Horoscope Today 15 November : ಇಂದು ಈ ರಾಶಿಯವರ ಮಾತು ಸತ್ಯವಾಗಲಿದ್ದು, ಆತ್ಮಪ್ರಶಂಸೆ ಮಾಡಿಕೊಳ್ಳುವರು

ದಿನ ಭವಿಷ್ಯ, 15, ನವೆಂಬರ್​ 2025: ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶರದ್ ಋತುವಿನ ಕಾರ್ತಿಕ ಮಾಸ ಕೃಷ್ಣ ಪಕ್ಷದ ದಶಮೀ ತಿಥಿ ಶನಿವಾರ ಪುನರಾವರ್ತನೆ, ವಿದ್ಯಾಭ್ಯಾಸ, ಆಹಾರದ ಚಿಂತೆ, ಪ್ರಾಯಶ್ಚಿತ್ತ, ಕುಟುಂಬದ ಗೌರವ, ಪ್ರೀತಿಯಿಂದ ಬೇಸರ, ವ್ಯವಹಾರದಲ್ಲಿ ಲಾಭ ಇವೆಲ್ಲ ಹನ್ನೆರಡು ರಾಶಿಗಳ ಇಂದಿನ ಭವಿಷ್ಯದಲ್ಲಿ ಇರಲಿದೆ.

Horoscope Today 15 November : ಇಂದು ಈ ರಾಶಿಯವರ ಮಾತು ಸತ್ಯವಾಗಲಿದ್ದು, ಆತ್ಮಪ್ರಶಂಸೆ ಮಾಡಿಕೊಳ್ಳುವರು
ದಿನ ಭವಿಷ್ಯ
Updated By: ಅಕ್ಷತಾ ವರ್ಕಾಡಿ

Updated on: Nov 15, 2025 | 12:50 AM

ಮೇಷ ರಾಶಿ:

ಕೆಲವು ಕಾರ್ಯಗಳಿಂದ ನಿಮಗೆ ನಿತ್ರಾಣ ಸ್ಥಿತಿ ಬರಬಹುದು. ಆಯಾಸವು ಕಡಿಮೆಯಾಗದೇ ಕಷ್ಟವಾಗುವುದು. ನಿಮ್ಮನ್ನು ಯಾರೊಂದಿಗೆ ಹೋಲಿಸಿಕೊಳ್ಳುತ್ತೀರಿ ಎನ್ನುವುದರ ಮೇಲೆ ನಿಮ್ಮ ಸಂತೋಷವು ಇರುವುದು‌. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕೊರತೆಯು ಹೆಚ್ಚು ಕಂಡುಬರುವುದು. ಇಂದಿನ ವ್ಯವಹಾರದಲ್ಲಿ ನಿಮಗೆ ತೊಡಕಿರುವುದು. ಮನೆಯ ಎಷ್ಟೋ ವಿಚಾರಗಳು ನಿಮಗೆ ಗೊತ್ತಾಗದೇ ಹೋಗಬಹುದು. ಅಪರಿಚಿತರ ವ್ಯಕ್ತಿತ್ವವನ್ನು ಸಂಶಯವಿಲ್ಲದೇ ಒಪ್ಪಬಹುದು. ಇಂದು ಬಂಧುಗಳ ಕಾರಣಕ್ಕಾಗಿ ಧನವ್ಯಯವಾಗುವುದು. ಸಂಘರ್ಷಕ್ಕಿಂತ ಸಂಧಾನಕ್ಕೆ ಒತ್ತಿರಲಿ. ನಿಮ್ಮ ಆಸ್ತಿಯ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳಿ. ಹಳೆಯ ನೋವುಗಳು ಕಾಣಿಸಿಕೊಳ್ಳಬಹುದು. ನೀವು ಕ್ರಮಿಸಿದ ದೂರ ನಿಮಗೆ ಅಚತಚರಿಯಾಗಬಹುದು. ಉದ್ಯೋಗದಲ್ಲಿ ಆಯ್ಕೆ ಸಮಸ್ಯೆಯು ಬರಬಹುದು. ಶತ್ರುಗಳ ಸಂಚಿಗೆ ಬಲಿಯಾಗುವಿರಿ. ಕಾರ್ಯವನ್ನು ಸಂಕೀರ್ಣ ಮಾಡಿಕೊಳ್ಳುವಿರಿ. ಜವಾಬ್ದಾರಿಯುತ ಸ್ಥಾನವು ನಿಮಗೆ ಬೇಸರ ತರಿಸುವುದು.

ವೃಷಭ ರಾಶಿ :

ನೀವು ಮಾಡಿದ ಕೆಲಸ ಗ್ರಾಹಕರಿಗೆ ತೃಪ್ತಿ ತರದು. ಅನಿರೀಕ್ಷಿತ ಸುದ್ದಿಗಳಿಂದ ಮನಸ್ಸು ಭಾರ. ನಿಮ್ಮ ಮನಸ್ಸಿಗೆ ಬಂದಿದ್ದನ್ನು ಯಾರು ಏನೇ ಅಂದರೂ ಬದಲಿಸಲಾರಿರಿ. ಬರುವ ಹಣವು ಕೈಸೇರಿದರೂ ಖರ್ಚಿನ ದಾರಿ ನಿಮಗೆ ತೆರೆದಿರುವುದು. ಭಯಗೊಂಡಷ್ಟೂ ಸರಿದಾರಿಯಿಂದ ದೂರಾಗುವಿರಿ. ಮಕ್ಕಳಿಗೆ ಸಿಗುವ ಪುರಸ್ಕಾರದಿಂದ ನಿಮಗೆ ಸಂತೋಷವಾಗುವುದು. ಸಹೋದರರ ಬಾಂಧವ್ಯವು ಸಡಿಲಾಗಬಹುದು. ಅಪರೂಪದ ಮಿತ್ರರು ನಿಮ್ಮನ್ನು ಭೇಟಿ ಮಾಡುವರು. ಮನೆಗೆ ಅತಿಥಿಗಳ ಆಗಮನವಾಗಬಹುದು. ನಿಮ್ಮ ಮಕ್ಕಳನ್ನು ಓದಿಸಲು ಹೊರಗೆ ಕಳುಹಿಸುವ ನಿರ್ಧಾರವಿರಲಿದೆ. ಬಂಧುಗಳ ನಡುವೆ ಸಮಾನತೆ ಇರಲಿ. ಸ್ವಂತ ನಿರ್ಧಾರವನ್ನು ತೆಗೆದುಕೊಳ್ಳಲು ನೀವು ಸಫಲರಾಗುವುದಿಲ್ಲ. ಏಕಪಕ್ಷೀಯವಾದ ನಿರ್ಧಾರದಿಂದ ನಿಮ್ಮವರಿಗೆ ಬೇಸರವಾದೀತು. ಸಂಗಾತಿಯಿಂದ ಪ್ರೀತಿಯು ಸಿಗಲಿದೆ. ವಿದೇಶಪ್ರಯಾಣದ ನಿರೀಕ್ಷೆಯಲ್ಲಿಯೇ ಇರುವಿರಿ‌. ನಿಮ್ಮನ್ನು ವಿರೋಧಿಸುವವರ ನಡುವೆ ಬೆಳೆಯಲು ಹಂಬಲಿಸುವಿರಿ.

ಮಿಥುನ ರಾಶಿ:

ವಿವಾಹಪೂರ್ವಕ್ಕೂ ಅನಂತರದ ಸ್ಥಿತಿಗೂ ಸಂಗಾತಿಯ ವಿಚಾರದಲ್ಲಿ ಬಹಳ ಬದಲಾವಣೆಯನ್ನು ಗುರುತಿಸಿ, ಹೇಳುವಿರಿ. ತಪ್ಪಿನಿಂದಾಗಿ ಭಯವುಂಟಾಗುವುದು. ಸುಮ್ಮನಿದ್ದಾಗ ಕಳೆದ ಘಟನೆಗಳನ್ನೇ ಮತ್ತೆ ಮತ್ತೆ ನೆನಪುಮಾಡಿಕೊಳ್ಳುವಿರಿ. ನಮ್ರತೆಯು ನಿಮ್ಮನ್ನು ಎತ್ತರಕ್ಕೆ ಏರಿಸುವುದು. ಹೇಳಿಕೊಳ್ಳಲಾಗದ ಸಂಕಟವನ್ನು ಮನಸ್ಸಿನಲ್ಲಿಯೇ ನುಂಗುವಿರಿ. ದುರಾಸೆ ಇದ್ದಷ್ಟೂ ಸಿಗಬೇಕಾದುದು ದೂರಾಗಬಹುದು. ಪ್ರಭಾವಿ ಗಣ್ಯರ ಜೊತೆ ಕೆಲವು ಸಮಯವನ್ನು ಕಳೆಯುವಿರಿ. ವ್ಯವಹಾರದಲ್ಲಿ ಚುರುಕು ಸಾಲದು. ಉದ್ಯೋಗದಲ್ಲಿ ದಿನದಿಂದ ದಿನಕ್ಕೆ ಉಂಟಾದ ಒತ್ತಡದಿಂದ ಉದ್ಯೋಗವನ್ನು ಬದಲಿಸಲು ಯೋಚಿಸುವಿರಿ. ಯಂತ್ರೋಪಕರಣದ ಮಾರಾಟಗಾರರಿಗೆ ಅಧಿಕ ಲಾಭವಾಗುವುದು. ನಿಮಗೆ ಇಂದು ಕೆಲಸ ಮಾಡುವುದಕ್ಕಿಂತ ಹೆಚ್ಚಾಗಿ, ಮಾಡಿಸುವುದು ಬರಲಿದೆ. ಮನೆತನದ ಕಾರಣದಿಂದ ನಿಮಗೆ ಗೌರವವು ಪ್ರಾಪ್ತವಾಗಲಿದೆ. ಮೇಲಧಿಕಾರಿಗಳನ್ನು ಮೆಚ್ಚಿಸುವಿರಿ. ಹಣವನ್ನು ವ್ಯಯಿಸಿ ಉನ್ನತ ಅಧಿಕಾರವನ್ನು ಪಡೆಯುವಿರಿ.

ಕರ್ಕಾಟಕ ರಾಶಿ:

ಶಿಕ್ಷಣಕ್ಕೆ ಅನುಕೂಲವಾದ ವಸ್ತುವೊಂದನ್ನು ಕೊಳ್ಳುವಿರಿ. ನಿಮಗೆ ಮಾಡುವ ಅವಮಾನವು ಬಹಳ ಕೆಳಮಟ್ಟದ್ದಾಗಿರಬಹುದು. ಇನ್ಮೊಬ್ಬರ ವಾಹನವನ್ನು ಚಲಾಯಿಸುವಾಗ ಭಯವಾಗುವುದು. ಧಾರ್ಮಿಕ ವಿಚಾರವಾಗಿ ನೀವು ದೂರ ಪ್ರಯಾಣವನ್ನು ಮಾಡುವಿರಿ. ಏಕಾಗ್ರತೆಯಿಂದ ನಿಮ್ಮ ಮತ್ತೆಲ್ಲ ಕಾರ್ಯಗಳೂ ನಿಧಾನವಾಗಬಹುದು. ಪರಿಶ್ರಮದಿಂದ ಧನಾರ್ಜನೆ ಮಾಡಿದ್ದು ನಿಮಗೆ ಅಧಿಕ ಸಂತೋಷವಾಗುವುದು. ಉದ್ಯೋಗವಿಲ್ಲದೇ ಬೇಸರಗೊಂಡ ನಿಮಗೆ ಬೇರೆಕಡೆಯಲ್ಲಿ ಕೆಲಸವು ಸಿಗುವುದು. ಇಂದಿನ ಸಮಯವನ್ನು ನಿಮಗೆ ಬೇಕಾದಂತೆ ಹೊಂದಿಸಲು ಕಷ್ಟವಾಗಬಹುದು. ಸರಿಯಾದ ಆಹಾರ ನಿಮಗೆ ಸಿಗದೇ ಅಲ್ಪಾಹಾರದಲ್ಲಿ ಈ ದಿನ ಕಳೆಯುವುದು. ನಿಮ್ಮ ನಿಯಮಗಳನ್ನು ನೀವೇ ದಾಟುವಿರಿ. ರಾಜಕೀಯ ಜೀವನವು ನಿಮಗೆ ಅತಂತ್ರ ಸ್ಥಿತಿಯನ್ನು ತರಬಹುದು. ಹಣಕಾಸಿನ ಕೊರತೆಯನ್ನು ನೀವು ಕುಟುಂಬಕ್ಕೆ ಗೊತ್ತಾಗದಂತೆ ನಿರ್ವಹಿಸುವಿರಿ. ಕೆಲವನ್ನು ನೀವು ಗಂಭೀರವಾಗಿ ತೆಗೆದುಕೊಳ್ಳುವ ಅವಶ್ಯಕತೆ ಇರುವುದಿಲ್ಲ.

ಸಿಂಹ ರಾಶಿ:

ವಾಹನವನ್ನು ನಿಯಮಾನುಸಾರ ಓಡಿಸದೇ ಎಲ್ಲರಿಂದ ನಿಂದೆನೆಗೊಳಗಾಗುವಿರಿ. ಬಂಧನದಿಂದ ಮುಕ್ತರಾದಂತಹ ಅನುಭವವಾಗುವುದು. ಯಾರ ಜೀವನವನ್ನೂ ಸಣ್ಣದಾಗಿ ಕಾಣುವುದು ಬೇಡ. ನಿಮ್ಮ ವಿದ್ಯೆಗೆ ಉಪಯುಕ್ತವಾದ ಉದ್ಯೋಗಕ್ಕೆ ಹಲವು ಅವಕಾಶಗಳು ತೆರೆದುಕೊಳ್ಳುವುದು. ಆಸ್ತಿಯಲ್ಲಿ ಸಮ ಪಾಲು ಸಿಗದೇ ನಿಮಗೆ ವಾದಕ್ಕಿಳಿಯುವಿರಿ. ಪಾಲುದಾರಿಕೆಯಲ್ಲಿ ನಿಮಗೆ ಸಣ್ಣ ಸಮಸ್ಯೆಗಳು ಹುಟ್ಟಿಕೊಳ್ಳಬಹುದು. ಇನ್ನೊಬ್ಬರ ಒತ್ತಾಯದ ಕಾರಣಕ್ಕೆ ನೀವು ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗುವಿರಿ. ಉದ್ಯೋಗದಲ್ಲಿ ಎಲ್ಲರೂ ನಿಮ್ಮ ಬಗ್ಗೆ ನಕಾರಾತ್ಮಕವಾಗಿ ಮಾತನಾಡುವರು. ತಿಳಿದವರ ಜೊತೆ ವಾದಕ್ಕೆ ಇಳಿಯುವುದು ಬೇಡ. ಮಕ್ಕಳಿಂದ ಆರ್ಥಿಕ ಸಹಾಯವು ಸಿಗುವುದು. ಮಕ್ಕಳ ವಿವಾಹದ ಬಗ್ಗೆ ಬಂಧುಗಳ ಜೊತೆ ಗಂಭೀರವಾಗಿ ಚರ್ಚಿಸುವಿರಿ. ಸಂಗಾತಿಯ ಕಡೆಯಿಂದ ನಿಮಗೆ ಶುಭಸಮಾಚಾರವು ಗೊತ್ತಾಗುವುದು. ಇಂದಿನ ನಿಮ್ಮ ಪ್ರಯಾಣವು ನಿಮಗೆ ಹಿತಕರವಾದ ಅನುಭವವನ್ನು ನೀಡಬಹುದು. ಇಂದು ನೀವು ಮನೋರಂಜನೆಯ ಜೊತೆ ಕಾಲ ಕಳೆಯುವಿರಿ.

ಕನ್ಯಾ ರಾಶಿ:

ನಿಮ್ಮ ಎಲ್ಲ ಕಾರ್ಯಕ್ಕೂ ಹಣವೇ ಸಿಗಬೇಕು ಎನ್ನುವ ಉದ್ದೇಶವಿರಲಿದೆ. ನಿಮ್ಮ ಗೌಪ್ಯತೆಯ ಉಪಕಾರಗುಣವು ಪ್ರಕಾಶವಾಗುವುದು. ನಿಮ್ಮ ಇಂದಿನ ಮೌನವೂ ಇನ್ನೊಬ್ಬರಿಗೆ ಚಿಂತೆಯಾಗುವುದು. ನಿಮ್ಮ ಸುಳ್ಳು ಯಾರಿಂದಲಾದರೂ ತಿಳಿದುಬರುವುದು. ನಿಮಗೆ ಸಂಬಂಧಿಸದ ವಿಚಾರಗಳಲ್ಲಿ ಪ್ರವೇಶವನ್ನು ಪಡೆಯುವುದು ಬೇಡ. ಸರ್ಕಾರದ ಕಾರ್ಯಗಳನ್ನು ಬೇಗ ಮುಗಿಸಿಕೊಳ್ಳಲಿದ್ದೀರಿ. ವ್ಯವಹಾರದ ದಾಖಲೆಗಳು ಸರಿಯಾಗಿ ಇಟ್ಟುಕೊಳ್ಳುವಿರಿ. ವಾಹನಕ್ಕಾಗಿ ಸಾಲ ಮಾಡಬೇಕಾಗುವುದು. ಯಾವುದೇ ನಿರ್ಧಾರವನ್ನು ಸಮಾಲೋಚನೆಯ ಅನಂತರವೇ ಪಡೆಯಿರಿ. ಪ್ರೇಮದಲ್ಲಿ ಸಿಕ್ಕಿಕೊಂಡು ಕಷ್ಟಪಡುವಿರಿ. ನಿಮ್ಮ ತೀರ್ಮಾನವನ್ನು ಒಪ್ಪುವುದು ಕಷ್ಟವಾದೀತು. ಮಕ್ಕಳ ವಿಚಾರವಾಗಿ ನಿಮಗೆ ದೂರಬರಬಹುದು. ವಸ್ತುವೊಂದನ್ನು ಎಲ್ಲೋ ಬಿಟ್ಟು ಮತ್ತೆಲ್ಲೋ ಹಿಡುಕುವಿರಿ. ನಿಮ್ಮ ಸ್ವಂತ ಕೆಲಸಕ್ಕೆ ಉದ್ಯೋಗಿಗಳನ್ನು ಬಳಸಿಕೊಳ್ಳುವಿರಿ. ಬಗ್ಗೆಯೂ ಸುಮ್ಮನೆ ಆಡಿಕೊಳ್ಳುವುದು ಬೇಡ. ವೈಯಕ್ತಿಕ ವಿಚಾರದಲ್ಲಿ ಯಾರ ಮಧ್ಯಪ್ರವೇಶವನ್ನೂ ಸಹಿಸಲಾರಿರಿ.

ತುಲಾ ರಾಶಿ:

ಪರಿಚಿತರ ಪ್ರಭಾವದಿಂದ ಉದ್ಯೋಗ ಪ್ರಾಪ್ತಿಯಾಗಲಿದೆ. ಕಾರ್ಯದಕ್ಷತೆಯಿಂದ ಬೀಗಬೇಕಾಗಿಲ್ಲ. ಆತ್ಮವಿಶ್ವಾಸ ಹೆಚ್ಚಾಗಬಹುದು. ಭೂಮಿಯ ಖರೀದಯ ಬಗ್ಗೆ ಹೆಚ್ಚು ಆಸಕ್ತಿ ತೋರಿಸಿದರೂ ಅದನದನು ನಿಮ್ಮದಾಗಿಸಿಕೊಳ್ಳುವುದು ಇಂದು ಕಷ್ಟ. ಅನೇಕ ದಿನಗಳಿಂದ ಅನಾರೋಗ್ಯದ ಕಾರಣ ಬಳಲುತ್ತಿದ್ದು ಸೂಕ್ತ ಚಿಕಿತ್ಸೆಯ ಅವಶ್ಯಕತೆ ಇರುವುದು. ಉದ್ಯೋಗದಲ್ಲಿ ಮಕ್ಕಳಿಗೆ ಪ್ರವೇಶವನ್ನು ಕೊಡುವಿರಿ. ವಿದೇಶದ ಪ್ರವಾಸದಲ್ಲಿ ಇರುವವರಿಗೆ ಅಪಾಯ ಕಾಣಿಸಿಕೊಳ್ಳುವುದು. ಬಂಧುಗಳು ನಿಮ್ಮನ್ನು ಬಹಳವಾಗಿ‌ ದೂರುವರು. ಮನೆಯ ಕಾರ್ಯಗಳು ಇಂದು ಅಧಿಕವಾಗಿ ಇರಬಹುದು. ನೂತನ ವಾಹನದ ಖರೀದಿಗೆ ಪರ ಊರಿಗೆ ಹೋಗುವಿರಿ. ದಾಖಲೆಗಳು ಅನ್ಯರ ಕೈಗೆ ಸಿಕ್ಕಿ ದುರ್ಬಳಕೆಯಾಗುವ ಸಾಧ್ಯತೆ ಇದೆ. ಆಡಿಕೊಳ್ಳುವವರ ಮುಂದೆ ಮುಗ್ಗರಿಸಿ ಬೀಳಬಹುದು.‌ ನಿಮ್ಮ ಚಿಂತನೆಯನ್ನು ವಿಸ್ತರಿಸಿಕೊಳ್ಳುವುದು ಉತ್ತಮ. ವಿವಾಹ ಸಮಾರಂಭಗಳಿಗೆ ಭೇಟಿ ಕೊಡುವಿರಿ. ಸಾಲದಿಂದ ನಿಮಗೆ ಕಿರಿಕಿರಿಯಾಗುವುದು. ನಿಮ್ಮ ಪೂರ್ಣ ಸಾಮರ್ಥ್ಯವನ್ನು ಇಂದು ತೋರಿಸಲಾರಿರಿ.

ವೃಶ್ಚಿಕ ರಾಶಿ:

ಹಣಕ್ಕಾಗಿ ಬೇಡಿಕೆ ಇಟ್ಟಿದ್ದು, ಮುಂದೇನು ಮಾಡಬೇಕು ಎಂಬ ಗೊಂದಲವೂ ಇದೆ. ಮೇಲಧಿಕಾರಿಗಳ ಜೊತೆ ಸಿಟ್ಟಾಗುವ ಸಂದರ್ಭವಿದ್ದರೂ ತಾಳ್ಮೆಯನ್ನು ಕಂಡುಕೊಳ್ಳಿ. ಯಾರನ್ನೂ ನೀವು ಹೀಗೆ ಎಂದು ಫಲಕವನ್ನು ಅಂಟಿಸಲು ಸಾಧ್ಯವಾಗದು. ಇಂದು ನಿಮಗೆ ಪಿತ್ರಾರ್ಜಿತ ಸಂಪತ್ತನ್ನು ಪಡೆಯುವ ಅವಕಾಶವಿರುವುದು. ಭೂಮಿಯ ಮಾರಾಟ ಮಾಡಿದ ಕಾರಣ ನಿಮ್ಮ ಜೀವನಕ್ಕೆ ಬೇಕಾದ ಸಂಪತ್ತು ಸಿಗಲಿದೆ. ಸಹನೆಯನ್ನು ಮೀರಿ ನೀವು ಇಂದು ವರ್ತಿಸುವಿರಿ. ಅಪರಿಚಿತರ ಜೊತೆ ಮಾತನಾಡಲು ನೀವು ಹಿಂಜರಿಯಬಹುದು. ಸ್ಮರಣಶಕ್ತಿಯ ದೋಷವು ಸ್ವಲ್ಪವೇ ಬರಲಿದೆ. ನಿಮಗೆ ವಹಿಸಿದ ಕೆಲಸವನ್ನು ಅದ್ಭುತವಾಗಿ ಮಾಡಲು ಪ್ರಯತ್ನಿಸುವಿರಿ. ಕೃಷಿಯ ಸುರಕ್ಷತೆಗೆ ಬೇಕಾದ ವ್ಯವಸ್ಥೆಯನ್ನು ಮಾಡಲು ತೊಡಗುವಿರಿ. ನಿಮ್ಮ ವ್ಯಕ್ತಿತ್ವವು ಇತರರಿಗೆ ಉದಾಹರಣೆಯಾಗಬಹುದು. ನಿಮ್ಮ ಕಾಯುವಿಕೆಯು ಸಾರ್ಥಕವಾಗಬಹುದು. ಮಾತಿನಲ್ಲಿ ಮಾರ್ದವ ಇರಲಿ. ವೈಯಕ್ತಿಕ ಕಾರ್ಯದ ಕಾರಣ ಪ್ರಯಾಣ ಮಾಡುವಿರಿ. ಸಹೋದ್ಯೋಗಿಗಳು ಅಹಂಕಾರವನ್ನು ತೋರಿಸುವರು.

ಇದನ್ನೂ ಓದಿ: ವಾರದ ಉದ್ಯೋಗ ಭವಿಷ್ಯ; ಯಾವ ರಾಶಿಗೆ ಶುಭ, ಯಾರಿಗೆ ಅಶುಭ?

ಧನು ರಾಶಿ:

ನಿಮಗೆ ಪ್ರಿಯವಾದ ಆಹಾರವನ್ನು ಅನ್ಯರ ಮೂಲಕ ಸಿಗಲಿದೆ. ಏನೇ ಬಂದರೂ ಎದುರಿಸುವ ಮನೋಭಾವ ಕಾಣಿಸುವುದು. ನಿಮ್ಮ ಕಾರ್ಯವನ್ನು ಮಾಡಲು ಒಂದೊಂದೆ ಕಾರಣವನ್ನು ಹೇಳುವಿರಿ. ನಿಮ್ಮ ಇಂದಿನ ಎಲ್ಲ ಕಾರ್ಯಗಳಿಗೂ ಟೀಕೆಗಳು ಇರಲಿದ್ದು, ಅದನ್ನು ಮನಸ್ಸಿಗೆ ತಂದುಕೊಳ್ಳುವಿರಿ. ವಿವಾಹ ಜೀವನವು ಕಷ್ಟ ಎನಿಸಬಹುದು. ಹೊಂದಾಣಿಕೆಯನ್ನು ಮಾಡಿಕೊಳ್ಳುವುದು ನಿಮ್ಮ ಅಂತಸ್ತು ಕಡಿಮೆ ಆದಂತೆ ಎಂಬ ಭಾವನೆಯು ಬರುವ ಸಾಧ್ಯತೆ ಇದೆ. ಗುಣಾತ್ಮಕ ಚಿಂತನೆಯನ್ನು ಮಾಡಿ. ಏನೇ ಬಂದರೂ ಎಲ್ಲವೂ ವಿಧಿ ನಿಯಮ ಎಂಬ ನಿರ್ಧಾರಕ್ಕೆ‌ ಬರುವಿರಿ. ನಿಮ್ಮ ದಿಟ್ಟತನವನ್ನು ಅಹಂಕಾರ ಎಂದುಕೊಳ್ಳಬಹುದು. ಆತ್ಮಪ್ರಶಂಸೆಯು ಅಧಿಕಾವಾಗಿ ತೋರುವುದು. ಮನೆಯವರಿಗೆ ನಿಮ್ಮ ಬಗ್ಗೆ ಪೂರ್ಣ ನಂಬಿಕೆ ಬರದು. ಸಾಧಿಸಬೇಕು ಎಂಬ ಮಹದಾಸೆ ಇದ್ದರೂ ಅದು ಕ್ಷಣಿಕವಾಗುವುದು. ನಿಮ್ಮದೇ ಆದ ಕಾರ್ಯದಲ್ಲಿ ಮಗ್ನರಾಗುವಿರಿ. ಉದ್ಯೋಗವಿಲ್ಲದೇ ಬೇಸರಗೊಂಡ ನಿಮಗೆ ಬೇರೆಕಡೆಯಲ್ಲಿ ಕೆಲಸವು ಸಿಗುವುದು. ಆಕಸ್ಮಿಕವಾಗಿ ಕೆಲವರನ್ನು ಕಳೆದುಕೊಳ್ಳುವಿರಿ.

ಮಕರ ರಾಶಿ:

ಇಂದಿನ ಕಾರ್ಯಗಳು ನೆನಪಾಗಿ ಬೆಳಗಿನಿಂದಲೇ ಬಹಳ ವೇಗದಲ್ಲಿ ಇರುವಿರಿ. ಸಾಮಾಜಿಕ ವ್ಯವ್ಥೆಯಲ್ಲಿ ಪ್ರವೇಶ ಪಡೆಯುವಿರಿ. ಸಮಯವು ಸದುಪಯೋಗವಾಗಬೇಕಾದರೆ ಅದರ ಬಗ್ಗೆ ಪೂರ್ಣ ಗಮನಕೊಟ್ಟು ಸರಿಮಾಡಿಕೊಳ್ಳಿ. ಜನರ ಜೊತೆ ಬೆರೆಯಲು ಹಿಂದೇಟು ಹಾಕುವಿರಿ. ಅನಿರೀಕ್ಷಿತ ನಿಧಿಯ ನಿರೀಕ್ಷೆಯಲ್ಲಿ ಇರುವಿರಿ. ಅಂದುಕೊಂಡಿದ್ದರ ವಿರುದ್ಧ ನಡೆಯುವುದು ನಿಮಗೆ ಬೇಸರ ತರಿಸಬಹುದು. ಸ್ವಂತ ಕಾರ್ಯಸ್ಥಳದ ಸ್ವಚ್ಛತೆಯಲ್ಲಿ ಕಾಲಕಳೆಯುವಿರಿ. ಸಾಲ ಮಾಡಿ ಸಣ್ಣ ಉದ್ಯಮವನ್ನು ಪ್ರಾರಂಭಿಸುವ ಯೋಚನೆ ಇರುವುದು. ಉದ್ಯೋಗ ವೃದ್ಧಿಯ ಕುರಿತು ಅಧಿಕಾರಿಗಳ ಜೊತೆ ಚರ್ಚಿಸುವಿರಿ. ಆರೋಗ್ಯವನ್ನು ಸರಿ‌ಮಾಡಿಕೊಳ್ಳುವುದು ಪ್ರಾಮುಖ್ಯವಾಗಿರಲಿ. ಸಂಗಾತಿಗೆ ನಿಮ್ಮ ಪ್ರೀತಿಯು ಕಡಿಮೆಯಾಗಿರುವುದು. ಪ್ರಶಂಸೆಯಿಂದ ಅಹಂಕಾರವು ಬರುವ ಸಾಧ್ಯತೆ ಇದೆ. ಮನೆಯವರಿಗೆ ಹೆಚ್ಚು ಸಮಯವನ್ನು ಕೊಡುವಿರಿ. ನಂಬಿಕೆಯನ್ನು ಕಳೆದುಕೊಂಡವರ ಜೊತೆ ಪುನಃ ವ್ಯವಹಾರವು ಕಷ್ಟವಾದೀತು. ಸರಳತೆಯನ್ನು ರೂಢಿಸಿಕೊಳ್ಳುವುದು ನಿಮಗೇ ಒಳ್ಳೆಯದು. ಅಸೂಯೆಪಟ್ಟರೆ ನಿಮ್ಮನ್ನೇ ನೀವು ಸುಟ್ಟಕೊಂಡಂತೆ. ವಿಲಾಸಿ ಜೀವನದ ಕನಸಿನಲ್ಲಿ ಇರುವಿರಿ.

ಕುಂಭ ರಾಶಿ:

ಅಹಿತಕರ ಘಟನೆಯಲ್ಲಿ ಇಲ್ಲದೇ ಇದ್ದರೂ ನಿಮ್ಮನ್ನು ತಪ್ಪಿಸ್ಥತನ್ನಾಗಿ ನೋಡುವರು. ಆಪ್ತರ ಬಗ್ಗೆ ಹೇಳಲಾರದ ದುಮ್ಮಾನಗಳು ನಿಮ್ಮೊಳಗೆ ತುಂಬಿಕೊಳ್ಳಬಹುದು. ನಿಮ್ಮ ನೋವನ್ನು ಸರಿಮಾಡಿಕೊಳ್ಳದೇ ಇನ್ನೊಬ್ಬರ ಬಗ್ಗೆ ಕಾಳಜಿ ಅಧಿಕವಾಗುವುದು. ನಿಮ್ಮ ಜನಪ್ರಿಯತೆಯು ನಿಮಗೆ ಖುಷಿ ಕೊಟ್ಟೀತು. ನಿಮ್ಮ ಮಿತ್ರರ ಸಹಕಾರವನ್ನು ಬಹಳ ದಿನಗಳ ಅನಂತರ ಕೇಳುತ್ತಿರುವಿರಿ. ಗೊಂದಲವು ನಿಮ್ಮ ಮನಸ್ಸನ್ನು ಹಾಳು ಮಾಡೀತು. ನಿಮ್ಮ ಗುರಿಯ ಬಗ್ಗೆ ಸ್ಪಷ್ಟವಾದ ನಿರ್ಧಾರವಿರಲಿ. ಸ್ನೇಹಿತರಿಂದ ಉಡುಗೊರೆ ಸಿಗಬಹುದು. ವಾಹನ ಮಾರಾಟಗಾರರಿಗೆ ಉತ್ತಮ ಲಾಭ. ನಿಮ್ಮನ್ನು ವಿರೋಧಿಸುವವರ ನಡುವೆ ಬೆಳೆಯಲು ಹಂಬಲಿಸುವಿರಿ. ಅತಿಯಾದ ಕೋಪವನ್ನು ಮಾಡಿಕೊಳ್ಳುವುದು ಬೇಡ. ಆಲಸ್ಯದಿಂದ ಉತ್ತಮ ವಿಚಾರಗಳನ್ನು ಕಳೆದುಕೊಳ್ಳಬೇಕಾದೀತು. ಅಸಂಬದ್ಧ ಚರ್ಚೆಗಳಿಂದ ದೂರ ಇರುವಿರಿ. ಅಧಿಕಾರಿಗಳ ನಿಕಟ ಸಂಪರ್ಕವೇ ನಿಮಗೆ ಮುಳುವಾಗಬಹುದು. ಆಸ್ತಿಯ ವಿಚಾರಕ್ಕೆ ನೀವು ಯಾವ ತೀರ್ಮಾನಕ್ಕೂ ಬರಲಾಗದು. ಸಂಗಾತಿಯ ಜೊತೆ ಮನಸ್ತಾಪ ಬರುವ ಕಾರಣ, ನಿಮ್ಮ ಕೆಲಸ ಕಾರ್ಯಗಳಲ್ಲಿ ಒಂದಿಲ್ಲೊಂದು ಕಿರಿಕಿರಿ ಇರುವುದು.

ಮೀನ ರಾಶಿ:

ಬಲವಂತದಿಂದ ಒಪ್ಪಿಗೆಯನ್ನು ಪಡೆಯುವಿರಿ. ವಾಕ್ಚಾತುರ್ಯದಿಂದ ನೀವು ಎಲ್ಲರನ್ನು ಗೆಲ್ಲಬಹುದು. ನಿಮ್ಮ ಮನವನ್ನು ಒಲಿಸುವುದು ಕಷ್ಟ. ಯಾವುದೂ ನಿಮಗೆ ಸಮಾಧಾನ ಕೊಡದು. ನಿಮ್ಮ ವ್ಯಾಪಾರದ ವಿಸ್ತಾರದ ಬಗ್ಗೆ ಪಾಲುದಾರರ ಜೊತೆ ಮಾತನಾಡುವಿರಿ. ಧನಾರ್ಜನೆಗೆ ಹೆಚ್ಚು ಅವಕಾಶಗಳು ಲಭ್ಯವಾಗಿದ್ದು ಹೆಚ್ಚಿನ ಆದಾಯದ್ದನ್ನು ಆಯ್ಕೆ ಮಾಡಿಕೊಳ್ಳುವಿರಿ. ಆದರೆ ಇದರಿಂದ ರಿಸ್ಕ್ ಗಳು ಹೆಚ್ಚಿರಬಹುದು. ನಿಮ್ಮಿಂದ ಮನೆಯ ರಹಸ್ಯ ಸೋರಿಕೆಯಾಗಬಹುದು. ನಿರೀಕ್ಷೆಯ ಮಟ್ಟಕ್ಕೆ ಹೋಗುವುದು ಕಷ್ಟವಾದರೂ ಸ್ವಲ್ಪ ನೆಮ್ಮದಿಯು ಇರಲಿದೆ. ಸ್ತ್ರೀಯರಿಗೆ ಅಭದ್ರತೆಯು ಕಾಡಬಹುದು. ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿಯಲ್ಲಿ ನೀವು ಇರುವಿರಿ. ಮಕ್ಕಳ ವಿಚಾರದಲ್ಲಿ ನೀವು ಮೃದುವಾಗುವಿರಿ. ಬಂಧುಗಳು ಅನಿರೀಕ್ಷಿತ ಭೇಟಿಯಾಗಿ ಸಂತೋಷ ಕೊಡುವರು. ಯಾರ ಮಾತನ್ನೂ ಕೇಳದ ಚಿತ್ತಚಾಂಚಲ್ಯವು ಇರಲಿದೆ. ಶರೀರ ಪೀಡೆಯು ಕಾಣಿಸಿಕೊಂಡೀತು. ಆಂತರಿಕ ಕಲಹವು ಎಲ್ಲರಿಗೂ ಗೊತ್ತಾಗುವಂತೆ ಮಾಡಿಕೊಳ್ಳುವಿರಿ. ಮಾಡಿಕೊಳ್ಳುವಿರಿ. ನಿಮ್ಮ ಹಣವನ್ನು ಪಡೆಯಲು ಓಡಾಟ ಮಾಡಬೇಕಾಗುವುದು.

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಶರದ್, ಚಾಂದ್ರ ಮಾಸ : ಕಾರ್ತಿಕ, ಸೌರ ಮಾಸ : ತುಲಾ, ಮಹಾನಕ್ಷತ್ರ : ವಿಶಾಖಾ, ವಾರ : ಶನಿ, ಪಕ್ಷ : ಕೃಷ್ಣ, ತಿಥಿ : ದಶಮೀ, ನಿತ್ಯನಕ್ಷತ್ರ : ಉತ್ತರಾಫಲ್ಗುಣೀ, ಯೋಗ : ಐಂದ್ರ, ಕರಣ : ಕೌಲವ, ಸೂರ್ಯೋದಯ – 06 – 19 am, ಸೂರ್ಯಾಸ್ತ – 05 – 48 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 09:12 – 10:38, ಗುಳಿಕ ಕಾಲ 06:19 – 07:46, ಯಮಗಂಡ ಕಾಲ 13:30 – 14:57

-ಲೋಹಿತ ಹೆಬ್ಬಾರ್ – 8762924271 (what’s app only)