Horoscope Today 12 June: ಇಂದು ಈ ರಾಶಿಯವರು ತಮ್ಮ ಪ್ರಭಾವವನ್ನು ಬಳಸುವಲ್ಲಿ ಎಡವುವರು

ನಿತ್ಯ ಭವಿಷ್ಯ : ಜೂನ್ 12, 2026 ರ ಇಂದಿನ ರಾಶಿ ಭವಿಷ್ಯ! ನಿಮ್ಮ ದೈನಂದಿನ ಜ್ಯೋತಿಷ್ಯ ಫಲಗಳನ್ನು ಇಲ್ಲಿ ತಿಳಿದುಕೊಳ್ಳಿ. ಈ ದಿನವು ಕೆಲವು ರಾಶಿಗಳಿಗೆ ಸವಾಲುಗಳನ್ನು ತಂದರೆ, ಇನ್ನು ಕೆಲವು ರಾಶಿಗಳಿಗೆ ಅದೃಷ್ಟ ಮತ್ತು ಹೊಸ ಅವಕಾಶಗಳನ್ನು ತರಲಿದೆ. ಪ್ರೀತಿ, ವೃತ್ತಿ, ಹಣಕಾಸು ಮತ್ತು ಆರೋಗ್ಯಕ್ಕೆ ಸಂಬಂಧಿಸಿದಂತೆ ನಿಮ್ಮ ದಿನ ಹೇಗಿರಲಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ. ಪ್ರತಿದಿನದ ನಿಮ್ಮ ಭವಿಷ್ಯವನ್ನು ತಿಳಿದು, ದಿನವನ್ನು ಯಶಸ್ವಿಯಾಗಿ ಎದುರಿಸಿ.

Horoscope Today 12 June: ಇಂದು ಈ ರಾಶಿಯವರು ತಮ್ಮ ಪ್ರಭಾವವನ್ನು ಬಳಸುವಲ್ಲಿ ಎಡವುವರು
Horoscope Today, June 12, 2026
Image Credit source: Tv9 kannada
Edited By:

Updated on: Jun 12, 2026 | 3:08 AM

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ಮೃಗಶಿರಾ, ವಾರ : ಶುಕ್ರ, ಪಕ್ಷ : ಕೃಷ್ಣ, ತಿಥಿ : ದ್ವಾದಶೀ, ನಿತ್ಯನಕ್ಷತ್ರ : ಭರಣೀ, ಯೋಗ : ಸೌಭಾಗ್ಯ, ಕರಣ : ತೈತಿಲ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 51 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 10:47 – 12:24, ಯಮಗಂಡ ಕಾಲ 15:38 – 17:15, ಗುಳಿಕ ಕಾಲ 07:34 – 09:11

ಮೇಷ ರಾಶಿ :

ನಿಮ್ಮನ್ನು ಬುದ್ಧಿಯನ್ನು ಯಾರಾದರೂ ಬಳಸಿಕೊಂಡು ಕೈಬಿಡಬಹುದು. ನೀವಿಂದು ಮಂಗಲಕಾರ್ಯಗಳಿಗೆ ಹಣವನ್ನು ನೀಡುವಿರಿ. ಪರರಿಂದ ಆದ ಪ್ರಚೋದನೆಯು ತಾತ್ಕಾಲಿಕವಾಗಿ ಉಪಶಮನವಾಗಲಿದೆ. ಯೋಜನೆಯನ್ನು ಸಾಕಾರಗೊಳಿಸಲು ಒಳ್ಳೆಯ ಕಾಲ ದುಡಿಮೆಗೆ ತಕ್ಕ ಫಲ ಸಿಗಲಿದೆ. ವಿದ್ಯಾಭ್ಯಾಸದ ಬಗದಗೆ ಅತಿಯಾದ ಚಿಂತೆ ಬೇಡ. ಆಗುವುದು ಆಗಿಯೇ ಆಗುವುದು ಎಂಬ ಸತ್ಯ ತಿಳಿದಿರಿಲಿ. ಆರೋಗ್ಯವು ಹಾಳಾಗಬಹುದು.

ವೃಷಭ ರಾಶಿ :

ಆದಾಯವನ್ನು ಭೂಮಿಯ ಖರೀದಿಗೆ ಹಾಕುವ ಯೋಜನೆ ಬರುವುದು. ನಿಮ್ಮನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಲ್ಲ ಕಡೆ ಎಂದು ಅನ್ನಿಸುತ್ತಿರಬಹುದು. ಅದನ್ನು ಆಲೋಚನೆಯಿಂದ ದೂರವಿರಿಸಿ. ಸಿಗುವ ಮನ್ನಣೆಯು ಮತ್ತೇನನ್ನೋ ಬಯಸುವ ಸಂದೇಹ ಬರಲಿದೆ. ಸೌಂದರ್ಯಪ್ರಜ್ಞೆಯು ನಿಮಗೆ ವರದಾನವೆಂದೇ ತಿಳಿಯುತ್ತದೆ. ನಿಮ್ಮ ಬಗ್ಗೆ ನಿಮ್ಮ ಶತ್ರಗಳು ವಿವರವನ್ನು ಕಲೆಹಾಕಬಹುದು. ಅತಿಯಾದ ನಿರ್ಲಕ್ಷ್ಯ ಬೇಡ.

ಮಿಥುನ ರಾಶಿ :

ಇಂದು ನಿಮ್ಮ ಸ್ವಂತ ವಾಹನದಲ್ಲಿ ಪ್ರಯಾಣ ಅನಿವಾರ್ಯವಾಗಬಹುದು, ಇಂದು ಎಲ್ಲಿಗೂ ಪ್ರಯಾಣ ಮಾಡಬೇಡಿ. ಯಾರಿಂದಲಾದರೂ ನಿಮಗೆ ಮುಖ್ಯ ಸ್ಥಾನ ದೊರೆಯಬಹುದು. ಒಳ್ಳೆಯ ಮನಸ್ಸಿನ ಪ್ರಯತ್ನಕ್ಕೆ ದೈವಾನುಕೂಲ ಲಭಿಸುವುದು. ಹಣಕಾಸಿನಲ್ಲಿ ಬಂಡವಾಳ ಹೂಡಿಕೆಗೆ ಸಮಯ ಸೂಕ್ತ. ಕುಟುಂಬದಲ್ಲಿ ಸಂತೋಷದ ಕ್ಷಣಗಳ ಅನುಭವ. ದೀರ್ಘಕಾಲದ ಅನಂತರ ಸ್ನೇಹಿತರ ಜೊತೆ ಭೇಟಿಯಾಗಬಹುದು.

ಕರ್ಕಾಟಕ ರಾಶಿ :

ಅಭಾವದ ಕಾರಣ ಅಧ್ಯಾತ್ಮದಲ್ಲಿ ಒಲವು ಮೂಡಬಹುದು. ನಿಮಗೆ ಗೌರವ ಸಿಗದ ಜಾಗದಲ್ಲಿ ಹೆಚ್ಚು ಕಾಲ ಇರಲಾರಿರಿ. ಮಕ್ಕಳಿಂದ ಸಂತೋಷ ಸಿಗುತ್ತದೆ. ಪ್ರಯಾಣದ ಸಾಧ್ಯತೆಯೂ ಇದೆ. ಆದರೆ ಸಂಜೆ ಸಮಸ್ಯೆಗಳು ಹೆಚ್ಚಾಗಬಹುದು. ಬಂಧುಗಳ ಮನೆಗೆ ಅತಿಥಿಯಾಗಿ ಆಹ್ವಾನ ಬರಬಹುದು. ಅಪಕ್ವಮನುಷ್ಯರ ಜೊತೆ ಮಾತುಕತೆಗಳು ಬೇಡ. ಅಪಮಾನವಾದೀತು. ಸಮಾರಂಭಗಳಲ್ಲಿ ಬಂಧುಗಳು ನಿಮ್ಮನ್ನು ಭೇಟಿಯಾಗುವರು.

ಸಿಂಹ ರಾಶಿ :

ನಿಮ್ಮ ಕೆಲಸದ ಸ್ಥಳದಲ್ಲಿ ಸವಾಲುಗಳಿದ್ದು ಸಹಕಾರದ ಅಗತ್ಯವಲಿದೆ ಹಣಕಾಸಿನಲ್ಲಿ ಚಿಕ್ಕ ಶ್ರಮದಿಂದ ಲಾಭ ಸಾಧ್ಯ. ನಿಮ್ಮಿಂದ ಬಯಸಿದ್ದನ್ನು ನೀಡುವುದು ಕಷ್ಟ. ಸ್ನೇಹಿತರಿಂದ ಖುಷಿಯ ಸುದ್ದಿ ಕೇಳಬಹುದು. ಮನಸ್ಸು ಶಾಂತವಾಗಿರಿಸಲು ಪ್ರಯತ್ನಿಸಿ. ಅನಿರೀಕ್ಷಿತವಾಗಿ ಬಂಧುಗಳ ಭೇಟಿಯಾಗಲಿದೆ. ಆದರೂ ನಿಮ್ಮ ಯೋಜಿತವಾದ ಕಾರ್ಯಗಳು ನಿರ್ಬಿಡೆಯಿಂದ ಸಾಗುವುದು. ಪ್ರಭಾವಿ ವ್ಯಕ್ತಿತ್ವವು ನಿಮಗೆ ಅನುಸರಣೀಯವಾಗಬಹುದು.

ಕನ್ಯಾ ರಾಶಿ :

ಯಾರ ಒತ್ತಡಕ್ಕೂ ತಲೆಬಾಗದೇ ಇದ್ದರೆ ನಿಮ್ಮನ್ನು ಅನ್ಯರೀತಿಯಲ್ಲಿ ನೋಡಬಹುದು. ವರ್ಗಾವಣೆಗಾಗಿ ಕಾಯುತ್ತಿದ್ದವರಿಗೆ ಒಳ್ಳೆಯ ಸುದ್ದಿ ಸಿಗಬಹುದು. ವಿದೇಶದಲ್ಲಿ ಅವಕಾಶಗಳು ಸಿಗುವ ಸಾಧ್ಯತೆ ಇದೆ. ಬಾಂಧವ್ಯ ಸ್ಥಿರತೆಗೆ ಬದ್ಧಮನಸ್ಸಿರುವುದು. ಅವುಗಳಿಂದ ದೂರವಿರುವುದು ಉಚಿತ. ನಿಮ್ಮ ಅಹಂಕಾರಕ್ಕೆ ಪೆಟ್ಟುಬೀಳುವುದು. ಯಾವ ವಿವರಗಳನ್ನೂ ಕೊಡಬೇಡಿ. ಅದನ್ನು ಹೊಂದಿಸುವುದು ಕಷ್ಟವಾದೀತು. ವಾಗ್ವಾದವಾಗುವುದೆಂಬ ಭಯವೂ ನಿಮ್ಮನ್ನು ಕಾಡುವುದು.

ತುಲಾ ರಾಶಿ :

ನೀವು ಏನೂ ಗೊತ್ತಿಲ್ಲದವರಂತೆ ವರ್ತಿಸಿ, ಮುಂಬರುವ ಸಂಕಟದಿಂದ ಬಚಾವಾಗುವಿರಿ. ನಿರ್ಧಾರಗಳ ಮೇಲೆ ಸ್ಥಿರವಾಗಿರುವುದು ಯಶಸ್ಸು ತರುತ್ತದೆ. ಹಣಕಾಸಿನಲ್ಲಿ ಸುಧಾರಣೆಯಾಗುವ ಸಾಧ್ಯತೆ ಇದೆ. ಪರರ ಸಂಪತ್ತಿನ ಬಗ್ಗೆ ಆಸೆ ಬೇಡ. ಕುಟುಂಬದ ಸದಸ್ಯರೊಂದಿಗೆ ಆಸ್ತಿಯ ವಿಚಾರವಾಗಿ ಸುದೀರ್ಘ ಚರ್ಚೆ. ಯಾರಮೇಲಾದರೂ ಪ್ರೀತಿಯು ಉಂಟಾಗಬಹುದು. ಸುಮ್ಮನೇ ಕುಳಿತು ಸಮಯವನ್ನು ವ್ಯರ್ಥಮಾಡಬೇಡಿ.

ವೃಶ್ಚಿಕ ರಾಶಿ :

ಸ್ನೇಹಿತರು ನಿಮಗೆ ಉತ್ತಮ ಕೆಲಸ ಹಾಗು ಸಂಬಳದ ಸ್ಥಳವನ್ನು ತಿಳಿಸಬಹುದು. ನಿರೀಕ್ಷೆ ಇಟ್ಟುಕೊಳ್ಳುವುದರಿಂದ ನಿರಾಶೆ. ನಿರ್ಧಾರಗಳನ್ನು ತಾಳ್ಮೆಯಿಂದ ತೆಗೆದುಕೊಳ್ಳಿ. ಯಾರದೋ ಸಂತೋಷಕ್ಕೆ ನೀವು ಬಲಿಯಾಗುವ ಸಂದರ್ಭ ಬರಬಹುದು. ಹಣಕಾಸಿನ ವಿಚಾರದಲ್ಲಿ ಉತ್ತಮ ಅವಕಾಶ ಸಿಗಬಹುದು. ಓಡಾಟ ಬೇಡವೆಂದು ಕುಳಿತ ನಿಮಗೆ ಅನಿವಾರ್ಯದ ಪ್ರಯಾಣವು ಬರಲಿದೆ. ಅಪರಿಚಿತರ ವ್ಯವಹಾರದಲ್ಲಿ ಎಷ್ಟೇ ಜಾಣ್ಮೆಯಿದ್ದರೂ ಸಾಲದು.‌

ಧನು ರಾಶಿ :

ಕುಟುಂಬದವರ ಜೊತೆ ಭಾವನಾತ್ಮಕ ಮಾತುಕತೆ ನಡೆಯಬಹುದು. ಯಾವುದೇ ಕಠಿಣ ಪರಿಸ್ಥಿತಿಯಲ್ಲಿ ಶಾಂತಿ ಮತ್ತು ತಾಳ್ಮೆಯನ್ನು ಕಾಪಾಡಿಕೊಳ್ಳಿ, ಹಣಕಾಸು ಸ್ಥಿತಿ ಸ್ಥಿರವಾಗಿರುತ್ತದೆ. ಸ್ನೇಹಿತರಿಂದ ಸಹಾಯ ನಿರೀಕ್ಷಿಸಬಹುದು. ಉದ್ವೇಗದ ಮಾತುಗಳು ನಿಮ್ಮ ಮಾನಸಿಕ ಸ್ಥಿತಿಯನ್ನು ತೋರಿಸುತ್ತದೆ. ಕುಟುಂಬದವರು ನಿಮ್ಮನ್ನು ಬಹಳ ಪ್ರೀತಿಸುವರು. ಅವರಿಗೆ ಸ್ವಲ್ಪ ಸಮಯ ಕೊಡಿ. ಹಣವನ್ನು ಉಳಿಸಲು ಪ್ರಯತ್ನಶೀಲರಾಗುವಿರಿ.

ಮಕರ ರಾಶಿ :

ಇದನ್ನೂ ಓದಿ: ಕೇತುವಿನ ಮೇಲಿದೆ ಕುಜನ ದೃಷ್ಟಿ: ಯಾರಿಗೆ ಒಲಿಯಲಿದೆ ಪೂರ್ಣ ರಾಜಯೋಗ? ಯಾರಿಗೆ ಧನಲಾಭ?

ನಿಮ್ಮನ್ನು ಇಷ್ಟಪಟ್ಟವರಿಗೆ ಇಂದು ನಿಮ್ಮಿಂದ‌ ಅಸಮಾಧಾನವಾಗುವ ಸಾಧ್ಯತೆ ಇದೆ. ಬೇರೆ ಬೇರೆ ಕ್ಷೇತ್ರಗಳಲ್ಲಿ ಶೋಧನೆ ಮಾಡುವ ಸಂಭವ ಬರಲಿದೆ. ನಿಮ್ಮ ಮಾತುಗಳೇ ನಿಮ್ಮ ಶಕ್ತಿ ಸಾಮಾಜಿಕ ವಲಯದಲ್ಲಿ ಮೆರೆಯುವ ಅವಕಾಶ ಇದೆ. ಉದ್ಯೋಗದಲ್ಲಿ ಉನ್ನತಿ ಸೂಚನೆಗಳು ಸಿಗಬಹುದು. ಅತಿಯಾದ ಭಾವನೆಗಳಿಂದ ದೂರವಿರಿ. ಹಣದ ವಿಚಾರದಲ್ಲಿ ದಿಟ್ಟ ನಿರ್ಧಾರ ತೆಗೆದುಕೊಳ್ಳುವುದು ಒಳಿತು. ಕೃಷಿಯಲ್ಲಿ ಲಾಭ ಗಳಿಸಬೇಕೆಂದು ನಾನಾ ಪ್ರಯತ್ನವನ್ನು ಮಾಡುವಿರಿ.

ಕುಂಭ ರಾಶಿ :

ಮನೆಯವರ ಸಹಾಯವು ಅನಿವಾರ್ಯ ಸ್ಥಿತಿ ಬಂದಾಗ ಸಿಗಲಿದೆ. ಅನಿರೀಕ್ಷಿತ ಲಾಭದಿಂದ ದಾರಿ ತಪ್ಪಬಹುದು. ಮನೆಯವರ ಜೊತೆ ಹೆಚ್ಚು ಸಮಯವನ್ನು ಕಳೆಯಲು ಇಚ್ಛಿಸುವಿರಿ. ಆತ್ಮೀಯರ ಸಹಾಯದಿಂದ ಸಮಸ್ಯೆಗಳ ಪರಿಹಾರ ಸಿಗುತ್ತದೆ. ಹಣದ ವ್ಯವಹಾರಗಳಲ್ಲಿ ಎಚ್ಚರಿಕೆ ಅಗತ್ಯ. ವಿದೇಶದಿಂದ ಉದ್ಯೋಗಕ್ಕೆ ಕರೆ ಬರಲಿದೆ. ಬೇಸರಿಸದೇ ಬಂದುದನ್ನು ಬಂದಂತೆ ಎದುರಿಸವುದು ನಿಮಗೆ ಸ್ವಭಾವಸಿದ್ಧ. ನೀವು ಬಯಸಿದ ಕೆಲಸವನ್ನು ಮಾಡುವಿರಿ.

ಮೀನ ರಾಶಿ :

ಯೋಗ ಹಾಗೂ ಧ್ಯಾನದಿಂದ ಶ್ರಮದ ಪರಿಹಾರವಾಗಲಿದೆ. ಆರ್ಥಿಕವಾಗಿ ನಷ್ಟ ಎದುರಾಗುವುದು. ಇಂದಿನ ನಿಮ್ಮ ಕರ್ಮಕ್ಕೆ ಅನ್ಯರ ಸಹಕಾರ ಇರದು. ಕುಟುಂಬದೊಂದಿಗೆ ಸಮಯ ಕಳೆಯುವುದರಿಂದ ಮನಸ್ಸಿಗೆ ಶಾಂತಿ ಸಿಗಬಹುದು. ದೂರದ ಗೆಳೆಯರಿಂದ ಶುಭ ಸುದ್ದಿ ಬರುತ್ತದೆ. ಧಾರ್ಮಿಕ ಕ್ಷೇತ್ರದವರಿಗೆ ಹೊಸ ಅವಕಾಶ. ವೃತ್ತಿಯ ಸ್ಥಳದಲ್ಲಿ ನೀವು ಸಂತೋಷವಾಗಿ ಕೆಲಸಮಾಡುವಿರಿ. ಸ್ನೇಹಿತರ ಮಾತಿನಿಂದ ವಿದೇಶಕ್ಕೆ ಹೋಗುವ ಆಸೆ ಅತಿಯಾಗುವುದು.

-ಲೋಹಿತ್ ಹೆಬ್ಬಾರ್ – 8762924271 (what’s app only)

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಲೋಹಿತ ಹೆಬ್ಬಾರ್​, ಇಡುವಾಣಿ

ವಿದ್ವಾನ್​ ಲೋಹಿತ ಶರ್ಮಾ. ಸಾಗರ ಮೂಲದ ಇಡುವಾಣಿ ಗ್ರಾಮ. ವೇದ ಹಾಗೂ ಸಂಸ್ಕೃತ ಅಧ್ಯಯನ, ಜ್ಯೋತಿಷ್ಯದಲ್ಲಿ ವಿದ್ವತ್ತನ್ನು ಸಂಪಾದಿಸಿರುತ್ತಾರೆ. ಹಸ್ತಪ್ರತಿಶಾಸ್ತ್ರದಲ್ಲಿ ಡಿಪ್ಲೋಮಾ ಮಾಡಿರುತ್ತಾರೆ. ಜ್ಞಾನ-ವಿಜ್ಞಾನ ಅಧ್ಯಯನ ಕೇಂದ್ರ ಬೆಂಗಳೂರಿನಲ್ಲಿ ಸಂಶೋಧಕರಾಗಿ ಮೌಲ್ಯಶಿಕ್ಷಣ ಎನ್ನುವ ಪಠ್ಯವನ್ನು ಒಂದರಿಂದ ಹತ್ತನೇ ತರಗತಿಯ ಮಕ್ಕಳಿಗೆ ರಚಿಸಿದ್ದಾರೆ. ಧರ್ಮಭಾರತೀ, ತ್ರಿವಿಕ್ರಮ ಮುಂತಾದ ಮಾಸಪತ್ರಿಕೆಯಲ್ಲಿ ಸಂಪಾದಕನಾಗಿ ಕಾರ್ಯ ಮಾಡಿರುತ್ತಾರೆ. ಹಿತೋಪದೇಶ, ಸಂತಗೋರಕ್ಷನಾಥ, ಮಹರ್ಷಿ ಶಂಖಲಿಖಿತ ಗ್ರಂಥಗಳನ್ನು ಬರೆದಿದ್ದಾರೆ. ಅನೇಕ ಲೇಖನಗಳು, ಕಥೆಗಳು ದಿನಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಆಸಕ್ತಿಯ ವಿಷಯ ಸಂಗೀತ, ನಾಟಕ, ಓದು, ಬರಹ, ಚಾರಣ, ಡಿಜಿಟಲ್ ವಿನ್ಯಾಸ. ಸದ್ಯ ಶಿಕ್ಷಕನಾಗಿ ಕಾರ್ಯ.

Read More
Follow Us