AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿತ್ಯ ಭವಿಷ್ಯ : ಇಂದು ಈ ರಾಶಿಯವರ ಪ್ರಯಾಣದಲ್ಲಿ ಅವಘಡ ಸಂಭವಿಸುವುದು..

ಜುಲೈ 7, 2024ರ ನಿತ್ಯ ಭವಿಷ್ಯವು ನಿಮ್ಮ ರಾಶಿಫಲಗಳನ್ನು ಪ್ರಸ್ತುತಪಡಿಸುತ್ತದೆ. ಇಂದು ಕೆಲವರಿಗೆ ವೃತ್ತಿಯಲ್ಲಿ ಪ್ರಶಂಸೆ, ಇನ್ನೂ ಕೆಲವರಿಗೆ ಕೌಟುಂಬಿಕ ಭಿನ್ನಾಭಿಪ್ರಾಯಗಳ ಸಾಧ್ಯತೆ ಇದೆ. ಆರ್ಥಿಕ ಲಾಭ, ಆರೋಗ್ಯದತ್ತ ಗಮನ ಹರಿಸುವ ಅಗತ್ಯವಿದೆ. ವಿಶೇಷವಾಗಿ, ಕೆಲವು ರಾಶಿಯವರಿಗೆ ಪ್ರಯಾಣದಲ್ಲಿ ಅವಘಡ ಸಂಭವಿಸುವ ಸಾಧ್ಯತೆ ಇರುವುದರಿಂದ ಎಚ್ಚರಿಕೆ ವಹಿಸುವುದು ಉತ್ತಮ. ನಿಮ್ಮ ದಿನವನ್ನು ಯೋಜಿಸಲು ಈ ಭವಿಷ್ಯ ಸಹಕಾರಿಯಾಗಿದೆ.

ನಿತ್ಯ ಭವಿಷ್ಯ : ಇಂದು ಈ ರಾಶಿಯವರ ಪ್ರಯಾಣದಲ್ಲಿ ಅವಘಡ ಸಂಭವಿಸುವುದು..
Horoscope Today 07 July
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Jul 07, 2026 | 2:38 AM

Share

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ಗ್ರೀಷ್ಮ ಋತುವಿನ ನಿಜ ಜ್ಯೇಷ್ಠ ಮಾಸದ ಕೃಷ್ಣ ಪಕ್ಷದ ಅಷ್ಟಮೀ ತಿಥಿಯ ಮಂಗಳವಾರದಂದು ವರದಾನ, ಸ್ಪರ್ಧೆಗೆ ಸಿದ್ಧತೆ, ಹಿರಿಯರಿಂದ ಪ್ರಶಂಸೆ, ಕೊನೆಯ ಕ್ಷಣದಲ್ಲಿ ಸರಿ ನಿರ್ಧಾರ, ವಿಳಂಬ ಯೋಜನೆ, ನಿವೃತ್ತಿಯಿಂದ ಬೇಸರ, ಅಪರಿಚಿತರ ಕೋಪಕ್ಕೆ ಬಲಿ ಇವೆಲ್ಲ ಇಂದಿನ ಭವಿಷ್ಯ.

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ನಿಜ ಜ್ಯೇಷ್ಠ, ಸೌರ ಮಾಸ : ಮಿಥುನ, ಮಹಾನಕ್ಷತ್ರ : ಪುನರ್ವಸು, ವಾರ : ಮಂಗಳ, ಪಕ್ಷ : ಕೃಷ್ಣ, ತಿಥಿ : ಅಷ್ಟಮೀ, ನಿತ್ಯನಕ್ಷತ್ರ : ರೇವತೀ, ಯೋಗ : ಶೋಭನ, ಕರಣ : ಬವ, ಸೂರ್ಯೋದಯ – 06 – 00 am, ಸೂರ್ಯಾಸ್ತ – 06 – 49 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 15:37 – 17:13, ಯಮಗಂಡ ಕಾಲ 09:12 – 10:48, ಗುಳಿಕ ಕಾಲ 12:25 – 14:01

ಮೇಷ ರಾಶಿ :

ತೆರೆ ತೆರೆದರೆ ಬೆಳಕು, ತೆರೆಯದಿದ್ದರೆ ಕತ್ತಲು ಇರುತ್ತದೆ ಎನ್ನುವುದನ್ನು ಅರಿತುಕೊಳ್ಳಿ. ಸಂಗಾತಿಯ ಆಯ್ಕೆಯನ್ನು ನೀವೇ ಮಾಡಿ. ಪರಿಶ್ರಮವು ಎಂದಿಗಿಂತ ಅಧಿಕವಾಗಿದ್ದು, ಅದಕ್ಕೆ ಯೋಗ್ಯವಾದ ಫಲವು ಸಿಗುವುದು. ನಡೆಯುವಾಗ ಉಳುಕಿದ ಕಾಲು, ದೊಡ್ಡ ತೊಂದರೆಯನ್ನು ಮಾಡುವುದು. ವಾಹನ ಖರೀದಿಗೆ ಓಡಾಟ ಮಾಡಬೇಕಾದೀತು. ಯಾವ ಸಂತೋಷವೂ ಸುಮ್ಮನೇ ಸಿಕ್ಕದು. ಕರ್ತವ್ಯಕ್ಕೆ ನಿಮ್ಮ ಮನಸ್ಸನ್ನು ಕೊಟ್ಟುಕೊಳ್ಳುವಿರಿ. ಸಂಗಾತಿಯ ಜೊತೆ ದೂರ ಪ್ರಯಾಣ ಮಾಡುವಿರಿ.

ವೃಷಭ ರಾಶಿ :

ನಿಮ್ಮ‌ ಪ್ರಾಮಾಣಿಕ ಕೆಲಸಕ್ಕೆ ಅಧಿಕಾರಿಗಳಿಂದ ಪ್ರಶಂಸೆ ಸಿಗಲಿದೆ. ಮಿತ್ರರೆಂದು ಬಂದವರ ವಿಚಾರದಲ್ಲಿ ಜಾಗರೂಕತೆ ಇರಲಿ. ಕೆಟ್ಟ ವಾತಾವರಣದಿಂದ ಮುಕ್ತಿ ದೊರೆತಂತಹ ಅನುಭವ ನಿಮಗಿಂದು. ಮಾನಸಿಕವಾಗಿ ನಿಮಗೆ ನೆರೆಹೊರೆಯವರು ನೀರಿನ ವಿಚಾರಕ್ಕೆ ತೊಂದರೆ ಕೊಡಬಹುದು. ಕುಟುಂಬ ನಿರ್ವಹಣೆಯ ವಿಚಾರದಲ್ಲಿ ದಂಪತಿಗಳ ನಡುವೆ ಭಿನ್ನಾಭಿಪ್ರಾಯ ಬರಬಹುದು. ಕಛೇರಿಗೆ ಒಲ್ಲದ ಮನಸ್ಸಿನಿಂದ ಹೋಗುವಿರಿ. ವಿನೀತಭಾವವು ನಿಮ್ಮನ್ನು ಇಷ್ಟಪಡುವಂತೆ ಮಾಡಬಹುದು.

ಮಿಥುನ ರಾಶಿ :

ದಾಂಪತ್ಯ ಜೀವನವು ಜೀವನ್ಮರಣದ ಮಧ್ಯದಲ್ಲಿ ಒದ್ದಾಗುತ್ತಿದ್ದು ಬದುಕಿಸಿಕೊಳ್ಳಿ. ಸ್ತ್ರೀಯರು ಮನೆಯಲ್ಲಿ ಆದ ಘಟನೆಯಿಂದ ತಾಳ್ಮೆಯನ್ನು ಕಳೆದುಕೊಳ್ಳಬಾರದು. ಕಛೇರಿಯಲ್ಲಿ ಇಂದು ನಿಮ್ಮ ಅವಶ್ಯಕತೆ ಬಹಳವಾಗಿ ಕಾಣಿಸುವುದು. ಸಾಹಸ ಪ್ರವೃತ್ತಿಯಿಂದ ನಿನಗೆ ಯಶಸ್ಸು ಸಿಗಬಹುದು. ಸಂಗಾತಿಯ ಬಗ್ಗೆ ನೀವೇ ಇಲ್ಲದ ಮಾತನಾಡುವಿರಿ. ಮೋಜಿನ‌ ಆಟಕ್ಕೆ ಬಲಿಯಾಗುವ ಸಾಧ್ಯತೆ ಇದೆ. ಕಛೇರಿಯಲ್ಲಿ ಕೆಲವರ ವರ್ತನೆಯು ಬದಲಾದಂತೆ ತೋರುವುದು.

ಕರ್ಕಾಟಕ ರಾಶಿ :

ಯಾರ ಒತ್ತಾಯಕ್ಕೋ ಮಣಿದು ನಿಮ್ಮ ನಿರ್ಧಾರಗಳನ್ನು ಬದಲಿಸಿಕೊಳ್ಳಬೇಡಿ. ಕಛೇರಿಯಲ್ಲಿ ಉದ್ಯೋಗದ ಕಾರಣ ನಿಮ್ಮನ್ನು ದೂರದ ಊರಿಗೆ ಕಳುಹಿಸಬಹುದು. ಸಿಗದುದನ್ನು ಎಷ್ಟು ನೆನೆದರೂ ಪ್ರಯೋಜನವಾಗದು. ಸಮಯ ಬಂದಾಗ ತಾನಾಗಿಯೇ ನಿಮ್ಮದಾಗುವುದು. ಬಾಂಧವ್ಯವನ್ನು ಗಟ್ಟಿಯಾಗಿಸಲು ಇಷ್ಟಪಡುವಿರಿ. ನಿಮ್ಮ ಮಾತಿನ ವೇಗವನ್ನು ಅರ್ಥಮಾಡಿಕೊಳ್ಳಲು ಕಷ್ಟವಾದೀತು. ಕಛೇರಿಯಲ್ಲಿ ಸ್ತ್ರೀಯರಿಂದ ಸಹಕಾರವನ್ನು ಪಡೆಯುವಿರಿ.

ಸಿಂಹ ರಾಶಿ :

ಹೊಸ ಉದ್ಯೋಗವನ್ನು ಆರಂಭಿಸುವುದಿದ್ದರೆ ಒಳ್ಳೆಯದು. ಹೆಚ್ಚು ಮಾತನಾಡಿ ನಿಮ್ಮನ್ನು ನೀವೇ ಸಣ್ಣವರನ್ನಾಗಿ ಮಾಡಿಕೊಳ್ಳಬೇಡಿ. ನಾನಾ ಮೂಲಗಳಿಂದ ವಿವಿಧ ಸಂಪತ್ತುಗಳು ಬರಲಿದೆ. ದಾಂಪತ್ಯದಲ್ಲಿ ವಿರಸವು ನಷ್ಟವಾಗುವುದು. ಅಧಿಕ ಆದಾಯಕ್ಕೆ ನಿಮ್ಮ ಉದ್ಯಮವನ್ನು ವಿಸ್ತರಿಸುವಿರಿ. ತಣ್ಣೀರಾದರೂ ತಣಿಸಿ ಕುಡಿಯುವುದೇ ಒಳ್ಳೆಯದು. ನಿಮ್ಮ ಸಮಜಾಯಿಷಿಯ ಅಗತ್ಯವಿಲ್ಲ. ಖರೀದಿಯನ್ನು ನೀವು ಬಹಳ ಉತ್ಸಾಹದಿಂದ ಮಾಡುವಿರಿ. ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸಿ.

ಕನ್ಯಾ ರಾಶಿ :

ಅಪರೂಪಕ್ಕೆ ಕುಟುಂಬದಲ್ಲಿ ಸಣ್ಣ ಮಟ್ಟಿನ ಕಲಹವೂ ಆದೀತು. ತಂದೆ ತಾಯಿಗಳನ್ನು ಬಹಳ ಸಂತೋಷದಿಂದ‌ ನೋಡಿಕೊಳ್ಳುವಿರಿ. ರಾಜಕೀಯದ ಮನೋಭಾವ ನಿಮ್ಮಲ್ಲಿ ಜಾಗ್ರತಿ ಹೊಂದುವುದು. ಅವರು ಅಪೇಕ್ಷಿಸಿದ ಸ್ಥಳಕ್ಕೆ ಅವರನ್ನು ಕರೆದೊಯ್ಯುವಿರಿ. ನಿಮ್ಮ ಕೈಲಾದವರಿಗೆ ಸಹಾಯವನ್ನು ಮಾಡುವುದು ಒಳ್ಳೆಯದು. ನಿಮ್ಮ ಮಾತು ಇತರಿಗೆ ಹಗುರವಾಗಿ‌ ಅನ್ನಿಸುವುದು.

ತುಲಾ ರಾಶಿ :

ಕಾರ್ಯದ ನಿಮಿತ್ತ ವ್ಯರ್ಥ ಓಡಾಟವನ್ನು ಮಾಡುವಿರಿ. ನಿಮ್ಮ ಬಗ್ಗೆ ಸದ್ಭಾವನೆ ಇರುವವರು ನಿಮಗೆ ಶ್ರೇಯಸ್ಸನ್ನು ಹರಸುವರು. ಹಣಕಾಸಿನ ವಿಚಾರಕ್ಕೆ ಸಲ್ಲದ ಅಪವಾದ ಬಂದೀತು. ನಿಮ್ಮ ಸಮಸ್ಯೆಗಳನ್ನು ಆಪ್ತರ ಜೊತೆ ಹಂಚಿಕೊಳ್ಳುವುದು ಉತ್ತಮ. ಇಂದು ಕುಟುಂಬದ ಮಂಗಲ ಕಾರ್ಯದಲ್ಲಿ ಭಾಗಿಯಾಗುವಿರಿ. ನಿಮ್ಮ ಸಣ್ಣ ವಿಷಯಗಳೂ ಬೇಕಾದಷ್ಟು ಪ್ರಯೋಜನಕಾರಿ. ನಿಮ್ಮ ಇಂದಿನ ಸ್ಥಿತಿಯು ಅಭಿವೃದ್ದಿಗೆ ಹಲವಾರು ದಾರಿಗಳನ್ನು ಹುಡುಕುವಿರಿ.

ಇದನ್ನೂ ಓದಿ;  ಜುಲೈ ತಿಂಗಳಲ್ಲಿ ಈ ರಾಶಿಯವರಿಗೆ ಆರ್ಥಿಕ ಒತ್ತಡ, ವಿಪರೀತ ಕೋಪ; ಸಮಸ್ಯೆಗಳಿಂದ ಪಾರಾಗಲು ಇವೇ ನೋಡಿ ಸರಳ ಪರಿಹಾರಗಳು

ವೃಶ್ಚಿಕ ರಾಶಿ :

ಇಂದು ನಿಮ್ಮ ಪ್ರತಿಭೆಯ ಪ್ರದರ್ಶನವಾಗಲಿದೆ‌. ಸ್ನೇಹಿತರ ಜೊತೆ ಹೆಚ್ಚು ಕಾಲವನ್ನು ಕಳೆದು ನೋವನ್ನು ಹಂಚಿಕೊಳ್ಳುವರು. ಅಲ್ಪ ಆದಾಯದ ಉದ್ಯೋಗವು ನಿಮಗೆ ಬಲ ನೀಡುವುದು. ವಿದ್ಯುತ್ ಉಪಕರಣಗಳ ಮಾರಾಟವನ್ನು ನೀವು ಮಾಡುತ್ತಿದ್ದರೆ ಲಾಭವನ್ನು ಪಡೆಯಬಹುದಾಗಿದೆ. ನಿಮ್ಮಿಂದ ಆಗುವ ಕೆಲಸಕ್ಕೆ ಹೆಚ್ಚು ಒತ್ತು ಕೊಡಿ. ತೊಂದರೆಗೆ ಸಿಕ್ಕಿಕೊಳ್ಳಲು ನೀವೇ ಕಾರಣ. ಇದೇ ನಿಮಗೆ ಮುಳುವಾಗಬಹುದು. ಇನ್ನೊಬ್ಬರಿಗೆ ನಿಮ್ಮನ್ನು ಹೋಲಿಸಿಕೊಂಡು ಬೇಸರಿಸುವಿರಿ.

ಧನು ರಾಶಿ :

ನಿಮಗಾದ ವಂಚನೆಯನ್ನು ಸರಿ ಮಾಡಿಕೊಳ್ಳಲು ಕಾನೂನಿಗೆ ವಿರುದ್ಧವಾಗಿ ಹೋಗುವಿರಿ. ಇದನ್ನು ತಡೆಯುವವರ ಮೇಲೆ ಸಿಟ್ಟಾಗುವಿರಿ. ವ್ಯಾಪಾರದಲ್ಲಿ ಅಧಿಕಲಾಭವನ್ನು ಗಳಿಸಲಿದ್ದೀರಿ. ಸರ್ಕಾರಿ ಅಧಿಕಾರಿಗಳು ಸಂಕಷ್ಟದಲ್ಲಿ ಸಿಲುಕಿಕೊಳ್ಳುವರು. ಇಂದು ಪರರ ವಿಚಾರದಲ್ಲಿ ಹೆಚ್ಚು ಮನಸ್ಸು ಇರಲಿದೆ. ಮಾತಿನ‌ ಮೇಲೆ ಯಾರನ್ನೂ ಅಳೆಯಬೇಡಿ. ಜೀವನ ನಿರ್ವಹಣೆಗೆ ಮತ್ತೊಂದು ವೃತ್ತಿಯನ್ನು ಆಶ್ರಯಿಸುವ ಸಂಭವವೂ ಇದೆ. ಆಪ್ತರ ಬಗ್ಗೆ ಇರುವ ನಕಾರತ್ಮಕ ಭಾವವನ್ನು ನೀವು ಅವರಿಗೆ ಹೇಳುವಿರಿ.

ಮಕರ ರಾಶಿ :

ಹತಾಶೆಯಿಂದ ಹೊರಬಂದು ಒಳ್ಳೆಯ ಕಾರ್ಯದವನ್ನು ಮಾಡುವತ್ತ ಗಮನಹರಿಸಿ. ನಕಾರಾತ್ಮಕ ಭಾವನೆಗಳಿಗೆ ದಾರಿ ಮಾಡಿ ಕೊಡಬೇಡಿ. ಚಂಚಲಸ್ವಭಾವವನ್ನು ನಿಯಂತ್ರಿಸಲು ಕಷ್ಟವಾದೀತು.‌ ಅಲಂಕಾರಕಕ್ಕೆ ಹೆಚ್ಚು ಸಮಯ ಬೇಕಾಗುವುದು. ಆಕರ್ಷಣೆಯಿಂದ ಕೆಲವು ಲಾಭ ಜೀವನಕ್ಕೆ ಆಗುವುದು. ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ಮನಸ್ಸು ಮಾಡುವರು. ಮನೆಮಂದಿಯವರ ಜೊತೆ ಸಿಟ್ಟಗೊಂಡರೆ ನಿಮಗೇ ತೊಂದರೆಯಾದೀತು. ನಿಮ್ಮ ಇಂದಿನ ಕಾರ್ಯದಿಂದ ಕಛೇರಿಯಲ್ಲಿ ನಿರೀಕ್ಷೆ ಮೀರಿ ಪ್ರಶಂಸೆ ಸಿಗುವುದು.

ಕುಂಭ ರಾಶಿ :

ಯಾರ ಮೇಲೂ ದ್ವೇಷವನ್ನು ಸಾಧಿಸುವುದು ಬೇಡ. ಮನಸ್ಸು ಕೆಡುತ್ತದೆಯಷ್ಟೇ. ಇನ್ನೊಬ್ಬರು ಆಡುವ ಮಾತುಗಳು ಅಸತ್ಯವೆನಿಸುವುದು. ಕಾರ್ಯದಲ್ಲಿ ವಿಳಂಬಗತಿ ಇರುವುದು. ಧಾರ್ಮಿಕ ನಂಬಿಕೆಯನ್ನು ಬದಲಿಸುವರು. ನಂಬಿಕೆಯನ್ನು ಉಳಿಸಿಕೊಳ್ಳಲು ಬೇಕಾದ ಪ್ರಯತ್ನ ಮಾಡುವಿರಿ. ಯಶಸ್ಸಿಗೆ ಅಡ್ಡದಾರಿಯನ್ನು ಹುಡುಕಬೇಡಿ. ನೀವು ಖರೀದಿಸುವ ಭೂಮಿಯ ದಾಖಲೆಯನ್ನು ಸಮಾಧಾನಚಿತ್ತದಿಂದ ಕೂಲಂಕಷವಾಗಿ ಪರಿಶೀಲಿಸಿ.

ಮೀನ ರಾಶಿ :

ನಿಮ್ಮ ಬುದ್ಧಿ, ಮನಸ್ಸುಗಳಿಗೆ ಕೆಲಸವನ್ನು ಕೊಡಿ. ಸಂಗಾತಿಯ ಜೊತೆ ವಿವಾದವಾಗುವುದು. ಯಾವುದೇ ವಿವಾದವನ್ನು ಎಳೆದುಕೊಳ್ಳಬೇಡಿ. ಆದರ್ಶವನ್ನು ಹೇಳಿ ಪ್ರಯೋಜನವಾಗದು, ಮಾಡಿದರೆ ಹೆಚ್ಚು ಪರಿಣಾಮ ಬೀರುವುದು. ಆತ್ಮವಿಶ್ವಾಸವನ್ನು ಕಳೆದುಕೊಳ್ಳದೇ ಮುಂದೆ ಸಾಗಿರಿ. ಇಂದಿನ ಕಾರ್ಯವನ್ನು ಮುಂದೂಡುವುದು ಬೇಡ. ನಿಮ್ಮ ಗುಣಗಳನ್ನು ಇತರರು ಆಡಿಕೊಳ್ಳಬಹುದು. ಪೋಷಕರನ್ನು ಕಡೆಗಣಿಸಿದ್ದು ನಿಮಗೆ ಪಾಪಪ್ರಜ್ಞೆ ಕಾಡಬಹುದು.

-ಲೋಹಿತ್ ಹೆಬ್ಬಾರ್ – 8762924271 (what’s app only)

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂಡೋನೇಷ್ಯಾದಲ್ಲಿ ಭಾರತೀಯ ಶಾಸ್ತ್ರೀಯ ನೃತ್ಯದ ಮೂಲಕ ಸ್ವಾಗತ;ಮೋದಿ ಮೆಚ್ಚುಗೆ
ಇಂಡೋನೇಷ್ಯಾದಲ್ಲಿ ಭಾರತೀಯ ಶಾಸ್ತ್ರೀಯ ನೃತ್ಯದ ಮೂಲಕ ಸ್ವಾಗತ;ಮೋದಿ ಮೆಚ್ಚುಗೆ
ಖಡ್ಗ ಕೈಯಲ್ಲಿ ಹಿಡಿದು ‘ಪಿನಾಕ’ ಟೀಸರ್ ಬಿಡುಗಡೆ ಮಾಡಿದ ನಟ ಗಣೇಶ್
ಖಡ್ಗ ಕೈಯಲ್ಲಿ ಹಿಡಿದು ‘ಪಿನಾಕ’ ಟೀಸರ್ ಬಿಡುಗಡೆ ಮಾಡಿದ ನಟ ಗಣೇಶ್
ಬೆಂಗಳೂರಲ್ಲಿ ರ್‍ಯಾಪಿಡೋ ಚಾಲಕನ ಎಡವಟ್ಟಿನಿಂದ ಆಸ್ಪತ್ರೆ ಸೇರಿದ ಯುವತಿ
ಬೆಂಗಳೂರಲ್ಲಿ ರ್‍ಯಾಪಿಡೋ ಚಾಲಕನ ಎಡವಟ್ಟಿನಿಂದ ಆಸ್ಪತ್ರೆ ಸೇರಿದ ಯುವತಿ
ಇಂಡೋನೇಷ್ಯಾ ತಲುಪಿದ ಪ್ರಧಾನಿ ನರೇಂದ್ರ ಮೋದಿ; ಸರ್ಕಾರಿ ಗೌರವದ ಸ್ವಾಗತ
ಇಂಡೋನೇಷ್ಯಾ ತಲುಪಿದ ಪ್ರಧಾನಿ ನರೇಂದ್ರ ಮೋದಿ; ಸರ್ಕಾರಿ ಗೌರವದ ಸ್ವಾಗತ
ಈ ತಿಂಗಳ ಅಂತ್ಯದಲ್ಲಿ ಕ್ಯಾಬಿನೆಟ್ ವಿಸ್ತರಣೆ
ಈ ತಿಂಗಳ ಅಂತ್ಯದಲ್ಲಿ ಕ್ಯಾಬಿನೆಟ್ ವಿಸ್ತರಣೆ
ಗುಂಪು ಸೇರಿಸಿ SIR ಮಾಡ್ತಿರುವ ಸ್ಥಳಕ್ಕೆ ಮಾಜಿ ಸಂಸದರ ಸಪ್ರೈಸ್​​ ಎಂಟ್ರಿ!
ಗುಂಪು ಸೇರಿಸಿ SIR ಮಾಡ್ತಿರುವ ಸ್ಥಳಕ್ಕೆ ಮಾಜಿ ಸಂಸದರ ಸಪ್ರೈಸ್​​ ಎಂಟ್ರಿ!
ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ: ಸಚಿವ ಖಾದರ್​​
ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ: ಸಚಿವ ಖಾದರ್​​
ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ, ಬೆಳಗಾವಿಯಲ್ಲಿ ಪರಿಸ್ಥಿತಿ ಹೇಗಿದೆ?
ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ, ಬೆಳಗಾವಿಯಲ್ಲಿ ಪರಿಸ್ಥಿತಿ ಹೇಗಿದೆ?
ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು HMT ವಾಚ್​ ತಯಾರಾಗುತ್ತೆ ಗೊತ್ತಾ?
ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು HMT ವಾಚ್​ ತಯಾರಾಗುತ್ತೆ ಗೊತ್ತಾ?
ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದ ಅಕ್ರಮವಾಗಿ SIR: ಪ್ರಲ್ಹಾದ್ ಜೋಶಿ
ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದ ಅಕ್ರಮವಾಗಿ SIR: ಪ್ರಲ್ಹಾದ್ ಜೋಶಿ