AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ಗ್ರೀಷ್ಮ, ಸೌರ ಮಾಸ: ಮಿಥುನ, ಮಹಾನಕ್ಷತ್ರ: ಆರ್ದ್ರಾ, ಮಾಸ: ಆಷಾಢ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಉತ್ತರಾಫಲ್ಗುಣೀ, ಯೋಗ: ಗಂಡ, ಕರಣ: ಗರಜ, ಸೂರ್ಯೋದಯ – 06 : 08 am, ಸೂರ್ಯಾಸ್ತ – 07 : 04 pm, ಇಂದಿನ ಶುಭಾಶುಭ ಕಾಲ: ರಾಹು ಕಾಲ 15:51 – 17:28, ಯಮಘಂಡ ಕಾಲ 09:23 – 10:59, ಗುಳಿಕ […]

ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
ದಿನ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ|

Updated on: Jul 02, 2025 | 1:02 AM

Share

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ಗ್ರೀಷ್ಮ, ಸೌರ ಮಾಸ: ಮಿಥುನ, ಮಹಾನಕ್ಷತ್ರ: ಆರ್ದ್ರಾ, ಮಾಸ: ಆಷಾಢ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಉತ್ತರಾಫಲ್ಗುಣೀ, ಯೋಗ: ಗಂಡ, ಕರಣ: ಗರಜ, ಸೂರ್ಯೋದಯ – 06 : 08 am, ಸೂರ್ಯಾಸ್ತ – 07 : 04 pm, ಇಂದಿನ ಶುಭಾಶುಭ ಕಾಲ: ರಾಹು ಕಾಲ 15:51 – 17:28, ಯಮಘಂಡ ಕಾಲ 09:23 – 10:59, ಗುಳಿಕ ಕಾಲ 12:37 -14:14

ಮೇಷ ರಾಶಿ: ಬಲಪ್ರದರ್ಶನಕ್ಕೆ ಯೋಗ್ಯ ವ್ಯಕ್ತಿಯನ್ನು ಆರಿಸಿಕೊಳ್ಳುವಿರಿ. ಇಂದು ಸಂಗಾತಿಯು ನಿಮ್ಮ ಇಂಗಿತವನ್ನು ಅರಿತು ಕೆಲಸ ಮಾಡುವರು. ಮಾನಸಿಕ ದ್ವಂದ್ವಗಳು ನಿಮ್ಮನ್ನು ಕಟ್ಟಿಹಾಕಬಹುದು. ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ. ಹಳೆಯ ಪ್ರೇಯಸಿಯಿಂದ ಆಹ್ವಾನ ಬರಬಹುದು. ಕಛೇರಿಯಲ್ಲಿ ಈ ಮೊದಲೇ ಇದ್ದ ವೈಮನಸ್ಯವು ಅಧಿಕವಾಗಬಹುದು. ಎಲ್ಲರಿಗೂ ತಿಳಿಯಲೂಬಹುದು. ಉತ್ಪನ್ನದ ಗುಣಮಟ್ಟವನ್ನು ಕಾಯ್ದುಕೊಳ್ಳಲಾಗದು. ಸಾಲವನ್ನು ಸರ್ಕಾರ ತೀರಿಸುತ್ತದೆ ಎಂಬ ಭಾವದಿಂದ ಎಷ್ಟಾದರೂ ಸಾಲವನ್ನು ಮಾಡಬೇಡಿ. ನಿಮಗೇ ಕಷ್ಟವಾಗುವುದು. ಉದ್ಯೋಗದ ಸ್ಥಳದಲ್ಲಿ ಆಗುವ ಕಲಹದಲ್ಲಿ ಯಾರ ಪರವಾಗಿ ಇರಬೇಕು ಎನ್ನುವ ಗೊಂದಲ ಕಾಣಿಸಿ ತಟಸ್ಥರಾಗಬಹುದು. ಶತ್ರುವನ್ನು ಮಿತ್ರನನ್ನು ಮಾಡಿಕೊಳ್ಳುವ ತಂತ್ರವನ್ನು ಹೂಡುವಿರಿ. ಕೆಲವು ಅಭ್ಯಾಸವು ಚಟವಾಗಿ ಪರಿವರ್ತನೆ ಆಗಬಹುದು. ಬಿಡಸಲಾಗದ ಸಮಸ್ಯೆಗಳು ನಿಮ್ಮನ್ನು ಇಬ್ಬಂದಿ ಮಾಡಬಹುದು. ಆಪ್ತರ ಸಲಹೆಯನ್ನು ಪಡೆಯಿರಿ.

ವೃಷಭ ರಾಶಿ: ಯಶಸ್ಸಿನಿಂದ ನಿಮಗೆ ಸಮಾಧಾನ ಸಿಗದೇ, ಮತ್ತೇನೋ ಬೇಕು ಎನಿಸುವುದು. ಇಂದು ಸ್ತ್ರೀಯರು ಸ್ವಪ್ರಯತ್ನದಿಂದ ಲಾಭ ಗಳಿಸುವರು. ನಿಮ್ಮ ಶ್ರಮಕ್ಕೆ ದೈವವು ಅನುಕೂಲವೂ ಲಭ್ಯವಾಗುವುದು. ಮಾತಿನಲ್ಲಿ ಮೆಚ್ಚುಗೆಯು ನಿಮಗೆ ಸಿಗಲಿದೆ. ನಿಮಗೆ ಕೆಲವು ಜವಾಬ್ದಾರಿಗಳು ಬರಬಹುದು. ಕಾನೂನಿಗೆ ವಿರುದ್ಧವಾದ ಕೆಲಸದಿಂದ ಹಣವನ್ನು ಪಡೆಯಲು ಹೋಗಬಹುದು. ಅದು ನಿಮ್ಮ ವೃತ್ತಿಜೀವನದ ಮೇಲೂ ಪರಿಣಾಮವನ್ನು ಉಂಟುಮಾಡಬಹುದು. ಆರ್ಥಿಕ ವಿಚಾರದಲ್ಲಿ ಸಣ್ಣ ರಿಸ್ಕ್ ತೆಗೆದುಕೊಳ್ಳಲು ಮುಂದಾಗುವಿರಿ. ಕಲೆದುಕೊಂಡಿದ್ದನ್ನು ಪಡೆಯುವ ತನಕ ಸಮಾಧಾನ‌ಸಿಗದು. ಬೇರೆಯವರಲ್ಲಿ ನಿಮ್ಮ ಬಗ್ಗೆ ಇರುವ ಭವನೆಗಳು ಗೊತ್ತಾಗಬಹುದು. ನೀರಿನ ಪ್ರದೇಶಗಳಲ್ಲಿ ಹೋಗುವಾಗ ಜಾಗರೂಕತೆ ಮುಖ್ಯ. ಕೆಲವು ಸಂಗತಿಗಳು ಅನಿರೀಕ್ಷಿತವಾಗಿ ಬಂದು ಮನಸ್ಸಿನ ನೆಮ್ಮದಿಯನ್ನು ಹಾಳುಗೆಡವುವುವು. ಹೂಡಿಕೆಯಲ್ಲಿ ಲಾಭವು ಕಾಣಿಸುವುದು. ಅತಿಯಾದ ಆತ್ಮವಿಶ್ವಾಸದ ಜೊತೆ ಪೂರ್ವಾಪರಜ್ಞಾನವೂ ಇರಲಿ.

ಮಿಥುನ ರಾಶಿ: ಸ್ವಲ್ಪ ದೂರವಿದ್ದು ನಿಮ್ಮವರನ್ನು ನೋಡಿದಾಗ ಎಲ್ಲವುಯ ಸ್ಪಷ್ಟ. ಇಂದು ನಿಮ್ಮ ಅಶಕ್ತತೆಯು ಸಿಟ್ಟಾಗಿ ಬದಲಾಗುವುದು. ತಂದೆಯ ಜೊತೆ ಹಣಕಾಸಿನ ವಿಚಾರಕ್ಕೆ ಕಲಹವಾಗಬಹುದು. ಮನಸ್ಸು ಉದ್ವೇಗಕ್ಕೆ ಒಳಗಾಗದಂತೆ ನೋಡಿಕೊಳ್ಳಿ. ಸದ್ದಿಲ್ಲದೆ ಮಾಡಿದ ಕೆಲಸದಿಂದ ಎಲ್ಲರೂ ಅಚ್ಚರಿಪಡುವರು. ಒಂದೇ ವಿಚಾರವನ್ನು ಮತ್ತೆ ಮತ್ತೆ ಹೇಳಿದೆ ಎನ್ನಿಸಿದರೂ ಹಿರಿಯರ ಮಾತುಗಳನ್ನು ಅವರ ಮೇಲಿನ‌ ಗೌರವದಿಂದ ಕೇಳಬೇಕಾಗಬಹುದು. ಹಳೆಯ ಖಾಯಿಲೆಯು ಮತ್ತೆ ಬರಬಹುದು. ಅವಕಾಶಗಳನ್ನು ಬಿಟ್ಟಕೊಟ್ಟ ಇದ್ದಲ್ಲಿಯೇ ಇರಬೇಡಿ. ಸಮಯವನ್ನು ಅವಕಾಶವನ್ನೂ ಸದುಪಯೋಗ ಮಾಡಿಕೊಳ್ಳಿ. ನಿಮ್ಮನ್ನು ಬೆಂಬಲಿಸುವವರಿಗೆ ನಿಮ್ಮ ಬೆಂಬಲವನ್ನು ನೀಡುವಿರಿ. ಆತಂಕದ ಸಂದರ್ಭಗಳು ಬರಬಹುದು. ತಾಳ್ಮೆಯಿಂದ ಸರಿಮಾಡಿಕೊಳ್ಳಿ. ತಂದೆಯಿಂದ ಹಣವನ್ನು ಪಡೆದು ನಿಮಗೆ ಬೇಕಾದ ವಸ್ತುಗಳನ್ನು ಪಡೆಯುವಿರಿ. ವಿದ್ಯಾಭ್ಯಾಸಕ್ಕೆ ಪೂರಕವಾದ ವಾತಾವರಣವು ನಿರ್ಮಾಣ ಮಾಡಿಕೊಳ್ಳುವಿರಿ.

ಕರ್ಕಾಟಕ ರಾಶಿ: ದೊಡ್ಡ ಸಮ್ಮಾನವು ದೊಡ್ಡ ಕೆಲಸಕ್ಕೆ ಪ್ರೇರಣೆ ಕೊಡುವುದು. ಇಂದು ನೀವು ದುಶ್ಚಟದಿಂದ ದೂರವಿರಲು ದಾರಿ ಹುಡುಕುವಿರಿ. ಉದ್ಯೋಗದಲ್ಲಿ ಭಡ್ತಿಯನ್ನು ನಿರೀಕ್ಷಿಸಬಹುದು. ಮಕ್ಕಳಿಂದ ಸಂತೋಷಕರವಾದ ವಾರ್ತೆಯು ಇರುತ್ತದೆ. ಸ್ನೇಹಿತರಿಗೋಸ್ಕರ ಸಮಯವನ್ನು ಕೊಡಬೇಕಾಗಿಬರಬಹುದು. ಅನ್ಯರ ಪ್ರಭಾವಕ್ಕೆ ಒಳಗಾಗಿ ನಿಮ್ಮನ್ನು ಪರಿವರ್ತಿಸಿಕೊಳ್ಳುವಿರಿ. ಅಪೂರ್ಣಗೊಂಡ ಕೆಲಸಗಳನ್ನು ಮಾಡಿ ಮುಗಿಸಬೇಕೆಂದು ಚಿಂತಿಸುವಿರಿ. ಹಿಂದೆ ಪಟ್ಟ ಕಷ್ಟದಿಂದ ನಿಮಗೆ ಇಂದು ಸುಖ, ನೆಮ್ಮದಿಗಳು ಸಿಗಲಿವೆ. ನಿಮ್ಮ ಆಲೋಚನೆಗಳನ್ನು ಬೇರೆಯವರ ಮೇಲೆ ಹೇರಬೇಡಿ. ಕಾರ್ಯಕ್ರಮದ‌ ಕಾರಣ ದೂರ ಓಡಾಟ ಬರಬಹುದು. ಕೋಪವನ್ನು ಆದಷ್ಟು ಬುದ್ಧಿಪೂರ್ವಕವಾಗಿ ಕಡಿಮೆ ಮಾಡಿಕೊಳ್ಳಿ. ಮಕ್ಕಳಿಗೆ ನಿಮ್ಮಿಂದ ಪ್ರೊತ್ಸಾಹ ಬೇಕು. ಶಿಕ್ಷಿತರಾದಕಾರಣ ಇದನ್ನು ಹಿಡಿತದಲ್ಲಿ ಇಟ್ಟಿಕೊಳ್ಳಬೇಕಾಗುವುದು. ಯಾವುದನ್ನೂ ಆಗದು ಎಂಬ ಮಾತು ನಿಮ್ಮಿಂದ ಬರುವುದು ಬೇಡ.

ಸಿಂಹ ರಾಶಿ: ನಿಮ್ಮ ಕೆಲಸಗಳು ದೀರ್ಘವಾಗುವುದು ಅಂತ್ಯವನ್ನು ನಿರ್ಧರಿಸದೇ ಇರುವುದರಿಂದ. ನೀವು ಸಾಮಾಜಿಕ ಕಾರ್ಯದಿಂದ ಟೀಕೆಗೆ ಗುರಿಯಾಗುವಿರಿ. ಕಟ್ಟಡವನ್ನು ನಿರ್ಮಿಸುವ ಕಾರ್ಯದಲ್ಲಿ ನೀವು ಯಶಸ್ವಿಯಾಗುವಿರಿ. ಸ್ಥಿರಾಸ್ತಿಯ ಖರೀದಿಯನ್ನು ಮಾಡುವಿರಿ. ಹೊಸ ಕೆಲಸವನ್ನು ಮಾಡಲು ನಿಮಗೆ ಧೈರ್ಯ ಸಾಲದು. ನಿಮಗೆ ದೈರ್ಯವನ್ನು ತುಂಬುವವರೂ ಇಲ್ಲವಾಗಬಹುದು. ಪ್ರೇಮಸಂಬಂಧದಲ್ಲಿ ಹುರುಳಿಲ್ಲ ಎನಿಸುವುದು. ಹೂಡಿಕೆಯಲ್ಲಿ ನೀವು ಬದಲಾವಣೆಯನ್ನು ಬಯಸುವಿರಿ. ವಿಶ್ರಾಂತಿ ಬೇಕೆನಿಸಿದರೆ ಪಡೆದು ಮುನ್ನಡೆಯುವುದು ಉತ್ತಮ. ವ್ಯಾಪಾರವನ್ನು ಮಾಡುತ್ತಿದ್ದರೆ ಸಾಲವನ್ನು ಕೊಡಲು ಹೋಗಬೇಡಿ. ಭಾರವಾದ ಮನಸ್ಸಿನ ಜೊತೆ ಕೆಲಸ ಮಾಡಲಾಗದು. ಹಣ ಸಂಪಾದನೆಯನ್ನೇ ಮುಖ್ಯವಾಗಿಟ್ಟುಕೊಂಡು ಮನೆಯನ್ನು, ಮಕ್ಕಳನ್ನು ಮರೆಯಬಹುದು. ಅಕಾರಣವಾಗಿ ದುಃಖದ ಸನ್ನಿವೇಷಗಳು ಬರಬಹುದು. ಮನಸ್ಸಿಗೆ ಹಿಡಿಸುವ ಕೆಲಸವನ್ನು ಮಾಡಿ. ನಿಮ್ಮ ಆಲೋಚನೆಗೆ ತಕ್ಕಂತೆ ಎಲ್ಲವೂ ನಡೆಯುತ್ತಿದೆ ಎಂದು ಅನ್ನಿಸಿದರೂ ಅದನ್ನು ಪರಿವರ್ತಿಸಲು ಅಸಾಧ್ಯವಾಗುವುದು.

ಕನ್ಯಾ ರಾಶಿ: ಅಪರಿಚಿತ ಕರೆಗಳು ನಿಮ್ಮ ವೈಯಕ್ತಿಕ ವಿವರಗಳನ್ನು ಕೇಳಬಹುದು. ನಿಮ್ಮದಲ್ಲದ‌ ವಸ್ತುವನ್ನು ಜೋಪಾನ‌ಮಾಡುವುದು ಅತ್ಯವಶ್ಯಕ. ಇಂದು ನಿಮ್ಮ ವೇಗಕ್ಕೆ ಕೆಲಸಗಳು ಆಗುತ್ತಿಲ್ಲ ಎಂಬ ತುಡಿತ ಇರಲಿದೆ. ವ್ಯಾಪಾರದಲ್ಲಿ ಇಷ್ಟವಿಲ್ಲದಿದ್ದರೂ ಲಾಭವನ್ನು ನಿರೀಕ್ಷಿಸುವುದು ಬೇಡ. ಹೂಡಿಕೆ ಮಾಡುವ ಮನಸ್ಸಿದ್ದರೆ ಸ್ವಲ್ಪ ಮಾಡಿ. ಆದರೆ ನೀವು ನಿರೀಕ್ಷಿಸಿದಷ್ಟು ಲಾಭವನ್ನು ಪಡೆಯುವುದು ಕಷ್ಟವಾಗಬಹುದು. ನಿಮ್ಮ ಮಾತಿನಲ್ಲಿ ತಪ್ಪು ಹುಡುಕುವವರಿಗೆ ಭಯಪಡುವಿರಿ. ಇಂದು ಮನೆಗೆ ಬರುವವರು ಬಾರದೇಹೊಇಗಬಹುದು. ನೀವು ಸ್ವತಂತ್ರವಾಗಿ ಬದುಕುವ ಇಚ್ಛೆ ಹೊಂದುವಿರಿ. ಅನುಕೂಲತೆಯನ್ನು ನೋಡಿ ಮನೆಗೆ ಸಹಾಯ ಮಾಡುವಿರಿ. ಪರರ ಉಪಕಾರವನ್ನು ನೀವು ಸ್ಮರಿಸುವಿರಿ. ಅನವಶ್ಯವೆನಿಸಿದರೆ ಅಂತಹ ಖರ್ಚನ್ನು ಮಾಡಲೇ ಬೇಡಿ. ಹೊಸತನವನ್ನು ಇಷ್ಟಪಟ್ಟು ನಿಮ್ಮ ಜೀವನಶೈಲಿಯನ್ನು ಬದಲಿಸಿಕೊಳ್ಳುವ ಪ್ರಯತ್ನವನ್ನು ಮಾಡುವಿರಿ. ಭವಿಷ್ಯದ ಕುರಿತು ನಿಮಗೆ ನಿಮ್ಮದೇ ಕಲ್ಪನೆಗಳಿದ್ದು ಅದು ಸಾಕಾರಗೊಳ್ಳುವುದು.