Horoscope Today 06 February 2025: ಅತಿಯಾದ ಕೋಪದಿಂದ ಕೆಲಸ ಹಾಳು, ಚಿಂತೆಗೀಡಾಗುವಿರಿ

ಶಾಲಿವಾಹನ ಶಕವರ್ಷ 1947ರ ಉತ್ತರಾಯಣ, ಶಿಶಿರ ಋತುವಿನ ಮಾಘ ಮಾಸ ಶುಕ್ಲ ಪಕ್ಷದ ನವಮೀ ತಿಥಿ, ಶ್ರವಣ ಮಾಸ ಗುರುವಾರದಂದು ಉದ್ಯಮದಲ್ಲಿ ತೊಂದರೆ, ಪ್ರಯಾಣ ಭೀತಿ, ಸ್ಪರ್ಧಾತ್ಮಕ ವಿಚಾರದಲ್ಲಿ ಜಯಾಜಯಗಳನ್ನು ತಿಳಿಯಬಹುದು. ನಿಮ್ಮ ಸತ್ಕಾಮನೆಗಳನ್ನು ಈ ದಿನ ಪೂರ್ಣಗೊಳಿಸಲಿ. ಸಕಲರಿಗೂ ಶುಭವಾಗಲಿ.

Horoscope Today 06 February 2025: ಅತಿಯಾದ ಕೋಪದಿಂದ ಕೆಲಸ ಹಾಳು, ಚಿಂತೆಗೀಡಾಗುವಿರಿ
ಅತಿಯಾದ ಕೋಪದಿಂದ ಉದ್ಯೋಗ ಹಾಳು, ಚಿಂತೆಗೀಡಾಗುವಿರಿ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಗಂಗಾಧರ​ ಬ. ಸಾಬೋಜಿ

Updated on: Feb 06, 2025 | 12:02 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯನ, ಋತು : ಶಿಶಿರ, ಸೌರ ಮಾಸ : ಮಕರ ಮಾಸ, ಮಹಾನಕ್ಷತ್ರ : ಶ್ರವಣಾ, ಮಾಸ : ಮಾಘ, ಪಕ್ಷ : ಶುಕ್ಲ, ವಾರ : ಗುರು, ತಿಥಿ : ನವಮೀ, ನಿತ್ಯನಕ್ಷತ್ರ : ರೋಹಿಣೀ, ಯೋಗ : ಶುಕ್ಲ, ಕರಣ : ಬವ, ಸೂರ್ಯೋದಯ – 07 – 00 am, ಸೂರ್ಯಾಸ್ತ – 06 – 32 pm, ಇಂದಿನ ಶುಭಾಶುಭಕಾಲ : ರಾಹು ಕಾಲ 14:13 – 15:40, ಯಮಘಂಡ ಕಾಲ 07:01 – 08:27, ಗುಳಿಕ ಕಾಲ 09:54 – 11:20.

ಮೇಷ ರಾಶಿ: ನೀವು ಕೊಟ್ಟ ಸೌಲಭ್ಯಗಳನ್ನು ದುರುಪಯೋಗ ಮಾಡಿಕೊಂಡು ಕೆಂಗಣ್ಣಿಗೆ ಗುರಿಯಾಗುವಿರಿ. ಇಂದು ಯೋಜನೆಯಿಂದ ಆರಂಭಿಸುವ ಮೊದಲು ಅದರ ಪ್ರತಿಯೊಂದು ಹಂತದ ಬಗ್ಗೆಯೂ ಸರಿಯಾದ ಕಲ್ಪನೆ ಬೇಕು. ಇದರಿಂದ ನಿಮ್ಮ ಕಾರ್ಯಕ್ಷಮತೆ ಅಧಿಕವಾಗುವುದು. ದಾಂಪತ್ಯದಲ್ಲಿ ಪ್ರಣಯ ಕಾಣಿಸುವುದು. ನಿಮಗೆ ಇಂದು ವೃತ್ತಿ ಕ್ಷೇತ್ರದಲ್ಲಿ ಪ್ರಶಂಸೆ ಸಿಗುವ ಸಾಧ್ಯತೆ ಇದೆ. ಆಸ್ತಿ ಸಮಸ್ಯೆ ಸೌಹಾರ್ದಯುತವಾಗಿ ಬಗೆಹರಿಯುವುದು. ಹೊಸತನ್ನು ಕಲಿಯುವ ಉತ್ಸಾಹದಲ್ಲಿ ಇರುವಿರಿ. ಧೈರ್ಯದಿಂದ ಹೊಸ ಸವಾಲುಗಳನ್ನು ಎದುರಿಸಲು ಜೊತೆಗಾರರ ಬೆಂಬಲ ಸಿಗುವುದು. ಭೂಮಿಗೆ ಸಂಬಂಧಿಸಿದ ಕೆಲಸಗಳು ಇರುತ್ತವೆ. ಮಹಿಳೆಯರು ಯಾವುದೇ ಆಹಾರ ಉತ್ಪನ್ನದ ವ್ಯವಹಾರವನ್ನು ಆರಂಭಿಸಬಹುದು. ಸುಮ್ಮನೆ ಕುಳಿತಿರುವುದು ನಿಮಗೆ ಆಗದ ಸಂಗತಿ. ಎಲ್ಲರ ಜೊತೆ ಬೆರೆಯುವುದೂ ಆಗದು.

ವೃಷಭ ರಾಶಿ: ನೀವು ಕಳೆದುಕೊಂಡಿದ್ದರ‌ ಬಗ್ಗೆ ಅತಿಯಾದ ಶೋಕ ಬೇಡ. ಮುಂದಿನ ಕಾರ್ಯಗಳ ಬಗ್ಗೆ ಗಮನಹರಿಸಿದರೆ ಎಲ್ಲವೂ ಮರಡಯಾಗುವುದು. ಬಹಳ ದಿನಗಳಿಂದ ತೊಂದರೆಗೀಡಾದ ಕೆಲಸಗಳು ಪುನಃ ಒಂದು ಮಾರ್ಗಕ್ಕೆ ಬರುತ್ತವೆ. ಇಂದು ನಿರ್ಧಾರ ತೆಗೆದುಕೊಳ್ಳುವಾಗ ಆತ್ಮಸಾಕ್ಷಿಯೂ ಅದಕ್ಕೆ ಬೆಂಬಲಿಸಬಹುದು. ಒಡಹುಟ್ಟಿದವರ ಜೊತೆ ಸಂಬಂಧದಲ್ಲಿ ಸವಿಯನ್ನು ಕಾಪಾಡಿಕೊಳ್ಳಿ. ಯಾವುದೇ ರೀತಿಯ ದೂರ ಪ್ರಯಾಣ ಮಾಡುವುದು ಬೇಡ. ಹಣಕಾಸಿನ ವಿಷಯದಲ್ಲಿ ಕೆಲವು ಲಾಭಗಳನ್ನು ನಿರೀಕ್ಷಿಸುವಿರಿ‌‌. ಕಚೇರಿಯಲ್ಲಿ ಕೆಲಸದ ಹೊರೆ ನಿಮ್ಮ ಸ್ವಂತ ಕೆಲಸವನ್ನು ಮಾಡಲು ಸ್ವಲ್ಪ ಸಮಯವನ್ನು ನೀಡುತ್ತದೆ. ಯಾರನ್ನೋ ಸೋಲಿಸುವುದಕ್ಕೆ ನಿಮ್ಮ ಪ್ರಯತ್ನ ಬೇಡ. ನಿಮ್ಮ ವ್ಯಾಯಾಮದಲ್ಲಿ ಮಿತಿ ಇರಲಿ. ಉತ್ತಮ ಆರೋಗ್ಯದಿಂದ ಆನಂದಿಸುವಿರಿ. ನಿಮ್ಮ ಈ ದಿನವು ಆತ್ಮವಿಶ್ವಾಸದಿಂದ ಇರುತ್ತದೆ. ಕುಟುಂಬದ ಯುವ ಸದಸ್ಯರ ಯಶಸ್ಸಿನಲ್ಲಿ ಹೆಮ್ಮೆ ಪಡುವಿರಿ. ಉದ್ವೇಗದಿಂದ ಕಾರ್ಯಗಳನ್ನು ಮಾಡುವುದಕ್ಕಿಂತ ಏಕಾಗ್ರತೆ ಇರಲಿ.

ಮಿಥುನ ರಾಶಿ: ಇಂದು ಎಂದೋ ಕೊಟ್ಟ ಮಾತನ್ನು ಉಳಿಸಿಕೊಳ್ಳುವುದು ನಿಮಗೆ ಕಷ್ಟವಾದೀತು. ಅದೇ ನಿಮ್ಮ ತಲೆಯಲ್ಲಿ ದಿನವಿಡೀ ಕೊರೆಯಬಹುದು. ವಿದ್ಯಾರ್ಥಿಗಳು ನಿರೀಕ್ಷೆಯಂತೆ ಫಲಿತಾಂಶ ಪಡೆದು ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳುವರು. ಕನಸುಗಳೆಲ್ಲವೂ ನನಸಾಗಿಲ್ಲ ಎಂದು ಹತಾಶರಾಗದೇ ಅದಕ್ಕೆ ಸಮಯವಿದೆ ಎಂದು ಸಕಾರಾತ್ಮಕ ಯೋಚನೆ ಮಾಡಿ. ಸ್ತ್ರೀಯರಿಗೆ ಅನಾರೋಗ್ಯದ ಅಧಿಕವಾಗುವುದು. ಇಂದು ನಿಮ್ಮ ದಕ್ಷತೆಯಿಂದ ಮುಖ್ಯವಾದವರನ್ನು ನೀವು ಮೆಚ್ಚಿಸಲು ಸಾಧ್ಯವಾಗುತ್ತದೆ. ಆಸ್ತಿ ವ್ಯವಹಾರವು ನಿಮ್ಮ ಆಲೋಚನೆಗೆ ತಕ್ಕಂತೆ ನಡೆಯುವುದು. ಸುಲಭದ ಕೆಲಸವನ್ನು ಮೊದಲು ಮಾಡಿ, ಯಾರದ್ದಾದರೂ ಸಹಕಾರವನ್ನು ಪಡೆದುಕೊಳ್ಳಿ. ನೀವು ಎಲ್ಲರ ಜೊತೆ ಸಭ್ಯತೆಯನ್ನು ಮೀರದೇ ಮಾತನಾಡಬೇಕು. ನಿಮ್ಮದೇ ಕೆಲಸದ ಒತ್ತಡಗಳು ನಿಮಗೆ ಬರುವುದು. ಓಡಾಟವು ಹೆಚ್ಚಾಗಿದ್ದು, ಉತ್ಸಾಹವನ್ನು ಕಳೆದುಕೊಂಡು ಸುಮ್ಮನೆ ಕುಳಿತುಕೊಳ್ಳುವಿರಿ.

ಕರ್ಕಾಟಕ ರಾಶಿ: ಭವಿಷ್ಯದ ಆರ್ಥಿಕತೆಯ ಬಗ್ಗೆ ಅತಿಯಾದ ಚಿಂತೆಯು ಕಾಡುವುದು. ನಿಮ್ಮ ನಡವಳಿಕೆಯು ಇತರರಿಗೆ ಇಷ್ಟವಾಗದೇ ಇರಬಹುದು. ಇಂದು ನೀವು ಆರಾಮವಾಗಿ ಇರಬೇಕೆಂದುಕಳ್ಳುವಿರಿ. ಹತ್ತಿರದ ಸಂಬಂಧಿಕರ ಜೊತೆ ಸಮಯ ಕಳೆಯುವಿರಿ. ತಾಳ್ಮೆ ಮತ್ತು ಬುದ್ಧಿವಂತಿಕೆಯಿಂದ ಎಂತ ಸಮಸ್ಯೆಗೂ ಪರಿಹಾರ ಸಿಗಲಿದೆ. ಮಾನಸಿಕ ಒತ್ತಡ ಮತ್ತು ರಕ್ತದೊತ್ತಡಕ್ಕೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚಳ ಆಗಬಹುದು. ತಂತ್ರಜ್ಞರಿಗೆ ಈ ದಿನವು ಅನುಕೂಲಕರವಾಗಿರುತ್ತದೆ. ಖರೀದಿಯ ಉತ್ಸಾಹದಲ್ಲಿ ಮಾತು ಅತಿಯಾಗುವುದು ಬೇಡ. ಆದರೆ ಅತಿರೇಕಕ್ಕೆ ಹೋಗುವ ಸಾಧ್ಯತೆ ಇದೆ. ದೈಹಿಕ ದಾರ್ಢ್ಯವನ್ನು ನೀವು ಚೆನ್ನಾಗಿರಿಸಿಕೊಳ್ಳುವಿರಿ. ಸುಲಭವಾಗಿ ಸಿಕ್ಕುವುದನ್ನು ಬಿಟ್ಟಕೊಳ್ಳುವಿರಿ. ನಿಮ್ಮ ತಿಳುವಳಿಕೆ ಮತ್ತು ಸಭ್ಯತೆಯಿಂದ ಎಲ್ಲರೂ ಬಹಳ ಪ್ರಭಾವಿತರಾಗಬಹುದು. ಕೌಟುಂಬಿಕ ಜೀವನ ಸುಖಕರವಾಗಿರಬಹುದು. ಆರ್ಥಿಕ ಕ್ಷೇತ್ರಕ್ಕೆ ಸಂಬಂಧಿಸಿದ ಜನರು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ಸಂಗಾತಿಯಿಂದ ಅನಿರೀಕ್ಷಿತ ಕೊಡುಗೆಯನ್ನು ಪಡೆಯುವಿರಿ.

ಸಿಂಹ ರಾಶಿ: ಇತರರು ಮಾಡುವ ಪ್ರಶಂಸೆಯಿಂದ‌ ನಿಮಗೆ ಸಂಕೋಚವಾಗುವುದು. ಕೆಲಸವನ್ನು ನಿರ್ವಿಘ್ನವಾಗಿ ಪೂರ್ಣಮಾಡುವಿರಿ. ಇಂದು ವೃತ್ತಿಯಲ್ಲಿ ಕೆಲವು ಸಮಸ್ಯೆಗಳು ಬರುತ್ತವೆ. ಇತರರ ಆಸ್ತಿಯಲ್ಲಿ ಹಸ್ತಕ್ಷೇಪ ಮಾಡಬೇಡಿ. ವ್ಯವಹಾರದಲ್ಲಿ ಕೆಲವು ಸಮಸ್ಯೆಗಳು ಮತ್ತು ತೊಂದರೆಗಳು ಉಂಟಾಗುತ್ತವೆ. ಇಂದು ಕೆಲಸದ ಸ್ಥಳದ ಸಮಸ್ಯೆಗಳಿಗೆ ನಿಮ್ಮ ನಿಷ್ಪಕ್ಷಪಾತ ವಿಧಾನವು ನಿಮ್ಮನ್ನು ಜನಪ್ರಿಯಗೊಳಿಸುವುದು. ಇಂದು ಯಾವುದೇ ಕೆಲಸ ಮಾಡುವಾಗ, ನಿಮ್ಮ ಮನಸ್ಸನ್ನು ಶಾಂತವಾಗಿಟ್ಟುಕೊಳ್ಳಬೇಕು. ಆಪ್ತರ ಮಾತುಗಳು ನಿಮ್ಮ‌ ತಲೆಯಲ್ಲಿ ಕೊರೆಯಬಹುದು. ಹೊಸ ಯೋಜನೆಯನ್ನು ಪಡೆದುಕೊಳ್ಳುವಿರಿ. ನೀವು ಇಂದು ಎಲ್ಲರ ಜೊತೆ ವಿನಯದಿಂದ ಮಾತನಾಡಬೇಕು. ರಾಜಕೀಯದಲ್ಲಿ ಸಂಪರ್ಕ ಪ್ರದೇಶವು ವಿಶಾಲವಾಗಿರುತ್ತದೆ. ಕೆಲವು ಹೊಸ ಅವಕಾಶಗಳು ಸಿಗುವ ಲಕ್ಷಣಗಳಿವೆ. ಉತ್ತಮ ಕಾರ್ಯಕ್ಕೆ ಎಲ್ಲ ಕಡೆಯಿಂದ ಅಭಿನಂದನೆಗಳು ಹರಿದುಬರಬಹುದು. ಸರ್ಕಾರಿ ಯೋಜನೆಗೆ ಹಣ ಹೂಡುವ ಸಾಧ್ಯತೆಗಳಿವೆ. ಹಣದ ವ್ಯವಹಾರಗಳಲ್ಲಿ ಯಶಸ್ಸು ಇರುತ್ತದೆ. ನಿಮ್ಮ ಮಿತವಾದ ಮಾತಿನಿಂದ ಇತರರಿಗೆ ಅಚ್ಚರಿಯಾದೀತು.

ಕನ್ಯಾ ರಾಶಿ: ಇಂದು ನಿಮ್ಮ‌ ಪ್ರಭಾವವು ಕಡಿಮೆಯಾದಂತೆ ತೋರುತ್ತದೆ. ಯಾವ ಕಾರಣಕ್ಕೆಂದು ತಿಳಿಯುವ ಕುತೂಹಲ. ಸ್ನೇಹಿತರಿಂದ ನಿಮ್ಮ ಉದ್ಯೋಗವು ಬದಲಾದೀತು. ನಿಮ್ಮ ಗಮನವನ್ನು ಬೇಡದ ಕಾರ್ಯಗಳಿಂದ ದೂರವಿಡಿ. ಮುಖ್ಯವಾದುದರ ಮೇಲೆ ಗಮನಿರಲಿ. ಆತುರದಲ್ಲಿ ತೆಗೆದುಕೊಂಡ ನಿರ್ಧಾರದಿಂದ ತಪ್ಪು ನಿಮಗೇ ಗೊತ್ತಾದೀತು. ಉದ್ಯೋಗ ಕ್ಷೇತ್ರಗಳಲ್ಲಿ ಕೆಲವು ರೀತಿಯ ರಾಜಕೀಯವನ್ನು ಎದುರಿಸುವಿರಿ. ವೃತ್ತಿಪರರು ಇಂದು ಉತ್ತಮ ಅವಕಾಶಗಳನ್ನು ಕಂಡುಕೊಳ್ಳಬಹುದು. ಹಳೆಯ ಬಂಧುಗಳನ್ನು ಭೇಟಿ ಮಾಡುವುದು ಇಂದಿನ ಉತ್ಸಾಹಕ್ಕೆ ಕಾರಣವಾಗುವುದು. ನೀವು ಹೊಸ ಗುರಿಗಳನ್ನು ಹೊಂದಿದ್ದು ನಿಮ್ಮ ಪ್ರಯತ್ನಗಳನ್ನು ಪ್ರಾರಂಭಿಸುವಿರಿ. ಹಿತೈಷಿಗಳ ಸಹಾಯದಿಂದ ನಿಮ್ಮ ಯಾವುದೇ ಆಸೆಗಳನ್ನು ಈಡೇರಿಸಲಾಗುವುದು. ಸಣ್ಣ ವ್ಯಾಪಾರಿಗಳು ಅಲ್ಪ ಲಾಭವನ್ನು ಗಳಿಸಿ, ಖುಷಿಪಡುವರು. ನೀವು ಕೆಲವು ವ್ಯವಹಾರ ವಿಷಯಗಳನ್ನು ಜಾಣ್ಮೆಯಿಂದ ನಿಭಾಯಿಸುವಿರಿ. ಸಂಪತ್ತಿನ ಹೆಚ್ಚಳವಾಗಬಹುದು.

ತುಲಾ ರಾಶಿ: ಇಂದು ನಿಮಗೆ ಸರ್ಕಾರದ ಕಡೆಯಿಂದ ಒತ್ತಡವು ಬರಲಿದ್ದು, ಪ್ರಭಾವಿ ವ್ಯಕ್ತಿಗಳಿಂದ ಅದನ್ನು ತಪ್ಪಿಸುಕೊಳ್ಳುವಿರಿ. ಬಂಧುಗಳ ಸಲಹೆಯು ಸಮಸ್ಯೆಯನ್ನು ವಿಭಿನ್ನ ದೃಷ್ಟಿಕೋನದಿಂದ ನೋಡಲು ನಿಮಗೆ ಸಹಾಯ ಮಾಡುತ್ತದೆ. ಯಾವುದೇ ಸಮಾಜಕ್ಕೆ ಸಂಬಂಧಿಸಿದ ವಿಷಯಗಳು ನಿಮ್ಮ ಪರವಾಗಿ ಬರಬಹುದು. ವ್ಯವಹಾರದ ದೃಷ್ಟಿಯಿಂದ ಎಲ್ಲವೂ ಚೆನ್ನಾಗಿರುತ್ತದೆ. ವಾದಗಳ ಕಡೆ ಹೆಚ್ಚು ಗಮನವಿರುವುದು. ನಿಮ್ಮ ವೈಯಕ್ತಿಕ ವಿಚಾರವನ್ನು ಹೊರಗಿನವರಿಗೆ ಹೇಳಬೇಡಿ. ಯಾವುದೇ ಯೋಜನೆಯನ್ನು ರೂಪಿಸುವ ಮೊದಲು ಮತ್ತೊಮ್ಮೆ ಯೋಚಿಸುವುದು ಅವಶ್ಯಕ. ದೂರದೂರಿಗೆ ಪ್ರಯಾಣ ಸಾಧ್ಯತೆ ಇದೆ. ನಿಮ್ಮ ದಾಂಪತ್ಯದಲ್ಲಿ ಪರಸ್ಪರ ಸಾಮರಸ್ಯ ಹೆಚ್ಚಾಗುತ್ತದೆ. ಎಂದೋ ಬರುವ ಸಮಸ್ಯೆಗಳಿಗೆ ಇಂದು ಚಿಂತೆಪಡುವಿರಿ. ವೃತ್ತಿಪರ ಜೀವನದಲ್ಲಿ ಪ್ರತಿಯೊಂದು ವಿಷಯದ ಬಗ್ಗೆ ಸ್ಪಷ್ಟ ನಿಲುವನ್ನು ಇಟ್ಟುಕೊಳ್ಳಿ. ಸೋಲನ್ನು ನಿರೀಕ್ಷಿಸಿದರೂ ಅದನ್ನು ಅರಗಿಸಿಕೊಳ್ಳುವುದು ಕಷ್ಟವಾದೀತು.

ವೃಶ್ಚಿಕ ರಾಶಿ: ನಿಮ್ಮ‌ ಹಳೆಯ ತಪ್ಪುಗಳಿಂದ ಹೊಸ ಸ್ಥಾನ, ಅವಕಾಶಗಳು ಸಿಗದೇ ಇರಬಹುದು. ಪ್ರಯತ್ನಕ್ಕೆ ಪೂರ್ಣಫಲವು ಲಭ್ಯವಾಗದೇ ಹೋದೀತು. ಮನೆಯಲ್ಲಿ ಆಪ್ತರ ಆಗಮನದಿಂದ ಸಂತೋಷ. ಕೆಲವು ಜನರು ನಿಮ್ಮ ಸರಳ ಸ್ವಭಾವವನ್ನು ದುರುಪಯೋಗ ಪಡಿಸಿಕೊಳ್ಳಬಹುದು. ಆತುರದಲ್ಲಿ ನೀವು ಕೆಲವು ಲಾಭದಾಯಕ ಅವಕಾಶಗಳನ್ನು ಕಳೆದುಕೊಳ್ಳಬಹುದು. ನಿಮ್ಮ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಂಗಾತಿಯ ಪೂರ್ಣ ಬೆಂಬಲ ಸಿಗುವುದು. ವೃತ್ತಿಪರ ಸಮಸ್ಯೆಗಳನ್ನು ನಿವಾರಿಸಲು ನಿಮಗೆ ಅವಕಾಶ ದೊರೆಯಲಿದೆ. ಮನೆಯಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ತರಲು ನೀವು ನಿಮ್ಮ ಕೋಪವನ್ನು ನಿಯಂತ್ರಿಸುವುದು ಉತ್ತಮ. ಸಜ್ಜನರ ಕೂಟದಲ್ಲಿ ಭಾಗವಹಿಸುವಿರಿ. ನೀವು ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯುವಿರಿ. ಕಠಿಣ ಪರಿಶ್ರಮದ ಆಧಾರದ ಮೇಲೆ, ಕಷ್ಟಕರವಾದ ಕೆಲಸಗಳನ್ನು ಕೂಡ ಸುಲಭವಾಗಿ ಪೂರ್ಣಗೊಳಿಸುವಿರಿ. ಹಿರಿಯರಿಗೆ ಗೌರವವನ್ನು ಕೊಡುವಿರಿ. ಸಮಯಕ್ಕೆ ಸರಿಯಾಗಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಸಾಧ್ಯವಾಗುವುದು.

ಧನು ರಾಶಿ: ಕಷ್ಟವನ್ನೇ ನುಂಗಿತ್ತ ಬದುಕುವವರಿಗೆ ಯಾವದೂ ಕಷ್ಟವಾಗದು. ಇಂದು ನಿಮಗೆ ಎಲ್ಲ ರೀತಿಯಲ್ಲೂ ಲಾಭವಾಗಲಿದೆ ಎಂದು ಮನಸ್ಸು ಹೇಳುವುದು. ಕೆಲವು ಸಮಯದಿಂದ ನಡೆಯುತ್ತಿರುವ ನಿಮ್ಮ ಪ್ರಯತ್ನಗಳಲ್ಲಿ ಯಶಸ್ಸನ್ನು ಪಡೆಯುವ ಸಾಧ್ಯತೆಗಳಿವೆ. ನೀವು ಉತ್ತಮ ಆರ್ಥಿಕ ಯೋಜನೆಯನ್ನು ಮಾಡಬಹುದು. ಯುವಕರು ಹೊಸ ಉದ್ಯೋಗವನ್ನು ಪಡೆಯುವ ಸಾಧ್ಯತೆಯಿದೆ. ಉದ್ಯೋಗಸ್ಥ ಮಹಿಳೆಯರು ತಮ್ಮ ಜವಾಬ್ದಾರಿಗಳನ್ನು ಸರಿಯಾಗಿ ಪೂರೈಸಲು ಸಾಧ್ಯವಾಗುತ್ತದೆ. ಹಣಕಾಸಿನ ವಿಷಯದಲ್ಲಿ ಕೆಲವು ರೀತಿಯ ಆತುರ ಉಂಟಾಗಬಹುದು. ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವ ನೌಕರರಿಗೆ ಉನ್ನತ ಅಧಿಕಾರಿಗಳಿಂದ ಪ್ರಶಂಸೆ ಪ್ರಾಪ್ತಿಯಾಗಲಿದೆ. ಮನಸ್ಸಿಗೆ ಅಧಿಕ ವಿಶ್ರಾಂತಿಯ ಅಗತ್ಯವಿರುವುದು. ಪ್ರಾರ್ಥನೆಯ ಪರಿಣಾಮ ನಿಮ್ಮ ಮನಸ್ಸು ಎಂದಿಗಿಂತ ನೆಮ್ಮದಿಯಿಂದ ಇರಲಿದೆ. ಬಂಧುಗಳ ಎದುರು ಸ್ವಾಭಿಮಾನವನ್ನು ಇಟ್ಟುಕೊಳ್ಳುವಿರಿ. ಸ್ಥಗಿತಗೊಂಡ ಕೆಲಸದಲ್ಲಿ ವೇಗವನ್ನು ಪಡೆಯುವುದು ಪ್ರಯೋಜನಕಾರಿಯಾಗಿದೆ.

ಮಕರ ರಾಶಿ: ಆರೋಗ್ಯದ ಸ್ಥಿತಿಯೂ ಸರಿಯಿಲ್ಲದೇ ಯಾವುದೂ ನಿಮ್ಮ ಬುದ್ಧಿಗೆ ಸೂಚಿಸದು. ಇಂದು ನಿಮ್ಮ ಆರೋಗ್ಯದ ಮೇಲೆ ಹೆಚ್ಚಿನ ಗಮನ ಇರಿಸಿ. ಇಂದು ನೀವು ನಿಮ್ಮ ಕಾರ್ಯಗಳನ್ನು ಆತುರದ ಬದಲು ಸರಿಯಾಗಿ ಪೂರ್ಣಗೊಳಿಸಲು ಪ್ರಯತ್ನಿಸುತ್ತೀರಿ. ಕುಟುಂಬದ ಆಸ್ತಿಯನ್ನು ಪಡೆಯುವ ಸಾಧ್ಯತೆಗಳಿವೆ. ವಿದ್ಯುತ್ ಉಪಕರಣದಿಂದ ತೊಂದರೆಯಾದೀತು. ಮನೆಯ ಸರಿಯಾದ ಕ್ರಮವನ್ನು ಕಾಪಾಡಿಕೊಳ್ಳಲು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ತಾಳ್ಮೆಯಿಂದಿರಿ, ನಿಮ್ಮ ಕೋಪವು ನಿಮಗೆ ಹಾನಿಕಾರಕವಾಗಿರುತ್ತದೆ. ಹಳೆ ಆಸ್ತಿ ಖರೀದಿ ಅಥವಾ ಮಾರಾಟಕ್ಕೆ ಸಂಬಂಧಿಸಿದ ಪ್ರಮುಖ ವ್ಯವಹಾರದ ಸಾಧ್ಯತೆಯಿದೆ. ದೈಹಿಕವಾಗಿ ಸದೃಢವಾಗಿರಲು ನಿಮ್ಮ ಪ್ರಯತ್ನ ಅತಿ ಮುಖ್ಯ. ಆದಾಯದಲ್ಲಿಯೂ ನಿಮಗೇ ಪೂರ್ಣತೃಪ್ತಿ ಇರದು. ಸಂಗಾತಿಯ ಸೂಕ್ಷ್ಮ ಭಾವಕ್ಕೆ ಪೆಟ್ಟು ಬೀಳಬಹುದು. ನಿಮ್ಮ ಸುತ್ತಮುತ್ತಲಿನವರಿಂದ ಸಾಕಷ್ಟು ಪ್ರಶಂಸೆ ಪಡೆಯಲಿದ್ದೀರಿ.

ಕುಂಭ ರಾಶಿ: ಪ್ರಭಾವೀ ವ್ಯಕ್ತಿಗಳ ಸಹಕಾರವನ್ನು ಬಳಸಿಕೊಂಡು ಕಾರ್ಯವನ್ನು ಸಾಧಿಸಿಕೊಳ್ಳುವಿರಿ. ಸ್ವಂತ ಉದ್ಯಮ ಬಗ್ಗೆ ಅತಿಯಾದ ಆಸಕ್ತಿ ಇರುವುದು. ಮಹತ್ವದ ಕೆಲಸವು ಹಲವು ದಿನಗಳವರೆಗೆ ಬಾಕಿಯಿದ್ದರೆ, ಅವುಗಳನ್ನು ಮುಗಿಸಿ. ನಿಮ್ಮ ತಪ್ಪನ್ನು ಯಾರ ಮೇಲೋ ಹಾಕುವಿರಿ. ಅಧ್ಯಾತ್ಮದ ಬಗ್ಗೆ ನಿಮ್ಮ ಆಸಕ್ತಿ ಹೆಚ್ಚಾಗುತ್ತದೆ. ಅತ್ಯುತ್ತಮ ಜ್ಞಾನವನ್ನೂ ಪಡೆಯುವಿರಿ. ಯುವಕರ ವೃತ್ತಿ ಸಂಬಂಧಿತ ಯೋಜನೆಗಳು ದಾರಿ ತಪ್ಪಬಹುದು. ಇಂದು ಹೆಚ್ಚಿನ ಸಮಯವನ್ನು ವ್ಯಾಪಾರ ವಹಿವಾಟಿನ ವಿಚಾರದಲ್ಲಿ ಕಳೆಯಲಾಗುತ್ತದೆ. ಶಿಸ್ತನ್ನು ಅಳವಡಿಸಿಕೊಳ್ಳುವ ಮೂಲಕ ನೀವು ಉತ್ತಮ ಆರೋಗ್ಯವನ್ನು ವೃದ್ಧಿಸಿಕೊಳ್ಳುವಿರಿ. ಕುಟುಂಬದ ಸದಸ್ಯರ ಸಲಹೆಯಿಂದ ನೀವು ಪ್ರಯೋಜನ ಪಡೆಯಬಹುದು. ಊಹಾಪೋಹಗಳಿಗೆ ಬೆಲೆಯನ್ನು ಕೊಡುವ ಅಗತ್ಯವಿಲ್ಲ. ಇಂದು ಶೈಕ್ಷಣಿಕ ರಂಗದಲ್ಲಿ ಸಕಾರಾತ್ಮಕ ಫಲಿತಾಂಶವನ್ನು ಪಡೆಯುವಿರಿ. ನಿಮ್ಮ ದಿನದ ಆರಂಭವು ಸಾಮಾನ್ಯವಾಗಿರುತ್ತದೆ. ಹಣವನ್ನು ಬಹಳ ನೈಪುಣ್ಯದಿಂದ ಖರ್ಚು ಮಾಡುವಿರಿ.

ಮೀನ ರಾಶಿ; ಪಿತ್ರಾರ್ಜಿತ ಆಸ್ತಿಯನ್ನು ಪಡೆಯಲು ಹೋಗಿ‌ ಮುಗ್ಗರಿಸುವಿರಿ. ಮಕ್ಕಳ ಬಗ್ಗೆ ನಿಮಗೆ ಸ್ವಲ್ಪ ಅಸಮಾಧಾನವಾಗಬಹುದು. ಇಂದು ಆರ್ಥಿಕ ಲಾಭ ದೊರೆಯುವ ಸಾಧ್ಯತೆ ಇದೆ. ಅಸಾಧ್ಯವನ್ನು ನೀವು ಸಾಧಿಸುವ ಪ್ರಯತ್ನ ಮಾಡುವಿರಿ. ಕೆಲಸದ ಪರಿಸ್ಥಿತಿಗಳು ಸುಧಾರಿಸುವ ಸಾಧ್ಯತೆಯಿದೆ. ದಿನವು ಉತ್ತಮವಾಗಿ ಪ್ರಾರಂಭವಾಗುತ್ತದೆ. ವೈಯಕ್ತಿಕ ಚಟುವಟಿಕೆಗಳಲ್ಲಿ ಹೆಚ್ಚು ನಿರತರಾಗಿರುವಿರಿ. ಹಣಕಾಸಿನ ಪರಿಸ್ಥಿತಿಯಲ್ಲಿ ತೊಂದರೆ ಸಾಧ್ಯತೆಯೂ ಇದೆ. ತಾಳ್ಮೆಯಿಂದ ಸಮಯ ಕಳೆಯಿರಿ. ಕೈ ತಪ್ಪಿ ಹೋಗಿದೆ ಎಂದುಕೊಂಡಿದ್ದ ಯೋಜನೆಗಳು ಸಿಗಬಹುದು. ಹೂಡಿಕೆಯಿಂದ ಲಾಭವು ಸಿಗಲಿದೆ. ನಿಮ್ಮನ್ನು ಬಹು ದಿನಗಳಿಂದ ಬಾಧಿಸುತ್ತಿದ್ದ ಅನಾರೋಗ್ಯದಿಂದ ಮುಕ್ತಿ ಪಡೆಯುವಿರಿ. ನೀವು ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮದಿಂದ ಪ್ರತಿ ಗುರಿಯನ್ನು ಸಾಧಿಸುವಿರಿ. ವ್ಯಾಪಾರವನ್ನು ವಿಸ್ತರಿಸಲು ನೀವು ಬ್ಯಾಂಕಿನಿಂದ ಸಾಲ ತೆಗೆದುಕೊಳ್ಳಬಹುದು. ಎಲ್ಲೋ ಕೊಟ್ಟಿರುವ ಹಣವನ್ನು ನೀವು ಮರಳಿ ಪಡೆಯಬಹುದು. ನೀವು ಬಂಧುಗಳ ಜೊತೆ ವ್ಯಾಪಾರ ಮಾಡಲು ತೀರ್ಮಾನಿಸುವಿರಿ.

ಲೋಹಿತ ಹೆಬ್ಬಾರ್ – 8762924271 (what’s app only)

ಇನ್ನೆರಡು ವಾರಗಳಲ್ಲಿ ವರಿಷ್ಠರು ಎಲ್ಲವನ್ನೂ ಸರಿಮಾಡಲಿದ್ದಾರೆ: ಆರ್ ಅಶೋಕ
ಇನ್ನೆರಡು ವಾರಗಳಲ್ಲಿ ವರಿಷ್ಠರು ಎಲ್ಲವನ್ನೂ ಸರಿಮಾಡಲಿದ್ದಾರೆ: ಆರ್ ಅಶೋಕ
ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದು ಖುದ್ದು ಸ್ನೇಹಮಯಿ ಕೃಷ್ಣ: ಶಿವಣ್ಣ
ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದು ಖುದ್ದು ಸ್ನೇಹಮಯಿ ಕೃಷ್ಣ: ಶಿವಣ್ಣ
ರಾಜ್ಯದ ಮಂತ್ರಿಗಳು ಹಣಕಾಸು ಸಚಿವೆಯನ್ನು ಭೇಟಿಯಾಗಿದ್ದಾರೆ: ಶಿವಕುಮಾರ್
ರಾಜ್ಯದ ಮಂತ್ರಿಗಳು ಹಣಕಾಸು ಸಚಿವೆಯನ್ನು ಭೇಟಿಯಾಗಿದ್ದಾರೆ: ಶಿವಕುಮಾರ್
ಹಾವೇರಿ: ದೇವಸ್ಥಾನದ ಕಳಸಾರೋಹಣದ ವೇಳೆ ಮುರಿದ ಕ್ರೇನ್​ ಬಕೆಟ್​, ಓರ್ವ ಸಾವು
ಹಾವೇರಿ: ದೇವಸ್ಥಾನದ ಕಳಸಾರೋಹಣದ ವೇಳೆ ಮುರಿದ ಕ್ರೇನ್​ ಬಕೆಟ್​, ಓರ್ವ ಸಾವು
ಕಳೆದ ವರ್ಷ ಮಾರ್ಚ್​ನಲ್ಲಿ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ದೂರು
ಕಳೆದ ವರ್ಷ ಮಾರ್ಚ್​ನಲ್ಲಿ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ದೂರು
ಮದುವೆ ಮಂಟಪಕ್ಕೆ ತಮ್ಮ ರಾಣಾನ ಕರೆತಂದ ರಕ್ಷಿತಾ
ಮದುವೆ ಮಂಟಪಕ್ಕೆ ತಮ್ಮ ರಾಣಾನ ಕರೆತಂದ ರಕ್ಷಿತಾ
ಸಿಬಿಐಗೆ ರಾಜ್ಯಸರ್ಕಾರ ಅನುಮತಿಯ ಅವಶ್ಯಕತೆ ಇರುತ್ತದೆ: ಪರಮೇಶ್ವರ್
ಸಿಬಿಐಗೆ ರಾಜ್ಯಸರ್ಕಾರ ಅನುಮತಿಯ ಅವಶ್ಯಕತೆ ಇರುತ್ತದೆ: ಪರಮೇಶ್ವರ್
ಮಹಾಕುಂಭ ಮೇಳ: ಹರಿಹರಾನಂದ ಸ್ವಾಮೀಜಿ ಇದ್ದ ಟೆಂಟ್​ನಲ್ಲಿ ಅಗ್ನಿ ಅವಘಡ
ಮಹಾಕುಂಭ ಮೇಳ: ಹರಿಹರಾನಂದ ಸ್ವಾಮೀಜಿ ಇದ್ದ ಟೆಂಟ್​ನಲ್ಲಿ ಅಗ್ನಿ ಅವಘಡ
ಅರ್ಜಿ ವಜಾಗೊಂಡರೂ ಸಿದ್ದರಾಮಯ್ಯ ವಿರುದ್ಧದ ಪಟ್ಟು ಸಡಿಲಿಸದ ಸ್ನೇಹಮಯಿ ಕೃಷ್ಣ
ಅರ್ಜಿ ವಜಾಗೊಂಡರೂ ಸಿದ್ದರಾಮಯ್ಯ ವಿರುದ್ಧದ ಪಟ್ಟು ಸಡಿಲಿಸದ ಸ್ನೇಹಮಯಿ ಕೃಷ್ಣ
ಕುಟುಂಬದ ಮನೆಯನ್ನು ಸೀಜ್ ಮಾಡಿರುವ ಎಎಮ್​ಒಎಮ್ ಫೈನಾನ್ಸ್ ಸಂಸ್ಥೆ
ಕುಟುಂಬದ ಮನೆಯನ್ನು ಸೀಜ್ ಮಾಡಿರುವ ಎಎಮ್​ಒಎಮ್ ಫೈನಾನ್ಸ್ ಸಂಸ್ಥೆ