು. ಇಂದಿನ ಕಾರ್ಯದಲ್ಲಿ ಜಯವನ್ನು ಗಳಿಸುವಿರಿ. ಒಂದ ಕಡೆ ನಿಂತಲ್ಲಿ ನಿಲ್ಲಲಾಗದು. ರಾಜಕಾರಣಿಗಳಿಗೆ ಸಮಾಜದಿಂದ ಗೌರವವನ್ನು ಪಡೆಯಬೇಕು ಎನ್ನುವ ಆಸೆ ಇರಲಿದೆ. ವಿದ್ಯಾರ್ಥಿಗಳು ಓದಿಗೆ ಸಮಯವು ಸಿಗದೇ ಕಷ್ಟವಾಗುವುದು. ಮಿತ್ರನಿಗೆ ಗೊತ್ತಿಲ್ಲದೇ ಹಣವನ್ನು ಪಡೆಯುವಿರಿ. ತಂದೆಯ ಆರೋಗ್ಯವು ವ್ಯತ್ಯಾಸವಾಗಲಿದ್ದು ಸೂಕ್ತ ಚಿಕಿತ್ಸೆಯನ್ನು ಕೊಡಿಸುವಿರಿ. ಬಹಳ ದಿನಗಳ ಅನಂತರ ಉತ್ತಮ ಭೋಜನವು ಸಿಗವುದು. ಹಣಕಾಸಿಗೆ ಸಂಬಂಧಿಸಿದ ಆರೋಪದ ಬಗ್ಗೆ ಏನನ್ನೂ ನೀವು ಹೇಳಲಾರಿರಿ. ಬಂಧುಗಳ ಪ್ರೀತಿಯು ನಿಮಗೆ ಸಿಗುವುದು. ಸಾಲದಿಂದ ಮುಕ್ತರಾಗಲು ನಿಮಗೆ ಸಾಧ್ಯವಾಗದು. ತಾಳ್ಮೆಯನ್ನು ನೀವು ಕಳೆದುಕೊಳ್ಳುವಿರಿ.

ಮಕರ ರಾಶಿ : ಮಂಗಲ‌ ಕಾರ್ಯಗಳಿಗೆ ನಿಮ್ಮಿಂದ ಹಣವು ಖರ್ಚಾಗುವುದು. ಪಾಲುದಾರಿಕೆಯಲ್ಲಿ ನಿಮ್ಮದೇ ಮೇಲುಗೈ ಸಾಧಿಸಲಿದೆ. ನಿಮ್ಮ ಬಾಲಿಶ ಮಾತುಗಳು ನಿಮ್ಮ ನಡವಳಿಕೆಯನ್ನು ತೋರಿಸುವುದು. ಬರಬೇಕಾದ ಹಣವು ನಿಮಗೆ ಪೂರ್ತಿಯಾಗಿ ಬಾರದೇ ಬೆರಸರವಾದೀತು. ಚಂಚಲ ಮನಸ್ಸನ್ನು ನಿಯಂತ್ರಿಸಲು ಕಷ್ಟವಾದೀತು. ಇದರಿಂದ ಕೆಲಸದಲ್ಲಿ ಹಿನ್ನಡೆಯಾಗುವುದು. ಕೊಡುಕೊಳ್ಳುವ ವ್ಯವಹಾರವು ಪ್ರಮಾಣಿಕವಾಗಿ ಇರಲಿ. ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆಯನ್ನು ನಿರಾಕರಿಸುವಿರಿ. ನಿಮ್ಮ ಆಸ್ತಿಯನ್ನು ಪಡೆಯಲು ಬೇರೆಯವರ ದೃಷ್ಟಿ ಇರುವುದು. ಕೆಲವರಿಗೆ ನಿಮ್ಮ ಉಪಕಾರವು ಸಿಗುವುದು.‌ ಸಂಗಾತಿಯ ಅಸಹಜ ಮಾತುಗಳಿಂದ ನಿಮಗೆ ಕಷ್ಟವಾಗುವುದು. ನಿಮ್ಮನ್ನು ಕುಟುಂಬವು ನಿರ್ಲಕ್ಷ್ಯಿಸಿದಂತೆ ಕಾಣುವುದು. ಸಂಗಾತಿಯಿಂದ ಶುಭ ಸಮಾಚಾರವು ಇರಲಿದೆ. ಸ್ನೇಹಿತರ ಜೊತೆ ಸುತ್ತಾಟದಿಂದ ಖರ್ಚು ಬರಬಹುದು.

ಕುಂಭ ರಾಶಿ : ಸಾಲದ ವಿಚಾರದಲ್ಲಿ ಜಾಗರೂಕತೆ ಅವಶ್ಯಕ. ನಿಮಗೆ ಮನೆಯು ಬಂಧನದಂತೆ ಅನ್ನಿಸಬಹುದು. ದುರ್ಘಟನೆಯಿಂದ ಮನಸ್ಸು ಕಲಕಬಹುದು. ಇಂದು ಆಲಂಕಾರಿಕ ವಸ್ತುಗಳ ವ್ಯಾಪಾರದಲ್ಲಿ ಲಾಭವನ್ನು ನಿರೀಕ್ಷಿಸುವಿರಿ. ಸ್ಥಿರಾಸ್ತಿಯ ಖರೀದಿಯ ಯೋಗವಿದ್ದರೂ ಯೋಗವಿದೆ. ವಿವಾಹಕ್ಕೆ ಅನ್ಯರಿಂದ ಅಡಚಣೆ ಬರಬಹುದು. ಆದಾಯಕ್ಕಿಂತ ಹೆಚ್ಚು ಖರ್ಚು ಹೆಚ್ಚಿದ್ದು ನಿಮಗೆ ನಿಯಂತ್ರಣವು ಕಷ್ಟವಾದೀತು. ದೃಷ್ಟಿದೋಷವು ನಿಮಗೆ ಅಧಿಕವಾಗಬಹುದು. ಚಿರಪರಿಚಯವು ನಿಮಗೆ ಹೊಸತಾಗಿ ಕಾಣಿಸಬಹುದು. ಆಸ್ತಿಗೆ ಸಂಬಂಧಿಸಿದ ದಾಖಲೆಗಳು ಕಳೆದುಹೋಗಬಹದು. ಅನ್ಯ ಆಲೋಚನೆಯಲ್ಲಿ ದಿನವನ್ನು ಕಳೆಯುವಿರಿ. ಪಿತ್ರಾರ್ಜಿತ ಆಸ್ತಿಯ ವಿಚಾರದಲ್ಲಿ ಸಹೋದರನಿಂದ ವಂಚನೆಯಾದ ಅನುಮಾನ ಇರುವುದು. ಅನಾರೋಗ್ಯದ ಕಾರಣ ವಿಶ್ರಾಂತಿಯಿಂದ ಅನಿವಾರ್ಯವಾಗುವುದು. ಇನ್ನೊಬ್ಬರ ವಿಷಯದಲ್ಲಿ ಹೊಟ್ಟೆಕಿಚ್ಚು ಇರುವುದು.

ಮೀನ ರಾಶಿ : ಮೇಲಧಿಕಾರಿಗಳು ನಿಮ್ಮ ಮನವಿಯನ್ನು ಒಪ್ಪಬಹುದು.‌ ಮನೆಗೆಲಸವೇ ನಿಮ್ಮ‌ ಇಡೀ ದಿನಕ್ಕೆ ಆಗುವಷ್ಟು ಇರುವುದು. ಮನೆಯ ಹಿರಿಯರು ನಿಮಗೆ ಉಪದೇಶ ಕೊಡಬಹುದು. ನಿಮಗೆ ಗೌರವವು ಪ್ರಾಪ್ತವಾಗುವ ಸಾಧ್ಯತೆ ಇದೆ. ಆರ್ಥಿಕ ಸಮಸ್ಯೆಯಾದೀತು. ಶತ್ರು ನಿಗ್ರಹ. ಕೃಷಿಯಲ್ಲಿ ಲಾಭ. ಆಸ್ತಿಯ ಸಮಸ್ಯೆಗೆ ಸೂಕ್ತ ಪರಿಹಾರವನ್ನು ಕಂಡುಕೊಳ್ಳುವುದು ಕಷ್ಟವಾದೀತು. ಸರ್ಕಾರದ ಕೆಲಸವು ವಿಳಂಬವಾಗಿ ನಿಮಗೆ ಬೇಸರವಾಗುವುದು. ಯಾರನ್ನೂ ನೀವು ತಪ್ಪಾಗಿ ಗ್ರಹಿಸುವುದು ಬೇಡ. ನಿಮ್ಮ ನಡೆಯಿಂದ ವಿರೋಧಿಗಳು ಹುಟ್ಟಿಕೊಳ್ಳಬಹುದು. ಹೊಸ ವಾಹನ ಖರೀದಿ ಮಾಡುವುದನ್ನು ಕೈ ಬಿಡುವಿರಿ. ಸಹೋದರರ ಜೊತೆಗಿನ ಸಂಬಂಧವು ಒಂದು ಮಾತಿನಿಂದ ಹಾಳಾಗಲಿದೆ. ಕೆಲವರ ಮಾತು ನಿಮಗೆ ಬಾಲಿಶ ಎನಿಸಬಹುದು.‌ ಸಂಪತ್ತಿನ ರಕ್ಷಣೆಯನ್ನು ಮಾಡಿಕೊಳ್ಳುವುದು ಇಂದು ಅಸಾಧ್ಯವಾಗುವುದು.

-ಲೋಹಿತಶರ್ಮಾ – 8762924271 (what’s app only)

ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ
ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ
ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ರಾಜಶೇಖರ್
ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ರಾಜಶೇಖರ್
ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್​ಗಳಿಗೆ ನಿರ್ಬಂಧ
ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್​ಗಳಿಗೆ ನಿರ್ಬಂಧ
‘ಥಗ್ ಲೈಫ್’ ಬಿಡುಗಡೆ ಆದರೆ, ಪರೋಕ್ಷ ಎಚ್ಚರಿಕೆ ಕೊಟ್ಟ ಪ್ರವೀಣ್ ಶೆಟ್ಟಿ
‘ಥಗ್ ಲೈಫ್’ ಬಿಡುಗಡೆ ಆದರೆ, ಪರೋಕ್ಷ ಎಚ್ಚರಿಕೆ ಕೊಟ್ಟ ಪ್ರವೀಣ್ ಶೆಟ್ಟಿ
ಗೋಲ್ಡ್ ಸುರೇಶ್ ವಿರುದ್ಧ ಲಕ್ಷ ಲಕ್ಷ ವಂಚನೆ ಮಾಡಿದ ಆರೋಪ
ಗೋಲ್ಡ್ ಸುರೇಶ್ ವಿರುದ್ಧ ಲಕ್ಷ ಲಕ್ಷ ವಂಚನೆ ಮಾಡಿದ ಆರೋಪ
ರಾಮೋಜಿ ಫಿಲ್ಮ್​ಸಿಟಿಯಲ್ಲಿ 16 ಮಹಾನಟಿಯರ ಭರ್ಜರಿ ಫೋಟೋಶೂಟ್
ರಾಮೋಜಿ ಫಿಲ್ಮ್​ಸಿಟಿಯಲ್ಲಿ 16 ಮಹಾನಟಿಯರ ಭರ್ಜರಿ ಫೋಟೋಶೂಟ್
ಸಕಲೇಶಪುರ: ರಸ್ತೆಯಲ್ಲೇ ಕಾಡಾನೆಗಳ ಪರೇಡ್! ಬೆಚ್ಚಿಬಿದ್ದ ಗ್ರಾಮಸ್ಥರು
ಸಕಲೇಶಪುರ: ರಸ್ತೆಯಲ್ಲೇ ಕಾಡಾನೆಗಳ ಪರೇಡ್! ಬೆಚ್ಚಿಬಿದ್ದ ಗ್ರಾಮಸ್ಥರು
ಸಚಿವ ಶಿವರಾಜ್ ತಂಗಡಗಿ ಬೆಂಗಾವಲು ಪಡೆ ವಾಹನ ಅಪಘಾತ, ಇಬ್ಬರಿಗೆ ಗಾಯ
ಸಚಿವ ಶಿವರಾಜ್ ತಂಗಡಗಿ ಬೆಂಗಾವಲು ಪಡೆ ವಾಹನ ಅಪಘಾತ, ಇಬ್ಬರಿಗೆ ಗಾಯ
Daily Devotional: ಈ 5 ವಿಷಯಗಳನ್ನ ಯಾರಿಗೂ ಹೇಳಬಾರದು
Daily Devotional: ಈ 5 ವಿಷಯಗಳನ್ನ ಯಾರಿಗೂ ಹೇಳಬಾರದು
ಸೂರ್ಯ ಮಿಥುನ ರಾಶಿಯಲ್ಲಿ, ಇಂದು ಯಾರಿಗೆಲ್ಲಾ ಶುಭ ದಿನ ತಿಳಿಯಿರಿ
ಸೂರ್ಯ ಮಿಥುನ ರಾಶಿಯಲ್ಲಿ, ಇಂದು ಯಾರಿಗೆಲ್ಲಾ ಶುಭ ದಿನ ತಿಳಿಯಿರಿ