AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today 03 December : ಇಂದು ಈ ರಾಶಿಯವರ ದೂರದ ಪ್ರಯಾಣ ಫಲದಾಯಕ, ಸಂತೋಷ

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಮಾರ್ಗಶೀರ್ಷ ಮಾಸ ಶುಕ್ಲ ಪಕ್ಷದ ತ್ರಯೋದಶೀ ತಿಥಿ ಬುಧವಾರ ಹೂಡಿಕೆಯಲ್ಲಿ ಅಸಮಾಧಾನ, ವಿದ್ಯಾಭ್ಯಾಸ, ಹಗುರ ಮಾತು, ಹೊಸ ಆರಂಭ, ವಿರೋಧ, ಅಜಾಗರೂಕತೆ ಇವೆಲ್ಲ ಇಂದಿನ ವಿಶೇಷ. ಇಂದು ನೀವು ಎದುರಿಸಬಹುದಾದ ಸವಾಲುಗಳು ಮತ್ತು ಅದಕ್ಕೆ ಪರಿಹಾರಗಳ ಬಗ್ಗೆ ಜ್ಯೋತಿಷ್ಯ ಸಲಹೆಗಳನ್ನು ಪಡೆಯಿರಿ.

Horoscope Today 03 December : ಇಂದು ಈ ರಾಶಿಯವರ ದೂರದ ಪ್ರಯಾಣ ಫಲದಾಯಕ, ಸಂತೋಷ
ದಿನ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಅಕ್ಷತಾ ವರ್ಕಾಡಿ|

Updated on: Dec 03, 2025 | 12:38 AM

Share

ಮೇಷ ರಾಶಿ:

ಒಳ್ಳೆಯ ಮಾತುಗಳಿಂದ ಸಮಸ್ಯೆ ಪರಿಹಾರ. ಶಾಂತ ಮನಸ್ಸೇ ನಿಮ್ಮ ಮಹದ್ಬಲ. ಯಾವುದಾದರೂ ತೊಂದರೆಗೆ ನೀವೇ ಕಾರಣವೆಂದು ಪಶ್ಚಾತ್ತಾಪವಾಗಲಿದೆ. ಆತ್ಮೀಯರ ಜೊತೆ ಇದ್ದು ಹಣವನ್ನು ಖರ್ಚು ಮಾಡುವಿರಿ. ಆಸ್ತಿಯ ವಿಚಾರದಲ್ಲಿ ನಿಮಗೆ ಕೆಲವು ಸಮಸ್ಯೆಗಳು ಎದುರಾಗಬಹುದು. ಮಕ್ಕಳ‌ ಮೇಲೆ ನಿಮಗೆ ಅತಿಯಾದ ಮೋಹ ಬೇಡ. ಸಮಾರಂಭಗಳಲ್ಲಿ ಮುಖ್ಯಸ್ಥರಾಗಬಹುದು. ವಿದ್ಯಾಭ್ಯಾಸದ ವಿಚಾರದಲ್ಲಿ ಯಾವ ಸಡಿಲಿಕೆಯನ್ನೂ ಮಾಡಿಕೊಳ್ಳದಿರಿ. ದಾಂಪತ್ಯದಲ್ಲಿ ನೀವು ಸಂತೋಷವಾಗಿರುವಿರಿ. ಹತ್ತಿರದ ಆಪ್ತ ಬಂಧುಗಳನ್ನು ಕಳೆದುಕೊಳ್ಳುವಿರಿ. ಉದ್ಯಮಕ್ಕೆ ಸಂಬಂಧಿಸಿದಂತೆ ಆಪ್ತ ಸಮಾಲೋಚನೆ ಮಾಡುವಿರಿ. ಪಾಲುದಾರಿಕೆಯಲ್ಲಿ ಸೂಕ್ತ ವ್ಯಕ್ತಿಗಳನ್ನು ಆಯ್ಕೆ ಮಾಡಿಕೊಳ್ಳಿ. ಮನೆಯಲ್ಲಿಯೇ ಶಾಂತಿ, ಆಧ್ಯಾತ್ಮಿಕ ಚಿಂತನೆಗೆ ಸಕಾಲ. ಉದ್ಯೋಗದ ಸ್ಥಳದಲ್ಲಿ ನಿಮ್ಮ ಯಾರದೋ ತಪ್ಪು ನಿಮ್ಮ ತಲೆಯ ಮೇಲೆ ಬರಬಹುದು. ಮಾತು ಅಲ್ಪವಾಗಿದ್ದರೂ ಯೋಗ್ಯವಾದ ಮಾತುಗಳನ್ನು ಆಡುವಿರಿ. ಸಂಗಾತಿಯಿಂದ ಆಗುವ ಸಣ್ಣ ತಪ್ಪನ್ನು ಕ್ಷಮಿಸಿ.

ವೃಷಭ ರಾಶಿ:

ಕಾರ್ಯದಲ್ಲಿ ತುರ್ತು ನಿರ್ಧಾರಗಳು ಒಳ್ಳೆಯ ಫಲ ನೀಡಬಹುದು. ನಿಮ್ಮ ಸ್ವತಂತ್ರ ಯೋಚನೆ ನಿಮಗೆ ಲಾಭ. ಅಧಿಕಾರಿಗಳ ಒತ್ತಡವೇ ನಿಮ್ಮ ಉದ್ವೇಗಕ್ಕೆ ಕಾರಣವಾಗಲಿದೆ. ಇಂದು ನಿಮಗೆ ಯಾರ ಸಹಾನುಭೂತಿಯೂ ಬೇಡವಾಗಬಹುದು. ಅನಿರೀಕ್ಷಿತ ಬಂಧುಗಳ ಆಗಮನದಿಂದ ಕೊಂಚ ಗಲಿಬಿಲಿ ಆಗುವುದು. ಚಂಚಲ ಮನಸ್ಸನ್ನು ನೀವು ನಿಯಂತ್ರಿಸಲು ಆಗದು. ಇದರಿಂದ ತೀರ್ಮಾನ ಸರಿಯಾಗಿ ತೆಗೆದುಕೊಳ್ಳಲಾಗದು. ಪ್ರಯಾಣದಿಂದ ನಿಮ್ಮ ದೇಹಸ್ಥಿತಿ ಬದಲಾಗಬಹುದು. ಕಛೇರಿಯಲ್ಲಿ ಅಸಮಾಧಾನವಿರಲಿದ್ದು, ನೆಮ್ಮದಿಯಿಂದ ಕೆಲಸ ಮಾಡಲು ಆಗದು. ಉನ್ನತ ಅಧಿಕಾರಿಗಳ ಜೊತೆ ಸೆಣೆಸಾಡುವ ಸ್ಥಿತಿಯು ಬರಬಹುದು. ಸ್ನೇಹಿತರ ಸಹಕಾರ ಲಭ್ಯ. ದಿನದ ಕೊನೆಯಲ್ಲಿ ಸಂತೃಪ್ತಿ. ಇಂದಿನ‌ ನಿವು ಬಹಳ ಒತ್ತಡದಲ್ಲಿ ಇರುವಂತೆ ತೋರುವಿರಿ. ಅರಿವಿಲ್ಲದೇ ನೀವು ತಪ್ಪು ದಾರಿಗೆ ಹೋಗುವಿರಿ.‌ ನಿಮ್ಮ ಬಳಿ ಹಣವಿದ್ದರೂ ಸರಿಯಾದ ಸಮಯಕ್ಕೆ ಸಿಗದು. ನಿಮ್ಮ ಅಸಹಜ ಸ್ವಭಾವವನ್ನು ಸರಿಮಾಡಿಕೊಳ್ಳುವುದು ಮುಖ್ಯ.

ಮಿಥುನ ರಾಶಿ:

ಕುಟುಂಬದ ಹಿರಿಯರಿಂದ ಶುಭಸೂಚನೆ. ದಿನದ ಮಧ್ಯದಲ್ಲಿ ನೆಮ್ಮದಿ. ನಿಮ್ಮ ಕಟ್ಟುನಿಟ್ಟಾದ ಶಿಸ್ತೇ ನಿಮ್ಮ ಬಲ. ಅನೇಕ ವಿಚಾರಗಳ ಕಡೆ ನಿಮ್ಮ ಗಮನವಿರುವುದು. ಹಾಗಾಗಿ ಇಂದಿನ ಕಾರ್ಯವು ಸಫಲವಾಗದು. ಉದ್ಯೋಗವನ್ನು ಬದಲಿಸುವ ಆಲೋಚನೆ ಮಾಡುವಿರಿ. ಪಾಲುದಾರಿಕೆಯಲ್ಲಿ ಅನ್ಯೋನ್ಯತೆ ಕಂಡುಬರುವುದು. ನೀವು ಮಾಡಬೇಕಂದುಕೊಂಡ ಕಾರ್ಯದಲ್ಲಿ ಜಯವಿರುವುದು. ಸ್ತ್ರೀಯರಿಂದ ಕಛೇರಿಯಲ್ಲಿ ಸಹಕಾರವು ಸಿಗಲಿದೆ. ಭೂಮಿಯ ಬಗ್ಗೆ ಆಸೆ ಕಡಿಮೆ ಆಗಬಹುದು. ಧಾರ್ಮಿಕ ಕಾರ್ಯದಲ್ಲಿ ಹೆಚ್ಚು ಮಗ್ನರಾಗುವಿರಿ. ನಿಮ್ಮ ಬಂಧುಗಳ ನಡುವೆ ವಿವಾಹ ಸಂಬಂಧವು ಆಗಲಿದೆ. ತಂದೆಯ ಆರೋಗ್ಯವನ್ನು ಸರಿಪಡಿಸಲು ಹೆಚ್ಚು ಜವಾಬ್ದಾರಿಯನ್ನು ಹೊರಬೇಕಾದೀತು. ಮನಸ್ಸಿಗೆ ನೆಮ್ಮದಿ ಸಿಗುವ ಜಾಗಕ್ಕೆ ಹೋಗುವಿರಿ. ಶ್ರಮಕ್ಕೆ ಸರಿಯಾದ ಫಲ ದೊರೆಯುತ್ತದೆ. ಕೆಲಸದಲ್ಲಿ ಜವಾಬ್ದಾರಿ ಹೆಚ್ಚಾದರೂ ಅದೇ ಗೌರವ ತರುತ್ತದೆ. ಆಸ್ತಿಯಲ್ಲಿ ಪಾಲನ್ನು ಕೇಳುವ ಸ್ಥಿತಿ ಬರಬಹುದು. ನಿಮಗೆ ಸಿಕ್ಕ ಮೆಚ್ಚುಗೆಯನ್ನು ನೀವು ಸಂಕೋಚದಿಂದ ಸ್ವೀಕರಿಸುವಿರಿ.

ಕರ್ಕಾಟಕ ರಾಶಿ:

ಗುರಿಯ ಕಡೆ ಸಾಗುವಲ್ಲಿ ಬೆಂಬಲ ದೊರೆತೀತು. ಚೈತನ್ಯ, ಧೈರ್ಯ ಹೆಚ್ಚಾಗಿ ಕಾರ್ಯಸಿದ್ಧಿ. ಶುಭಸಂದೇಶ ಸಾಧ್ಯತೆ. ಅನ್ವೇಷಣೆಯ ಮನಃಸ್ಥಿತಿಯವರಿಗೆ ಯಾವುದಾದರೂ ಮಾರ್ಗವು ಸಿಗುವುದು. ರಾಜಕೀಯ ಪರಿವರ್ತನೆಯು ನಿಮ್ಮಲ್ಲಿ ಅಚ್ಚರಿ ತಂದೀತು. ತಾಯಿಯ ಬಂಧುಗಳು ನಿಮಗೆ ಸಹಕಾರವನ್ನೂ ಕೊಡುವರು. ಇಂದು ನೀವು ಸಮಾನ್ಯಾರಂತೆ ತೋರುವಿರಿ. ನಿಮ್ಮ ರಹಸ್ಯ ವಿಚಾರವನ್ನು ಆಪ್ತರಿಗೆ ಹೇಳುವಿರಿ. ಸಿಟ್ಟು ನಿಮ್ಮ ಆರೋಗ್ಯವನ್ನು ಕೆಡಿಸುವುದು. ಬಾಡಿಗೆ ಮನೆಯವರು ಮನೆಯನ್ನು ಬದಲಾಯಿಸುವರು. ಭೂವ್ಯವಹಾರವನ್ನು ಮಾಡುವವರಿಗೆ ಇಂದು ಅಧಿಕ ಲಾಭವು ಆಗುವುದು. ಸಂಚಾರ, ಅಧ್ಯಯನ ಮತ್ತು ಜ್ಞಾನಕ್ಕೆ ಶುಭದಿನ. ಹೊಸ ಪರಿಚಯಗಳು ಮುಂದಿನ ಅವಕಾಶಗಳಿಗೆ ದಾರಿ ತೋರಬಹುದು. ಕಡಿಮೆಯಾಗುತ್ತಿದ್ದ ಆರೋಗ್ಯದಿಂದ ಸಮಾಧಾನ‌ ಸಿಗಲಿದೆ. ನಿಮ್ಮನ್ನು ತಿಳಿದವರೇ ನಿಮಗೆ ವಂಚನೆ ಮಾಡುವರು. ಮನೆಯ ಕೆಲಸದಲ್ಲಿ ಇಂದು ಆಸಕ್ತಿ ಕಡಿಮೆ ಆಗುವುದು. ನಿಮ್ಮ ಬಗ್ಗೆಯೇ ನಿಮಗೆ ಕೀಳು ಅರಿಮೆ ಬೇಡ.‌ ತಪ್ಪಿಲ್ಲದೇ ಹೆದರುವ ಅವಶ್ಯಕತೆ ಇರದು.

ಸಿಂಹ ರಾಶಿ:

ಆಕಸ್ಮಿಕ ಲಾಭ ಅಥವಾ ಶುಭಸುದ್ದಿಯ ಸೂಚನೆ. ನಿರ್ಧಾರಗಳಲ್ಲಿ ಅಂತರ್ದೃಷ್ಟಿ ಬಲವಾಗಿ ಸಹಾಯಕರ. ಮನಸ್ಸಿಗೆ ಆತ್ಮವಿಶ್ವಾಸ ಹೆಚ್ಚುವುದು. ಸಂಗಾತಿಯ ಮನೋಭಾವವನ್ನು ನೀವು ಅರ್ಥಮಾಡಿಕೊಳ್ಳಲಾರಿರಿ. ಸಹೋದರಿಯರ ಭೇಟಿಯು ನಿಮಗೆ ಸಂತೋಷ ಕೊಡುವುದು. ಸಾಲಬಾಧೆಯಿಂದ ನಿಮಗೆ ಬಹಳ ತೊಂದರೆ ಆಗುವ ಸಾಧ್ಯತೆ ಇದೆ.‌ ಛಲವು ನಿಮಗೆ ಪರಿವರ್ತನೆಯನ್ನು ಕೊಡಿಸುವುದು. ನಿಮಗೆ ಯಾರಿಂದಲಾದರೂ ಸಹಾಯ ಕೇಳಲು ಸಂಕೋಚವಾದೀತು. ವ್ಯಾಪಾರದ ಕಾರಣಕ್ಕೆ ಪ್ರಯಾಣವನ್ನು ಮಾಡುವಿರಿ. ಇಂದು ನೀವು ಒತ್ತಡವನ್ನು ತಂದುಕೊಳ್ಳಬಾರದು ಎಂದು ಅಂದುಕೊಂಡಿದ್ದರೂ ಸಂದರ್ಭವು ಅದೇ ರೀತಿ ಸೃಷ್ಟಿಯಾಗಬಹುದು. ಗಾಢ ಚಿಂತನೆಗಳು ನಿಖರ ಫಲ ನೀಡುವ ಸಮಯ. ರಹಸ್ಯವಾಗಿ ಮಾಡುತ್ತಿದ್ದ ಕೆಲಸ ಯಶಸ್ಸಿನ ದಿಕ್ಕಿನಲ್ಲಿ ಸಾಗುತ್ತದೆ. ನಿಮ್ಮ ಕಾರ್ಮಿಕರು ನಿಮ್ಮ ಕಾರ್ಯವನ್ನು ಸರಿಯಾಗಿ ಮಾಡದೇ ಇರಬಹುದು. ಸ್ವಂತ ವಾಹನದ ದುರಸ್ತಿಗೆ ಖರ್ಚಾಗಬಹುದು.

ಕನ್ಯಾ ರಾಶಿ:

ಮನಸ್ಸಿಗೆ ಶಾಂತಿ ಕೊಡುವ ಕಾರ್ಯಗಳನ್ನು ಅಧಿಕವಾಗಿ ಮಾಡುವಿರಿ. ಕಲಾತ್ಮಕ ಆಲೋಚನೆ ಯಶಸ್ಸಿಗೆ ದಾರಿ ತೋರಬಹುದು. ಸಂಬಂಧಗಳು ಸಂಬಂಧಗಳಾಗಿಯೇ ಇರಲಿ. ವ್ಯವಹಾರಕ್ಕೆ ಜೋಡಿಸುವುದು ಬೇಡ‌. ಅಪರಿಚಿತರ ಜೊತೆ ಸ್ವಲ್ಪ ಹದವಾಗಿ ವರ್ತಿಸಿ. ಮಕ್ಕಳು ವಿದ್ಯಾಭ್ಯಾಸದಲ್ಲಿ ಹಿನ್ನಡೆಯನ್ನು ಕಂಡು ನಿಮಗೆ ಕಷ್ಟವಾದೀತು. ಸ್ನೇಹಿತರು ಪ್ರೀತಿಯಿಂದ ನಿಮಗೆ ಉಡುಗೊರೆ ಕೊಡುವರು. ತಾಯಿಯ ಪ್ರೀತಿಯು ಇಂದು ನಿಮಗೆ ಹೆಚ್ಚು ಸಿಗಲಿದೆ. ಸಂಗಾತಿಯ ಜೊತೆ ಕಲಹವಾಡಿ ಪಶ್ಚಾತ್ತಾಪಪಡಬೇಕಾದೀತು. ನಿಮ್ಮ ಯೋಜನೆಯನ್ನು ಪೂರ್ಣವಾಗಿ ನಿರ್ವಹಿಸಲು ಸಾಧ್ಯವಾಗದು. ನಿಮ್ಮನ್ನು ಸಮ್ಮಾನಿಸಬಹುದು. ಸಣ್ಣ ವಿಚಾರದಲ್ಲಿ ಇನ್ನೊಬ್ಬರ ಜೊತೆ ಕಲಹ ಬೇಡ. ಹೊಸ ಪರಿಚಯ ಲಾಭದಾಯಕ. ಕುಟುಂಬದ ಸಹಕಾರ ಅಪ್ರತ್ಯಕ್ಷವಾಗಿ ಸಿಗುತ್ತದೆ. ಮಕ್ಕಳ ಜೊತೆ ಇಂದು ಕಾಲವನ್ನು ಕಳೆಯುವುದು ನಿಮಗೆ ಇಷ್ಟವಾದೀತು. ಸಣ್ಣ ವಿಚಾರದಲ್ಲಿ ನಿಮಗೆ ಇನ್ನೊಬ್ಬರ ಜೊತೆ ಕಲಹವಾದೀತು. ಒಳ್ಳೆಯ ಸಮಯವನ್ನು ನೀವು ನಿರೀಕ್ಷಿಸುವಿರಿ.

ತುಲಾ ರಾಶಿ:

ಚಿಂತೆಗಳ ನಿರಾಕರಣೆ, ಯೋಚನೆಗಳಲ್ಲಿ ಸ್ಪಷ್ಟತೆ. ಕೆಲಸಗಳಲ್ಲಿ ನಿಖರತೆ ಮೆಚ್ಚುಗೆ ತರುತ್ತದೆ. ಆರೋಗ್ಯದಲ್ಲಿ ಸ್ವಲ್ಪ ಪ್ರಗತಿ. ಸ್ವತಂತ್ರರಾಗುವ ಬಗ್ಗೆ ಯೋಚನೆ ಬರಲಿ. ಚಾಣಾಕ್ಷತನದಿಂದ ಗಿಟ್ಟಿಸಿಕೊಂಡ ಅಧಿಕಾರವು ಸಮಯಮಿತಿಯಲ್ಲಿ ಇರುತ್ತದೆ. ಮನಸ್ಸನ್ನು ನಿಯಂತ್ರಿಸಲು ದುಶ್ಚಟಕ್ಕೆ ಬೀಳುವಿರಿ. ಮನೆಯಲ್ಲಿ ನೆಮ್ಮದಿಯ ವಾತಾವರಣವು ಹಾಳಾಗಬಹುದು. ಕಲಿಕೆಯ ವಿಚಾರದಲ್ಲಿ ನೀವು ಹಿಂದುಳಿಯುವಿರಿ. ಪ್ರೀತಿಯಿಂದ ನಿಮಗೆ ದುಃಖವಾಗುವ ಸಂದರ್ಭವಿದೆ.‌ ನಿಮ್ಮನ್ನು ನಿಂದಿಸುವವರ ವಿರುದ್ಧ ಅತಿಯಾದ ಕೋಪ ಮಾಡಿಕೊಳ್ಳುವಿರಿ. ಶತ್ರುಗಳೂ ನಿಮಗೆ ಪರೋಕ್ಷವಾಗಿ ಉಪದೇಶ ಕೊಡಬಹುದು. ಹಳೆಯ ಯೋಜನೆಯ ಪುನರುತ್ಥಾನಕ್ಕೆ ಮಾರ್ಗೋಪಾಯ. ದಿನದ ಅಂತ್ಯಕ್ಕೆ ಹೊಸತನ್ನು ಸಾಧಿಸಿದ ನೆಮ್ಮದಿ. ನಿಮ್ಮ ವಿದ್ಯಾರ್ಥಿಗಳಿಂದ ಹೆಚ್ಚಿನ ನಿರೀಕ್ಷೆಯನ್ನು ಇಟ್ಟುಕೊಳ್ಳುವಿರಿ. ನಿಮ್ಮ ಸಮಸ್ಯೆಯು ನಗಣ್ಯವಾಗಿದ್ದರೂ ಅದನ್ನು ದೊಡ್ಡ ಮಾಡಿಕೊಳ್ಳುವಿರಿ. ಆರೋಗ್ಯವು ನಿಮಗೆ ವರವಾಗಿದ್ದರೂ ಕೆಲವು ಸಮಯ ತೊಂದರೆ ಕೊಡುವುದು. ನಿಮ್ಮವರನ್ನು ನೀವು ಸಂಪೂರ್ಣವಾಗಿ ಮರೆಯುವಿರಿ.

ವೃಶ್ಚಿಕ ರಾಶಿ:

ಕೆಲಸದಲ್ಲಿ ನಿಮ್ಮ ನಾಯಕತ್ವ ಗುಣ ಗುರುತಿಸಲ್ಪಡುತ್ತದೆ. ಹೊಸ ಜವಾಬ್ದಾರಿ ಬಂದು ಅದೇ ನಿಮ್ಮ ಗೌರವವನ್ನು ಹೆಚ್ಚಿಸುತ್ತದೆ. ನಿಮ್ಮ ಮಾತುಗಳು ಚಾಣಾಕ್ಷತನದಂತೆ ಇರುವುದು. ನಿಮ್ಮ ಸಾಧನೆಯನ್ನು ಹಂಚಿಕೊಳ್ಳುವಿರಿ‌. ಯೋಗ್ಯ ಪುರಸ್ಕಾರ, ಮಾತುಗಳು ಸಿಗಲಿವೆ. ಆದಾಯಕ್ಕಾಗಿ ಅನ್ಯ ಮಾರ್ಗವನ್ನೂ ನೀವು ಅವಲಂಬಿಸಬಹುದು. ದೇವತಾಕಾರ್ಯದಿಂದ ನಿಮಗೆ ಇಂದಿನ ಎಲ್ಲ ಕಾರ್ಯಗಳೂ ಸುಗಮವಾಗುವುದು. ಆರ್ಥಿಕವಾಗಿ ವಂಚನೆಗೆ ಸಿಲುಕಿದ್ದು ಎಷ್ಟೋ ದಿನದ ಮೇಲೆ ಗೊತ್ತಾಗುವುದು. ನಿಮ್ಮ ಉಪಸ್ಥಿತಿಯನ್ನು ಗೌರವಿಸುವರು. ಮಾತಿನ ಮೇಲೆ ನಿಯಂತ್ರಣವು ತಪ್ಪಬಹುದು. ವಿಳಂಬದ ಕಾರ್ಯದಿಂದ ನೀವು ವ್ಯಥೆ ಪಡುವಿರಿ. ನಿಮಗೆ ಧೈರ್ಯವನ್ನು ತುಂಬಲು ಸಂಗಾತಿಯ ಸಹಾಯವು ಸಿಗುವುದು. ಹಣಕಾಸಿನಲ್ಲಿ ಉತ್ತಮ ಬೆಳಕು. ಉತ್ಸಾಹದೊಂದಿಗೆ ಮುನ್ನಡೆಯುವ ಸಮಯ. ನಿದ್ರಾಹೀನತೆಯಿಂದ ನಿಮಗೆ ಕೆಲವು ತೊಂದರೆಗಳು ಆಗಬಹುದು. ಅನಪೇಕ್ಷಿತ ಖರ್ಚನ್ನು ಮಾಡುವುದು ಬೇಡ. ನಿಮ್ಮನ್ನು ನೀವು ಕುಗ್ಗಿಸಿಕೊಳ್ಳುವುದು ಬೇಡ. ವೃತ್ತಿಯಲ್ಲಿ ಒಂದೇ ಕೆಲಸವನ್ನು ಇಬ್ಬರು ಮಾಡಲು ಹೋಗಿ ವೈಮನಸ್ಯ.

ಧನು ರಾಶಿ:

ಕೆಲಸದಲ್ಲಿ ಮಿತವಾದ ಪ್ರಗತಿ. ಆತ್ಮವಿಶ್ವಾಸ ಹೆಚ್ಚಾಗುವುದರಿಂದ ನೀವು ಗೊಂದಲಗಳನ್ನು ಸುಲಭವಾಗಿ ಮೀರುತ್ತೀರಿ. ಆರೋಗ್ಯದಲ್ಲಿ ಅಲ್ಪ ಸುಧಾರಣೆ. ನೀವೇ ನಿಮ್ಮನ್ನು ಸರಿಮಾಡಿಕೊಳ್ಳುವ ಬಗ್ಗೆ ಯೋಚಿಸಿದರೆ ಉತ್ತಮ. ಕಾನೂನಿನಿಂದ ಜಯಸುವ ಉತ್ಸಾಹವು ಇಂದು ನಿರುತ್ಸಾಹದಲ್ಲಿ ಕೊನೆಯಾಗಲಿದೆ. ಸಂಗಾತಿಯ ಮಾನಸಿಕ ಸ್ಥಿತಿಯು ಬದಲಾಗಬಹುದು. ಹತ್ತಾರು ವಿಚಾರಗಳನ್ನು ನೀವು ಏಕಕಾಲದಲ್ಲಿ ಚಿಂತಿಸಿ ತಲೆಯನ್ನು ಹಾಳು ಮಾಡಿಕೊಳ್ಳುವಿರಿ. ಎಲ್ಲವೂ ವಿಧಿಯಂತೆ ಆಗುತ್ತದೆ ಎಂಬ ಸತ್ಯವನ್ನು ನೀವು ಅರಿತರೂ ದುಃಖಿಸುವಿರಿ. ಮನಸ್ಸಿನಲ್ಲಿ ಮೃದುಭಾವ ಹೆಚ್ಚು, ಕುಟುಂಬದ ಶಾಂತಿ ನಿಮಗೆ ಶಕ್ತಿ. ಸ್ಥಿರಾಸ್ತಿ ಅಥವಾ ಮನೆಯ ವಿಷಯದಲ್ಲಿ ಒಳ್ಳೆಯ ಸುದ್ದಿಯ ಸೂಚನೆ. ನಿಮಗೆ ಬರುವ ವಿವಾಹ ಸಂಬಂಧವನ್ನು ಬೇರೆ ಬೇರೆ ಕಾರಣಗಳನ್ನು ಕೊಟ್ಟು ನಿರಾಕರಿಸುವಿರಿ.‌ ವಾಹನ ಚಾಲನೆಯಲ್ಲಿ ನುರಿತವರಾದರೂ ಎಚ್ಚರಿಕೆಯಿಂದ ಓಡಿಸಿ. ನಿಮ್ಮ ನೇರ ನುಡಿಯಿಂದ ಇನ್ನೊಬ್ಬರಿಗೆ ನೋವಾದೀತು ಎಂಬ ಆಲೋಚನೆ ಇರಲಿ. ಒಂದೇ ಕಾರ್ಯವನ್ನು ಬಹಳ ದಿನಗಳ ವರೆಗೆ ಮಾಡುವಿರಿ.

ಮಕರ ರಾಶಿ:

ಹೊಸ ಅವಕಾಶಗಳ ಬಾಗಿಲನ್ನು ಬಲವಂತವಾಗಿ ತೆರೆಯಬೇಕಾಗುವುದು. ಯೋಚನೆಗಳಲ್ಲಿ ಸ್ಪಷ್ಟತೆ. ಸ್ನೇಹಿತರಿಂದ ಬೆಂಬಲ. ಸಣ್ಣ ಪ್ರಯತ್ನವೂ ದೊಡ್ಡ ಫಲ ನೀಡುವ ದಿನ. ಸಮಾನಮನಸ್ಕರು ಸೇರಿದಾಗ ಮಾತ್ರ ನಿಮ್ಮ ಕಾರ್ಯವು ಸಾಧುವಾಗುವುದು. ನಿಮ್ಮ ಮನಸ್ಸು ಕೆಲವು ಮಾತಿನಿಂದ ದುರ್ಬಲವಾಗಬಹುದು. ಕಲಹರಣಕ್ಕೆ ಯಾರ ಜೊತೆಗಾದರೂ ಮಾತನಾಡುತ್ತಾ ಇರುವಿರಿ. ನೀವು ವಿರಾಮವನ್ನು ಆನಂದದಿಂದ ಕಳೆಯುವಿರಿ. ಸ್ನೇಹಿತರ ಮೇಲೆ ಸಂದೇಹ ಉಂಟಾಗಬಹುದು. ಹಣಕಾಸಿನ ವಿಚಾರವನ್ನು ನೀವು ಯಾರ ಬಳಿಯೂ ಹೇಳುವುದಿಲ್ಲ. ಕಛೇರಿಯಲ್ಲಿ ನಿಮ್ಮನ್ನು ನೋಡುವ ದೃಷ್ಟಿಯು ಬದಲಾಗುವುದು. ಭೂವ್ಯವಹಾರಕ್ಕೆ ಸಂಬಂಧಿಸಿದಂತೆ ಉನ್ನತ ಅಧಿಕಾರಿಗಳ ಸಹಾಯ ಪಡೆಯಿರಿ. ಒಂದಿಷ್ಟು ಕಾರ್ಯದಲ್ಲಿ ಒತ್ತಡವಿರಲಿದೆ. ಮಾತಿನ ಮಹತ್ವ ಹೆಚ್ಚಾಗಿ, ನಿಮ್ಮ ಸಂವಹನದ ಮೂಲಕ ಕೆಲಸಗಳು ಬರಬಹುದು. ಯಾರ ಒತ್ತಾಯಕ್ಕೂ ಮಣಿಯದೇ ನಿರ್ಧಾರವನ್ನು ಬದಲಿಸಿಕೊಳ್ಳಲು ಹೋಗುವುದಿಲ್ಲ‌. ಅಪರಿಚಿತರ ಬಂಧನದಿಂದ ನೀವು ಮುಕ್ತಾರಾಗಲು ಕಷ್ಟವಾಗಬಹುದು.

ಕುಂಭ ರಾಶಿ :

ಮನೆಗಳಲ್ಲಿ ನೆಮ್ಮದಿ, ಸಣ್ಣ ಸಂತೋಷ ಬರಬಹುದು. ನಿಮ್ಮ ಸಹನಶೀಲತೆ ತುಂಬಾ ನಿಮಗೆ ರಕ್ಷೆ ನೀಡುವುದು. ಆಪ್ತರಿಂದ ನಿಮಗೆ ಪರೋಕ್ಷವಾಗಿ ನೋವು ಬರಬಹುದು. ಇಂದು ನಿಮ್ಮ ವೃತ್ತಿಕ್ಷೇತ್ರದಲ್ಲಿ ನೀವು ಕಲಹಕ್ಕೆ ದಾರಿ ಮಾಡಿಕೊಡುವಿರಿ. ಮಕ್ಕಳಿಗೆ ಧೈರ್ಯವನ್ನು ಹೇಳುವಿರಿ. ಜ್ವರವು ಕಾಣಿಸಿಕೊಂಡೀತು. ಸ್ನೇಹಿತರನ್ನು ಕಳೆದುಕೊಳ್ಳುವಿರಿ. ಇಷ್ಟಪಡುವವರಿಗೆ ಸಮಯವನ್ನು ಕೊಡಲಾಗದು. ನಿಮ್ಮನ್ನು ಸಂತೋಷಪಡಿಸಲು ನಿಮ್ಮನ್ನು ಹೊಗಳುವರು. ಪುಣ್ಯಸ್ಥಳಕ್ಕೆ ಹೋಗಲು ಇಚ್ಛಿಸುವಿರಿ. ನಿಮ್ಮ ದಾರಿಯನ್ನು ಸುಗಮ ಮಾಡಿಕೊಳ್ಳಲು ಪ್ರಯತ್ನಿಸುವಿರಿ. ನೀವು ಯಾರ ಸಹಕಾರವನ್ನೂ ಅನಪೇಕ್ಷಿತವಾದೀತು. ಶಾಂತ ಚಿಂತನೆ ನಿಮಗೆ ಶುಭಫಲ ತರುತ್ತದೆ. ಹಳೆಯ ವಿಚಾರಕ್ಕೆ ಪರಿಹಾರ ದೊರೆತೀತು. ಹಣಕಾಸಿನಲ್ಲಿ ನಿಧಾನವಾದ ಲಾಭ. ನಿಮಗೆ ಅನೇಕ ವಿಚಾರಗಳನ್ನು ತಿಳಿಯಬೇಕು ಎಂಬ ಆಸೆಯು ಅತಿಯಾಗುವುದು. ಹೊಸ ಉದ್ಯೋಗಕ್ಕೆ ಪ್ರವೇಶ ಪಡೆಯುವಿರಿ. ನಿಮ್ಮ ಅನುಕೂಲವನ್ನು ನೋಡಿ ಖರ್ಚು ಮಾಡಿ. ನಿಮ್ಮ ವರ್ತನೆಯು ಸಂಗಾತಿಗೆ ಇಷ್ಟವಾಗದು.

ಮೀನ ರಾಶಿ:

ಅಲ್ಪ ಅಡೆತಡೆ ಎದುರಾದರೂ ನಿಮ್ಮ ಶಕ್ತಿಯಿಂದ ಅದು ಸುಲಭವಾಗಿ ತೀರಿಕೊಳ್ಳುತ್ತದೆ. ಒಬ್ಬ ಹಿರಿಯರ ಸಲಹೆ ದಿನವನ್ನು ಇನ್ನಷ್ಟು ಶುಭಮಯವಾಗಿಸುತ್ತದೆ. ನೀವು ಇಂದು ಅನವಶ್ಯಕ ವಿವಾದಗಳಿಗೆ ಮಾತನ್ನು ಹರಿದುಬಿಡುವುದು ಬೇಡ.‌ ಇಂದು ನಿಮ್ಮ ಮಾತು ಮಿತಿಯನ್ನು ಮೀರಬಹುದು. ಅಧಿಕ ವೇತನದ ಉದ್ಯೋಗಕ್ಕೆ ಅವಕಾಶವು ಬರಬಹುದು. ಯೋಚಿಸಿ ತೀರ್ಮಾನ ಮಾಡಿ. ಸ್ನೇಹಕ್ಕೆ ಒತ್ತಾಯ ಮಾಡುವುದು ಬೇಡ. ಸಂಗಾತಿಯ ವಿಚಾರದಲ್ಲಿ ನಿಮಗೆ ಅಸಮಾಧಾನ ಆಗುವುದು. ನಿಮ್ಮನ್ನು ಇಷ್ಟಪಡುವವರಿಗೆ ಸಮಯವನ್ನು ಕೊಡದೇ ಅಹಂಕಾರ ತೋರಿಸುವಿರಿ. ಧೈರ್ಯ, ನಿರ್ಧಾರಶಕ್ತಿ ಹೆಚ್ಚಾಗಿ ಕೆಲಸಗಳು ವೇಗವಾಗಿ ಸಾಗುತ್ತವೆ. ಹೊಸ ಅವಕಾಶಗಳು ಎದುರಾಗುತ್ತವೆ. ಮನೆಯವರ ಬೆಂಬಲ ಸಿಗುತ್ತದೆ. ಕೆಲವು ವಿಚಾದಲ್ಲಿ ನಿಮಗೆ ತಾಳ್ಮೆ ಕಡಿಮೆ‌ ಎನಿಸಬಹುದು. ಉತ್ಸಾಹದಿಂದ ನಿಮಗೆ ಕೆಲವು ಕಾರ್ಯಗಳು ಸಾಧ್ಯವಾಗುವುದು. ನೋವನ್ನು ನುಂಗಲು ಕಷ್ಟವಾದೀತು.‌ ದಿನಚರಿಯ ವ್ಯತ್ಯಾಸದಿಂದ ಆರೋಗ್ಯ ತಪ್ಪುವುದು.

03 ಡಿಸೆಂಬರ್​​ 2025ರ ಬುಧವಾರದ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಮಾರ್ಗಶೀರ್ಷ, ಸೌರ ಮಾಸ : ವೃಶ್ಚಿಕ, ಮಹಾನಕ್ಷತ್ರ : ಅನೂರಾಧಾ, ವಾರ : ಬುಧ, ಪಕ್ಷ : ಶುಕ್ಲ, ತಿಥಿ : ತ್ರಯೋದಶೀ, ನಿತ್ಯನಕ್ಷತ್ರ : ಭರಣೀ, ಯೋಗ : ವ್ಯತಿಪಾತ್, ಕರಣ : ಕೌಲವ, ಸೂರ್ಯೋದಯ – 06 – 28 am, ಸೂರ್ಯಾಸ್ತ – 05 – 50 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 12:09 – 13:35, ಯಮಗಂಡ ಕಾಲ 07:54 – 09:19, ಗುಳಿಕ ಕಾಲ 10:44 – 12:09

-ಲೋಹಿತ ಹೆಬ್ಬಾರ್ – 8762924271 (what’s app only)

ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ