ನಿಮ್ಮ ಖ್ಯಾತಿ ಮತ್ತು ಸ್ಥಾನಮಾನಗಳು ಹೆಚ್ಚಾಗಬಹುದು
ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಗ್ರೀಷ್ಮ ಋತುವಿನ ಜ್ಯೇಷ್ಠ ಮಾಸ ಕೃಷ್ಣ ಪಕ್ಷದ ಚತುರ್ದಶೀ ತಿಥಿ ಮಂಗಳವಾರ ಇತರರಿಂದ ಗೊಂದಲ, ದಾನದಿಂದ ತೃಪ್ತಿ, ವಿದೇಶದಲ್ಲಿ ಆತಂಕ, ಉಚಿತದಿಂದ ಧನನಷ್ಟ ಇವೆಲ್ಲ ಈ ದಿನದ ವಿಶೇಷ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಏನು ಫಲಾಫಲ ಎನ್ನುವುದನ್ನು ತಿಳಿದುಕೊಳ್ಳಿ.

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ಗ್ರೀಷ್ಮ, ಸೌರ ಮಾಸ: ಮಿಥುನ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ರೋಹಿಣೀ, ಯೋಗ: ಆಯುಷ್ಮಾನ್, ಕರಣ : ವಣಿಜ, ಸೂರ್ಯೋದಯ – 06 : 06 am, ಸೂರ್ಯಾಸ್ತ – 07:03 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 15:49 – 17:26, ಯಮಘಂಡ ಕಾಲ 09:21 – 10:58, ಗುಳಿಕ ಕಾಲ 12:35 – 14:12
ತುಲಾ ರಾಶಿ: ಕೇಳಿದವರಿಗೆ ನೀರು ಕೊಟ್ಟು ನೀವು ತೃಪ್ತರಾಗುವಿರಿ. ನಿಮ್ಮ ಕಾರ್ಯದಕ್ಷತೆಗೆ ಜವಾಬ್ದಾರಿಗಳು ಬದಲಾಗಲಿವೆ. ಮಾನಸಿಕ ತೊಂದರೆಯನ್ನು ಅನುಭವಿಸುವಿರಿ. ಅವಕಾಶಗಳು ನಿಮ್ಮ ಕೈತಪ್ಪುವ ಸಾಧ್ಯತೆ ಇದೆ. ಇಷ್ಟು ದಿನ ಹಿಡಿದಿಟ್ಟುಕೊಂಡ ಕೋಪವು ಸ್ಫೋಟವಾಗಿ ಮನೆಯು ರಣಾಂಗಣದಂತೆ ಕಾಣಬಹುದು. ಬದಲಾವಣೆಯೊಂದಿಗೆ ಹೊಂದಾಣಿಕೆ ಸಾಧಿಸುವ ಕೌಶಲ ಅಗತ್ಯ. ಹಣಕಾಸಿನಲ್ಲಿ ಅಪೇಕ್ಷಿತ ಪ್ರಗತಿ ಕಾಣಿಸದಿದ್ದರೂ, ಮುಂದೆ ಫಲ ಇದೆ. ಆರೋಗ್ಯದಲ್ಲಿ ಸಣ್ಣ ಬದಲಾವಣೆಗಳು ಅಸಹಜ ತೊಂದರೆ ತರಬಹುದು. ಎಲ್ಲದಕ್ಕೂ ಕಾರಣ ಬೇಕೆಂದಿಲ್ಲ. ಖುಷಿ ಪಡಿ ಸಾಕು. ನಿಮ್ಮ ಪ್ರೀತಿಪಾತ್ರರು ನಿಮ್ಮಿಂದ ದೂರವಾಗುವರು. ನಿಮ್ಮ ಖ್ಯಾತಿ ಮತ್ತು ಸ್ಥಾನಮಾನಗಳು ಹೆಚ್ಚಾಗಬಹುದು. ನೀವು ಬದಲಾಗಬೇಕು ಎಂದುಕೊಂಡರೂ ಸ್ನೇಹಿತರ ಬಳಗ ನಿಮ್ಮನ್ನು ಸುಮ್ಮನೆ ಬಿಡದು. ತಂದೆ-ತಾಯಿಗಳು ಮಕ್ಕಳ ಮೇಲೆ ಕಣ್ಣಿಡುವುದು ಒಳ್ಳೆಯದು. ಮಕ್ಕಳ ವಿಚಾರವಾಗಿ ಅನವಶ್ಯಕ ಖರ್ಚು ಮಾಡುವುದು ಬೇಡ. ಅವಶ್ಯಕತೆಯನ್ನು ನೋಡಿ.
ವೃಶ್ಚಿಕ ರಾಶಿ: ಮನೆಗೆ ಬಂದವರ ಬಗ್ಗೆ ಸರಿಯಾದ ಗಮನವಿರಲಿ. ಎಲ್ಲರೂ ಒಂದೊಂದು ಕಾರಣಕ್ಕೆ ಬರಲಿದೆ. ನಿಮಗೆ ಸಿಗುವ ಸಾಮಾಜಿಕವಾಗಿ ಮನ್ನಣೆಯು ಅಧಿಕ ಕಾರ್ಯವನ್ನು ಮಾಡುವಂತೆ ಮಾಡೀತು. ಬಂಗಾರದ ವ್ಯಾಪರಿಗಳಿಗೆ ಲಾಭವಾಗಲಿದೆ. ಮಾನಸಿಕ ನೆಮ್ಮದಿಯನ್ನು ಪಡೆದುಕೊಳ್ಳಲಿದ್ದೀರಿ. ಕುಟುಂಬದಿಂದ ಅಶುಭವಾದ ಸುದ್ದಿಯು ನಿಮಗೆ ತಿಳಿಯಲಿದೆ. ವೃತ್ತಿಯಲ್ಲಿ ನಿರ್ಣಾಯಕ ದಿನವಾಗಬಹುದು. ಹಣಕಾಸಿನಲ್ಲಿ ಸ್ಥಿರತೆ ಕಾಣಬಹುದು. ವ್ಯವಹಾರದಲ್ಲಿ ಹೊಸ ಅವಕಾಶ ಸಾಧ್ಯತೆ. ಬಂಧುಬಳಗದಲ್ಲಿ ಒಳ್ಳೆಯ ಸುದ್ದಿ ನಿರೀಕ್ಷೆ. ಕೆಲವನ್ನು ಕಳೆದುಕೊಂಡು ಸುಖಪಡುವುದೇ ಉತ್ತಮ. ಕುಟುಂಬದಲ್ಲಿ ಸಮೃದ್ಧಿ ಬೇಕಾದರೆ ಒಬ್ಬರೇ ತೀರ್ಮಾನಕ್ಕೆ ಬರಬೇಕು. ಎಲ್ಲರನ್ನೂ ಅನುಸರಿಸಿದರೆ ಕೆಲಸ ಕೆಡುವುದು. ಆಸ್ತಿಯ ಖರೀದಿಯ ವಿಚಾರಗಳನ್ನು ಆದಷ್ಟು ವೇಗವಾಗಿ ತೀರ್ಮಾನ ಮಾಡಿ ಮುಗಿಸಿಕೊಳ್ಳಿ. ದೇಹದಂಡನೆಗೆ ಸರಿಯಾದ ಮಾರ್ಗವನ್ನು ಅನುಸರಿಸಿ. ನಿಮ್ಮ ಸಾಮರ್ಥ್ಯಕ್ಕೆ ಕೊಟ್ಟ ಜವಾಬ್ದಾರಿಯು ಸಣ್ಣದಾಗಿರುವುದು. ನಿಮ್ಮ ಬಂಧುಗಳ ಸಹಾಯದಿಂದ ವಿವಾಹದ ಮಾತುಕತೆಯು ಘಟಿಸುವುದು.
ಧನು ರಾಶಿ: ಉಚಿತದಿಂದ ನಿಮ್ಮ ಹಣವೇ ನಷ್ಟವೇ ಇಲ್ಲದಂತಾಗುವುದು. ಇಂದು ನಿಮ್ಮ ದಾಂಪತ್ಯದ ಬಿರುಕು ನ್ಯಾಯಾಲಯದ ಮೆಟ್ಟಿಲೇರಿಸಲೂಬಹುದು. ಆಸ್ತಿಯ ವಿಚಾರದಲ್ಲಿ ಕಲಹಗಳು ಉಂಟಾಗಬಹುದು. ನಿಮ್ಮ ಬಗ್ಗೆ ಅಪಪ್ರಚಾರಗಳು ಕೇಳಿ ಬರಬಹುದು. ವ್ಯಕ್ತಿಗತ ಸಮಸ್ಯೆಗಳು ಮನಸ್ಸಿಗೆ ಭಾರವಾಗಬಹುದು. ಆತ್ಮಸ್ಥೆರ್ಯದಿಂದ ನಿರ್ಧಾರ ತೆಗೆದುಕೊಳ್ಳಿ. ಆರೋಗ್ಯದಲ್ಲಿ ಇವಿಶ್ರಾಂತಿ ಅಗತ್ಯ. ಸಂಜೆಯ ವೇಳೆಗೆ ಶಾಂತ ಮನಸ್ಥಿತಿ ಮೂಡಬಹುದು. ನಿಮಗೆ ಹೊಸ ಶಕ್ತಿ ಸಿಗುತ್ತದೆ. ನಿಮ್ಮ ಗುರಿಯ ಕಡೆಗೆ ಹೆಚ್ಚಿನ ದೃಷ್ಟಿ ಇರಲಿ. ವಿದ್ಯಾರ್ಥಿಗಳು ಉನ್ನತ ಶಿಕ್ಷಣ ದೂರದ ಊರಿನಲ್ಲಿ ಅವಕಾಶ ಸಿಕ್ಕರೂ ಹೋಗಲು ಆಗದ ಸ್ಥಿತಿ ಇರುವುದು. ಕೆಲಸದ ಸ್ಥಳದಲ್ಲಿ ನಿಮ್ಮ ವ್ಯವಸ್ಥಾಪಕರ ಜೊತೆ ಉತ್ತಮ ಹೊಂದಾಣಿಕೆಯನ್ನು ಇಟ್ಟುಕೊಂಡಿರುವಿರಿ. ವಂಚಿಸುವ ಯೋಚನೆ ಮಾಡಿದ್ದರೆ ಅದನ್ನು ಮರೆತುಬಿಡಿ. ಎಲ್ಲದಕ್ಕೂ ಯಾರನ್ನಾದರೂ ಕಾರಣವಾಗಿಸುವಿರಿ. ಶ್ರೇಷ್ಠ ವ್ಯಕ್ತಿಗಳ ಸಹವಾಸವು ನಿಮಗೆ ಸಿಗಲಿದೆ. ವಿದ್ಯಾರ್ಥಿಗಳು ಯಾರ ಬೆಂಬಲಕ್ಕೂ ಕಾಯದೇ ಪ್ರತಿಭಾಪ್ರದರ್ಶನಕ್ಕೆ ಮುನ್ನುಗ್ಗುವರು.
ಮಕರ ರಾಶಿ: ಬೆನ್ನ ಹಿಂದೆ ಇರುವವರನ್ನು ಗಮನಸಿಕೊಳ್ಳದೇ ಮಾಡಿದ ಕೆಲಸ ಕೆಡುವುದು. ಹಣದ ಪ್ರಾಮುಖ್ಯವನ್ನು ತಿಳಿದುಕೊಳ್ಳುವ ಸಮಯವಿಂದು. ನಿಮ್ಮ ವಿದ್ಯುದುಪಕರಣದಿಂದ ನಿಮಗೆ ನಷ್ಟವಾಗಲಿದೆ. ನಿಮ್ಮ ಶತ್ರುಗಳನ್ನು ನೀವು ಸಂಪೂರ್ಣವಾಗಿ ಸೋಲಿಸಿದ್ದೇನೆ ಎಂಬ ಭಾವನೆ ಇರಬಹುದು. ನಿಮ್ಮೊಳಗಿನ ಹೊಸ ಸಾಮರ್ಥ್ಯವನ್ನು ಬೆಳಕಿಗೆ ತರುತ್ತದೆ. ಕೆಲಸದಲ್ಲಿ ಹೊಸ ಅವಕಾಶಗಳು ಬರುವ ನಿರೀಕ್ಷೆಯಿದೆ. ಆರೋಗ್ಯದಲ್ಲಿ ಸುಧಾರಣೆಯ ಲಕ್ಷಣ. ದೀರ್ಘಕಾಲದ ಸಂಕಷ್ಟಕ್ಕೆ ಪರಿಹಾರ ದೊರೆಯಬಹುದು. ಬುದ್ದಿವಂತಿಕೆ ನಿಮ್ಮ ಶಕ್ತಿಯಾಗಲಿದೆ. ಮಕ್ಕಳ ಕಾರಣದಿಂದ ನಿಮಗೆ ನೀವು ತಲೆ ತಗ್ಗಿಸುವಿರಿ. ಬುದ್ಧಿವಾದವನ್ನು ಮಕ್ಕಳಿಗೆ ಹೇಳುವಿರಿ. ಸಾಲಕೊಡುವಾಗ ವಿವೇಚನೆ ಇರಲಿ. ಅತಿಯಾದ ವಿನಯವು ನಿಮ್ಮ ಮೇಲೆ ಅನುಮಾನವು ಬರುವಂತೆ ಮಾಡುವುದು. ನಿಮ್ಮ ಇಂದಿನ ಸಮಯವನ್ನು ನೀವು ಸದುಪಯೋಗ ಮಾಡಿಕೊಳ್ಳಿ. ನಿಮ್ಮ ಖಾಸಗಿ ತನಕ್ಕೆ ತೊಂದರೆಯಾಗಲಿದೆ. ಸಾಮಾಜಿಕ ಕ್ಷೇತ್ರದಲ್ಲಿ ಮನ್ನಣೆಯನ್ನು ಪಡೆಯುವಿರಿ.
ಕುಂಭ ರಾಶಿ: ಇಂದು ಶೀಘ್ರ ಕೋಪ ಮಾಡಿಕೊಳ್ಳುವುದು ಬೇಡ. ಸಜ್ಜನರ ಭೇಟಿಯಾಗುವ ಸಾಧ್ಯತೆ ಇದೆ. ಆಪ್ತರ ಜೊತೆ ಉದ್ಯೋಗಕ್ಕೆ ಸಂಬಂಧಿಸಿದ ಸಮಾಲೋಚನೆಯನ್ನು ನಡೆಸುವಿರಿ. ನಿಮ್ಮ ಶತ್ರುಗಳು ನಿಮ್ಮನ್ನು ಸೋಲಿಸಲು ತಯಾರಾಗಿರುವರು. ನಿಮ್ಮ ಬಳಿ ಇರುವ ಕೆಲವು ವಸ್ತುಗಳನ್ನು ಇನ್ನೊಬ್ಬರಿಗೆ ನೀಡುವಿರಿ. ಮನೆಯ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳುವ ಮುನ್ನ ಯೋಚಿಸಿ. ಹಣಕಾಸಿನಲ್ಲಿ ಮಧ್ಯಮ ಸ್ಥಿತಿ ನಿರೀಕ್ಷಿಸಬಹುದು. ಆರೋಗ್ಯದಲ್ಲಿ ಸಾಧಾರಣ ಸ್ಥಿತಿ ಇರುತ್ತದೆ. ಮಕ್ಕಳ ಸಾಧನೆಯಿಂದ ಹೆಮ್ಮೆ ಪಡುವಿರಿ. ಆತ್ಮವಿಶ್ವಾಸದಿಂದ ನಿಮಗೆ ಇನ್ನಷ್ಟು ಬಲ ಬರಲಿದೆ. ಪ್ರವಾಸದಿಂದ ನಿಮಗೆ ಆಯಾಸವಾಗಲಿದೆ. ಜೋಪಾನಮಾಡಿ ಇಟ್ಟುಕೊಳ್ಳಿ. ಸಾಧಿಸುವ ಛಲವಿದ್ದರೂ ಪರಿಸ್ಥಿತಿ ಅನುಕೂಲವಾಗಿ ಇರದು. ಸದಾ ನಿದ್ರೆ ಮಾಡುವ ಯೋಚನೆ ಇರಲಿದೆ. ನಿಮ್ಮ ಅಂದಾಜು ಮೀರಬಹುದು. ಆದಾಯಕ್ಕೆ ನಾನಾ ಮೂಲವನ್ನು ಆಯ್ಕೆ ಮಾಡಿಕೊಳ್ಳುವಿರಿ. ಮಾರಾಟದ ವಿಷಯದಲ್ಲಿ ಹಿನ್ನಡೆಯಾಗಲಿದೆ. ಆಕಸ್ಮಿಕವಾಗಿ ಆರೋಗ್ಯವು ಹದ ತಪ್ಪಬಹುದು.
ಮೀನ ರಾಶಿ: ಅಸಲು ಸಂಗತಿಗಳಿಂದ ನೀವು ಬಹಳ ದೂರ ಬಂದಿರುವಿರಿ. ಒತ್ತಡದ ನಡುವೆಯೂ ಕಾರ್ಯನಿರ್ವಹಣೆ ಮಾಡಿದ ಕೌಶಲಕ್ಕೆ ಪ್ರಂಶಸೆಗಳು ಸಿಗಲಿವೆ. ಹಣದ ಸಮಸ್ಯೆಗಳಿಂದ ಮುಕ್ತರಾಗುವಿರಿಸಿ. ಅನೇಕ ಅವಕಾಶಗಳು ನಿಮ್ಮನ್ನು ಅರಸಿ ಬರಲಿವೆ. ಇಂದು ವಿದ್ಯಾರ್ಥಿಗಳು ದೂರದ ಊರಿಗೆ ಹೆಚ್ಚಿನ ಹಣಕಾಸಿನಲ್ಲಿ ಸತತ ನಿರೀಕ್ಷೆಗಳಿದ್ದರೂ ಚಿಕ್ಕ ನಷ್ಟವೊಂದು ಸಂಭವಿಸಬಹುದು. ಆರೋಗ್ಯದಲ್ಲಿ ಸಣ್ಣ ಸಮಸ್ಯೆ ಕಾಣಿಸಬಹುದು. ಹಳೆಯ ಸ್ನೇಹಿತರಿಂದ ಪರಿಹಾರ ಸಿಗುವ ಸಾಧ್ಯತೆ ಇದೆ. ವ್ಯಾಪಾರಸ್ಥರಿಗೆ ಖ್ಯಾತಿಯೂ ಹಣವೂ ಸಿಗಲಿದೆ. ನಿಮ್ಮ ಧಾರ್ಮಿಕ ಭಾವನೆಗಳಿಗೆ ತೊಂದರೆ ಕೊಡಬಹುದು. ಯಾರಾದರೂ ತೊಂದ ಹೊಸ ಯೋಜನೆಯ ಕೆಲಸವನ್ನು ನೀವು ಪ್ರಾರಂಭಿಸುವಿರಿ. ವೃತ್ತಿಜೀವನದಲ್ಲಿ ಮುಂದುವರಿಯಲು ನೂತನ ಅವಕಾಶಗಳು ನಿಮಗೆ ಸಿಗಲಿವೆ. ಜೀವನದ ಹಾದಿಯಲ್ಲಿ ಹೆಚ್ಚು ಏರಿಳಿತಗಳು ಇರದೇ ಆರಾಮಾಗಿ ಹೋಗುವಿರಿ.