
ಅಸಂಗತ ಸಮಾಚಾರವನ್ನು ಒಪ್ಪಬೇಕಿಲ್ಲ. ನಿಮ್ಮನ್ನು ಲಕ್ಷಿಸಲು ಸಾಧ್ಯವಾಗದ ದೊಡ್ಡ ವ್ಯಕ್ತಿತ್ವ ನಿಮ್ಮದಾಗುವುದು. ಸ್ವಕೀಯರೇ ನಿಮ್ಮ ನಿಜವಾದ ವೇಗವನ್ನು ಕುಂಠಿತಗೊಳಿಸುವರು. ಕಣ್ಣಿಗೆ ಪ್ರತ್ಯಕ್ಷ ಕಂಡರೂ ಪ್ರಾಮಾಣಿಸಿ ನೋಡು ಎನ್ನುವಂತೆ ಪರಿಶೀಲಿಸಿ ಕಾರ್ಯ ಪ್ರವೃತ್ತರಾಗಿ. ಅತಿಥಿಗಳ ಬಗ್ಗೆ ತೋರುವ ಗೌರವ ಇರಲಿ. ನಿಮ್ಮ ಪ್ರಯತ್ನವನ್ನು ಇತರರಿಗೂ ತಿಳಿಸುವ ಸಮಯ ಇಂದು. ತಪ್ಪು ಮಾಹಿತಿ ನೀಡಿ ನಿಮ್ಮ ದಾರಿ ತಪ್ಪಿಸಬಹುದು. ನಿಮ್ಮ ಮೇಲೆ ಅರೋಪವು ಬರುವ ಸಾಧ್ಯತೆ ಇದ್ದೆ. ಕೆಲವು ಸಮಸ್ಯೆಯು ನಿಮ್ಮ ಮಾನಸಿಕತೆಯಿಂದಾಗಿಯೇ ಇರುವುದು.
ಸ್ನೇಹಿತರ ಬೆಂಬಲವನ್ನು ನೀವು ಪೂರ್ಣವಾಗಿ ಒಪ್ಪಲಾರಿರಿ. ನಿಮ್ಮ ಕೆಲಸಕ್ಕೆ ಪ್ರಶಂಸೆ ಸಿಗುವುದು. ತಾಯಿ ಪಡುವ ಕಷ್ಟಕ್ಕೆ ಪೂರ್ಣವಿರಾಮ ಹಾಕುವಿರಿ. ನಿಮ್ಮ ಏಳಿಗೆ ಕಂಡು ಅಸೂಯೆ ಪಡುವವರ ಸಂಖ್ಯೆ ಹೆಚ್ಚಾಗಲಿದೆ. ಅದಕ್ಕೆ ತಲೆ ಕೆಡಿಸಿಕೊಳ್ಳದೆ ನಿಮ್ಮ ಕಾರ್ಯದಲ್ಲಿ ಪ್ರವೃತ್ತರಾಗಿ ಕಾರ್ಯದಲ್ಲಿ ನಿಷ್ಠೆಯನ್ನು ತೋರಿಸಿ. ಪ್ರೀತಿಯ ಸುಖದಿಂದ ವಂಚಿತರಾಗುವಿರಿ. ಹಿತಶತ್ರುಗಳ ನಡುವೆ ಹಿತಚಿಂತಕರನ್ನು ಗುರುತಿಸುವುದು ಕಷ್ಟ. ವಿದೇಶಪ್ರಯಾಣದ ಗುಂಗಿನಿಂದ ಹೊರಬನ್ನಿ. ಕುಟುಂಬದ ಪ್ರೋತ್ಸಾಹವು ನಿಮಗೆ ಸಿಗಬಹುದು. ಸಂಗಾತಿಯ ಜೊತೆ ಸಮಯವನ್ನು ಕಳೆಯಬೇಕು ಎನಿಸಬಹುದು.
ನಿಮ್ಮ ಒಳ್ಳೆಯತನವನ್ನು ತಮ್ಮ ವೈಯಕ್ತಿಕ ಲಾಭಕ್ಕಾಗಿ ಬಳಕೆ ಆದೀತು. ಜಾಗರೂಕರಾಗಿ ಜನರಿಂದ ದೂರವಿರುವುದು ಒಳ್ಳೆಯದು. ನಿಮ್ಮದೇ ಆದ ಕುಟುಂಬದಲ್ಲಿ ಹಲವರು ಕಿರಿಕಿರಿ ಮಾಡಬಹುದು. ಹಿಂದೆ ಮುಂದೆ ಯೋಚಿಸದೆ ಏಕಾಏಕಿಯಾಗಿ ಯಾರಿಗೂ ಮಾತು ಕೊಡುವುದು ಬೇಡ. ಪ್ರತ್ಯಕ್ಷವಾಗಿ ಕಾಣುವ ವ್ಯಕ್ತಿಗಳಿಗೆ ನಿಮ್ಮ ಬಗೆಗಿನ ದೃಷ್ಟಿಕೋನವೇ ಬದಲಾಗುವುದು. ಬಂಧುಗಳ ಕಿರಿಕಿರಿ ಇಷ್ಟವಾಗದು. ಆರ್ಥಿಕತೆಯ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಕೈಯಲ್ಲಿ ಹಣವಿದ್ದಷ್ಟು ಖರ್ಚು ತಾನಾಗಿಯೇ ಹುಡುಕಿಕೊಂಡು ಬರಬಹುದು. ಕೃಷಿ ಚಟುವಟಿಕೆಗಳ ಬಗ್ಗೆ ನಿಮಗೆ ಅಸಕ್ತಿಯು ಹೆಚ್ಚಿರುವುದು. ಅನನುಕೂಲತೆಯನ್ನು ಬಳಸಿಕೊಂಡು ಸಕಾರಾತ್ಮಕವಾಗಿ ಸಾಧಿಸುವಿರಿ.
ಇಂದು ನಿಮ್ಮ ಜೇಬು ತುಂಬಿದಂತೆ ಕಂಡರೂ ಒಳಗೆ ರಂಧ್ರವಿರುವುದು ಗೊತ್ತಾಗದೇ ಹೋಗುವುದು. ಅತಿಯಾದ ಮುತುವರ್ಜಿಯಿಂದ ದುಃಖ ಬರುವ ಸಾಧ್ಯತೆ ಇದೆ. ಆಹಾರ ವಿವಾಹರ ಸರಿಯಾಗಿ ಆಗದ ಕಾರಣ ಮನಸ್ಸಿಗೆ ಮಂಕು ಕವಿದಂತೆ ಇರುವಿರಿ. ಜೀವನವು ಅಸಾರವಾದುದ್ದು ಎಂಬ ಭಾವವು ಬರಬಹುದು. ಜೀವನದಲ್ಲಿ ಚುರುಕುತನ ಕಂಡುಕೊಳ್ಳಲು ದಾರಿಯನ್ನು ಕಂಡುಕೊಳ್ಳಿ. ಒತ್ತಡವನ್ನು ಹೇರಿ ಕೆಲಸವನ್ನು ಮಾಡಿಸಿಕೊಳ್ಳುವಿರಿ. ನಿಮ್ಮ ವಿಚಾರದಲ್ಲಿ ಅನ್ಯರ ಹಸ್ತಕ್ಷೇಪ, ಮೇಲಧಿಕಾರಿಗಳಿಗೆ ಗುಟ್ಟಾಗಿ ನಿಮ್ಮ ಬಗ್ಗೆ ಚಾಡಿ ಮಾತುಗಳು ಒಂದಾದಮೇಲೊಂದು ಬರಬಹುದು.
ವಿಳಂಬವಾದರೂ ತೀರ್ಮಾನ ಸರಿಯಾಗಿ ಬರಲಿ. ಮಕ್ಕಳ ವಿವಾಹದ ಚಿಂತೆಯು ಕಾಡಬಹುದು. ಅಧಿಕಾರ ಮತ್ತು ವರ್ಚಸ್ಸು ಹೆಚ್ಚಿಸಿಕೊಳ್ಳುವ ಅವಕಾಶ ಬರುವುದು. ಸಕಾರಾತ್ಮಕ ಯೋಚನೆಯಿಂದ ಮುಂದಡಿ ಇಡಬೇಕಾದೀತು. ನಿಮ್ಮ ಬುದ್ಧಿಶಕ್ತಿಗೆ ತಕ್ಕಂತೆ ಕೆಲಸದಲ್ಲಿ ಜಯವನ್ನು ಸಾಧಿಸುವಿರಿ. ಧೈರ್ಯದಿಂದ ಮುನ್ನಡೆಯುವ ಇಚ್ಛಾಶಕ್ತಿಯನ್ನು ರೂಢಿಸಿಕೊಳ್ಳಿ. ಹಣದ ಹೊಂದಾಣಿಕೆಗೆ ಭೂಮಾರಾಟ ಮಾಡಬೇಕಾಗುವುದು. ವಂಚನೆಯ ಕರೆಗಳಿಂದ ಆದಷ್ಟು ಎಚ್ಚರವಾಗಿರಿ. ನಿಮ್ಮ ಸುತ್ತಮುತ್ತಲಿನವರಿಂದ ತೊಂದರೆಯಾಗಬಹುದು. ಇಂದು ನೀವು ಒತ್ತಡದ ಕೆಲಸದಿಂದ ವಿರಾಮ ಪಡೆದುಕೊಳ್ಳಲು ಬಯಸುವಿರಿ.
ಉದ್ಯೋಗದ ಬದಲಾವಣೆಯ ವಿಚಾರದಲ್ಲಿ ನೀವು ದ್ವಂದ್ವವಿರಲಿದೆ. ಇಷ್ಟದೇವರ ಕ್ಷೇತ್ರಕ್ಕೆ ತೆರಳುವಿರಿ. ವರ ಇಂದಿನ ಕೆಲಸಗಳು ಬೇಗ ಮುಕ್ತಾಯವಾಗಿ ನಿಶ್ಚಿಂತೆಯಿಂದ ಇರುವಿರಿ. ಮರೆವು ನಿಮಗೆ ವರವಾದಂತೆ ಅನ್ನಿಸುವುದು. ವಿದ್ಯಾಭ್ಯಾಸಕ್ಕೆ ಮನೆಯನ್ನು ಬಿಟ್ಟು ದೂರವಿರಲು ನಿರ್ಧಾರ ಮಾಡುವಿರಿ. ತಾಯಿಯ ಆಸೆಯನ್ನು ಈಡೇರಿಸಲಾಗದು. ನಿಮ್ಮ ಇಂದಿನ ಆರ್ಥಿಕಲಾಭವು ನಿಮಗೆ ಹೆಚ್ಚು ಸುಖವನ್ನು ಕೊಡಬಹುದು. ನೀವು ತಲುಪುವ ಸ್ಥಾನಕ್ಕೆ ವಿಳಂಬವಾಗಿ ಹೋಗುವಿರಿ. ಸಂಗಾತಿಯು ನಿಮಗೆ ಬೇಸರವಾಗುವಂತೆ ಮಾತನಾಡಬಹುದು.
ಮಾಡಲು ಹೊರಟ ಕೆಲಸದಲ್ಲಿ ಸಂಪೂರ್ಣ ಯಶಸ್ಸು ನಿಮ್ಮದಾಗುವುದು. ನಿಮ್ಮ ತಾಳ್ಮೆಯೇ ಗುರಿಯನ್ನು ತಲುಪಲು ಸಹಕಾರಿಯಾಗಿರುವುದು. ವ್ಯವಹಾರದಲ್ಲಿ ಇರುವಾಗ ಬೇರೆ ಯಾವುದನ್ನೂ ಪರಿಗಣಿಸಲಾರಿರಿ. ಒತ್ತಡ ಕಡಿಮೆಯಾಗಿ ಮನೆಯಲ್ಲಿ ನೆಮ್ಮದಿಯಿಂದ ಇರುವಿರಿ. ಮಕ್ಕಳ ವೃತ್ತಿಯಲ್ಲಿ ಹೆಚ್ಚಿನ ಏಳ್ಗೆಯನ್ನು ಕಂಡು ಸುಖಿಸುವಿರಿ. ಕುಟುಂಬವನ್ನು ಸಂತೋಷವಾಗಿಡಲು ಇಷ್ಟವಾಗುವುದು. ಬರಲಿರುವ ಹಣವನ್ನು ಸರಿಯಾಗಿ ವಿನಿಯೋಗಿಸಲಾಗದು. ಸ್ಥಿರಾಸ್ತಿಯಲ್ಲಿ ಲಾಭವನ್ನು ಪಡೆಯಲು ತಂತ್ರವನ್ನು ಬಳಸುವಿರಿ. ಮಕ್ಕಳ ವಿಚಾರದಲ್ಲಿ ನೀವು ಬಹಳ ಮೃದು ಸ್ವಭಾವವಿರುವುದು.
ಇಂದು ಮಡದಿ, ಮಕ್ಕಳಿಂದಲೇ ಟೀಕೆಯನ್ನು ಕೇಳಬೇಕಾದೀತು. ನಿಮ್ಮ ವ್ಯಾಪಾರ ವ್ಯವಹಾರದಲ್ಲಿ ಪಾರದರ್ಶಕತೆ ಮಾತ್ರ ಇರಲಿ. ಮಕ್ಕಳ ವಿವಾಹದ ಬಗ್ಗೆ ಚಿಂತಿಸಿ ಭಾವುಕರಾಗುವಿರಿ. ಕುಟುಂಬಕ್ಕಾಗಿ ಮಾಡಿದ ಸಾಲವನ್ನು ತೀರಿಸಲು ಮತ್ತೆಲ್ಲೋ ಸಾಲ ಮಾಡಬೇಕಾದೀತು. ಸ್ತ್ರೀಯರಿಗೆ ಉದ್ಯೋಗದಲ್ಲಿ ಹೆಚ್ಚಿನ ಆದ್ಯತೆ ಸಿಗಬಹುದು. ಇನ್ನೊಬ್ಬರ ನೋವಿಗಿ ಸ್ಪಂದಿಸುವ್ವಿರಿ. ದಾಂಪತ್ಯದಲ್ಲಿ ಸಾಮರಸ್ಯದ ಅಗತ್ಯವು ಬಹಳ ಇರಲಿದೆ. ನೀವು ಉದ್ಯೋಗವನ್ನು ಪಡೆಯಲು ಮಾಡಿದ ಪ್ರಯತ್ನಗಳು ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತವೆ. ನಿಮ್ಮ ದುರಭ್ಯಾಸವನ್ನು ಮಿತಿಯಲ್ಲಿ ಇರಿಸಿಕೊಳ್ಳಿ. ನಿಮ್ಮವರ ಬಗ್ಗೆ ಇರುವ ಕಲ್ಪನೆಯು ರೂಪವನ್ನು ಕಳೆದುಕೊಳ್ಳಬಹುದು.
ನಿಮ್ಮ ಕಣ್ಣು ಆಯಾಸವನ್ನು ಸ್ಪಷ್ಟವಾಗಿ ಹೇಳುವುದು. ಸಕಾರಾತ್ಮಕವಾಗಿ ಚಿಂತಿಸಿ ಕಾರ್ಯದಲ್ಲಿ ತೊಡಗಿಕೊಳ್ಳಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿಯನ್ನು ಕಂಡು ಸಂತಸವಾಗಬಹುದು. ಸ್ಥಿರಾಸ್ತಿಯನ್ನು ಖರೀದಿಸಲು ಉತ್ತಮ ಕಾಲವಲ್ಲ. ಗೃಹ ನಿರ್ಮಾಣದಂತಹ ಕಾರ್ಯಕ್ಕೆ ಕೈ ಹಾಕುವುದು ಬೇಡ. ವ್ಯವಹಾರದಲ್ಲಿ ನಿಮ್ಮ ಮಾತಿನ ಮೇಲೆ ಹಿಡಿತವಿರಲಿ. ಮಕ್ಕಳು ನಿಮ್ಮ ಮಾತನ್ನು ವಿರೋಧಿಸಬಹುದು. ಭಕ್ತಿಯಿಂದ ಮನಸ್ಸು ನಿರ್ಮಲವಾಗಿ ತೋರುವುದು. ಸ್ಪರ್ಧೆಗೆ ನಿಂತರೆ ಯಾರನ್ನೂ ಸೋಲಿಸಬಲ್ಲಿರಿ. ಅಂತರಂಗವನ್ನು ಆದಷ್ಟು ಗೌಪ್ಯವಾಗಿ ಇಡುವುದು ಮುಖ್ಯ. ನಿಮ್ಮ ಹಾರಿಕೆಯ ಮಾತುಗಳು ನಿಮ್ಮ ಬಗ್ಗೆ ನಂಬಿಕೆಯು ಇರದಂತೆ ಮಾಡುವುದು.
ನಿಮ್ಮ ಸಮಸ್ಯೆಗಳಿಗೆ ಹಲವರು ಹಲವು ರೀತಿಯ ಸಲಹೆಗಳನ್ನು ನೀಡಬಹುದು. ಸಲಹೆಯನ್ನು ಏಕಚಿತ್ತದಿಂದ ಸ್ವೀಕರಿಸಿ, ನಿಮ್ಮ ವಿವೇಕದಿಂದ ಬಳಸಿಕೊಳ್ಳಿ. ಅನ್ಯರಿಂದ ಹಣಕಾಸಿನ ವಿಷಯದಲ್ಲಿ ಮೋಸ ಹೋಗುವ ಸನ್ನಿವೇಶವು ಬರಬಹುದು. ನೋಡದೇ ಖರೀದಿಸಿದ ವಸ್ತುಗಳಿಂದ ನಷ್ಟವಾಗುವ ಸಾಧ್ಯತೆ ಇದೆ. ಎಲ್ಲವೂ ನಿಮ್ಮಿಂದ ಆದರೂ ಹೇಳಿಕೊಳ್ಳುವಾಗ ಗೌಣವಾಗಿರಲಿ. ದಾಂಪತ್ಯದಲ್ಲಿ ಸಲುಗೆಯು ಅತಿಯಾಗಲಿದೆ. ತಂದೆಯಿಂದ ಧನಾಗಮನವನ್ನು ನಿರೀಕ್ಷಿಸುವಿರಿ. ಇಂದಿನ ಬೇಸರವನ್ನು ಕಳೆಯಲು ಒಂಟಿಯಾಗಿ ದೂರ ತೆರಳುವಿರಿ.
ಇಂದು ಕೇಳದೇ ಯಾರಿಗೂ ಉಪದೇಶ ನೀಡಲು ಹೋಗಬೇಡಿ. ಇಂದು ನಿಮ್ಮಲ್ಲಿ ಆತ್ಮಸ್ಥೈರ್ಯವು ಇರಲಿದೆ. ಮಾನಸಿಕವಾಗಿ ಸದೃಢರಾಗುವಿರಿ. ನೀವು ಅಂದುಕೊಂಡ ರೀತಿಯಲ್ಲಿ ಸಹೋದರಿಯರಿಂದ ಸಹಕಾರ ದೊರೆಯುವುದಿಲ್ಲ. ನಿಮ್ಮ ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ತಾಯಿಯ ಕಡೆಯಿಂದ ನಿಮಗೆ ಆರ್ಥಿಕ ಸಹಾಯವು ಸಿಗಬಹುದು. ಕುಟುಂಬದಲ್ಲಿ ನಿಮ್ಮ ಬಗ್ಗೆ ಭಯವು ಇರಲಿದೆ. ಮಾತು ಎಷ್ಟೇ ಸಹೃದಯತೆಯಿಂದ ಇದ್ದರೂ ಕೇಳಿಸಿಕೊಳ್ಳುವ ಸಹೃದಯರು ಸಿಗುವುದಿಲ್ಲ. ಉದ್ವಿಗ್ನತೆಯು ಉಂಟಾದಾಗ ಏನನ್ನಾದರೂ ಮಾಡಿಕೊಳ್ಳುವಿರಿ.
ಇಂದು ಆಧ್ಯಾತ್ಮಿಕ ಚಿಂತನೆಗಳಿಂದ ಮನಸ್ಸಿಗೆ ಶಾಂತತೆಯನ್ನು ಪಡೆಯುವಿರಿ. ಮನೆ ಹಿರಿಯರ ಆರೋಗ್ಯದ ಕಡೆ ಗಮನ ನೀಡಿ. ನಿಮ್ಮ ಪರಿಶ್ರಮಕ್ಕೆ ತಕ್ಕಷ್ಟು ಹಣ ಬರದೆ ತೊಂದರೆ ಅನುಭವಿಸುವಿರಿ. ಮಂದಗತಿಯಲ್ಲಿ ಸಾಗುವ ಕೆಲಸಗಳಿಗೆ ವೇಗವನ್ನು ಕೊಡುವಿರಿ. ನಿಮ್ಮ ಕೆಲಸದಲ್ಲಿ ಆತ್ಮತೃಪ್ತಿಯಾಗುವಂತೆ ಮಾಡುವಿರಿ. ವಾಹನ ಚಲಾಯಿಸುವಾಗ ಉದ್ವೇಗ ಬೇಡ. ಏಕತಾನತೆಯ ಜೀವನವು ನಿಮಗೆ ಬೇಸರವನ್ನು ಕೊಟ್ಟಿದ್ದು, ಹೊಸತನ್ನು ನೀವು ಬಯಸುವಿರಿ. ಇಂದು ನೀವು ಹೊಸ ಹೂಡಿಕೆಗೆ ಮನಸ್ಸು ಮಾಡುವಿರಿ.
ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಮಕರ, ಮಹಾನಕ್ಷತ್ರ : ಪೂರ್ವಾಷಾಢ, ವಾರ : ಶುಕ್ರ, ಪಕ್ಷ : ಕೃಷ್ಣ, ತಿಥಿ : ತ್ರಯೋದಶೀ, ನಿತ್ಯನಕ್ಷತ್ರ : ಮೂಲಾ ಯೋಗ : ಧ್ರುವ, ಕರಣ : ವಣಿಜ, ಸೂರ್ಯೋದಯ – 06 – 53 am, ಸೂರ್ಯಾಸ್ತ – 06 – 14 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 11-09 – 12:34, ಯಮಗಂಡ ಕಾಲ 15:24 – 16:49, ಗುಳಿಕ ಕಾಲ 08:19 – 09:44
-ಲೋಹಿತ ಹೆಬ್ಬಾರ್ – 8762924271 (what’s app only)