AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today 09 January: ಇಂದು ಈ ರಾಶಿಯವರನ್ನು ಯಾವ ವಿಚಾರಕ್ಕೂ ನಿಯಂತ್ರಿಸಲಾಗದು

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಪೌಷ ಮಾಸ ಕೃಷ್ಣ ಪಕ್ಷದ ಸಪ್ತಮೀ ತಿಥಿ ಶುಕ್ರವಾರ ನಿಶ್ಚಯಾತ್ಮಕ ಬುದ್ಧಿ, ತಂತ್ರಗಾರಿಕೆ, ಬೇಸರ, ನಾಸ್ತಿಕತೆ, ಕಾನೂನು ಸಮರ, ರಕ್ತಸಂಬಂಧದಲ್ಲಿ ಕಲಹ ಇವೆಲ್ಲ ಇಂದಿನ ವಿಶೇಷ. ಮೇಷದಿಂದ ಮೀನದವರೆಗೆ ಎಲ್ಲಾ ರಾಶಿಗಳ ಪ್ರೇಮ, ಹಣಕಾಸು, ವೃತ್ತಿ ಮತ್ತು ಆರೋಗ್ಯಕ್ಕೆ ಸಂಬಂಧಿಸಿದ ಮುನ್ನೋಟಗಳನ್ನು ಅನ್ವೇಷಿಸಿ. ನಿಮ್ಮ ದಿನವನ್ನು ಯೋಜಿಸಲು ಈ ಜ್ಯೋತಿಷ್ಯ ಸಲಹೆಗಳು ಸಹಾಯಕವಾಗಿವೆ.

Horoscope Today 09 January: ಇಂದು ಈ ರಾಶಿಯವರನ್ನು ಯಾವ ವಿಚಾರಕ್ಕೂ ನಿಯಂತ್ರಿಸಲಾಗದು
ದಿನ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Jan 09, 2026 | 12:01 AM

Share

ಮೇಷ ರಾಶಿ:

ಕಾನೂನಿನ ಕ್ರಮದಲ್ಲಿ ನಿಮ್ಮ ಯೋಜನೆ ಇರಲಿ. ಹೂಡಿಕೆಯನ್ನು ಮಾಡಲು ಒತ್ತಡ ಬರಬಹುದು. ದುರಾಸೆ ಪಡದೆ ಬಂದಿದ್ದನ್ನು ಸುಮ್ಮನೇ ಸ್ವೀಕರಿಸಿ. ಜೀವನಕ್ಕೆ ಹೊಸ ತಿರುವು ಸಿಗುವ ಸಾಧ್ಯತೆ ಇದೆ. ನಿಮಗೆ ತಿಳಿದ ವಿಚಾರವನ್ನು ಬೇರೆಯವರಿಗೆ ಯಾವುದೇ ನಿರೀಕ್ಷೆಯಿಲ್ಲದೆ ಹೇಳಿಕೊಡುವಿರಿ. ದಾಂಪತ್ಯದ ಸುಖವು ನಿಮಗೆ ಹೆಚ್ಚು ಇಷ್ಟವಾದೀತು. ಮನಸ್ಸಿನಲ್ಲಿ ಸಂಯಮವಿರಲಿ. ವಾತಾವಣವು ನಿಮ್ಮನ್ನು ಮಾನಸಿಕವಾಗಿ ಕುಗ್ಗಿಸಬಹುದು. ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ. ಸಂಗಾತಿ ಮತ್ತು ಮಕ್ಕಳ ಜೊತೆ ಅನವಶ್ಯಕ ವಾದ ವಿವಾದವು ಆಗಬಹುದು. ನಿಮ್ಮ ತಪ್ಪಿಗೆ ಬೇರೆಯವರನ್ನು ಬೆರಳು ಮಾಡುವಿರಿ. ತಪ್ಪನ್ನು ಒಪ್ಪಿಕೊಂಡು ಮೆಚ್ಚುಗೆ ಪಡೆಯುವಿರಿ.

ವೃಷಭ ರಾಶಿ:

ಸುಂದರವಾದ ಸ್ಥಳಕ್ಕೆ ಹೋಗಬೇಕು ಎನಿಸುವುದು. ಅನಾರೋಗ್ಯವನ್ನು ನಿರ್ಲಕ್ಷಿಸುವುದು ಬೇಡ. ಭೂಮಿಗೆ ಸಂಬಂಧಿತ ಕೆಲಸವನ್ನು ಪೂರ್ಣಮಾಡಿಕೊಳ್ಳುವಿರಿ. ನೀವು ಹಾಳುಮಾಡಿಕೊಳ್ಳುವಿರಿ. ಇಂದಿನ ನಿಮ್ಮ ನಿರೀಕ್ಷೆಗಳು ಹುಸಿಯಾಗಬಹುದು. ನಿಮಗೆ ಬೇಕಾದುದನ್ನು ಪಡೆಯಲು ನಿಮಗೆ ಇಚ್ಛೆ ಇರುವುದು. ನೀವು ಇಂದು ಅಸಹಜವಾಗಿ ನಡೆದುಕೊಳ್ಳುವಿರಿ. ಆಲಸ್ಯವು ಅಧಿಕವಾಗಬಹುದು. ಬಹಳ ದಿನದಿಂದ ಅಂದುಕೊಂಡ ಸ್ಥಳಕ್ಕೆ ಹೋಗುವಿರಿ. ಸಾಧಿಸಲಾಗದ ಕೆಲಸಕ್ಕೆ ಹೆಚ್ಚು ಶ್ರಮವನ್ನು ಹಾಕುವಿರಿ.‌ ಸ್ನೇಹ ಸಂಬಂಧಗಳನ್ನು ದೂರ ಮಾಡಿಕೊಳ್ಳುವಿರಿ. ಸುಮ್ಮನೆ ಕಾಲಹರಣವಾಗುವುದು ನಿಮಗೆ ಗೊತ್ತಾಗದು.

ಮಿಥುನ ರಾಶಿ:

ನಿಮ್ಮ ಬಗ್ಗೆ ಸ್ಪಷ್ಟತೆ ಇರಲಿ. ಉಸಿರಿಗೆ ಸಂಬಂಧಿಸಿದ ತೊಂದರೆ ಕಾಣಿಸಿಕೊಳ್ಳಬಹುದು. ವಿದ್ಯಾಭ್ಯಾಸದಲ್ಲಿ ಅತಂತ್ರ ಸ್ಥಿತಿಯನ್ನು ನೀವಾಗಿಯೇ ತಂದುಕೊಳ್ಳುವಿರಿ. ಅವಶ್ಯಕತೆ ಇರುವಷ್ಟು ಮಾತ್ರ ಮಾತನಾಡಿ. ನಿಮಗೆ ಅತಿಥಿ ಸತ್ಕಾರವು ನಡೆಯಬಹುದು. ಒಂದೇ ವಿಚಾರಕ್ಕೆ ಮತ್ತೆ ಮತ್ತೆ ಬೇಸರಿಸುವ ಅವಶ್ಯಕತೆ ಇಲ್ಲ. ರಾಜಕೀಯದಿಂದ ಹೊರಬರಲು ಮನಸ್ಸಾಗುವುದು. ಅನಿರೀಕ್ಷಿತ ಅಮೂಲ್ಯ ವಸ್ತುಗಳು ಪ್ರಾಪ್ತವಾಗುವುದು. ಹಠದ ಸ್ವಭಾವವು ವ್ಯವಸ್ಥೆಯನ್ನು ಹಾಳುಮಾಡೀತು. ಇಂದಿನ ಅಧಿಕ ಸಮಯದಲ್ಲಿ ಮೌನವಾಗಿಯೇ ಇರುವಿರಿ. ಯಾವುದೋ ಹತ್ತಾರು ವಿಚಾರದಲ್ಲಿ ನೀವು ಒತ್ತಡಕ್ಕೆ ಒಳಗಾಗುವಿರಿ. ವಾಹನ ಸವಾರರು ಜಾಗರೂಕತೆ ಅವಶ್ಯಕ.

ಕಟರ್ಕಾಟ ರಾಶಿ:

ಸಂತೋಷಕ್ಕಾಗಿ ನೀವು ಕೆಲವನ್ನು ತ್ಯಾಗಮಾಡಬೇಕಾದೀತು. ಮಕ್ಕಳ ವಿಚಾರದಲ್ಲಿ ಅಧಿಕ ಬದಲಾವಣೆ ಇರಲಿದೆ. ಪ್ರೀತಿಯು ಸುಖಾಂತ್ಯ ಕಾಣಬಹುದು. ವ್ಯಾಪಾರಸ್ಥರು ಶ್ರಮದಾಯಕ ಲಾಭವನ್ನು ಮಾಡಿಕೊಳ್ಳುವರು. ಹೊಸ ಯಂತ್ರಗಳನ್ನು ಸ್ವೀಕರಿಸುವಿರಿ. ನಿರ್ಲಕ್ಷ್ಯವು ನಿಮ್ಮ ಸ್ವಭಾವವಾದರೂ ಕೆಲವು ಸಂದರ್ಭಗಳಲ್ಲಿ ಅದನ್ನ ಬದಲಿಸಿಕೊಳ್ಳುವುದು ಉತ್ತಮ. ವೃತ್ತಿಯಲ್ಲಿ ಸಹೋದ್ಯೋಗಿಗಳಿಂದ ಕಿರಿಕಿರಿ ಆಗಬಹುದು. ಪ್ರಭಾವಿ ವ್ಯಕ್ತಿಗಳ ಭೇಟಿಯು ಸಂತೋಷವನ್ನು ಕೊಡುವುದು. ಉದ್ವೇಗದಿಂದ ಏನನ್ನಾದರೂ ಹೇಳಲು ಹೋಗಿ ನಗೆಪಾಟಲಿಗೆ ಸಿಕ್ಕಿಕೊಳ್ಳುವಿರಿ. ಸಂಗಾತಿಯಿಂದ ಉಡುಗೊರೆಯು ಅನಿರೀಕ್ಷಿತವಾಗಿ ಸಿಗಬಹುದು.

ಸಿಂಹ ರಾಶಿ:

ಕೊರತೆಯನ್ನು ನೆನೆದು ದುಃಖಿಸುವುದು ಬೇಡ. ಕಾಲಕ್ಕೆ ಸಿಗಬೇಕಾದುದು ಸಿಗಲಿದೆ. ಎಂದಿಗಿಂತ ವ್ಯಾಪಾರದಲ್ಲಿ ಹಿನ್ನಡೆ ಇರಲಿದೆ. ಚಿಂತೆಯು ಕಾಡಬಹುದು. ಪಾಲುದಾರಿಕೆಯಲ್ಲಿ ನಿಮಗೆ ಹೊಂದಾಣಿಕೆಯ ಕೊರತೆ ಆಗಬಹುದು. ಅನಿರೀಕ್ಷಿತ ವೆಚ್ಚವನ್ನು ಮಾಡಬೇಕಾಗಬಹುದು. ನ್ಯಾಯಾಲಯದಲ್ಲಿ ನಿಮ್ಮ ಪರವಾಗಿ ಸಾಕ್ಷಿಯು ಸಿಗದೇಹೋಗಬಹುದು. ಪ್ರಯಾಣದಲ್ಲಿ ತೊಂದರೆಗಳು ಬಂದರೂ ತಲುಪಬೇಕಾದ ಸ್ಥಳಕ್ಕೆ ಹೋಗುವಿರಿ. ಸರ್ಕಾರಿ ನೌಕರರು ಅಧಿಕಾರಿಗಳಿಂದ ಸಮಸ್ಯೆಯನ್ನು ಎದುರಿಸಬೇಕಾದೀತು. ಮಾನಸಿಕ ಒತ್ತಡಗಳು ನಿಮ್ಮ ಕೆಲಸವನ್ನು ಹಾಳುಮಾಡುವುದು. ಕಛೇರಿಯ ಕೆಲಸವನ್ನು ಹಂಚಿಕೊಂಡು ಮಾಡುವಿರಿ.

ಕನ್ಯಾ ರಾಶಿ:

ವಿದ್ಯಾರ್ಥಿಗಳ ಶ್ರಮವು ವ್ಯರ್ಥವಾಗುವುದು. ಅತಿಯಾದ ಚಿಂತೆಯು ನಿಮ್ಮ ಜೊತೆಗಿರುವವರ ಮನಸ್ಸನ್ನೂ ಕೆಡಿಸೀತು. ಉದ್ಯೋಗದ ಬದಲಾವಣೆ ಆಗಲಿದ್ದು ಸರಿಯಾದ ಪ್ರತ್ಯುತ್ತರ ಸಿಗದೇ ಬೇಸರವಾಗುವುದು. ನಿಮ್ಮ ವಸ್ತುಗಳು ಕಳ್ಳತನವಾಗಬಹುದು. ನಿಮ್ಮ ನಿಯಮಗಳನ್ನು ನೀವೇ ಭಂಗ ಮಾಡಿಕೊಳ್ಳುವಿರಿ. ಎಚ್ಚರಿಕೆಯಿಂದ ನಿಮ್ಮ ಹೆಜ್ಜೆಯನ್ನು ಇಡಿ. ಅಳುಕಿನಿಂದ ಇರುವಿರಿ. ಇಂದು ಕೈಗೊಂಡ ಪ್ರವಾಸದಲ್ಲಿ ನಿಮಗೆ ತೃಪ್ತಿ ಸಿಗದು. ನಿಮ್ಮ ಉತ್ಸಾಹಕ್ಕೆ ಯಾರಾದರೂ ಭಂಗಮಾಡಬಹುದು. ಯಾರದ್ದೋ ಮೂಲಕ ನೀವು ಶತ್ರುಗಳ ಯೋಜನೆಯನ್ನು ತಿಳಿಯುವಿರಿ. ಸಹನೆಯಿಂದ ಆಗುವ ಲಾಭವು ಅನುಭವಕ್ಕೆ ಬರಬಹುದು.

ತುಲಾ ರಾಶಿ:

ಸಾಮಾಜಿಕ ಕೆಲಸಗಳು ನಿಮ್ಮನ್ನು ಹುಡುಕಿಕೊಂಡು ಬರಬಹುದು. ವ್ಯವಹಾರದಲ್ಲಿ ಊಹಿಸಿದ್ದಕ್ಕಿಂತ ಹೆಚ್ಚಿನ ಲಾಭವು ಸಿಗುವುದು. ಉದರಬಾಧೆಯಿಂದ ಕಷ್ಟಪಡುವಿರಿ. ದುಡುಕಿ ಮಾತನಾಡಿ ಸತ್ಯವನ್ನು ಹೇಳುವಿರಿ. ಆಸ್ತಿಯ ಕಲಹವನ್ನು ನ್ಯಾಯಾಲಯಕ್ಕೆ ತಡಗೆದುಕೊಂಡು ಹೋಗುವಿರಿ. ವಿನಾಕಾರಣ ಯಾರ ಮೇಲಾದರೂ ಅಧಿಕಾರವನ್ನು ಚಲಾಯಿಸುವಿರಿ. ಅಲ್ಪರ ಸಹವಾಸದಿಂದ ಅಭಿಮಾನಕ್ಕೆ ತೊಂದರೆಯಾಗುವುದು. ಹಣಕಾಸಿನ ವ್ಯವಹಾರವು ಪಾರದರ್ಶಕವಾಗಿ ಇರಲಿ. ಸಂಗಾತಿಯಿಂದ ನಿಮಗೆ ನೂತನ ವಸ್ತ್ರಗಳು ಬರಬಹುದು. ನಿಮ್ಮ ಆದಾಯದ ಮೂಲವನ್ನು ಹೆಚ್ಚುಮಾಡಿಕೊಳ್ಳುವಿರಿ. ಕೆಲಸದಲ್ಲಿ ಪ್ರಾಮಾಣಿಕತೆ ಕಡಿಮೆ ಆದಂತೆ ತೋರಬಹುದು.

ವೃಶ್ಚಿಕ ರಾಶಿ:

ಬಂಧುಗಳು ನಿಮ್ಮ ಸಮಸ್ಯೆಗೆ ಸ್ಪಂದಿಸುವರು. ವ್ಯಾಪಾರವು ಲಾಭಾಂಶವನ್ನು ಹೆಚ್ಚು ಪಡೆಯುವುದು. ನಿಮ್ಮ ಕೆಲಸಗಳಿಗೆ ಆತ್ಮಸಾಕ್ಷಿಯೇ ಮುಖ್ಯವಾಗಿರುವುದು. ಹುಡುಗಾಟದ ಬುದ್ಧಿಯಿಂದ ಕೆಲವು ವಿಚಾರಗಳು ನಿಮಗೆ ಗೊತ್ತಾಗದೇ ಹೋಗಬಹುದು. ಸಂಗಾತಿಯ ಬೆಂಬಲವು ಸಿಗದೇಹೋಗಬಹುದು. ನಿಮ್ಮ ಹಿತೈಷಿಗಳಾದರೂ ಅವರ ಜೊತೆಗಿನ ಒಡನಾಟವು ಮಿತಿಯಲ್ಲಿ ಇರಲಿ. ಇಂದಿನ ಕಾರ್ಯದಲ್ಲಿ ಮುನ್ನಡೆಯಿರಲಿದ್ದು ನಿಮ್ಮ ಬಗ್ಗೆ ಸದಭಿಪ್ರಾಯವು ಇರುವುದು. ಆಪ್ತರ ಜೊತೆ ಮಾಡಿದ‌ ಸಮಾಲೋಚನೆಯಿಂದ ಮನಸ್ಸಿಗೆ ಸಂತೋಷ ಸಿಗುವುದು. ವಾಸಸ್ಥಳದ ಬದಲಾವಣೆಯಿಂದ ಹೊಂದಿಕೊಳ್ಳುವುದು ಕಷ್ಟವಾದೀತು.

ಧನು ರಾಶಿ:

ಇಂದು ಎಲ್ಲರಿಂದ ವಿಶ್ವಾಸವನ್ನು ಕಳೆದುಕೊಳ್ಳಬಹುದು. ಮಂಗಲ ಕಾರ್ಯಗಳಿಂದ ನೆಮ್ಮದಿ ಇರುವುದು. ಮಿತ್ರನ ನಂಬಿಕೆಯನ್ನು ಕಳೆದುಕೊಂಡು, ಆದ ನಷ್ಟಕ್ಕೆ ದುಃಖಿಸುವಿರಿ. ಸ್ಥಿರಾಸ್ತಿಯನ್ನು ವ್ಯವಹಾರ‌ ಜ್ಞಾನದ ಕೊರತೆಯಿಂದ ಕಳೆದುಕೊಳ್ಳಬಹುದು. ಮಿತ್ರರ ಮನಸ್ತಾಪವನ್ನು ನೀವು ಬಗೆಹರಿಸಿಕೊಳ್ಳುವಿರಿ. ಬಂಧುಗಳ ನಡುವೆ ಪರಸ್ಪರ ಸೌಹಾರ್ದವು ಬೆಳೆಯಬಹುದು. ಸಹೋದರರ ನಡುವೆ ಆರ್ಥಿಕ ಸಂಬಂಧವು ಉತ್ತಮವಾಗಿ ಇರುವುದಿಲ್ಲ. ವಯಸ್ಸಿಗೆ ಬಂದ ಮಕ್ಕಳ ವಿವಾಹದ ಚಿಂತೆ‌ ಇರುಬುದು. ಸಾಹಿತ್ಯದಲ್ಲಿ ಆಸಕ್ತಿ ಮೂಡುವ ಸಾಧ್ಯತೆ ಇದೆ. ಪ್ರೀತಿಯಿಂದ ಕೊಟ್ಟ ವಸ್ತುವನ್ನು ಮತ್ತೆ ಕೊಡುವುದು ಬೇಡ. ಸಂಗಾತಿಯ ಜೊತೆ ಸಣ್ಣ ವಿಚಾರಗಳಿಗೂ ಜಗಳವಾಡುಬಿರಿ.

ಮಕರ ರಾಶಿ:

ಉದ್ಯೋಗಕ್ಕೆ ಸಂಬಂಧಿಸಿದಂತೆ ಕಿರಿಕಿರಿಯನ್ನು ಅನುಭವಿಸಿದರೂ ಅದನ್ನು ವ್ಯಕ್ತ ಮಾಡುವುದು ಬೇಡ. ಸ್ನೇಹಿತರು ನಿಮ್ಮನ್ನು ಅಪಮಾನ ಮಾಡಬಹುದು. ನ್ಯಾಯಾಲಯದ ವಿಷಯದಲ್ಲಿ ನಿಮ್ಮ ಊಹೆಯು ಸರಿಯಾಗದು. ಮನೆಯಲ್ಲಿ ಮಕ್ಕಳು ನಿಮ್ಮನ್ನು ಲೆಕ್ಕಕ್ಕೆ ತೆಗದುಕೊಳ್ಳದೇ ಹೋಗಬಹುದು. ಹಳೆಯ ಮನೆಯ ದುರಸ್ತಿ ಕಾರ್ಯವು ಜರುಗಲಿದೆ. ವಿದ್ಯಾರ್ಥಿಗಳ ಕಲಿಕೆಯಲ್ಲಿ ಹಿನ್ನಡೆಯಾಗಲಿದೆ. ಇಂದಿನ‌ ಹೆಚ್ಚಿನ ವಿಚಾರಗಳನ್ನು ನಕರಾತ್ಮಕವಾಗಿಯೇ ಚಿಂತಿಸುವಿರಿ. ದೂರ ಪ್ರಯಾಣವು ನಿಮಗೆ ಇಂದು ಅನಿವಾರ್ಯವಾದೀತು. ಬೇಕಾದ ವಸ್ತುವು ಕಣ್ಮರೆಯಾಗಬಹುದು. ಸ್ವಂತ ವಾಹನದಿಂದ ನೀವು ಲಾಭವನ್ನು ಗಳಿಸುವಿರಿ.

ಕುಂಭ ರಾಶಿ:

ನೆಯ ಬಗ್ಗೆಯೇ ಹೆಚ್ಚು ಯೋಚಿಸುವಿರಿ. ಅನಾರೋಗ್ಯವು ಉತ್ಸಾಹವನ್ನು ಕಡಿಮೆ ಮಾಡುವುದು. ಗೌಪ್ಯವಾಗಿ ನಿಮ್ಮ ಅಂತರಂಗವನ್ನು ತಿಳಿದುಕೊಳ್ಳಲು ಶತ್ರುಗಳು ಪ್ರಯತ್ನಿಸಬಹುದು. ಮಾತಿನ ಮೇಲೆ ನೀವು ಹಿಡಿತವನ್ನು ಸಾಧಿಸಬೇಕಾದೀತು. ಕಛೇರಿಯಲ್ಲಿ ಅನಗತ್ಯವಾಗಿ ಮಾತನಾಡಿ ಸುಮ್ಮನೇ ವ್ಯಕ್ತಿತ್ವವನ್ನು ಹಾಳುಮಾಡಿಕೊಳ್ಳುವುದು ಬೇಡ. ಕಲಾವಿದರು ಸಿಕ್ಕ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳುವರು. ವೃತ್ತಿಯಲ್ಲಿ ಬಡ್ತಿಯನ್ನು ಅಪೇಕ್ಷಿಸುವಿರಿ. ಮೇಲಧಿಕಾರಿಗಳ ಮಾತುಗಳು ನಿಮ್ಮನ್ನು ಕಾಡಬಹುದು. ಆಪ್ತರ ಮಾತಿನ ಮೇಲೆ ಭರವಸೆ ಇಡಿ. ಅತಿಯಾದ ಒತ್ತಡದಿಂದ ಮಾಡುವ ಕೆಲಸದಿಂದ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು.

ಮೀನ ರಾಶಿ:

ಸಾಲದ ಚಿಂತೆಯಲ್ಲಿ ನೀವು ಎಲ್ಲವನ್ನೂ ಮರೆಯುವಿರಿ. ಇಂದು ನಿಮಗೆ ಮಾತಿನಿಂದಾಗಿ ತೊಂದರೆಗಳು ಬರಬಹುದು. ಎಲ್ಲರ ಜೊತೆಗೂ ವಾಗ್ವಾದಕ್ಕೆ ಹೋಗುವುದು ಬೇಡ. ಕುಟುಂಬದ ಸಮಸ್ಯೆಗೆ ಧಾರ್ಮಿಕ ಕಾರ್ಯವನ್ನು ಮಾಡಿ ಪರಿಹಾರವನ್ನು ಮಾಡಿಕೊಳ್ಳಲು ಇಚ್ಛಿಸುವಿರಿ. ಇಂದು ನೀವು ಅಂದುಕೊಂಡಂತೆ ಆಗಿದ್ದು ಖುಷಿಯಿಂದ ಇರುವಿರಿ. ವಾಹನ ಖರೀದಿಯ ಆಲೋಚನೆಯನ್ನು ಸದ್ಯ ಕೈ ಬಿಡುವಿರಿ. ವಿದ್ಯಾಭ್ಯಾಸದ ಬಗ್ಗೆ ಅನಾದರ ಬರಬಹುದು. ಯಾರಿಂದಲಾದರೂ ಹಿತವಚನದ ಅವಶ್ಯಕತೆ ಇರುವುದು. ಸ್ತ್ರೀಯರಿಂದ ಇಂದು ಸಹಾಯವನ್ನು ಪಡೆಯುವಿರಿ. ಹಣದ ವಿಚಾರದಲ್ಲಿ ನಿಮಗೆ ಸರಿಯಾದ ಮಾರ್ಗದರ್ಶನ ಬೇಕಾಗುವುದು.

ಜನವರಿ 09,​​ 2026ರ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಧನು, ಮಹಾನಕ್ಷತ್ರ : ಶ್ರವಣಾ, ವಾರ : ಶುಕ್ರ, ಪಕ್ಷ : ಕೃಷ್ಣ, ತಿಥಿ : ಸಪ್ತಮೀ ನಿತ್ಯನಕ್ಷತ್ರ : ಉತ್ತರಾಫಲ್ಗುಣೀ ಯೋಗ : ಶೋಭನ, ಕರಣ : ವಣಿಜ, ಸೂರ್ಯೋದಯ – 06 – 52 am, ಸೂರ್ಯಾಸ್ತ – 06 – 09 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 13-56 – 15:21, ಯಮಗಂಡ ಕಾಲ 06:52 – 08:17, ಗುಳಿಕ ಕಾಲ 09:42 – 11:06

-ಲೋಹಿತ ಹೆಬ್ಬಾರ್ – 8762924271 (what’s app only)

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ