AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಭಾನುವಾರದ ದಿನ ಭವಿಷ್ಯ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮಾರ್ಚ್ 26) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope Today: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಭಾನುವಾರದ ದಿನ ಭವಿಷ್ಯ
ಇಂದಿನ ರಾಶಿ ಭವಿಷ್ಯImage Credit source: freepik
Rakesh Nayak Manchi
|

Updated on: Mar 26, 2023 | 6:15 AM

Share

ಪ್ರತಿ ದಿನ ಸೂರ್ಯ, ಚಂದ್ರ ಹುಟ್ಟುತ್ತಾರೆ. ಭೂಮಿ ತಿರುಗುತ್ತಿರುತ್ತೆ. ಪ್ರತಿಯೊಬ್ಬರ ಜೀವನವು ನಡೆಯುತ್ತಲೇ ಇರುತ್ತೆ. ದಿನ, ಸಮಯ ಎಲ್ಲರಿಗೂ ಒಂದೇ ಆದ್ರೂ ಜೀವನದಲ್ಲಿ ನಡೆಯುವ ಘಟನೆಗಳು ವಿಭಿನ್ನ. ಇದಕ್ಕೆ ಕಾರಣ ನಮ್ಮ ಜನ್ಮ ರಾಶಿಗಳಲ್ಲಾಗುವ ಬದಲಾವಣೆ. ನಮ್ಮ ಆರೋಗ್ಯ, ಯಶಸ್ಸು, ಸಂತೋಷ, ನೆಮ್ಮದಿ ಎಲ್ಲವೂ ನಮ್ಮ ರಾಶಿಗಳ ಮೇಲೆ ಅವಲಂಬಿತವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಕೆಲವರು ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗಾದರೆ ಇಂದಿನ (2023 ಮಾರ್ಚ್ 26) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭ ಎಂದು  ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಚೈತ್ರ, ಪಕ್ಷ : ಶುಕ್ಲ, ವಾರ : ಭಾನು, ತಿಥಿ : ಪಂಚಮೀ, ನಿತ್ಯನಕ್ಷತ್ರ : ಕೃತ್ತಿಕಾ, ಯೋಗ : ಪ್ರೀತಿ, ಕರಣ : ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 33 ನಿಮಿಷಕ್ಕೆ, ಸೂರ್ಯಾಸ್ತ ಬೆಳಗ್ಗೆ 06 ಗಂಟೆ 42 ನಿಮಿಷಕ್ಕೆ. ರಾಹು ಕಾಲ ಸಂಜೆ 05:11 ರಿಂದ 06:43ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:38 ರಿಂದ 02:09ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:40 ರಿಂದ 05:11ರ ವರೆಗೆ.

ಸಿಂಹ: ಆತಂಕಕಾರಿ ವಿಚಾರವೊಂದು ನಿಮಗೆ ತಿಳಿಯಲಿದೆ. ಈಗಿರುವ ಕೆಲಸವನ್ನು ಬಿಟ್ಟು ಸ್ವಂತ ಉದ್ಯೋಗಕ್ಕೆ ತೊಡಗಬಹುದು. ಸಂತೋಷವಾಗಿರಲು ಬೇಕಾದಂತೆ ನಿಮ್ಮ ಶ್ರಮವನ್ನು ಇಟ್ಟುಕೊಳ್ಳಿ.‌ ಬಂಧುಗಳ ಭೇಟಿ ಸ್ವಲ್ಪ ಕಿರಿಕಿರಿ ಎನಿಸಿದರೂ ಅನಿವಾರ್ಯವಾಗಿ ಸುಮ್ಮನಿರುವಿರಿ. ಮನಸ್ಸಿಗೆ ಬುದ್ಧಿಗೆ ಕೆಲಸವನ್ನು ಕೊಡಬೇಡಿ. ಧನಾಗಮನದ ವಾರ್ತೆಯು ಇರಲಿದೆ. ಮರಗೆಲಸದವರಿಗೆ ಉತ್ತಮ ಕೆಲಸಗಳು ಸಿಗಲಿವೆ. ಜನರ ನಡುವೆ ಇರಲು ಬಯಸುವಿರಿ. ಉನ್ನತ ಹುದ್ದೆಯ ಆಕಾಂಕ್ಷಿಯಾಗಿದ್ದರೆ ಪ್ರಯತ್ನಶೀಲರಾಗಿ, ಪಡೆದುಕೊಳ್ಳುವ ಸಾಧ್ಯತೆ ಇದೆ.

ಕನ್ಯಾ: ಇಂದು ಇಷ್ಟು ದಿನ ನಂಬಿ ಬಂದಿದ್ದ ಆಸ್ತಿಯು ಕೈ ತಪ್ಪುವ ಸಾಧ್ಯತೆ ಇದೆ. ಸಹನೆಯನ್ನು ಕಳೆದುಕೊಳ್ಳುವ ಸಂದರ್ಭದಲ್ಲಿ ನಿಮಗೆ ಎಚ್ಚರಿಕೆ ಇರಲಿ. ಸರ್ಕಾರಿ ಕಾರ್ಯಗಳು ಹಿಂದೆ ಬೀಳಲಿವೆ. ಅನಿವಾರ್ಯವಾಗಿ ಮಾಡಿದ ಸಣ್ಣ ಸಾಲವು ಇಂದು ದೊಡ್ಡದಾಗಿದೆ. ಇನ್ನೂ ಸಾಲಕ್ಕೆಂದು ಇನ್ನೊಬ್ಬರ ಬಳಿ ಕೈ ಚಾಚ ಬೇಕಾಗಬಹುದು.‌ ಕಛೇರಿಯಲ್ಲಿ ನೀವಿಂದು ಸ್ವತಂತ್ರರು. ಅಂಕೊಂಡಂತೆ ಆಗಲಿಲ್ಲ ಎಂದು ಬೇಸರಪಡಬೇಡಿ. ಮನೋಬಲವೃದ್ಧಿಗೆ ಬೇಕಾದ ಕ್ರಮಗಳನ್ನು ಕೈಗೊಳ್ಳಿ. ಆಗುವುದನ್ನು ಒಮ್ಮನಸ್ಸಿನಿಂದ ಒಪ್ಪಿಕೊಳ್ಳಿ. ಆರ್ಥಿಕವಿಚಾರದಲ್ಲಿ ದಂಪತಿಗಳ ನಡುವೆ ಮನಸ್ತಾವಿರಲಿದೆ.

ತುಲಾ: ವಿದೇಶಕ್ಕೆ ಸಂಬಂಧಪಟ್ಟ ವ್ಯವಹಾರವು ಸಿಗುವ ಸಾಧ್ಯತೆ ಇದೆ. ಆನಾರೋಗ್ಯವು ಸ್ವಲ್ಪ ಕಿರಿಕಿರಿಯನ್ನು ಮಾಡಲಿದೆ. ವ್ಯಾಪಾರದಲ್ಲಿ ಮಂದಗತಿ ಇರಲಿದೆ. ಯಂತ್ರೋಪಕರಣದ ಮಾರಾಟಗಾರಿಗೆ ಲಾಭವು ಆಗುವುದು. ಶಿಕ್ಷಕರು ತಮ್ಮ ವೃತ್ತಿಯಲ್ಲಿ ಕೀರ್ತಿಯನ್ನು ಗಳಿಸುವರು. ನಿಮಗೆ ಅಪಮಾನವಾಗುವ ಕೆಲಸವು ನಡೆಯಬಹುದು. ಸ್ತ್ರೀಸಂಬಂಧವಾದ ಅಪವಾದಗಳು ಬರಬಹುದು. ಬ್ಯಾಂಕ್ ಉದ್ಯೋಗದಲ್ಲಿ ಸ್ಥಾನವು ದಲಾವಣೆಯಾಗಲಿದೆ. ಮಾನಸಿಕ ಕಿರುಕುಳವನ್ನು ಅನ್ಯರಿಂದ ಅನುಭವಿಸುವಿರಿ. ಹೊಸತನ್ನು ಮಾಡಲು ಹೋಗಿ ಮುಗ್ಗರಿಸುವಿರಿ. ಸದ್ಯ ನಿಮ್ಮ ಯಥಾಸ್ಥಿತಿಯನ್ನು ಕಾಪಾಡಿಕೊಳ್ಳಿ.

ವೃಶ್ಚಿಕ: ನಿಮ್ಮ‌ ಕರ್ತವ್ಯಗಳನ್ನು ಮರೆತಿದ್ದು, ಅದನ್ನು ಬೇರೆಯವರು ನೆನಪಿಸುವರು. ಅದು ನಿಮಗೆ ಕೋಪಕ್ಕೆ ಕಾರಣವಾದೀತು. ಕುಟುಂಬಕ್ಕೆ ಆಗಬೇಕಾದ ಕೆಲಸಗಳಿಂದ ಖರ್ಚುಗಳು ಹೆಚ್ಚಾಗಬಹುದು. ಯಾತ್ರೆಯನ್ನು ಮಾಡಲಿದ್ದೀರಿ. ಖರ್ಚನ್ನು ನಿಯಂತ್ರಿಸುವುದಕ್ಕಾಗಿ ನಿಮ್ಮ ಅವಶ್ಯಕತೆಗಳನ್ನು ಸದ್ಯ ನಿಲ್ಲಿಸುವಿರಿ. ಕ್ರೀಡೆಯಲ್ಲಿ ಮನಸ್ಸು ಇಡುವಿರಿ. ಲೇಖಕರು, ಸಾಹಿತಿ, ಪತ್ರ ಕರ್ತರಿಗೆ ಒಳ್ಳೆಯ ಸಮಾಚಾರ ಸಿಗಲಿದೆ.‌ ಪ್ರಶಸ್ತಿಗಳು ನಿಮ್ಮ ಕಾರ್ಯವನ್ನು ಹುಡುಕಿಕೊಂಡು ಬರಬಹುದು. ಓಡಾಟದ ಸುಸ್ತು ನಿಮಗೆ ಅನಾರೋಗ್ಯವಾಗಲಿದೆ. ವಿಶ್ರಾಂತಿಯನ್ನು ಪಡೆಯುವುದು ಉತ್ತಮ.

-ಲೋಹಿತಶರ್ಮಾ ಇಡುವಾಣಿ

ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಸತ್ಯ ಬಿಚ್ಚಿಟ ಮಗ
ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಸತ್ಯ ಬಿಚ್ಚಿಟ ಮಗ
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್