Horoscope Today 24 December : ಇಂದು ಈ ರಾಶಿಯವರಿಂದ ಭವಿಷ್ಯ ನೀರೀಕ್ಷೆಗೆ ಪ್ರೋತ್ಸಾಹ, ಅಧಿಕ ಅವಲಂಬನೆ
ದಿನ ಭವಿಷ್ಯ, 24, ಡಿಸೆಂಬರ್ 2025: ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಪೌಷ ಮಾಸ ಶುಕ್ಲ ಪಕ್ಷದ ಚತುರ್ಥೀ ತಿಥಿ ಬುಧವಾರ ಕಾರ್ಯ ಸಫಲತೆ, ಪ್ರಯಾಣದಲ್ಲಿ ಉತ್ಸಾಹ, ಬಂಧುಗಳ ಭೇಟಿ, ವ್ಯವಹಾರದಲ್ಲಿ ಚುರುಕು, ಹೊಸ ಯೋಜನೆ, ಆಂತರಿಕ ಕಲಹ, ಸುಪ್ತ ಪ್ರಜ್ಞೆ, ಸಾಮಾಜಿಕ ಗೌರವ ಇವೆಲ್ಲ ಇಂದಿನ ವಿಶೇಷ.

ಮೇಷ ರಾಶಿ :
ಆಸ್ತಿ ಸಂಬಂಧಿತ ಕನಸು ಫಲಿಸುವುದು. ತಪ್ಪಿಲ್ಲದ ಕಡೆ ಭಯ ಬೇಡ. ಸರ್ಕಾರಿ ಉದ್ಯೋಗದಲ್ಲಿ ಪ್ರಾರ್ಥನೆ ಫಲಿಸುವ ಸೂಚನೆ. ಭೂಮಿಗೆ ಸಂಬಂಧಿಸಿದ ವಿಚಾರಗಳನ್ನು ಇತ್ಯರ್ಥ ಮಾಡಿಕೊಳ್ಳುವುದು ಉಚಿತ. ಉನ್ನತ ವಿದ್ಯಾಭ್ಯಾಸದ ಪ್ರಯುಕ್ತ ಹೊರಗಡೆ ಇರಲಿರುವಿರಿ. ನಿಮ್ಮ ಕಾರ್ಯವು ಆಗಬೇಕಾದರೆ ಓಡಾಟ ಅನಿವಾರ್ಯವಾಗಲಿದೆ. ಅನಾರೋಗ್ಯದ ನಡುವೆಯೂ ಉತ್ಸಾಹದಿಂದ ಇರುವಿರಿ. ಶತ್ರುಗಳ ಮುಖಾಮುಖಿ ಭೇಟಿಯ ಸಂದರ್ಭವು ಬರುವುದು. ನೀವು ಇಂದು ಯಾವ ವಿಚಾರವನ್ನು ಮಾತನಾಡುವುದಿದ್ದರೂ ಎಚ್ಚರವಿರಲಿ. ಕೃಷಿಯಲ್ಲಿ ಪ್ರಕೃತಿ ಅನುಕೂಲ. ಮಾರಾಟದಲ್ಲಿ ನಂಬಿಕೆಯ ಗ್ರಾಹಕರು. ದಾಂಪತ್ಯದಲ್ಲಿ ಪರಸ್ಪರ ಕರುಣೆ ಹೆಚ್ಚುತ್ತದೆ. ವಿದ್ಯಾಭ್ಯಾಸದಲ್ಲಿ ಕಲ್ಪನೆ ಶಕ್ತಿ ಜಾಗರೂಕವಾಗಲಿದೆ. ಒಂದೊಂದು ರೂಪಾಯಿಯನ್ನೂ ಜೊಪಾನ ಮಾಡುವಿರಿ. ಎಂತಹ ಸನ್ನಿವೇಶದಲ್ಲಿಯೂ ನೀವು ವಿಚಲಿತರಾಗುವುದಿಲ್ಲ. ಸಿಟ್ಟಗೊಂಡು ಮಾತನಾಡಬೇಕಾದ ಅವಶ್ಯಕತೆ ಇಲ್ಲ.
ವೃಷಭ ರಾಶಿ:
ಕೃಷಿಯಲ್ಲಿ ತಂತ್ರಜ್ಞಾನದ ಪ್ರಯೋಗವಾಗಲಿದೆ. ಮಾರಾಟದಲ್ಲಿ ಹೊಸ ಆಲೋಚನೆ ಫಲಕಾರಿ. ದಾಂಪತ್ಯದಲ್ಲಿ ಸ್ನೇಹಭಾವ. ಓದಿನಲ್ಲಿ ವಿಭಿನ್ನ ಆಸಕ್ತಿ. ಮಕ್ಕಳಿಂದ ಅಚ್ಚರಿ ಸುದ್ದಿ ನಿಮಗೆ ಸಂತಸ. ಆಕಸ್ಮಿಕವಾಗಿ ಆರೋಗ್ಯವು ಹದ ತಪ್ಪಬಹುದು. ವಿದೇಶದ ವ್ಯವಹಾರದಲ್ಲಿ ಪಾಲುದಾರಿಕೆ ಇರಲಿದೆ. ವೃತ್ತಿಯನ್ನು ಹೊರತುಪಡಿಸಿದ ಅವಕಾಶಗಳು ನಿಮ್ಮನ್ನು ಹುಡುಕಿ ಬರಬಹುದು. ದಾಂಪತ್ಯದ ಒಳ ಜಗಳವು ಇಂದು ವ್ಯಕ್ತವಾಗಬಹುದು. ನಿಮ್ಮನ್ನು ನಂಬಿದವರಿಗೆ ಸಹಾಯ ಮಾಡಲಾಗದು. ಉತ್ತಮ ಸಮಯದ ನಿರೀಕ್ಷೆಯಲ್ಲಿ ಸಮಾಧಾನ ಇರುವುದು. ನಿಮ್ಮಲ್ಲಿ ಇರುವ ವಸ್ತುಗಳನ್ನು ನೀವು ಯಾರಿಗಾದರೂ ಕೊಡುವುದು ಬೇಡ. ಆಸ್ತಿ ಹಂಚಿಕೆ ವಿಚಾರದಲ್ಲಿ ಗೊಂದಲ. ಸರ್ಕಾರಿ ಉದ್ಯೋಗದಲ್ಲಿ ಹೊಸ ಹೊಣೆಗಾರಿಕೆ. ಮಕ್ಕಳಿಂದ ನೆಮ್ಮದಿಯು ಪಡೆಯವಿರಿ. ವ್ಯವಹಾರವನ್ನು ಲಾಭದಾಯಕವನ್ನಾಗಿ ಮಾಡಿಕೊಳ್ಳಲು ಸೋಲಾಗಬಹುದು. ನಿಮ್ಮ ಗುರಿಯನ್ನು ತಲುಪಲು ನಿಮಗೆ ವಿಘ್ನಗಳು ಬರಬಹುದು. ಅಂದುಕೊಂಡಿದ್ದನ್ನು ಸಾಧಿಸಲಾಗದು ಎಂಬ ಅಳುಕು ನಿಮ್ಮಲ್ಲಿ ಇರುವುದು.
ಮಿಥುನ ರಾಶಿ:
ಮನೆಯ ಕಾರ್ಯಗಳಿಗೆ ಮಕ್ಕಳಿಂದ ಸಹಕಾರ. ಆಸ್ತಿ ದಾಖಲೆ ತಿದ್ದುಪಡಿ. ಭಯ ನಿಧಾನವಾಗಿ ಇಳಿಮುಖ. ಸರ್ಕಾರಿ ಉದ್ಯೋಗದಲ್ಲಿ ಕಠಿಣ ಪರಿಶ್ರಮ. ನಂಬಿಕೆಯಲ್ಲಿ ದ್ರೋಹವಾಗಿದ್ದು ಯಾರನ್ನು ನಂಬಬೇಕು ಎನ್ನುವ ಗೊಂದಲ ಕಾಣಿಸುವುದು. ಸಾಮಾಜಿಕ ಕ್ಷೇತ್ರದಲ್ಲಿ ಮನ್ನಣೆಯನ್ನು ಆಸೆ ಅತಿಯಾಗುವುದು. ವೈಯಕ್ತಿಕ ಕೆಲಸಗಳು ಬಹಳಷ್ಟು ಇದ್ದು, ಮಾಡಲು ಸಮಯ ಸಾಲದು. ಮಿತ್ರರ ಸಹಾಯದಿಂದ ನಿಮಗೆ ಧನ ಸಹಾಯವು ಸಿಗಬಹುದು. ಸಾರ್ವಜನಿಕವಾಗಿ ಯಾರಾದರೂ ನಿಮ್ಮನ್ನು ಅವಮಾನ ಮಾಡುವ ಸಾಧ್ಯತೆ ಇದೆ. ನಿಮಗೆ ಪರಿಚಿತರನ್ನು ಆಪ್ತರನದನಾಗಿ ಮಾಡಿಕೊಳ್ಳುವಿರಿ. ಯಾರಿಗೋ ಸಿಗುವ ಸಂಪತ್ತು ನಿಮ್ಮ ಕೈ ಸೇರುವುದು. ಸಂಗಾತಿಯ ಭಾವನೆಗಳಿಗೆ ಸ್ಪಂದಿಸದಿದ್ದರೆ ನಿಮ್ಮ ಮೇಲೆ ಕೋಪಗೊಳ್ಳುವರು. ಕೃಷಿಯಲ್ಲಿ ಶ್ರಮ ಹೆಚ್ಚು ಫಲ ಕಡಿಮೆ. ಮಾರಾಟದಲ್ಲಿ ಸ್ಥಿರತೆ. ದಾಂಪತ್ಯದಲ್ಲಿ ಜವಾಬ್ದಾರಿ ಹೆಚ್ಚಾಗುತ್ತದೆ. ವಿದ್ಯಾಭ್ಯಾಸದಲ್ಲಿ ತಾಳ್ಮೆ ಅಗತ್ಯ. ಗೆಳೆತನದಿಂದ ಸಲ್ಲದ ಮಾತುಗಳು ನಿಮ್ಮ ಬಗ್ಗೆ ಬರಬಹುದು. ನಿಮ್ಮ ದಕ್ಷ ಕಾರ್ಯವು ಎಲ್ಲರಿಗೂ ಮಾದರಿಯಾದೀತು.
ಕರ್ಕಾಟಕ ರಾಶಿ:
ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಗುರಿ ಸ್ಪಷ್ಟ. ಮಕ್ಕಳಿಗೆ ಕೊಡುವ ಶಿಕ್ಷಣ ಚರ್ಚೆ. ಆಸ್ತಿ ಸಂಬಂಧಿತ ದೂರ ಪ್ರಯಾಣ. ಸರ್ಕಾರಿ ಉದ್ಯೋಗದಲ್ಲಿ ಅವಕಾಶದ ಸೂಚನೆ. ಶ್ರೇಷ್ಠ ವ್ಯಕ್ತಿಗಳ ಸಹವಾಸವು ನಿಮಗೆ ಸಿಗಲಿದೆ. ವಿದ್ಯಾರ್ಥಿಗಳು ಯಾರ ಬೆಂಬಲಕ್ಕೂ ಕಾಯದೇ ನಿಮ್ಮ ಪ್ರತಿಭೆಯ ಪ್ರದರ್ಶನಕ್ಕೆ ಮುನ್ನುಗ್ಗುವುದು ಸೂಕ್ತ. ನಿಮಗೆ ಇಷ್ಟವಾದ ವಿಚಾರವನ್ನು ತಕ್ಷಣ ಪಡೆಯುವಿರಿ. ಉದ್ಯೋಗವಿಲ್ಲವೆಂಬುದು ನಿಮಗೆ ಅವಮಾನದ ಸಂಗತಿಯಾಗಲಿದೆ. ಸಿಕ್ಕ ಅವಕಾಶವನ್ನು ಸದ್ಯ ಬಳಸಿಕೊಳ್ಳಿ. ನಿಮ್ಮ ನಕಾರಾತ್ಮಕ ಆಲೋಚನೆಗಳಿಂದ ಕುಟುಂಬದ ಆಲೋಚನೆಯನ್ನು ಕೆಡಿಸುವಿರಿ. ನಿಮ್ಮವರನ್ನು ಅವರಷ್ಟಕ್ಕೆ ಬಿಟ್ಟು ಬಿಡಿ. ಅಪರಿಚಿತರು ನಿಮ್ಮ ಉದ್ಯೋಗಕ್ಕೆ ಸಂಬಂಧಿಸಿದಂತೆ ಸಲಹೆಯನ್ನು ಕೊಡಬಹುದು. ಕೃಷಿಯಲ್ಲಿ ವಿಸ್ತರಣೆ ಯೋಚನೆ. ಮಾರಾಟದಲ್ಲಿ ದೂರದ ವ್ಯವಹಾರ ಲಾಭ. ದಾಂಪತ್ಯದಲ್ಲಿ ಆಶಾವಾದ. ಆತುರದಲ್ಲಿ ನಿಮ್ಮ ಎಲ್ಲ ಕಾರ್ಯವೂ ಮೊಟಕುಮಾಡುವಿರಿ.
ಸಿಂಹ ರಾಶಿ:
ವಿದ್ಯಾಭ್ಯಾಸದಲ್ಲಿ ಆಳವಾದ ಅಧ್ಯಯನದ ಆರಂಭ. ಮಕ್ಕಳ ಹಠವನ್ನು ನೀವು ಕಡಿಮೆ ಮಾಡಬೇಕಾಗುತ್ತದೆ. ಆಸ್ತಿ ವಿವಾದ ಎಚ್ಚರಿಕೆ. ಮನೋಭಯ ನಿಯಂತ್ರಣ. ಸರ್ಕಾರಿ ಉದ್ಯೋಗದಲ್ಲಿ ಅನಿರೀಕ್ಷಿತ ತಿರುವು. ಅಮೂಲ್ಯ ವಸ್ತುಗಳನ್ನು ಖರೀದಿಸುವುದು ಕಷ್ಟವಾದರೂ ಮಾಡುವಿರಿ. ಪಾಲುದಾರಿಕೆಯಲ್ಲಿ ಭೂ ಸಂಬಂಧದ ಕಾರ್ಯದಿಂದ ಲಾಭವಾಗಲಿದೆ. ಕಾರ್ಯದ ಒತ್ತಡವನ್ನು ಸಹಿಸಲು ಅಸಾಧ್ಯವೆನಿಸುವುದು. ಕಛೇರಿಯಲ್ಲಿ ನಾನಾ ಕಡೆಗಳಿಂದ ಒತ್ತಡ ಬರಬಹುದು. ನಿಮ್ಮ ಸಾಮರ್ಥ್ಯಕ್ಕೆ ಕೊಟ್ಟ ಜವಾಬ್ದಾರಿಯು ಸಣ್ಣದಾಗಿರುವುದು. ನಿಮ್ಮ ಬಂಧುಗಳ ಸಹಾಯದಿಂದ ವಿವಾಹದ ಮಾತುಕತೆಯು ಘಟಿಸುವುದು. ಪರಿಶ್ರಮಕ್ಕೆ ತಕ್ಕ ಫಲವನ್ನೂ ನೀವು ಅಪೇಕ್ಷಿಸಿ ಪಡೆದುಕೊಳ್ಳುವಿರಿ. ಕೃಷಿಯಲ್ಲಿ ಗುಪ್ತ ಸಮಸ್ಯೆ ಗಮನಿಸಿ ಆದಾಯ ಹೆಚ್ಚಳಕ್ಕೆ ಪ್ರಯತ್ನ. ಮಾರಾಟದಲ್ಲಿ ಪರೋಕ್ಷ ಲಾಭ. ದಾಂಪತ್ಯದಲ್ಲಿ ಸಂಶಯ ಬೇಡ. ಅಗತ್ಯವಿರುವ ಸಂಪತ್ತನ್ನು ಸ್ನೇಹಿತರಿಂದ ಸಾಲವಾಗಿ ಪಡೆಯುವಿರಿ. ದುರಭ್ಯಾಸವನ್ನು ಬೆಳೆಸಿಕೊಳ್ಳುವುದು ಬೇಡ. ಮನೋರಂಜನೆಗೆ ಹಣವು ಖರ್ಚಾಗುವುದು.
ಕನ್ಯಾ ರಾಶಿ:
ಓದಿನಲ್ಲಿ ಕಲಾತ್ಮಕ ವಿಷಯಗಳು ಚೆನ್ನಾಗಿ ಅರ್ಥವಾಗಲಿದೆ. ಮಕ್ಕಳೊಂದಿಗೆ ಸಮಯ ಕಳೆಯಿರಿ. ಆಸ್ತಿ ವಿಷಯದಲ್ಲಿ ಒಪ್ಪಂದ ಸಾಧ್ಯ. ಅಜ್ಞಾತ ಭಯದಿಂದ ಕಷ್ಟ. ಸರ್ಕಾರಿ ಉದ್ಯೋಗಕ್ಕೆ ನಿರೀಕ್ಷೆ. ನಿಂತ ಕಾರ್ಯಕ್ಕೆ ಚಾಲನೆ ನೀಡುವಿರಿ. ದಾಂಪತ್ಯವು ಪರಸ್ಪರ ಸೌಹಾರ್ದದ ಮಾತುಗಳಿಂದ ನೆಮ್ಮದಿ ಸಿಗುವುದು. ಮಕ್ಕಳ ವಿಚಾರವಾಗಿ ಅನವಶ್ಯಕ ಖರ್ಚು ಮಾಡುವುದು ಬೇಡ. ಅವಶ್ಯಕತೆಯನ್ನು ನೋಡಿ. ಅನಿಶ್ಚಿತ ಕೆಲಸದಲ್ಲಿ ಆದಾಯವನ್ನು ಹೆಚ್ಚು ಪಡೆಯುವಿರಿ. ಸರ್ಕಾರಿ ಕೆಲಸಗಳು ಒತ್ತಡದ ಕಾರಣಕ್ಕೆ ಮುಂದುವರಿಯುವುದು. ನೀವು ಮೌನದಿಂದ ಇದ್ದರೆ ಒಪ್ಪಿಗೆ ಕೊಟ್ಟಿದ್ದೀರಿ ಎಂದಾಗುವುದು. ಸಮಯಕ್ಕೆ ಬೆಲೆ ಕೊಟ್ಟು ಎಲ್ಲವನ್ನೂ ಸಕಾಲಕ್ಕೆ ಮುಗಿಸುವುದು ಉತ್ತಮ. ಕೃಷಿಯಲ್ಲಿ ಅಸಾಧ್ಯದ ಸಾಧನೆಗೆ ಪ್ರಯತ್ನ. ಮಾರಾಟದಲ್ಲಿ ಸಮತೋಲನ ಅಗತ್ಯ. ದಾಂಪತ್ಯದಲ್ಲಿ ಸೌಹಾರ್ದ ವಾತಾವರಣ. ಆಪ್ತರನ್ನು ದೂರ ಮಾಡಿಕೊಳ್ಳಬೇಕಾಗುವುದು. ಒಂಟಿಯಾಗಿ ವಾಹನವನ್ನು ಚಲಾಯಿಸುವುದು ಬೇಡ.
ತುಲಾ ರಾಶಿ:
ಚರಾಸ್ತಿಯಗಳನ್ನ ದುರಸ್ತಿ ಮಾಡಿಸುವಿರಿ. ಸರ್ಕಾರಿ ಉದ್ಯೋಗದಲ್ಲಿ ದಾಖಲೆ ಕೆಲಸ ಹೆಚ್ಚಾಗುತ್ತದೆ. ವ್ಯಾಪಾರದ ಸ್ಥಳದಲ್ಲಿ ಇಕ್ಕಟ್ಟು ಉಂಟಾಗಬಹುದು. ತಾಳ್ಮೆಯನ್ನು ಕಳೆದುಕೊಳ್ಳುವುದು ಬೇಡ. ರಾಜಕೀಯ ಏರಿಳಿತವನ್ನು ನೀವು ಊಹಿಸುವುದು ಕಷ್ಟವಾದೀತು. ಸಾಲದಿಂದ ಬಿಡುಗಡೆ ಸಿಕ್ಕ ಕಾರಣ ಕುಟುಂಬದಲ್ಲಿ ಸೌಖ್ಯವಿರುವುದು. ಎಲ್ಲ ಕೆಲಸಗಳೂ ಅಪೂರ್ಣವಾಗಿದ್ದು ನಿಮಗೆ ಅಸಮಾಧನ ಇರುವುದು. ನೂತನ ವಾಹನ ಖರೀದಿಯಿಂದ ಸಂತೋಷವಾಗಲಿದೆ. ಕಾರ್ಯದ ಒತ್ತಡದಿಂದ ತಾಳ್ಮೆಯನ್ನು ಕಳೆದುಕೊಳ್ಳಬೇಕಾಗುವುದು. ಕೃಷಿಯಲ್ಲಿ ಸಣ್ಣ ಸಣ್ಣ ಲೆಕ್ಕಾಚಾರದಿಂದ ಲಾಭ. ಮಾರಾಟದಲ್ಲಿ ನಿಧಾನ ಪ್ರಗತಿಯನ್ನು ಕಂಡುಕೊಳ್ಳುವಿರಿ. ದಾಂಪತ್ಯದಲ್ಲಿ ಅತಿಯಾದ ವಿಮರ್ಶೆ ಬೇಡ. ವಿದ್ಯಾಭ್ಯಾಸದಲ್ಲಿ ಶಿಸ್ತು ಫಲ ಕೊಡುತ್ತದೆ. ಮಕ್ಕಳ ಚಟುವಟಿಕೆ ಗಮನಿಸಿ. ಯಾವ ಕಾರ್ಯಕ್ಕೂ ಉತ್ಸಾಹವೇ ಇಲ್ಲದಂತಾದೀತು. ಯಾರಿಂದಲಾದರೂ ಪ್ರಚೋದನೆ ಸಿಕ್ಕೀತು. ಮಕ್ಕಳ ವಿಚಾರವಾಗಿ ಅನವಶ್ಯಕ ಖರ್ಚು ಮಾಡುವುದು ಬೇಡ.
ವೃಶ್ಚಿಕ ರಾಶಿ :
ಆಸ್ತಿ ಖರೀದಿಯಲ್ಲಿ ಹಲವು ಯೋಚನೆ. ಅಂತರಂಗದ ಭಯ ನಿವಾರಣೆ ಅನೇಕರ ಪ್ರಯತ್ನ. ಸರ್ಕಾರಿ ಉದ್ಯೋಗ ಪ್ರಯತ್ನಕ್ಕೆ ಪ್ರೋತ್ಸಾಹ. ನಿಮ್ಮ ದಕ್ಷ ಕಾರ್ಯವು ಎಲ್ಲರಿಗೂ ಮಾದರಿಯಾದೀತು. ನಿಮಗೆ ಸಿಗುವ ಸಾಮಾಜಿಕವಾಗಿ ಮನ್ನಣೆಯು ಅಧಿಕ ಕಾರ್ಯವನ್ನು ಮಾಡುವಂತೆ ಮಾಡೀತು. ಸಂತಾನದ ವಿಚಾರದಲ್ಲಿ ಅಶಾಂತಿ ಮೂಡಬಹುದು. ಮೇಲಧಿಕಾರಿಗಳು ನಿಮ್ಮ ಮೇಲೆ ಒತ್ತಡ ತಂದು ಕೆಲಸವನ್ನು ಮಾಡಿಸಿಕೊಳ್ಳುವರು. ವಿರೋಧಿಗಳನ್ನು ಲೆಕ್ಕಿಸದೇ ನಿಮ್ಮಷ್ಟಕ್ಕೆ ಇರುವಿರಿ. ಅನಾರೋಗ್ಯವನ್ನೂ ನೀವು ಲೆಕ್ಕಿಸದೇ ಕಾರ್ಯದಲ್ಲಿ ಪ್ರವೃತ್ತರಾಗುವಿರಿ. ನಿಮ್ಮ ಬಯಕೆಗಳನ್ನು ಯಾರ ಬಳಿಯೂ ಪ್ರಕಟಪಡಿಸುವುದಿಲ್ಲ. ಕೃಷಿಯಲ್ಲಿ ನಾಯಕತ್ವ ತೋರಬಹುದು. ಮಾರಾಟದಲ್ಲಿ ಸ್ಪರ್ಧೆ ಹೆಚ್ಚಾಗುತ್ತದೆ. ದಾಂಪತ್ಯದಲ್ಲಿ ಅಹಂಕಾರ ತಪ್ಪಿಸಿ. ವಿದ್ಯಾಭ್ಯಾಸದಲ್ಲಿ ಸಾಧನೆ. ಮಕ್ಕಳಿಗೆ ಮಾರ್ಗದರ್ಶನ ಅಗತ್ಯ. ಸ್ಪರ್ಧಾತ್ಮಕ ಪರೀಕ್ಷೆಗೆ ಇನ್ನೂ ಹೆಚ್ಚಿನ ಶ್ರಮವು ಬೇಕು. ಎಂದೋ ಕಾಣೆಯಾದ ವಸ್ತುವು ಅನಿರೀಕ್ಷಿತವಾಗಿ ಸಿಗುವುದು. ನಿಮ್ಮನ್ನು ವಿರೋಧಿಸುವವರು ಹೆಚ್ಚಾದಾರು.
ಧನು ರಾಶಿ:
ದಾಂಪತ್ಯದಲ್ಲಿ ಭಾವನಾತ್ಮಕ ಬೆಂಬಲ ಕಡಿಮೆಯಾಗಬಹುದು. ಓದಿನಲ್ಲಿ ಸ್ಮರಣಶಕ್ತಿ ಹೆಚ್ಚಳ. ಮಕ್ಕಳು ಹೆಮ್ಮೆ ತರಿಸುವರು. ಆಸ್ತಿ ವಿಷಯದಲ್ಲಿ ಕುಟುಂಬ ಸಲಹೆ ಪಡೆಯಿರಿ. ಸ್ಪರ್ಧೆಗಾಗಿ ನಡೆಸಿದ ನಿಮ್ಮ ಶ್ರಮವು ವ್ಯರ್ಥವಾದೀತು. ಆಸ್ತಿಯ ವಿಚಾರಕ್ಕೆ ನೆರಮನೆಯವರ ಜೊತೆ ಕಲಹವಾಗಲಿದೆ. ನಿಮ್ಮ ಕಾರ್ಯಕ್ಷೇತ್ರದಲ್ಲಿ ಉತ್ತಮ ಪ್ರಗತಿ ಇರಲಿದೆ. ಸಂಗಾತಿಯಿಂದ ನಿರೀಕ್ಷಿತ ಬೆಂಬಲವು ಸಿಗದು. ಧಾರ್ಮಿಕ ವಿಷಯದಲ್ಲಿ ನಿಮಗೆ ಆಸಕ್ತಿಯು ಕಡಿಮೆ ಆಗಲಿದೆ. ಸಕಾರಾತ್ಮಕ ಚಿಂತನೆಯನ್ನು ದೂರ ಮಾಡಿಕೊಳ್ಳುವಿರಿ. ಸದಾ ಅನುಮಾನದಿಂದಲೇ ಇರುವಿರಿ. ನಿಮ್ಮ ಗೌರವಕ್ಕೆ ತೊಂದರೆಯಾಗುವ ಕಡೆ ನೀವು ಹೋಗುವುದು ಬೇಡ. ಕೃಷಿಯಲ್ಲಿ ನೀರಿನ ನಿರ್ವಹಣೆ ಮುಖ್ಯ. ಮಾರಾಟದಲ್ಲಿ ಹಳೆಯ ಸಂಪರ್ಕ ಲಾಭ. ಸರ್ಕಾರಿ ಉದ್ಯೋಗದಲ್ಲಿ ಶುಭ ಸುದ್ದಿ ಸಾಧ್ಯ. ಕುತೂಹಲದಲ್ಲಿ ಈ ದಿನವನ್ನು ಕಳೆಯುವಿರಿ. ಪತ್ರವ್ಯವಹಾರವನ್ನು ಸರಿಯಾಗಿ ಇಟ್ಟುಕೊಳ್ಳಿ. ಎಲ್ಲದಕ್ಕೂ ಯಾರನ್ನಾದರೂ ಕಾರಣವಾಗಿಸುವಿರಿ.
ಮಕರ ರಾಶಿ:
ವಿದ್ಯಾಭ್ಯಾಸದಲ್ಲಿ ಗಮನ ಚದುರಬಹುದು. ಮಕ್ಕಳ ಮಾತು ಆಲಿಸಿ. ಆಸ್ತಿ ವ್ಯವಹಾರದಲ್ಲಿ ಎಚ್ಚರಿಕೆ. ಮನಸ್ಸಿನ ಭಯ ಶಮನ. ಸರ್ಕಾರಿ ಉದ್ಯೋಗ ವಿಳಂಬ. ನಿಮ್ಮ ಬೆನ್ನನ್ನೇ ನೀವು ತಟ್ಟಿಕೊಳ್ಳುವುದು ಔಚಿತ್ಯವಿಲ್ಲ. ಆದಾಯವನ್ನು ನಿರೀಕ್ಷಿತ ಖರ್ಚಿನ ಬಗ್ಗೆ ನಿಯಂತ್ರಣ ಬೇಕು. ಅನಗತ್ಯ ಅಲೆದಾಟವನ್ನು ನಿಲ್ಲಿಸಿ ಕಾರ್ಯದಲ್ಲಿ ಮಗ್ನರಾಗಿ. ಅಲ್ಪ ಕಾರ್ಯದಿಂದ ಎಲ್ಲವೂ ಸಿದ್ಧಿಸುವುದಾದರೂ ಅಧಿಕ ಶ್ರಮವಿರುವುದು. ಕಲಾವಿದರು ಹೆಚ್ಚಿನ ಪ್ರಶಂಸೆಗೆ ಪಾತ್ರರಾಗಲಿದ್ದಾರೆ. ಯಾರೋ ಮಾಡಬೇಕಾದ ಕೆಲಸಕ್ಕೆ ನೀವು ಹೋಗಬೇಕಾದೀತು. ಹಣವಿದ್ದರೂ ಸಮಯಕ್ಕೆ ಸರಿಯಾಗಿ ಸಿಗದ ಕಾರಣ ತುರ್ತಾಗಿ ಸಾಲವನ್ನು ಮಾಡಬೇಕಾಗುವುದು. ಕೃಷಿಯಲ್ಲಿ ಹೊಸ ವಿಧಾನ ಪ್ರಯೋಗಿಸಬಹುದು. ಮಾರಾಟದಲ್ಲಿ ಗ್ರಾಹಕರೊಂದಿಗೆ ಗೊಂದಲ ಸಾಧ್ಯ. ದಾಂಪತ್ಯದಲ್ಲಿ ಸಣ್ಣ ಭಿನ್ನಾಭಿಪ್ರಾಯ. ನಿಮ್ಮ ವೃತ್ತಿಯಿಂದ ಹೆಚ್ಚಿನ ಆದಾಯವನ್ನು ನಿರೀಕ್ಷಿಸುವಿರಿ. ಸಂಗಾತಿಯು ನಿಮ್ಮನ್ನು ಬೆಂಬಲಿಸರು.
ಕುಂಭ ರಾಶಿ:
ಓದಿನಲ್ಲಿ ಏಕಾಗ್ರತೆ ಹೆಚ್ಚುತ್ತದೆ. ಮಕ್ಕಳ ಆರೋಗ್ಯ ಗಮನಿಸಿ. ಆಸ್ತಿ ದಾಖಲೆ ಪರಿಶೀಲನೆ ಅಗತ್ಯ. ಭಯ ಕಡಿಮೆಯಾಗುತ್ತದೆ. ಸರ್ಕಾರಿ ಉದ್ಯೋಗದಲ್ಲಿ ನಿರೀಕ್ಷೆ ಜೀವಂತ. ನಿಮ್ಮ ಭಾವನೆಗೇ ಇಂದು ನೇರವಾಗಿ ಪೆಟ್ಟುಬೀಳುವ ಸಾಧ್ಯತೆ ಇದೆ. ಅದನ್ನು ಆ ಸಮಯದಲ್ಲಿ ನಿಭಾಯಿಸುವ ಜಾಣ್ಮೆ ಇರಲಿ. ನಿಮ್ಮ ಗುರಿಯನ್ನು ಬದಲಾಯಿಸುವುದು ಬೇಡ. ಹೇಳಬೇಕಾದ ವಿಷಯದಲ್ಲಿ ಮುಚ್ಚು ಮರೆ ಇಲ್ಲದೇ ಸರಿಯಾಗಿ ಹೇಳಿ. ಬೇರೆಯವರನ್ನು ಗೊಂದಲಕ್ಕೆ ಸಿಕ್ಕಿಹಾಕಿಸುವುದು ಬೇಡ. ನಿಮ್ಮ ಕಾರ್ಯದಲ್ಲಿನ ಶಿಸ್ತು ಉಳಿದವರಿಗೆ ಕಷ್ಟವಾದೀತು. ನೀವು ಹೋದಕಡೆ ನಿಮಗೆ ಬೇಕಾದ ಹಾಗೆ ವಾತಾವರಣವನ್ನು ಸೃಷ್ಟಿಸಿಕೊಳ್ಳುವಿರಿ. ಕೇಳಿ ಬಂದವರಿಗೆ ನೀವು ಇಂದು ಧನ ಸಹಾಯವನ್ನು ಮಾಡುವಿರಿ. ಭೂಮಿ ಸಂಬಂಧಿತ ಕೃಷಿ ಕೆಲಸಗಳು ಅನುಕೂಲ. ಮಾರಾಟದಲ್ಲಿ ಸ್ಥಿರ ಆದಾಯ. ದಾಂಪತ್ಯದಲ್ಲಿ ಮನದಾಳದ ಮಾತು ಹಂಚಿಕೊಳ್ಳಿ. ಹೆಚ್ಚಿನ ಆದಾಯಕ್ಕೆ ನೀವು ಚಿಂತನೆ ನಡೆಸುವಿರಿ. ಅಧ್ಯಾತ್ಮದಲ್ಲಿ ನಿಮಗೆ ನಿರಾಸಕ್ತಿಯು ಉಂಟಾಗಬಹುದು. ಏಕತಾನತೆಯಿಂದ ಹೊರಬರುವಿರಿ.
ಮೀನ ರಾಶಿ:
ಕೃಷಿಯಲ್ಲಿ ಪರಿಶ್ರಮದ ಫಲ ತಡವಾಗಿ ಸಿಗುತ್ತದೆ. ಮಾರಾಟದಲ್ಲಿ ಮಾತಿನ ಜಾಣ್ಮೆ ಅಗತ್ಯ. ದಾಂಪತ್ಯದಲ್ಲಿ ಸಹನೆ ಇರಲಿ. ವಿದ್ಯಾಭ್ಯಾಸದಲ್ಲಿ ಹೊಸ ಉತ್ಸಾಹ. ಮಕ್ಕಳಿಂದ ಸಂತೋಷ. ಆಪಾಯದ ಸೂಚನೆಯನ್ನು ಗಮನಿಸಿಕೊಳ್ಳಿ. ನಿಮ್ಮ ಬಗ್ಗೆ ಅತಿಯಾದ ಆತ್ಮವಿಶ್ವಾಸ ಇರಲಿದೆ. ವ್ಯಾಪಾರವನ್ನು ಅಚ್ಚುಕಟ್ಟಾಗಿ ಮುಗಿಸುವ ಕೌಶಲವು ನಿಮ್ಮಲ್ಲಿರುವುದು. ಆಮದು ವ್ಯವಹಾರವು ಸ್ವಲ್ಪ ಲಾಭವನ್ನು ಕೊಡುವುದು. ಉದ್ಯಮಿಗಳ ಭೇಟಿ ಮಾಡುವಿರಿ. ಭೂಮಿಯ ಖರೀದಿಗೆ ಸೂಕ್ತ ಸಮಯವಿದ್ದು ಇಷ್ಟಪಟ್ಟ ಭೂಮಿಯು ಸಿಗುವುದು. ಸಂಗಾತಿಯ ಮಾತಿನಿಂದ ನೀವು ನೆಮ್ಮದಿಯನ್ನು ಕಳೆದುಕೊಳ್ಳುವಿರಿ. ಮನಸ್ಸಿನ ಚಾಂಚಲ್ಯವನ್ನು ಯೋಗವೇ ಮದ್ದಾಗಲಿದೆ. ಆಸ್ತಿ ವ್ಯವಹಾರ ಮುಂದೂಡಿರಿ. ಅಕಾರಣ ಭಯ ಕಡಿಮೆಯಾಗುತ್ತದೆ. ಸರ್ಕಾರಿ ಉದ್ಯೋಗ ಪ್ರಯತ್ನಗಳಿಗೆ ಸಣ್ಣ ಮುನ್ನಡೆ. ಜಾಣ್ಮೆಯಿಂದ ಸವಾಲನ್ನು ಎದುರಿಸಬೇಕಾಗಬಹುದು. ನೀವೇ ಸಮಯವನ್ನು ಹೊಂದಿಸಿಕೊಂಡು ಕಾರ್ಯದಿಂದ ಸಲ್ಪ ವಿಶ್ರಾಂತಿಯನ್ನು ಪಡೆಯಬೇಕು.
24 ಡಿಸೆಂಬರ್ 2025ರ ಪಂಚಾಂಗ:
ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಧನು, ಮಹಾನಕ್ಷತ್ರ : ಮೂಲಾ, ವಾರ : ಬುಧ, ಪಕ್ಷ : ಶುಕ್ಲ, ತಿಥಿ : ಚತುರ್ಥೀ, ನಿತ್ಯನಕ್ಷತ್ರ : ಶ್ರವಣಾ, ಯೋಗ : ಹರ್ಷಣ, ಕರಣ : ಭದ್ರ, ಸೂರ್ಯೋದಯ – 06 – 46 am, ಸೂರ್ಯಾಸ್ತ – 06 – 01 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 12:24 – 13:28, ಯಮಗಂಡ ಕಾಲ 08:11 – 09:35, ಗುಳಿಕ ಕಾಲ 10:59 – 12:24
-ಲೋಹಿತ ಹೆಬ್ಬಾರ್ – 8762924271 (what’s app only)




