
ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಆಷಾಢ, ಸೌರ ಮಾಸ : ಮಿಥುನ, ಮಹಾನಕ್ಷತ್ರ : ಪುನರ್ವಸು, ವಾರ : ಬುಧ, ಪಕ್ಷ : ಶುಕ್ಲ, ತಿಥಿ : ಪ್ರತಿಪತ್, ನಿತ್ಯನಕ್ಷತ್ರ : ಪುಷ್ಯಾ, ಯೋಗ : ವ್ಯಾಘಾತ, ಕರಣ : ನಾಗವಾನ್, ಸೂರ್ಯೋದಯ – 06 – 02 am, ಸೂರ್ಯಾಸ್ತ – 06 – 48 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 12:26 – 14:01, ಯಮಗಂಡ ಕಾಲ 07:38 – 09:14, ಗುಳಿಕ ಕಾಲ 10:50 – 12:26
ನಾಯಕ ಸ್ಥಾನದಿಂದ ನೀವು ಕೆಳಗಿಳಿಯುವ ಆಲೋಚನೆ ಮಾಡುವಿರಿ. ಹಣಕಾಸಿನಲ್ಲಿ ನಿಖರತೆ ಇರದು. ಸ್ನೇಹಿತರಿಂದ ಬೆಂಬಲ ಸಿಗುತ್ತದೆ. ಮನೆಗೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ನಿರತರಾಗಬಹುದು. ಆತ್ಮವಿಶ್ವಾಸ ಹೆಚ್ಚಾಗಿದ್ದು, ಕೆಲಸದಲ್ಲಿ ಉತ್ತೇಜನವೂ ಇರುವುದು. ಪೋಷಕರ ಸಲಹೆ ಮಹತ್ವದ್ದು. ಭವಿಷ್ಯದ ಯೋಜನೆ ರೂಪಿಸಿ. ಕಛೇರಿಯಲ್ಲಿ ಎಂದಿನ ಉತ್ಸಾಹವು ಇರುವುದಿಲ್ಲ. ಹತ್ತರ ಜೊತೆ ಹನ್ನೊಂದು ಆಗದಂತೆ ನೀವೇ ನೋಡಿಕೊಳ್ಳಬೇಕು. ಹೆಚ್ಚು ಶ್ರಮ ನೀವೇ ಸ್ವತಃ ಹಾಕಬೇಕಾಗುವುದು.
ಇಂದು ನಿಮ್ಮ ಸ್ನೇಹಿತರು ನಿಮಗೆ ಅಗತ್ಯವಾಗಿ ಬೇಕಾದ ಸಹಾಯವನ್ನು ಮಾಡುವರು. ಸಂಗಾತಿಯೊಂದಿಗೆ ಸಮಯ ಕಳೆಯುವ ಅವಕಾಶ. ನಿಮ್ಮ ಹಳೆಯ ಯೋಜನೆ ಪೂರ್ಣಗೊಳ್ಳುವ ದಿನ. ಆರೋಗ್ಯದಲ್ಲಿ ಚುರುಕು ಹೆಚ್ಚಾಗುತ್ತದೆ. ಮನಸ್ಸು ಶಾಂತವಾಗಿರುತ್ತದೆ. ನಿಮ್ಮ ಸಹೋದರರಿಂದ ನಿಮಗೆ ಬೆಂಬಲ ಸಿಗುತ್ತದೆ. ಸ್ನೇಹಿತರಿಂದ ಉಡುಗೊರೆ ಸಿಗಬಹುದು. ನಿಮ್ಮನ್ನು ವಿರೋಧಿಸುವವರ ನಡುವೆ ಬೆಳೆಯಲು ಹಂಬಲಿಸುವಿರಿ. ಇಂದು ಒಂಟಿಯಾಗಿ ಇರಬೇಕು ಎಂದು ಅನ್ನಿಸಬಹುದು.
ಉದ್ಯೋಗ ಸ್ಥಳದಲ್ಲಿ ಕಿರಿಕಿರಿಯ ಕಾರಣ ಕಾರ್ಯವು ಸೂಚಿಸದೇ ಬಹಳ ಜಡರಾಗುವಿರಿ. ನಿಗದಿತ ಕೆಲಸಗಳನ್ನು ಸಮಯಕ್ಕೆ ಮುಗಿಸುವುದು ಮುಖ್ಯ. ಅನಾವಶ್ಯಕ ವ್ಯಯದಿಂದ ದೂರವಿರಿ. ಕುಟುಂಬದಲ್ಲಿ ನಿಮಗೆ ಬೆಂಬಲ ಸಿಗುತ್ತದೆ. ಉದ್ಯೋಗದಲ್ಲಿ ಬದಲಾವಣೆಗಳು ಎದುರಾಗಬಹುದು. ಉದ್ಯಮವನ್ನು ಬೇರೆ ರೀತಿಯಲ್ಲಿ ಮುಂದುವರಿಸುವ ಕುರಿತು ಅಧಿಕಾರಿಗಳ ಜೊತೆ ಚರ್ಚಿಸುವಿರಿ. ಸಂಗಾತಿಯ ಜೊತೆ ಹಾರ್ದವಾದ ಮಾತುಕತೆಗಳು ನಿಮಗೆ ಖುಷಿ ಕೊಡದು.
ನಿಮ್ಮ ಪ್ರತಿ ಮಾತಿನ್ನೂ ಇನ್ನೊಬ್ಬರು ಗಮನಿಸುವರು. ಉತ್ತಮ ವರಮಾನ ವರನನ್ನು ಕೂಡ ಇರಬಹುದು. ಹೊಸ ಉದ್ಯಮಕ್ಕೆ ಉತ್ತಮ ದಿನ. ನಿಮ್ಮ ಶ್ರಮ ಫಲ ನೀಡಲಿದೆ. ಕುಟುಂಬದಲ್ಲಿ ಹಿರಿಯರ ಆರೋಗ್ಯ ಸುಧಾರಣೆಯ ಸೂಚನೆ. ಆತ್ಮೀಯರೊಂದಿಗೆ ಭೇಟಿ ಸಂತೋಷ ನೀಡಲಿದೆ. ಅನ್ಯಾಯದ ಮಾರ್ಗದಲ್ಲಿ ನೀವಿದ್ದರೆ ಮುಂದೆ ನೀವು ನಷ್ಟವನ್ನು ಕಷ್ಟವನ್ನೂ ಅನುಭವಿಸಬೇಕಾಗಬಹುದು. ಈಗಲೇ ಬೇಕಾದ ಕ್ರಮವನ್ನು ಕೈಗೊಳ್ಳಿ.
ಭವಿಷ್ಯದ ಬಗ್ಗೆ ಸರಿಯಾದ ದೃಷ್ಟಿಯು ಬೇಕೆನಿಸುವುದು. ಸಹೋದ್ಯೋಗಿಗಳಿಂದ ಬೆಂಬಲ ಸಾಧ್ಯತೆ. ದೂರದ ಸಂಬಂಧಿಯಿಂದ ಸಿಹಿಸುದ್ದಿ ನಿರೀಕ್ಷೆ. ಹಣದ ವಿಚಾರದಲ್ಲಿ ಖರ್ಚು ನಿಯಂತ್ರಣ ಬೇಕು. ಕೆಲಸದಲ್ಲಿ ಸವಾಲುಗಳನ್ನು ನಿಭಾಯಿಸಬೇಕಾದ ದಿನ. ಮನಸ್ಸಿಗೆ ಧೈರ್ಯ ತುಂಬಿಕೊಳ್ಳಿ. ಅಪಾಯದ ಮುನ್ಸೂಚನೆಯನ್ನು ಅರ್ಥಮಾಡಿಕೊಂಡು ಮುನ್ನಡೆಯಿರಿ. ನೌಕರರಿಗೆ ನಿಮ್ಮಿಂದ ಖುಷಿಯಾಗಲಿದೆ. ನಿಮ್ಮ ಕಾಯುವಿಕೆಯು ಸಾರ್ಥಕವಾಗಬಹುದು.
ಕುಟುಂಬದಲ್ಲಿ ಇರುವ ಸಂತೋಷದ ವಾತಾವರಣ ನಿಮ್ಮ ಉತ್ಸಾಹದಿಂದ ಇರುವಂತೆ ಮಾಡುವುದು. ಹಿರಿಯರ ಆಶೀರ್ವಾದ ನಿಮ್ಮ ಮೇಲೆ ಇರಲಿದೆ. ಯಾವುದೇ ಕಾರಣವಿಲ್ಲದೆ ಇತರರ ವಿಷಯಗಳಲ್ಲಿ ಹಸ್ತಕ್ಷೇಪ ಮಾಡಬೇಡಿ. ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರೆ ಉತ್ತಮ ಫಲಿತಾಂಶವು ಸಿಗಬಹುದು. ಬಗ್ಗೆಯೂ ಸುಮ್ಮನೆ ಆಡಿಕೊಳ್ಳುವುದು ಬೇಡ. ಮನೆಯ ಕಾರ್ಯಗಳು ಇಂದು ಅಧಿಕವಾಗಿ ಇರಬಹುದು.
ಆತ್ಮವಿಶ್ವಾಸದಿಂದ ಸಂಕಷ್ಟಗಳನ್ನು ಎದುರಿಸಬಹುದು. ಮನೆಗೆ ಸಂಬಂಧಪಟ್ಟ ಕೆಲಸಗಳಲ್ಲಿ ನಿರತರಾಗಬಹುದು. ದಂಪತಿಗಳ ನಡುವೆ ಒಡನಾಟ ಹೆಚ್ಚಾಗಲಿದೆ. ಪರಸ್ಪರ ಭಾವನೆಗಳಿಗೆ ಆದ್ಯತೆ ಕೊಡುವಿರಿ. ವೃತ್ತಿಜೀವನದಲ್ಲಿ ಯಶಸ್ಸನ್ನು ಪಡೆಯಲೇ ಬೇಕು ಎಂಬ ಮಹದಾಸೆ ನಿಮ್ಮಲ್ಲಿ ಇರಲಿದೆ. ಕೆಲವು ಮಾತುಗಳನ್ನು ಮನಸ್ಸಿಗೆ ಹಚ್ಚಿಕೊಂಡು ಸಂಕಟಪಡುವಿರಿ. ಸಾಲದಿಂದ ನಿಮಗೆ ಕಿರಿಕಿರಿಯಾಗುವುದು. ಓಡಾಟದ ಕಾರಣಕ್ಕೆ ವಾಹನವನ್ನು ಸಾಲ ಮಾಡಿ ಪಡೆಯುವಿರಿ.
ಮಕ್ಕಳು ವಿದ್ಯಾಭ್ಯಾಸದಲ್ಲಿ ಅನಿರೀಕ್ಷಿತ ಬೆಳವಣಿಯಾಗುವುದು ಖುಷಿ ಕೊಡುವುದು. ನೀವು ಸ್ವಲ್ಪ ಸಮಯದಲ್ಲಿ ಭೂ ವ್ಯವಹಾರವನ್ನು ಮಾಡಲು ಉತ್ತಮ ಗ್ರಾಹಕರು ಸಿಗಲಿದ್ದಾರೆ. ಬೇಡದ ಸಂಗತಿಗಳನ್ನು ಹೊರಗೆ ಕಳುಹಿಸಿ. ನಿಮ್ಮ ಕಾರ್ಯಚಟುವಟಿಕೆಯಿಂದ ಹಿರಿಯರ ಮೆಚ್ಚುಗೆ ಗಳಿಸಬಹುದು. ವ್ಯವಹಾರದಲ್ಲಿ ಲಾಭದ ಸೂಚನೆ. ಹಣದ ಮುಂಗಡ ಯೋಜನೆ ಮಾಡಿ. ವಿವಾಹಕ್ಕೆ ಸಂಬಂಧಿಸಿದಂತೆ ಕೆಲವು ನಿರ್ಧಾಗಳನ್ನು ನೀವು ತಪ್ಪಾಗಿ ತೆಗೆದುಕೊಳ್ಳುವಿರಿ. ಭೂಮಿಯ ವ್ಯವಹಾರಕ್ಕೆ ಆಪ್ತರನ್ನು ಜೋಡಿಸಿಕೊಳ್ಳಿ.
ಈ ದಿನ ನಿಮಗೆ ಅತ್ಯಂತ ಸುಂದರವಾಗಿ ಇರಲಿದೆ. ಆಧ್ಯಾತ್ಮಿಕ ಚಟುವಟಿಕೆಗಳು ನಿಮ್ಮ ಮನಸ್ಸಿಗೆ ಶಾಂತಿ ನೀಡಲಿವೆ. ಕೆಲಸದ ಒತ್ತಡ ಕಡಿಮೆಯಾಗಬಹುದು. ಕುಟುಂಬದ ಸಮಸ್ಯೆಗಳಿಗೆ ಪರಿಹಾರ ದೊರೆಯಬಹುದು. ವಿದ್ಯಾರ್ಥಿಗಳಿಗೆ ಇಂದು ಲಾಭದಾಯಕ ದಿನ. ನೀವು ಅನುಭವಿಸುತ್ತಿರುವ ಧನಾತ್ಮಕ ಶಕ್ತಿಯನ್ನು ಆನಂದಿಸಿ. ದೂರದೃಷ್ಟಿಯಿಂದ ಕೆಲಸವನ್ನು ಮಾಡಿ. ಹಳೆಯ ವಸ್ತುಗಳನ್ನು ಕೊಟ್ಟು ಹೊಸತನ್ನು ಪಡೆಯುವಿರಿ. ಉದ್ಯೋಗವಿಲ್ಲದೇ ಬೇಸರಗೊಂಡ ನಿಮಗೆ ಬೇರೆಕಡೆಯಲ್ಲಿ ಸಿಗುವುದು.
ಉದ್ಯೋಗದಲ್ಲಿ ಮೇಲಧಿಕಾರಿಗಳಿಂದ ನಿಮಗೆ ಅನಾನುಕೂಲ. ನಿಮ್ಮ ಮಾತುಗಳು ಇತರರ ಮೇಲೆ ಪ್ರಭಾವ ಬೀರುತ್ತವೆ. ಹೊಸ ಪರಿಚಯಗಳಿಂದ ಮುಂದಿನ ದಾರಿ ಸುಗಮವಾಗಿ ಸಾಗಬಹುದು. ಮನೆಯ ಕೆಲಸಗಳಲ್ಲಿ ನಿರತರಾಗುವ ಸಾಧ್ಯತೆ ಇದೆ. ಮಕ್ಕಳ ಬಗ್ಗೆ ಚಿಂತೆ ಕಡಿಮೆಯಾಗಲಿದೆ. ಸಂಗಾತಿಯಿಂದ ನಿಮಗೆ ಸಿಗುತ್ತಿರುವ ಬೆಂಬಲದ ಕೊರತೆಯಿಂದ ನೀವು ಸಿಟ್ಟಾಗುವಿರಿ. ಸರಳತೆಯನ್ನು ರೂಢಿಸಿಕೊಳ್ಳುವುದು ನಿಮಗೇ ಒಳ್ಳೆಯದು. ವಿಲಾಸಿ ಜೀವನದ ಕನಸಿನಲ್ಲಿ ಇರುವಿರಿ.
ನೆರೆ ಹೊರೆಯವರು ನಿಮಗೆ ಸಹಕಾರ ನೀಡದೇ ಕಷ್ಟವಾಗುವುದು. ಇಂದು ನಿಮ್ಮ ಮಾನಸಿಕ ಮತ್ತು ದೈಹಿಕ ಯೋಗ, ಕ್ಷೇಮವು ಚೆನ್ನಾಗಿರಲಿದೆ. ಸಣ್ಣ ವಿಷಯವನ್ನು ದೊಡ್ಡದಾಗಿ ಪರಿಗಣಿಸಬೇಡಿ. ಹಣದ ಲೆಕ್ಕಾಚಾರದಲ್ಲಿ ಗಮನ ಕೊಡಿ, ಬುದ್ದಿವಂತಿಕೆ ಇರಲಿ. ಕುಟುಂಬದ ಹಿರಿಯರ ಸಲಹೆ ಅನೇಕ ಸಮಸ್ಯೆಗಳನ್ನು ಪರಿಹರಿಸಬಹುದು. ನೀವು ಬಯಸಿದ್ದನ್ನು ಸಂಗಾತಿಯು ಸಾಧಿಸುತ್ತಾರೆ. ನಿಮ್ಮ ಪ್ರಗತಿಯ ಬಗ್ಗೆ ಸಿಂಹಾವಲೋಕನ ಮಾಡುವ ಅವಶ್ಯಕತೆ ಇದೆ.
ಅನಧಿಕೃತ ವಸ್ತುಗಳನ್ನು ನೀವು ಇನ್ನೊಬ್ಬರಿಗೆ ಹಸ್ತಾಂತರಿಸುವಿರಿ. ಅವರು ನಿಮಗೆ ನೋಡಿಕೊಳ್ಳುತ್ತಾರೆ. ಹೆಚ್ಚಿನ ನಿಮ್ಮ ನಿರ್ಧಾರಗಳು ಫಲ ನೀಡಲಿವೆ. ಕುಟುಂಬದ ಸದಸ್ಯರಿಂದ ಬೆಂಬಲ ಸಿಗಬಹುದು. ಹಣದ ವ್ಯವಹಾರದಲ್ಲಿ ಜಾಗರೂಕತೆ ಅಗತ್ಯ. ಸ್ನೇಹಿತರೊಂದಿಗೆ ಸಂತೋಷ ಹೆಚ್ಚಾಗುತ್ತದೆ. ಆರ್ಥಿಕ ಚಿಂತೆಗಳು ಸುಧಾರಣೆಯ ಹಾದಿಯಲ್ಲಿವೆ. ಇಂದಿನ ವ್ಯವಹಾರದಲ್ಲಿ ನಿಮಗೆ ತೊಡಕಿರುವುದು. ಮನೆಯ ಎಷ್ಟೋ ವಿಚಾರಗಳು ನಿಮಗೆ ಗೊತ್ತಾಗದೇ ಹೋಗಬಹುದು.
-ಲೋಹಿತ್ ಹೆಬ್ಬಾರ್ – 8762924271 (what’s app only)