
ಕಲ್ಪನೆ ಮತ್ತು ವಾಸ್ತವದ ನಡುವೆ ಸಂಘರ್ಷ. ಸೃಜನಾತ್ಮಕ ಕೆಲಸದಲ್ಲಿ ಯಶಸ್ಸು. ಇಂದಿನ ನಿಮ್ಮ ವ್ಯವಹಾರವು ಹತ್ತಾರು ಗೊಂದಲಗಳಿಂದ ಇರಲಿದ್ದು ಮುಂದುವರಿದರೆ ನಷ್ಟವಾಗುವ ಭಯವೂ ಇರಲಿದೆ. ದ್ವಿಚಕ್ರ ಸವಾರರು ಬಹಳ ಎಚ್ಚರಿಕೆಯಿಂದ ಓಡಾಡಬೇಕು. ಅಧ್ಯಾತ್ಮದಲ್ಲಿ ಮನಸ್ಸನ್ನು ಇಡುವಿರಿ. ಇಂದು ನಿಮ್ಮ ಸಮಯವನ್ನು ಸ್ನೇಹಿತರ ಕಾರ್ಯಕ್ಕೆ ಕೊಡಬೇಕಾಗಿಬರಬಹುದು. ಅದ್ದರಿಂದ ನಿಮ್ಮ ಕೆಲಸವು ವಿಳಂಬವಾಗಬಹುದು. ಆಸೆಗಳನ್ನು ನೀವು ನಿಯಂತ್ರಣಕ್ಕೆ ತರಲು ಪ್ರಯತ್ನಿಸುವಿರಿ. ಸಂಗಾತಿಯ ನಡವಳಿಕೆಯನ್ನು ಊಹಿಸಲಾಗದು. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚುತ್ತದೆ. ಯಾರಿಂದಲೂ ಗೌರವ ಸಿಗಲಿಲ್ಲ ಎಂಬ ನೋವು ಕಾಣಿಸಿಕೊಳ್ಳುವುದು. ನಿಮ್ಮಿಂದ ಕಾರ್ಯವನ್ನು ಮಾಡಿಸಿಕೊಳ್ಳಲು ತಂತ್ರಗಳನ್ನು ಹೂಡಬಹುದು. ಪ್ರತಿಭೆ ಪ್ರದರ್ಶನಕ್ಕೆ ಒಳ್ಳೆಯ ಅವಕಾಶ ಸಿಗಲಿದೆ. ದೂರಪ್ರಯಾಣ ಮಾಡಲು ಇಂದು ಇಷ್ಟಪಡುವಿರಿ.
ಅನಿರೀಕ್ಷಿತ ಸಂಪರ್ಕದಿಂದ ಅವಕಾಶವೂ ಲಭ್ಯ. ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವ ಸೂಚನೆ. ಆದರೆ ಭಾವನಾತ್ಮಕ ತೀರ್ಮಾನ ತಪ್ಪಿಸಿ. ವಿದ್ಯಾರ್ಥಿಗಳು ಸತತ ಶ್ರಮದಿಂದ ಇಂದು ಹಂತವನ್ನು ತಲುಪುವರು. ನಿಮ್ಮ ನೋವನ್ನು ಯಾರ ಬಳಿಯಾದರೂ ಹೇಳಿಕೊಳ್ಳಿ. ಕೃಷಿಯಿಂದ ಲಾಭ ಗಳಿಸಲು ತಜ್ಞರ ಸಲಹೆ ಸಿಗಲಿದೆ. ಶತ್ರುಗಳ ಚಲನವಲನಗಳ ಮೇಲೆ ಕಣ್ಣಿಡುವಿರಿ. ಅಕಾಸ್ಮಾತ್ತಾಗಿ ಸಿಕ್ಕ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವ ಕಡೆಗೆ ಗಮನವಿರಲಿ. ಕುಟುಂಬದಲ್ಲಿ ನಿಮ್ಮಿಂದ ಸಂತೋಷವನ್ನು ಇರುವುದು. ಬಂಧುಗಳ ಪ್ರೀತಿಯೂ ಸಿಗುವುದು. ಅತಿಥಿ ಸತ್ಕಾರವನ್ನು ಮಾಡಲು ಉತ್ಸುಕತೆ ಇರುವುದು. ನಿಮ್ಮ ಚಿಂತೆಯನ್ನು ನೀವು ಕಡಿಮೆ ಮಾಡಿಕೊಳ್ಳುವ ಮಾರ್ಗವನ್ನು ಕಂಡುಕೊಳ್ಳಿ. ಇಂದು ನಿಮ್ಮ ವೈಯಕ್ತಿಕ ಕೆಲಸಗಳಿಗೆ ತೊಂದರೆ ಬರುವುದು. ಇಲ್ಲದೆ ಸಮಸ್ಯೆಯನ್ನು ಸುಮ್ಮನೇ ಸೃಷ್ಟಿಸಿಕೊಳ್ಳುವಿರಿ. ನಿಮ್ಮ ವಿರುದ್ಧ ಯಾರಾದರೂ ಅನಿರೀಕ್ಷಿತವಾಗಿ ಮಾತನಾಡಬಹುದು.
ಶ್ರಮಕ್ಕೆ ಫಲ ಸಿಗುವ ದಿನ. ಉದ್ಯೋಗದಲ್ಲಿ ಜವಾಬ್ದಾರಿ ಹೆಚ್ಚಬಹುದು. ವಿದ್ಯಾರ್ಥಿಗಳಿಗೆ ಮಾನಸಿಕವಾದ ಭಯವನ್ನು ತೆಗೆದರೆ ಮುನ್ನಡೆಗೆ ಅವಕಾಶವಿದೆ. ವೃತ್ತಿಯಲ್ಲಿ ಹಿತಶತ್ರುಗಳ ಕಾಟದಿಂದ ಸಿಗಬೇಕಾದ ಸ್ಥಾನಕ್ಕೆ ತೊಂದರೆಯಾಗಬಹುದು. ಸರಳವಾದ ಕಾರ್ಯವನ್ನು ಸಂಕೀರ್ಣ ಮಾಡಿಕೊಳ್ಳುವಿರಿ. ಒಟ್ಟಿಗೇ ಬರುವ ಕೆಲಸದಿಂದ ನೀವು ಉದ್ವೇಗಕ್ಕೆ ಬೀಳುವಿರಿ. ಔದಾರ್ಯ ಗುಣವು ದುರುಪಯೋಗವಾಗಬಹುದು. ಸಾಲದಿಂದ ಬಿಡುಗಡೆ ಸಿಕ್ಕಿ ಮನಸ್ಸು ನಿರಾಳವಾಗಲಿದೆ. ಹಿರಿಯರ ಶುಶ್ರೂಷೆಗೆ ಅವಕಾಶ ಸಿಗುವುದು. ಸಂಪೂರ್ಣ ಮಾಹಿತಿಯನ್ನು ಪಡೆದು ಮುಂದಡಿ ಇಡುವುದು ಸೂಕ್ತ. ಹೊಸ ಉದ್ಯೋಗವನ್ನು ಆರಂಭಿಸುವತ್ತ ನಿಮ್ಮ ಆಲೋಚನೆಯು ಗಾಢವಾಗಿ ಇರುವುದು. ಹಿರಿಯರ ಮಾರ್ಗದರ್ಶನ ಲಾಭಕರ. ದೈಹಿಕ ಆಯಾಸ ಸಾಧ್ಯ. ಮಕ್ಕಳಿಗೆ ಖುಷಿಯಾಗುವಂತೆ ನಡೆದುಕೊಳ್ಳುವಿರಿ. ಸಂಗಾತಿಯ ಆರೋಗ್ಯದಲ್ಲಿ ಏರಿಳಿತವು ಕಂಡು ಉದ್ವಿಗ್ನವಗಬಹುದು. ಸೂಕ್ತ ಕ್ರಮಗಳನ್ನು ಮಾಡಿಕೊಳ್ಳಿ. ಆಲಸ್ಯದ ಕಾರಣ ಎಲ್ಲರಿಂದ ದೂರುಬರಬಹುದು. ವಿವಾದದಿಂದ ನೀವೇ ಹಿಂದಕ್ಕೆ ಸರಿಯುವಿರಿ.
ಧಾರ್ಮಿಕ ಅಥವಾ ಅಧ್ಯಾತ್ಮದಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ವೆಚ್ಚದ ಮೇಲೆ ನಿಯಂತ್ರಣ ಇರಲಿ. ದಾಂಪತ್ಯದ ಮೇಲೆ ದುಷ್ಟರ ದೃಷ್ಟಿಯು ಬೀಳಬಹುದು. ನಿಮ್ಮ ನಡೆ-ನುಡಿಗಳು ಆದಷ್ಟು ಸರಳವಾಗಿ ಇರಲಿ. ಮಿತಿಮೀರಿದ ಆಹಾರಸೇವನೆಯಿಂದ ನಿಮಗೆ ಕಷ್ಟವಾದೀತು. ಮಕ್ಕಳ ಬಗೆಗೆ ನಂಬಿಕೆ ಕಡಿಮೆಯಾಗಬಹುದು. ಧಾರ್ಮಿಕ ಕಾರ್ಯದಲ್ಲಿ ಸಂಭ್ರಮದಲ್ಲಿ ಪಾಲ್ಗೊಳ್ಳುವಿರಿ. ಯಾರದೋ ಮಾತಿನಿಂದ ನಿಮಗೆ ಸಂಕಟವಾಗುವುದು. ಆಪ್ತರನ್ನು ಸತ್ಕಾರಕ್ಕಾಗಿ ಮನೆಗೆ ಆಹ್ವಾನಿಸುವಿರಿ. ಮನೆಗೆ ಬೇಕಾದ ವಸ್ತುಗಳನ್ನು ಖರೀದಿಯಲ್ಲಿ ಮಗ್ನರಾಗುವಿರಿ. ತುರ್ತು ಕಾರ್ಯಕ್ಕಾಗಿ ಅವಸರವಸರವಾಗಿ ಪ್ರಯಾಣ ಮಾಡಬೇಕಾಗಬಹುದು. ಹೊಸ ಕಲಿಕೆ, ಹೊಸ ಚಿಂತನೆಗಳಿಗೆ ದಿನ ಅನುಕೂಲ. ಮಾನಸಿಕವಾಗಿ ನೀವು ಬಲಗೊಳ್ಳುವ ಅವಶ್ಯಕತೆ ಇದೆ. ಕಲಾಕೌಶಲವನ್ನು ಮೆರೆಯಬಹುದು. ಸಂಗಾತಿಯ ಮಾತು ನಿಮಗೆ ತಾಳ್ಮೆಯನ್ನು ಕಡಿಮೆ ಮಾಡೀತು. ಅಪರಿಚಿತ ವ್ಯಕ್ತಿಗಳ ಜೊತೆ ಯಾವ ವ್ಯವಹಾರವನ್ನು ಕಡಮೆ ಮಾಡಿ.
ರಹಸ್ಯ ವಿಷಯಗಳು ಬಹಿರಂಗವಾಗುವ ಸಾಧ್ಯತೆ. ಶತ್ರುಗಳ ಚಟುವಟಿಕೆ ಅರಿವಿಗೆ ಬರುತ್ತದೆ. ನಿಮ್ಮ ಉದ್ಯೋಗವನ್ನು ಇನ್ನೊಬ್ಬರ ಜೊತೆ ತುಲನೆ ಮಾಡಿಕೊಳ್ಳು. ಅನಿರೀಕ್ಷಿತವಾಗಿ ಸಿಕ್ಕ ಬಂಧುಗಳನ್ನು ಮನೆಗೆ ಆಮಂತ್ರಿಸುವಿರಿ. ಪ್ರೀತಿಯಲ್ಲಿ ನಂಬಿಕೆ ಕಡಿಮೆ ಆಗಬಹುದು. ನಿರುಪಯುಕ್ತ ವಸ್ತುಗಳನ್ನು ದಾನರೂಪವಾಗಿ ಕೊಡುವಿರಿ. ನಿಮ್ಮ ಎಲ್ಲ ಕಾರ್ಯಗಳೂ ವಿಳಂಬವಾಗಿ ಅಧಿಕಾರಿಗಳಿಂದ ಹೇಳಿಸಿಕೊಳ್ಳುವಿರಿ. ಇಂದು ಸ್ತ್ರೀಯರು ಅಲಂಕಾರಲ್ಲಿ ಹೆಚ್ಚು ತೊಡಗಿಕೊಳ್ಳುವರು. ಮಾಡಿದ ತಪ್ಪಿನಿಂದ ಪಶ್ಚಾತ್ತಾಪ ಪಡುವಿರಿ. ಎಷ್ಟೇ ಪ್ರಯತ್ನಿಸಿದರೂ ಕೊಟ್ಟ ಹಣವು ನಿಮಗೆ ಸಿಗದು. ಅದರ ಆಸೆಯನ್ನು ಬಿಡುವಿರಿ. ನಿಮ್ಮವರ ಮೇಲೆ ನೀವು ಇಟ್ಟ ನಂಬಿಕೆಯು ಹುಸಿಯಾಗುವುದು. ಮಕ್ಕಳ ವಿವಾಹಕ್ಕೆ ಅತಿಯಾದ ಪ್ರಯತ್ನದಿಂದ ಫಲವನ್ನು ಕಾಣುವಿರಿ. ಧೈರ್ಯದಿಂದ ನಡೆದುಕೊಂಡರೆ ಜಯ ನಿಮ್ಮದು. ಉದ್ಯೋಗದ ಅನುಭವವನ್ನು ಸರಿಯಾಗಿ ಪಡೆಯಿರಿ. ನೀವು ಹಾಕಿಕೊಂಡ ಗುರಿಯನ್ನು ಯಾರಾದರೂ ತಪ್ಪಿಸಬಹುದು.
ಸಂಬಂಧಗಳಲ್ಲಿ ಸಮತೋಲನ ಅಗತ್ಯ. ಪ್ರೇಮ ಅಥವಾ ದಾಂಪತ್ಯದಲ್ಲಿ ಮಾತುಕತೆ ಮುಖ್ಯ. ಸಂಗಾತಿಂದ ಆರ್ಥಿಕ ಸಹಾಯದ ನಿರೀಕ್ಷೆಯಲ್ಲಿ ಇರುವಿರಿ. ಉದ್ಯೋಗದ ವಿಚಾರವನ್ನು ಬಹಳ ಗೌಪ್ಯವಾಗಿ ಇಡುವಿರಿ. ಸಾಮರ್ಥ್ಯದ ಪರೀಕ್ಷೆಯಲ್ಲಿ ಸಲ್ಲದ ಮಾತನ್ನು ಹಿರಿಯರಿಗೆ ಹೇಳುವಿರಿ. ಪ್ರೀತಿಯಿಂದ ಮನಸ್ಸು ಕುರುಡಾಗುವುದು. ಅಹಂಕಾರವು ನಿಮ್ಮನ್ನು ಕೆಳಗೆ ದೂಡಬಹುದು. ಸರಳತೆಯನ್ನು ರೂಢಿಸಿಕೊಳ್ಳುವ ಬಗ್ಗೆ ಆಲೋಚನೆ ಇರಲಿ. ಅನಗತ್ಯಗಳ ಅಪೇಕ್ಷೆಯಿಂದ ಸಂಗಾತಿಯ ಸಂಪತ್ತನ್ನು ಖಾಲಿಮಾಡುವಿರಿ. ನಿಮ್ಮ ಮನಸ್ಸು ಕಾರ್ಯದಲ್ಲಿ ಮಗ್ನವಾಗಿ ಇರದು. ಹಣದ ವಿಚಾರದಲ್ಲಿ ತೀರ್ಮಾನ ಮುಂದೂಡುವುದು ಒಳಿತು. ತಂದೆಯ ಮಾತು ನಿಮಗೆ ಕಿರಿಕಿರಿ ಎನಿಸಬಹುದು. ನಿಮ್ಮ ಆದಾಯದ ಮೂಲವಾದ ವ್ಯಾಪಾರದಲ್ಲಿ ಲಾಭವಿರುವುದು. ಬಹಳ ದಿಗಳಿಂದ ಅನುಭವಿಸುತ್ತಿರುವ ರೋಗಕ್ಕೆ ಔಷಧವು ಸಿಗುವುದು. ನಿಮ್ಮ ಎಲ್ಲ ಕಾರ್ಯಕ್ಕೂ ಯಶಸ್ಸು ಬೇಕು ಎಂಬ ಹಂಬಲ ಬೇಡ.
ಸೂಕ್ಷ್ಮ ವಿಚಾರಗಳಲ್ಲಿ ಜಯ. ಲೆಕ್ಕಾಚಾರ, ದಾಖಲೆ ಕೆಲಸಗಳಲ್ಲಿ ಯಶಸ್ಸು. ಮಿತ್ರರ ಸಹಾಯಕ್ಕೆ ಇಂದು ಕಿರು ಪ್ರಯಾಣ ಮಾಡುವಿರಿ. ನಿಮ್ಮಿಂದ ಉಪಕಾರ ಪಡೆದವರೇ ನಿಮಗೆ ವಂಚಿಸುವ ಸಾಧ್ಯತೆ ಇದೆ. ನಿಮ್ಮ ವಿದ್ಯಾಭ್ಯಾಸದಲ್ಲಿ ಹಿನ್ನಡೆ ಹಾಗೂ ಓದಿನ ಕಡೆ ಗಮನವು ಇಲ್ಲದಿರುವುದು ಪಾಲಕರಿಗೆ ಗೊತ್ತಾಗಿ ಬೇಸರವಾಗಬಹುದು. ಯಾವುದೇ ಉದ್ಯಮಕ್ಕೂ ಕಾನೂನಿನ ವಿಷಯದಲ್ಲಿ ನಿಮಗೆ ಬೇಕಾದ ಮಾಹಿತಿಯನ್ನು ಪಡೆದು ಮುಂದುವರಿಯಿರಿ. ಪರದೇಶ ವಾಸದಿಂದ ಉದ್ಯಮಕ್ಕೆ ಪೆಟ್ಟು. ಸ್ಪರ್ಧೆಯಲ್ಲಿ ಸೋಲಾಗುವ ಸಾಧ್ಯತೆ ಇದೆ. ಮಹಿಳೆಯರು ಸ್ವ ಉದ್ಯಮದಿಂದ ಲಾಭವನ್ನು ಮಾಡಿಕೊಳ್ಳುವರು. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ. ಸಣ್ಣ ಪ್ರಯಾಣದಿಂದ ಲಾಭ. ಆಪ್ತರ ಸಹಾಯದಿಂದ ನಿಮಗೆ ಉದ್ಯೋಗವು ಸಿಗಲಿದೆ. ಭವಿಷ್ಯದ ಯೋಜನೆಯನ್ನು ಸರಿಯಾಗಿ ತೀರ್ಮಾನಿಸಿಕೊಳ್ಳಲಾರಿರಿ. ಮಕ್ಕಳ ವಿವಾಹಕ್ಕಾಗಿ ಓಡಾಟ ಮಾಡಬೇಕಾಗುವುದು. ಸರ್ಕಾರಕ್ಕೆ ಸಲ್ಲಿಸಬೇಕಾದ ದಾಖಲೆಗಳನ್ನು ಸರಿಯಾಗಿರಿಸಿ.
ಇಂದು ಕೋಪ ನಿಯಂತ್ರಿಸಬೇಕು. ಗೌರವ ಹೆಚ್ಚಿದರೂ ಒಂಟಿತನದ ಭಾವನೆ ಬರಬಹುದು. ಸ್ವಾಭಿಮಾನ ಹಾಗೂ ನಾಯಕತ್ವ ಹೊರಹೊಮ್ಮುವ ದಿನ. ಕೆಲಸದಲ್ಲಿ ನಿಮ್ಮ ಮಾತಿಗೆ ಮೌಲ್ಯ. ಯಾವುದನ್ನೇ ಆದರೂ ಕೇಳಿ ಪಡೆದುದ್ದಕ್ಕೆ ಮೌಲ್ಯ ಅಷ್ಟೇ. ಕೊಟ್ಟ ಗೌರವ ನಿಮಗೆ ಸಾಲದು. ಮಕ್ಕಳಿಗಾಗಿ ಪಟ್ಟಶ್ರಮವು ಇಂದು ಸಾರ್ಥಕ ಎನಿಸುವುದು. ಇಂದು ಹಣದ ಬಗ್ಗೆ ನಿಮಗೆ ಲೆಕ್ಕವೇ ಸಿಗದೇ ಖರ್ಚಾಗುವುದು. ಆಪ್ತರಿಗೆ ಕೊಟ್ಟ ಹಣವು ಮರಳಿ ಬಾರದೇ ಇರಬಹುದು. ಉನ್ನತ ವಿದ್ಯಾಭ್ಯಾಸಕ್ಕೆ ಮಕ್ಕಳಿಗೆ ಹಣವನ್ನು ಹೊಂದಿಸುವಿರಿ. ನಿಮ್ಮ ಬಗ್ಗೆ ಮಾತನಾಡುವವರಿಗೆ ಈಗಲೇ ಉತ್ತರ ಕೊಡುವುದು ಬೇಡ. ನಿಮ್ಮ ಒರಟು ಸ್ವಭಾವವು ಇಷ್ಟವಾಗದೇ ಹೋಗಬಹುದು. ಸುಮ್ಮನೇ ಒಂಟಿಯಾಗಿ ಇದ್ದು ಹತ್ತಾರು ಯೋಚನೆಗಳು ಬರಬಹುದು. ಬಂಧುಗಳಿಂದ ಉಡುಗೊರೆ ಸಿಗಲಿದೆ. ನಿಮ್ಮ ಮಾತಿನ ಮೇಲೆ ನಂಬಿಕೆಯು ಕಷ್ಟವಾದೀತು. ಅಪಘಾತ ಭೀತಿಯು ಕಾಡಬಹುದು. ಕಲಾವಿದರು ಅವಕಾಶವನ್ನು ಹೆಚ್ಚು ಪಡೆಯಬಹುದು. ಹೊಸ ವಸ್ತುಗಳ ಬಗ್ಗೆ ಅಸೆ ಬರುವುದು. ನಿಧಾನವಾಗಿ ವರ್ಧಿಸುತ್ತಿರುವ ಆದಾಯದಿಂದ ನಿಮ್ಮ ಆರ್ಥಿಕ ಪರಿಸ್ಥಿತಿಯು ಸುಧಾರಿಸುವುದು.
ಮನಸ್ಸಿನಲ್ಲಿ ಗೊಂದಲ ಇದ್ದರೂ ದಿನಾಂತ್ಯಕ್ಕೆ ಸ್ಪಷ್ಟತೆ. ಕುಟುಂಬದ ಜವಾಬ್ದಾರಿಗಳು ಹೆಚ್ಚಾಗಬಹುದು. ಸಿಗುವ ನೆಮ್ಮದಿಯನ್ನು ಬಿಟ್ಟು ಮತ್ತೆಲ್ಲೋ ಹೋಗಿ ಹಣ ಸಮಯ ಎಲ್ಕವನ್ನೂ ಹಾಳುಮಾಡಿಕೊಳ್ಳುವಿರಿ. ರಾಜಕೀಯ ವ್ಯಕ್ತಿಗಳು ಬೆಂಬಲಿಗರನ್ನು ಕಳೆದುಕೊಳ್ಳಬಹುದು. ನೀವಾಡುವ ಸುಳ್ಳು ಎಲ್ಲರಿಗೂ ಗೊತ್ತಾದೀತು. ನಿದ್ರೆಯಿಂದ ಆಲಸ್ಯವು ಹೆಚ್ಚಾಗುವುದು. ಹಣಕಾಸಿನ ವ್ಯವಹಾರದಲ್ಲಿ ಮಿತ್ರರ ಜೊತೆ ಕಲಹವಾಗಬಹುದು. ಸಂಗಾತಿಯಿಂದ ಬಲವಂತವಾಗಿ ಉಡುಗೊರೆ ಪಡೆಯುವಿರಿ. ಸ್ತ್ರೀಯರಿಗೆ ಇಂದು ಸಂತೋಷದ ದಿನ. ಎಲ್ಲರೆದುರೂ ಸಿಟ್ಟಿನಿಂದ ಕೂಗಾಡುವುದು ಬೇಡ. ಪೋಷಕರು ವಿದ್ಯಾಭ್ಯಾಸದ ಪ್ರಗತಿಯನ್ನು ಪರಿಶೀಲಿಸುವುದು ಅವಶ್ಯ. ಆಸ್ತಿ ಅಥವಾ ಮನೆ ಸಂಬಂಧಿತ ವಿಚಾರ ಚರ್ಚೆಗೆ ಬರಬಹುದು. ನಿಮ್ಮ ವಸ್ತುವಿನ ಮೇಲೆ ವ್ಯಾಮೋಹವು ಅಧಿಕವಾಗಬಹುದು. ಚಿತ್ತವು ಚಾಂಚಲ್ಯದಿಂದ ಇರುವುದು. ನಿಮ್ಮ ಕಷ್ಟಕ್ಕೆ ಬಂದವರು ನಿಮ್ಮ ಆಪ್ತರಾಗಲಿದ್ದಾರೆ. ಆರ್ಥಿಕ ವ್ಯವಹಾರವನ್ನು ಬಿಟ್ಟುಕೊಡುವಿರಿ. ಕೊಟ್ಟ ಮಾತನ್ನು ಉಳಿಸಿಕೊಳ್ಳಲು ದೊಡ್ಡ ಪ್ರಯತ್ನ ನಡೆಯುವುದು.
ಮಾತಿನ ಮೂಲಕ ಅವಕಾಶಗಳು ಸಿಗುವ ದಿನ. ಕೆಲಸದಲ್ಲಿ ಚುರುಕು ಹೆಚ್ಚುತ್ತದೆ. ಸಮಯವನ್ನು ಪ್ರೀತಿಗಾಗಿ ತ್ಯಾಗಮಾಡಬೇಕಾದೀತು. ದುರಸ್ತಿ ಕಾರ್ಯವನ್ನು ಮಾಡುವವರಿಗೆ ಈ ದಿನ ಒತ್ತಡವಿರುವುದು. ಕೆಲಸಗಳು ಪೂರ್ಣವಾಗದೇ ಇರುವುದು ನಿಮಗೆ ಆಂತಕವಾಗಬಹುದು. ವ್ಯಕ್ತಿಗತ ಅಭಿಪ್ರಾಯವನ್ನು ಒಪ್ಪಲಾರಿರಿ. ಜವಾಬ್ದಾರಿಯ ಕೆಲಸವನ್ನು ಜಾಗರೂಕತೆಯಿಂದ ಮಾಡಿ. ದಾಂಪತ್ಯದ ಕಲಹವು ಮುಕ್ತಾಯವಾಗುವುದು. ಹೊಸ ಕೆಲಸಗಳನ್ನು ನಿರ್ವಹಿಸಲು ಧೈರ್ಯ ಸಾಲದು. ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸದಲ್ಲಿ ಉತ್ತಮಫಲಿತಾಂಶವನ್ನು ಪಡೆಯುವರು. ಆಕಸ್ಮಿಕ ಧನಲಾಭದಿಂದ ನಿಮಗೆ ಖುಷಿಯಾಗುವುದು. ಆದಾಯದ ಬಗ್ಗೆ ಒಳ್ಳೆಯ ಸುದ್ದಿ ಸಿಗಬಹುದು. ಆದರೆ ಅತಿಯಾದ ನಂಬಿಕೆ ಹಾನಿಕಾರಕ. ನಿಮ್ಮವರ ಧನ ಸಹಾಯವನ್ನು ಕೇಳಲು ಮುಜುಗರವಾದೀತು. ಅನ್ಯ ಚಿಂತೆಯಿಂದ ನಿದ್ರೆಗೆ ಭಂಗ. ಅನವಶ್ಯಕ ಮಾತುಗಳಿಂದ ವಿವಾದವಾಗುವುದು. ಮಕ್ಕಳ ಪ್ರಗತಿಯಿಂದ ಸಂತಸ. ಉದ್ಯೋಗದಲ್ಲಿ ಅಧಿಕ ವೇತನದ ನಿರೀಕ್ಷೆ ಇರುವುದು.
ಹಳೆಯ ಸಮಸ್ಯೆಗೆ ಹೊಸ ಪರಿಹಾರ ಕಂಡುಬರುವುದು. ಸ್ನೇಹಿತರ ಸಹಕಾರ ಲಾಭಕರ. ಒತ್ತಾಯದ ಮೇರೆಗೆ ಇಂದು ಅನವಶ್ಯಕವಾದ ಪ್ರಯಾಣವಾಗುವುದು. ಇನ್ನೊಬ್ಬರಿಗೆ ಹೇಳುವಾಗ ನೀವು ಅದನ್ನು ಆಚರಿಸಬೇಕಾಗಬಹುದು. ಪುಣ್ಯಸ್ಥಳಗಳ ಭೇಟಿಯಿಂದ ಖುಷಿಯಾಗುವುದು. ಸಾಹಿತ್ಯ ಆಸಕ್ತರಿಗೆ ಉತ್ತಮ ಅವಕಾಶಗಳು ಸಿಗುವುದು. ಸ್ವಂತ ವಾಹನದ ದುರಸ್ತಿಯಿಂದ ಧನ ನಷ್ಟ. ನಿಮ್ಮ ಸಲಹೆಯನ್ನು ಕೇಳದಿರುವುದು ಇಷ್ಟವಾಗದು. ಖರ್ಚು ಹೆಚ್ಚಾಗುವ ಸಾಧ್ಯತೆ ಇದ್ದರೂ ಅವಶ್ಯಕ ವೆಚ್ಚವಾಗಿರುತ್ತದೆ. ಆರೋಗ್ಯದಲ್ಲಿ ಲಘು ಆಯಾಸ. ನೌಕರರು ನಿಮ್ಮ ಮೇಲೆ ಸಿಟ್ಟಾಗಬಹುದು. ಸೌಕರ್ಯಕ್ಕೆ ತಕ್ಕ ಹಾಗೆ ದಿನಚರಿಯನ್ನು ಬದಲಿಸಿ. ಪ್ರಭಾವೀ ವ್ಯಕ್ತಿಗಳಿಂದ ನಿಮ್ಮ ಕಾರ್ಯವನ್ನು ಸಾಧಿಸಿಕೊಳ್ಳುವಿರಿ. ಇಂದು ನಿಮ್ಮ ಸಂಗಾತಿಯಿಂದ ಭವಿಷ್ಯಕ್ಕೆ ಸಲಹೆಯು ಸಿಗಬಹುದು. ನಿಮ್ಮ ಮನೆ ನಿರ್ಮಾಣದ ಕೆಲಸವು ಅರ್ಧಕ್ಕೆ ನಿಲ್ಲಬಹುದು. ಸಾಮಾಜಿಕ ಕಾರ್ಯದಲ್ಲಿ ಉತ್ಸಾಹದಿಂದ ಇರುವಿರಿ. ನಿಮ್ಮ ಬದುಕಿನ ಬದಲಾವಣೆಯನ್ನು ಅನಿವಾರ್ಯವಾಗಿ ಮಾಡಿಕೊಳ್ಳಬೇಕಾಗಬಹುದು.
ಆತುರದ ನಿರ್ಧಾರದಿಂದ ತಪ್ಪು ಸಂಭವಿಸಬಹುದು. ಕೆಲಸದಲ್ಲಿ ಶ್ರಮ ಹೆಚ್ಚಾದರೂ ಫಲ ಸ್ವಲ್ಪ ತಡ. ಸ್ನೇಹಿತರ ಜೊತೆ ಪಾಲುದಾರಿಕೆಯಲ್ಲಿ ಸೇರಿಕೊಳ್ಳುವಿರಿ. ನಿಮ್ಮ ಕಾರ್ಯವನ್ನು ಮಿತ್ರರ ಮೂಲಕ ಮಾಡಿಕೊಳ್ಳುವಿರಿ. ನಿರ್ದಿಷ್ಟ ಸಮಯಕ್ಕೆ ಆಗುವ ಕೆಲಸವು ಸಮಯದ ಮಿತಿಯನ್ನು ಮೀರಬಹುದು. ಅಪರಿತ ಕರೆಗಳಿಂದ ನಿಮಗೆ ಸಂಕಟವಾಗಬಹುದು. ಇಂದಿನ ಆಲಸ್ಯವು ನಿಮಗೆ ಯಾವ ಕೆಲಸಗಳಿಗೂ ಉತ್ಸಾಹವೇ ಇರದು. ಶತ್ರುಗಳ ಭಯವು ಕಾರ್ಯವನ್ನು ನಿಧಾನ ಮಾಡಿಸುವುದು. ನಿಮ್ಮ ಒತ್ತಡಗಳನ್ನು ಮರೆತು ನಿಶ್ಚಿಂತೆಯಿಂದ ದಿನವನ್ನು ಕಳೆಯುವಿರಿ. ಕುಟುಂಬದ ಮಾತುಗಳಿಗೆ ಮೌಲ್ಯ ಕೊಟ್ಟರೆ ಮನಃಶಾಂತಿ. ಹಣಕಾಸಿನಲ್ಲಿ ಜಾಗ್ರತೆ ಅಗತ್ಯ. ನಿಮ್ಮ ನೌಕರರಿಂದ ಇಂದಿನ ಕೆಲವು ಜವಾಬ್ದಾರಿಯನ್ನು ಕೊಡುವಿರಿ. ಸಂಗಾತಿಯು ಕಡೆಗಣನೆಗೆ ನಿಮ್ಮ ಮೇಲೆ ಬೇಸರವಾಗಬಹುದು. ನಿಮ್ಮನ್ನು ಕೆಲವರು ಅನಾದರ ಮಾಡಿದಂತೆ ಕಾಣಿಸೀತು. ವಿದ್ಯಾಭ್ಯಾಸದಲ್ಲಿ ಪ್ರಗತಿಯ ಕಷ್ಟವಾಗಬಹುದು.
ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಧನು, ಮಹಾನಕ್ಷತ್ರ : ಶ್ರವಣಾ, ವಾರ : ಶನಿ, ಪಕ್ಷ : ಶುಕ್ಲ, ತಿಥಿ : ಚತುರ್ದಶೀ ನಿತ್ಯನಕ್ಷತ್ರ : ಮೃಹಶಿರಾ ಯೋಗ : ಪ್ರೀತಿ, ಕರಣ : ವಣಿಜ, ಸೂರ್ಯೋದಯ – 06 – 50 am, ಸೂರ್ಯಾಸ್ತ – 06 – 07 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 09-40 – 11:04, ಯಮಗಂಡ ಕಾಲ 13:53 – 15:18, ಗುಳಿಕ ಕಾಲ 06:61 – 08:15
-ಲೋಹಿತ ಹೆಬ್ಬಾರ್ – 8762924271 (what’s app only)