
ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ಗ್ರೀಷ್ಮ, ಸೌರ ಮಾಸ: ಮಿಥುನ, ಮಹಾನಕ್ಷತ್ರ: ಮೃಗಶಿರಾ, ಮಾಸ: ಜ್ಯೇಷ್ಠ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ನವಮೀ, ನಿತ್ಯನಕ್ಷತ್ರ: ಉತ್ತರಾಭಾದ್ರ, ಯೋಗ: ಬ್ರಹ್ಮ, ಕರಣ: ಕೌಲವ, ಸೂರ್ಯೋದಯ – 06 : 05 am, ಸೂರ್ಯಾಸ್ತ – 07 : 02 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 14:11 – 15:48, ಯಮಘಂಡ ಕಾಲ 06:06 – 07:43, ಗುಳಿಕ ಕಾಲ 09:20 – 10:57
ಮೇಷ ರಾಶಿ: ಕೇವಲ ಕಲ್ಪನೆಯಲ್ಲಿ ಇರುವ ನಿಮಗೆ ವಾಸ್ತವವು ಸರಿಯಾಗಿ ಅರ್ಥವಾಗಲಿದೆ. ನೀವು ಕೊಟ್ಟ ಮಾತನ್ನು ಇಂದು ಉಳಿಸಿಕೊಳ್ಳುವುದು ಕಷ್ಟವಾದೀತು. ಇದಕ್ಕಾಗಿ ಅಪಮಾನೂ ಆಗಬಹುದು. ಆರ್ಥಿಕವಾಗಿ ನಿಮ್ಮನ್ನು ಯಾರಾದರೂ ಕೇಳಬಹುದು. ಹಗಲು ಪ್ರಯಾಣದಿಂದ ನಿಮ್ಮ ಮಾನಸಿಕ ಶಕ್ತಿ ಹೆಚ್ಚಾಗುವುದು. ಮುಂದಿನ ಹಾದಿಗೆ ದಾರಿ ತೋರುವುದು. ಆದರೆ ಕೆಲವೊಮ್ಮೆ ಒತ್ತಡದ ಸಂದರ್ಭಗಳು ಎದುರಾಗಬಹುದು. ಆದರೆ, ನಿಮ್ಮ ಆಂತರಿಕ ಶಕ್ತಿ ಅದನ್ನು ನಿಭಾಯಿಸಬಲ್ಲದು. ಹಣದ ವ್ಯವಹಾರಗಳಲ್ಲಿ ದೃಢವಾಗಿರಿ. ಆತ್ಮೀಯರಿಂದ ನೆರವು ಸಿಗಬಹುದು. ಮೇಲ್ನೋಟದಿಂದ ಗೊತ್ತಾಗಿದ್ದು ಅಂತರಂಗವನ್ನು ತಲುಪದು. ಇನ್ನೊಬ್ಬರ ಕಲಹದಿಂದ ನೆಮ್ಮದಿಯನ್ನು ಕಾಣುವುದು ಬೇಡ. ಸಾಮಾಜಿಕವಾಗಿ ಮನ್ನಣೆ ಸಿಗುವ ಸಾಧ್ಯತೆ ಇದೆ. ಯಾರಾದರೂ ಹೊಗಳಿದರೆ ಹಿಗ್ಗಬೇಡಿ. ಕೊಡುಕೊಳ್ಳುವ ವ್ಯವಹಾರದಲ್ಲಿ ಬೇಸರವಾಗಬಹುದು. ವಿವಾಹದ ಮಾತುಕತೆ ನಡೆಯಬಹುದು. ನಿಮ್ಮ ದೌರ್ಬಲ್ಯವನ್ನು ನೀವು ಸಹಾಕರಾತ್ಮಕವಾಗಿ ಪಡೆದುಕೊಂಡು ಮುನ್ನಡೆಯಬಹುದು.
ವೃಷಭ ರಾಶಿ: ಪ್ರೇಮಪಯಣದಲ್ಲಿ ತೊಂದರೆ. ನಿಮ್ಮ ಭೂಮಿಯ ಮಾರಾಟಕ್ಕೆ ಯಾರಾದರೂ ಬರಬಹುದು. ಹಣಕಾಸನ್ನು ಹೊಂದಿಸುವುದು ಇಂದು ಕಷ್ಟವಾಗುವುದು. ಸಾಲಗಾರರ ಕಾಟದಿಂದ ನೀವು ಮುಕ್ತರಾಗುವಿರಿ. ಹಣದ ಉಳಿತಾಯದಿಂದ ಆಭರಣಗಳನ್ನು ಖರೀದಿಸುವಿರಿ. ನಿಮ್ಮನ್ನು ಬೇರೆಯರಿಗಿಂತ ವಿಭಿನ್ನವನ್ನಾಗಿ ತೋರಿಸಬಹುದು. ಆದರೆ, ಪ್ರತಿಯೊಂದು ಮಾತು ಎಣಿಕೆಯಿಂದ ಮಾತಾಡಿ. ಬೇರೆವರಿಗಿಂತ ಭಿನ್ನವಾಗಿರಲು ಇಷ್ಟಪಡುವಿರಿ. ಹಣಕಾಸಿನಲ್ಲಿ ಹೊಸ ದಿಕ್ಕು ಕಂಡುಬರುವ ಸಾಧ್ಯತೆ ಇದೆ. ಹಿರಿಯರಿಂದ ಸಂಪತ್ತು ಸಿಗಬಹುದು ಅಥವಾ ಉತ್ತಮಮಾರ್ಗದಿಂದ ಬರುವ ಸಂಪತ್ತು ನಿಮ್ಮನ್ನು ಖುಷಿಯಾಗಿಡಲಿದೆ. ಸಾಲಬಾಧೆಯಿಂದ ಮುಕ್ತರಾಗಲು ಯೋಜನೆ ರೂಪಿಸುವಿರಿ. ಅತಿ ಬುದ್ಧಿವಂತಿಕೆಯು ಮುಳುವಾಗಬಹುದು. ಸ್ವಾಭಿಮಾನಕ್ಕೆ ಧಕ್ಕೆಯಾಗಬಹುದು. ನಿಮ್ಮ ಮನಸ್ಸು ಹೊಸ ಪರಿವರ್ತನೆಯ ಕಡೆ ಹೊರಳುವುದು. ಅಶುಭವಾರ್ತೆಗೆ ನೀವು ಕಿವಿಯಾಗಬೇಕಾದೀತು.
ಮಿಥುನ ರಾಶಿ: ಮತ್ತೆ ಪಡೆಯಲು ಕಷ್ಟವಾಗುವುದನ್ನು ಉಳಿಸಿಕೊಳ್ಳಿ. ಸಹೋದರನ ನಡತೆ ನಿಮಗೆ ಸಂಶಯ ತರಿಸಬಹುದು. ಏನೇ ಆದರೂ ನಿಮ್ಮ ತಪ್ಪನ್ನು ನೀವು ಒಪ್ಪಿಕೊಳ್ಳಲಾರಿರಿ. ನಿಮ್ಮ ನಷ್ಟವನ್ನು ಮರೆಮಾಚಲು ತಂತ್ರವನ್ನು ಹೂಡುವಿರಿ. ಕೆಲಸದಲ್ಲಿ ಸಹೋದ್ಯೋಗಿಗಳಿಂದ ಬೆಂಬಲ ಸಿಗಬಹುದು. ನಿಮ್ಮೊಳಗಿನ ಪ್ರಪಂಚ ನಿಮ್ಮನ್ನು ದೂಡಿ ಹೊರಹಾಕಬಹುದು. ಮನಸ್ಸಿನಲ್ಲಿ ಗಾಬರಿಯ ಸ್ಥಿತಿಯನ್ನು ನಿವಾರಿಸಿಕೊಳ್ಳಿ. ಮನೆಯಲ್ಲಿನ ಪರಿಸ್ಥಿತಿಯಲ್ಲಿ ಸುಧಾರಣೆ ಸಾಧ್ಯ. ಆರೋಗ್ಯದಲ್ಲಿ ಚೇತರಿಕೆ ನಿಮ್ಮ ಶಕ್ತಿಯನ್ನು ಪ್ರಭಾವಶಾಲಿಯಾಗಿ ಬಳಸಿಕೊಳ್ಳಿ. ಸಾಲ ಕೊಟ್ಟವರು ಕಟುವಾಗಿ ಮಾತನಾಡಬಹುದು. ಸಮಾಧಾನದಿಂದ ಅವರಿಗೆ ಉತ್ತರಕೊಟ್ಟು ಕೆಲವು ದಿನಗಳ ಅನಂತರ ಪಾವತಿಸುವೆನು ಎಂದು ಹೇಳಿ. ಅಳುಕುವ ಅವಶ್ಯಕತೆ ಇಲ್ಲ. ಎಲ್ಲವೂ ನಿಮಗೆ ತಿಳಿದೇ ಆಗಬೇಕು ಎನ್ನುವ ಹಠವಿರುವುದು. ಸಹೋದರನಿಂದ ಯಾವ ಸಹಕಾರವನ್ನು ನಿರೀಕ್ಷಿಸದೇ ಕಾರ್ಯಪ್ರವೃತ್ತರಾಗುವಿರಿ.
ಕರ್ಕಾಟಕ ರಾಶಿ: ಇಂದು ನಿಮ್ಮ ಸೇವೆ ಪರಿಗಣಿತವಾಗಲಿದೆ. ಪ್ರಭಾವದಿಂದಾಗಿ ಇನ್ನೊಬ್ಬರಿಗೆ ಸಹಾಯ ಮಾಡುವಿರಿ. ಮನೆಯ ಕೆಲಸದಲ್ಲಿ ಆಸಕ್ತಿ ಹೆಚ್ಚಿರುವುದು. ಇದರಿಂದ ತುರ್ತು ಕೆಲಸಗಳನ್ನು ಮರೆಯಬಹುದು ಸಿಟ್ಟಿನಿಂದ ಎಲ್ಲವನ್ನೂ ಸರಿ ಮಾಡುತ್ತೇನೆ ಎಂಬುದನ್ನು ಬಿಡಿ. ಹೊಸದಾಗಿ ಸೇರಿದವರ ಮೇಲೆ ಹದ್ದಿನ ಕಣ್ಣಿರುವುದು. ನಿಮ್ಮ ಉತ್ಸಾಹ ಇತರರನ್ನೂ ಪ್ರೇರೇಪಿಸಬಹುದು. ಕೆಲಸಗಳಲ್ಲಿ ಹೆಚ್ಚಿನ ಗಮನ ಬೇಕಾಗಿರುತ್ತದೆ. ಆದರೆ, ಸಮಯ ಸರಿಯಾಗಿ ಬಳಸಿಕೊಳ್ಳುವುದು ಮುಖ್ಯ. ಹಣದ ವಿಚಾರದಲ್ಲಿ ನಿರ್ಧಾರ ಸರಿಯಾಗಿ ತೆಗೆದುಕೊಳ್ಳಿ. ಸ್ನೇಹಿತರಿಂದ ಸಹಾಯ ಅಥವಾ ಸಲಹೆ ಸಿಗಬಹುದು. ನಮ್ಮ ಬಳಿ ಇರುವ ವಸ್ತು, ವ್ಯಕ್ತಿಗಳ ಮೇಲಲ್ಲ. ಮಕ್ಕಳು ನಿಮ್ಮನ್ನು ಬಹಳ ಹಚ್ಚಿಕೊಳ್ಳುತ್ತಾರೆ. ಯಾವುದರಿಂದಲೂ ಬಿಡುಗಡೆ ಸಿಗದೇ ನೀವು ಸ್ವತಂತ್ರರಾಗಲಾರಿರಿ. ಆತುರದ ನಿರ್ಧಾರಕ್ಕೆ ಹೋಗಬೇಡಿ. ದ್ವಿಚಕ್ರ ವಾಹನದಲ್ಲಿ ಆಯ ತಪ್ಪಬಹುದು. ಅದನ್ನು ಯೋಜನೆ ಗೊಳಿಸಿ. ಸಭ್ಯತೆಯ ಮಾತಿನಿಂದ ನೀವು ಕೆಲಸಗಳನ್ನು ಮಾಡಿಸಿಕೊಳ್ಳುವಿರಿ.
ಸಿಂಹ ರಾಶಿ: ತಪ್ಪಿಗೆ ದಂಡನೆಯೇ ಶಿಕ್ಷೆಯಲ್ಲ, ಅದಕ್ಕಿಂತ ಪೂರ್ವದ ಕ್ರಮವನ್ನು ತೆಗೆದುಕೊಳ್ಳಿ. ಅಧಿಕಾರದ ಹಿಡಿತ ತಪ್ಪುವ ಸಾಧ್ಯತೆ ಇದೆ. ನಿಮ್ಮ ಇಷ್ಟದ ಕಾರ್ಯವನ್ನು ಮಾಡಿ ಸಂತೋಷಗೊಳ್ಳುವಿರಿ. ನಿಮ್ಮ ಶ್ರಮಕ್ಕೆ ಕೂಡಲೇ ಫಲ ಸಿಗುತ್ತದೆ ಎನ್ನುವ ಧಾವಂತ ಬೇಡ. ತಾಳ್ಮೆಯ ಅವಶ್ಯಕತೆ ಇದೆ. ನಿಮ್ಮ ಉತ್ಸಾಹವನ್ನು ಉಳಿಸಿಕೊಂಡು ಮುಂದೆ ಸಾಗಬೇಕು. ಹಣಕಾಸಿನ ಚಿಂತೆ ಇತ್ತು ಸಹ ಪರಿಹಾರ ದೊರೆಯಬಹುದು. ಯಾರಾದರೂ ನಿಮ್ಮ ಹೆಸರು ಬಳಸಿ ಕೆಲಸ ಮಾಡಿಸಿಕೊಳ್ಳುವರು. ಕುಟುಂಬದಿಂದ ಸಹಕಾರ ಸಿಗಲಿದೆ. ನಿಮ್ಮ ಶಕ್ತಿ ಮತ್ತು ಆಂತರಿಕ ಶಾಂತಿಯ ಮೇಲೆ ನಂಬಿಕೆ ಇಡಿ. ಮಾತುಗಳಿಂದಲೇ ಎಲ್ಲವನ್ನೂ ಸಾಧಿಸಬಹುದು ಎಂಬುದನ್ನು ಮರೆತು, ತಾಳ್ಮೆ, ಮೌನದಿಂದ ಸಾಧ್ಯ ಎಂಬುದನ್ನು ನಂಬಿ. ಅವರ ಸಲಹೆಯನ್ನು ಸ್ವೀಕರಿಸಿ ಕ್ರಮಬದ್ಧವಾಗಿ ಆಚರಿಸಿ. ಪ್ರಯಾಣದಲ್ಲಿ ಪ್ರೇಮವಾಗುವ ಸಂಭವವಿದೆ. ಸಜ್ಜನರ ಸಹವಾಸ ಸಿಗುವುದು. ಅವರನ್ನು ಆಡಿಕೊಳ್ಳಬೇಡಿ. ಮಕ್ಕಳು ನಿಮ್ಮನ್ನು ಕಂಡು ಹಾಸ್ಯ ಮಾಡಿಯಾರು. ಅದಕ್ಕೆ ಏನನ್ನಾದರೂ ಹೇಳಬೇಡಿ. ಯಾರ ಜೊತೆಯೂ ಅಸಂಬದ್ಧ ಚರ್ಚೆಗೆ ಹೋಗುವುದು ಬೇಡ.
ಕನ್ಯಾ ರಾಶಿ: ನಿಮ್ಮ ಹಿಂದೆ ನಡೆಯುವ ವಿದ್ಯಮಾನಗಳು ತಡವಾಗಿ ಗೊತ್ತಾಗಿ, ಅಚರಚರಿಯಾಗಲಿದೆ. ನಿಮಗೆ ಇಂದು ಏನಾದರೂ ಹೊಸತನ್ನು ಮಾಡಬೇಕು ಎಂದು ಅನ್ನಿಸುವುದು. ಸ್ಪಷ್ಟತೆಯ ಜೊತೆ ಮುಂದೆ ಸಾಗಿರಿ. ನೀವು ಕುಟುಂಬದ ಜವಾಬ್ದಾರಿಯನ್ನು ಚೆನ್ನಾಗಿ ನಿರ್ವಹಿಸಿ ಗೊತ್ತಾಗುವುದು. ಹಲವು ರೀತಿಯ ವಿರೋಧವನ್ನು ನೀವು ತೆಗೆದುಕೊಳ್ಳುವ ತೀರ್ಮಾನದಿಂದ ಬರಲಿದೆ. ಹಳೆಯ ಸಾಲಗಳ ಪರಿಹಾರ ಸಾಧ್ಯ. ಹಣಕಾಸಿನಲ್ಲಿ ಸುಧಾರಣೆ ಕಾಣಬಹುದು. ವ್ಯವಹಾರದಲ್ಲಿ ಯಶಸ್ಸು ಸಿಗುತ್ತದೆ. ನಿಮ್ಮ ಕೆಲಸಕ್ಕೆ ಮೆಚ್ಚುಗೆ ದೊರೆಯುತ್ತದೆ. ಒಟ್ಟಾರೆ ಈ ದಿನ ನಿಮಗೆ ಅನುಕೂಲಕರವಾಗಿರುತ್ತದೆ. ನಿಮ್ಮ ಖ್ಯಾತಿ ಹೆಚ್ಚಾಗುತ್ತದೆ. ಇನ್ನೊಬ್ಬರ ವ್ಯವಹಾರವನ್ನು ಕೆಡಿಸಲು ಹೋಗಬೇಡಿ. ಭೂ ವ್ಯವಹಾರವು ಇತ್ಯರ್ಥ ಆಗುವುದು ಕಷ್ಟ. ಚೆನ್ನಾಗಿ ಮಾತನಾಡುತ್ತೇನೆಂದು ಬೇರೆಯವರಿಗೆ ನೋವನ್ನು ಕೊಡಬೇಡಿ. ನಗುಮುಖದಿಂದ ಇಂದು ಇದ್ದರು ನಿಮ್ಮ ಬಳಿ ಅನೇಕರು ಮಾತನಾಡಲು ಬರಬಹುದು. ವ್ಯಾಪರ ಸುಗಮವಾಗಿ ಸಾಗುವುದು. ಮನೆಯವರಿಂದ ದೂರವಿದ್ದೇನೆಂಬ ಭಾವವು ಕಾಡಬಹುದು. ವಾಹನ ಸಂಚಾರದಲ್ಲಿ ಅಡಚಣೆ ಆಗಲಿದೆ.