Horoscope Today 22 January : ಇಂದು ಈ ರಾಶಿಯವರು ಮಾತನ್ನು ಉಳಿಸಿಕೊಳ್ಳುವರು

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಶುಕ್ಲ ಪಕ್ಷದ ಚತುರ್ಥೀ ತಿಥಿ ಗುರುವಾರ ತಪ್ಪಿನ ಅರಿವು, ಕಾರ್ಯದಲ್ಲಿ ಅಲ್ಪ ವಿಶ್ರಾಂತಿ, ಮನಸ್ಸು ಭಾರ, ಜಾಣತನ, ಗೊಂದಲ, ಪಕ್ಷಪಾತ ಇವೆಲ್ಲ ಇಂದಿನ ವಿಶೇಷ.

Horoscope Today 22 January : ಇಂದು ಈ ರಾಶಿಯವರು ಮಾತನ್ನು ಉಳಿಸಿಕೊಳ್ಳುವರು
ದಿನ ಭವಿಷ್ಯ
Edited By:

Updated on: Jan 22, 2026 | 12:52 AM

ಮೇಷ ರಾಶಿ:

ಬೆಂಕಿಯ ಸಹವಾಸ ಮಾಡಿಯೂ ಅವಘಡ ಆಗುವುದಿಲ್ಲ ಎನ್ನಲಾಗದು. ಹೂಡಿಕೆಯನ್ನು ಇತರರ ಒತ್ತಾಯದ ಮೇಲೆ ಮಾಡಬೇಕಾದೀತು. ಮನೆಯ ಖರೀದಿಯ ಬಗ್ಗೆ ಆಲೋಚನೆಗಳು ಬರಲಿವೆ. ಇಂದು ವಿದ್ಯಾರ್ಥಿಗಳಿಗೆ ಉತ್ತಮ ದಿನವಾಗಿದ್ದು ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ನಿರ್ಧಾರವನ್ನು ಮಾಡಲು ಸರಿಯಾದ ವ್ಯಕ್ತಿಗಳು ಸಿಗುವರು. ನಿಮ್ಮಿಂದ ಉಪಕಾರವನ್ನು ಪಡೆದವರೇ ನಿಮ್ಮ ಶತ್ರಗಳಾದಾರು. ಸಂಗಾತಿಯು ನಿಮ್ಮನ್ನು ನಿರ್ಲಕ್ಷಿಸಬಹುದು. ನಿಮ್ಮ ಬಗ್ಗೆ ನಿಮಗೇ ನಂಬಿಕೆ ಕಡಿಮೆ ಆಗಬಹುದು. ಮೃದುವಾದ ಮಾತು ನಿಮ್ಮ ಕೃತಕತೆಯಂತೆ ತೋರಿಸಬಹುದು. ನೀವೊಬ್ಬ ಸುಳ್ಳುಗಾರರೆನ್ನುವಂತೆ ಇತರರು ಬಿಂಬಿಸುವರು.

ವೃಷಭ ರಾಶಿ:

ಇಂದು ನಿಮ್ಮ ಕೆಲಸವು ನೀವಂದುಕೊಂಡಷ್ಟು ಸುಲಭವಾಗಿ ಇರದು. ಸಾಮಾನ್ಯರಂತೆ ಕಾಣುವ ನಿಮಗೆ ಯಾವುದೇ ಆಡಂಬ ಇಷ್ಡವಾಗದು. ಯಾರೊಂದಿಗೂ ಮುಕ್ತವಾಗಿ ಮಾತನಾಡಲು ಅವಕಾಶ ಸಿಗದು. ಕುಟುಂಬದ ಕೆಲವು ಸನ್ನಿವೇಶಗಳು ನಿಮಗೆ ಇಷ್ಟವಾಗದು. ನಕಾರಾತ್ಮಕ ಸೂಚನೆ ನಿಮಗೆ ಸಿಗಲಿದ್ದು, ಅದನ್ನು ನಿರ್ಲಕ್ಷ್ಯ ಮಾಡುವಿರಿ. ಹೃದಯ ಕಲ್ಲಾದಷ್ಟೂ ವ್ಯಕ್ಯಿತ್ವಗಳು ದೂರಾಗುವರು. ನಿಮ್ಮ ಮನೋಬಲದ ಪ್ರದರ್ಶನವನ್ನು ತೋರಿಸಬೇಕಾದೀತು. ಸುಮ್ಮನೇ ವಾಗ್ವಾದವನ್ನು ಮಾಡಲು ಹೋಗಿ ಸಮಯವನ್ನು ಹಾಗೂ ಇತರರ ಸಮಯವನ್ನೂ ಹಾಳು ಮಾಡುವಿರಿ.

ಮಿಥುನ ರಾಶಿ:

ನೀವು ಇಂದು ಯಾವುದನ್ನೂ ತಕ್ಷಣ ಒಪ್ಪಿಕೊಳ್ಳುವುದಿಲ್ಲ. ಎಲ್ಲ ಕಾರ್ಯಗಳನ್ನು ಸಲೀಸಾಗಿ ಮಾಡುವ ಅನುಭವ ನಿಮ್ಮದಾಗಲಿದೆ. ಯಶಸ್ಸಿನ ಗುಟ್ಟನ್ನು ನೀವು ಯಾರಿಗೂ ಹೇಳಲಾರಿರಿ. ಮನೆಯಲ್ಲಿ ಹರ್ಷದ ವಾತಾವರಣ ಇದ್ದು ಬಂಧುಗಳು ನಿಮ್ಮ ಜೊತೆಗಿರುವರು. ಕರ್ತವ್ಯವನ್ನು ನಿಷ್ಠೆಯಿಂದ ಮಾಡುವಿರಿ. ಗೆಳೆಯನನ್ನು ಆಪ್ತನನ್ನಾಗಿ ಮಾಡಿಕೊಳ್ಳುವಿರಿ. ಅಪೇಕ್ಷಿಸದಿದ್ದರೂ ನಿಮ್ಮ ಪರಿಶ್ರಮಕ್ಕೆ ಯೋಗ್ಯವಾದ ಗೌರವವು ಸಿಗುವುದು. ಕೆಟ್ಟ ಕೆಲಸಕ್ಕೆ ಯಾರಾದರೂ ಪ್ರೇರಣೆ ಕೊಡಬಹುದು. ಯಾವುದನ್ನೇ ಆದರೂ ಉದ್ವೇಗದಿಂದ ನಿರಾಕರಿಸುವುದು ಬೇಡ.

ಕರ್ಕಾಟಕ ರಾಶಿ:

ಕೊಡಬೇಕಾದವರ ಹಣವನ್ನು ಹಾಗೆಯೇ ಇಟ್ಟುಕೊಳ್ಳುವಿರಿ. ನಿಮ್ಮ ತಪ್ಪನ್ನು ಒಪ್ಪಿಕೊಳ್ಳಲು ನಿಮಗೆ ಸಂಕೋಚವಾಗಬಹುದು. ನಿರಂತರ ಕೆಲಸದಿಂದ ಸಮಾಧಾನವು ಬೇಕಾಗುವುದು. ನಿಮ್ಮ ಕೆಲಸವನ್ನು ಪ್ರಸ್ತುತಿ ಮಾಡುವಲ್ಲಿ ಸೋಲುವ ಸಾಧ್ಯತೆ ಇದೆ. ಉದ್ವೇಗಕ್ಕೆ ಒಳಗಾಗಿ ಏನನ್ನಾದರೂ ಎಡವಟ್ಟು ಮಾಡಿಕೊಳ್ಳುವಿರಿ. ನಿಮ್ಮ ಸೌಂದರ್ಯಕ್ಕೆ ಆಕರ್ಷಿತರಾಗಿ ಮನಸೋಲಬಹುದು. ಕೃತಜ್ಞತೆಯಿಂದ ನಿಮ್ಮವರನ್ನು ಸ್ಮರಿಸುವಿರಿ, ಗೌರವಿಸುವಿರಿ. ವರ್ತನೆಯಲ್ಲಿ ಆಗುವ ಬದಲಾವಣೆಯನ್ನು ಯಾರೂ ಊಹಿಸಲಾರರು. ಎಲ್ಲದರ ಮೇಲೂ ನಂಬಿಕೆಯನ್ನು ಕಳೆದುಕೊಳ್ಳುವಿರಿ.

ಸಿಂಹ ರಾಶಿ:

ನಿಮ್ಮ ಗಮನಾಗಮನವನ್ನು ಯಾರಾದರೂ ತಿಳಿದುಕೊಳ್ಳುತ್ತಿರಬಹುದು. ಕುಟುಂಬದ ಚಿಂತೆಯಿಂದ ಆರೋಗ್ಯವನ್ನು ಹಾಳುಮಾಡಿಕೊಳ್ಳುವಿರಿ. ಅನವಶ್ಯಕವಾಗಿ ಹಣವನ್ನು ವ್ಯರ್ಥ ಮಾಡಿಕೊಳ್ಳುವಿರಿ. ಎಲ್ಲ ಒಳ್ಳೆಯದಕ್ಕೂ ನೀವೇ ತಂದೆ ಎನ್ನುವ ಭಾವ ನಿಮ್ಮಲ್ಲಿ ಮೂಡಬಹುದು. ಅನಿಶ್ಚಿತತೆಯು ನಿಮ್ಮ ಮೇಲೆ ದಟ್ಟವಾದ ಪ್ರಭಾವವನ್ನು ಬೀರಬಹುದು. ಕುಟುಂಬದಲ್ಲಿ ಪರಸ್ಪರ ಪ್ರೀತಿಯು ತೋರುವುದು. ಪ್ರಯಾಣದಿಂದ ಪ್ರಯಾಸವಾಗಲಿದೆ. ಹೊಸ ವ್ಯವಹಾರದ ಬಗ್ಗೆ ನಿಮಗೆ ಆಪ್ತರ ಸಲಹೆಯು ಸಿಗಲಿದೆ. ಮಕ್ಕಳ ಸ್ವಭಾವವು ಇಷ್ಟವಾಗದೇ ಹೋಗುವುದು.

ಕನ್ಯಾ ರಾಶಿ:

ಹೊಸ ಉದ್ಯೋಗವನ್ನು ಆರಂಭಿಸಲು ತೀವ್ರತೆಯು ಇರಲಿದೆ. ಮಕ್ಕಳನ್ನು ದೂರ ಮಾಡಿಕೊಂಡು ಬೇಸರಗೊಳ್ಳುವಿರಿ. ನಿಮ್ಮ ಮಕ್ಕಳ ಬಾಂಧವ್ಯದಿಂದೆ ನಿಮಗೆ ಅಗಲಿಕೆ ಕಷ್ಟವಾದೀತು. ಸಹೋದ್ಯೋಗಿಗಳನ್ನು ಅನೌಪಚಾರಿಕವಾಗಿ ಭೇಟಿಯಾಗುವಿರಿ. ಸಾಲವನ್ನು ಪಡೆಯದೇ ಇದ್ದರೂ ಕೆಲವು ಋಣದಿಂದ ಮುಕ್ತರಾಗಲು ಕೆಲಸ ಮಾಡಬೇಕು. ಸ್ಥಾನಮಾನವನ್ನು ಕಳೆದುಕೊಳ್ಳುವ ಸನ್ನಿವೇಶವು ಬರಬಹುದು. ಹೊಸ ಮನೆಗೆ ಸ್ಥಳಾಂತರ ಮಾಡಿಕೊಳ್ಳುವಿರಿ. ತಾಯಿಯ ಪ್ರೀತಿಯನ್ನು ಅನುಭವಿಸುವಿರಿ. ಸಂಪತ್ತಿನ ಬಗ್ಗೆ ನಿಮಗೆ ಆಸಕ್ತಿಯು ಇರದು. ಸಂಗಾತಿಯು ನಿಮ್ಮಿಂದ ಏನನ್ನೋ ಮುಚ್ಚಿಡುತ್ತಾರೆ ಎಂದು ಅನ್ನಿಸಬಹುದು.

ತುಲಾ ರಾಶಿ:

ಇಂದು ವ್ಯಾಪಾರದ ವಿಸ್ತರಣೆಯನ್ನು ಮಾಡಲು ನಿರ್ಧಾರ ಮಾಡುವಿರಾದರೂ ಕೆಲವರ ಅಭಿಪ್ರಾಯ ಹಾಗೂ ಸಲಹೆಯನ್ನು ಮುಕ್ತವಾಗಿ ಪಡೆಯಿರಿ. ದ್ವಿಚಕ್ರ ವಾಹನವನ್ನು ಚಲಾಯಿಸುವಾಗ ಎಚ್ಚರಿಕೆ ಇರಲಿ. ಹಳೆಯ ಘಟನೆಯನ್ನು ನೆನಪಿಸಿಕೊಂಡು ಸಂಕಟಪಡುವುದು ಬೇಡ. ಸಂಗಾತಿಯ ಮನವೊಲಿಸುವುದು ನಿಮ್ಮ ಚಾಣಾಕ್ಷತೆಗೆ ಬಿಟ್ಟಿದ್ದು. ನಿಮ್ಮ ಲಾಭದ ಉದ್ಯಮದ ಮೇಲೆ ಕೆಟ್ಟ ದೃಷ್ಟಿ ಬೀಳಬಹುದು. ಸಮಾಜಮುಖೀ ಕಾರ್ಯಗಳನ್ನು ನಿರಪೇಕ್ಷೆಯಿಂದ ಮಾಡುವಿರಿ. ಕಾನೂನು ವ್ಯವಹಾರದಲ್ಲಿ ಗಲಿಬಿಲಿಯಾಗಲಿದೆ. ತಾಳ್ಮೆ ಕಡಿಮೆ ಆದಂತೆ ತೋರುವುದು.

ವೃಶ್ಚಿಕ ರಾಶಿ:

ಆರೋಗ್ಯದ ಬಗ್ಗೆ ಕಾಳಜಿ ಮುಖ್ಯವಾಗಿರಲಿ. ಸ್ನೇಹಿತರ ಮಾತಿನಿಂದ ನಿಮಗೆ ನೋವಾಗಬಹುದು. ಹಣಕಾಸಿನ ವಿಚಾರಕ್ಕೆ ತಂದೆಯ ನಡುವೆ ವಾಗ್ವಾದವು ಆಗಬಹುದು. ಯಾವ ಕ್ಷೇತ್ರದಲ್ಲೇ ಇದ್ದರೂ ಶತ್ರುಗಳ ಪಾತ್ರವನ್ನು ಇಲ್ಲಗಳೆಯುವಂತಿಲ್ಲ. ಚರಾಸ್ತಿಗಳನ್ನು ನಷ್ಟ ಮಾಡಿಕೊಳ್ಳಬೇಕಾಗುವುದು. ಆರ್ಥಿಕ ಒಪ್ಪಂದಕ್ಕೆ ಒಪ್ಪಿಗೆ ಕೊಡುವಿರಿ. ನಿರ್ಲಕ್ಷ್ಯ ಮಾಡದೇ ಒಂದು ಗಮನ ಬೇಕು. ನಿಮಗೆ ಯಾರಾದರೂ ದಾನಕ್ಕೆ ಯೋಗ್ಯರಾದವರು ಅನ್ನಿಸಿದವರಿಗೆ ದಾನವನ್ನು ಮಾಡಿ. ಸಾಲವಾಗಿ ನೀಡಿದ ಹಣವನ್ನು ಮತ್ತೆ ಬರುವುದು ಕಷ್ಟವಾದೀತು.

ಧನು ರಾಶಿ:

ಹಣಕಾಸಿನ ಭಯವು ನಿರೀಕ್ಷೆಗಿಂತ ಕಡಿಮೆಯಾಗಬಹುದು. ಇಂದು ಕೆಲವು ಪರಿಸ್ಥಿತಿಯನ್ನು ಎದುರಿಸಲು ಸಂಕೋಚವಾಗಬಹುದು. ಬುದ್ಧಿವಂತಿಕೆಯಿಂದ ಹೂಡಿಕೆ ಮಾಡುವುದು ಸೂಕ್ತ. ಪೂರ್ವಿಕರ ಆಸ್ತಿಗೆ ಸಂಬಂಧಿಸಿದಂತೆ ಮನಸ್ತಾಪವು ಬರಬಹುದು. ಮಹಿಳೆಯರಿಗೆ ಸಹಾಯ ಮಾಡಲು ಹೋಗಿ ಅಪವಾದಕ್ಕೆ ಸಿಕ್ಕುವಿರಿ. ನಿಮ್ಮ ನಿರುದ್ಯೋಗಕ್ಕೆ ಸೂಕ್ತ ಪರಿಹಾರ ಸಿಗಲಿದೆ. ಅನಿರೀಕ್ಷಿತವಾಗಿ ಇಂದು ಮನೆಯಲ್ಲಿಯೇ ಕಛೇರಿಯ ಕಾರ್ಯವನ್ನು ಮಾಡಬೇಕಾಗುವುದು. ದಿನವನ್ನು ದುಃಖಾಂತ್ಯ ಮಾಡಿಕೊಳ್ಳುವುದು ಬೇಡ. ಸ್ವತಂತ್ರ ಆಲೋಚನೆಯಿಂದ ಹೊಸ ದೃಷ್ಟಿ ಸಿಗಲಿದೆ.

ಮಕರ ರಾಶಿ:

ಶುಭಕರ್ಮವನ್ನು ಮಾಡುವ ಉತ್ಸಾಹವಗಬಹುದು. ಸಂಗಾತಿಯ ಜೊತೆಗಿನ ಕಲಹವು ನಿಮ್ಮ ಇಡೀ ದಿನವನ್ನು ಸರಿಯಾಗಿ ಕಳೆಯುವಂತೆ ಮಾಡದು. ನಿಮ್ಮ ಯೋಜನೆಗಳು ಕ್ರಮಶುದ್ಧವೂ ತರ್ಕಸಿದ್ಧವೂ ನಿಯಮಬದ್ಧವೂ ಆಗಿರಲಿದೆ. ಆ ದೂರಪ್ರಯಾಣವು ಆಯಾಸವನ್ನು ಕೊಡಬಹುದು. ಬಂಧುಗಳ ನಕಾರಾತ್ಮಕ ಮಾತುಗಳಿಂದ ನಿಮ್ಮ ಉತ್ಸಾಹಕ್ಕೆ ಭಂಗ ಬರುವುದು. ಎಲ್ಲವೂ ಹೇಳದೆಯೂ ಅರ್ಥ ಮಾಡಕೊಂಡು ಕಾರ್ಯವನ್ನು ಮಾಡುವಿರಿ. ಆಪತ್ಕಾಲಕ್ಕಾಗಿ ಕೂಡಿಟ್ಟ ಹಣವು ಇಂದು ಖರ್ಚು ಮಾಡಬೇಕಾಗುವುದು. ಭವಿಷ್ಯದ ಬಗ್ಗೆ ಅಸ್ಪಷ್ಟತೆ ಇರುವ ಕಾರಣ ಮನಸ್ಸಿಗೆ ಕಿರಿಕಿರಿ ಇರುವುದು.

ಕುಂಭ ರಾಶಿ:

ನೀವು ಉದ್ಯೋಗವನ್ನು ಯಶಸ್ವಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ. ನಿಮ್ಮ ಜೀವನಶೈಲಿಯನ್ನು ಸುಧಾರಿಸಿಕೊಳ್ಳಿ. ಸ್ವಂತ ನೆಲೆಯ ಸ್ಥಾಪನೆಯ ಬಗ್ಗೆ ಹೆಚ್ಚು ಯೋಚನೆ ಯೋಜನೆ ಅಗತ್ಯ. ಶತ್ರುಬಾಧೆಯಿಂದ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗುಬುದು. ಸಂಗಾತಿಯ ವಿಷಯದಲ್ಲಿ ನಿಮಗೆ ಸಮಾಧಾನ ಇರದು. ಮನೆಯಲ್ಲಿ ಇಂದು ಸ್ನೇಹ ಕೂಟವು ಏರ್ಪಡುವುದು. ಪರರ ಸಂತೋಷದಲ್ಲಿ ನೀವು ಭಾಗಿಯಾಗುವಿರಿ. ನಿಮ್ಮ ಜೀವನ ಶೈಲಿಯನ್ನು ಬದಲಿಸಿಕೊಳ್ಳುವಿರಿ. ಕಛೇರಿಯ ವ್ಯವಹಾರವನ್ನು ಮನೆಯಲ್ಲಿ ಚರ್ಚಿಸುವುದು ಬೇಡ.

ಮೀನ ರಾಶಿ:

ಭೂಮಿಯ ವ್ಯವಹಾರವು ನಿಮಗೆ ಲಾಭದಾಯಕವೆಂದು ಸಾಬೀತುಪಡಿಸಬಹುದು. ವ್ಯಾಪಾರ ವಹಿವಾಟುಗಳಿಗೆ ಆಪ್ತರನ್ನೇ ಯೋಜಿಸಿಕೊಳ್ಳುವುದು ಉತ್ತಮ. ಸ್ತ್ರೀಯರು ಸಂತೋಷದಿಂದ ದಿನ ಕಳೆಯುವಿರಿ. ನಿಮಗೆ ಇಂದು ಧಾರ್ಮಿಕ ಕಾರ್ಯದಲ್ಲಿ ತೃಪ್ತಿಯು ಸಿಗಲಿದೆ. ನೌಕರರಿಗೆ ಇಂದು ಸಂತೋಷವನ್ನು ಕೊಡುವಿರಿ. ಸಂತೋಷದ ನಡುವೆ ಯಾರನ್ನೂ ಬೇಸರಿಸುವುದು ಬೇಡ. ನಿಮ್ಮ ಅಧ್ಯಾತ್ಮ ಜೀವನದಿಂದ ಪ್ರಭಾವಿತರಾಗುವರು. ಅತಿಯಾದ ಭೋಜನದಿಂದ ಕಷ್ಟವಾದೀತು. ತಾಯಿಯ ಬಂಧುಗಳು ನಿಮಗೆ ಸಹಕಾರವನ್ನು ನೀಡಬಹುದು.

ಜನವರಿ 22,​​ 2026ರ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರ ಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಉತ್ತರಾಷಾಢ, ವಾರ : ಗುರು, ಪಕ್ಷ : ಶುಕ್ಲ, ತಿಥಿ : ಚತುರ್ಥೀ, ನಿತ್ಯನಕ್ಷತ್ರ : ಪೂರ್ವಾಭಾದ್ರ, ಯೋಗ : ವರಿಯಾನ್, ಕರಣ : ಭದ್ರ, ಸೂರ್ಯೋದಯ – 06 – 54 am, ಸೂರ್ಯಾಸ್ತ – 06 – 17 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 14-51 – 15:27, ಯಮಗಂಡ ಕಾಲ 06:54 – 08:20, ಗುಳಿಕ ಕಾಲ 09:45 – 11:11

-ಲೋಹಿತ ಹೆಬ್ಬಾರ್ – 8762924271 (what’s app only)