ನಿಮ್ಮದಾದ ವಸ್ತುವನ್ನು ಖುಷಿಯಿಂದ ದಾನ ಮಾಡುವಿರಿ
ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಗ್ರೀಷ್ಮ ಋತುವಿನ ಜ್ಯೇಷ್ಠ ಮಾಸ ಕೃಷ್ಣ ಪಕ್ಷದ ಏಕಾದಶೀ ತಿಥಿ ಶನಿವಾರ ಬಾಳಿಗೆ ಬೆಳದಿಂಗಳು, ಪರವಶದಿಂದ ಪರದಾಟ, ಓಲೈಕೆ, ನೌಕರರ ಮೇಲೆ ಅನಿಯಂತ್ರಣ ಇವೆಲ್ಲ ಇಂದಿನ ಭವಿಷ್ಯ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಏನು ಫಲಾಫಲ ಎನ್ನುವುದನ್ನು ತಿಳಿದುಕೊಳ್ಳಿ.

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ಗ್ರೀಷ್ಮ, ಸೌರ ಮಾಸ: ಮಿಥುನ, ಮಹಾನಕ್ಷತ್ರ : ಮೃಗಶಿರಾ, ಮಾಸ: ಜ್ಯೇಷ್ಠ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಅಶ್ವಿನೀ, ಯೋಗ: ವೈಧೃತಿ, ಕರಣ: ಭದ್ರ, ಸೂರ್ಯೋದಯ – 06 : 06 am, ಸೂರ್ಯಾಸ್ತ – 07 : 02 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 09:20 – 10:57, ಯಮಘಂಡ ಕಾಲ 14:12 – 15:49, ಗುಳಿಕ ಕಾಲ 06:06 – 07:43
ತುಲಾ ರಾಶಿ: ನೌಕರರನ್ನು ನಿಮ್ಮ ನಿಯಂತ್ರಣಕ್ಕೆ ತರಲು ಪ್ರಯತ್ನಿಸುವಿರಿ. ನಿಮ್ಮ ಪ್ರಯತ್ನವು ಹೇಗೇ ಇದ್ದರೂ ದೈವದ ಯೋಜನೆ ಬೇರೆಯೇ ಇರುತ್ತದೆ. ದುಃಖಿಸದೇ ಧೈರ್ಯದಿಂದ ಮುಂದಿನ ಕಾರ್ಯದ ಕಡೆ ಗಮನವಿರಲಿ. ಉನ್ನತ ಅಧಿಕಾರಕ್ಕೆ ಹೋಗುವ ಸಂಭವಿದ್ದರೂ ಹಿತಶತ್ರುಗಳ ಪಿತೂರಿಯಿಂದ ಅಥವಾ ಹಿಂದೆಂದೋ ಆಡಿದ ಮಾತಿನ್ನೇ ಇಟ್ಟುಕೊಂಡು ನಿಮಗೆ ಹುದ್ದೆಯನ್ನು ಕೊಡದೇಹೋಗಬಹುದು. ಮನೆಯ ಖರೀದಿಯ ಆಸೆಯು ಆದಾಯದಿಂದ ಚಿಗುರೊಡೆಯಲಿದೆ. ನೀವು ಬೀಳಲೆಂದೇ ಸ್ತ್ರೀಯೋರ್ವಳು ದೊಡ್ಡ ಕಂದಕವನ್ನು ಕೊರೆದಿರುವಳು. ಅಧ್ಯಾತ್ಮ ಇಂದು ಹಲವು ಬಾರಿ ಮಾತಿನಲ್ಲಿ ಬರಲಿದೆ. ಹೇಳಬೇಕಾದುದನ್ನು ನೇರವಾಗಿ ಸಂಕ್ಷೇಪವಾಗಿ ಹೇಳಿ. ಸಿಟ್ಟು ಬರುತ್ತದೆ ಎಂದು ಗೊತ್ತಿದ್ದರೂ ಅದನ್ನು ನಿಗ್ರಹಿಸಲು ಶ್ರಮವಹಿಸದೇ ಇರುವುದು ವಿಷಾದಕರ ಸಂಗತಿಯಾಗುವುದು. ಸ್ನೇಹಿತರ ನಡುವೆ ಸೈದ್ಧಾಂತಿಕ ಭಿನ್ನತೆ ಬರುವುದು. ಸಂಗಾತಿಯಿಂದ ಧನಸಹಾಯವನ್ನು ಪಡೆಯುವಿರಿ. ಉದ್ಯೋಗವನ್ನು ಬಿಡುವ ಆಲೋಚನೆ ಇದ್ದು, ಮನೆಯ ಸ್ಥಿತಿಯನ್ನು ಕಂಡು ಈ ತೀರ್ಮಾನಕ್ಕೆ ಬನ್ನಿ.
ವೃಶ್ಚಿಕ ರಾಶಿ: ಅತಿಯಾದ ಚಾತುರ್ಯವೂ ಕೆಲಸಕ್ಕೆ ಬಾರದೇ ಇರಬಹುದು. ನಿಮ್ಮ ಅಂತರಂಗದ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳುವ ಬಗ್ಗೆ ಯೋಚಿಸುವಿರಿ. ಮನೆಯಲ್ಲಿ ನಡೆಯುವ ಕಲಹದಿಂದ ನೀವು ಬೇಸರಗೊಳ್ಳಬಹುದು. ನಿಮ್ಮ ಮಾತನ್ನೇ ಎಲ್ಲರೂ ಪಾಲಿಸಬೇಕು ಎನ್ನುವ ನಿಮ್ಮ ಧೋರಣೆಯನ್ನು ಬದಲಿಸಿಕೊಳ್ಳಿ. ಅವಾಚ್ಯ ಪದಗಳನ್ನು ಮೇಲಿನವರಿಂದ ಕೇಳುವಿರಿ. ಅನಿವಾರ್ಯದ ಪ್ರಯಾಣವು ನಿಮ್ಮನ್ನು ಹೈರಾಣ ಮಾಡುವುದು. ಆರ್ಥಿಕವಾದ ಹೂಡಿಕೆಯತ್ತ ನಿಮ್ಮ ಗಮನ ಹರಿಸುವಿರಿ. ಗೃಹನಿರ್ಮಾಣ ಯೋಜನೆಯನ್ನು ಮನೆಯವರ ಜೊತೆ ಸೇರಿ ಸಿದ್ಧಪಡಿಸುವಿರಿ. ನಿಮ್ಮ ಕುಟುಂಬ ಸದಸ್ಯರಿಗೆ ಸಮಯ ನೀಡಿ. ಸಂಗಾತಿಯ ಬಗ್ಗೆ ಕರುಣೆ ಬರಲಿದೆ. ಏಕಾಗ್ರತೆಯಿಂದ ಕೆಲಸ ಮಾಡಿದರೆ ಅನಾಯಾಸವಾಗಿ ಗುರಿಯನ್ನು ತಲುಪಬಹುದು. ಆಯ್ಕೆಗಳ ವಿಚಾರದಲ್ಲಿ ನೀವು ಹಿಂದುಳಿಯಬಹುದು. ಲಾಭಾಕ್ಕಾಗಿ ವ್ಯಾಪಾರದಲ್ಲಿ ಹೊಸದಾದ ಆಕರ್ಷ ಯೋಜನೆಗಳನ್ನು ಹಾಕಿಕೊಳ್ಳುವಿರಿ. ಮಕ್ಕಳ ಜೊತೆ ಚಿಂತೆಯನ್ನೆಲ್ಲ ಬಿಟ್ಟು ಸಂತೋಷದಿಂದ ಕಾಲವನ್ನು ಕಳೆಯುವಿರಿ.
ಧನು ರಾಶಿ: ಸಂಘಟನೆಯಲ್ಲಿ ಒಮ್ಮನಸ್ಸು ಬರುವುದು ಕಷ್ಟ. ಇಂದು ಸುಮ್ಮನೆಯೂ ಯಾರನ್ನೂ ಅಪಮಾನ ಮಾಡುವುದು ಬೇಡ. ಉದ್ವೇಗದ ಮಾತುಗಳು ನಿಮ್ಮ ಮಾನಸಿಕ ಸ್ಥಿತಿಯನ್ನು ತೋರಿಸುತ್ತದೆ. ಆರ್ಥಿಕವಾದ ದುರ್ಬಲತೆ ನಿಮ್ಮನ್ನು ಕಾಡಬಹುದು. ಮಾತಿನಿಂದಲೇ ಇಂದು ನೀವು ಕೆಲಸವನ್ನು ಮಾಡುವಿರಿ. ನಿಮ್ಮನ್ನು ಸುಳ್ಳಾಗಿ ಬಿಂಬಿಸಿಕೊಳ್ಳುವಿರಿ. ಸಾಲಕೊಟ್ಟ ಹಣವು ಬರುತ್ತದೆ ಎಂಬ ನಿರೀಕ್ಷೆಯು ಸುಳ್ಳಾಗಬಹುದು. ದುಂದುವೆಚ್ಚ ಮಾಡಿದ ಕಾರಣ ಮನೆಯಲ್ಲಿ ಕಲಹವಾಗಬಹುದು. ಕಛೇರಿಗೆ ವಿಳಂಬವಾಗಿ ಹೋಗಿ ಮೇಲಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗುವಿರಿ. ಅದು ಸೋತ ಅನಂತರ ಅರಿವಾದೀತು. ನಿಮ್ಮ ವೇಗದ ಕಾರ್ಯವನ್ನು ಅನುಸರಿಸಲಾಗದು. ಖುಷಿಯಾಗಿರು ಅನೇಕ ವಿಚಾರಗಳನ್ನು ಬಿಟ್ಟು ದುಃಖದ ಸಂಗತಿಯನ್ನೇ ನೆನೆಯುವಿರಿ. ನಿಮ್ಮ ಸೋಲು ನಿಮಗೆ ಅಪಮಾನಕರವಾಗಲಿದೆ. ಅನಿರೀಕ್ಷಿತವಾಗಿ ಹಣವು ಖಾಲಿಯಾಗುವುದು. ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡಿಕೊಂಡು ಅನಂತರ ಬೇಸರಿಸುವರು. ವಿದೇಶದ ಜೊತೆಗೆ ವ್ಯಾಪಾರದಲ್ಲಿ ಯಶಸ್ಸು ಸಿಗಲಿದೆ.
ಮಕರ ರಾಶಿ: ನಿಮ್ಮದಾದ ವಸ್ತುವನ್ನು ಖುಷಿಯಿಂದ ದಾನ ಮಾಡುವಿರಿ. ಇಂದು ಸಂಗಾತಿಯು ನಿಮ್ಮ ಬಗ್ಗೆ ಆಡಿದ ಸಕಾರಾತ್ಮಕ ಮಾತುಗಳು ನಿಮ್ಮ ಉತ್ಸಾಹವನ್ನು ಹೆಚ್ಚಿಸಬಹುದು. ವೇಗವಾಗಿ ಹಣದಲ್ಲಿ ಅಭಿವೃದ್ಧಿಯ ಕಾಣುವ ಬಗ್ಗೆ ಬಯಕೆ ಇರವುದು. ಮಾತಿಗಾಗಿ ಮಾತು ಬೆಳೆಯಬಹುದು. ನಿಮ್ಮಿಂದ ಸಹಾಯ ಪಡೆದವರ ಆಶೀರ್ವಾದ ಸದಾ ಇರಲಿದೆ. ಅದು ಮತ್ತೇನೋ ಆಗುವ ಸಾಧ್ಯತೆ ಇದೆ, ಜಾಗರೂಕರಾಗಿರಿ. ಏನನ್ನಾದರೂ ಕಳೆದುಕೊಳ್ಳುವ ಭೀತಿ ಇರುವುದು. ಅಭ್ಯಂಗಸ್ನಾನದ ಬಯಕೆಯಾಗುವುದು. ತಲೆ ಗಟ್ಟಿ ಇದೆ ಎಂದು ಬಂಡೆಗೆ ಹೋಗಿ ಕುಟ್ಟಲಾಗದು. ನಿಮ್ಮ ಇತಿಮಿತಿಗಳನ್ನು ನೋಡಿ ಮುಂದುವರಿಯಿರಿ. ನಿಮ್ಮಿಂದ ಸಾಲ ಪಡೆದವರ ಜೊತೆ ವಿವಾದವಾಗಬಹುದು. ಧಾರ್ಮಿಕ ಆಚರಣೆಯಲ್ಲಿ ಆಸಕ್ತಿಯುಳ್ಳವರಾಗುವಿರಿ. ಸ್ತ್ರೀಯರಿಂದ ನಿಮ್ಮ ಬಗ್ಗೆ ಸುಳ್ಳು ಅಪವಾದಬರಬಹುದು. ಸರ್ಕಾರ ಕಾರ್ಯವು ಇಂದು ಪೂರ್ಣವಾಗದು ಎಂದು ಅಂದುಕೊಂಡಿದ್ದರೂ ಕೊನೆಗೆ ಕೆಲಸವಾಗುವುದು. ಎಲ್ಲರ ಮೇಲೂ ಅನುಮಾನ ಪಡುವ ದುರಭ್ಯಾಸವು ಬೆಳೆಯಬಹುದು.
ಕುಂಭ ರಾಶಿ: ಯಾರದ್ದಾದರೂ ಭಯದಲ್ಲಿ ಮಾಡುವ ಕೆಲಸಕ್ಕಿಂತ ಪ್ರೀತಿಯಲ್ಲಿ ಮಾಡಿ. ಇಂದು ನಿಮ್ಮ ಯಾವುದಾದರೂ ಕಾರ್ಯಕ್ಕೆ ಸ್ನೇಹಿತರ ಬೆಂಬಲದಿಂದ ಸಾಧ್ಯವಾಗಿಸುವಿರಿ. ಮನೆಯಲ್ಲಿ ನಿಮ್ಮ ಬಗ್ಗೆ ಏನಾದರೂ ಮಾತನಾಡಿಕೊಳ್ಳಬಹುದು. ಸೌಂದರ್ಯವೇ ಶತ್ರುವೂ ಆಗಬಹುದು. ಯಾರಿಗೂ ಸಲಹೆಯನ್ನು ಕೊಡಲು ಇಂದು ಹೋಗಬೇಡಿ. ಸಣ್ಣ ವ್ಯಾಪಾರಕ್ಕೆ ಪ್ರಕೃತಿಯಿಂದ ಪ್ರತಿರೋಧ. ಆರ್ಥಿಕಮೂಲಕ್ಕೆ ಪೆಟ್ಟುಬೀಳುವ ಸಾಧ್ಯತೆ ಇದೆ. ಉತ್ತಮ ಜೀವನಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳಿ. ಇಲ್ಲವಾದರೆ ಅನಂತರ ದುಃಖಿಸಿ ಪ್ರಯೋಜನವಾಗದು. ಅಧ್ಯಾಪನ ವೃತ್ತಿಯಲ್ಲಿ ಇದ್ದವರಿಗೆ ವಿದ್ಯಾರ್ಥಿಗಳು ಉಡುಗೊರೆಯೊಂದನ್ನು ನೀಡುವರು. ನಿಮಗೆ ಯಾರಾದರೂ ಪ್ರೇರಣೆಯಾಗಬಹುದು. ನಿಮ್ಮಿಂದ ಆಶೀರ್ವಾದವನ್ನು ಪಡೆದುಕೊಳ್ಳುವರು. ಮಕ್ಕಳ ವಿದ್ಯಾಭ್ಯಾಸಕ್ಕೆ ನೀವೇ ವಿಶೇಷ ಕಾಳಜಿಯನ್ನು ತೋರಿ ಅವರನ್ನು ಓದಿಗೆ ಪ್ರೇರಣೆ ಕೊಡಬೇಕಾಗುವುದು. ದಿನದ ಕೆಲಸವೇ ಇಂದು ಬಹಳ ಆಗಲಿದ್ದು ಇನ್ನೊಬ್ಬರ ಕೆಲಸವನ್ನು ಮಾಡಿಕೊಡಲು ತಾಳ್ಮೆ ಇರಲಾರದು.
ಮೀನ ರಾಶಿ: ಮೆತ್ತಗಿನ ಸ್ವಭಾವದಿಂದ ನಿಮಗೆ ಆಗಬೇಕಾದುದು ಆಗದು. ಇಂದು ನಿಮ್ಮ ಹಣದ ವಿಚಾರವಾಗಿ ಸಣ್ಣ ಕಲಹಗಳು ಸಂಗಾತಿಯ ನಡುವೆ ನಡೆಯಬಹುದು. ವೃತ್ತಿಯಲ್ಲಿ ನಿಮಗೆ ಸಂತೋಷದ ವಾತಾವರಣವು ಇರಲಿದೆ. ನಿಮಗಿಂದು ಪ್ರೀತಿಯನ್ನು ಕಳೆದುಕೊಳ್ಳತ್ತೇನೋ ಎಂಬ ಭಯವಿರಲಿದೆ. ದೊಡ್ಡವರನ್ನು ಹಾಗೆಯೇ ಗೌರವಿಸಿ. ಅನುಕೂಲವಿದ್ದರೆ ದೂರದಲ್ಲಿರುವ ತಂದೆ, ತಾಯಿಯರನ್ನು ಭೇಟಿ ಮಾಡುವಿರಿ. ನಿಮ್ಮ ಮನೆಯಯಿಂದ ನೀವು ಇಷ್ಟಪಡುವ ಪ್ರಾಣಿಯು ಕಾಣೆಯಾಗಬಹುದು. ನಿಮ್ಮ ಸಂಗಾತಿಯು ನೀವು ಪ್ರೀತಿ ತೋರಿಸಿಲ್ಲವೆಂದು ಸಿಟ್ಟಾಗಬಹುದು. ಆದಷ್ಟು ಸಮಯವನ್ನು ಅವರಿಗೆ ಕೊಡಿ, ಅವರನ್ನು ಖುಷಿಪಡಿಸಿ. ಎಲ್ಲದಕ್ಕೂ ಕಾರಣವನ್ನು ಹುಡುಕುತ್ತ ಕಾಲಹರಣಮಾಡಬೇಡಿ. ದೈವಕೃಪೆ ಸ್ವಲ್ಪ ಕಡಿಮೆ ಇದ್ದು ಅದನ್ನು ಹೆಚ್ಚು ಮಾಡಿಕೊಳ್ಳಿ. ಎಲ್ಲದಕ್ಕೂ ಇನ್ನೊಬ್ಬರನ್ನು ಬೊಟ್ಟುಮಾಡಿ ತೋರಿಸುವುದು ಸರಿಯಾಗದು. ಇನ್ನೊಬ್ಬರ ಬಗ್ಗೆ ನಿಮ್ಮಲ್ಲಿ ಕುತೂಹಲ ಇರಲಿದೆ. ಸಜ್ಜನರ ಜೊತೆ ಸಮಯ ಕಳೆಯುವ ಅವಕಾಶ ಸಿಗುವುದು.