AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ವಾಹನದಲ್ಲಿ ದೂರ ಸಂಚಾರವು ನಿಮಗೆ ಖುಷಿಯನ್ನು ಕೊಡುವುದು.‌

ನೀವು ಇಂದು ಕೈಗೊಳ್ಳುವ ಯಾವುದೇ ಕೆಲಸಕಾರ್ಯಗಳು ಚೆನ್ನಾಗಿರಬೇಕು ಎಂದರೆ ನಿಮ್ಮ ರಾಶಿಫಲ ಚೆನ್ನಾಗಿರಬೇಕು. ಒಂದಷ್ಟು ಮಂದಿ ರಾಶಿಭವಿಷ್ಯ ತಿಳಿದುಕೊಂಡೇ ಮುಂದಿನ ಹೆಜ್ಜೆ ಇಡುತ್ತಾರೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ ಡಿಸೆಂಬರ್ 24 ರ ನಿಮ್ಮ ಭವಿಷ್ಯ ಹೀಗಿದೆ ನೋಡಿ.

Horoscope: ವಾಹನದಲ್ಲಿ ದೂರ ಸಂಚಾರವು ನಿಮಗೆ ಖುಷಿಯನ್ನು ಕೊಡುವುದು.‌
ಪ್ರಾತಿನಿಧಿಕ ಚಿತ್ರ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Dec 24, 2023 | 12:45 AM

Share

ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಧನು, ಮಕರ, ಕುಂಭ, ಮೀನ ರಾಶಿಯವರ ಇಂದಿನ (ಡಿಸೆಂಬರ್ 24) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಮೂಲಾ, ಮಾಸ: ಮಾರ್ಗಶೀರ್ಷ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ರೋಹಿಣೀ, ಯೋಗ: ಸಾಧ್ಯ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 54 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 08 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:43 ರಿಂದ 11:07 ರವರೆಗೆ, ಯಮಘಂಡ ಕಾಲ ಮಧ್ಯಾಹ್ನ 01:56 ರಿಂದ 03:20ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 06:55 ರಿಂದ 08:19ರ ವರೆಗೆ.

ಧನು ರಾಶಿ : ಜೀವನವನ್ನು ಸಂತೋಷದಿಂದ ಕಳೆಯುವ ವಿಧಾನವು ನಿಮಗೆ ಗೊತ್ತಿದೆ. ವಾಹನದಲ್ಲಿ ದೂರ ಸಂಚಾರವು ನಿಮಗೆ ಖುಷಿಯನ್ನು ಕೊಡುವುದು.‌ ಇಂದು ಆಸ್ತಿಯ ಮಾರಾಟಕ್ಕೆ ಸಂಬಂಧಿಸಿದಂತೆ ಹೆಚ್ಚು ತಿರುಗಾಟ ಮಾಡಬೇಕಾಗುವುದು. ಮಕ್ಕಳ ವಿದ್ಯಾಭ್ಯಾಸದ ಖರ್ಚನ್ನು ನೋಡಿಕೊಳ್ಳಲು ಹೋಗಿ ನಿಮ್ಮ ಆರ್ಥಿಕತೆಯು ಹಿಂದಡಿ ಇಡಬಹುದು. ಸಮಾರಂಭದಲ್ಲಿ ಹಳೆಯ ಸ್ನೇಹಿತರ ಭೇಟಿಯಾಗುವುದು. ಆಕಸ್ಮಿಕ ಧನಪ್ರಾಪ್ತಿಯಿಂದ ಹರ್ಷಗೊಳ್ಳುವಿರಿ. ಶ್ರೇಷ್ಠ ವ್ಯಕ್ತಿಗಳ ಸಹವಾಸವು ನಿಮಗೆ ಸಿಗಲಿದೆ. ವಿದ್ಯಾರ್ಥಿಗಳು ಯಾರ ಬೆಂಬಲಕ್ಕೂ ಕಾಯದೇ ನಿಮ್ಮ ಪ್ರತಿಭೆಯ ಪ್ರದರ್ಶನಕ್ಕೆ ಮುನ್ನುಗ್ಗುವುದು ಸೂಕ್ತ. ನಿಮ್ಮ ಮನಸ್ಸಿಗೆ ಪೂರ್ಣವಾಗಿ ಒಪ್ಪಿಗೆ ಆದರೆ ಮಾತ್ರ ಯಾವ ಕೆಲಸಕ್ಕಾದರೂ ಮುಂದುವರಿಯಿರಿ. ನಿಮಗೆ ಇಷ್ಟವಾದ ವಿಚಾರವನ್ನು ತಕ್ಷಣ ಪಡೆಯುವಿರಿ. ಉದ್ಯೋಗವಿಲ್ಲವೆಂಬುದು ನಿಮಗೆ ಅವಮಾನದ ಸಂಗತಿಯಾಗಲಿದೆ.

ಮಕರ ರಾಶಿ : ಎಲ್ಲರ ಜೊತೆಗಿದ್ದರೂ ಒಂಟಿಯಂತೆ ಅನ್ನಿಸುವುದು.‌ ಸ್ಪರ್ಧೆಯಲ್ಲಿ ಹಿನ್ನಡೆಯಾಗಬಹುದು. ಯಾರನ್ನೂ ಸುಲಭವಾಗಿ ಒಪ್ಪಿಕೊಳ್ಳುವುದಿಲ್ಲ. ಇಂದು ಸ್ತ್ರೀಯರಿಗೆ ಮಾನಿಸಿಕವಾದ ಕಿರಿಕಿರಿ ಇರಲಿದ್ದು ತೊಂದರೆಯಾಗಬಹುದು. ಯಂತ್ರೋತ್ಪನ್ನಗಳ ತಯಾರಿಯಲ್ಲಿ ಹಿನ್ನಡೆಯಾಗಬಹುದು. ಸಾಮಾಜಿಕ ಕ್ಷೇತ್ರದಲ್ಲಿ ಮನ್ನಣೆಯನ್ನು ಪಡೆಯುವಿರಿ. ನಿಮ್ಮ‌ ವಸ್ತುಗಳ ಮೇಲೆ ಅತಿಯಾದ ಮೋಹವು ಇರುವುದು. ವೈಯಕ್ತಿಕ‌ ಕೆಲಸಗಳು ಬಹಳಷ್ಟು ಇದ್ದು, ಮಾಡಲು ಸಮಯ ಸಾಲದು. ಮಿತ್ರರ ಸಹಾಯದಿಂದ ನಿಮಗೆ ಧನ ಸಹಾಯವು ಸಿಗಬಹುದು. ಸಾರ್ವಜನಿಕವಾಗಿ ಅವಮಾನವಾಗುವ ಸಾಧ್ಯತೆ ಇದೆ. ನಿಮಗೆ ಪರಿಚಿತರನ್ನು ಆಪ್ತರನದನಾಗಿ ಮಾಡಿಕೊಳ್ಳುವಿರಿ. ನಿಮ್ಮ ಸ್ವಾಭಿಮಾನಕ್ಕೆ ತೊಂದರೆ ಆದೀತು. ಸಂಗಾತಿಯ ಭಾವನೆಗಳಿಗೆ ಸ್ಪಂದಿಸದೇ ಇರುವುದರಿಂದ ನಿಮ್ಮ ಮೇಲೆ ಕೋಪಗೊಳ್ಳುವರು.

ಕುಂಭ ರಾಶಿ : ನಿಮ್ಮ ಅಮೂಲ್ಯ ವಿಚಾರಗಳನ್ನು ಇನ್ನೊಬ್ಬರ ಜೊತೆ ಹಂಚಿಕೊಳ್ಳುವ ಅಗತ್ಯವಿಲ್ಲ. ಮನೆಯಲ್ಲಿ ನಡೆಯುವ ಶುಭ ಕಾರ್ಯಕ್ಕೆ ಹೆಚ್ಚು ಖರ್ಚಾಗಬಹುದು. ನಿಮ್ಮ ಅಂದಾಜು ಮೀರಬಹುದು. ಮಕ್ಕಳಿಗೆ ಇರುವ ಗೊಂದಲವನ್ನು ದೂರ ಮಾಡುವಿರಿ.‌ ಆದಾಯಕ್ಕೆ ನಾನಾ ಮೂಲವನ್ನು ಆಯ್ಕೆ ಮಾಡಿಕೊಳ್ಳುವಿರಿ. ಆಕಸ್ಮಿಕವಾಗಿ ಆರೋಗ್ಯವು ಹದ ತಪ್ಪಬಹುದು. ನಿಮ್ಮನ್ನು ನೀವು ಬದಲಿಸಿಕೊಳ್ಳಬೇಕಾಗುವುದು. ವಿದೇಶದ ವ್ಯವಹಾರದಲ್ಲಿ ಪಾಲುದಾರಿಕೆ ಇರಲಿದೆ. ವೃತ್ತಿಯನ್ನು ಹೊರತುಪಡಿಸಿದ ಅವಕಾಶಗಳು ನಿಮ್ಮನ್ನು ಹುಡುಕಿ ಬರಬಹುದು. ಕಾರ್ಯದ ಸ್ಥಳವು ಬದಲಾಗುವ ಸಾಧ್ಯತೆ ಇದೆ. ಉತ್ತಮ ಸಮಯದ ನಿರೀಕ್ಷೆಯಲ್ಲಿ ಸಮಾಧಾನ ಇರುವುದು. ನಿಮ್ಮಲ್ಲಿ ಇರುವ ವಸ್ತುಗಳನ್ನು ನೀವು ಯಾರಿಗಾದರೂ ಕೊಡುವುದು ಬೇಡ. ನಿಮ್ಮ ಕೋಪವು ವ್ಯರ್ಥವಾದೀತು.

ಮೀನ ರಾಶಿ : ಆರ್ಥಿಕ ಭದ್ರೆತೆಯ ಬಗ್ಗೆ ನಿಮಗೆ ತೊಂದರೆಗಳು ಆಗಬಹುದು. ಇಲ್ಲವಾದರೆ ಯಾವ ಪ್ರಯೋಜನವೂ ಇಲ್ಲದೇ ನಷ್ಟವಾಗುವುದು. ವೈವಾಹಿಕ ಜೀವನವನ್ನು ನಡೆಸುವ ಬಗ್ಗೆ ನಿಮಗೆ ಸಲಹೆಗಳು ಸಿಗುವುದು. ಭೂಮಿಗೆ ಸಂಬಂಧಿಸಿದ ವಿಚಾರಗಳನ್ನು ಇತ್ಯರ್ಥ ಮಾಡಿಕೊಳ್ಳುವುದು ಉಚಿತ. ಉನ್ನತ ವಿದ್ಯಾಭ್ಯಾಸದ ಪ್ರಯುಕ್ತ ಹೊರಗಡೆ ಇರಲಿರುವಿರಿ. ನಿಮ್ಮ ಕಾರ್ಯವು ಆಗಬೇಕಾದರೆ ಓಡಾಟ ಅನಿವಾರ್ಯವಾಗಲಿದೆ. ನಿಮ್ಮ ಕೆಲಸವು ಬದಲಾವಣೆಯಾಗಬಹುದು. ಅನಾರೋಗ್ಯದ ನಡುವೆಯೂ ಉತ್ಸಾಹದಿಂದ ಇರುವಿರಿ. ಶತ್ರುಗಳ ಮುಖಾಮುಖಿ ಭೇಟಿಯ ಸಂದರ್ಭವು ಬರುವುದು. ನೀವು ಇಂದು ಯಾವ ವಿಚಾರವನ್ನು ಮಾತನಾಡುವುದಿದ್ದರೂ ಎಚ್ಚರವಿರಲಿ. ಒತ್ತಾಯದ ಕಾರಣ ಸಮಾರಂಭಗಳಿಗೆ ಹೋಗುವಿರಿ.

-ಲೋಹಿತ ಹೆಬ್ಬಾರ್ – 8762924271 (what’s app only)

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ