ನಿರಂತರವಾಗಿ ನಡೆಸಿಕೊಂಡು ಬಂದ ಉದ್ಯಮದಿಂದ ಲಾಭವಾಗುವುದು
ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಗ್ರೀಷ್ಮ ಋತುವಿನ ಜ್ಯೇಷ್ಠ ಮಾಸ ಕೃಷ್ಣ ಪಕ್ಷದ ನವಮೀ ತಿಥಿ ಬುಧವಾರ ಸಂಗಾತಿಯಿಂದ ಬೇಸರ, ದುರಭ್ಯಾಸದಿಂದ ದೂರ, ಆರ್ಥಿಕ ಸಲಹೆಗೆ ಪ್ರಭಾವಿ ಭೇಟಿ ಇವೆಲ್ಲ ಇರಲಿದೆ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಏನು ಫಲಾಫಲ ಎನ್ನುವುದನ್ನು ತಿಳಿದುಕೊಳ್ಳಿ.

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ಗ್ರೀಷ್ಮ, ಸೌರ ಮಾಸ: ಮಿಥುನ, ಮಹಾನಕ್ಷತ್ರ: ಮೃಗಶಿರಾ, ಮಾಸ: ಜ್ಯೇಷ್ಠ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ನವಮೀ, ನಿತ್ಯನಕ್ಷತ್ರ: ಉತ್ತರಾಭಾದ್ರ, ಯೋಗ: ಶುಕ್ಲ, ಕರಣ: ಭದ್ರ, ಸೂರ್ಯೋದಯ – 06 : 05 am, ಸೂರ್ಯಾಸ್ತ – 07 : 02 pm, ಇಂದಿನ ಶುಭಾಶುಭ ಕಾಲ: ರಾಹು ಕಾಲ12:34 – 14:11, ಯಮಘಂಡ ಕಾಲ 07:43 – 09:20, ಗುಳಿಕ ಕಾಲ 10:57 – 12:34
ತುಲಾ ರಾಶಿ: ತಾನಾಗಿಯೇ ಬಂದ ಭೂಮಿಯ ಅವಕಾಶವನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳಿ. ನಿಮ್ಮ ಸಂತೋಷವನ್ನು ಕಹಿಯಾದ ಮಾತುಗಳು ಇಂದು ಕಸಿದುಕೊಳ್ಳಬಹುದು. ವಾಹನದ ಖರೀಗೆ ಸಾಲ ಮಾಡಬೇಕಾಗುವುದು. ಮಕ್ಕಳಿಗೆ ಹೆಚ್ಚಿನ ಗಮನವನ್ನು ಕೊಡಬೇಕಾಗುವುದು. ಪುಣ್ಯಸ್ಥಳಕ್ಕೆ ಹೊರಟ ನಊರಿಂದ ಊರಿಗೆ ವರ್ಗಾವಣೆಯಾಗುತ್ತಿರುವುದಕ್ಕೆ ಬೇಸರ ಮಾಡಿಕೊಳ್ಳುವಿರಿ. ಅದಕ್ಕೆ ನಿಮ್ಮ ಸ್ನೇಹಿತರು ಸಮಾಧಾನವನ್ನು ಮಾಡುವುದು ಬಿಟ್ಟು ಸೊಪ್ಪು ಹಾಕುವರು. ಎಷ್ಟೋ ದಿನದ ಹಿಂದೆ ಹೊಸ ವಸ್ತುಗಳನ್ನು ಖರೀದಿಸಿದ್ದು ಇಂದು ನಿಮಗೆ ನೆನಪಾಗುವುದು. ಆರೋಗ್ಯದ ಕಡೆ ಹೆಚ್ಚು ಗಮನವಹಿಸುವ ಅಗತ್ಯವಿದೆ. ದಿನಚರಿಯನ್ನು ಸರಿಮಾಡಿಕೊಳ್ಳಿ. ಎಲ್ಲ ವಿಚಾರದಲ್ಲಿ ಹಿನ್ನಡೆ ಇರಲಿದೆ. ನಿಮ್ಮ ಸ್ವಭಾವಕ್ಕೆ ಯೋಗ್ಯವಾದ ವ್ಯಕ್ತಿಯ ಗೆಳೆತನವಾಗಲಿದೆ. ಪ್ರೇಮವನ್ನು ನಿಭಾಯಿಸುವುದು ಕಷ್ಟವಾಗುವುದು. ಇಷ್ಟಪಟ್ಟ ವಸ್ತುವನ್ನು ಪಡೆಯಲು ಹಣದ ಅಭಾವವು ಕಾಣಿಸಬಹುದು.
ವೃಶ್ಚಿಕ ರಾಶಿ: ದ್ವಿಚಕ್ರ ವಾಹನ ಸವಾರಿ ದುಸ್ತರವಾದರೆ ವಿಶ್ರಾಂತಿ ಪಡೆಯಿರಿ. ಇನ್ಮೊಬ್ಬರ ಮಾತಿಗೆ ಛಲ ತೋರಿಸುವುದು ಬೇಡ. ಇಂದು ಸಾಮಾಜಿಕ ಕಾರ್ಯಗಳಿಂದ ಸಂತೋಷವೂ ಹೊಸತನವೂ ನಿಮಗೆ ಸಿಗಲಿದೆ. ಹೊಸ ಒಪ್ಪಂದಗಳು ಬರುವ ಸಾಧ್ಯತೆ ಇದೆ. ಹುಣ್ಣನ್ನು ಕೆದಕಿದಷ್ಟೂ ಅದು ದೊಡ್ಡ ಗಾಯವಾಗುವುದು. ಮಾತನಾಡದೇ ಸುಮ್ಮನಿರಿ. ತಾನಾಗಿಯೇ ತಣ್ಣಗಾಗುವುದು. ಯೋಜನೆಯಿಲ್ಲದೇ ಖರ್ಚನ್ನು ಹೆಚ್ಚು ಮಾಡಿಕೊಳ್ಳುವಿರಿ. ಅಸಂಭಾವ್ಯ ವಿಚಾರವನ್ನು ಸಂಭಾವ್ಯ ಮಾಡಿಕೊಂಡು ಹತಾಶರಾಗುವಿರಿ. ನಿಧಾನಗತಿಯ ಕೆಲಸವು ನಿಮ್ಮ ಮನಃಸ್ಥಿತಿಗೆ ಹೊಂದಿಕೆಯಾಗಲಿದೆ. ಖರ್ಚನ್ನು ತಡೆಗಟ್ಟುವ ಸೂತ್ರವನ್ನು ಕಂಡುಕೊಳ್ಳಿ. ಮನಸ್ಸು ಹೇಳಿದಂತೆ ಕೇಳದೇ ಸಮಾಧಾನದಿಂದ ಇರಿ. ನಿಮಗೆ ಅವಶ್ಯಕತೆ ಇರುವ ಮಾಹಿತಿಯನ್ನು ಸರಿಯಾದ ಕಡೆಯಿಂದ ಪಡೆದುಕೊಳ್ಳಿ. ಸಹೋದರರ ಸಹಕಾರವು ನಿಮಗೆ ಬಲವನ್ನು ಕೊಡಬಹುದು. ತಾಯಿಯ ಪ್ರೀತಿಯು ನಿಮಗೆ ಅಪರೂಪವೆನಿಸುವಂತೆ ಆಗುವುದು.
ಧನು ರಾಶಿ: ತಪ್ಪಿಹೋದ ಸಂಬಂಧವನ್ನು ಮತ್ತೆ ಜೋಡಿಸುವ ಪ್ರಯತ್ನ ಮಾಡುವಿರಿ. ಇಂದು ಸಹಾಯ ಮಾಡುವ ನಿಮ್ಮ ನಿರಂತರ ಅಭ್ಯಾಸಕ್ಕೆ ನಿಮಗೆ ದಣಿವಾಗಬಹುದು. ದುರಭ್ಯಾಸದ ಜನರ ಸಹವಾಸ ಇರುವುದು. ಒಳ್ಳೆಯ ಕಾಲ ಬರುವುದೆಂದು ಕಾದು ಕುಳಿತರೆ ಪ್ರಯೋಜನವಿಲ್ಲ. ಅಗ್ನಿಯ ಭಯದಿಂದ ಏನನ್ನೂ ಮಾಡಲು ಬೆಚ್ಚುವಿರಿ. ನಿಮ್ಮ ಕೆಲಸವನ್ನು ನೀವು ಮಾಡಿ. ಕಾಲ ಬಂದಾಗ ಅದು ಮಾಡಬೇಕಾದುದನ್ನು ಮಾಡುತ್ತದೆ. ಮಕ್ಕಳ ಭವಿಷ್ಯವು ಚೆನ್ನಾಗಿರಲು ಅವರ ಹೆಸರಿನಲ್ಲಿ ಹೂಡಿಕೆ ಮಾಡುವಿರಿ. ಮಕ್ಕಳ ವಿಚಾರದಲ್ಲಿ ತಾರತಮ್ಯವನ್ನು ತೋರಿಸಿ ಅವರ ಬಾಯಿಗೆ ಸಿಗುವಿರಿ. ನಿಮ್ಮ ಯೋಜನೆಗೆ ಸ್ನೇಹಿತ ಬಳಗ ಸಹಾಯ ಮಾಡುವುದು. ಭೂಮಿಗೆ ಸಂಬಂಧಿಸಿದ ಉದ್ಯೋಗವನ್ನು ಆರಂಭ ಮಾಡಬೇಡಿ. ಇರುವ ಉದ್ಯೋಗವು ಯಥಾಸ್ಥಿತಿಯಲ್ಲಿ ಇರಲಿ. ಹತ್ತಾರು ಊರು ಸುತ್ತಿದರೂ ನಿಮಗೆ ಮನಯೇ ಶ್ರೇಷ್ಠ ಎನ್ನಿಸಬಹುದು. ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಸೋಲುವಿರಿ. ಅವಶ್ಯಕತೆ ಇದ್ದರಷ್ಟೇ ನಿಮ್ಮನ್ನು ಬಳಸಿಕೊಳ್ಳುವರು.
ಮಕರ ರಾಶಿ: ಕೆಲವು ಭೇಟಿಗಳು ಅನಿರೀಕ್ಷಿತವಾಗಿ ಸಂಧಿಸುವುವು. ನೀವು ಇಂದು ಅನಗತ್ಯ ವಾದಗಳಿಗೆ ನಿಮ್ಮ ಶಕ್ತಿಯನ್ನು ವ್ಯರ್ಥ ಮಾಡಿಕೊಳ್ಳುವದರ ಜೊತೆ ಹೆಸರೂ ಹಾಳಾಗುವುದು. ಹೆಚ್ಚುವರಿ ಆದಾಯವನ್ನು ಗಳಿಸಲು ನಿಮ್ಮ ಕ್ರೀಯಾಶೀಲತೆ ಅಗತ್ಯವಾಗಿ ಬೇಕು. ಹಿರಿಯರ ಸೇವೆಯನ್ನು ಬಲವಾದ ಕಾರಣವಿಲ್ಲದೇ ಮಾಡಲಾರಿರಿ. ಭೂಮಿಯ ವ್ಯವಹಾರವನ್ನು ಸದ್ಯ ಮುಂದುವರಿಸಬೇಡಿ. ನ್ಯಾಯಾಲಯದ ಮೆಟ್ಟಿಲೇರಿದ ದೂರು ಇಂದು ಇತ್ಯರ್ಥವಾದೀತು. ಕಲೆಗಳಲ್ಲಿ ಆಸಕ್ತಿ ಇಲ್ಲದೇ ನೀರಸವಾಗಿ ಇರುವಿರಿ. ಉದ್ಯೋಗದ ನಿಮಿತ್ತ ಅನ್ಯಸ್ಥಳಕ್ಕೆ ಹೋಗಬೇಕಾಗಬಹುದು. ದಾಂಪತ್ಯದ ಉತ್ತಮ ಹಾಗೂ ಖುಷಿಯ ದಿನವನ್ನು ಅನುಭವಿಸುವಿರಿ. ಅಪರಿತರು ನಿಮಗೆ ಸಹಾಯವನ್ನು ಮಾಡಲು ಬಂದರೆ ನೀವು ಅದನ್ನು ಸ್ವೀಕರಿಸುವುದಿಲ್ಲ. ಕೆಲಸಗಳು ಕೈಗೂಡುವುದು ಎಂಬ ಆಸೆ ಇರಲಿದೆ. ಕಛೇರಿಯಲ್ಲಿ ಗೌರವ ಸಿಗಲಿದೆ. ಎಂದೂ ನಂಬದವರ ಮಾತನ್ನು ನೀವು ಇಂದು ನಂಬಬೇಕಾಗುವುದು. ಹೂಡಿಕೆಯ ವಿಚಾರದಲ್ಲಿ ನಿಮಗೆ ಪೂರ್ಣ ಆಸಕ್ತಿ ಇರದು. ಇಂದು ಪರಿಶ್ರಮವಿದ್ದರೂ ಫಲವು ಅಲ್ಪವಿರಲಿದೆ.
ಕುಂಭ ರಾಶಿ: ನಿಮ್ಮದಲ್ಲದ ತಪ್ಪನ್ನು ಒಪ್ಪಿಕೊಳ್ಳುವಿರಿ, ಮಾತ್ರವಲ್ಲ ಅದಕ್ಕೆ ಸಕಾರಣವನ್ನೂ ನೀವೇ ಊಹೆ ಮಾಡಿ ಸಮಾಧಾನ ಮಾಡಿಕೊಳ್ಳುವಿರಿ. ಇಂದು ನಿಮ್ಮ ಉದಾರತೆಯು ಖರ್ಚಿನಿಂದ ಆರಂಭವಾಗುವುದು. ಮನೆಗೆ ಅತಿಥಿಗಳ ಆಗಮನವು ಹೊಸ ಹೊಳಪು ಕೊಡುವುದು. ಗೆಲುವು ಸಣ್ಣದಾದರೂ ಸಂಭ್ರಮ ಮಾತ್ರ ದೊಡ್ಡದಾಗಿರುವುದು. ಮೇಲಧಿಕಾರಿಗಳ ವರ್ತನೆಯಿಂದ ಉದ್ಯೋಗವನ್ನು ಬಿಡುವ ಯೋಚನೆ ಮಾಡುವಿರಿ ಮತ್ತು ಮುಂದಿನ ವೃತ್ತಿಜೀವನದ ಬಗ್ಗೆ ಗೊಂದಲವೂ ಇರಬಹುದು. ಮಿತ್ರರ ಸಹಾಯದಿಂದ ಬಂದೊದಗಿದ ಅಪಾಯವನ್ನು ದೂರಮಾಡಿಕೊಳ್ಳುವಿರಿ. ಅವಿಶ್ರಾಂತ ಕೆಲಸವು ನಿಮಗೆ ಆಯಾಸವನ್ನು ನೀಡುವುದು. ಆರೋಗ್ಯದಲ್ಲಿ ವ್ಯತ್ಯವಾಗಬಹುದು. ಬಂಧುಗಳು ನಿಮ್ಮನ್ನು ಆಡಿಕೊಳ್ಳುವರು. ಆಲಸ್ಯದಿಂದ ಕೆಲಸವು ಹಿಂದೆ ಬೀಳುವುದು. ಇಂದು ನಡೆದ ಅಹಿತಕರ ಘಟನೆಯನ್ನು ಕೆಟ್ಟ ಘಳಿಗೆ ಎಂದು ಮರೆತುಬಿಡಿ. ಯಾರಾದರೂ ನಿಮ್ಮವರ ಬಗ್ಗೆ ಬಂದು ಕಿವಿಚುಚ್ಚಬಹುದು. ಸಾಲ ಬಾಧೆಯ ಕಾರಣ ಕಣ್ತಪ್ಪಿಸಿ ಓಡಾಡುವಿರಿ. ಮೊದಲ ಬಾರಿ ನಿಷ್ಠುರದ ಮಾತನಾಡಿ ಪಶ್ಚಾತ್ತಾಪಗೊಳ್ಳುವಿರಿ.
ಮೀನ ರಾಶಿ: ನಿಮ್ಮ ಮನಸ್ಸಿಗೆ ಆಗದೇ ಇರುವ ಸಂಗತಿಗಳು ತಾನಾಗಿಯೇ ಗೊತ್ತಾಗಲಿದೆ. ಸೂಕ್ಷ್ಮತೆಯ ಮೂಲಕ ಅದರಿಂದ ದೂರವಿರಿ. ಇಂದು ನಿಮ್ಮ ಸಂತೋಷದ ಕ್ಷಣಗಳನ್ನು ನೀವೇ ಸೃಷ್ಟಿಸಿಕೊಳ್ಳುವಿರಿ. ಮನೆಯಲ್ಲಿ ನಿಮ್ಮ ಮಕ್ಕಳು ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲಾರರು. ಅನುರೂಪ ಸಂಗಾತಿಯ ಭೇಟಿ ಮಾಡುವಿರಿ. ಆದರೆ ಅದು ನಿಮಗೆ ಗೊತ್ತಾಗದು. ಕುಟುಂಬದ ಹಿರಿಯರಿಗೆ ನೀಡಬೇಕಾದ ಗೌರವವನ್ನು ನೀಡಿ. ನಿರಂತರವಾಗಿ ನಡೆಸಿಕೊಂಡುಬಂದ ಉದ್ಯಮದಿಂದ ಲಾಭವಾಗುವುದು. ಆರೋಗ್ಯವನ್ನು ನಿಮ್ಮ ಕೈಯ್ಯಾರೆ ಹಾಳು ಮಾಡಿಕೊಳ್ಳುವಿರಿ. ಯೋಗ್ಯವಾದ ಔಷಧೋಪಚಾರವು ಸಿಗುವುದು. ನಿದ್ರಾಹೀನತೆಯಿಂದ ಬಳಲುತ್ತಿದ್ದು ವಾತಾವರಣವು ನಿಮ್ಮ ನಿದ್ರೆಗೆ ಪೂರಕವಾಗಿರದೇ ಇರುವುದು ಕಾರಣವಾಗಿದೆ. ಕುಟುಂಬದಿಂದ ನಿರೀಕ್ಷಿಸುವ ವಸ್ತುವು ನಿಮಗೆ ಸಿಗಲಿದೆ. ನಿಮ್ಮ ಯಶಸ್ಸನ್ನು ಕಂಡು ಅಸೂಯೆ ಪಡುವರು. ಕೋಪವನ್ನು ಮಾಡುವ ಸಂದರ್ಭವು ಎದರಾಗಲಿದ್ದು, ನಿಮ್ಮ ನಿಯಂತ್ರಣದಲ್ಲಿ ಇರಲಿ. ಆದಾಯದ ಮೂಲಗಳನ್ನು ನೀವು ಉಳಿಸಿಕೊಳ್ಳುವುದು ಕಷ್ಟವಾದೀತು.




