AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today 31 December : ಇಂದು ಈ ರಾಶಿಯವರು ಅನ್ಯರ ಹೃದಯ ಗೆಲ್ಲಲು ಸೋಲುವರು

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಪೌಷ ಮಾಸ ಶುಕ್ಲ ಪಕ್ಷದ ಏಕಾದಶೀ ತಿಥಿ ಬುಧವಾರ ಅನಿಶ್ಚಿತತೆಯಿಂದ ಆತಂಕ, ಕ್ರೋಧ ಶಮನ, ಸ್ವಪ್ರತಿಷ್ಠೆ, ಇಷ್ಟದ ತ್ಯಾಗ, ಅನೈತಿಕ ವ್ಯವಹಾರ, ಸಾಲಕ್ಕೆ ಪೀಡೆ, ಸಂಶಯ, ನಿಷ್ಪಕ್ಷಪಾತ ಇವೆಲ್ಲ ಇಂದಿನ ಭವಿಷ್ಯ.

Horoscope Today 31 December : ಇಂದು ಈ ರಾಶಿಯವರು ಅನ್ಯರ ಹೃದಯ ಗೆಲ್ಲಲು ಸೋಲುವರು
ದಿನ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Dec 31, 2025 | 12:50 AM

Share

ಮೇಷ ರಾಶಿ:

ಅಧಿಕಾರಕ್ಕೆ ಸಂಬಂಧಿತ ವಿಷಯಗಳಲ್ಲಿ ಸಹನೆ ಅಗತ್ಯ. ದುರಭ್ಯಾಸಗಳಿಂದ ದೂರವಿದ್ದರೆ ಆಂತರಿಕ ಶಕ್ತಿಯ ವೃದ್ಧಿಯಾಗುತ್ತದೆ. ಮುಖ್ಯ ಅಂಶಗಳನ್ನು ಎಲ್ಲಿಯಾದರೂ ಮರೆತುಬಿಡುವಿರಿ. ರಾಜಕೀಯ ವ್ಯಕ್ತಿಗಳ ಪ್ರಭಾವವನ್ನು ಬಳಸಿಕೊಳ್ಳುವಿರಿ. ನಿಮ್ಮ ಆಸೆಗಳನ್ನು ಪೂರ್ಣ ಮಾಡಿಕೊಳ್ಳಲಾಗದು. ಭಾವನೆಗಳಿಗೆ ಬೆಲೆ ಕೊಡದೇ ಇರುವುದು ನಿನಗೆ ಬೇಸರವಾಗಬಹುದು. ಬಂಧುಗಳ ಆಗಮನದಿಂದ ಇಂದಿನ ವ್ಯವಹಾರದಲ್ಲಿ ಬದಲಾವಣೆ ಇರುವುದು. ಎಲ್ಲ ಸಮಯದಲ್ಲಿಯೂ ನಿಮ್ಮ ಪರಿಸ್ಥಿತಿಯು ಸಕಾರಾತ್ಮಕವಾಗಿ ಇರದು. ಮಾನಸಿಕ ಒತ್ತಡ ಮತ್ತು ಸಂವೇದನಾಶೀಲತೆ ಹೆಚ್ಚಾಗುವ ದಿನ. ಸಾಮಾಜಿಕ ಸೇವೆಯಲ್ಲಿ ತೊಡಗಿದರೆ ಮನಸ್ಸಿಗೆ ಶಾಂತಿ. ಉದ್ಯಮ, ಕೈಗಾರಿಕಾ ಯೋಜನೆಗಳು ನಿಧಾನಗತಿಯಲ್ಲಿ ಇರಬಹುದು. ಇಂದು ನಿಮ್ಮ ವಿರುದ್ಧ ಮಾತನಾಡುವವರಿಗೆ ಉತ್ತರವನ್ನು ಕೊಡುವ ಅವಶ್ಯಕ ಇರುವುದಿಲ್ಲ. ಉದ್ಯೋಗದಲ್ಲಿ ವಿಶ್ವಾಸಗಳಿಸುವುದು ಮುಖ್ಯ. ನಿಮ್ಮನ್ನು ದಿಕ್ಕು ತಪ್ಪಿಸಿ ಕಾರ್ಯದ ವೇಗವನ್ನು ಕಡಿಮೆ‌ ಮಾಡಿಸಬಹುದು.

ವೃಷಭ ರಾಶಿ:

ಅಧಿಕಾರದ ಚುಕ್ಕಾಣಿ ನಿಮ್ಮ ಕೈಯಲ್ಲಿ ಬಂದರೂ ಒತ್ತಡ ಹೆಚ್ಚಾಗುತ್ತದೆ. ದುರಭ್ಯಾಸ ನಿಯಂತ್ರಿಸಿದರೆ ಸ್ಪಷ್ಟ ನಿರ್ಧಾರ ಸಾಧ್ಯ. ಮಾತಿನಲ್ಲಿ ಸಂಯಮ ಅಗತ್ಯ. ಪೂರ್ವಾರ್ಜಿತ ಆಸ್ತಿಯ ಬಗ್ಗೆ ನಿಮಗೆ ಪೂರ್ಣ ಸಮಾಧಾನ ಇರದು. ನಿಮ್ಮ ತಪ್ಪುಗಳು ಅರ್ಥವಾಗದೇ ಬೇರೆಯವರ ಮೂಲಕ ನೀವು ತಿಳಿದುಕೊಳ್ಳಬೇಕಾದೀತು. ಸಾಲವನ್ನು ಮಾಡುವಾಗ ಯಾರದ್ದಾದರೂ ಸಲಹೆಯನ್ನು ಪಡೆಯುವುದು ಉತ್ತಮ. ರಾಜಕೀಯ ವ್ಯಕ್ತಿಗಳು ನಿಮ್ಮನ್ನು ಬಳಸಿಕೊಳ್ಳಬಹುದು. ಯಾವ ಕೆಲಸವನ್ನು ಒಪ್ಪಿಕೊಳ್ಳುವಾಗಲೂ ಜಾಗರೂಕತೆ ಇರಲಿ. ಇನ್ನೊಬ್ಬರ ಒತ್ತಾಯಕ್ಕೆ ನೀವು ಮಣಿದು ಹಣದ ಹೂಡಿಕೆಯನ್ನು ಮಾಡುವಿರಿ. ಇಂದು ಹೊಸ ಉದ್ಯಮ ಆಲೋಚನೆಗಳು ಮನಸ್ಸಿನಲ್ಲಿ ಮೂಡುತ್ತವೆ. ಸಾಮಾಜಿಕ ಕಾರ್ಯಗಳಲ್ಲಿ ನಾಯಕತ್ವ ಸಿಗಬಹುದು. ಚರಾಸ್ತಿಯನ್ನು ಕೊಟ್ಟು ಅಲ್ಪ ಲಾಭವನ್ನು ಮಾಡಿಕೊಳ್ಳುವಿರಿ. ನಿಮ್ಮ ಮಾತಿಗೆ ಬೆಲೆ ಕೊಡದೇ ಇರುವುದರಿಂದ ಬೇಸರವಾದೀತು. ಹಳೆಯ ವಿಚಾರವನ್ನು ಮತ್ತೆ ಕೆದಕುವಿರಿ.

ಮಿಥುನ ರಾಶಿ:

ಸಾಮಾಜಿಕ ಕಾರ್ಯಗಳಲ್ಲಿ ನಿಮ್ಮ ಶ್ರಮ ಮೌಲ್ಯ ಪಡೆಯುತ್ತದೆ. ದುರಭ್ಯಾಸಗಳಿಂದ ಆರೋಗ್ಯ ಹಾನಿ ಸಾಧ್ಯ. ಮಾತಿನಲ್ಲಿ ಕಠಿಣತೆ ಕುಟುಂಬದಲ್ಲಿ ಬೇಸರ ಉಂಟುಮಾಡಬಹುದು. ಮೇಲಧಿಕಾರಿಗಳ ವರ್ತನೆಯನ್ನು ಸಹಿಸಲು ಕಷ್ಟವಾದೀತು. ಹಿರಿಯರ ಮಾರ್ಗದರ್ಶನವನ್ನು ನೀವು ಅಲ್ಲಗಳೆಯುವಿರಿ. ಧನವ್ಯಯವಾಗುವ ಸಂದರ್ಭವು ಬರಬಹುದು.‌ ತುರ್ತು ಹಣ‌ ಸಂಪಾದನೆಯನ್ನು ಮಾಡಬೇಕಾದೀತು. ಸಂಗಾತಿಯ ಜೊತೆ ವಾಗ್ವಾದ ಮಾಡಿ ಮನಸ್ಸನ್ನು ಕೆಡಿಸಿಕೊಳ್ಳುವಿರಿ. ನಿಮ್ಮ ಸತ್ಯದಿಂದ ಸಹೋದ್ಯೋಗಿಯ ಕೆಲಸವು ಹೋಗಬಹುದು. ನಿಮ್ಮ ನಡೆಯುವುದು ಇತರರಿಗೆ ತೊಂದರೆಯನ್ನು ಉಂಟುಮಾಡೀತು. ಕೈಗಾರಿಕಾ ವ್ಯವಹಾರಗಳಲ್ಲಿ ಎಚ್ಚರಿಕೆಯಿಂದ ನಡೆದುಕೊಳ್ಳಬೇಕು. ಅಧಿಕಾರದ ಹೊಣೆಗಾರಿಕೆ ಒತ್ತಡ ತಂದರೂ ಅನುಭವ ಸಹಾಯ ಮಾಡುತ್ತದೆ. ಸಾಮಾಜಿಕ ಗೌರವವನ್ನು ನೀವು ಪಡೆಯಲಿದ್ದೀರಿ. ವಿದ್ಯಾಭ್ಯಾಸಕ್ಕಾಗಿ ಮನೆಯನ್ನು ಬಿಟ್ಟು ಇರುವುದು ಕಷ್ಟವಾಗುವುದು. ಆಲಸ್ಯದಿಂದ ಕೆಲವು ಅನಿವಾರ್ಯ ಕಾರ್ಯವನ್ನು ಮಾಡಲಾರಿರಿ.

ಕರ್ಕಾಟಕ ರಾಶಿ:

ವಿಭಿನ್ನ ಉದ್ಯಮ ಕ್ಷೇತ್ರಗಳಲ್ಲಿ ಹೊಸ ಅವಕಾಶಗಳು ಕಾಣಿಸುತ್ತವೆ. ಅಧಿಕಾರ ಸಂಬಂಧಿತ ನಿರ್ಧಾರಗಳಲ್ಲಿ ಧೈರ್ಯ ಅಗತ್ಯ. ಒತ್ತಡ ಇದ್ದರೂ ಆಶಾವಾದ ನಿಮ್ಮ ಶಕ್ತಿ. ಎಲ್ಲವನ್ನೂ ತಿಳಿದೆನೆಂಬ ಅಹಂ ನಿಂದ ಸೋಲಾಗುವುದು. ಕುಟುಂಬದವರ ಜೊತೆ ನಿಮ್ಮ ಒಡಾನಾಟವು ಕಡಿಮೆ ಆಗಬಹುದು. ಕೃಷಿಯ ಚಟುವಟಿಕೆಯಿಂದ ಲಾಭವಾಗುವುದು. ಮಿತ್ರರ ಸಹಾಯವನ್ನು ನೀವು ಉಪೇಕ್ಷಿಸುವಿರಿ. ಓಡಾಟದಿಂದ ಕೆಲಸವಾಗದು. ಜಾಣ್ಮೆಯಿಂದ ಕೆಲಸವನ್ನು ಮುಗಿಸುಕೊಳ್ಳಿ. ನಿಮ್ಮ ಸ್ವಾಭಿಮಾನಕ್ಕೆ ಪೆಟ್ಟು ಬೀಳಬಹುದು. ನೀವು ಆಪ್ತರಿಗೆ ಎಲ್ಲವನ್ನೂ ಹೇಳಬೇಕು ಎಂದುಕೊಂಡರೂ ನಿಮಗೆ ಹೇಳಲಾಗದೆ ದುಃಖವಾಗುವುದು. ಪರಿಚಿತರಿಂದಲೇ ಭೂಮಿಗೆ ಸಂಬಂಧಿಸಿದ ವಿಚಾರದಲ್ಲಿ ವಂಚನೆಯಾಗಲಿದೆ. ಸಾಮಾಜಿಕ ಕಾರ್ಯಗಳಲ್ಲಿ ತೊಡಗಿದರೆ ಮಾನಸಿಕ ತೃಪ್ತಿ. ದುರಭ್ಯಾಸ ತ್ಯಜಿಸಿದರೆ ಮುಂದಿನ ದಾರಿಗಳು ಸುಗಮ. ಮೇಲಧಿಕಾರಿಗಳು ನಿಮ್ಮ ಮೇಲಿಟ್ಟ ವಿಶ್ವಾಸಕ್ಕೆ ಭಂಗಬಾರದಂತೆ ನಿಮ್ಮ ವರ್ತಿಸಿ. ತಂದೆಯಿಂದ ಕೇಳಿದ್ದು ಸಿಗಲಿಲ್ಲ ಎಂದು ಬೇಸರವಾಗಬಹುದು.

ಸಿಂಹ ರಾಶಿ:

ಉದ್ಯಮದಲ್ಲಿ ಪಾಲುದಾರರೊಂದಿಗೆ ಸ್ಪಷ್ಟತೆ ಅಗತ್ಯ. ಸಾಮಾಜಿಕ ಕಾರ್ಯಗಳು ನಿಮ್ಮ ಒಳಗಿನ ಶಕ್ತಿಯನ್ನು ಹೊರತರುತ್ತವೆ. ದುರಭ್ಯಾಸಗಳು ಪ್ರಗತಿಗೆ ಅಡ್ಡಿಯಾಗಬಹುದು. ನಿಮಗೆ ಆಸಕ್ತಿ ಇಲ್ಲದಿದ್ದರೂ ಹೊಸ ಕೆಲಸವನ್ನು ಮಾಡಬೇಕಾದೀತು. ಪರರ ಮನೆಯಲ್ಲಿ ಆಹಾರವನ್ನು ಸ್ವೀಕಾರ ಮಾಡುವಿರಿ. ನಿಮ್ಮ ಮಾತು ನಿಮಗೇ ಹೆಚ್ಚಾದಂತೆ ತೋರುವುದು. ಬರಹಗಾರರು ಪ್ರಶಂಸೆಯನ್ನು ಗಳಿಸುವರು. ಆರ್ಥಿಕ ನಷ್ಟದಿಂದ ನಿಮಗೆ ಚಿಂತೆಯಾಗಬಹುದು. ಸಾಮೂಹಿಕ ಕೆಲಸವು ನಿಮಗೆ ಕಿರಿಕಿರಿ ಕೊಡಬಹುದು. ತಂದೆಯಿಂದ ನಿಮಗೆ ಬೇಕಾದ ಕೆಲಸವು ಮಾಡಿಸಿಕೊಳ್ಳುವಿರಿ. ಧಾರ್ಮಿಕ ಕಾರ್ಯಗಳಲ್ಲಿ ನಿಮಗೆ ಆಸಕ್ತಿ ಹೆಚರಚಾಗುವುದು. ಇಂದು ಕೆಲಸದ ಒತ್ತಡ ಮತ್ತು ಮಾನಸಿಕ ಚಡಪಡಿಕೆ ಕಾಣಿಸಿಕೊಳ್ಳಬಹುದು. ಅಧಿಕಾರಿಗಳೊಂದಿಗೆ ಮಾತುಕತೆ ಜಾಗರೂಕವಾಗಿರಲಿ. ನಿಮ್ಮ ಯೋಜನೆಯನ್ನು ಯಾರ ಬಳಿಯೂ ಪ್ರಕಟಮಾಡಿಕೊಳ್ಳುವುದು ಬೇಡ. ಯಾರೋ‌ ಮಾಡಿದ ನಿಯಮಕ್ಕೆ ನಿಮಗೆ ತೊಂದರೆಯಾಗಬಹುದು.

ಕನ್ಯಾ ರಾಶಿ:

ಉದ್ಯಮ ಹಾಗೂ ಕೈಗಾರಿಕಾ ವ್ಯವಹಾರಗಳಲ್ಲಿ ಲಾಭದ ಸೂಚನೆ. ಅಧಿಕಾರದ ಚುಕ್ಕಾಣಿ ನಿಮ್ಮ ಕೈಗೆ ಬರುವ ಸಾಧ್ಯತೆ. ಒತ್ತಡದ ನಡುವೆಯೂ ಸಮತೋಲನ ಕಾಯ್ದುಕೊಳ್ಳುವಿರಿ. ಹಠದ ಸ್ವಭಾವದಿಂದ ಉದ್ಯೋಗವನ್ನು ಕಳೆದುಕೊಳ್ಳುವುದು ಅನಿವಾರ್ಯವಾಗಬಹುದು. ಧೃತಿಗೆಡದೇ ಹೊಸ ಉದ್ಯೋಗಕ್ಕೆ ತೆರಳುವಿರಿ. ವ್ಯವಹಾರದ ನಷ್ಟವು ನಿಮ್ಮ ಮನಸ್ಸನ್ನು ವಿಚಲಿತ ಮಾಡೀತು. ಯಾರದೋ ಮಾತಿನ ಮೇಲೆ ನಿಮ್ಮ ಗೆಳೆತನವನ್ನು ದೂರ ಮಾಡಿಕೊಳ್ಳಬಹುದು. ಅನಿರೀಕ್ಷಿತವಾಗಿ ಸಿಕ್ಕ ಉನ್ನತ ಅಧಿಕಾರದಿಂದ ಸಂತೋಷವಾಗಬಹುದು. ಸಾಮಾಜಿಕ ಕಾರ್ಯಗಳಲ್ಲಿ ಗೌರವ ಹೆಚ್ಚುತ್ತದೆ. ದುರಭ್ಯಾಸದಿಂದ ದೂರವಿದ್ದರೆ ಆರೋಗ್ಯ ಸುಧಾರಣೆ. ಬೇಸರ ಮಾತುಗಳನ್ನು ತಪ್ಪಿಸಿ. ದಾಂಪತ್ಯದಲ್ಲಿ ಬರುವ ಸಮಸ್ಯೆಗಳನ್ನು ಪರಸ್ಪರ ಮಾತು ಕತೆಯಿಂದ ಸರಿ ಮಾಡಿಕೊಳ್ಳಿ. ಬಹಿರಂಗಪಡಿಸಿ ನಿಮ್ಮ ಮಾನವನ್ನು ಕಳೆದುಕೊಳ್ಳಬೇಕಾಗಬಹುದು. ಸಾಧ್ಯವಾದಷ್ಟು ಮಾತನ್ನು ಕಡಿಮೆ ಮಾಡಿ, ಕಾರ್ಯದಲ್ಲಿ ತೋರಿಸುವಿರಿ. ನೀವು ಸಣ್ಣ ನೋವನ್ನೂ ನಿರ್ಲಕ್ಷಿಸುವುದು ಬೇಡ. ಅನುಮಾನದಿಂದ ಸ್ನೇಹವು ಹಾಳುಗುವುದು.

ತುಲಾ ರಾಶಿ:

ಕೆಲಸದ ಒತ್ತಡ ಹೆಚ್ಚು ಅನುಭವವಾಗಬಹುದು. ಅಧಿಕಾರ ಸಂಬಂಧಿತ ಹೊಣೆಗಾರಿಕೆ ಹೆಚ್ಚುತ್ತದೆ. ಸಾಮಾಜಿಕ ಕಾರ್ಯಗಳಲ್ಲಿ ತೊಡಗಿದರೆ ನಿಮ್ಮ ಶ್ರಮ ಗುರುತಿಸಲಾಗುತ್ತದೆ. ಉದ್ಯೋಗವನ್ನು ಬದಲಿಸುವ ಮನಸ್ಸಿದ್ದರೂ ನಿಯಮಕ್ಕೆ ಕಟ್ಟುಬಿದ್ದು ಕಷ್ಟವಾದೀತು. ಪಾಲುದಾರಿಕೆಯಲ್ಲಿ ಹಣದ ವ್ಯವಹಾರದಿಂದ ನಿಮಗೆ ಅಸಮಾಧಾನವಾಗುವುದು. ಸಾಲವನ್ನು ತೀರಿಸಲು ಏನಾದರೂ ಮಾಡಬೇಕು ಏನಿಸಬಹುದು. ಬಂಧುಗಳ ಮಾತಿನಿಂದ ಸಮಾಧಾನ ಸಿಕ್ಕೀತು. ಉದ್ಯೋಗವನ್ನು ಹುಡುಕಿಕೊಂಡು ಅಲೆದಾಡಬೇಕಾದೀಯು. ಆಗಾಗ ಬರುವ ಸಾಲದ ವಿಚಾರದಿಂದ ಮನೆಯ ವಾತಾವರಣವು ಸರಿಯಾಗಿ ಇರದು. ಉದ್ಯಮದಲ್ಲಿ ಹೊಸ ಪ್ರಯೋಗ ಮಾಡುವ ಮುನ್ನ ವಿಶ್ಲೇಷಣೆ ಅಗತ್ಯ. ಮಾತಿನಲ್ಲಿ ಅತಿಸ್ಪಷ್ಟತೆ ಕೆಲವರಿಗೆ ನೋವು ತರಬಹುದು. ಕಳೆದುಹೋದ ವಿಷಯವನ್ನು ಯಾರೋ ಪುನಃ ನೆನಪಿಸಿಕೊಂಡು ಮನಸ್ಸು ಭಾರವಾಗುವುದು. ಇಂದಿನ‌ ನಿಮ್ಮ ಪ್ರಯಾಣವು ಕೆಲವು ಅಡೆತಡೆಗಳಿಂದ ಇರಲಿದೆ. ನಿಮ್ಮ ಆಸಕ್ತಿಯ ವಿಚಾರವನ್ನು ಬದಲಿಸುವಿರಿ. ನಿಮ್ಮ ಅಂತಶ್ಶಕ್ತಿ ನಿಮ್ಮರಿಗೆ ಗೊತ್ತಾಗುವುದು.

ವೃಶ್ಚಿಕ ರಾಶಿ:

ಇಂದು ಅಧಿಕಾರದ ಸ್ಥಾನದಲ್ಲಿ ನಿಮ್ಮ ಮಾತಿಗೆ ತೂಕ ಇರುತ್ತದೆ. ಆದರೆ ಅಹಂಕಾರದಿಂದ ಬೇಸರ ಮಾತು ಹೊರಬರುವ ಸಾಧ್ಯತೆ. ಒತ್ತಡವನ್ನು ನಿಯಂತ್ರಿಸಲು ಸಾಮಾಜಿಕ ಸೇವೆ ಸಹಾಯಕ. ಧಾರ್ಮಿಕ ನಾಯಕರ ನಡುವೆ ವಾಗ್ವಾದ ಮಾಡುವಿರಿ. ಕಳೆದುಕೊಂಡ ವಸ್ತುಗಳ ಬಗ್ಗೆ ನಿಮಗೆ ಮೋಹವಿರದು. ಭೂಮಿಯ ವ್ಯವಹಾರದಿಂದ ಹೊರಬರಲು ಪ್ರಯತ್ನಿಸುವಿರಿ. ಇಂದು ಇನ್ನೊಬ್ಬರ ವಾಹನದಿಂದ ನೋವಾಗುವ ಸಾಧ್ಯತೆ ಇದೆ. ಹಳೆಯ ಸಂಸ್ಥೆಯೊಂದನ್ನು ಮುನ್ನಡೆಸುವ ಜವಾಬ್ದಾರಿಯು ನಿಮಗೆ ಬರಬಹುದು. ಹೆಚ್ಚು ಆದಾಯವನ್ನು ಇಂದಿನ ಕಾರ್ಯದಿಂದ ನಿರೀಕ್ಷಿಸುವಿರಿ. ನಿಮ್ಮ ಕರ್ತವ್ಯದ ಕಡೆ ಗಮನ ಅತಿಯಾಗಿ ಇರಲಿ. ಕೈಗಾರಿಕಾ ಕ್ಷೇತ್ರದಲ್ಲಿ ಹೊಸ ಸಂಪರ್ಕಗಳು ಲಾಭ ತರುತ್ತವೆ. ದುರಭ್ಯಾಸ ತ್ಯಜಿಸಿದರೆ ಮಾನಸಿಕ ಹಾಗೂ ದೈಹಿಕ ಶಕ್ತಿ ಹೆಚ್ಚುತ್ತದೆ. ನಿಮ್ಮ ಕೆಲಸವನ್ನು ನೀವು ಮಾಡಿ. ಮಾತಿಗೆ ತಪ್ಪಿದ್ದಕ್ಕೆ ನಿಮ್ಮನ್ನು ಅವಮಾನಿಸಿಯಾರು. ಆರ್ಥಿಕ ಬಲವು ನಿಮಗೆ ಅಗತ್ಯವಾಗಿ ಬೇಕಾಗುವುದು. ಬೇರೆ ಕೆಲಸಗಳಿಂದ ಹೆಚ್ಚು ಆದಾಯ ಬರುವಂತೆ ನೀವು ನೋಡಿಕೊಳ್ಳುವಿರಿ.

ಧನು ರಾಶಿ:

ಕೆಲಸದ ಒತ್ತಡದಿಂದ ಬೇಸರ ಹೆಚ್ಚಾಗಬಹುದು. ಆದರೆ ಸಾಮಾಜಿಕ ಕಾರ್ಯಗಳಲ್ಲಿ ತೊಡಗುವುದರಿಂದ ಮನಸ್ಸಿಗೆ ಸಮಾಧಾನ. ಉದ್ಯಮ ಹಾಗೂ ಕೈಗಾರಿಕೆ ಸಂಬಂಧಿತ ನಿರ್ಧಾರಗಳಲ್ಲಿ ಕುಟುಂಬದ ಸಲಹೆ ಉಪಯುಕ್ತ. ಇಂದು ನಿಮಗೆ ಹಣದ ಅಗತ್ಯತೆಗಳು ತುಂಬಾ ಎದುರಾಗಬಹುದು. ರಾಜಕೀಯದ ಅನಿರೀಕ್ಷಿತ ಬದಲಾವಣೆಯ ಬಿಸಿಯು ನಿಮಗೂ ತಟ್ಟಬಹುದು. ಕೆಲವನ್ನು ನೀವು ಹೇಳಿ ಮಾಡುವುದು ಸಾಧ್ಯವಾಗದು. ಕಳ್ಳತನದ ಭೀತಿ ಇರಲಿದೆ. ಅಕಸ್ಮಾತ್ ವಾಹನದಿಂದ ಬೀಳಬಹುದು. ಸಣ್ಣ ಗಾಯಗಳೂ ಆಗಬಹುದು. ಮನೆಯ ಸ್ವಚ್ಛತೆಯ ಕಡೆ ಗಮನ ಇರಲಿದೆ. ಅಧಿಕಾರಿಗಳೊಂದಿಗೆ ಮಾತುಕತೆ ಮೃದುವಾಗಿರಲಿ. ದುರಭ್ಯಾಸಗಳಿಂದ ದೂರವಿರುವುದು ಆರೋಗ್ಯಕ್ಕೆ ಒಳಿತು. ಉದ್ಯೋಗದ ನಿಮಿತ್ತ ಸುತ್ತಾಡುವುದರಿಂದ ಅನಾರೋಗ್ಯಕ್ಕೆ ಕಾರಣವಾಗಬಹುದು. ಅಧಿಕ ಒತ್ತಡವು ನಿಮ್ಮ ಕಾರ್ಯಕ್ಕೆ ಭಂಗ ತರಬಹುದು. ಕಬ್ಬಿಣದ ವ್ಯಾಪರದಿಂದ ಲಾಭವನ್ನು ಪಡೆಯುವಿರಿ. ವೃತ್ತಿಯಲ್ಲಿ ನಿಮ್ಮ ಬಗ್ಗೆ ಸಲ್ಲದ ಮಾತುಗಳು ಕೇಳಿ ಆತಂಕವಾಗಬಹುದು. ನಿಮ್ಮನ್ನು ಅವಲಂಬಿಸಿದವರ ಅವಶ್ಯಕತೆಗಳನ್ನು ಪೂರೈಸುವಿರಿ.

ಮಕರ ರಾಶಿ:

ವಿಭಿನ್ನ ಉದ್ಯಮ ಆಲೋಚನೆಗಳು ಇಂದು ಕಾರ್ಯರೂಪಕ್ಕೆ ಬರಬಹುದು. ಅಧಿಕಾರದ ಚುಕ್ಕಾಣಿ ಸಿಕ್ಕರೂ ಸಹನೆ ಅಗತ್ಯ. ಒತ್ತಡದಿಂದ ಮಾತು ಕಠಿಣವಾಗುವ ಸಾಧ್ಯತೆ ಇದೆ. ತಂದೆಯ ಜೊತೆಗಿನ ಮನಸ್ತಾಪವನ್ನು ನೀವು ಕುಳಿತು ಬಗೆಹರಿಸಿಕೊಳ್ಳುವುದು ಸೂಕ್ತ. ಕಲಾವಿದರು ಹೊಸ ಅವಕಾಶಗಳನ್ನು ಪಡೆದುಕೊಳ್ಳುವರು. ನಿಮ್ಮ ವಿದ್ಯೆಗೆ ಗೌರವ ಸಿಗುವುದು. ಬರಬೇಕಾದ ಹಣವನ್ನು ಬಹಳ ಮುತುವರ್ಜಿಯಿಂದ ಪಡೆಯಬೇಕು. ಅತಿಯಾದ ಅಸೆಯಿಂದ ನಿಮ್ಮಲ್ಲಿರುವ ವಸ್ತುವು ನಿಮಗೆ ದುಃಖಕೊಟ್ಟೀತು. ಅಪರಿಚಿತರ ಸಲಹೆಗಳು ನಿಮಗೆ ಯೋಗ್ಯವೆನಿಸಬಹುದು. ಸಾಮಾಜಿಕ ಕಾರ್ಯಗಳು ನಿಮ್ಮ ವ್ಯಕ್ತಿತ್ವವನ್ನು ಮೆಚ್ಚುವಂತೆ ಮಾಡುತ್ತವೆ. ದುರಭ್ಯಾಸ ತ್ಯಜಿಸಿದರೆ ಮಾನಸಿಕ ಸ್ಪಷ್ಟತೆ ಹೆಚ್ಚುತ್ತದೆ. ಸಂಗಾತಿಯನ್ನು ನೋಡುವ ದೃಷ್ಟಿಯು ಬದಲಾದೀತು‌. ನೀವಿಟ್ಟ ನಂಬಿಕೆಯನ್ನು ಉಳಿಸಿಕೊಳ್ಳಲು ನಿಮ್ಮವರು ಕಷ್ಟಪಟ್ಟಾರು. ಇಂದು ಕುಟುಂಬದ ಜೊತೆ ಹೆಚ್ಚು ಸಮಯವನ್ನು ಕಳೆಯಲು ಅವಕಾಶ ಇರಲಿದೆ. ಶ್ರಮದ ಕೆಲಸಕ್ಕೆ ನೀವು ಹೋಗುವುದಿಲ್ಲ.

ಕುಂಭ ರಾಶಿ:

ಮಾನಸಿಕ ಒತ್ತಡ ನಿಧಾನವಾಗಿ ಹೆಚ್ಚಾಗಬಹುದು. ಅಧಿಕಾರ ಸಂಬಂಧಿತ ವಿಚಾರಗಳಲ್ಲಿ ಜವಾಬ್ದಾರಿ ಹೆಚ್ಚುತ್ತದೆ. ಸಾಮಾಜಿಕ ಸೇವೆಯಲ್ಲಿ ಭಾಗವಹಿಸಿದರೆ ಗೌರವ ಸಿಗುತ್ತದೆ. ದುರಭ್ಯಾಸದಿಂದ ಆರೋಗ್ಯಕ್ಕೆ ತೊಂದರೆ ಸಂಭವ. ರಪ್ತು ವ್ಯಾಪಾರವು ಸುಗಮವಾಗಿ ಸಾಗುವುದು. ನೌಕರರ ಸಮಸ್ಯೆಗಳಿಗೆ ಸ್ಪಂದಿಸುವಿರಿ. ಅಪರಿಚಿತರಿಗೆ ನಿಮ್ಮ ವಾಹನವನ್ನು ಕೊಟ್ಟು ಕೆಡಿಸಿಕೊಳ್ಳುವಿರಿ. ದೂರಪ್ರಯಾಣವನ್ನು ಮಾಡಲು ಮನಸ್ಸು ಒಪ್ಪದು. ಸಮಯಪ್ರಜ್ಞೆಯಿಂದ ನೀವು ಯೋಗ್ಯ ಮಾತುಗಳನ್ನು ಆಡುವಿರಿ. ನಿಮ್ಮ ಆತಂಕವನ್ನು ನೀವು ಆಪ್ತರ ಜೊತೆ ಹೇಳಿಕೊಳ್ಳಿ. ಉದ್ಯಮ, ಕೈಗಾರಿಕೆ ಕ್ಷೇತ್ರದಲ್ಲಿ ಹೂಡಿಕೆ ಮಾಡುವ ಮೊದಲು ಸೂಕ್ತ ಸಲಹೆ ಪಡೆಯಿರಿ. ಅನಗತ್ಯ ಮಾತು ವಿವಾದ ಉಂಟುಮಾಡಬಹುದು. ಯಾರದೋ ಪ್ರೇರಣೆಯಿಂದ ನಿಮ್ಮ ಬದುಕು ಬದಲಾವಣೆಯ ಕಡೆ ಹೋಗಲಿದೆ. ಪ್ರೀತಿಯು ಸಿಗದೇ ಮೀನಿನಂತೆ ಒದ್ದಾಡುವಿರಿ. ಕೊಟ್ಟ ಹಣವನ್ನು ಪುನಃ ಹಿಂದಿರುಗಿಸಿ ಪ್ರಶಂಸೆ ಪಡೆಯುವಿರಿ. ನೌಕರರನ್ನು ಉದ್ಯಮದಲ್ಲಿ ಕಡಿಮೆ ಮಾಡಿಕೊಳ್ಳಬೇಕಾಗುವುದು.

ಮೀನ ರಾಶಿ:

ಇಂದು ದುರಭ್ಯಾಸಗಳಿಂದ ದೂರ ಉಳಿಯುವ ಸಂಕಲ್ಪ ಅಗತ್ಯ. ಕೆಲಸದ ಒತ್ತಡ ಹೆಚ್ಚಿದರೂ ನಿರ್ಣಯಾಧಿಕಾರ ನಿಮ್ಮ ಕೈಯಲ್ಲಿರುತ್ತದೆ. ಸಾಮಾಜಿಕ ಕಾರ್ಯಗಳಲ್ಲಿ ತೊಡಗಿದರೆ ಮನಸ್ಸಿಗೆ ನೆಮ್ಮದಿ. ನ್ಯಾಯಾಲಯದ ಆದೇಶಕ್ಕೆ ತಲೆ ಬಾಗಿ ನಿಮ್ಮ ಮುಂದಿನ ಕೆಲಸವನ್ನು ಮಾಡಿ. ಕಳೆದುಕೊಂಡ ವಸ್ತುವಿನ ಮೌಲ್ಯವನ್ನು ಪಡೆಯುವಿರಿ. ಹದಗೆಡುವ ಆರೋಗ್ಯವನ್ನು ಮೊದಲೇ ಸರಿಮಾಡಿಕೊಂಡು ಜಾಣರಾಗಿರಿ. ನಿಮ್ಮ ಯೋಜನೆಗೆ ಕೆಲವು ಅಪಸ್ವರಗಳು ಕೇಳಿಸುವುದು. ಒಂದೇ ವಿಚಾರದ ಬಗ್ಗೆ ಹೆಚ್ಚು ಹೊತ್ತು ಚಿಂತಿಸಿದರೂ ಪ್ರಯೋಜನವಾಗದು. ಉದ್ಯಮ ಹಾಗೂ ಕೈಗಾರಿಕಾ ವಿಚಾರಗಳಲ್ಲಿ ಹೊಸ ಯೋಜನೆಗಳ ಚಿಂತನೆ ಬರಲಿದೆ. ಮಾತಿನಲ್ಲಿ ತೀಕ್ಷ್ಣತೆ ಬೇಸರಕ್ಕೆ ಕಾರಣವಾಗಬಹುದು. ಆಕಸ್ಮಿಕವಾಗಿ ಆರ್ಥಿಕಲಾಭವಿದ್ದರೂ ಸಂತೋಷವಾಗದು. ಸಂತೋಷವನ್ನು ಹೇಳಿಕೊಳ್ಳಲು ನಿಮ್ಮ ಜೊತೆ ಯಾರೂ ಇಲ್ಲವೆನಿಸುವುದು. ಆಪ್ತರ ಮಾತಿಗೆ ಕಿವಿಯಾಗಿರುವಿರಿ. ಅತಿಯಾದ ನಂಬಿಕೆಯು ಹುಸಿಯಾದ ಕಾರಣ ಪಶ್ಚಾತ್ತಾಪಪಡುವಿರಿ. ಅವರವರ ಭಾರ ಅವರಿಗೇ ಗೊತ್ತಾಗುವ ದಿನ.

31 ಡಿಸೆಂಬರ್​​ 2025ರ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಧನು, ಮಹಾನಕ್ಷತ್ರ : ಉತ್ತರಾಷಾಢ, ವಾರ : ಬುಧ, ಪಕ್ಷ : ಶುಕ್ಲ, ತಿಥಿ : ಏಕಾದಶೀ ನಿತ್ಯನಕ್ಷತ್ರ : ಭರಣೀ, ಯೋಗ : ಐಂದ್ರ, ಕರಣ : ಭದ್ರ, ಸೂರ್ಯೋದಯ – 06 – 49 am, ಸೂರ್ಯಾಸ್ತ – 06 – 05 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 12:28 – 13:52, ಯಮಗಂಡ ಕಾಲ 08:14 – 09:39, ಗುಳಿಕ ಕಾಲ 11:03 – 12:28

-ಲೋಹಿತ ಹೆಬ್ಬಾರ್ – 8762924271 (what’s app only)