
ಯಾವುದೇ ನಿರ್ಬಂಧಗಳು ಇಲ್ಲದೇ ಆಲಸ್ಯದಿಂದ ಕಛೇರಿಯ ಕೆಲಸಗಳು ವಿಳಂಬವಾಗುವುದು. ನಿಮ್ಮ ಬಗ್ಗೆ ಪ್ರಶಂಸೆಯ ನುಡಿಗಳು ಕೇಳಿಬರಬಹುದು. ವಿದ್ಯಾಭ್ಯಾಸಕ್ಕೆ ಪೂರಕವಾದ ವಾತಾವರಣದ ಕೊರತೆ ಇರುವುದು. ನಿಮ್ಮ ದ್ವೇಷವು ಬಲವುಳ್ಳವರಲ್ಲಿ ಬೇಡ. ಸುಮ್ಮನೇ ಆಪ್ತರ ಮೇಲೆ ಸಂಶಯವನ್ನು ಇಟ್ಟುಕೊಳ್ಳುವುದು ಬೇಡ. ಹೂಡಿಕೆಯನ್ನು ಹಿಂಪಡೆಯುವ ಸಲಹೆಯು ನಿಮಗೆ ಬರಬಹುದು. ಉದ್ವೇಗದಲ್ಲಿ ಇದ್ದರೂ ಸಮಾಧಾನಿಗಳಂತೆ ತೋರುವಿರಿ. ಸತ್ಕರ್ಮದಿಂದ ಬರುವ ಪುಣ್ಯದ ಫಲವು ಇಂದು ಸಿಗುವುದು. ಸಹೋದ್ಯೋಗಿಗಳ ವರ್ತನೆಯು ನಿಮಗೆ ಆಚ್ಚರಿಗೊಳಿಸೀತು. ಸಿಟ್ಟು ಮಾಡಿಕೊಂಡು ಆಗಬೇಕಾದ ಕೆಲಸವನ್ನು ಮಾಡಿ ಮುಗಿಸುವಿರಿ.
ಆಸ್ತಿಯ ವಿಚಾರ ಬಂದಾಗ ಮೌನ ತಾಳುವಿರಿ. ಬಹಳ ದಿನಗಳ ಅನಂತರ ಸಾರ್ವಜನಿಕ ಕಾರ್ಯಗಳಲ್ಲಿ ತೊಡಗಿಕೊಳ್ಳುವಿರಿ. ಎಲ್ಲರ ಜೊತೆ ಸೇರಿ ಉತ್ಸಾಹದಿಂದ ಪಾಲ್ಗೊಳ್ಳುವಿರಿ. ನಿಮ್ಮ ನಿರುದ್ಯೋಗದ ಸ್ಥಿತಿಯು ದಾಯಾದಿಗಳಿಗೆ ಸಂತಸವಗುವುದು. ಸಕಾರಾತ್ಮಕ ಆಲೋಚನೆಗಳನ್ನು ನೀವು ಆಪ್ತರ ಜೊತೆ ಹಂಚಿಕೊಳ್ಳುವಿರಿ. ದೇಹದ ಬಗ್ಗೆ ಅತಿಯಾದ ಮೋಹವಿರುವುದು. ನಿಮ್ಮ ಯೋಜನೆಗೆ ಬೆನ್ನೆಲುಬಾಗಿ ನಿಲ್ಲುವವರು ಬೇಕಾಗಿದ್ದರೆ. ಅಧಿಕ ಖರ್ಚನ್ನು ಇಂದು ಮಾಡಬೇಕಾಗುವುದು. ಸಾಲಬಾಧೆಯು ನಿಮ್ಮನ್ನು ತೀವ್ರವಾಗಿ ಕಾಡುವುದು. ನಿಮ್ಮ ದುರಭ್ಯಾಸವನ್ನು ಇನ್ನೊಬ್ಬರಿಗೂ ಹಿಡಿಸುವ ಸಾಧ್ಯತೆ ಇದೆ. ಸುಮ್ಮನೇ ಇರುವುದು ನಿಮಗೆ ಇಂದು ಪ್ರಿಯವಾದೀತು. ಹೂಡಿಕೆಯಿಂದ ಹಣವನ್ನು ಪಡೆಯುವಿರಿ.
ಮಕ್ಕಳಿಗೆ ನಿರಾಸೆಯಾಗದಂತೆ ನಡೆದುಕೊಳ್ಳಿ. ಶತ್ರುವಿನ ಮೇಲೆ ಸೇಡು ತೀರಿಸಿಕೊಳ್ಳಲು ಅಧಿಕ ಖರ್ಚನ್ನು ಮಾಡಬೇಕಾಗುವುದು. ಉದ್ಯಮಿಗಳಿಗೆ ನೌಕರರ ಕಲಹವನ್ನು ಸರಿ ಮಾಡುವುದೇ ಹೆಚ್ಚಾಗುವುದು. ಸ್ನೇಹಿತರ ಸಹಕಾರದಿಂದ ಸ್ಥಿರಾಸ್ತಿಯನ್ನು ಖರೀದಿಸುವಿರಿ. ಪ್ರೀತಿಯಲ್ಲಿ ನಿಮಗೆ ಮೋಸವಾಗುವುದು. ಉದ್ಯಮಕ್ಕೆ ಬೇಕಾದ ವಿವರಗಳನ್ನು ಅನುಭವಿಗಳಿಂದ ಪಡೆಯಿರಿ. ಸ್ನೇಹಿತನ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳುವಿರಿ. ಅಪರಿಚಿತರು ಬೇರೆ ಊರಿನಲ್ಲಿ ಸ್ನೇಹಿತರಾಗಬಹುದು. ಅಸಂಬದ್ಧ ಮಾತುಗಳ ನಿಮ್ಮನ್ನು ವ್ಯಕ್ತಿತ್ವವನ್ನು ತಿಳಿಸುವುದು. ಪ್ರಭಾವೀ ವ್ಯಕ್ತಿಗಳ ಭೇಟಿಯು ನಿಮ್ಮ ಜೀವನೋತ್ಸಾಹವನ್ನು ಹೆಚ್ಚಿಸುವುದು.
ಹಣಕಾಸಿನಲ್ಲಿ ವಂಚನೆಯಾಗಿರುವುದು ಬಹಳ ದಿನಗಳ ಅನಂತರ ಗೊತ್ತಾಗಿ ಬೇಸರವಾಗುವುದು. ಯಾರ ವಿಚಾರವನ್ನೂ ಒಪ್ಪಿಕೊಳ್ಳಲಾರಿರಿ. ಮಾತನ್ನು ಉಳಿಸಿಕೊಳ್ಳಲು ಪ್ರಯತ್ನಿಸಿ. ನಿಮ್ಮನ್ನು ದುರುಪಯೋಗ ಮಾಡಿಕೊಳ್ಳುವ ಸಂಭವಿದೆ. ನೀವು ಆಯ್ಕೆ ಆಗಿದ್ದು ಯಾವುದಕ್ಕೋ ಕೆಲಸವು ಮತ್ಯಾವುದೋ ಆಗಲಿದೆ. ಅನಾರೋಗ್ಯವು ಚಿಕಿತ್ಸೆಯಾಗಿ ಪರಿಣಮಿಸಬಹುದು. ಉತ್ತಮ ಭೂಮಿಯ ಲಾಭವನ್ನು ಪಡೆಯುವಿರಿ. ಅಪಾಯಯಕ್ಕೆ ಸಿಕ್ಕಿಕೊಳ್ಳುವ ಸಂಭವವಿತ್ತು. ಧನವ್ಯಯವನ್ನು ನಿಮ್ಮ ಜಾಣ್ಮೆಯಿಂದ ತಪ್ಪಿಸಿಕೊಳ್ಳುವಿರಿ. ಸ್ತ್ರೀಯರಿಂದ ಕೆಲವು ಸಮಸ್ಯೆಯು ಬರಲಿದೆ. ಅಪರಿಚಿತರಿಗೆ ಇಂದು ಅಲ್ಪ ಧನಸಹಾಯವನ್ನು ಮಾಡಬೇಕಾಗುವುದು. ಕೋಪದ ನಿಯಂತ್ರಣವು ಕಷ್ಟವಾದೀತು. ತಪ್ಪಿನ ಕಾರಣಕ್ಕೆ ನಿಮ್ಮ ಬಳಿ ಕ್ಷಮೆಯನ್ನು ಕೇಳಬಹುದು.
ಬಂದ ಹಣವನ್ನು ಖರ್ಚಾಗದಂತೆ ಸಂಗ್ರಹಿಸಲು ಪ್ರಯತ್ನಿಸಿ. ಆರ್ಥಿಕ ವಿಚಾರದಲ್ಲಿ ನಿಮಗೆ ಯಾವಾಗಲೂ ಅಸಮಾಧನ. ಇಲ್ಲವಾದರೆ ಸಂಪತ್ತನ್ನು ಉಳಿಸಿಕೊಳ್ಳುವುದು ಕಷ್ಟವಾದೀತು. ಅಸಾಧ್ಯವನ್ನು ಸಾಧಿಸುವ ಹಠವು ಬೇಡವಾದೀತು. ಸಾಹೋದರ್ಯದಲ್ಲಿ ಅನಗತ್ಯ ಮಾತುಗಳು ಬರಬಹುದು. ಉದ್ಯಮದಲ್ಲಿ ಹಿನ್ನಡೆಯಾಗುವುದು ನಿಮಗೆ ಮೊದಲೇ ಗೊತ್ತಿದ್ದೂ ಪ್ರಯತ್ನಿಸುವಿರಿ. ಸಂಸ್ಥೆಯ ಮುಖಗಯಸ್ಥರಾಗಲು ಆಹ್ವಾನವು ಬರಬಹುದು. ಭೂಮಿಯಿಂದ ಸಂಪತ್ತನ್ನು ಕಳೆದುಕೊಳ್ಳುವಿರಿ. ಅನಪೇಕ್ಷಿಯ ವಿಚಾರವನ್ನು ಪ್ರಸ್ತಾಪಿಸಿಕೊಂಡು ಕಾಲಹರಣ ಮಾಡುವಿರಿ. ತಾಯಿಯ ವಿಚಾರದಲ್ಲಿ ನೀವು ಇಂದು ಕೋಪಗೊಳ್ಳುವ ಸಾಧ್ಯತೆ ಇದೆ.
ಆತ್ಮಗೌರವವನ್ನು ಕೆಡಿಸಿಕೊಳ್ಳುವ ಸಂದರ್ಭ ಬರಬಹುದು. ಮಕ್ಕಳ ಕಾರ್ಯದಿಂದ ನಿಮಗೆ ಅಪ್ರಶಂಸೆಯು ಬರಬಹುದು. ಸ್ತ್ರೀಯರ ಉಪಸ್ಥಿತಿಯು ನಿಮಗೆ ಬಲವನ್ನು ತಂದುಕೊಡುವುದು. ವಿದೇಶದ ಮಿತ್ರರ ಸಹಾಯದಿಂದ ನೀವು ಉದ್ಯಮವು ವಿಸ್ತಾರವಾಗಬಹುದು. ಅಧಿಕ ಓಡಾಟದಿಂದ ನೀವು ಆಯಾಸಗೊಳ್ಳುವಿರಿ. ಇಂದು ಹಣದ ಹರಿವು ಅಲ್ಪವಾಗಿ ಇರುವುದು. ಆಪ್ತರನ್ನು ಕಳೆದುಕೊಂಡು ಬೇಸರಿಸುವಿರಿ. ವ್ಯಾಪಾರದ ನಷ್ಟವನ್ನು ನಿಮಗೆ ಅರಗಿಸಿಕೊಳ್ಳಲಾಗದು. ಆಯಾಸ ಹೆಚ್ಚಾದ ಕಾರಣ ಕಾರ್ಯದಲ್ಲಿ ಉತ್ಸಾಹ ಕಡಿಮೆ ಇರಲಿದೆ. ಪ್ರೇಮಿಯ ಜೊತೆ ಹರಟೆ ಹೊಡೆಯುತ್ತ ದಿನವನ್ನು ಕಳೆಯುವಿರಿ. ಸಂಪತ್ತು ಮತ್ತಾವುದೋ ರೂಪದಲ್ಲಿ ಬಂದು ಸೇರುತ್ತದೆ ಎಂಬ ನಂಬಿಕೆ ಇರಲಿದೆ.
ಶತ್ರುಗಳ ಕಾರಣದಿಂದ ಖರ್ಚುನ್ನು ಮಾಡಬೇಕಾದ ಸ್ಥಿತಿಯು ಬರಲಿದೆ. ಮನಶ್ಶಾಂತಿಗಾಗಿ ಧಾರ್ಮಿಕ ಕಾರ್ಯಗಳನ್ನು ಮಾಡಿಸುವಿರಿ. ಅಕಾಲದಲ್ಲಿ ಸೇವಿಸಿದ ಆಹಾರದಿಂದ ಆರೋಗ್ಯದಲ್ಲಿ ಅಸ್ತವ್ಯಸ್ತ. ವಚನ ಭ್ರಷ್ಟರಾಗುವ ಸಾಧ್ಯತೆ ಇದೆ. ಹೊಸ ಸಂಬಂಧದ ಕಡೆ ನಿಮ್ಮ ಚಿತ್ತವು ಇರಲಿದೆ. ನಿರಂತರ ಕೆಲಸವನ್ನು ಮಾಡುವುದು ಇಷ್ಟವಾಗಲಿದೆ. ಸಂಗಾತಿಯ ಭಾವನೆಗೆ ಬೆಲೆ ಕೊಟ್ಟು ಸಂತೋಷಪಡಿಸುವಿರಿ. ವೈವಾಹಿಕ ಸಂಬಂಧವನ್ನು ಸರಿಯಾಗಿ ಇಟ್ಟುಕೊಳ್ಳಿ. ಗೃಹನಿರ್ಮಾಣವು ಧನಾಭಾವದಿಂದ ಮುಂದೆ ಹೋಗುವುದು. ಹಳೆಯ ಘಟನೆಗಳು ನಿಮ್ಮನ್ನು ಕಾಡಬಹುದು. ಆತಂಕದಿಂದ ನಿಮಗೆ ಮುಕ್ತಿ ಸಿಗಲಿದೆ. ಸಂಗಾತಿಯ ಮಾತಿಗೆ ಸಕಾರಾತ್ಮಕವಾಗಿರಿ.
ಅನಿರೀಕ್ಷಿತ ಮಾತುಗಳನ್ನು ಕೇಳಬೇಕಾದ ಸ್ಥಿತಿಯು ಬರಬಹುದು. ಸಣ್ಣ ಆರೋಗ್ಯದ ತೊಂದರೆಯೂ ನಿಮ್ಮ ಮನಸ್ಸಿಗೆ ಕಿರಿಕಿರಿಯನ್ನು ಉಂಟುಮಾಡುವುದು. ಕಾರ್ಯದಲ್ಲಿ ವೇಗವು ಕುಂಠಿತವಾಗುವುದು. ಸರ್ಕಾರದಿಂದ ನಿಮಗೆ ಸಹಾಯ ಸಿಗದೇ ಹೋಗಬಹುದು. ನಿಮ್ಮ ಕೆಲಸವು ಸಂದೇಹಕ್ಕೆ ಆಸ್ಪದ ಕೊಡುವುದು ಬೇಡ. ಯಶಸ್ಸನ್ನು ಪಡೆಯುವ ಹಂಬಲವಿರಲಿದೆ. ನೀವು ನೋಡಿದ್ದು ಮಾತ್ರವೇ ಸತ್ಯ ಎಂದು ತಿಳಿದುಕೊಳ್ಳುವುದು ಬೇಡ. ಇಂದು ಯಾರಿಗೂ ನಿಮ್ಮ ಅವಶ್ಯಕತೆ ಇಲ್ಲದೇ ಹೋಗಬಹುದು. ಸ್ನೇಹಿತರಿಗೆ ಸಾಲವಾಗಿ ಹಣವನ್ನು ಪುನಃ ಬರುವ ನಿರೀಕ್ಷೆ ಇಲ್ಲದೇ ಕೊಡುವಿರಿ. ಸಾಮಾಜಿಕ ತಾಣದಿಂದ ಪ್ರೇಮವು ಉಂಟಾಗಬಹುದು.
ಉದ್ಯಮದಿಂದ ಉತ್ತಮ ಆದಾಯ ಸಿಗಬಹುದು. ಯಾರ ಬಳಿಯೂ ಸಹಾಯ ಹಸ್ತವನ್ನು ಚಾಚದೇ ಸ್ವಂತ ಬಲದ ಮೇಲೆ ಬರುವ ಆಸೆ ಇರಲಿದೆ. ನಿಮ್ಮ ನಿಷ್ಕಾಳಜಿಯಿಂದ ಅನಾಯಾಸವಾಗಿ ಬರುವ ಆದಾಯವು ಸಿಗದೇ ಹೋಗುವುದು. ಸಂಗಾತಿಯಿಂದ ಅವಮಾನವಾಗುವುದು. ಆರ್ಥಿಕಸ್ಥಿತಿಯು ನಿಮಗೆ ಖುಷಿಯನ್ನು ಕೊಟ್ಟರೂ ನೆಮ್ಮದಿ ಮಾತ್ರ ಇರದು. ದ್ವೇಷವನ್ನು ತೀರಿಸಿಕೊಳ್ಳಲು ಸಮಯವನ್ನು ಕಾಯುವಿರಿ. ಚಂಚಲ ಸ್ವಭಾವವು ತಾನಾಗಿಯೇ ಕಡಿಮೆಯಾಗಿದ್ದು ಅಚ್ಚರಿ ಆಗಬಹುದು. ವೃತ್ತಿಯಲ್ಲಿ ಬಂದ ಮಾತಿನಿಂದ ನೀವು ಉದ್ವೇಗಗೊಳ್ಳುವ ಅವಶ್ಯಕತೆ ಇರುವುದಿಲ್ಲ. ಕೆಲವರ ವಿಚಾರದಲ್ಲಿ ನಿಮ್ಮ ದೃಷ್ಟಿಯನ್ನು ಬದಲಿಸಿಕೊಳ್ಳುವುದೇ ಯೋಗ್ಯವಾದುದು.
ಒಳ್ಳೆಯ ವ್ಯವಸ್ಥೆಯನ್ನು ಇಟ್ಟುಕೊಂಡು ಸರಿಯಾದ ಸೇವೆ ಕೊಡಲು ಕಷ್ಟವಾಗಬಹುದು. ಬಂಧುಗಳ ವಿಚಾರದಲ್ಲಿ ತೃಪ್ತಿ ಇರದು. ಉದ್ಯೋಗದಲ್ಲಿ ಭಡ್ತಿಗಾಗಿ ಕಾಯುತ್ತಿದ್ದು ಇಂದು ಸಿಗಬಹುದು. ಸ್ನೇಹಿರಿಂದ ನಿಮಗೆ ಬಹುಮಾನ ಸಿಗಬಹುದು. ದೂರದ ಊರಿಗೆ ಒಬ್ಬರೇ ವಾಹನ ಚಾಲಾಯಿಸುವಿರಿ. ವ್ಯಾಪರದಲ್ಲಿ ಮಧ್ಯವರ್ತಿಗಳಿಂದ ನಿಮ್ಮ ವ್ಯಾಪಾರವು ಕುಂಠಿತವಾಗುವುದು. ನೀವು ಮಾಡುವ ಸಣ್ಣ ಕೆಲಸಕ್ಕೂ ಪ್ರಶಂಸೆಯನ್ನು ಅಪೇಕ್ಷಿಸುವಿರಿ. ಅನ್ಯ ಕರೆಗಳಿಂದ ಮೋಸದ ಜಾಲಕ್ಕೆ ಸಿಕ್ಕಬಹುದಾದ ಸಾಧ್ಯತೆ ಇದೆ. ಆಭರಣ ಖರೀದಿಯಿಂದ ಮುಂದಕ್ಕೆ ಬಳಕೆಯಾಗಬಹುದು. ಉತ್ತಮ ಆಹಾರವನ್ನು ಪಡೆಯಲು ಯತ್ನಿಸಿ. ಸ್ನೇಹಿತರ ಸಹಕಾರದಿಂದ ಸ್ಥಿರಾಸ್ತಿಯನ್ನು ಖರೀದಿಸುವಿರಿ.
ಚಾಂಚಲ್ಯದ ಮನಸ್ಸಿನಿಂದ ಕೆಲವು ನಿರ್ಧಾರಗಳನ್ನು ಗಟ್ಟಿಯಾಗಿಸಲು ಕಷ್ಟವಾದೀತು. ನಿಮ್ಮ ಪುಟ್ಟ ಪ್ರಪಂಚದಿಂದ ಹೊರಬರಲು ತಯಾರಾಗುವಿರಿ. ಬಂಧುಗಳ ನಕಾರಾತ್ಮಕ ಮಾತುಗಳಿಂದ ನಿಮಗೆ ಬೇಸರವಾದೀತು. ಆಡಿದ ಮಾತಿಗೆ ಕ್ಷಮೆ ಕೇಳುವಿರಿ. ನಿಮ್ಮ ಸುರಕ್ಷತೆಯಲ್ಲಿ ನೀವಿರುವುದು ಉತ್ತಮ. ಸಂಗಾತಿಯ ಬಗ್ಗೆ ಧನಾತ್ಮಕ ಅಂಶಗಳು ಕೇಳಿಬರಬಹುದು. ಬೇರೆ ವಿದೇಶದ ಸಂಪರ್ಕದಿಂದ ನಿಮಗೆ ಅನನುಕೂಲವಾಗಲಿದೆ. ನಿಮ್ಮ ಗೌಪ್ಯ ವಿಚಾರವನ್ನು ಮುಚ್ಚಿಡಲು ಪ್ರಯತ್ನಿಸುವಿರಿ. ನಿಮ್ಮ ನಿಲುವು ಕೆಲವರಿಗೆ ಇಷ್ಟವಾಗುವುದು. ಅತಿಥಿಗಳ ಆಗಮನವಾಗಲಿದೆ. ನಿರುದ್ಯೋಗದ ಸ್ಥಿತಿಯು ದಾಯಾದಿಗಳಿಗೆ ಸಂತಸವಗುವುದು. ಕಛೇರಿಯ ವಾಸ್ತವವನ್ನು ಅರ್ಥಮಾಡಿಕೊಂಡು ವ್ಯವಹರಿಸಿ.
ಸಂದರ್ಭೋಚಿತ ಮಾತುಗಳಿಂದ ಗೆಲುವುದು ಸಿಗಬಹುದು. ನಂಬಿಕೆ ದ್ರೋಹಹವು ನಿಮಗಾಗಲಿದೆ. ಇಷ್ಟಪಟ್ಟವರನ್ನು ದೂರ ಮಾಡಿಕೊಳ್ಳುವಿರಿ. ಅನ್ಯರ ವಿಚಾರದಲ್ಲಿ ನಿಮಗೆ ಆಸಕ್ತಿಯು ಕಡಿಮೆ ಆಗುವುದು. ಸರ್ಕಾರದ ಕೆಲಸಕ್ಕಾಗಿ ಅಧಿಕ ಓಡಾಟವಾಗುವುದು. ಆರ್ಥಿಕ ನೆರವನ್ನು ಯಾರಿಂದಲಾದರೂ ನೀವು ಬಯಸುವಿರಿ. ಸಮಾಧನ ಚಿತ್ತದಿಂದ ಇರುವಿರಿ. ವ್ಯವಹಾರದ ವಿಷಯದಲ್ಲಿ ನಿಮಗೆ ಯಾವುದೇ ಔದಾರ್ಯ ಬೇಡ. ನಿಮ್ಮ ಸ್ವಭಾವದಿಂದ ದಾಂಪತ್ಯದಲ್ಲಿ ಕೆಲವು ಮಾತುಗಳು ಕೇಳಿಬರಬಹುದು. ಅನ್ಯರಿಗೆ ಅಸಾಧ್ಯವಾದ ಕೆಲಸವು ನಿಮ್ಮಿಂದ ಸಾಧ್ಯವಾಗಬಹುದು. ಜನಮನ್ನಣೆಯ ಆಸೆಯು ಒಂದಿಲ್ಲೊಂದು ಕೆಲಸವನ್ನು ಮಾಡಿಸುವುದು.
ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಧನು, ಮಹಾನಕ್ಷತ್ರ : ಪೂರ್ವಾಷಾಢ, ವಾರ : ಸೋಮ, ಪಕ್ಷ : ಕೃಷ್ಣ, ತಿಥಿ : ನವಮೀ, ನಿತ್ಯನಕ್ಷತ್ರ : ಸ್ವಾತಿ ಯೋಗ : ಧೃತಿ, ಕರಣ : ಗರಜ, ಸೂರ್ಯೋದಯ – 06 – 52 am, ಸೂರ್ಯಾಸ್ತ – 06 – 11 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 08-18 – 09:43, ಯಮಗಂಡ ಕಾಲ 11:08 – 12:33, ಗುಳಿಕ ಕಾಲ 13:58 – 15:23
-ಲೋಹಿತ ಹೆಬ್ಬಾರ್ – 8762924271 (what’s app only)