AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today 09 February 2025: ಸ್ತ್ರೀಯರ ದ್ವೇಷಕ್ಕೆ ಬಲಿ, ಭವಿಷ್ಯದ ಆತಂಕ

ಶಾಲಿವಾಹನ ಶಕವರ್ಷ 1947ರ ಉತ್ತರಾಯಣ, ಶಿಶಿರ ಋತುವಿನ ಮಾಘ ಮಾಸ ಶುಕ್ಲ ಪಕ್ಷದ ದ್ವಾದಶೀ ತಿಥಿ, ಧನಿಷ್ಠಾ ಮಹಾನಕ್ಷತ್ರ, ಶಿಶಿರ ಋತು, ಭಾನುವಾರ ಸಾಲದಿಂದ ಮುಕ್ತಿ, ಸ್ಥಳ ಬದಲಾವಣೆ, ತಾಯಿಯ ಬೆಂಬಲ ಮತ್ತು ಕನಸು ನನಸು ಇವೆಲ್ಲ ಇಂದಿನ ಭವಿಷ್ಯ. ಎಲ್ಲಾ ರಾಶಿಗಳ ಭವಿಷ್ಯ ಇಲ್ಲಿದೆ.

Horoscope Today 09 February 2025: ಸ್ತ್ರೀಯರ ದ್ವೇಷಕ್ಕೆ ಬಲಿ, ಭವಿಷ್ಯದ ಆತಂಕ
ಸ್ತ್ರೀಯರ ದ್ವೇಷಕ್ಕೆ ಬಲಿ, ಭವಿಷ್ಯದ ಆತಂಕ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಗಂಗಾಧರ​ ಬ. ಸಾಬೋಜಿ|

Updated on: Feb 09, 2025 | 12:02 AM

Share

ನಿತ್ಯಪಂಚಾಗ: ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯನ, ಋತು : ಶಿಶಿರ, ಸೌರ ಮಾಸ: ಮಕರ ಮಾಸ, ಮಹಾನಕ್ಷತ್ರ : ಧನಿಷ್ಠಾ, ಮಾಸ : ಮಾಘ, ಪಕ್ಷ : ಶುಕ್ಲ, ವಾರ : ಭಾನು, ತಿಥಿ : ದ್ವಾದಶೀ, ನಿತ್ಯನಕ್ಷತ್ರ : ಪುನರ್ವಸು, ಯೋಗ : ವೈಧೃತಿ, ಕರಣ : ಭದ್ರ, ಸೂರ್ಯೋದಯ – 07 – 00 am, ಸೂರ್ಯಾಸ್ತ – 06 – 33 pm, ಇಂದಿನ ಶುಭಾಶುಭಕಾಲ : ರಾಹು ಕಾಲ 17:07 – 18:34, ಯಮಘಂಡ ಕಾಲ 12:47 – 14:14, ಗುಳಿಕ ಕಾಲ 15:40 – 17:07

ಮೇಷ ರಾಶಿ: ಇಂದು ಕೆಲವರ ಮಾತುಗಳಿಗೆ ನಿಮ್ಮ ಮನಸ್ಸನ್ನು ಹಾಳು ಮಾಡಿಕೊಳ್ಳುವ ಅವಶ್ಯಕತೆ ಇರುವುದಿಲ್ಲ. ಅಧಿಕಾರ ಪ್ರಾಪ್ತಿಗೆ ಓಡಾಟವನ್ನು ಮಾಡುವಿರಿ. ಹೇಳಿದ ಸಮಯಕ್ಕೆ ಕೆಲಸವನ್ನು ಮಾಡಿಕೊಡಲಾಗುವುದು. ಉತ್ಸಾಹಕ್ಕೆ ತೊಂದರೆ ಆಗುವ ಕಡೆ ನೀವು ಇರಲಾರಿರಿ. ಯಂತ್ರಗಳ ವ್ಯಾಪಾರಿಗಳಿಗೆ ಲಾಭದ ದಿನ. ಉತ್ಸಾಹವು ಎಷ್ಟೇ ಇದ್ದರೂ ನೆಮ್ಮದಿಯ ಮನಸ್ಸಿನಿಂದ ನಿರ್ಧಾರಿಸಿ. ಹಿರಿಯರಿಂದ ಉತ್ತಮ ವಿಚಾರಗಳನ್ನು ತಿಳಿಯುವಿರಿ. ಹಿರಿಯರ ಸೇವೆಯಲ್ಲಿ ನೀವು ಇರುವಿರಿ. ಸಾಲದಿಂದ ಮುಕ್ತರಾಗಲು ನೀವು ಧೈರ್ಯದಿಂದ ಹೆಜ್ಜೆ ಹಾಕಬೇಕಾದೀತು. ನಿಮ್ಮ ಪ್ರಗತಿಗೆ ಶತ್ರುಗಳು ಅಡ್ಡಗಾಲು ಹಾಕಬಹುದು. ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳುವಿರಿ. ಬೇಸರದಿಂದ ಹೊರಬರಲು ಮಾರ್ಗವನ್ನು ಹುಡುಕಿಕೊಳ್ಳುವಿರಿ. ನಕಾರಾತ್ಮಕ ಆಲೋಚನೆಗಳನ್ನು ತಲೆಯಿಂದ ತೆಗೆಯಿರಿ. ಕೋಪವನ್ನು ಅಧಿಕಾರಿಗಳಿಂದ ನಿಯಂತ್ರವಿಟ್ಟು ಮಾಡನಾಡಬ ಮೆಚ್ಚುಗೆ ಗಳಿಸುವಿರಿ. ನಿಮ್ಮ ಮಕ್ಕಳ ಬಗ್ಗೆ ಗಮನ ಹೆಚ್ಚು ಬೇಕು. ತಿಳಿವಳಿಕೆ ಇಲ್ಲದವರ ಮುಂದೆ ನಿಮ್ಮ ಉದ್ಯೋಗವನ್ನು ಹೇಳಿಕೊಳ್ಳುವಿರಿ.

ವೃಷಭ ರಾಶಿ: ನಿರಂತರ ವೃತ್ತಿಪರತೆಯ ನಿಮ್ಮ ಖುಷಿಯನ್ನು ಇಮ್ಮಡಿಸೀತು. ಪ್ರಾಮಾಣಿಕ‌ ಪ್ರಯತ್ನದಲ್ಲಿ ಯಶಸ್ಸನ್ನು ಕಾಣುವಿರಿ. ವಿನಾಕಾರಣ ಸುತ್ತಾಟದಿಂದ ಆಯಾಸವಾಗುವುದು. ಪ್ರಭಾವಿಗಳ ಭೇಟಿಯಿಂದ ಸಂತೋಷವಾಗಲಿದೆ. ಸ್ವಪ್ರತಿಷ್ಠೆಯಿಂದ ಮನಸ್ಸನ್ನು ಹಾಳುಮಾಡಿಕೊಳ್ಳುವಿರಿ. ಹಿರಿಯರೆದುರು ವಿನಯವಿರಲಿ. ದೇವತಾಕಾರ್ಯಗಳಲ್ಲಿ ಆಸಕ್ತಿ, ಶ್ರದ್ಧೆಯಿಂದ ಭಾಗವಹಿಸುವಿರಿ. ಕಛೇರಿಯಲ್ಲಿ ಅಧಿಕಾರಿಗಳು ನಿಮ್ಮ ಕಾರ್ಯಕ್ಕೆ ಸಂಬಂಧಿಸಿದಂತೆ ವಾಗ್ವಾದ ಮಾಡಬಹುದು. ಯಾರಿಗೂ ಸಾಲವನ್ನು ಕೊಡುವುದು ಬೇಡ. ನಿಮಗೆ ಸಲ್ಲಬೇಕಾದುದರ ಬಗ್ಗೆ ಮಾತ್ರ ಗಮನವಿರಲಿ. ನಿಮ್ಮ ಸಂಬಂಧಗಳನ್ನು ಬಳಸದೇ ದೂರವಾಗುವುದು. ಅನ್ಯಸ್ಥಳದಲ್ಲಿ ನಿಮ್ಮ ವಾಸವು ಇರಲಿದೆ. ಯಾರದೋ ಒತ್ತಡಕ್ಕಾಗಿ ನೀವು ನಿಮ್ಮ ತತ್ತ್ವ ಮರೆತು ವರ್ತಿಸಬೇಕಾಗುತ್ತ. ಎಲ್ಲವನ್ನೂ ನೀವು ಸಮಾಜಮುಖಿಯಾಗಿ ನೊಡಿಕೊಳ್ಳಿರಿ. ದೂರದೃಷ್ಟಿಯಿಂದ ಮುಂಬರುವ ತೊಂದರೆಯನ್ನು ಸರಿಮಾಡಿಕೊಳ್ಳುವಿರಿ. ಭವಿಷ್ಯದ ಬಗ್ಗೆ ಅಸ್ಪಷ್ಟವಾದ ಚಿಂತೆಯು ಬೇಡ.

ಮಿಥುನ ರಾಶಿ: ಆರ್ಥಿಕ ವಲಯದವರಿಗೆ ಬೇಡಿಕೆ ಅಧಿಕ. ವಿದೇಶಕ್ಕೆ ಹೋಗುವ ಬಗ್ಗೆ ಕನಸುಗಳನ್ನು ಕಾಣುವಿರಿ. ನಿರುದ್ಯೋಗವು ನಿಮ್ಮನ್ನು ಹಾಳು ಮಾಡೀತು. ನಾಯಕ‌ರ ಗುಣಗನ್ನು ನೀವು ರೂಡಿಸಿಕೊಳ್ಳುಬಹುದು. ಇಂದು ನಿಮ್ಮ ಪರಿಶ್ರಮವು ವ್ಯರ್ಥವಾದಂತೆ ತೋರುವುದು. ನಿಮ್ಮ ಮನಸ್ಸಿನ ಉತ್ಸಾಹವನ್ನು ಶರೀರ ತಡೆದುಕೊಳ್ಳಲಾಗದು. ನಿಮ್ಮ ವಿದ್ಯಾಭ್ಯಾಸಕ್ಕೆ ಯೋಗ್ಯವಾದ ಕೆಲಸದ ಅನ್ವೇಷಣೆಯಲ್ಲಿ ತೊಡಗುವಿರಿ. ನಿಮ್ಮ ಉದ್ಯೋಗದ ಸ್ಥಳವನ್ನು ನೀವು ಬದಲಾಯಿಸುವಿರಿ. ಉತ್ಪಾದನೆಯ ಖರ್ಚನ್ನು ಹೆಚ್ಚು ಮಾಡಿ ಮಾರಾಟ ಮಾಡಬೇಕಾಗಬಹುದು. ನಿಮ್ಮ ಕೆಲಸವನ್ನು ಬಿಟ್ಟು ಬೇರೆಯವತ ಕಾರ್ಯದ ಕಡೆ ಗಮನ ಇರುವುದು. ಉದ್ಯೋಗದಲ್ಲಿ ಅಧಿಕ ಲಾಭಕ್ಕಾಗಿ ಶ್ರಮಿರಿಸಿದರೂ ಲಾಭವು ಕಷ್ಟವಾದೀತು. ತಂದೆ-ತಾಯಿಯರನ್ನು ಗೌರವಿಸುವುದು ನಿಮಗೆ ಶ್ರೇಯಸ್ಸಿಗೆ. ಪ್ರಾಮಾಣಿಕತೆಯಿಂದ ನಿಮಗೆ ಉನ್ನತ ಸ್ಥಾನವನ್ನು ನಿರೀಕ್ಷಿಸುವಿರಿ. ದಾನವಾಗಿ ಕೊಡುವ ಅಭ್ಯಾಸವನ್ನು ಬೆಳೆಸಿಕೊಳ್ಳಿ. ಮಹಿಳೆಯರು ಉನ್ನತ ಅಧಿಕಾರವನ್ನು ಪಡೆದು ಅಹಂಕಾರ ಮಡುವುದು ಬೇಡ.

ಕರ್ಕಾಟಕ ರಾಶಿ: ಸಿಟ್ಟಾದಷ್ಟೂ ನಿಮ್ಮನ್ನು ಪೀಡಿಸುವವರು ಹೆಚ್ಚು. ಗುಣವನ್ನು ಗ್ರಹಿಸಿಕೊಂಡು ಮುಂದುವರಿಯುವುದು ಒಳ್ಳೆಯದು. ಪುಣ್ಯ ಸ್ಥಳಗಳು ನಿಮ್ಮ‌ ಮನಸ್ಸನ್ನು ಉದ್ವೇಗದಿಂದ ಸರಿ ಮಾಡೀತು. ಚರಾಸ್ತಿಯಲ್ಲಿ ಗೊಂದಲ ಇರುವುದು. ಮನೆಯ ಸ್ವಚ್ಛತೆಯ ಬಗ್ಗೆ ಕಾಳಜಿ ಇರಲಿದೆ. ಪ್ರಯತ್ನಿಸಿದ ಕಾರ್ಯಕ್ಕೆ ಫಲವನ್ನು ನಿರ್ದಿಷ್ಟ ಮಾಡಿಕೊಳ್ಳುವಿರಿ. ತಾಯಿಯ ಪ್ರೀತಿ ಸಿಗುವಲಿದೆ. ಅಸೂಯೆಯಿಂದ ನಿಮ್ಮ ಇತರ ಕೆಲಸಗಳನ್ನು ಹಾಳುಮಾಡಿಕೊಳ್ಳುವಿರಿ. ಬರುವ ಹಣವನ್ನು ನೀವು ತದೇಕ ಚಿತ್ತದಿಂದ ನಿರೀಕ್ಷಿಸಬಹುದು. ಸ್ನೇಹಿತರ ಸಹಾಯದಿಂದ ನಿಮಗೆ ಬಲವು ಬರುವುದು. ನಿಮ್ಮವರನ್ನು ಒಬ್ಬೊಬ್ಬರನ್ನೇ ಕಳೆದುಕೊಳ್ಳುವ ಸಾಧ್ಯತೆ ಇದೆ. ದೂರದ ಬಂಧುಗಳಿಂದ ಸಹಾಯವು ಸಿಗಬಹುದು. ದಾಂಪತ್ಯದಲ್ಲಿ ಮಧುರ ಕ್ಷಣಗಳಿಂದ ಖುಷಿಯಾಗಲಿದೆ. ಎಲ್ಲವನ್ನೂ ತಿಳಿದುಕೊಂಡರೂ ಹಿಂದೆ ಸರಿಯುವಿರಿ. ಹಲವು ವರ್ಷಗಳ ಅನಂತರ ನಿಮ್ಮ ವಾಸಸ್ಥಾನ ಬದಲಾಯಿಸುವಿರಿ. ಅನ್ಯಾನ್ಯ ಮಾರ್ಗಗಳಿಂದ ಹಣವು ಬರಬಹುದು. ‌ಕಳೆದಕೊಂಡ ವಸ್ತುವಿಗೆ ತೀವ್ರ ಹುಡುಕಾಟ ಇರುವುದು.‌

ಸಿಂಹ ರಾಶಿ; ಹೂಡಿಕೆಗಾಗಿ ಖರೀದಿಸಿದ ಭೂಮಿಯನ್ನು ಮಾರಾಟ ಮಾಡಬೇಕಾದೀತು. ನಿಮ್ಮ ತಪ್ಪಿನಿಂದ ಆದಾಯದ ಮಾರ್ಗವು ಬಾಗಿಲುಹಾಕುವುದು. ಯಾರ ಮಾತನ್ನೂ ಅನಾದರ ಮಾಡುವುದು ಬೇಡ. ನಿಮಗೆ ಸಿಗದೇ ಇರುವುದು ನಿಮ್ಮದಲ್ಲ ಎಂಬ ಸಮಾಧಾನ ಇರಲಿ. ನಿಮ್ಮ ಯೋಚನೆಯ ಕ್ರಮವನ್ನು ಬದಲಿಸಿಕೊಳ್ಳಲು ಸೂಕ್ತ. ಸಂಗಾತಿಯನ್ನು ದೂರ ಮಾಡಿಕೊಂಡು ಮನೆಯಲ್ಲಿ ಕಷ್ಟವಾದೀತು. ಧಾರ್ಮಿಕ ನಂಬಿಕೆಯನ್ನು ಕಳೆದುಕೊಳ್ಳುವ ಸಂದರ್ಭ ಬರಬಹುದು. ನಿಮ್ಮ ಗುರಿಯಾಗಿಸಿಕೊಂಡು ಸಹೋದ್ಯೋಗಿಗಳು ಕೆಲಸವನ್ನು ಮಾಡುವರು. ನಿಮ್ಮ ಮಾತನಾಡುವ ಸ್ವಭಾವವು ಇತರರಿಗೆ ಕಿರಿಕಿರಿ ಉಂಟಾದೀತು. ಮಾತು ಸರಳವಾಗಿರಲಿ. ಉನ್ನತ ವ್ಯಾಸಂಗಕ್ಕಾಗಿ ನೀವು ಸ್ನೇಹಿತನ‌ ಜೊತೆ ತೆರಳುವಿರಿ. ಸ್ಥಾನಚ್ಯುತಿಯ ಭಯವು ಇರುವುದು. ಮನೆಯ ಪರಿಸ್ಥಿತಿಯನ್ನು ನೆನೆದು ಸಂಕಟವಾಗುವುದು. ದಿನದ ಆರಂಭವು ಬಹಳ ಉತ್ಸಾಹದಿಂದ ಇರುವುದು. ಅಧಿಕಾರಿಗಳು ಹೆಚ್ಚು ಒತ್ತಡದಿಂದ ಇರುವರು. ನೇರ ನಡೆಗೆ ನೀವು ಪ್ರಸಿದ್ಧರಾಗಿರುವಿರಿ.

ಕನ್ಯಾ ರಾಶಿ: ಉನ್ನತ ಹುದ್ದೆಗಳು ನಿಮ್ಮ ಅಧಿಕಾರವನ್ನು ಮಾತ್ರವಲ್ಲ, ಜವಾಬ್ದಾರಿಯನ್ನೂ ಹೆಚ್ಚಿಸುವುದು.‌ ನಿಮ್ಮ ಇಂದಿನ ಮಾನಸಿಕ ಸ್ಥಿತಿಯನ್ನು ಹೇಳಿಕೊಳ್ಳಲಾಗದೇ ಕಷ್ಟಪಡುವಿರಿ. ಸ್ತ್ರೀಯರು ಒತ್ತಡವನ್ನು ಇನ್ನೊಬ್ಬರಿಗೆ ಹಾಕಿ ನಿಶ್ಚಿಂತರಾಗುವಿರಿ.‌ ವ್ಯವಹಾರಕ್ಕೆ ಸಂಬಂಧಪಟ್ಟಂತೆ ಮಾತುಗಳು ನಿಖರವಾಗಿ ಇರಲಿ. ಸುಳ್ಳು ಲೆಕ್ಕಾಚಾರವನ್ನು ನೀವು ಹೊರತೆಗೆಯುವಿರಿ. ಖರ್ಚಿನ ನಿಯಂತ್ರಣವನ್ನು ಮಾಡುವುದು ಕಷ್ಟವಾದೀತು. ವಿದ್ಯಾರ್ಥಿಗಳು ಅಧ್ಯಯನಕ್ಕಾಗಿ ನಿಯಮಗಳನ್ನು ಹಾಕಿಕೊಳ್ಳುವುದು ಉತ್ತಮ. ಸಹೋದ್ಯೋಗಿಗಳ ಜೊತೆ ಸಲುಗೆಯಿಂದ ಇರುವಿರಿ. ನಿಮ್ಮ ಕಾರ್ಯಗಳೇ ನಿಮಗೆ ಆಶ್ಚರ್ಯವನ್ನು ಉಂಟುಮಾಡೀತು. ಅಧಿಕಲಾಭಕ್ಕಾಗಿ ಏನನ್ನಾದರೂ ಮಾಡಲು ಹೋಗುವುದು ಬೇಡ. ಕಷ್ಟಗಳ ನಿವಾರಣೆಗೆ ದೈವಕ್ಕೆ ಶರಣಾಗುವುದು ಉತ್ತಮ. ನಿಮ್ಮ ಸಮಾಜಮುಖೀ ಕಾರ್ಯಗಳಿಗೆ ಕುಟುಂಬದ ಬೆಂಬಲವು ಸಿಗುವುದು. ಬಂಧುಗಳಿಂದ ನಿಮಗೆ ಇಂದು ಆಲಸ್ಯದ ಪಟ್ಟವು ಸಿಗಬಹುದು. ಉದ್ಯಮದ ವೀಕ್ಷಣೆಗೆ ಹೊರಡುವಿರಿ.‌ ನಿಮ್ಮ ಉದ್ಯೋಗವನ್ನು ಅಪಹಾಸ್ಯ ಮಾಡಬಹುದು.

ತುಲಾ ರಾಶಿ: ಅನಿರೀಕ್ಷಿತ ಲಾಭವು ನಿಮ್ಮ ಯೋಜನೆಯ ದಿಕ್ಕನ್ನು ತಪ್ಪಿಸುವುದು. ಸಹೋದರರ ನಡುವೆ ಬರುವ ಭಿನ್ನಾಭಿಪ್ರಾಯವನ್ನು ನೀವು ಮುಂದುವರಿಸದೇ ಅಲ್ಲಿಯೇ ನಿಲ್ಲಿಸಿ. ಯಾರದೋ ಮಾತಿನಿಂದ ನಿಮ್ಮ ನೆಮ್ಮದಿಯನ್ನು ಕಳೆದುಕೊಳ್ಳುವ ಅವಶ್ಯಕತೆ ಇಲ್ಲ. ಏನೂ ಲಾಭವಿಲ್ಲದೇ ಪ್ರಯಾಣವು ನಿಮಗೆ ಬೇಸರ ಎನಿಸುವುದು. ಇಂದು ನಿಮಗೆ ಪ್ರಶಂಸೆಯಿಂದ ಜವಾಬ್ದಾರಿಗಳೂ ಹೆಚ್ಚುವುದು. ಸ್ತ್ರೀಯರ ಜೊತೆ ಕಲಹವಾಗಲಿದೆ. ನಿಮ್ಮ ಪಾಲಿನದ್ದಷ್ಟನ್ನು ಜೋಪಾನವಾಗಿ ಇರಿಸಿಕೊಳ್ಳಿ. ನಿಮ್ಮ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ನೌಕರರು ಒಪ್ಪುವುದಿಲ್ಲ. ಪ್ರಯಾಣದ ಆಯಾಸವನ್ನು ಪರಿಹರಿಸಿಕೊಳ್ಖುವುದು ನಿಮಗೆ ಕಷ್ಟವಾದೀತು. ವಿವಾಹದ ಒಪ್ಪಂದವು ಮುರಿದು ಹೋಗುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಸ್ತ್ರೀಯರ ಸಹಾಯದಿಂದ ಲಾಭವನ್ನು ಪಡೆಯುವಿರಿ. ಅನಿರೀಕ್ಷಿತ ದೂರ ಪ್ರಯಾಣವನ್ನು ಮಾಡಲಿದ್ದೀರಿ. ಸಣ್ಣ ವಿಚಾರಗಳಿಗೂ ಕೋಪದಿಂದ ಜೊತೆಗಾರರಿಗೂ ನಿರಾಸಕ್ತಿ. ಇಂದು ಹಣದ ವಿಚಾರದಲ್ಲಿ ನಿಮಗೆ ಹಿನ್ನಡೆಯಾಗುವುದು.

ವೃಶ್ಚಿಕ ರಾಶಿ; ಉದ್ಯೋಗದ ವಿಚಾರದಲ್ಲಿ ನೀವು ಬಯಸಿದ್ದು ಒಂದು, ಆದದ್ದು ಮತ್ತೊಂದು. ಅಪರಿಚಿತ ಪ್ರದೇಶಕ್ಕೆ ಉದ್ಯೋಗದ ಕಾರಣಕ್ಕೆ ಹೋಗುವಿರಿ. ಆಸ್ತಿಯ ಕುರಿತು ದೂರುಗಳು ಬರಬಹುದು. ಅಧಿಕ ಹೂಡಿಕೆಯನ್ನು ಅನಿವಾರ್ಯವಾಗಿ ಮಾಡಬೇಕಾದೀತು. ಬಾರದಿದ್ದರೆ, ಇಲ್ಲವೇ ಇಲ್ಲ ಎಂದು ಕಾಣಿಸುವುದು. ಆಲಸ್ಯದಿಂದ ಮುಖ್ಯ ಕೆಲಸವನ್ನೇ ಮರೆಯುವಿರಿ. ದಾಂಪತ್ಯವನ್ನು ಹಿರಿಯರೇ ಬಂದು ಸರಿಮಾಡಬೇಕಾಗವುದು. ಸ್ವಂತ ಉದ್ಯೋಗಸ್ಥರು ಲಾಭ ಗಳಿಸುವರು. ಯಾರೊಂದಿಗೂ ವೈರ ಬೇಡ. ಸರ್ಕಾರದಿಂದ ಕೆಲವು ವಿಚಾರಕ್ಕೆ ಕಿರಿಕಿರಿ ಉಂಟಾದೀತು. ಸ್ವತಂತ್ರವಾಗಿದ್ದರೂ ಏನನ್ನಾದರೂ ಕಳೆದುಕೊಳ್ಳುತ್ತೇನೆ ಎಂಬ‌ ಭಯವು ಇರಲಿದೆ‌. ಇನ್ನೊಬ್ಬರಿಗೆ ನಿಮ್ಮ ಯಾವ ವಸ್ತುವನ್ನಾದರೂ ಕೈಯೆತ್ತಿ ಕೊಡುವಿರಿ. ಹೊಸತನ್ನು ಕಲಿಯುವ ಅವಕಾಶವನ್ನು ಹುಡುಕಿಕೊಳ್ಳುವಿರಿ. ಉದ್ಯೋಗದಲ್ಲಿ ದಿಕ್ಕು ತಪ್ಪುವ ಸಂಭವ ಬರಬಹುದು. ನಿಮಗೆ ಕೊಟ್ಟ ಕೆಲಸವನ್ನು ಹಂಚಿಕೊಂಡು ಕೆಲಸವನ್ನು ಮಾಡಿ. ಉದ್ಯಮದ‌ ಬೆಳವಣಿಗೆಗೆ ಉತ್ತಮ‌ ಅವಕಾಶವನ್ನು ಕಾಯುತ್ತಿರುವಿರಿ.

ಧನು ರಾಶಿ: ಇಂದು ನಿಮಗೆ ಬಹುವರ್ಷದ ಕನಸು ನನಸಾದಂತೆ ತೋರುವುದು. ಗಣ್ಯರ ಜೊತೆ ನಿಮ್ಮ ಬಗ್ಗೆ ಹೇಳಲು, ಚರ್ಚೆಯನ್ನು ಮಾಡಲು ಅವಕಾಶವು ದೊರೆಯಲಿದೆ. ನಿಮ್ಮ ಎಲ್ಲ ಚರಾಸ್ತಿಯ ಗಣನೆಯನ್ನು ಮಾಡುವಿರಿ. ಹಿರಿಯ ಮಗನು ನಿಮ್ಮ ಮಾತಿಗೆ ಸ್ಪಂದಿಸುವನು. ಆಸ್ತಿಯ ಖರೀದಿಗೆ ಬೇಕಾದ ನಿಶ್ಚಲತೆ ಇರದು. ನೀವು ಹೇಳಬೇಕಾದ ವಿಷಯಗಳನ್ನು ಇನ್ನೊಬ್ಬರಿಗೆ ಹೇಳುವಿರಿ. ಯಾವುದೋ ಯೋಚನೆಯಲ್ಲಿ ಮುಖ್ಯ ಕಾರ್ಯಗಳು ಮರೆತುಹೋಗಬಹುದು. ಭೂಮಿಯ ವಿಚಾರಕ್ಕೆ ಸಂಬಂಧಿಸಿದಂತೆ ಕೆಲವು ಕಾನೂನಾತ್ಮಕ ತೊಂದರೆ ಬರುವುದು. ಸಂತೋಷದ ಕೂಟದಲ್ಲಿ ನೀವು ಭಾಗಿಗಳಾಗುವಿರಿ. ಉದ್ಯಮವನ್ನು ಮಾಡುವ ಮೊದಲು ಸರಿಯಾದ ಯೋಜನೆಯನ್ನು ತಯಾರಿಸಿ. ಗೊಂದಲದಿಂದ ಹೊರಬರುವುದು ಕಷ್ಟವಾದೀತು. ನಂಬಿಕೆಯಿಂದ ಕೆಲಸವನ್ನು ಮಾಡುವಿರಿ. ಒಂದು ಪೈಸೆಯನ್ನೂ ಸುಮ್ಮನೇ ಖರ್ಚಾಗಲು ಬಿಡುವುದಿಲ್ಲ ಮತ್ತು ಮಾಡಿದ್ದರ ಪೂರ್ಣ ಲೆಕ್ಕ ಇಡುವಿರಿ. ಪ್ರಯತ್ನಿಸಿದ ಕಾರ್ಯಗಳು ನಿಮಗೆ ಬಹುಪಾಲು ಉತ್ತಮ‌ ಫಲಿತಾಂಶವು ಕೊಡುವುದು.

ಮಕರ ರಾಶಿ: ಉದ್ಯಮದ ಕಾರಣಕ್ಕೆ ಬೇರೆ ದೇಶಗಳನ್ನು ಸುತ್ತುವ ನೀವು ಇಂದು ಮನೆಗೆ ವಾಪಾಸಾಗುವಿರಿ. ನಿಮ್ಮ ಸಹನೆಯನ್ನು ಪರೀಕ್ಷಿಸುವ ಸಂದರ್ಭಗಳು ಬರಬಹುದು. ಆಸ್ತಿಯ ಭಾಗವನ್ನು ಮಾರಾಟ ಮಾಡಬೇಕಾದೀತು. ಜ್ಞಾನಸಂಪಾದನೆಗೆ ಬೇಕಾದ ಮಾರ್ಗವನ್ನು ಆಯ್ಕೆ ಮಾಡಿಕೊಳ್ಳುವಿರಿ. ಕೆಲವನ್ನು ನೀವಾಗಿಯೇ ತಂದುಕೊಳ್ಳುವಿರಿ. ವೃತ್ತಿಯಲ್ಲಿ ನಿಮಗೆ ತಪ್ಪಿನ ಭಯವು ಕಾಡಲಿದ್ದು ಯಾರ ಬಳಿಯಾದರೂ ಹೇಳಿಕೊಳ್ಳಿ. ನಿಮ್ಮ ಸಾಮರ್ಥ್ಯವು ಇಂದು‌ ಕಾಣಿಸಿಕೊಳ್ಳದು. ಪ್ರೀತಿಪಾತ್ರರ ಜೊತೆ ಸಂತೋಷ ಸಮಯವನ್ನು ಕಳೆಯುವಿರಿ. ಚುರುಕುತನಕ್ಕೆ ಅಚ್ಚರಿಗೊಳ್ಳುವರು. ಕಛೇರಿಯಲ್ಲಿ ಹಾಗೂ ಮನೆಯಲ್ಲಿ ಎರಡೂ ಜವಾಬ್ದಾರಿಯನ್ನು ನಿರ್ವಹಣೆ ನಿಮಗೆ ಅತಿಯಾಗುವುದು. ಒತ್ತಡವನ್ನು ನಿಭಾಯಿಸಕೊಳ್ಳಲು ಕಷ್ಟವಾದೀತು. ಸಹೋದ್ಯೋಗಿಗಳ ಜೊತೆ ಮನಸ್ತಾಪ ಬಂದು ಜಗಳವಾಡುವಿರಿ. ಮೇಲಧಿಕಾರಿಗಳ ಜೊತೆ ವಿನಾಕಾರಣ ವಾಗ್ವಾದ ಬೇಡ. ಎಷ್ಟೋ ಕೆಲಸಗಳು ನಿಮ್ಮ ಬಳಿಯೇ ಬಾಕಿ ಇರುವುದು. ಬಂದರೆ ಅನೇಕ ಕಾರ್ಯಗಳು ಒಟ್ಟಿಗೇ ಬರಬಹುದು.

ಕುಂಭ ರಾಶಿ: ನಿಮಗೆ ಜೀವನದ ಕೆಲವು ಅನುಭವವಾಗುವುದು. ಅಪರೂಪದ ಬಂಧುಗಳ ಜೊತೆ ಕಲಹವಾಗಬಹುದು. ಕೆಲವು ಸಂಗತಿಗಳು ನಿಮ್ಮನ್ನು ಪರೀಕ್ಷಿಸಬಹುದು. ನಿಮಗೆ ಏನನ್ನಾದರೂ ಮಾಡುತ್ತೇನೆ ಎಂಬ ಆತ್ಮವಿಶ್ವಾಸವನ್ನು ಇಂದು ಯಾರಿಂದಲಾದರೂ ಪಡೆಯುವಿರಿ. ಆರ್ಥಿಕತೆಯು ನಿಮ್ಮನ್ನು ಚಿಂತೆಗೀಡುಮಾಡುವುದು. ನಿಮ್ಮ ತಪ್ಪುಗಳೇ ಫಲಿತಾಂಶದಲ್ಲಿ ಬರುವುದು. ಯುವಕರಿಗೆ ಸರಿಯಾದ ಮಾರ್ಗದರ್ಶನ ಸಿಗುವುದು. ವಾಹನ ಖರೀದಿಯ ವ್ಯವಹಾರವು ನಿಮಗೆ ಸರಿಯಾಗದು. ಮಂದಗತಿಯ ಕಾರ್ಯಕ್ಕೆ ನಿಮ್ಮನ್ನು ಯಾರಾದರೂ ಹೀಯಾಳಿಸಬಹುದು. ಉದ್ಯೋಗದಲ್ಲಿ ನೌಕರರು ನಿಮ್ಮ ಯೋಜನೆಗೆ ವಿರುದ್ಧವಾಗಿ ಮಾಡಬಹುದು. ನೀವು ಪ್ರಯಾಣ ಮಾಡದೇ ಬಹಳ ದಿನಗಳಾದಂತೆ ಅನ್ನಿಸುವುದು. ಮಕ್ಕಳಿಗೆ ನಿಮ್ಮ ಬಗ್ಗೆ ಪ್ರೀತಿ ಉಂಟಾಗುವುದು. ಸಾಮಾಜಿಕ ಕಾರ್ಯಗಳು ನಿಮಗೆ ಯಶಸ್ಸನ್ನು ತಂದುಕೊಡುವುದು. ಇರುವ ಸಮಯವನ್ನು ವ್ಯರ್ಥ ಮಾಡಿಕೊಳ್ಳದೇ ಸದುಪಯೋಗ ಆಗುವಂತೆ ಮಾಡಿ.

ಮೀನ ರಾಶಿ; ಇಂದು ನೂತನ ಗೃಹನಿರ್ಮಾಣಕ್ಕೆ ಸಂಬಂಧಿಸಿದ ವಿಚಾರಲ್ಲಿ ಕೋಪ ಅಧಿಕವಾಗಲಿದೆ. ವಿದ್ಯಾರ್ಥಿಗಳಿಗೆ ಏಕಾಗ್ರತೆಯ ಕೊರತೆಯಾಗಿ ಅಭ್ಯಾಸ ಕಬ್ಬಿಣದ ಕಡಲೆಯಂತೆಯಾಗುವುದು. ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮವನ್ನು ಹಾಕುವಿರಿ. ಇಂದು ಪರೋಪಕಾರಕ್ಕೆ ನಿಮ್ಮ ಮನಸ್ಸು ಕರಗುವುದು. ಸ್ತ್ರೀಯರು ಈ ದಿನವನ್ನು ಬಹಳ ಉತ್ಸಾಹದಿಂದ ಕಳೆಯುವರು. ಅನುಭವಸ್ಥರ ಮಾರ್ಗದರ್ಶವನ್ನು ನೀವು ಪಡೆಯುವಿರಿ. ಕುಟುಂಬದ ಸೌಖ್ಯದಲ್ಲಿ ನೀವು ಭಾಗಿಯಾಗುವಿರಿ. ದಿನದ ಕಾರ್ಯವು ಹೆಚ್ಚು ಕಡಿಮೆ ಆಗಲಿದೆ. ಸಾಮಾನಿಕ ಕಾರ್ಯಗಳ ಬಗ್ಗೆ ಸಮಾನ ಮನಸ್ಕರ ಜೊತೆ ಕುಳಿತು ಚರ್ಚಿಸುವಿರಿ. ಮಾನಸಿಕ ಒತ್ತಡವನ್ನು ಕಡಿಮೆ ಮಾಡಿಕೊಂಡು ಕಾರ್ಯದಲ್ಲಿ ಪ್ರಗತಿಯನ್ನು ಕಾಣುವಿರಿ. ಸ್ಥಿರಾಸ್ತಿಗೆ ಸಂಬಂಧಿಸಿದಂತೆ ಕೆಲವು ದಾಖಲೆಗಳನ್ನು ಮಾಡಿಕೊಳ್ಳುವಿರಿ. ಮಕ್ಕಳಿಂದ ಆಗುವ ಅಸಮಾಧಾನವನ್ನು ಸಹಿಸಲಾರಿರಿ. ವಿರೋಧಿಗಳ ಮಾತನ್ನು ನೀವು ನಿರ್ಲಕ್ಷಿಸುವಿರಿ. ನಿಮ್ಮ ಉದ್ಯೋಗದ ತೊಂದರೆಗಳನ್ನು ಸರಿಮಾಡಿಕೊಂಡು ಮುನ್ನಡೆಯುವಿರಿ.

ಲೋಹಿತ ಹೆಬ್ಬಾರ್ – 8762924271 (what’s app only)

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು