Horoscope: ಮೂರನೇಯವರಿಂದ ದಾಂಪತ್ಯ ಜೀವನದಲ್ಲಿ ಕಲಹ, ಹಿರಿಯರ ಸಲಹೆ ಪಡೆಯಿರಿ
24 ಮಾರ್ಚ್ 2025: ಸೋಮವಾರದಂದು ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ನೀವು ಮನೆ ಕೆಲಸವನ್ನು ಬೇಗ ಮುಗಿಸಿ ಸ್ವಲ್ಪ ಬಿಡುವು ಮಾಡಿಕೊಳ್ಳಲು ಪ್ರಯತ್ನಿಸುವಿರಿ. ಹಾಗಾದರೆ ಮಾರ್ಚ್ 24ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

ಬೆಂಗಳೂರು, ಮಾರ್ಚ್ 24, ನಿತ್ಯ ಪಂಚಾಗ: ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಸೌರ ಮಾಸ : ಮೀನ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಕೃಷ್ಣ, ವಾರ : ಸೋಮ, ತಿಥಿ : ದಶಮೀ, ನಿತ್ಯನಕ್ಷತ್ರ : ಶ್ರವಣಾ, ಯೋಗ : ಪರಿಘ, ಕರಣ : ವಣಿಜ, ಸೂರ್ಯೋದಯ – 06 – 35 am, ಸೂರ್ಯಾಸ್ತ – 06 – 42 pm, ಇಂದಿನ ಶುಭಾಶುಭಕಾಲ : ರಾಹು ಕಾಲ 08:06 – 09:37, ಯಮಘಂಡ ಕಾಲ 11:08 – 12:39, ಗುಳಿಕ ಕಾಲ 14:10 – 15:41.
ತುಲಾ ರಾಶಿ: ಕೃಷಿಗೆ ಯೋಗ್ಯವಾದ ಭೂಮಿಯ ಖರೀದಿ ಸಫಲವಾಗುವುದು. ನೀವು ಎಲ್ಲ ರೀತಿಯಿಂದ ಸುರಕ್ಷಿತರಾಗಿದ್ದರೂ ಎಲ್ಲೋ ಒಂದು ಕಡೆ ಅಸಮಾಧಾನ ನಿಮ್ಮ ತಲೆಯೊಳಗೆ ನುಸುಳುವುದು. ಶತ್ರುಗಳ ಬಗೆಗೆ ನಿಮಗೆ ಸರಿಯಾದ ಮಾಹಿತಿಯನ್ನು ಪಡೆದುಕೊಳ್ಳುವಿರಿ. ದಾಂಪತ್ಯದಲ್ಲಿ ಇನ್ನೊಬ್ಬರ ಕಾರಣದಿಂದ ಕಲಹವಾಗಬಹುದು. ರಾಜಕೀಯದಲ್ಲಿ ತೃಪ್ತಿ ಸಿಗದೇ ತೊಳಲಾಟ ಇರಲಿದೆ. ಪರರ ಜೀವನಕ್ಕೆ ಸಣ್ಣ ಉಪಕಾರವಾಗಲಿದೆ. ಸಂಗಾತಿಯ ಆರೋಗ್ಯದ ಕಡೆ ನಿಮ್ಮ ಗಮನವು ಹೆಚ್ಚಿರುವುದು. ಹಿರಿಯರ ಮಾರ್ಗದರ್ಶನವನ್ನು ಶಿರಸಾ ಅಲಿಸುವಿರಿ. ಜೀವನವು ಸಪ್ಪೆಯಾಗದಂತೆ ನೋಡಿಕೊಳ್ಳುವ ಕಲೆ ಗೊತ್ತಿದೆ. ಅವ್ಯಕ್ತವಾದ ನೆಮ್ಮದಿಯಿಂದ ಬೀಗಬಹುದು. ಕಿರಿಯರಿಂದ ಆಕಸ್ಮಿಕವಾಗಿ ಗೌರವಕ್ಕೆ ಪಾತ್ರರಾಗುವಿರಿ. ಎಂದೋ ಆದ ಬೇಸರವನ್ನು ಸ್ನೇಹಿತನ ಮುಂದೆ ಇಂದು ಪ್ರಕಟಿಸುವಿರಿ. ಅಸಹಜ ಮಾತುಗಳಿಗೆ ಸ್ಪಂದನೆ ಸಿಗದು. ಪ್ರತ್ಯೇಕತೆಯನ್ನು ನೀವು ಬಯಸುತ್ತಿರುವಿರಿ. ಹೂಡಿಕೆಯಿಂದ ಆರ್ಥಕ ಅಭಿವೃದ್ಧಿಯಾಗಲಿದೆ ಎಂಬ ನೆಮ್ಮದಿ ಇರುವುದು.
ವೃಶ್ಚಿಕ ರಾಶಿ; ಭವಿಷ್ಯ ದೃಷ್ಟಿಯಿಂದ ಆರ್ಥಿಕ ಸ್ಥಿತಿಯನ್ನು ಬಲಗೊಳಿಸುವುದು ಒಳ್ಳೆಯದು. ನಿಮ್ಮಿಂದಾದ ತಪ್ಪಿಗೆ ನೀವೇ ಕ್ಷಮೆ ಯಾಚಿಸಿ ಅದನ್ನು ಸರಿಮಾಡಿಕೊಳ್ಳುವಿರಿ. ಸಮಾಜಿಕ ಕಾರ್ಯಗಳಿಂದ ಪ್ರಶಂಸೆಯು ನಿಮ್ಮತ್ತ ಅನಾಯಾಸವಾಗಿ ಹರಿದುಬರುವುದು. ಸಮಚಿತ್ತವು ನಿಮ್ಮ ದುಃಖದ ನಿವಾರಣೆಗೆ ಕಾರಣವಾಗುತ್ತದೆ. ದೊಡ್ಡ ಕನಸನ್ನು ಸಾಕಾರಗೊಳಿಸಲು ಸಣ್ಣ ಪ್ರಯತ್ನವಾದರೂ ಬೇಕು. ನಕಾರಾತ್ಮಕ ವಿಚಾರಗಳ ಕಡೆ ಗಮನ ಬೇಡ. ಆದಾಯ ಮೂಲದ ಬಗ್ಗೆ ಅಸಮಾಧಾನ ಬರಬಹುದು. ನಿಮ್ಮ ಬಗ್ಗೆ ಇರುವ ಭಾವವು ಬದಲಾಗಲಿದ್ದು ನಕಾರಾತ್ಮಕ ಪ್ರತಿಕ್ರಿಯೆಯು ನಿಮ್ಮಂದ ಬರಲಿದೆ. ಭೂಮಿಯ ಲಾಭವು ಆಗಲಿದ್ದು ಅನೇಕ ದಿನದ ಚಿಂತೆಗಳು ದೂರಾಗುವುದು. ಅಧಿಕ ಆದಾಯಕ್ಕಾಗಿ ಉದ್ಯೋಗವನ್ನು ನೀವು ತ್ಯಾಗಮಾಡುವಿರಿ. ಇದಕ್ಕೆ ಕಾರಣ ಹೊಸ ಉದ್ಯಮದ ಕಡೆ ಸೆಳೆತವು ಅತಿಯಾಗಿರುವುದು. ಮಾನಸಿಕ ಅಸಮತೋಲನವನ್ನು ಸರಿ ಮಾಡಿಕೊಳ್ಳುವಿರಿ. ಬಿರುಸು ನುಡಿಯಿಂದ ನಿಮಗೆ ಆಗಬೇಕಾದ ಕಾರ್ಯವು ಆಗದು.
ಧನು ರಾಶಿ: ಯಾವುದೇ ಲಾಭವಿಲ್ಲದೇ ಪ್ರೇಮವನ್ನೂ ಮಾಡಬಾರದು ಎಂಬ ನಿಶ್ಚಯಕ್ಕೆ ಬರುಬಿರಿ. ನಿಮ್ಮ ಬಗ್ಗೆಯೇ ನಿಮಗೆ ನಕಾರಾತ್ಮಕ ಯೋಚನೆಗಳು ಬರಬಹುದು. ಅದನ್ನು ನಿಲ್ಲಿಸಲು ಪ್ರಯತ್ನಿಸಿ. ಮನಸ್ಸಿಗೆ ಬೇರೆ ಯಾವುದಾದರೂ ಕೆಲಸ ಕೊಡಿ. ಸಹೋದರರ ಬಗ್ಗೆ ನಿಮಗಿರುವ ಭಾವವು ಬದಲಾದೀತು. ಎಲ್ಲರ ಅನುಭವವನ್ನು ಕೇಳಿ ಸ್ವಂತ ನಿರ್ಧಾರಕ್ಕೆ ಬನ್ನಿ. ಕುಟುಂಬದ ಸಮಸ್ಯೆಗಳಿಂದಾಗಿ ನಿಮ್ಮ ಸಂಗಾತಿ ಇಂದು ಅಸಮಾಧಾನಗೊಳ್ಳಬಹುದು. ಎಲ್ಲವನ್ನೂ ವಹಿಸಿಕೊಂಡು ಅನಂತರ ಅತಂತ್ರವಾದೀತು. ಮಾನಸಿಕ ಅಸಮತೋಲನವನ್ನು ಕಾಯ್ದುಕೊಳ್ಳುವುದು ಸವಾಲಾಗಬಹುದು. ವಾಹನ ಖರೀದಿಗೆ ಆಲೋಚನೆ ಇರಲಿದ್ದು ಸಾಲ ಮಾಡಬೇಕಗಬಹುದು. ನಿಮ್ಮ ವೇಗದ ಮನಸ್ಸನ್ನು ನಿಯಂತ್ರಿಸಬೇಕಾಗುವುದು. ಇಂದು ಮಾಡುವ ಎಲ್ಲ ಕಾರ್ಯಗಳನ್ನೂ ಪೂರ್ಣ ಮಾಡಲಾರಿರಿ. ಇಷ್ಟವಿಲ್ಲದ ವ್ಯಕ್ತಿಗಳ ಜೊತೆ ಇರಲು ಕಸಿವಿಸಿ ಆದೀತು. ಮನೆಯವರ ಸಣ್ಣ ತಪ್ಪುಗಳನ್ನು ಸಹಿಸಲಾರಿರಿ. ಮತ್ತೆ ಮತ್ತೆ ಉಂಟಾದ ಅನಾರೋಗ್ಯದಿಂದ ನಿಮ್ಮ ದಿನಚರಿಯನ್ನೇ ಬದಲಾಯಿಸಿಕೊಳ್ಳಬೇಕಾಗುವುದು.
ಮಕರ ರಾಶಿ: ಹೊಸ ಕೆಲಸದಲ್ಲಿ ಹೊಸ ಗೆಳೆತನವಾಗುವುದು. ಇಂದಿನ ಸಮಾರಂಭದಲ್ಲಿ ನಿಮ್ಮನ್ನು ಹುಡುಕಿಕೊಂಡು ಭೇಟಿಮಾಡಬಹುದು. ಮಕ್ಕಳ ಮೇಲೆ ನಿಮ್ಮ ಪ್ರೀತಿಯು ಕಡಿಮೆಯಾಗುವುದು. ನಿಮ್ಮ ಚುರುಕುತನದಿಂದ ಎಲ್ಲರನ್ನೂ ಎಚ್ಚರಿಸುವಿರಿ. ಶತ್ರುಪಕ್ಷದವರು ನಿಮ್ಮ ಪಕ್ಷಕ್ಕೆ ಬರುವ ಸಾಧ್ಯತೆ ಇದೆ. ಇದ್ದಕಿದ್ದಂತೆ ಅಭ್ಯಾಸದ ಕಡೆ ಸೆಳೆತ ಹೆಚ್ಚಾಗುವುದು. ಸುಮ್ಮನಿರುವ ಶತ್ರುವನ್ನು ಕೆಣಕಿ ಮೈಮೇಲೆ ಹಾಕಿಕೊಳ್ಳುವಿರಿ. ಪ್ರೀತಿಯ ವಿಚಾರಕ್ಕೆ ನಿಮಗೆ ಬಂದರೆ ಪೂರ್ಣ ಸಮಾಧಾನ ಸಿಗದು. ಹಳೆಯ ಕಾರ್ಯಗಳನ್ನು ಇಟ್ಟುಕೊಂಡ ಹೊಸತನ್ನು ಮಾಡಲು ಉತ್ಸಾಹವಿರದು. ವಿದ್ಯಾರ್ಥಿಗಳು ಸಹವಾಸದೋಷದಿಂದ ಕೆಡುವ ಸಾಧ್ಯತೆ ಇದೆ. ಸಂಗಾತಿಯ ಮೇಲೆ ಅನುಮಾನವನ್ನು ನಿಮ್ಮ ರೀತಿಯಲ್ಲಿ ವ್ಯಕ್ತಪಡಿಸುವಿರಿ. ನಿಮ್ಮವರ ಪ್ರೀತಿಯು ನಿಮಗೆ ಕಡಿಮೆ ಆದಂತೆ ಅನ್ನಿಸುವುದು. ಕೃಷಿಯಲ್ಲಿ ಉಪಯುಕ್ತ ಯೋಜನೆಯನ್ನು ಹಾಕಿಕೊಳ್ಳುವಿರಿ. ಮಕ್ಕಳ ಬಗ್ಗೆ ಇರುವ ನಿಮ್ಮ ಚಿಂತೆ ನಿವಾರಣೆ ಆಗುವುದು. ಪ್ರಯಾಣವನ್ನು ಆನಂದಿಸುವಿರಿ. ಕಡಿಮೆ ವೆಚ್ಚವನ್ನು ಹೆಚ್ಚು ಮಾಡಿಕೊಳ್ಳುವ ಸಾಧ್ಯತೆ ಇದೆ.
ಕುಂಭ ರಾಶಿ: ಆರಂಭದಲ್ಲಿ ತೋರಿದ ಉತ್ಸಾಹವನ್ನು ಅಂತ್ಯದವರಗೂ ಕಾಡಿಕೊಳ್ಳಲು ಹೊಸ ಯೋಚನೆ ಅವಶ್ಯಕ. ಉತ್ಸಾಹವೂ ಇದಕ್ಕೆ ಪೂರಕ. ಪುಣ್ಯಕ್ಷೇತ್ರಗಳ ದರ್ಶನದಿಂದ ವ್ಯಾವಹಾರಿಕ ಒತ್ತಡಗಳು ಕಡಿಮೆಯಾಗುವುದು. ನೂತನ ಗೃಹನಿರ್ಮಾಣದ ಬಗ್ಗೆ ಆಸಕ್ತಿ ಹೆಚ್ಚುವುದು. ನಿಮ್ಮ ಉತ್ಸಾಹಕ್ಕೆ ಯಾರಾದರೂ ಅಡ್ಡಗಾಲು ಹಾಕಿಯಾರು. ನಿಮ್ಮ ಇಚ್ಛೆಗಳು ಪೂರ್ಣವಾಗದೇ ಬೇಸರವಾಗಬಹುದು. ಪ್ರಭಾವಿಗಳ ಮನವನ್ನು ಸೋಲಿಸಿ ಅವರ ಬೆಂಬಲವನ್ನು ಪಡೆಯುವಿರಿ. ಉನ್ನತ ಸ್ಥಾನಮಾನದ ಉದ್ಯೋಗಕ್ಕಾಗಿ ಅಲೆದಾಡುವ ಸ್ಥಿತಿ ಬರಲಿದ್ದು, ಆಯಾಸವೂ ಬೇಸರವೂ ನಿಮಗಾಗಲಿದೆ. ನಿಮ್ಮ ಪಿತ್ರಾರ್ಜಿತ ಆಸ್ತಿಯು ನಷ್ಟವಾಗಬಹುದ ಎಂಬ ಆತಂಕವು ಇರಲಿದೆ. ಹಣಕಾಸಿನ ಒತ್ತಡವು ಕಡಿಮೆ ಆಗಲಿದೆ. ಅನಂತರ ನೀವೂ ಹಗುರಾಗಬಹುದು. ಅನಾರೋಗ್ಯದ ಕಾರಣದಿಂದ ನೀವು ಇಂದಿನ ಪ್ರಯಾಣವನ್ನು ನಿಲ್ಲಿಸುವಿರಿ. ಕಳ್ಳತನ ಮಾಡಿದ ಅಪವಾದ ಬರಬಹುದೆಂಬ ಭೀತಿ ನಿಮಗೆ ಕಾಡುವುದು. ಸಜ್ಜನರಿಗೆ ಕೆಲವು ಅಪವಾದದ ಮಾತುಗಳು ಬರಬಹುದು.
ಮೀನ ರಾಶಿ: ಇಂದು ನೀವು ಸಮಸ್ಯೆಗಳನ್ನು ಯಾವ ಕ್ಷೇತ್ರದಿಂದಲೂ ಬರಲು ಬಿಡುವುದು ಬೇಡ. ಒಮ್ಮೆ ಬಂದರೂ ಅದು ಬೆಳೆಯದಂತೆ ಅಲ್ಲಿಯೇ ಚಿವುಟಿ ಹಾಕಿ ಅಥವಾ ಪರಿಹಾರವನ್ನು ಕಂಡುಕೊಳ್ಳಿ. ನಾಳೆಗೆಂದು ಮುಂದೂಡುವುದು ಬೇಡ. ನೀವು ಮನೆ ಕೆಲಸವನ್ನು ಬೇಗ ಮುಗಿಸಿ ಸ್ವಲ್ಪ ಬಿಡುವು ಮಾಡಿಕೊಳ್ಳಲು ಪ್ರಯತ್ನಿಸುವಿರಿ. ಹೂಡಿಕೆಯಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಳ್ಳುವಿರಿ. ಕೌಟುಂಬಿಕ ಜೀವನವು ಶಾಂತಿಯುತ ಮತ್ತು ಸಂತೋಷದಿಂದ ಇರುವುದು. ಎಲ್ಲದಕ್ಕೂ ಇಂದು ತಾಳ್ಮೆ ಅತ್ಯಂತ ಅವಶ್ಯಕ. ಸಂಬಂಧಗಳನ್ನು ಆಪ್ತವಾಗಿಸಿಕೊಳ್ಳುವ ಪ್ರಯತ್ನದಲ್ಲಿ ಇರುವಿರಿ. ಸ್ತ್ರೀಯರಿಂದ ಇಂದಿನ ನಿಮ್ಮ ಕೆಲಸವನ್ನು ಮಾಡಿಕೊಳ್ಳುವಿರಿ. ಅಗೌರವವನ್ನು ಕೊಟ್ಟಂತೆ ನಿಮಗೆ ಅನ್ನಿಸಬಹುದು. ಅದನ್ನು ನಿರ್ಲಕ್ಷಿಸಿ ಬೇಕಾದ ಕಡೆಯಲ್ಲಿ ತೊಡಗಿಸಿ. ಸ್ನೇಹಿತರ ಜೊತೆ ಮನಸ್ತಾಪವು ಬರಬಹುದು. ವ್ಯಾಪಾರದ ಏರಿಳಿತಗಳು ನಿಮ್ಮ ಗಮನಕ್ಕೆ ಬಾರದೇ ಹೋಗಬಹುದು. ಆಪ್ತರು ನಿಮ್ಮಿಂದ ಕಾರಣಾಂತರಗಳಿಂದ ದೂರಾಗಬಹುದು. ಇನ್ನೊಬ್ಬರನ್ನು ರಿಪೇರಿ ಮಾಡಲು ಹೋಗಿ ಸಮಯ ಹಾಳಾದೀತು.