AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today 27 December: ಇಂದು ಈ ರಾಶಿಗೆ ಅಪರೂಪದ ಬಂಧುಗಳ ಭೇಟಿಯಿಂದ ಸಂತೋಷವಾಗಲಿದೆ

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಪೌಷ ಮಾಸ ಶುಕ್ಲ ಪಕ್ಷದ ಸಪ್ತಮೀ ತಿಥಿ ಶನಿವಾರ ಕಾಮಗಾರಿ, ಹಿತಶತ್ರು, ಆದಾಯ, ಪ್ರಶಂಸೆ, ಲೆಕ್ಕಾಚಾರ, ಆತ್ಮಸ್ಥೈರ್ಯ, ಸರಳತೆ ಇವೆಲ್ಲ ಇಂದಿನ ಭವಿಷ್ಯ. ಜೀವನದ ಸವಾಲುಗಳನ್ನು ಎದುರಿಸಲು ಈ ಭವಿಷ್ಯ ನಿಮಗೆ ಸಹಾಯಕವಾಗಲಿದೆ.

Horoscope Today 27 December: ಇಂದು ಈ ರಾಶಿಗೆ ಅಪರೂಪದ ಬಂಧುಗಳ ಭೇಟಿಯಿಂದ ಸಂತೋಷವಾಗಲಿದೆ
ದಿನ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Dec 27, 2025 | 12:21 AM

Share

ಮೇಷ ರಾಶಿ:

ಕಲೆ ನಿಮ್ಮ ಮನಸ್ಸನ್ನು ಆಳವಾಗಿ ಸ್ಪರ್ಶಿಸುತ್ತದೆ. ಪ್ರತಿಭೆ ಭಾವನಾತ್ಮಕವಾಗಿ ವ್ಯಕ್ತವಾಗುತ್ತದೆ. ಕಾಮಗಾರಿ ಏರಳಿತಗಳಿಲ್ಲದೇ ಶಾಂತವಾಗಿ ಸಾಗುತ್ತದೆ. ನೀವು ಎಲ್ಲ ಕಾರ್ಯವನ್ನೂ ಅಚ್ಚುಕಟ್ಟಾಗಿ ಮಾಡಲು ಬಯಸುವಿರಿ. ಶತ್ರುಗಳ ಕಾಟವು ಆಕಸ್ಮಿಕವಾಗಿ ಕಡಿಮೆ ಆಗಲಿದೆ. ನಿಮ್ಮ ಊಹೆಗಳು ಎಲ್ಲವೂ ವಾಸ್ತವಕ್ಕೆ ದೂರವಾದುದಾಗಿದೆ. ಸಂಗಾತಿಯ ಮಾತುಗಳು ನಿಮಗೆ ಖುಷಿ ಕೊಟ್ಟೀತು. ಬಂಧುಗಳ ಆಗಮನದಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರಲಿದೆ. ನಿಮಗೆ ಅರ್ಥವಾಗದ ವಿಚಾರವನ್ನು ಬೇರೆಯವರ‌ ಕಡೆಯಿಂದ ಪಡೆಕೊಳ್ಳುವಿರಿ. ನಿಮ್ಮ‌ ಪ್ರಯಾಣದಲ್ಲಿ ಅಡೆತಡೆಗಳು ಉಂಟಾಗಬಹುದು. ಯೋಜನೆಗೆ ಪ್ರಾಯೋಗಿಕ ದೃಷ್ಟಿ ಬೇಕು. ಪ್ರಶಂಸೆ ಆತ್ಮಸ್ಥೈರ್ಯ ನೀಡುತ್ತದೆ. ಹಿತಶತ್ರುಗಳಿಂದ ದೂರವಿರುವುದು ಒಳಿತು. ನಿಮ್ಮವರ ಅನಾರೋಗ್ಯದ ಕಾರಣ ಓಡಾಟ ಮಾಡಬೇಕಾದೀತು. ಒಂಟಿಯಾಗಿ ಎಲ್ಲಿಗಾದರೂ ದೂರ ಹೋಗುವಿರಿ. ಅಶಿಸ್ತಿನಿಂದ ವರ್ತಿನೆಯ ಕಾರಣ ನಿಮಗೆ ಎಲ್ಲರಿಂದ ಅಪಮಾನವಾಗಬಹುದು. ಹೊಸ ಉದ್ಯೋಗದ ಅನ್ವೇಷಣೆಯಲ್ಲಿ ತೊಡಗುವಿರಿ. ಕಛೇರಿಯಲ್ಲಿ ಇಂದು ಕೆಲಸ ಮಾಡಲು ಆಸಕ್ತಿ ಕಡಿಮೆ ಇರಲಿದೆ.

ವೃಷಭ ರಾಶಿ:

ಹೊಸ ಉದ್ಯೋಗವು ವಿಭಿನ್ನ ಆಲೋಚನೆಯೊಂದಿಗೆ ಶುರುವಾಗುತ್ತದೆ. ಕಾಮಗಾರಿಯಲ್ಲಿ ತಂತ್ರಜ್ಞಾನ ಸಹಾಯ ಸಿಗುವುದು. ಆದಾಯ ಪ್ರತೀಕ್ಷೆ ಹೆಚ್ಚಾಗಬಹುದು. ಸಾಲಬಾಧೆಯ ಕಾರಣ ಮನಸ್ಸಿನಲ್ಲಿ ಅಸ್ಥಿರತೆ ಇರಲಿದೆ. ಯಾರ ಮಾತನ್ನೂ ಸಾವಧಾನವಾಗಿ ಕೇಳುವ ಮನಸ್ಸು ಇರದು. ಶುಭ ಸಮಾಚಾರದಿಂದ‌ ಮನಸ್ಸು ಅರಳುವುದು.‌ ಪ್ರೀತಿಯನ್ನು ಹೇಳಿಕೊಳ್ಳಲು ನಿಮಗೆ ಮುಜುಗರವಾಗಬಹುದು. ತುರ್ತು ನಿರ್ಧಾರಗಳನ್ನು ತೆಗೆದುಕೊಳ್ಳುವ ಸ್ಥಿತಿಯು ಬಂದರೂ ಸಮಯೋಚಿತವಾಗಿರಲಿ. ಮನೆಯಿಂದ ಹೊರ ಹೋಗುವುದು ನಿಮಗೆ ಇಷ್ಟವಾಗದು.‌ ಯಾರ ಒತ್ತಡಕ್ಕೂ ಮಣಿಯದ ನೀವಿ ಇಂದು ಒಪ್ಪಿಕೊಳ್ಳುವಿರಿ.‌ ಕಲೆಯ ಹೊಸ ಪ್ರಯೋಗಕ್ಕೆ ಪ್ರೇರಣೆ. ನಿಮ್ಮ ನವೀನ ಪ್ರತಿಭೆಗೆ ಪ್ರಶಂಸೆ. ಹಿತಶತ್ರುಗಳ ಪ್ರಭಾವ ಕ್ಷೀಣಿಸುತ್ತದೆ. ಪಾಲುದಾರಿಕೆಯಲ್ಲಿ ನಿಮ್ಮ ಶ್ರಮವೇ ಹೆಚ್ಚಿರಲಿದೆ. ನಿಮಗೆ ಇಷ್ಟವಾಗದ ಜವಾಬ್ದಾರಿಗಳು ಹೇಗಾದರೂ ಮಾಡಿ ತಪ್ಪಿಸಿಕೊಳ್ಳುವಿರಿ. ನಿಮ್ಮ ಮೇಲಿಟ್ಟ ನಂಬಿಕೆಯನ್ನು ಕಷ್ಟಪಟ್ಟು ಉಳಿಸಿಕೊಳ್ಳಬೇಕಾದೀತು.

ಮಿಥುನ ರಾಶಿ:

ಕಾಮಗಾರಿಯಲ್ಲಿ ಶಿಸ್ತನ್ನು ಅಳವಡಿಸಿಕೊಳ್ಳಿ. ಯೋಜನೆ ದೀರ್ಘಕಾಲೀನವಾಗಿರುತ್ತದೆ. ನಿಮ್ಮ ಪರಿಶ್ರಮವೇ ದೊಡ್ಡ ಪ್ರತಿಭೆ. ಒತ್ತಡದಿಂದ ಕಲೆಯಲ್ಲಿ ಕಡಿಮೆ ಆಸಕ್ತಿ. ಆತ್ಮೀಯರು ನಿಮಗೆ ಹಿತಶತ್ರುಗಳಾಗಬಹುದು. ನಿಮ್ಮ ಬಗ್ಗೆ ಸಲ್ಲದ ಪ್ರಚಾರವನ್ನು ಮಾಡುವ ಸಾಧ್ಯತೆ ಇದೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ಪೂರಕವಾದ ಜನರ ಗೆಳೆತನನ್ನು ಮಾಡಿಕೊಳ್ಳುವುದು ಉತ್ತಮ. ಮನಶ್ಚಾಂಚಲ್ಯದಿಂದ ಓದಿನ ಕಡೆ ಗಮನವು ಕಡಿಮೆ ಆಗಲಿದೆ. ಸಹೋದ್ಯೋಗಿಗಳ ಮಾತನ್ನು ಸಹಿಸಿಕೊಳ್ಳಲು ಕಷ್ಟವಾಗದು. ಸ್ನೇಹಿತರ ಜೊತೆ ಪ್ರವಾಸ ಹೋಗುವಿರಿ. ಅಪರೂಪದ ಬಂಧುಗಳ ಭೇಟಿಯಿಂದ ಸಂತೋಷವಾಗಲಿದೆ.‌ ಹಿತಶತ್ರುಗಳ ಟೀಕೆಗಳನ್ನು ನಿರ್ಲಕ್ಷ್ಯಿಸಬೇಕು. ಪ್ರಶಂಸೆ ನಿಧಾನವಾಗಿ ಆದರೆ ದೃಢವಾಗಿ ಬರುತ್ತದೆ. ಸಂಗಾತಿಯ ಜೊತೆ ಮಾತನಾಡಲು ಹೋಗಿ ಕಲಹವಾದೀತು. ದುಷ್ಕೃತ್ಯಕ್ಕೆ ಅಪ್ರತ್ಯಕ್ಷವಾಗಿ ಅನುಮೋದನೆ ಸಿಗಲಿದೆ. ಕೊಟ್ಟ ಹಣವನ್ನು ಹೊಂಪಡೆಯುವುದು ಕಷ್ಟ.

ಕರ್ಕಾಟಕ ರಾಶಿ:

ಹಾಕಿಕೊಂಡ ಯೋಜನೆ ವಿಸ್ತಾರವಾದ ದೃಷ್ಟಿಯಿಂದ ಸಾಗುತ್ತದೆ. ಆದಾಯ ಸಂತೋಷ ನೀಡುವ ಮಟ್ಟಿಗೆ ಹೆಚ್ಚಾಗುತ್ತದೆ. ಕಾಮಗಾರಿ ಸುಗಮ ಗತಿಯಲ್ಲಿ ಮುನ್ನಡೆಯುವುದು. ನಿಮ್ಮ ಪ್ರತಿಭೆ ಬೋಧನೆ, ಬರವಣಿಗೆಯಲ್ಲಿ ಹೊಳೆಯುತ್ತದೆ. ಇಂದು ನೀವು ಉದ್ಯೋಗದ ಕಾರಣಕ್ಕೆ ಬೇರೆ ಕಡೆಗೆ ಹೋಗುವಿರಿ. ವ್ಯಕ್ತಿಯ ಬಗ್ಗೆ ನಿಮಗೆ ಪೂರ್ಣ ವಿಶ್ವಾಸವಿರದು. ಮಂದಗತಿಯ ಕೆಲಸಗಳಿಗೆ ನೀವು ಚುರುಕು ನೀಡುವಿರಿ. ಸಾಲ ಪಡೆದವರ ವಿಚಾರದಲ್ಲಿ ನಿಮಗೆ ಅಸಮಾಧಾನವಾಗಲಿದೆ. ನಿಮ್ಮ ಪ್ರಯತ್ನಕ್ಕೆ ಇಂದೇ ಫಲವು ಸಿಗಬೇಕೆಂಬ ಆತುರ ಬೇಡ. ನಿಮಗಿಂತ ಬಲವುಳ್ಳವರ ಮೇಲೆ ದ್ವೇಷವನ್ನು ಸಾಧಿಸುವಿರಿ. ಸಂಕಷ್ಟಕ್ಕೆ ಈಡಾಗುವಿರಿ. ಆರ್ಥಿಕ ‌ವೆಚ್ಚಕ್ಕೆ ನೀವು ಕಡಿವಾಣ ಹಾಕಿಕೊಳ್ಳಬೇಕಾದೀತು. ಮಕ್ಕಳ‌ ಸಂತೋಷದಿಂದ ನಿಮಗೂ ಸಂತೋಷವಾಗಲಿದೆ. ಕಲೆ ಮತ್ತು ಸಾಹಿತ್ಯದತ್ತ ಒಲವು. ಪ್ರಶಂಸೆಗೆ ಮನೋಬಲ ಹೆಚ್ಚಿಸುತ್ತದೆ. ಹಿತಶತ್ರುಗಳು ಹಿಂದೆ ಸರಿಯುತ್ತಾರೆ. ಸಮಾರಂಭಗಳು ಇಂದು ನಿಮಗೆ ಸಪ್ಪೆ ಅನ್ನಿಸಬಹುದು. ದಾಂಪತ್ಯದಲ್ಲಿ ಹೊಂದಾಣಿಕೆಯು ಕಷ್ಟವಾದೀತು.

ಸಿಂಹ ರಾಶಿ:

ಇಂದು ಗೊತ್ತಾಗದಂತೆ ಹಿತಶತ್ರುಗಳ ನಿಜ ಉದ್ದೇಶ ಬಹಿರಂಗವಾಗುತ್ತದೆ. ಯೋಜನೆ ರಹಸ್ಯವಾಗಿ ರೂಪಿಸುವುದು ಉತ್ತಮ. ಕಾಮಗಾರಿ ಒತ್ತಡದ ಜೊತೆಗೆ ಫಲ ನೀಡುತ್ತದೆ. ನಿಮಗೆ ಭೂಮಿಯನ್ನು ಕೊಡುವುದು ಅನಿವಾರ್ಯವಾಗಿದ್ದು ಹೆಚ್ಚಿನ ಮೌಲ್ಯವು ಸಿಗದೇಹೋಗಬಹುದು. ಗುಂಪಿನಲ್ಲಿ ಕೆಲಸ ಮಾಡುವುದು ಇಷ್ಟವಾಗುವುದು. ವಿದ್ಯಾರ್ಥಿಗಳು ಗಂಭೀರವಾಗಿ ಅಧ್ಯಯನದ ಕಡೆ ಗಮನಕೊಡಬೇಕಾದೀತು. ಕಛೇರಿಯಲ್ಲಿ ನಿಮಗೆ ವಹಿಸಿದ ಕೆಲಸವನ್ನು ಮಾಡದೇ ಮೇಲಧಿಕಾರಿಗಳಿಂದ ಕೆಂಗಣ್ಣಿಗೆ ಗುರಿಯಾಗಬೇಕಾದೀತು. ತಂದೆಯ ಆರೋಗ್ಯದ ಬಗ್ಗೆ ನಿಮಗೆ ಚಿಂತೆ ಹೆಚ್ಚಾದೀತು. ನಿಮಗೆ ಸಂಬಂಧಿಸದ ವಿಷಯಕ್ಕೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ನಿಮ್ಮ ಸಂತೋಷವನ್ನು ಇತರರ ಜೊತೆ ಹಂಚಿಕೊಳ್ಳಲು ಇಷ್ಟಪಡುವಿರಿ. ಆದಾಯದಲ್ಲಿ ಏರಿಳಿತ‌ ಸಹಜ. ಅದಕ್ಕಾಗಿ ಮಾನಸಿಕವಾಗಿ ಸಂಕಟಪಡುವ ಅವಶ್ಯಕತೆಯಿಲ್ಲ. ಅಧ್ಯಾತ್ಮ ಅಥವಾ ಸಂಗೀತ ಕಲೆ ಆಕರ್ಷಣೆ. ನಿಮ್ಮ ಸೂಕ್ಷ್ಮ ಪ್ರತಿಭೆಗೆ ಪ್ರಶಂಸೆ ದೊರೆಯುತ್ತದೆ. ತಂದೆ ಕಡೆಯ ಬಂಧುಗಳು ನಿಮ್ಮನ್ನು ಅಪಹಾಸ್ಯ ಮಾಡಬಹುದು. ನಿಮ್ಮ ಹಿಂದೆ ಆಡುವ ಮಾತುಗಳಿಗೆ ಹೆಚ್ಚು ಬೆಲೆ ಕೊಡುವುದು ಬೇಡ.

ಕನ್ಯಾ ರಾಶಿ:

ಕಲೆ ನಿಮ್ಮ ಸೌಂದರ್ಯವನ್ನು ಅಧಿಕವಾಗಿಸುವುದು. ಆದಾಯದಲ್ಲಿ ಸಮತೋಲನ ಕಾಪಾಡಿಕೊಳ್ಳಿ. ಯೋಜನೆ ಸಹಭಾಗಿತ್ವದ ಮೂಲಕ ಸಾಗುತ್ತದೆ. ಯಾರೋ ಮಾಡಿದ ತಪ್ಪು ಕೆಲಸದಿಂದ ನಿಮಗೆ ಸಿಟ್ಟು, ಹತಾಶೆ ಮೂಡಬಹುದು. ನೀವೇ ಸಂಗಾತಿಯ ಮನಸ್ಸನ್ನು ನೋಯಿಸಿ ಅನಂತರ ಸರಿಪಡಿಸುವಿರಿ.‌ ನಿಮ್ಮ‌ ನೇರ ನುಡಿಯಿಂದ ಎದುರಿನವರು ಸಿಟ್ಟಾಗಬಹುದು. ಸತ್ಯವನ್ನು ಹೇಳಲು ಅಪಹಾಸ್ಯವಾಗಬಹುದು. ವ್ಯಾಪರದ ನಷ್ಟಕ್ಕೆ ಸಮಸ್ತ ತಂತ್ರವನ್ನು ಮಾಡುವಿರಿ. ಅತಿಯಾದ ಕೋಪದ‌ ಕಾರಣ ನೀವು ಒಂಟಿಯಾಗಬೇಕಾದೀತು. ವಿದ್ಯಾಭ್ಯಾಸದಲ್ಲಿ ಹಿನ್ನಡೆಯನ್ನು ಕಾಣಲಿದ್ದು ಕುಟುಂಬದಲ್ಲಿ ಅಸಮಾಧನ ಇರಲಿದೆ. ಸಂಕೀರ್ಣ ಕಾಮಗಾರಿ ಸೌಮ್ಯವಾಗಿ ಮುನ್ನಡೆಯುತ್ತದೆ. ಪ್ರಶಂಸೆ ಸ್ನೇಹವಲಯದಿಂದ ಬರುತ್ತದೆ. ಹಿತಶತ್ರುಗಳ ಜೊತೆ ಸಂಧಾನ ಸಾಧ್ಯ. ಸ್ವಂತ ಉದ್ಯೋಗವು ಸಣ್ಣ ಪ್ರಮಾಣದ ಹಿನ್ನಡೆಯನ್ನು ಕಾಣಬಹುದು. ನಿಮ್ಮ‌‌‌ ಕೆಲವು ಮಾತುಗಳು ಬೇರೆಯವರಿಗೆ ಬೇಸರ ತರಿಸಬಹುದು.

ತುಲಾ ರಾಶಿ:

ಯೋಜನೆ ರೂಪಿಸುವಾಗ ಲೆಕ್ಕಾಚಾರವು ಮುಖ್ಯವಾಗಲಿದೆ. ಕಾಮಗಾರಿ ಸೂಕ್ಷ್ಮ ಗಮನ ಕೇಳುತ್ತದೆ. ಆದಾಯ ನಿಯಂತ್ರಣದಲ್ಲಿ ಇರುತ್ತದೆ. ಇಂದು ಕುರುಡ ಕತ್ತವನ್ನು ಹೊಸೆದಂತೆ ಆಗಬಹುದು. ಯಾರ ಜೊತೆಗೋ ವಾಗ್ವಾದಕ್ಕೆ ಹೋಗಿ ಸುಮ್ಮನೇ ಸಿಕ್ಕಿಕೊಳ್ಳುವಿರಿ. ವೇಗವಾಗಿ ಹಣವನ್ನು ಪಡೆಯಲು ಹೋಗಿ ಸಾಲದ ಚಕ್ರದಲ್ಲಿ ಸಿಕ್ಕಿಕೊಳ್ಳುವಿರಿ. ಹೊಸ ವಾಹನದ ಖರೀದಿಯು ಸದ್ಯಕ್ಕೆ ಬೇಡ. ನಿಮ್ಮನ್ನು ಇಷ್ಟಪಡುವವರು ನಿಮ್ಮ ಮನೆಗೆ ಬರುವರು. ನಿಮ್ಮ ಸ್ವಭಾವವನ್ನು ದುರುಪಯೋಗ ಮಾಡಿಕೊಳ್ಳಬಹುದು. ನಿಮ್ಮ ಪ್ರತಿಭೆ ಮೌನವಾಗಿ ಕೆಲಸ ಮಾಡುತ್ತದೆ. ಕಲೆಗಿಂತ ಕಾರ್ಯನೈಪುಣ್ಯ ಮೇಲುಗೈ ಸಾಧಿಸುವುದು. ಹಿತಶತ್ರುಗಳ ಚಲನವಲನ ಅರಿವಾಗುತ್ತದೆ. ಪ್ರಶಂಸೆ ನಿಧಾನವಾಗಿ ಸಿಗುತ್ತದೆ. ಸುಖಜೀವನದ ನಿರೀಕ್ಷೆಯಲ್ಲಿ ಇರುವಿರಿ. ಸಮಾರಂಭಗಳಿಗೆ ಆಹ್ವಾನವಿದ್ದರೂ ಹೋಗುವ ಮನಸ್ಸಾಗದು. ನೀವು ಅಧಿಕವಾಗಿ ಮಾತನಾಡದೇ ಮೌನವಾಗಿರುವುದು ಉತ್ತಮ. ಕಾಲಹರಣಕ್ಕೆ ಇನ್ನೊಬ್ಬರ ವಿಚಾರವನ್ನು ಚರ್ಚಿಸುವಿರಿ.

ವೃಶ್ಚಿಕ ರಾಶಿ:

ಹಿರಿಯರ ಪ್ರಶಂಸೆ ಇಂದು ನಿಮ್ಮ ದಿನವನ್ನು ಪ್ರಕಾಶಮಾನಗೊಳಿಸುತ್ತದೆ. ಕಾಮಗಾರಿಯಲ್ಲಿ ಹೆಚ್ಚು ಶ್ರಮವನ್ನು ತೋರುತ್ತೀರಿ. ಯೋಜನೆಗೆ ಧೈರ್ಯದಿಂದ ಮಾಡಬೇಕಾದ ನಿರ್ಧಾರ ಇಂದು. ಮಕ್ಕಳ‌ ಆಸೆಗಳನ್ನು ಪೂರೈಸುವತ್ತ ನಿಮ್ಮ ಗಮನ ಇರಲಿದೆ. ಸ್ಥಿರಾಸ್ತಿಯ ಭಾಗವನ್ನು ಉಳಿಸಿಕೊಳ್ಳುವುದು ಕಷ್ಟವಾಗುವುದು. ರಾಜಕೀಯ ವ್ಯಕ್ತಿಗಳು ಜನಮನ್ನಣೆಯನ್ನು ಅಧಿಕ ಗಳಿಸುವರು. ಅಲ್ಪ ಪ್ರಯಾಣದಿಂದಲೂ ನಿಮಗೆ ಆಯಾಸವಾಗಬಹುದು. ದಿನದಿಂದ ದಿನಕ್ಕೆ ಕ್ಷೀಣಿಸುವ ಆರೋಗ್ಯದ ಬಗ್ಗೆ ಗಮನವಿರಲಿ. ದಾಂಪತ್ಯದಲ್ಲಿ ಹೊಂದಾಣಿಕೆಯ ಕೊರತೆ ತಲೆದೋರಬಹುದು. ಹಿರಿಯರಿಂದ ಸಮಾಧಾನ ಸಿಗಲಿದೆ. ಹತ್ತಾರು ಯೋಚನೆಗಳು ಒಂದಾದಮೇಲೆ ಒಂದರಂತೆ ಬಂದು ನಿಮ್ಮನ್ನು ಗೊಂದಲಗೊಳಿಸಬಹುದು. ಕಲೆಗಳಿಂದ ಖ್ಯಾತಿ ಪಡೆಯುವ ಸಾಧ್ಯತೆ ಇದೆ. ಹಿತಶತ್ರುಗಳು ಅಸೂಯೆಯಿಂದ ಮಾತಾಡುವರು. ನಿಮ್ಮ ಪ್ರತಿಭೆ ಗಮನ ಸೆಳೆಯುತ್ತದೆ. ನಿಮಗೆ ಸಿಗಬೇಕಾದ ಹಣವು ವಿಳಂಬವಾಗಬಹುದು. ಮರಗೆಲಸದವರಿಗೆ ಲಾಭ ಕಾಣಿಸುವುದು. ಇಂದಿನ ಖರ್ಚಿನ ಲೆಕ್ಕಾಚಾರವು ಬುಡಮೇಲಾಗವುದು.

ಧನು ರಾಶಿ:

ನೀವು ಹಿತಶತ್ರುಗಳನ್ನು ಗೊತ್ತಾಗದಂತೆ ಮೌನದಿಂದಲೇ ಎದುರಿಸುವುದು ನಿಮಗೇ ಒಳ್ಳೆಯದು. ವಹಿಸಿಕೊಂಡ ಕಾಮಗಾರಿ ನಿಧಾನವಾಗಿ ಸಾಗುತ್ತದೆ. ಕಲೆ, ಸಂಗೀತದಲ್ಲಿ ಆಸಕ್ತಿ ಹೆಚ್ಚುತ್ತದೆ. ಧಾರ್ಮಿಕ ಕಾರ್ಯವನ್ನು ನಿರ್ಮಲ ಮನಸ್ಸಿನಿಂದ‌ಡುವಿರಿ. ಹಿರಿಯರ ಮಾರ್ಗದರ್ಶನವು ಉಪಯೋಗಕ್ಕೆ ಬರಲಿದೆ. ಹೂಡಿಕೆಯನ್ನು ಒತ್ತಾಯದ ಕಾರಣಕ್ಕೆ ಮಾಡುವಿರಿ. ಯಾರ ಜೊತೆಯೂ ಮಿತಿಮೀರಿದ ಸಲುಗೆ‌ ಬೇಡ. ಆಪ್ತರು ನಿಮ್ಮನ್ನು ಬಿಡಬಹುದು. ಕೆಲವು ಔದ್ಯೋಗಿಕ ಸಮಸ್ಯೆಯನ್ನು ಮೇಲಧಿಕಾರಿಗಳ ಮೂಲಕ ಬಗೆ ಹರಿಸಿಕೊಳ್ಳಿ. ಅಪರಿಚಿತರಿಂದ ನಿಮ್ಮ‌ ದೇಹಪೀಡಗೆ ಸ್ಪಂದನೆ ಸಿಗುವುದು. ಅನಾರೋಗ್ಯದ ಭೀತಿಯು ತಗ್ಗಲಿದೆ. ಮನಸ್ಸು ನಕಾರಾತ್ಮಕವಾಗಿ ಹರಡುವುದು. ನಿಮ್ಮ‌ ಸೃಜನಾತ್ಮಕ ಕಾರ್ಯಕ್ಕೆ ಪ್ರಶಂಸೆ ಸಿಗಲಿದೆ. ಆದಾಯದ ಗುಣಮಟ್ಟ ಚೆನ್ನಾಗಿರುವುದು. ಯೋಜನೆ ಕುಟುಂಬದ ನೆರವಿನಿಂದ ಸ್ಪಷ್ಟವಾಗುತ್ತದೆ. ನಿಮ್ಮ ಸಂವೇದನಾಶೀಲ ಪ್ರತಿಭೆಗೆ ಪ್ರಶಂಸೆ ಸಿಗುತ್ತದೆ. ನಿಮಗೆ ಇಷ್ಟವಾದುದನ್ನು ಕೇಳಿ ಪಡೆದುಕೊಳ್ಳಿ. ದುಂದುವೆಚ್ವದ ಹಣವನ್ನು ಉಳಿತಾಯ ಮಾಡಿದ್ದರ‌ ಬಗ್ಗೆ ಸಮಾಧಾನವು ಸಿಗಲಿದೆ.

ಮಕರ ರಾಶಿ:

ಪ್ರತಿಭೆ ಇಂದು ನಿಮ್ಮ ದೊಡ್ಡ ಶಕ್ತಿಯಾಗಿ ಹೊರಹೊಮ್ಮುವುದು. ಪ್ರಶಂಸೆ ನಿಮ್ಮ ಕೆಲಸಕ್ಕೆ ಮಾನ್ಯತೆ ತರುತ್ತದೆ. ಹೊಸ ಯೋಜನೆ ಬಗ್ಗೆ ಚರ್ಚೆಗಳು ನಡೆಯುತ್ತವೆ. ನಿಮ್ಮ ಮೇಲಿಟ್ಟ ನಂಬಿಕೆಯನ್ನು ಕಷ್ಟಪಟ್ಟು ಉಳಿಸಿಕೊಳ್ಳಬೇಕಾದೀತು. ದಿನದ ಆರಂಭವು ಬಹಳ ಪ್ರಶಾಂತವಾಗಿ ಇರಲಿದೆ. ಆತ್ಮಗೌರವವನ್ನು ಬಿಟ್ಟು ನೀವು ಬದಲಾಗುವುದಿಲ್ಲ. ಕ್ಷಣಕ್ಷಣದ ಚಿತ್ತಚಾಂಚಲ್ಯಕ್ಕೆ ಧ್ಯಾನವೊಂದೇ ಸದ್ಯದ ಪರಿಹಾರ. ಸಂಗಾತಿಯನ್ನು ನೀವು ಬೇಸರಿಸಿ ಸಮಾಧಾನ ಮಾಡುವಿರಿ. ಅಸಮಯದ ಭೋಜನದಿಂದ‌ ನಿಮಗೆ ಆರೋಗ್ಯವು ಹಾಳಾಗುವುದು. ಕಾಮಗಾರಿಯ ವೇಗ ಬದಲಾಯಿಸಬಹುದು. ಆದಾಯ ಮಧ್ಯಮದಿಂದ ಮೇಲೇರಲಿದೆ. ಹಿತಶತ್ರುಗಳ ನಡೆಯಿಂದ ನಿಮಗೆ ಗೊಂದಲ. ಕಲೆ ಮನಸ್ಸಿಗೆ ಹಗುರತೆ ನೀಡುತ್ತದೆ. ಅನಿರೀಕ್ಷಿತವಾಗಿ ಅಮೂಲ್ಯವಾದ ವಸ್ತುವು ಸಿಗಲಿದ್ದು ಬೇಕೋ ಬೇಡವೋ ಎನ್ನುವುದನ್ನು ಯಾರ ಬಳಿಯಾದರೂ ವಿಚಾರಿಸಿ. ಅನ್ನಿಸಿದ್ದನ್ನು ಹೇಳಿ ಕೆಲವರಿಂದ ದೂರವಾಗುವಿರಿ. ಉಂಟಾದ ಪ್ರೀತಿಯನ್ನು ಹಾಗೆಯೇ ಇರಿಸಿಕೊಂಡು ನೋಡಿ, ಸತ್ಯವೇ ಸುಳ್ಳೆ ಎಂದು.

ಕುಂಭ ರಾಶಿ:

ಆದಾಯ ಸ್ಥಿರವಾಗಿ ಸಾಗುತ್ತದೆ. ಹಿತಶತ್ರುಗಳ ಮಾತುಗಳಿಗೆ ಮೌಲ್ಯ ನೀಡಬೇಡಿ. ಕಲೆ ಹಾಗೂ ಸೃಜನಶೀಲತೆ ಮನಸ್ಸನ್ನು ಆಕರ್ಷಿಸುತ್ತದೆ. ನಿಮ್ಮ ಪ್ರತಿಭೆಗೆ ಪರಿಚಿತರಿಂದ ಪ್ರಶಂಸೆ. ಉದ್ಯಮದಲ್ಲಿ ಒತ್ತಡದ ಸ್ಥಿತಿ ಬರಬಹುದು. ಇಂದು ನೀವು ಪ್ರಾಮಾಣಿಕ ಎಂದು ತೋರಿಸಲು ಹೋಗಿ ಉದ್ಯೋಗದಲ್ಲಿ ತೊಂದರೆ ಮಾಡಿಕೊಳ್ಳುವಿರಿ. ಕಛೇರಿಯನ್ನು ಏಕತಾನತೆಯನ್ನು ಬದಲಿಸಿಕೊಳ್ಳುವಿರಿ. ಸಂಗಾತಿಯಿಂದ ಸಾಮರಸ್ಯ ಕೊರತೆ ನೀಗಬಹುದು. ಬೇಕಾಗುವ ವಸ್ತುಗಳನ್ನು ಸ್ನೇಹಿತರಿಂದ ಪಡೆಯುವಿರಿ. ಆರ್ಥಿಕ ಸಂಕಷ್ಟವನ್ನು ಯಾರ ಸಮೀಪವೂ ಹೇಳಿಕೊಳ್ಳುವುದು ಬೇಡ. ಮನಸೋ ಇಚ್ಛೆ ವ್ಯವಹಾರಕ್ಕೆ ಕಡಿವಾಣ ಹಾಕುವುದು ಸೂಕ್ತ. ಕಾಮಗಾರಿ ಸಹಕಾರದಿಂದ ಮುನ್ನಡೆಯುತ್ತದೆ. ಯೋಜನೆ ರೂಪಿಸುವಾಗ ಧೈರ್ಯಕ್ಕಿಂತ ತಾಳ್ಮೆ ಅಗತ್ಯ. ಸಿಟ್ಟನ್ನು ಅಲ್ಪ ಸಮಯದಲ್ಲಿ ಶಮನ ಮಾಡಿಕೊಂಡು ಯಥಾಸ್ಥಿತಿಗೆ ಬರುವಿರಿ. ಸಮಾರಂಭಗಳಿಗೆ ಮುಖ್ಯ ಅತಿಥಿಯಾಗಿ ಆಹ್ವಾನ ಬರಬಹುದು. ವಿದ್ಯಾರ್ಥಿಗಳು ಕೌಶಲಕ್ಕೆ ಪ್ರಶಂಸೆ ಲಭ್ಯವಾಗುವುದು.

ಮೀನ ರಾಶಿ:

ಕಾಮಗಾರಿಯಲ್ಲಿ ಇಂದು ಜವಾಬ್ದಾರಿ ಹೆಚ್ಚಾಗುತ್ತದೆ. ಹೊಸ ಯೋಜನೆಗೆ ಮೊದಲ ಹೆಜ್ಜೆ ಇಡುವ ಸಮಯ. ಆದಾಯ ಶ್ರಮಕ್ಕೆ ತಕ್ಕಂತೆ ಬರುತ್ತದೆ. ನಿಮ್ಮ ಪ್ರತಿಭೆ ಸಹಜವಾಗಿ ಹೊರಹೊಮ್ಮುತ್ತದೆ. ನಿಮ್ಮ ಯೋಗ್ಯತೆ ತಕ್ಕ ಕೆಲಸವು ಸಿಗಲಿದ್ದು ಇನ್ನೊಬ್ಬರನ್ನು ಹೋಲಿಕಾ ಮಾಡುತ್ತ ನಿಮ್ಮ ನೆಮ್ಮದಿಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಅಪ್ರಯೋಜಕ ವಸ್ತುಗಳು ಅರ್ಧ ಬೆಲೆಗೆ ಮಾರಾಟ ಮಾಡುವಿರಿ. ಒಂಟಿಯಾಗಿ ಎಲ್ಲಿಗಾದರೂ ಹೋಗುವ ಮನಸ್ಸಾಗುವುದು. ಅಧಿಕಾರದ ವಿಚಾರದಲ್ಲಿ ನೀವು ಮೋಸ ಹೋಗಬಹುದು. ಪ್ರಶಂಸೆಯ ಮಾತುಗಳು ಆತ್ಮವಿಶ್ವಾಸ ಹೆಚ್ಚಿಸುತ್ತವೆ. ಕಲೆ ಮನಸ್ಸಿಗೆ ನೆಮ್ಮದಿ ಕೊಡುತ್ತದೆ. ಹಿತಶತ್ರುಗಳು ಅಸಮಾಧಾನದಿಂದ ದೂರವಿರುವರು. ಒಂದೇ ವಿಚಾರವನ್ನು ನಿಮಗೆ ಮತ್ತೆ ಮತ್ತೆ ನೆನಪಿಸಬೇಕಾದೀತು. ಮನೆಯ ಹೆಚ್ಚಿನ ವಿಚಾರಗಳು ನಿಮಗೆ ಗೊತ್ತಾಗದೆ ಬೇಸರಿಸುವಿರಿ. ಬೇರೆಯಾದ ಮನಸ್ಸನ್ನು ಒಟ್ಟು ಸೇರಿಸಲಿದ್ದೀರಿ. ಎಲ್ಲ ಗೊತ್ತಿದೆ ಎಂದು ಹುಂಬುತನವನ್ನು ಮಾಡುವುದು ಬೇಡ.

27 ಡಿಸೆಂಬರ್​​ 2025ರ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಧನು, ಮಹಾನಕ್ಷತ್ರ : ಮೂಲಾ, ವಾರ : ಶನಿವಾರ, ಪಕ್ಷ : ಶುಕ್ಲ, ತಿಥಿ : ಸಪ್ತಮೀ ನಿತ್ಯನಕ್ಷತ್ರ : ಪೂರ್ವಾಭಾದ್ರ, ಯೋಗ : ಸಾಧ್ಯ, ಕರಣ : ವಣಿಜ, ಸೂರ್ಯೋದಯ – 06 – 47 am, ಸೂರ್ಯಾಸ್ತ – 06 – 03 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 09:37 – 11:01, ಯಮಗಂಡ ಕಾಲ 13:50 – 15:14, ಗುಳಿಕ ಕಾಲ 06:48 – 08:12

-ಲೋಹಿತ ಹೆಬ್ಬಾರ್ – 8762924271 (what’s app only)

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ