AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today 27 January : ಇಂದು ಈ ರಾಶಿಯವರಿಗೆ ಹೇಳಿಕೊಳ್ಳಲಾಗದ ಒತ್ತಡ

ಜನವರಿ 27, 2026 ರ ಇಂದಿನ ರಾಶಿ ಭವಿಷ್ಯವು ಪ್ರತಿ ರಾಶಿಯವರ ದೈನಂದಿನ ಜೀವನದ ಪ್ರಮುಖ ಅಂಶಗಳನ್ನು ವಿವರಿಸುತ್ತದೆ. ಕೆಲವು ರಾಶಿಗಳಿಗೆ ಒತ್ತಡ, ಆಲಸ್ಯ ಹಾಗೂ ಅನಾರೋಗ್ಯದ ಸಾಧ್ಯತೆಗಳಿದ್ದರೆ, ಇನ್ನು ಕೆಲವರಿಗೆ ಹೊಸ ಹಣಕಾಸು ಅವಕಾಶಗಳು, ಪ್ರೀತಿಪಾತ್ರರೊಂದಿಗೆ ಬಲವಾದ ಸಂಬಂಧಗಳು ಮತ್ತು ಹೊಸ ಚೈತನ್ಯ ಸಿಗಲಿದೆ. ನಿಮ್ಮ ರಾಶಿಯ ಇಂದಿನ ಸಂಪೂರ್ಣ ಮಾರ್ಗದರ್ಶನವನ್ನು ಇಲ್ಲಿ ತಿಳಿಯಿರಿ.

Horoscope Today 27 January : ಇಂದು ಈ ರಾಶಿಯವರಿಗೆ ಹೇಳಿಕೊಳ್ಳಲಾಗದ ಒತ್ತಡ
ಸಾಂದರ್ಭಿಕ ಚಿತ್ರ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Jan 27, 2026 | 1:30 AM

Share

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಶುಕ್ಲ ಪಕ್ಷದ ನವಮೀ ತಿಥಿ ಮಂಗಳವಾರ ಪಶ್ಚಾತ್ತಾಪ, ಆಲಸ್ಯ, ದೂರಪ್ರಯಾಣ, ಸ್ವಾರ್ಥ, ಸ್ವಾತ್ಮಾವಲೋಕನ, ನಾಸ್ತಿಕತೆ, ಅನಾರೋಗ್ಯ ಇವೆಲ್ಲ ಇಂದಿನ ವಿಶೇಷ.

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಶ್ರವಣಾ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ : ನವಮೀ, ನಿತ್ಯನಕ್ಷತ್ರ : ಕೃತ್ತಿಕಾ, ಯೋಗ : ಶುಭ, ಕರಣ : ಕೌಲವ, ಸೂರ್ಯೋದಯ – 06 – 54 am, ಸೂರ್ಯಾಸ್ತ – 06 – 29 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 15:29 – 16:55, ಯಮಗಂಡ ಕಾಲ 09:46 – 11:11, ಗುಳಿಕ ಕಾಲ 12:37 – 14:03

ಮೇಷ ರಾಶಿ :

ಇಂದು ಭಾವನಾತ್ಮಕ ಸಂಪರ್ಕಗಳು ಬಲವಾಗಿರುತ್ತವೆ. ನಿಮ್ಮ ಹಣಕಾಸುಗಳನ್ನು ಬುದ್ಧಿವಂತಿಕೆಯಿಂದ ನಿರ್ವಹಿಸಿ ಮತ್ತು ಸೃಜನಶೀಲತೆಯನ್ನು ಹುಡುಕಿಕೊಳ್ಳಲು ತೊಡಗಿಸಿಕೊಳ್ಳಿ. ಕೆಲಸಕ್ಕಾಗಿ ನೀವು ಹಾಕಿಕೊಂಡ ಸಮಯವು ವ್ಯತ್ಯಸವಾಗುವುದು. ಕುಂದುಕೊರೆತಗಳ ಜೊತೆ ಜೀವಿಸುವುದನ್ನು ಕಲಿಯುವ ಆವಶ್ಯಕತೆ ಇದೆ ಎಂದು ಇಂದು ಗೊತ್ತಾಗುವುದು. ಇಂದು ನಿಮ್ಮ ಮನಸ್ಸು ಬಹಳ ಡೋಲಾಯಮಾನವಾಗಿ ಇರಲಿದೆ. ಒಂದೇ ವಿಚಾರವನ್ನು ನಿಮಗೆ ಮತ್ತೆ ಮತ್ತೆ ನೆನಪಿಸಬೇಕಾದೀತು.

ವೃಷಭ ರಾಶಿ :

ನಿಮ್ಮ ದಾರಿಯಲ್ಲಿ ಬರುವ ಹೊಸ ಆರ್ಥಿಕ ಅವಕಾಶಗಳಿಗೆ ತೆರೆದುಕೊಳ್ಳಿ. ನಿಮಗೆ ನೀವೇ ಸಾಂತ್ವನ ತಂದುಕೊಳ್ಳಬೇಕು. ಮನಸ್ಸಿಗೆ ನೆಮ್ಮದಿ ಸಿಗುವ ಸ್ಥಳಗಳಿಗೆ ಹೋಗಿ ಸ್ವಲ್ಪ ಕಾಲ ಇದ್ದು ಬರುವಿರಿ. ಹೊಸ ಚೈತನ್ಯ ನಿಮ್ಮದಾಗವುದು. ಸಮಾರಂಭಗಳಿಗೆ ಮುಖ್ಯ ಅತಿಥಿಯಾಗಿ ಆಹ್ವಾನ ಬರಬಹುದು. ದಿನದ ಆರಂಭವು ಬಹಳ ಪ್ರಶಾಂತವಾಗಿ ಇರಲಿದೆ. ಆತ್ಮಗೌರವವನ್ನು ಬಿಟ್ಟು ನೀವು ಬದಲಾಗುವುದಿಲ್ಲ. ಗಂಭೀರವಾದ ಚರ್ಚೆಯನ್ನು ನೀವು ಹಾಸ್ಯ ಮಾಡಿ ಮುಗಿಸುವಿರಿ. ಒಳ್ಳೆಯ ಕಾರ್ಯಕ್ಕೆ ಅವಕಾಶ ಸಿಕ್ಕಾಗ ಅದನ್ನು ಮಾಡಿ.

ಮಿಥುನ ರಾಶಿ :

ನಿಮ್ಮ ಸಂಬಂಧಗಳಲ್ಲಿ ಸ್ಥಿರತೆಯನ್ನು ಹುಡುಕುವುದು ಮತ್ತು ಭವಿಷ್ಯಕ್ಕಾಗಿ ಉಳಿತಾಯದತ್ತ ಗಮನ ಹರಿಸಿ. ಕೆಲವು ವಿಚಾರದಲ್ಲಿ ಮೋಸವಾಗುವ ಸಂಭವವಿದೆ. ಬೇಸರ ಪಡದೇ ಮುನ್ನಡೆಯುವುದು ಸುಖ. ಮನಸ್ಸನ್ನು ಸಡಿಲಮಾಡಿಕೊಳ್ಳುವುದು ಬೇಡ. ಕೆಲವು ಔದ್ಯೋಗಿಕ ಸಮಸ್ಯೆಯನ್ನು ಮೇಲಧಿಕಾರಿಗಳ ಮೂಲಕ ಬಗೆ ಹರಿಸಿಕೊಳ್ಳಿ. ನಿಮ್ಮ ನೋವಿಗೆ ಸ್ಪಂದನೆ ಸಿಗುವುದು. ಅನಾರೋಗ್ಯದ ಭೀತಿಯು ಇರಲಿದೆ. ಮನಸ್ಸು ನಕಾರಾತ್ಮಕವಾಗಿ ಹರಡಬಹುದು. ನಿಮ್ಮ ಕ್ರಿಯಾಶೀಲ ಕಾರ್ಯಕ್ಕೆ ಪ್ರಶಂಸೆ ಸಿಗಲಿದೆ.

ಕರ್ಕಾಟಕ ರಾಶಿ :

ಅನಿರೀಕ್ಷಿತ ಯಶಸ್ಸು ನಿಮ್ಮನ್ನು ದಾರಿತಪ್ಪುಸಬಹುದು. ನಿಮ್ಮ ಆದಾಯದಲ್ಲಿ ವೈವಿಧ್ಯಗೊಳಿಸಲು ಅವಕಾಶಗಳನ್ನು ಅನ್ವೇಷಿಸಿ. ರಾಜಕೀಯ ವ್ಯಕ್ತಿಗಳು ಜನಮನ್ನಣೆಯನ್ನು ಅಧಿಕ ಗಳಿಸುವರು. ಅಲ್ಪ ಪ್ರಯಾಣದಿಂದಲೂ ನಿಮಗೆ ಆಯಾಸವಾಗಬಹುದು. ಪ್ರಯಾಣ ಮಾಡುವವನಿಗೆ ದಾರಿ ಹೇಗಿದೆಯೋ ಹಾಗೆ ಹೋಗುವುದು ಮುಖ್ಯ. ಹಿರಿಯರಿಂದ ಸಮಾಧಾನ ಸಿಗಲಿದೆ. ಬೇಡದ ವ್ಯಕ್ತಿಗಳ ಮಾತುಗಳನ್ನು ಕೇಳಲು ನಿಮಗೆ ಇಷ್ಟವಾಗದು. ಸಾವಧಾನದ ಚಿಂತನೆಗಳು ಪ್ರಯೋಜನಕ್ಕೆ ಬಾರದು.

ಸಿಂಹ ರಾಶಿ :

ಆತ್ಮಾವಲೋಕನದಲ್ಲಿ ತೊಡಗಿಸಿಕೊಳ್ಳುವುದರಿಂದ ಸ್ಪಷ್ಟತೆಯನ್ನು ನೀಡಬಹುದು. ನಿರಂತರ ಕಾರ್ಯದಿಂದ ದೇಹಕ್ಕೆ ಆಯಾಸವಾಗಬಹುದು. ಹೇಗಾದರೂ ಮಾಡಿ ಜೀವನದಲ್ಲಿ ಸುಖವಾಗಿ ಇರಬೇಕು ಎನ್ನುವ ಆಸೆ ಬರುವುದು. ಸಮಾರಂಭಗಳಿಗೆ ಆಹ್ವಾನವಿದ್ದರೂ ಹೋಗುವ ಮನಸ್ಸಾಗದು. ಯಾರದೋ ಮಾತನ್ನು ಕೇಳಿ ಆರೋಗ್ಯವನ್ನು ಹಾಳು ಮಾಡಿಕೊಳ್ಳುವಿರಿ. ಕಾಲಹರಣಕ್ಕೆ ಇನ್ನೊಬ್ಬರ ವಿಚಾರವನ್ನು ಚರ್ಚಿಸುವಿರಿ. ಮನೋಹರವಾದ ತಾಣಗಳಿಗೆ ಹೋಗುವ ಬಯಕೆಯಾಗುವುದು.

ಕನ್ಯಾ ರಾಶಿ :

ಸ್ಪಷ್ಟ ಮತ್ತು ಸಹಾನುಭೂತಿಯ ಸಂವಹನದ ಮೂಲಕ ನಿಮ್ಮ ಸಂಬಂಧಗಳಲ್ಲಿ ಬಲವಿರುವುದು. ಹಣಕಾಸಿನ ಹೊಂದಾಣಿಕೆಗೆ ಬಹಳ ಯೋಚನೆ ಮಾಡುವಿರಿ. ಕಹಿ ಘಟನೆಯನ್ನು ಮರೆಯಲು ಬಹಳ ಶ್ರಮ ಪಡುವಿರಿ. ವಿದ್ಯಾಭ್ಯಾಸದಲ್ಲಿ ಹಿನ್ನಡೆಯನ್ನು ಕಾಣಲಿದ್ದು ಕುಟುಂಬದಲ್ಲಿ ಅಸಮಾಧನ ಇರಲಿದೆ. ಸ್ವಂತ ಉದ್ಯೋಗವು ಸಣ್ಣ ಪ್ರಮಾಣದ ಹಿನ್ನಡೆಯನ್ನು ಕಾಣಬಹುದು. ಔಷಧ ವ್ಯಾಪಾರಿಗಳು ಹೆಚ್ಚಿನ ಲಾಭ ಗಳಿಸುವರು. ನಿಮಗೆ ಭೂಮಿಯನ್ನು ಕೊಡುವುದು ಅನಿವಾರ್ಯವಾಗಿದ್ದು, ಅದಕ್ಕೆ ಹೆಚ್ಚಿನ ಮೌಲ್ಯವು ಸಿಗದು.

ತುಲಾ ರಾಶಿ :

ನಿಮ್ಮ ವಿಶ್ಲೇಷಣಾತ್ಮಕ ಕೌಶಲ್ಯಗಳ ಜೊತೆ ಬಾಕಿ ಉಳಿದಿರುವ ಕಾರ್ಯಗಳನ್ನು ನಿಭಾಯಿಸಿ ಮತ್ತು ಒತ್ತಡವನ್ನು ನಿವಾರಿಸಲು ಸಾವಧಾನತೆ ಅಭ್ಯಾಸಗಳಲ್ಲಿ ತೊಡಗಿಸಿಕೊಳ್ಳಿ. ನಿಮ್ಮ ಹಿಂದೆ ಆಡುವ ಮಾತುಗಳಿಗೆ ಹೆಚ್ಚು ಬೆಲೆ ಕೊಡುವುದು ಬೇಡ. ಹಣದ ಹೂಡಿಕೆಯನ್ನು ಮಾಡುವ ಯೋಚನೆ ಇರಲಿದೆ. ಆಕಸ್ಮಿಕವಾಗಿ ಪ್ರೇಮದಲ್ಲಿ ಬೀಳುವಿರಿ. ನಿಮಗಿಂತ ಬಲವುಳ್ಳವರ ಮೇಲೆ ದ್ವೇಷವನ್ನು ಸಾಧಿಸುವಿರಿ. ಸಂಕಷ್ಟಕ್ಕೆ ಈಡಾಗುವಿರಿ. ಆರ್ಥಿಕ ವೆಚ್ಚಕ್ಕೆ ನೀವು ಕಡಿವಾಣ ಹಾಕಿಕೊಳ್ಳಬೇಕಾದೀತು.

ವೃಶ್ಚಿಕ ರಾಶಿ :

ನಿಮ್ಮ ವರ್ಚಸ್ಸು ಇಂದು ಉತ್ತುಂಗಕ್ಕೇರಿದೆ, ಇದು ಸಾಮಾಜಿಕ ಸಂವಹನಗಳಿಗೆ ಉತ್ತಮ ಸಹಕಾರಿಯಾಗುವುದು. ನಿಮ್ಮ ಶಕ್ತಿಯನ್ನು ಸೃಜನಾತ್ಮಕ ಅನ್ವೇಷಣೆಗಳಲ್ಲಿ ತೊಡಗಿಸಿ ಮತ್ತು ಪ್ರೀತಿಪಾತ್ರರ ಜೊತೆ ವಿಶೇಷ ಚಟುವಟಿಕೆಯಿಂದ ದಿನವನ್ನು ಕಳೆಯುವಿರಿ. ವ್ಯಾವಹಾರಿಕ ಮನಃಸ್ಥಿತಿಯಿಂದ ಎಲ್ಲವನ್ನೂ ಅಳೆಯುವುದು ಬೇಡ. ನಿಮ್ಮ ಅಸಹಜ ನಡೆಯನ್ನು ನಿಮ್ಮವರು ಒಪ್ಪಿಕೊಳ್ಳಲಾರರು. ಗುಂಪುಗಾರಿಕೆಯಿಂದ ವೈಯಕ್ತಿಕ ಕಾರ್ಯ ಅಸಾಧ್ಯ.

ಧನು ರಾಶಿ :

ನಿಮ್ಮ ವೈಯಕ್ತಿಕ ಮತ್ತು ಆರ್ಥಿಕ ಜೀವನದಲ್ಲಿ ಸಮತೋಲನವನ್ನು ಸಾಧಿಸುವ ಬಗ್ಗೆ ಹುಡುಕಾಟ ಇರುವುದು. ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ನಿಮ್ಮ ಭಾವನೆಗಳಿಗೆ ಒಂದು ಚೌಕಟ್ಟನ್ನು ಒದಗಿಸುತ್ತದೆ. ಮನೆಯಿಂದ ಹೊರ ಹೋಗುವುದು ನಿಮಗೆ ಇಷ್ಟವಾಗದು. ನಿಮ್ಮವರಿಗೆ ನಿಮ್ಮ ನಡತೆಯಲ್ಲಿ ಬದಲಾವಣೆ ಕಂಡೀತು. ಪಾಲುದಾರಿಕೆಯಲ್ಲಿ ನಿಮ್ಮ ಶ್ರಮವೇ ಹೆಚ್ಚಿರಲಿದ್ದು ಲಾಭವನ್ನು ಹೆಚ್ಚುಪಡೆಯುವಿರಿ.

ಮಕರ ರಾಶಿ :

ಇಂದು ನಿಮ್ಮ ಆರೋಗ್ಯಕ್ಕೆ ಗಮನ ಕೊಡಿ. ವಿಶ್ರಾಂತಿ ಮತ್ತು ನವ ಉತ್ಸಾಹ ಪಡೆಯುವುದು ಅವಶ್ಯಕ. ತಮ್ಮನ್ನು ತಾವು ಪ್ರಸ್ತುತಪಡಿಸಬಹುದಾದ ಹೊಸ ಹಣಕಾಸಿನ ಅವಕಾಶಗಳಿಗಾಗಿ ಎಚ್ಚರವಾಗಿರಿ. ನಿಮ್ಮವರ ಅನಾರೋಗ್ಯದ ಕಾರಣ ಓಡಾಟ ಮಾಡಬೇಕಾದೀತು. ಒಂಟಿಯಾಗಿ ಎಲ್ಲಿಗಾದರೂ ದೂರ ಹೋಗುವಿರಿ. ಅಶಿಸ್ತಿನಿಂದ ವರ್ತಿನೆಯ ಕಾರಣ ನಿಮಗೆ ಎಲ್ಲರಿಂದ ಅಪಮಾನವಾಗಬಹುದು. ಕೆಲವು ಕೆಲಸಗಳನ್ನು ಕೈಬಿಡುವಿರಿ.

ಕುಂಭ ರಾಶಿ :

ಇಂದು ಸಂಬಂಧಗಳು ನಿಮ್ಮ ಸಹಾಯಕ್ಕೆ ಬರಲಿವೆ. ಯಾವುದೇ ದೀರ್ಘಕಾಲದ ಸಮಸ್ಯೆಗಳನ್ನು ಪರಿಹರಿಸಲು ಮುಕ್ತ ಸಂವಹನವನ್ನು ಅಳವಡಿಸಿಕೊಳ್ಳುವಿರಿ. ಆರೋಗ್ಯಕರ ಅಭ್ಯಾಸಗಳನ್ನು ಇಟ್ಟುಕೊಳ್ಳುವುದು ನಿಮ್ಮ ಒಟ್ಟಾರೆ ಯೋಗಕ್ಷೇಮಕ್ಕೆ ಪ್ರಯೋಜನವನ್ನು ನೀಡುತ್ತದೆ. ಆರ್ಥಿಕವಾಗಿ, ವಿವೇಕಯುತ ಯೋಜನೆ ಭವಿಷ್ಯದ ಭದ್ರತೆಗೆ ಕಾರಣವಾಗುತ್ತದೆ. ಮನೆ ಹುಡುಕಾಟಕ್ಕೆ ತಿರುಗಾಟ ಮಾಡಲಿದ್ದೀರಿ. ವಿದ್ಯಾರ್ಥಿಗಳು ಗಂಭೀರವಾಗಿ ಅಧ್ಯಯನದ ಕಡೆ ಗಮನಕೊಡಬೇಕಾದೀತು.

ಮೀನ ರಾಶಿ :

ಇಂದು ನಿಮ್ಮ ಸಂಬಂಧಗಳಲ್ಲಿ ಪ್ರಾಮಾಣಿಕತೆ ಅತ್ಯಗತ್ಯ. ಮುಕ್ತ ಸಂವಹನವು ಪ್ರೀತಿಪಾತ್ರರೊಂದಿಗಿನ ಬಂಧಗಳನ್ನು ಬಲಪಡಿಸುತ್ತದೆ. ಆರ್ಥಿಕವಾಗಿ, ಅನಗತ್ಯ ಖರ್ಚುಗಳನ್ನು ತಪ್ಪಿಸುವುದು ಮತ್ತು ಉಳಿತಾಯದತ್ತ ಗಮನ ಹರಿಸುವುದು ಜಾಣತನ. ನಿಮ್ಮ ದಿನಚರಿಯನ್ನು ವ್ಯವಸ್ಥಿತವಾಗಿಸಿಕೊಳ್ಳಿ. ಆಪ್ತರ ಜೊತೆ ಮಾತನಾಡಿ ನಿಮ್ಮ ಮನಸ್ಸಿನ ಭಾರವನ್ನೆಲ್ಲ ದೂರ ಮಾಡಿಕೊಳ್ಳುವಿರಿ. ನಿಮ್ಮ ನಿಯಮಗಳು ನಿಮಗೆ ತೊಂದರೆಯಾಗಬಹುದು.

-ಲೋಹಿತ ಹೆಬ್ಬಾರ್ – 8762924271 (what’s app only)

ಬಿಗ್ ಬಾಸ್ ಬಳಿಕ ಸಿನಿಮಾ ಅವಕಾಶ ಪಡೆದ ಮಲ್ಲಮ್ಮ; ಬದಲಾಯ್ತು ಲೈಫ್
ಬಿಗ್ ಬಾಸ್ ಬಳಿಕ ಸಿನಿಮಾ ಅವಕಾಶ ಪಡೆದ ಮಲ್ಲಮ್ಮ; ಬದಲಾಯ್ತು ಲೈಫ್
ಆರ್​ಸಿಬಿ ವಿರುದ್ಧ ಐತಿಹಾಸಿಕ ಶತಕ ಬಾರಿಸಿದ ನ್ಯಾಟ್ ಸಿವರ್-ಬ್ರಂಟ್
ಆರ್​ಸಿಬಿ ವಿರುದ್ಧ ಐತಿಹಾಸಿಕ ಶತಕ ಬಾರಿಸಿದ ನ್ಯಾಟ್ ಸಿವರ್-ಬ್ರಂಟ್
ಗಣರಾಜ್ಯೋತ್ಸವ ಪರೇಡ್​​ನಲ್ಲಿ ಗಮನ ಸೆಳೆದ ಆಪರೇಷನ್ ಸಿಂಧೂರ್‌ ವಿಜಯೋತ್ಸವ
ಗಣರಾಜ್ಯೋತ್ಸವ ಪರೇಡ್​​ನಲ್ಲಿ ಗಮನ ಸೆಳೆದ ಆಪರೇಷನ್ ಸಿಂಧೂರ್‌ ವಿಜಯೋತ್ಸವ
ವೋಟ್ ಹಾಕಿದ ಪೊಲೀಸರಿಗೂ ಧನ್ಯವಾದ ಹೇಳಿದೆ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ
ವೋಟ್ ಹಾಕಿದ ಪೊಲೀಸರಿಗೂ ಧನ್ಯವಾದ ಹೇಳಿದೆ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ
ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'
ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'
ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!
ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!
ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ
ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ
ಪತಿಯ ಹಣದಾಹಕ್ಕೆ ಪತ್ನಿ ಕಳೆದುಕೊಂಡಳಾ ಜೀವ?: ಯುವತಿ ಕುಟುಂಬಸ್ಥರಿಂದ ಆರೋಪ
ಪತಿಯ ಹಣದಾಹಕ್ಕೆ ಪತ್ನಿ ಕಳೆದುಕೊಂಡಳಾ ಜೀವ?: ಯುವತಿ ಕುಟುಂಬಸ್ಥರಿಂದ ಆರೋಪ
ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಚಾಲಕನ ಅಜಾಗರೂಕತೆ: ಬಿಎಂಟಿಸಿ ಬಸ್​ಗೆ ಡಿಕ್ಕಿ ಹೊಡೆದ ರೈಲು
ಚಾಲಕನ ಅಜಾಗರೂಕತೆ: ಬಿಎಂಟಿಸಿ ಬಸ್​ಗೆ ಡಿಕ್ಕಿ ಹೊಡೆದ ರೈಲು