AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿಯು ನಿಮಗೆ ಆಸಕ್ತಿಯ ವಿಷಯವಾಗಿದ್ದು ತೊಡಗಿಕೊಳ್ಳಲು ತೊಡಕುಗಳು ಇರಲಿದೆ

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಗ್ರೀಷ್ಮ ಋತುವಿನ ಶ್ರಾವಣ ಮಸ ಶುಕ್ಲ ಪಕ್ಷದ ಸಪ್ತಮೀ ತಿಥಿ ಗುರುವಾರ ವೈದ್ಯರಲ್ಲಿ ಚುರುಕು ತನ, ಆರ್ಥಿಕ ಅಸಮತೋಲನ, ಸಹಾಸದಿಂದ‌ ಗಾಯ, ಅತಿಯಾದ ಆಡಂಬರ‌ ಇವೆಲ್ಲ ಈ ದಿನದ ವಿಶೇಷ. ಇಂದು ಯಾವ ರಾಶಿಗಳ ಜನರ ಭವಿಷ್ಯ ಹೇಗಿರಲಿದೆ ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ.

ಕೃಷಿಯು ನಿಮಗೆ ಆಸಕ್ತಿಯ ವಿಷಯವಾಗಿದ್ದು ತೊಡಗಿಕೊಳ್ಳಲು ತೊಡಕುಗಳು ಇರಲಿದೆ
ಸಾಂದರ್ಭಿಕ ಚಿತ್ರ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ|

Updated on: Jul 31, 2025 | 1:52 AM

Share

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು: ವರ್ಷ, ಚಾಂದ್ರ ಮಾಸ: ಶ್ರಾವಣ, ಸೌರ ಮಾಸ: ಕರ್ಕಾಟಕ, ಮಹಾನಕ್ಷತ್ರ: ಪುಷ್ಯಾ, ವಾರ: ಗುರು, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಚಿತ್ರಾ, ಯೋಗ: ಶಿವ, ಕರಣ: ಕೌಲವ, ಸೂರ್ಯೋದಯ – 06 : 17 am, ಸೂರ್ಯಾಸ್ತ – 07 : 01 pm, ಇಂದಿನ ಶುಭಾಶುಭ ಕಾಲ: ರಾಹು ಕಾಲ 14:15 -15:50 ಗುಳಿಕ ಕಾಲ 09:28 – 11:04 ಯಮಗಂಡ ಕಾಲ 06:17 – 07:53

ತುಲಾ ರಾಶಿ: ದುಬಾರಿ ಉಪಕರಣಕ್ಕೆ ಹಾನಿಯು ಹೆಚ್ಚಿನ ವೆಚ್ಚಗಳಿಗೆ ಕಾರಣವಾಗಬಹುದು. ವ್ಯಾಪಾರ ಚಟುವಟಿಕೆಗಳನ್ನು ಸುಧಾರಿಸಬಹುದು. ನಿಮ್ಮ ಕ್ಷಣಿಕ ಕೋಪವೇ ಎಲ್ಲರ ಕೆಂಗಣ್ಣಿಗೆ ಗುರಿಯಾಗುವುದು. ಇಂದು ನಿಮ್ಮ ಸಮಾಜಮುಖೀ ಕಾರ್ಯಗಳಿಗೆ ಗೌರವ, ಪ್ರಶಂಸೆಗಳು ಸಿಗಲಿವೆ. ನೆರೆ-ಹೊರೆಯವರನ್ನು ಚೆನ್ನಾಗಿ ಇಟ್ಟುಕೊಳ್ಳಿ. ನಿಮ್ಮ ಕಾರ್ಯಕ್ಕೆ ವಿದೇಶದಿಂದ ಕರೆ ಬರಬಹುದು. ಸ್ನೇಹಿತರ ಜೊತೆ ವ್ಯವಹಾರ ಮಾಡುವಾಗ ಅಪನಂಬಿಕೆಗಳು ಬಾರದಂತೆ ಎಚ್ಚರವಹಿಸಿರಿ. ಸ್ವಂತ ವ್ಯವಹಾರದಲ್ಲಿ ನಷ್ಟವಾಗಬಹುದು. ನಿಮ್ಮವರನ್ನು ಕೆಳಗೆ ಬೀಳಲು ಕೊಡಲಾರಿರಿ. ನೌಕರರಿಗೆ ಹೆಚ್ಚು ಒತ್ತಡವಾಗಬಹುದು. ಕೃಷಿಯು ನಿಮಗೆ ಆಸಕ್ತಿಯ ವಿಷಯವಾಗಿದ್ದು ತೊಡಗಿಕೊಳ್ಳಲು ತೊಡಕುಗಳು ಇರಲಿದೆ. ನೀವು ತೆರಿಗೆಯ ವಿಚಾರದಲ್ಲಿ ಸರಿಯಾಗಿ ಇರಬೇಕಾಗಬಹುದು. ಹಿರಿಯರ ಮಾತನ್ನು ತಾತ್ಸಾರ ಮಾಡುವುದು ಬೇಡ. ಮಾತನ್ನು ಕಡಿಮೆ ಮಾಡಿ ಕಾರ್ಯದಲ್ಲಿ ತೋರಿಸಿ. ಅನಪೇಕ್ಷಿತ ವಿಚಾರದ ಬಗ್ಗೆ ಚರ್ಚೆ ಮಾಡಿ ಕಾಲಹರಣವಾಗುವುದು.

ವೃಶ್ಚಿಕ ರಾಶಿ: ಸಮೀಪದ ಸಂಬಂಧಿಗೆ ದೈಹಿಕವಾಗಿ ಮತ್ತು ಭಾವನಾತ್ಮಕವಾಗಿ ನಿಮ್ಮ ಸಹಾಯ ಬೇಕಾಗುತ್ತದೆ. ವ್ಯವಹಾರದಲ್ಲಿ ಸ್ವಲ್ಪ ಮಂದಗತಿ ಉಂಟಾಗಬಹುದು. ನಿಮ್ಮ ಹೆಸರನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡುವಿರಿ. ನೀವು ಅಂದುಕೊಂಡಿದ್ದು ಮಾತ್ರ ಸತ್ಯವಾಗಲಾರದು. ಅದಕ್ಕಿರುವ ಮುಖವನ್ನು ಗಮನಿಸಿ ತೀರ್ಮಾನಿಸಿ. ಸಾಲವಾಧೆ ಎದುರಾಗಲಿದ್ದು ಸಮಸ್ಯೆಯನ್ನು ಧೈರ್ಯದಿಂದ ನಿರ್ವಹಿಸಿ. ಉದ್ಯಮಕ್ಕೆ ಆರ್ಥಿಕ ನೆರವು ಸಿಗಲಿದೆ. ವೃತ್ತಿಯಲ್ಲಿ ಹೊಸ ಜವಾಬ್ದಾರಿಗಳು ಬರಲಿದ್ದು ಒಪ್ಪಿಕೊಳ್ಳುವಿರಿ. ಪ್ರಭಾವಶಾಲಿ ವ್ಯಕ್ತಿಯ ಭೇಟಿಯಾಗುವುದು. ವಿದ್ಯಾಭ್ಯಾಸದ ಓದಿನಲ್ಲಿ ಆಸಕ್ತಿ ಹೆಚ್ಚಾಗಬಹುದು.‌ ಸಾಮಾಜಿಕ ಕಾರ್ಯಕ್ರಮಗಳಲ್ಲಿ ತೊಡಗಿಕೊಳ್ಳುವಿರಿ. ಹಿರಿಯರಿಂದ ನಿಮ್ಮ ಕುಟುಂಬದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗುವುದು. ನಿಮ್ಮವರ ಮೇಲೆ ಬೇಸರವನ್ನು ವ್ಯಕ್ತಪಡಿಸುವಿರಿ. ಆಪ್ತರ ವಿಯೋಗವು ನಿಮ್ಮನ್ನು ಕುಗ್ಗಿಸಬಹುದು. ಅಧಿಕಾರದ ಬಗ್ಗೆ ವ್ಯಾಮೋಹವು ಕಡಿಮೆಯಾಗುವುದು. ನೀವು ಕಷ್ಟದಲ್ಲಿ ಸುಖವನ್ನು ಕಾಣುವ ಮಾರ್ಗವನ್ನು ಹುಡುಕಿಕೊಳ್ಳುವಿರಿ. ಕಳೆದಕೊಂಡ ನಿಮ್ಮ ವಸ್ತುವನ್ನು ಮತ್ತಾರದೋ ಮೂಲಕ ಪಡೆದುಕೊಳ್ಳುವಿರಿ.

ಧನು ರಾಶಿ: ಜನರ ಮೇಲೆ ನಿಮ್ಮ ಇಚ್ಛೆಯನ್ನು ಹೇರಲು ಪ್ರಯತ್ನಿಸದಿರುವುದು ಉತ್ತಮ. ವ್ಯವಹಾರದಲ್ಲಿ ಕಷ್ಟಪಟ್ಟು ಕೆಲಸ ಮಾಡುವ ಸಮಯ ಇದು. ಅಲ್ಪರ ಸಂಗದಿಂದ ಸ್ವಾಭಿಮಾನ ಧಕ್ಕೆ ಬರುವುದು. ಮುಜುಗರವನ್ನು ಎದುರಿಸಬೇಕಾಗಬಹುದು. ನಿಮ್ಮನ್ನು ಮಿತ್ರರನ್ನಾಗಿ ಮಾಡಿಕೊಳ್ಳಲು ಬಯಸಿದರೆ ನಕಾರಾತ್ಮಕ ಉತ್ತರವನ್ನು ಕೊಡಬೇಡಿ. ಪ್ರಾಮಾಣಿಕತೆಯಿಂದ ಯಶಸ್ಸು ಸಿಗಲಿದೆ. ಕೆಲಸದ ಮಧ್ಯದಲ್ಲಿಯೂ ಕುಟುಂಬದ ಆಗು ಹೋಗುಗಳತ್ತ ಗಮನಹರಿಸುವಿರಿ. ನಿಸ್ವಾರ್ಥಿಗಳಂತೆ ಕಂಡರೂ ವಂಚನೆಯ ಬುದ್ಧಿಯನ್ನು ಬೆಳೆಸಿಕೊಳ್ಳುವಿರಿ. ಹಳೆಯ ಸ್ನೇಹಿತರ ಜೊತೆ ಕಾಲ ಕಳೆಯುವಿರಿ. ಲೆಕ್ಕ ಪತ್ರಗಳನ್ನು ಪರಿಶೀಲನೆ ಮಾಡುವವರಿಗೆ ಹೆಚ್ಚು ಕೆಲಸ ದೊರೆಯುತ್ತದೆ. ಎಲ್ಲ ಕೆಲಸಗಳೂ ಏಕಕಾಲಕ್ಕೆ ಬರಬಹುದು. ನಿಮ್ಮ ಮೇಲಿನ ಭರವಸೆಯು ಸುಳ್ಳಾಗದೇ ಇರಲಿದೆ. ನೀವು ಬೇಕಾದ ಸಹಾಯವು ಸರಿಯಾದ ಸಮಯಕ್ಕೆ ಸಿಗುವುದು. ನಿಮ್ಮ ಮಾತಿಗೆ ಬೆಂಬಲವಿರುವುದು. ಹಳೆಯ ನೆನಪುಗಳು ನಿಮ್ಮ ಕಾಡುವುವು. ಶತ್ರುಗಳ ಹುನ್ನಾರದಲ್ಲಿ ಸಿಕ್ಕಿಬೀಳುವಿರಿ.

ಮಕರ ರಾಶಿ: ನಕಾರಾತ್ಮಕ ವಾತಾವರಣದಿಂದ ನಿಮ್ಮನ್ನು ರಕ್ಷಿಸಿಕೊಳ್ಳಿ. ಮೇಲಧಿಕಾರಿಗಳ ಮಾತನ್ನು ಲಘುವಾಗಿ ತೆಗೆದುಕೊಂಡು ಕೆಂಗಣ್ಣಿಗೆ ಗುರಿಯಾಗುವಿರಿ. ಕಾರ್ಯದ ಒತ್ತಡ ನಿಮ್ಮನ್ನು ಇಂದು ಬಂಧಿಸಿ ಇಡಲಿದೆ. ಹೊಸ ಕಾರ್ಯಗಳಿಗೆ ನೀವು ತರಬೇತಿ ಪಡೆಯುವಿರಿ. ಹೆಚ್ಚು ಜನರ ಸಂಪರ್ಕ ಮಾಡಬೇಕಾದ ಅನಿವಾರ್ಯತೆ ಬರಬಹುದು. ಧನ ಆದಾಯವು ನಿಮ್ಮ ನಿರೀಕ್ಷೆಯನ್ನು ತಲುಪಬಹುದು. ಸ್ನೇಹಿತರ ತಪ್ಪು ನಿಮ್ಮ ಮೇಲೆ ಬರಬಹುದು. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವವರು ಉತ್ತಮ‌ ಫಲಿತಾಂಶವನ್ನು ಪಡೆಯಬಹುದು. ವೃತ್ತಪರರಿಗೆ ಸಮಯಕ್ಕೆ ಸರಿಯಾಗಿ ಆಗಬೇಕಾದ ಕಾರ್ಯವು ಆಗದು. ಸಂಶೋಧನೆಯಲ್ಲಿ ಹೊಸ ಮಾರ್ಗವು ಕಾಣಿಸಿಕೊಳ್ಳುವುದು. ಸಮಯವೂ ಬದಲಾಗಲಿದ್ದು ಹೊಂದಿಕೊಳ್ಳುವುದು ಕಷ್ಟವಾದೀತು. ಆತ್ಮಿಯರ ಜೊತೆ ಮಾತುಕತೆಗೆ ಇಳಿಯುವಿರಿ. ದಾಂಪತ್ಯದಲ್ಲಿ ಸ್ವಪ್ರತಿಷ್ಠೆಯು ಕಾಣಿಸಿಕೊಳ್ಳಬಹುದು. ಮನೋಬಲವನ್ನು ಹೆಚ್ಚು ಮಾಡಿಕೊಳ್ಳಿ.

ಕುಂಭ ರಾಶಿ: ನಕಾರಾತ್ಮಕ ವಾತಾವರಣದಿಂದ ನಿಮ್ಮನ್ನು ರಕ್ಷಿಸಿಕೊಳ್ಳಿ. ಬೇಡದ ವಿಚಾರದ ಬಗ್ಗೆ ಚರ್ಚೆಗಳು ನಡೆಯಲಿವೆ. ಇಂದು ನಿಮ್ಮನ್ನು ಕಾಳಜಿ ಮಾಡುವವರ ಜೊತೆ ಸಮಯವನ್ನು ಕಳೆಯುವುದು ಉತ್ತಮ ಎನಿಸಬಹುದು. ದೂರದ ಪ್ರಯಾಣವನ್ನು ಆದಷ್ಟು ಕಡಿಮೆ ಮಾಡಿ. ಆರಂಭಿಸಿದ ಕಾರ್ಯಗಳಲ್ಲಿ ಸಫಲತೆ ಸಿಗಲಿದೆ. ಹಳೆಯ ಸಾಲಗಳನ್ನು ತೀರಿಸಿ ನೆಮ್ಮದಿಯಿಂದ ಇರುವಿರಿ.‌ ಆರ್ಥಿಕತೆಯ ಗೊಂದಲಕ್ಕೆ ಪರಿಹಾರ ದೊರೆಯುವುದು. ಸಂಗಾತಿಯ ಆದಾಯವನ್ನು ನೀವು ಪಡೆಯಬಯಸುವಿರಿ. ನೂತನ ವಾಹನವನ್ನು ಖರೀದಿಸುವಿರಿ.‌ ಹೆಚ್ಚಿನ ಆದಾಯಕ್ಕೆ ವೃತ್ತಿಯನ್ನು ಬದಲಿಸುವಿರಿ. ಸಮಯಕ್ಕೆ ಸರಿಯಾಗಿ ನಿದ್ರೆಯ ಅವಶ್ಯಕತೆ ಇರಲಿದೆ. ನಿಮ್ಮ ಜಾಣತನವೇ ನಿಮಗೆ ವರವಾಗಲಿದೆ. ನೀವು ಕೇಳಿದ ಸಾಲವು ನಿಮಗೆ ದೊರೆಯಬಹುದು. ಆಡಿದ ಮಾತಿಗೆ ಪಶ್ಚಾತ್ತಾಪಪಡಬೇಕಾದೀತು. ಖರ್ಚಿನ ವಿಚಾರದಲ್ಲಿ ಕೈ ಹಿಂದೆ ಮಾಡುವುದು ಒಳ್ಳೆಯದು. ಕಾರ್ಯದ ಪರಿಣತಿಯಿಂದ ನಿಮಗೆ ಉನ್ನತ ಸ್ಥಾನ ಮಾನ ಪ್ರಾಪ್ತಿ.

ಮೀನ ರಾಶಿ: ವೃತ್ತಿಪರ ಖ್ಯಾತಿಯ ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸುವ ಮೊದಲು ಅನುಭವಿ ವ್ಯಕ್ತಿಯನ್ನು ಸಂಪರ್ಕಿಸುವಿರಿ. ದೇವರಲ್ಲಿ ಭಕ್ತಿಯ ಕೊರತೆ ಕಾಣಿಸುವುದು. ನಿಮ್ಮ ಸಂಕೋಚದ ಸ್ವಭಾವದಿಂದ ಹೇಳಬೇಕಾದ ವಿಚಾರವನ್ನು ಹೇಳದೇ ಸುಮ್ಮನಾಗುವಿರಿ.‌ ಉದ್ಯಮದ ಸೃಷ್ಟಿಗೆ ಬೇಕಾದ ಬಂಡವಾಳವು ಸಿಗಲಿದೆ. ಇಂದು ಸಾಲ ಪಡೆದವರು ಮರಳಿ ನೀಡಲಿದ್ದಾರೆ. ಹೊಸ ಜೀವನ ಶೈಲಿಗೆ ಒಗ್ಗಿಕೊಳ್ಳುವುದು ಕಷ್ಟವಾಗಬಹುದು.‌ ಮನಸ್ಸನ್ನು ನಿಯಂತ್ರಿಸಲು ನಿಮಗೆ ಕಷ್ಟವಾದೀತು. ಭೂ ಲಾಭಕ್ಕಾಗಿ ಅನ್ಯ ಮಾರ್ಗವನ್ನು ಹಿಡಿಯುವಿರಿ. ಲೆಕ್ಕಪತ್ರಗಳನ್ನು ಸರಿಯಾಗಿ ಇಡಿ. ಸಾಮಾಜಿಕ ಕೆಲಸದಲ್ಲಿ ತೊಡಗಿಕೊಳ್ಳುವಿರಿ. ನಿಮ್ಮವರ ಬಗ್ಗೆ ನಿಮಗೆ ಪ್ರೀತಿ ಬರಬಹುದು. ಉದ್ಯೋಗದಲ್ಲಿ ನಿಮಗೆ ಹೆಚ್ಚಿನ ಅನುಕೂಲತೆಗಳು ಉಂಟಾಗಬಹುದು. ಮನಸ್ಸು ಹಾಳಾಗುವ ಸಾಧ್ಯತೆ ಇದೆ. ತಿರುಗಾಟದಲ್ಲಿರುವ ನಿಮ್ಮನ್ನು ಕಂಡು ಮನೆಯಲ್ಲಿ ಬೇಸರ ವ್ಯಕ್ತಪಡಿಸಬಹುದು. ನಿಮಗೆ ಅಧಿಕ‌ ಖರ್ಚು ಎಂದು ಕಂಡರೆ ಅದನ್ನು ಮಾಡದೇ ಇರುವುದು ಉತ್ತಮ. ಇಷ್ಟವಿಲ್ಲದಿದ್ದರೂ ನೀವು ಹಿರಿಯರ ಮಾತನ್ನು ಕೇಳಬೇಕಾಗುವುದು.

-ಲೋಹಿತ ಹೆಬ್ಬಾರ್-8762924271 (what’s app only)

ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್