Horoscope Today 21 December: ಇಂದು ಈ ರಾಶಿಯವರಿಗೆ ವ್ಯವಹಾರಿಕ ಸೋಲಿನಿಂದ ಅಸಮಾಧಾನ
ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಪೌಷ ಮಾಸ ಶುಕ್ಲ ಪಕ್ಷದ ದ್ವಿತೀಯಾ ತಿಥಿ ಭಾನುವಾರ ಖರೀದಿ, ಆತ್ಮೀಯರ ಭೇಟಿ, ವ್ಯಾಪಾರದಲ್ಲಿ ವ್ಯಾಪಕತೆ, ಅಧ್ಯಯನದ ಸಂತಸ, ಸಂಶೋಧನೆಗೆ ಓಡಾಟ, ಅತಿಯಾದ ಮಾತು, ಒಪ್ಪಂದದ ಮಾತುಕತೆ ಇವೆಲ್ಲ ಈ ದಿನದ ವಿಶೇಷ.

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಧನು, ಮಹಾನಕ್ಷತ್ರ : ಮೂಲಾ, ವಾರ : ಭಾನು, ಪಕ್ಷ : ಶುಕ್ಲ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ಪೂರ್ವಾಷಾಢ, ಯೋಗ : ಧೃತಿ, ಕರಣ : ನಾಗವಾನ್, ಸೂರ್ಯೋದಯ – 06 – 45 am, ಸೂರ್ಯಾಸ್ತ – 06 – 00 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 16:36 – 18:00, ಯಮಗಂಡ ಕಾಲ 12:23- 13:47, ಗುಳಿಕ ಕಾಲ 15:51 – 16:36.
ಮೇಷ ರಾಶಿ: ಕನಸಿನಲ್ಲೇ ತೇಲಿದರೆ ವಾಸ್ತವಿಕ ನಷ್ಟವಾಗುವ ಸಂಭವ. ಪ್ರಯೋಗಾತ್ಮಕ ಚಿಂತನೆಯು ಯಶಸ್ಸನ್ನು ತರುತ್ತದೆ. ಇನ್ನೊಬ್ಬರ ಬಗ್ಗೆ ನಿಮ್ಮಲ್ಲಿ ಕುತೂಹಲ ಇರಲಿದೆ. ಸಜ್ಜನರ ಜೊತೆ ಸಮಯ ಕಳೆಯುವ ಅವಕಾಶ ಸಿಗುವುದು. ಕುಟುಂಬದ ಹಿರಿಯರ ಅನಾರೋಗ್ಯದ ಕಾರಣ ನಿಮ್ಮ ಸ್ವಂತ ಕಾರ್ಯವನ್ನು ಮಾಡಿಕೊಳ್ಳಲಾಗದು. ಆಭರಣ ಖರೀದಿಗೆ ಉತ್ತಮ ದಿನವಿದಾಗಲಿದೆ. ವೃದ್ಧರ ಸೇವೆಯಲ್ಲಿ ತೊಡಗಿಕೊಳ್ಳುವಿರಿ. ಉದ್ಯೋಗವನ್ನು ನಂಬಿ ಜೀವನ ಸಾಗಿಸುವವರಿಗೆ ಬೇಸರ ಎದುರಾಗಬಹುದು. ನಿಮ್ಮ ವ್ಯಾಪಾರದ ತಂತ್ರವು ಫಲಿಸಬಹುದು. ವ್ಯಾಪಾರದಲ್ಲಿ ಲಾಭವನ್ನು ತಂದೀತು. ಕಲಾತ್ಮಕ ಕೆಲಸಗಳಲ್ಲಿ ಸಂತೋಷ ಸಿಗುತ್ತದೆ. ಮನಸ್ಸಿಗೆ ಶಾಂತಿ ದೊರೆಯುತ್ತದೆ. ಸನ್ನಿವೇಶಕ್ಕೆ ತಕ್ಕುದಾದ ಮಾತನ್ನು ಆಡಿ. ಎಲ್ಲ ಕಾರ್ಯಕ್ಕೂ ಲಾಭವನ್ನು ನಿರೀಕ್ಷಿಸುವುದು ಬೇಡ. ಅನುವಾದಕರಿಗೆ ಹೆಚ್ಚು ಕಾರ್ಯಗಳು ಬರಬಹುದು. ಮನಸ್ಸಿನ ಭಾರವನ್ನು ಕಳೆಯುವ ದಾರಿಗಳು ನಿಮ್ಮ ಮುಂದೆ ಇರುವುದು.
ವೃಷಭ ರಾಶಿ: ನಿಮ್ಮ ಇಂದಿನ ಅಭಿಪ್ರಾಯವನ್ನು ಇತರರು ತಪ್ಪಾಗಿ ಅರ್ಥೈಸಿಕೊಳ್ಳಬಹುದು. ಸ್ಪಷ್ಟ ಸಂವಹನದಿಂದ ನಷ್ಟವನ್ನು ತಪ್ಪಿಸಬಹುದು. ನಿಮ್ಮ ಅಂತಶ್ಶಕ್ತಿಯೇ ನಿಮ್ಮ ನಿಜವಾದ ಬಲವಾದುದರಿಂದ ಯಾವ ಸಮಸ್ಯೆಗಳಿಗೂ ನಿರಾತಂಕವಾಗಿ ಇರುವಿರಿ. ಸ್ನೇಹಿತರು ನಿಮಗೆ ಸುಳ್ಳು ಹೇಳುವರು. ಮಕ್ಕಳ ವಿದ್ಯಾಭ್ಯಾಸಕ್ಕೆ ನೀವೇ ವಿಶೇಷ ಕಾಳಜಿಯನ್ನು ತೋರಿ ಅವರನ್ನು ಓದಿಗೆ ಪ್ರೇರಣೆ ಕೊಡಬೇಕಾಗುವುದು. ದಿನದ ಕೆಲಸವೇ ಇಂದು ಬಹಳ ಆಗಲಿದ್ದು ಇನ್ನೊಬ್ಬರ ಕೆಲಸವನ್ನು ಮಾಡಿಕೊಡಲು ತಾಳ್ಮೆ ಇರಲಾರದು. ಬರಬೇಕಾದ ಹಣವು ಆಕಸ್ಮಿಕವಾಗಿ ಬಂದಿದ್ದು ಖುಷಿ ಕೊಡುವುದು. ಇಂದು ನಿಮ್ಮ ಉತ್ಸಾಹವನ್ನು ಯಾರಿಂದಲೂ ಸಾಧ್ಯವಾಗದು. ಆದಾಯದ ವಿಚಾರದಲ್ಲಿ ಹಿನ್ನಡೆಯಾಗಿದ್ದು ನಿಮ್ಮ ತಂತ್ರವು ಪೂರ್ಣವಾಗಿ ಫಲಿಸದು. ವೈಶಿಷ್ಟ್ಯತೆಯಿಂದ ಗುರುತಿಸಿಕೊಳ್ಳುವ ದಿನ. ಹೊಸ ಪ್ರಯೋಗಗಳಲ್ಲಿ ಯಶಸ್ಸು ಸಾಧ್ಯ. ಸ್ನೇಹವಲಯ ವಿಸ್ತಾರವಾಗುತ್ತದೆ. ನಿಮ್ಮ ತಪ್ಪಿಗೂ ಇನ್ನೊಬ್ಬರನ್ನು ಕೈ ಮಾಡಿ ತೋರಿಸುವುದು ಬೇಡ. ಮಾತಿನಿಂದಲೇ ಸಂಕಟವನ್ನು ತಂದುಕೊಳ್ಳುವಿರಿ. ಅತಿಯಾದ ಸಂತೋಷದ ಕ್ಷಣವು ನಿಮ್ಮ ಪಾಲಿಗೆ ಇರಲಿದೆ.
ಮಿಥುನ ರಾಶಿ: ದೇಹಾರೋಗ್ಯವನ್ನು ನಿರ್ಲಕ್ಷಿಸಿದರೆ ಅನಾರೋಗ್ಯದ ಆಧಿಕ್ಯ. ಕೆಲಸ ಮತ್ತು ವಿಶ್ರಾಂತಿ ಸಮತೋಲನದಲ್ಲಿದ್ದರೆ ದಿನ ಶುಭಕರ. ಇರುವ ಚೈತನ್ಯವನ್ನು ಬೆಳೆಸಿಕೊಂಡು ಕಾರ್ಯವನ್ನು ಸಾಧಿಸಿಕೊಳ್ಳಬಡೆಕು. ಮನೆಯ ಸಮೀಪದಲ್ಲಿಯೇ ನಿಮ್ಮ ಉದ್ಯೋಗವು ಸಿಗಲಿದೆ. ಮನೆಯಲ್ಲಿ ತಾಳ್ಮೆಯಿಂದ ವ್ಯವಹರಿಸಿ. ನಿಮ್ಮ ವಾಹನಕ್ಕಾಗಿ ಖರ್ಚನ್ನು ಮಾಡಬೇಕಾಗುವುದು. ಪ್ರೀತಿಯ ವಿಷಯದಲ್ಲಿ ಇಂದು ದುಃಖವುಂಟಾಗಬಹುದು. ಮನಸ್ತಾಪವನ್ನು ದ್ವೇಷವಾಗಿ ಪರಿವರ್ತಿಸಿಕೊಳ್ಳುವುದು ಬೇಡ. ನಿಮಗೆ ಕೊಟ್ಟ ಜವಾಬ್ದಾರಿಯನ್ನು ನೀವು ತಳ್ಳಿಹಾಕುವಿರಿ. ಶ್ರಮಕ್ಕೆ ತಕ್ಕ ಫಲ ದೊರೆಯುವ ದಿನ. ಹಿರಿಯರಿಂದ ಮಾರ್ಗದರ್ಶನ ಸಿಗುತ್ತದೆ. ಕಾರ್ಯಕ್ಷೇತ್ರದಲ್ಲಿ ಸ್ಥಿರತೆ ಕಾಣಿಸುತ್ತದೆ. ವ್ಯವಹಾರದಲ್ಲಿ ಇರಬೇಕಾದ ಚಾಕಚಕ್ಯತೆಯನ್ನು ಬೆಳೆಸಿಕೊಳ್ಳಬೇಕಾಗುವುದು. ಪ್ರೀತಿಯ ಮಾತುಗಳಿಂದ ನಿಮ್ಮತ್ತ ಜನರು ಆಕರ್ಷಿತರಾಗುವುದು. ವಿದ್ಯಾರ್ಥಿಗಳಿಗೆ ಅನ್ಯರ ಸಹವಾಸ ಸಿಗಬಹುದು. ಬಿಡುಗಡೆಗಾಗಿ ದಾರಿಯನ್ನು ನೀವೇ ಹುಡುಕಿಕೊಳ್ಳುವಿರಿ.
ಕರ್ಕಾಟಕ ರಾಶಿ: ಆಶಾವಾದ ನಿಮ್ಮ ಬಲವನ್ನು ಹೆಚ್ಚು ಮಾಡುತ್ತದೆ. ಆದರೆ ಅತಿಯಾದ ನಿರೀಕ್ಷೆಗಳು ಮನಸ್ಸಿಗೆ ನೋವು ತರುತ್ತವೆ. ಏನೇ ಮಾಡಿದರೂ ಚಾಂಚಲ್ಯವನ್ನು ನಿಯಂತ್ರಿಸಲಾಗದೇ ಕಷ್ಟವಾಗುವುದು. ಸುಳ್ಳನ್ನಾಡಿ ನಿಮ್ಮ ಕೆಲಸವನ್ನು ಮಾಡಿಸಿಕೊಳ್ಳುವಿರಿ. ಅಚಾತುರ್ಯದಿಂದ ಹಣವನ್ನು ಕಳೆದುಕೊಳ್ಳಬೇಕಾದೀತು. ಬೇಡದ ಕಾರ್ಯಕ್ಕೆ ಯಾರಾದರೂ ಪ್ರಚೋದಿಸಿಯಾರು. ನಿಶ್ಚಿತವಾದ ವಿವಾಹವು ಅನ್ಯರಿಂದ ತಪ್ಪಿಹೋಗಬಹುದು. ಒಂದು ಕಾರ್ಯಕ್ಕೆ ವಿಘ್ನಗಳು ಬರುತ್ತಿದ್ದು ದೈವಜ್ಞರನ್ನು ಸಂಪರ್ಕಿಸಿ ಸೂಕ್ತ ಪರಿಹಾರವನ್ನು ಕಂಡುಕೊಳ್ಳುವುದು ಉತ್ತಮ. ವಿದ್ಯೆಯ ಕಾರಣಕ್ಕೆ ಇಂದು ನಿಮಗೆ ಗೌರವವು ಸಿಗಲಿದೆ. ಕಾರ್ಯದ ಒತ್ತಡದಿಂದ ಶಿರೋವೇದನೆ ಕಾಣಿಸಿಕೊಳ್ಳುವುದು. ಹೊಸ ಆಲೋಚನೆಗಳು ಯಾರದೋ ಪ್ರೋತ್ಸಾಹವಿಲ್ಲದೇ ಚೈತನ್ಯ ನೀಡುತ್ತವೆ. ಪ್ರಯಾಣ ಅಥವಾ ಅಧ್ಯಯನದಲ್ಲಿ ಲಾಭ ಸಿಗುತ್ತದೆ. ವಾಸ್ತವಿಕ ದೃಷ್ಟಿಯಿಂದ ನಡೆದುಕೊಂಡರೆ ಯಶಸ್ಸು ಖಚಿತ. ಸಹಾಯವನ್ನು ಕೇಳಿ ಬಂದವರಿಗೆ ಇಲ್ಲ ಎನ್ನುವುದು ಬೇಡ.
ಸಿಂಹ ರಾಶಿ: ಕೆಲಸದಲ್ಲಿ ಸ್ಥಿರ ಯಶಸ್ಸು ಕಾಣಬಹುದು. ಆದರೆ ಅನುಮಾನ ಮತ್ತು ಅಸಹನೆ ದೂರ ಮಾಡಿಕೊಳ್ಳಬೇಕು. ಇಂದು ಅನಿರೀಕ್ಷಿತ ಬಂಧುಗಳ ಆಗಮನದಿಂದ ಯೋಜಿತವಾದ ಕಾರ್ಯಗಳನ್ನು ಬದಲಿಸುವುದು ಬೇಡ. ಪ್ರಯಾಣದಿಂದ ಹಿಂಸೆ ಆಗಬಹುದು. ಮಿತ್ರರಿಂದ ಸಿಗಬೇಕಾದ ಹಣಕ್ಕೆ ಕತ್ತರಿ ಬೀಳುವುದು. ನಿರೀಕ್ಷಿತ ಫಲವು ಲಭಿಸದು. ಆಸ್ತಿಯ ಖರೀದಿಯ ವಿಚಾರದಲ್ಲಿ ನೀವು ಸರಿಯಾದ ಮಾಹಿತಿಯನ್ನು ಪಡೆಯುವುದು ಸೂಕ್ತ. ಸಹೋದ್ಯೋಗಿಗಳ ಮೇಲೆ ನಿಮಗೆ ಅಸೂಯೆ ಉಂಟಾಗಬಹುದು. ಆಂತರಿಕ ಶಕ್ತಿ ಹೆಚ್ಚಾಗುವ ದಿನ. ಗುಪ್ತ ಪ್ರಯತ್ನಗಳು ಫಲ ನೀಡುತ್ತವೆ. ವಿಶ್ವಾಸ ಮತ್ತು ಧೈರ್ಯದಿಂದ ನಡೆದುಕೊಂಡರೆ ಜಯ ಸಿಗುತ್ತದೆ. ನಿಮ್ಮ ಯೋಜನೆ ಉತ್ತಮವಿದ್ದರೂ ಅದನ್ನು ಕಾರ್ಯರೂಪಕ್ಕೆ ತರಲು ಕಷ್ಟವಾದೀತು. ನಿಮ್ಮ ಕಾರ್ಯಕ್ಕೆ ಇನ್ಯಾರೋ ಯಶಸ್ಸು ಪಡೆವರು. ಸಂಗಾತಿಯ ಬಗ್ಗೆ ಇದ್ದ ಪೂರ್ವಾಗ್ರಹವು ಬದಲಾಗಿ ಅವರ ಜೊತೆ ಅನ್ಯೋನ್ಯವಾಗಿ ಇರುವಿರಿ. ಒಂದೇ ಕಾರ್ಯವನ್ನು ಎರಡು ರೀತಿಯ ಲಾಭವಾಗುವಂತೆ ನೋಡಿಕೊಳ್ಳುವಿರಿ.
ಕನ್ಯಾ ರಾಶಿ: ಆರ್ಥಿಕ ವಿಷಯಗಳಲ್ಲಿ ಲಾಭದ ಸೂಚನೆ. ಆದರೆ ತೀರ್ಮಾನದಲ್ಲಿ ವಿಳಂಬ ನಿರ್ದಿಷ್ಟ ಗುರಿಯನ್ನು ತಲುಪದೇ ಬೇಸರ ಕಾರಣವಾಗಬಹುದು. ಸಮಯಕ್ಕೆ ಸರಿಯಾದ ನಿರ್ಧಾರ ದಿನವನ್ನು ಯಶಸ್ವಿಗೊಳಿಸುತ್ತದೆ. ನೀವು ಕಷ್ಟಪಟ್ಟು ಕೆಲಸ ಮಾಡಬೇಕಾಗಬಹುದು. ಇಲ್ಲವಾದರೆ ನಿಮಗೇ ತೊಂದರೆ. ವಾಗ್ಮಿಗಳು ಸಿಕ್ಕ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳುವರು. ಸಂಪ್ರದಾಯದ ವಿಚಾರದಲ್ಲಿ ನಿಮಗೆ ಆಸಕ್ತಿಯು ಹೆಚ್ಚಾಗಬಹುದು. ಮನೆಗೆ ಅತಿಥಿಗಳ ಆಗಮನವಾಗಲಿದ್ದು ನಿಮ್ಮ ಇಂದಿನ ಕಾರ್ಯವು ಬದಲಾಗಬಹುದು. ನಿಮ್ಮ ಕರ್ತವ್ಯವನ್ನು ಮಾಡಲು ಹಿಂದೇಟು ಹಾಕುವಿರಿ. ನಿಮ್ಮ ಮನಸ್ಸಿಗೆ ಹಿಡಿಸದೇ ಇರುವವರಿಂದ ದೂರ ಉಳಿಯುವಿರಿ. ಅನ್ಯರನ್ನು ಪೀಡಿಸಿ ನಿಮ್ಮ ಕಾರ್ಯವನ್ನು ಮಾಡಿಸಿಕೊಳ್ಳುವಿರಿ. ಕಾನೂನಿನ ಕೆಲಸವನ್ನು ಯಾರ ಸಲಹೆಯನ್ನು ಪಡೆಯದೇ ಮಾಡುವಿರಿ. ಸಂಬಂಧಗಳಲ್ಲಿ ಸಮತೋಲನ ಸಿಗುತ್ತದೆ. ಮಾತುಕತೆಗಳಿಂದ ಸಮಸ್ಯೆಗಳು ಪರಿಹಾರವಾಗುತ್ತವೆ. ಭವಿಷ್ಯದ ಭದ್ರೆತೆಗೆ ಬೇಕಾದ ಬುನಾದಿಯನ್ನು ಹಾಕಿಕೊಳ್ಳುವಿರಿ.
ತುಲಾ ರಾಶಿ: ಆರೋಗ್ಯದ ಕಡೆ ಗಮನ ಹರಿಸಿದರೆ ಶಕ್ತಿ ಹೆಚ್ಚುತ್ತದೆ. ಆದರೆ ಅತಿಯಾದ ಚಿಂತನೆ ಮನಸ್ಸನ್ನು ಕುಗ್ಗಿಸಬಹುದು. ಉದ್ಯೋಗದಲ್ಲಿ ಬಡ್ತಿಗೆ ಅವಕಾಶಗಳು ಬರಬಹುದು. ಆದಾಯ ಹೆಚ್ಚಲಿದೆ. ಸಿಕ್ಕ ಅವಕಾಶದಲ್ಲಿ ತೃಪ್ತಿ ಪಡೆಯುವುದು ಮುಖ್ಯವಾಗಿರಲಿ. ಮನೆಯ ಕಾರ್ಯದಲ್ಲಿ ಸಮಯವು ಕಳೆದುಹೋಗುವುದು. ನಿಮಗೆ ಗೊತ್ತೇ ಇರದ ಕೆಲಸವನ್ನು ನೀವು ಮಾಡಬೇಕಾದೀತು. ಮನಶ್ಚಾಂಚಲ್ಯದಿಂದ ಕಛೇರಿಯಲ್ಲಿ ಸರಿಯಾದ ಕೆಲಸವನ್ನು ಮಾಡಲಾಗದು. ಪ್ರೀತಿಯು ನಿಮ್ಮ ಯಶಸ್ಸಿನ ವೇಗಕ್ಕೆ ಕಡಿವಾಣ ಹಾಕಬಹುದು. ನಿಮ್ಮ ಉದ್ದೇಶವೇ ಬದಲಾದರೂ ಅಚ್ಚರಿ ಪಡಬೇಕಾಗಿಲ್ಲ. ಸ್ನೇಹಿತರು ನಿಮ್ಮ ಸಮಯವನ್ನು ವ್ಯರ್ಥಮಾಡಿಯಾರು. ಯೋಜಿತವಾಗಿ ಕೆಲಸ ಮಾಡುವ ದಿನ. ಸೂಕ್ಷ್ಮ ಗಮನದಿಂದ ಲಾಭ ದೊರೆಯುತ್ತದೆ. ಸರಳ ದೃಷ್ಟಿಕೋನ ಇಟ್ಟುಕೊಂಡರೆ ಯಶಸ್ಸು ನಿಮ್ಮದಾಗುತ್ತದೆ. ಎಲ್ಲ ಕಡೆಗಳಿಂದಲೂ ಮಾನಸಿಕ ಸಂತೃಪ್ತಿ ಇರದೇ ಇರುವುದು ಯಾರ ಬಳಿ ಹೇಳಿಕೊಳ್ಳಬೇಕು ಎಂದು ಗೊತ್ತಾಗದು.
ವೃಶ್ಚಿಕ ರಾಶಿ: ಕೆಲಸದಲ್ಲಿ ದೃಢತೆ ಸಿಗುತ್ತದೆ. ನಾಯಕತ್ವ ಗುಣದಿಂದ ಯಶಸ್ಸು ದೊರೆಯುತ್ತದೆ. ಆದರೆ ಅಹಂಕಾರ ಮತ್ತು ಅತಿಯಾದ ಆತ್ಮವಿಶ್ವಾಸ ಅಪಯಶಸ್ಸಿಗೆ ಕಾರಣವಾಗಬಹುದು. ಕೌಟುಂಬಿಕ ಸಮಸ್ಯೆಗಳು ನಿಮ್ಮನ್ನು ಕಾಡಬಹುದು. ನಿಮ್ಮ ಅಂತರಂಗದ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳುವ ಬಗ್ಗೆ ಯೋಚಿಸುವಿರಿ. ಕಛೇರಿಯ ಕಾರ್ಯವನ್ನು ಮನೆಯಲ್ಲಿ ಇದ್ದು ಮಾಡಬೇಕಾಗಬಹುದು. ಇಂದು ವ್ಯಾಪಾರವನ್ನು ಮಾಡುವ ಮನಸ್ಸು ಇಲ್ಲದಿದ್ದರೂ ಮನೆಯಲ್ಲಿ ಕುಳಿತು ಬೇಸರವಾಗಬಹುದು. ಸಾಮಾಜಿಕ ತಾಣದಲ್ಲಿ ಹೆಚ್ಚು ಸಮಯ ಕಳೆಯುವಿರಿ. ಸ್ನೇಹಿತರ ತಮಾಷೆಯು ನಿಮಗೆ ಇಷ್ಟವಾಗದು. ದ್ವಿಚಕ್ರ ವಾಹನವನ್ನು ಓಡಿಸುವಾಗ ಎಚ್ಚರ ಇರಲಿ. ಸಂಗಾತಿಯ ಮನಃಸ್ಥಿತಿಗೆ ಪೂರಕವಾಗಿ ನಿಮ್ಮ ಆಲೋಚನೆಯೂ ಇರಲಿದ್ದು ನಿಮಗೆ ಖುಷಿಯಾಗುವುದು. ನಿಮ್ಮ ಪ್ರತಿಭೆ ಹೊರಹೊಮ್ಮುತ್ತದೆ. ಸರಳತೆ ಮತ್ತು ಸಂಯಮದಿಂದ ದಿನವನ್ನು ಇನ್ನಷ್ಟು ಉಜ್ಜ್ವಲ ಮಾಡಿಕೊಳ್ಳುವಿರಿ. ನಿಮ್ಮವರನ್ನು ಹೊಗಳಿ ಮೆಚ್ಚಿಸಿ ಅವರಿಂದ ಕೆಲಸವನ್ನು ಮಾಡಿಸಿಕೊಳ್ಳುವಿರಿ. ಕೋಪವನ್ನು ನಿಯಂತ್ರಣದಲ್ಲಿ ಇರಿಸಿದಷ್ಟು ನೀವು ಕಾರ್ಯದಲ್ಲಿ ಸಫಲರಾಗುವಿರಿ.
ಧನು ರಾಶಿ: ಸಣ್ಣ ಸಣ್ಣ ಸಂತೋಷಗಳು ದಿನವನ್ನು ಸುಂದರಗೊಳಿಸುತ್ತವೆ. ಆದರೆ ಭಾವನಾತ್ಮಕವಾಗಿ ತೆಗೆದುಕೊಳ್ಳುವ ನಿರ್ಧಾರಗಳು ಗೊಂದಲ ತರಬಹುದು. ತಾಳ್ಮೆಯಿಂದ ನಡೆದುಕೊಂಡರೆ ಫಲ ಉತ್ತಮ. ಪ್ರಭಾವೀ ವ್ಯಕ್ತಿಗಳಿಂದ ನಿಮಗೆ ವಂಚನೆಯಾಗಿದೆ ಎಂದನಿಸಬಹುದು. ರಸ್ತೆಯಲ್ಲಿ ಸಂಚರಿಸುವಾಗ ಎಚ್ಚರ. ನಿಮ್ಮ ನಡತೆಯಿಂದ ಕುಲಕ್ಕೆ ಅವಮಾನವಾಗಬಹುದು. ನಿದ್ರೆಯನ್ನು ಹೆಚ್ಚು ಮಾಡುವಿರಿ. ಜವಾಬ್ದಾರಿಯನ್ನು ಪಡೆದ ಬೆನ್ನಲ್ಲೇ ಹಿತಶತ್ರುಗಳನ್ನೂ ಹೆಚ್ಚಿಸಿಕೊಳ್ಳುವಿರಿ. ಚಂಚಲವಾದ ಮನಸ್ಸು ನಿಮ್ಮ ಸಂಗಾತಿಗೆ ಇಷ್ಡವಾಗದು. ಆದಾಯ ಮೂಲದ ರಹಸ್ಯವನ್ನು ಹೇಳಿಕೊಳ್ಳುವುದು ಬೇಡ. ನಕಾರಾತ್ಮಕ ಚಿಂತನೆಯನ್ನು ಕಡಿಮೆ ಮಾಡುವುದು ಉತ್ತಮ. ಹಳೆಯ ಗೆಳತಿಯು ನಿಮ್ಮನ್ನು ಇಷ್ಟಪಡಬಹುದು. ಅತಿಯಾದರೆ ಅಮೃತವೂ ವಿಷ ಎನ್ನುವ ಮಾಹಿತಿ ಗೊತ್ತಿರಲಿ. ಎಲ್ಲದಕ್ಕೂ ಸಿಟ್ಟು ಮಾತ್ರವೇ ಪರಿಹಾರವಲ್ಲ. ಮನಸ್ಸಿಗೆ ಹಿತ ನೀಡುವ ದಿನ. ಕುಟುಂಬದವರು ನಿಮ್ಮ ಬೆಂಬಲ ನಿಲ್ಲುವರು.
ಮಕರ ರಾಶಿ: ಹೊಸ ಸಂಪರ್ಕಗಳಿಂದ ಲಾಭ. ಆದರೆ ಅನಗತ್ಯ ಚರ್ಚೆಗಳು ಮನಸ್ಸಿಗೆ ಒತ್ತಡ ತರುತ್ತವೆ. ಸಮಯಕ್ಕೆ ಮಿತಿಮೀರಿ ಮಾತನಾಡದೆ ಇದ್ದರೆ ಉತ್ತಮ. ನಿಮಗೆ ಉದ್ಯೋಗದಿಂದ ನಿವೃತ್ತಿಯು ಬೇಕೆನಿಸಬಹುದು. ಮುಖಂಡರಿಗೆ ಪ್ರಶಂಸೆ ಗೌರವಗಳು ಸಿಗಲಿವೆ. ತೀರ್ಥಕ್ಷೇತ್ರಗಳಿಗೆ ಹೋಗುವ ಮನಸ್ಸಾಗುವುದು. ನೀರಿನ ವಿಷಯದಲ್ಲಿ ಜಾಗಾರೂಕತೆ ಇರಲಿ. ನಟರಿಗೆ ಅವಕಾಶವು ಸಿಕ್ಕೂ ಸಿಗದಂತೆ ಆಗಬಹುದು. ಒಂದೇ ವಿಚಾರವನ್ನು ಹೆಚ್ಚು ಯೋಚಿಸಿದಷ್ಟೂ ಮನಸ್ಸು ದುರ್ಬಲವಾಗಬಹುದು. ಅಲ್ಪ ಮೊತ್ತವನ್ನು ಸಾಮಾಜಿಕ ಕಾರ್ಯಕ್ಕೆ ಕೊಡುವಿರಿ. ಒತ್ತಡವು ಬಂದರೆ ಸ್ವಲ್ಪ ಕಾಲ ಎಲ್ಲವನ್ನೂ ಮರೆತು ಓಡಾಡಿ ಬನ್ನಿ. ರಾಜಕೀಯವಾಗಿ ಮೇಲೆ ಬರಲು ನಿಮ್ಮ ತಂತ್ರಗಾರಿಕೆ ಇರುವುದು. ಸ್ನೇಹಿತರ ಜೊತೆಗಿನ ಓಡಾಟದಿಂದ ನಿಮ್ಮವರಿಗೆ ಅನುಮಾನವು ಬರುವುದು. ನೀವಾಡುವ ಮಾತು ಜವಾಬ್ದಾರಿಯ ಸ್ಥಾನದ್ದು ಎನ್ನುವುದನ್ನು ನೆನಪಿನಲ್ಲಿ ಇಡಿ. ಮಾತು ಮತ್ತು ಯೋಚನೆಯಿಂದ ಕೆಲಸ ಸುಲಭವಾಗುತ್ತದೆ. ಉದ್ಯೋಗದ ಪ್ರಯತ್ನವು ಫಲಿಸುವುದು. ಎಲ್ಲರ ಮೇಲೂ ಅನುಮಾನ ಪಡುವ ದುರಭ್ಯಾಸವು ಬೆಳೆಯಬಹುದು.
ಕುಂಭ ರಾಶಿ: ಹಠ ಮತ್ತು ಹಳೆಯ ವಿಷಯಗಳ ಮೇಲೆ ಒತ್ತಡ ಅಪಯಶಸ್ಸು ತರುವುದು. ವಿನಯದಿಂದ ವರ್ತಿಸಿದರೆ ಯಶಸ್ಸು ನಿಮ್ಮದಾಗುತ್ತದೆ. ಇಂದು ನಿಮಗೆ ಸಣ್ಣ ತಡೆಯೂ ದೊಡ್ಡದಾಗಿ ಕಾಣಿಸುವುದು. ಇಂದು ನಿಮ್ಮ ಯಾವುದಾದರೂ ಕಾರ್ಯಕ್ಕೆ ಸ್ನೇಹಿತರ ಬೆಂಬಲದಿಂದ ಸಾಧ್ಯವಾಗಿಸುವಿರಿ. ಹುಡುಗಾಟಿಕೆಯನ್ನು ಬಿಡುವುದು ನಿಮಗೆ ಕಷ್ಟವಾದೀತು. ಅತಿಯಾದ ಸಂತೋಷದ ಕ್ಷಣವು ನಿಮ್ಮ ಪಾಲಿಗೆ ಇರಲಿದೆ. ದೀರ್ಘಕಾಲದ ಸ್ನೇಹವು ಮತ್ತೆ ಹೊಸದಾಗಿ ಆರಂಭವಾಗಲಿದೆ. ವ್ಯವಹಾರದಲ್ಲಿ ಗೊಂದಲವಿಟ್ಟುಕೊಳ್ಳುವುದು ಬೇಡ. ನಿಮ್ಮ ಸೋಲನ್ನು ಒಪ್ಪಿಕೊಳ್ಳದೇ ವಾದಿಸುವಿರಿ. ಪರೀಕ್ಷೆಯ ಸಮಯವಿದ್ದರೂ ವಿದ್ಯಾರ್ಥಿಗಳು ಅನ್ಯ ಚಟುವಟಿಕೆಯಲ್ಲಿ ನಿಶ್ಚಿಂತೆಯಿಂದ ಭಾಗವಹಿಸುವರು. ಆರ್ಥಿಕವಾಗಿ ಸಮತೋಲನದ ದಿನ. ಕುಟುಂಬದಲ್ಲಿ ನೆಮ್ಮದಿ ವಾತಾವರಣ ಇರುತ್ತದೆ. ಸಣ್ಣ ಲಾಭದಿಂದ ಸಂತೋಷ ಸಿಗುತ್ತದೆ. ಯೋಗ್ಯತೆ ಇದ್ದರೂ ಯೋಗವೂ ಜೊತೆಗೆ ಬಂದಾಗ ಸಿಗಬೇಕಾದುದು ಸಿಗಲಿದೆ. ಆತುರದಲ್ಲಿ ಏನನ್ನಾದರೂ ಮಾಡಿಕೊಳ್ಳುವುದು ಬೇಡ.
ಮೀನ ರಾಶಿ: ಆತುರದ ನಿರ್ಧಾರ ಅಪಯಶಸ್ಸಿಗೆ ಕಾರಣವಾಗಬಹುದು. ಶಾಂತ ಮನಸ್ಸಿನಿಂದ ನಡೆದುಕೊಂಡರೆ ದಿನ ಸುಂದರವಾಗಿ ಮುಗಿಯುತ್ತದೆ. ಮೇಲ್ನೋಟಕ್ಕೆ ಯಾವುದನ್ನೂ ತೀರ್ಮಾನಿಸುವುದು ಕಷ್ಟವೇ. ಎಲ್ಲವನ್ನೂ ವ್ಯಾವಹಾರಿಕ ದೃಷ್ಟಿ ರಿಂದಲೇ ನೋಡುವುದು ಕಷ್ಟ. ಆಪ್ತರಿಗೆ ಇಷ್ಟವಾದ ಉಡುಗೊರೆಯನ್ನು ಕೊಡಲಿದ್ದೀರಿ. ಅಕಾರಣವಾಗಿ ಬರುವ ಕೋಪವನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳುವಿರಿ. ನಿಜವಾದ ಮಿತ್ರನ ಬಗ್ಗೆ ನಿಮಗೆ ಗೊತ್ತಾಗಲಿದೆ. ಸಂಗಾತಿಯನ್ನು ದೂರ ಕಳಿಸಿಕೊಂಡು ಸಂಕಟಪಡುವಿರಿ. ನಿಮ್ಮ ಆದಾಯವು ಹೆಚ್ಚು ಮಾಡಿಕೊಳ್ಳುವ ಆಕಾಂಕ್ಷೆಯು ಇರಲಿದೆ. ಕಾರ್ಯಕ್ಷೇತ್ರದಲ್ಲಿ ನಿಮ್ಮ ಧೈರ್ಯ ಯಶಸ್ಸಿಗೆ ದಾರಿ ಮಾಡಿಕೊಡುತ್ತದೆ. ಸ್ನೇಹಿತರ ಸಹಕಾರ ಸಿಗುತ್ತದೆ. ಕೆಲವರ ವ್ಯಕ್ತಿತ್ವವು ನಿಮಗೆ ಇಷ್ಟವಾದೀತು. ಅಪರಿಚಿತರು ಇರುವ ಕಡೆ ನೀವು ಮೌನವಾಗಿ ಇರುವಿರಿ. ನಿಮ್ಮ ಬಗ್ಗೆ ನಕಾರಾತ್ಮಕ ಭಾವನೆಯು ಇರಲಿದ್ದು ಅದನ್ನು ಲೆಕ್ಕಿಸದೇ ಕಾರ್ಯದಲ್ಲಿ ಮಗ್ನರಾಗುವಿರಿ. ಇನ್ನೊಬ್ಬರ ಬಗ್ಗೆ ನಿಮ್ಮಲ್ಲಿ ಕುತೂಹಲ ಇರಲಿದೆ.
ಲೋಹಿತ ಹೆಬ್ಬಾರ್ – 8762924271 (what’s app only)




