Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಹಣಕಾಸಿನ ವಿಚಾರದಲ್ಲಿ ಧಾರಾಳತನ ಒಳ್ಳೆಯದಲ್ಲ

13 ಮಾರ್ಚ್​​​ 2025: ಗುರುವಾರದಂದು ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ಕಾರ್ಯದ ಒತ್ತಡದಿಂದ ನೀವು ವಿಶ್ರಾಂತಿಯನ್ನು ಪಡೆಯುವುದು ಕಷ್ಟವಾದೀತು. ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹಿನ್ನಡೆಯಾಗುವುದು. ಹಾಗಾದರೆ ಮಾರ್ಚ್ 13ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Horoscope: ಹಣಕಾಸಿನ ವಿಚಾರದಲ್ಲಿ ಧಾರಾಳತನ ಒಳ್ಳೆಯದಲ್ಲ
ಹಣಕಾಸಿನ ವಿಚಾರದಲ್ಲಿ ಧಾರಾಳತನ ಒಳ್ಳೆಯದಲ್ಲ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Mar 13, 2025 | 12:12 AM

ಬೆಂಗಳೂರು, ಮಾರ್ಚ್​ 13: ನಿತ್ಯ ಪಂಚಾಗ: ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಸೌರ ಮಾಸ : ಕುಂಭ ಮಾಸ, ಮಹಾನಕ್ಷತ್ರ : ಪೂರ್ವಾಭಾದ್ರಾ, ಮಾಸ : ಫಾಲ್ಗುಣ, ಪಕ್ಷ : ಶುಕ್ಲ, ವಾರ : ಗುರು, ತಿಥಿ : ಚತುರ್ದಶೀ, ನಿತ್ಯನಕ್ಷತ್ರ : ಪೂರ್ವಾಫಲ್ಗುಣೀ, ಯೋಗ : ಧೃತಿ, ಕರಣ : ವಣಿಜ, ಸೂರ್ಯೋದಯ – 06 – 42 am, ಸೂರ್ಯಾಸ್ತ – 06 – 41 pm, ಇಂದಿನ ಶುಭಾಶುಭಕಾಲ : ರಾಹು ಕಾಲ 14:12 – 15:42, ಯಮಘಂಡ ಕಾಲ 06:43 – 08:13, ಗುಳಿಕ ಕಾಲ 09:42 – 11:12.

ತುಲಾ ರಾಶಿ: ಧನಾತ್ಮಕವಾಗಿ ಆಲೋಚಿಸಿ ಕಾರ್ಯದಲ್ಲಿ ಮುಂದುವಿರಿ. ಹಣಕಾಸಿನ ವಿಚಾರದಲ್ಲಿ ಧಾರಾಳತನ ಒಳ್ಳೆಯದಲ್ಲ. ಆಪತ್ಕಾಲಕ್ಕೆ ಬೇಕಾದ ಹಣವನ್ನು ತೆಗೆದಿರಿಸುವಿರಿ‌. ಸ್ತ್ರೀಯರು ಆಭರಣಗಳನ್ನು ಜತನದಿಂದ ಇರಿಕೊಳ್ಳಿ. ಸಂಬಂಧದಲ್ಲಿ ಸ್ನೇಹಭಾವವನ್ನು ಕಾಪಾಡಿಕೊಳ್ಳಿ. ಕೆಲವು ಕಾರಣಗಳಿಗಾಗಿ ನೀವು ವ್ಯಾಪಾರದ ಮೇಲೆ ಗಮನ ಆಗದು. ಅತಿಯಾದ ಕೆಲಸದ ಕಾರಣದಿಂದಾಗಿ ಸಂಗಾತಿಯ ಜೊತೆ ಸಮಯವನ್ನು ನೀಡಲು ಸಾಧ್ಯವಾಗದು. ಚರಾಸ್ತಿಯು ಅನ್ಯರ ಪಾಲಾಗಬಹುದು. ಅವಶ್ಯಕ ವಸ್ತುಗಳನ್ನು ನೀವು ಕಳೆದುಕೊಳ್ಳುವಿರಿ‌. ಇನ್ನೊಬ್ಬರನ್ನು ನೋಡಿ ಕಲಿಯುವ ವಿಚಾರವು ಸಾಕಷ್ಟಿರಬಹುದು. ಸಾಲ ಪಡೆದರವರ ಹುಡುಕಾಟವನ್ನು ಮಾಡುವಿರಿ. ಶ್ರಮವಹಿಸಿದಷ್ಟು ಫಲವು ಸಿಗಲಿಲ್ಲ ಎಂಬ ಬೇಸರವಿದ್ದರೂ ತಕ್ಕಮಟ್ಟಿನ ಖುಷಿಯು ಇರಲಿದೆ. ಪುರುಷ ಪ್ರಯತ್ನವು ಹೆಚ್ಚಿರಬೇಕಾಗುವುದು. ತಪ್ಪನ್ನು ಸಮರ್ಥಿಸಿ ಒಪ್ಪಿಕೊಳ್ಳುವುದು ಬೇಡ. ಇನ್ನೊಬ್ಬರಿಗೆ ನೋವಾದೀತು. ಹೇಳಬೇಕಾದ್ದನ್ನು ಹೇಳದೇ ‌ಮನಸ್ಸಿನಲ್ಲಿಯೇ ಮಂಡಿಗೆ ತಿನ್ನುವಿರಿ.

ವೃಶ್ಚಿಕ ರಾಶಿ: ಎಲ್ಲವೂ ಇದ್ದೂ ವಿವಾಹವಾಗುತ್ತಿಲ್ಲ ಎಂಬ ಕೊರಗು ಮನೆಯಲ್ಲಿ ಕೇಳಿಸುವುದು. ಇಂದು ಸಂಗಾತಿಯ ಮಾತನ್ನು ಕೇಳಿ ಮುಂದುವರಿಯಲಾರಿರಿ. ದೈವಭಕ್ತಿಯನ್ನು ಬೆಳೆಸಿಕೊಂಡು ನಿಮ್ಮ ಕರ್ತವ್ಯವನ್ನು ಮಾಡುವುದು ಉಚಿತ. ಕೃಷಿಯ ವ್ಯಾಪಾರದಲ್ಲಿ ಹಿನ್ನಡೆಯನ್ನು ಕಾಣಬೇಕಾಗುವುದು. ಪ್ರತಿಫಲದ ನಿರೀಕ್ಷೆ ಇಲ್ಲದೇ ನೀವು ಸ್ನೇಹಿತನಿಗೆ ಸಹಾಯವನ್ನು ಮಾಡುವಿರಿ. ನಿರ್ದಿಷ್ಟ ಕ್ರಮವನ್ನು ಅಳವಡಿಸಿಕೊಂಡು ಉದ್ಯಮವನ್ನು ಕ್ರಮಬದ್ಧವಾಗಿಸಿ. ಆರೋಗ್ಯದ ಸಮಸ್ಯೆಯಿರುವ ಕಾರಣ ಸಹೋದ್ಯೋಗಿಗಳ‌ ಸಹಕಾರವು ನಿಮಗೆ ಸಿಗಲಿದೆ. ನಿಮ್ಮ ಯೋಜನೆಯ ಅಂದಾಜು ಮೊತ್ತವನ್ನು ದಾಟಿ ಹೋಗಲಿದೆ. ಮಾತಿನಿಂದ ಇನ್ನೊಬ್ಬರು ನಿಮ್ಮನ್ನು ದ್ವೇಷಿಸುವರು. ಸಾಧಿಸುವ ವಿಧಾನವವನ್ನು ಹೇಳಿಕೊಳ್ಳುವುದು ಬೇಡ.‌ ವಾಹನ ಚಾಲನೆಗೆ ಅತ್ಯುತ್ಸಾಹವಿದ್ದರೂ ಎಚ್ಚರಿಕೆಯನ್ನು ಹೆಚ್ಚು ಇಟ್ಟುಕೊಳ್ಳುವುದು ಮುಖ್ಯ. ಖಾಸಗಿ ಸಂಸ್ಥೆಯು ನಿಮ್ಮನ್ನು ಉನ್ನತಸ್ಥಾನಕ್ಕೆ ಏರಿಸಬಹುದು‌. ವಿದೇಶೀಯ ಹಣವನ್ನು ಪಡೆದುಕೊಳ್ಳುವಾಗ ಎಚ್ಚರ. ವಹಿಸಿಕೊಂಡ ಕಾಮಗಾರಿಯನ್ನು ಮುಗಿಸುವಿರಿ.

ಧನು ರಾಶಿ: ಇಂದು ನಿಮ್ಮ ಕೆಲಸಕ್ಕೆ ಇತರರ ಹಸ್ತಕ್ಷೇಪವು ಇರಲಿದ್ದು ಅದನ್ನು ಸಹಿಸುವುದು ಆಗದು. ನಿಮ್ಮ ಸ್ವಾಭಿಮಾನವನ್ನು ಎಲ್ಲ ಕಡೆಗಳಲ್ಲಿ ಪ್ರದರ್ಶಿಸಿ ತೊಂದರೆಗೆ ಸಿಕ್ಕಿಕೊಳ್ಳುವಿರಿ. ನಿಮ್ಮ ಕೆಲಸದಲ್ಲಿ ಹಸ್ತಕ್ಷೇಪ ಮಾಡಬಹುದು. ಅಂತಹ ಜನರ ಸಂಪರ್ಕವನ್ನು ಮಾಡದಿರುವುದು ಉತ್ತಮ. ಆಸ್ತಿಗೆ ಸಂಬಂಧಿಸಿದ ವ್ಯವಹಾರದಲ್ಲಿ ಹೆಚ್ಚಿನ ಎಚ್ಚರಿಕೆ ಅಗತ್ಯ. ಕಬ್ಬಿಣ ಮುಂತಾದ ವ್ಯಾಪಾರವನ್ನು ಮಾಡುವವರಿಗೆ ಆದಾಯವು ಹೆಚ್ಚಾಗುವುದು. ಮಕ್ಕಳ ಶ್ರಮದಿಂದ ಪಾಲಕರಿಗೆ ನೆಮ್ಮದಿ ಇರಲಿದೆ. ವಿದ್ಯಾರ್ಥಿಗಳಿಗೆ ಬೆಂಬಲದ ಕೊರತೆ ಇರುವುದು. ಹಣಕಾಸಿನ ವ್ಯವಹಾರದ ಪ್ರತಿನಿಧಿಗಳು ಅಂದುಕೊಂಡ ಕೆಲಸವನ್ನು ಸಾಧಿಸಿಕೊಳ್ಳುವರು. ಹಿರಿಯರ ಆರೋಗ್ಯದಲ್ಲಿ ವ್ಯತ್ಯಸಾವಾಗಿದ್ದು ತುರ್ತು ಚಿಕಿತ್ಸೆಯ ಅವಶ್ಯಕತೆ ಇರಲಿದೆ. ಹಲವು ದಿನಗಳ ನಿಮ್ಮ ಋಣವು ಮುಕ್ತಾಯವಾಗಿದ್ದು ಸಂತಸದ ವಿಚಾರವಾಗಿದೆ. ಸಣ್ಣ ವ್ಯಾಪರಿಗಳಿಗೆ ಉತ್ತಮ ಲಾಭವಿರಲುದೆ. ಇಂದು ನಿಮ್ಮ ಕಾರ್ಯಗಳನ್ನು ಇನ್ನೊಬ್ಬರು ಮಾಡಬಹುದು.

ಮಕರ ರಾಶಿ: ನಿಮ್ಮ ದ್ವಂದ್ವ ಯೋಚನೆಯಿಂದ ಇಂದು ನಿಮ್ಮ‌ ಕೆಲಸಗಳು ಹಾದಿ ತಪ್ಪಬಹುದು.‌ ಕಾರ್ಯದ ಕಾರಣ ಸಂಭ್ರಮವನ್ನು ಕಳೆದುಕೊಳ್ಳಬೇಕಾಗುವುದು. ನಿಮಗಾದ ಮಾನಹಾನಿಯನ್ನು ಹೇಗಾದರೂ ಹೊರಹಾಕುವಿರಿ. ಮನೆಯ ಸದಸ್ಯರ ವಿವಾಹದಲ್ಲಿ ವಿವಾಹದಲ್ಲಿ ಸಂಭವಿಸಬಹುದು. ಇಂದು ವ್ಯಾಪಾರದಲ್ಲಿ ಹೆಚ್ಚಿನ ತೊಡಗಿಸಿಕೊಳ್ಳುವಿರಿ. ಶಿಕ್ಷಕವೃತ್ತಿಯವರು ಉನ್ನತ ಸ್ಥಾನದ ನಿರೀಕ್ಷೆಯಲ್ಲಿ ಇರುವರು. ಖಾಸಗಿ ಸಂಸ್ಥೆಯ ಹುದ್ದೆಯನ್ನು ನೀವು ಪಡೆಯಲಿದ್ದೀರಿ. ವಿದ್ಯಾರ್ಥಿಗಳು ಪ್ರತಿಕ್ಷಣವನ್ನು ಸದುಪಯೋಗ ಮಾಡಿಕೊಳ್ಳುವ ಬಗ್ಗೆ ಯೋಚಿಸುವುದು ಉತ್ತಮ. ಧಾರ್ಮಿಕ‌ಚಿಂತನೆಗಳು ನಿಮ್ಮ ಮನಸ್ಸಿನಲ್ಲಿ ಓಡಬಹುದು. ಒಗ್ಗಟ್ಟಿನಿಂದ ಕಾರ್ಯವನ್ನು ಸಾಧಿಸುವುದು ಇಂದಿನ ಅಗತ್ಯವೂ ಇದೆ. ಆದಾಯವು ಕುಗ್ಗಬಹುದು. ತಂದೆ ಹಾಗೂ ತಾಯಿಯರ ಜೊತೆ ಬಹಳ ದಿನಗಳ ಅನಂತರ ಹರಟೆ ಹೊಡೆಯುವಿರಿ. ತೀರ್ಥಕ್ಷೇತ್ರಗಳ ದರ್ಶನವನ್ನು ಮಕ್ಕಳ ಜೊತೆ ಮಾಡುವಿರಿ.

ಕುಂಭ ರಾಶಿ: ಶತ್ರುಗಳು ನಿಮ್ಮ ಬಗ್ಗೆ ತಿಳಿದುಕೊಳ್ಳಲು ಇಚ್ಛಿಸುವರು. ಕಳೆದುಕೊಂಡ ವಸ್ತುವಿನ ಚಿಂತೆಯನ್ನು ನೀವು ಬಿಡುವುದು ಕಷ್ಟವಾದೀತು. ಅನಗತ್ಯ ಖರ್ಚುಗಳು ಒಂದಾದಮೇಲೆ ಒಂದು ಬರಲಿದ್ದು ಕಷ್ಟವಾದೀತು. ಚಂಚಲವಾದ ಸಮಯದಲ್ಲಿ ತಾಳ್ಮೆ ಮತ್ತು ಸಂಯಮವನ್ನು ಕಾಪಾಡಿಕೊಳ್ಳಬೇಕು. ನಿಮ್ಮ ಕುಟುಂಬದ ಬಗ್ಗೆ ಹೆಚ್ಚು ಗಮನ ಹರಿಸಲು ನಿಮಗೆ ಸಾಧ್ಯವಾಗುವುದಿಲ್ಲ ನಿಮ್ಮ ವ್ಯಾಪಾರಕ್ಕೆ ವಿದೇಶದ ಸಂಪರ್ಕವು ಬರಬಹುದು. ಮನೆಯಲ್ಲಿ ನಡೆದು ಶುಭಕಾರ್ಯದ ತಯಾರಿಯಲ್ಲಿ ನೀವು ಇರುವಿರಿ. ಆಸ್ತಿಯ ವಿಚಾರದಲ್ಲಿ ನಿಮ್ಮ ನಿಲುವಿಗೆ ಅಪಜಯವಾಗಬಹುದು. ಔಷಧಗಳ ವ್ಯತ್ಯಾಸದಿಂದ ಮತ್ತೇನಾದರೂ ಆದೀತು. ಇಂದು ನೀವು ಸಂಗಾತಿಯ ಮಾತನ್ನೇ ಹೆಚ್ಚು ಕೇಳಬೇಕಾದೀತು. ಬಂಧುಗಳ ಒಡನಾಟವು ಹಿತವೆನಿಸುವುದು. ಸ್ನೇಹಿತರಿಗೋಸ್ಕರ ನೀವು ಹಣವನ್ನು ಖರ್ಚು ಮಾಡಬೇಕಾದೀತು. ನಿಮ್ಮ‌ ವಸ್ತುಗಳನ್ನು ದುರುಪಯೋಗ ಮಾಡಿಕೊಳ್ಳುವಿರಿ. ಪ್ರೀತಿಯಿಂದ ಸಿಗುವುದು.

ಮೀನ ರಾಶಿ: ದೈವದತ್ತವಾದ ವಿಶೇಷತೆಗಳನ್ನು ಕಳೆದುಕೊಳ್ಳುವುದು ಬೇಡ.‌ ರೂಢಿಸಿಕೊಳ್ಳಲು ಪ್ರಯತ್ನಿಸಿ. ಆರ್ಥಿಕ ಸ್ಥಿತಿಯು ಚೇತರಿಕೆಯಾಗಬಹುದು. ಕಾರ್ಯದ ಒತ್ತಡದಿಂದ ನೀವು ವಿಶ್ರಾಂತಿಯನ್ನು ಪಡೆಯುವುದು ಕಷ್ಟವಾದೀತು. ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹಿನ್ನಡೆಯಾಗುವುದು. ವ್ಯಾಪಾರ ಚಟುವಟಿಕೆಗಳನ್ನು ಸುಧಾರಿಸಬಹುದು. ಹಿರಿಯರ ವಿಚಾರಕ್ಕೆ ದಾಂಪತ್ಯದ ನಡುವೆ ಕೆಲವು ವಿವಾದಗಳು ಉಂಟಾಗಬಹುದು. ಶತ್ರುಗಳು ಅನ್ಯ ಕಾರ್ಯದಲ್ಲಿ ತೊಡಗಿರುವ ಕಾರಣ ನಿಮಗೆ ಬಾಧೆ ಇರದು. ಇಂದಿನ‌ ಬಹುಪಾಲು ಸಮಯವನ್ನು ಅನ್ಯ ಚಿಂತನೆಯಲ್ಲಿ ಕಳೆಯುವಿರಿ.‌ ಕಲಾವಿದರಿಗೆ ಅವಕಾಶದ ದೊಡ್ಡ ಬಾಗಿಲು ತೆರೆದುಕೊಳ್ಳಬಹುದು. ಎದುರಿಸಬಹುದಾದ ಸಮಸ್ಯೆಯನ್ನು ಧೈರ್ಯದಿಂದ ಮುನ್ನುಗ್ಗಿ. ಇಂದು ನಿಮಗೆ ಕೆಲಸವು ಆಗಬೇಕಾಗಿದ್ದು ಪ್ರಯಾಣವು ಅನಿವಾರ್ಯವಾಗುವುದು. ಒಂದೇ ಸಾರಿ ಖರ್ಚಿನ ಎಲ್ಲ ಅವಕಾಶಗಳನ್ನು ಇಟ್ಟುಕೊಳ್ಳಬೇಡಿ. ನಿಮ್ಮ ಮಾತು ಇನ್ನೊಬ್ಬರಿಗೆ ಸಿಟ್ಟು ಬರುವಂತೆ ಇರವುದು. ಬಂಧುಗಳ‌ ಮನೊಲಿಸುವುದು ವ್ಯರ್ಥವೆನಿಸಬಹುದು.

ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ಹೋರಿ ಹಬ್ಬ ಅವಳಿಗೆ ಪಂಚಪ್ರಾಣ: ಕೊಲೆಯಾದ ಸ್ವಾತಿ ನೆನೆದು ಗೆಳತಿ ಕಣ್ಣೀರು
ಹೋರಿ ಹಬ್ಬ ಅವಳಿಗೆ ಪಂಚಪ್ರಾಣ: ಕೊಲೆಯಾದ ಸ್ವಾತಿ ನೆನೆದು ಗೆಳತಿ ಕಣ್ಣೀರು
ಚಕ್ರಗಳನ್ನು ಕದಿಯಲು ಕಳ್ಳರು ಬಂದಿದ್ದು ಇನ್ನೋವಾ ಕಾರಲ್ಲಂತೆ!
ಚಕ್ರಗಳನ್ನು ಕದಿಯಲು ಕಳ್ಳರು ಬಂದಿದ್ದು ಇನ್ನೋವಾ ಕಾರಲ್ಲಂತೆ!