AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope ದಿನ ಭವಿಷ್ಯ ಈ ರಾಶಿಯವರಿಗೆ ಭಾಗ್ಯವೃದ್ಧಿಯಾಗುವ ಯೋಗವಿದೆ

Today Horoscope ಏಪ್ರಿಲ್ 16, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope ದಿನ ಭವಿಷ್ಯ ಈ ರಾಶಿಯವರಿಗೆ ಭಾಗ್ಯವೃದ್ಧಿಯಾಗುವ ಯೋಗವಿದೆ
ದಿನ ಭವಿಷ್ಯ
ಆಯೇಷಾ ಬಾನು
|

Updated on: Apr 16, 2021 | 6:14 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲಪಕ್ಷ, ಚೌತಿ ತಿಥಿ, ಶುಕ್ರವಾರ, ಏಪ್ರಿಲ್ 16, 2021. ರೋಹಿಣಿ ನಕ್ಷತ್ರ, ರಾಹುಕಾಲ :ಇಂದು ಬೆಳಿಗ್ಗೆ 10.41 ರಿಂದ ಇಂದು ಬೆಳಿಗ್ಗೆ 12.15ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.59. ಸೂರ್ಯಾಸ್ತ: ಸಂಜೆ 6.32.

ತಾ.16-04-2021 ರ ಶುಕ್ರವಾರದ ರಾಶಿಭವಿಷ್ಯ

ಮೇಷ: ಆರೋಗ್ಯಕ್ಕೆ ಸಂಬಂಧಿಸಿದ ವಿಪತ್ತಿನಿಂದ ಪಾರಾಗುವಿರಿ. ಕಷ್ಟದ ಸಮಯದಲ್ಲಿಯೂ ಸಂಯಮ ಕಳೆದುಕೊಳ್ಳದೇ ಮುಂದುವರೆಯುವಿರಿ. ಉದ್ಯೋಗದಲ್ಲಿ ವರ್ಗಾವಣೆಯ ಯೋಗವಿದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ. ಶುಭ ಸಂಖ್ಯೆ: 5

ವೃಷಭ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಉದ್ಯೋಗದ ಸ್ಥಾನ ಬದಲಾವಣೆಯ ವಿಚಾರವಾಗಿ ಚಿಂತೆ ಇರುವುದು. ಶುಭ ಸಂಖ್ಯೆ: 9

ಮಿಥುನ: ಅನಿಸಿಕೆಗಿಂತ ವಾಸ್ತವ ಬೇರೆ ಇರುವುದರಿಂದ ತಕ್ಕ ಬದಲಾವಣೆ ಮಾಡಿಕೊಳ್ಳುವಿರಿ. ನಡತೆಯಲ್ಲಿ ಸೂಕ್ಷ್ಮತೆ ಇರಲಿ. ವ್ಯವಹಾರವನ್ನು ಪೂರ್ಣವಾಗಿ ಆಲೋಚಿಸಿ ಮಾಡುವುದು ಒಳ್ಳೆಯದು. ಧನಹಾನಿಯ ಸಂಭವವಿದೆ. ಶುಭ ಸಂಖ್ಯೆ: 1

ಕಟಕ: ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವುದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು. ಶುಭ ಸಂಖ್ಯೆ: 7

ಸಿಂಹ: ಕೆಲಸದಲ್ಲಿ ಅಭಿವೃದ್ಧಿ ಇದೆ. ಹಣಕಾಸಿನ ವ್ಯವಹಾರವನ್ನು ತಾಳ್ಮೆಯಿಂದ ನಿಭಾಯಿಸಿ. ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಮಂಗಳ ಕಾರ್ಯ ಜರುಗುವುದು. ಶುಭ ಸಂಖ್ಯೆ: 4

ಕನ್ಯಾ: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ. ಶುಭ ಸಂಖ್ಯೆ: 6

ತುಲಾ: ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೊಟ್ಟಸಾಲ ಮರುಪಾವತಿಯಾಗುವುದು. ಶುಭ ಸಂಖ್ಯೆ: 8

ವೃಶ್ಚಿಕ: ಆರ್ಥಿಕ ಸ್ಥಿತಿ ಸುಧಾರಿಸುವುದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವುದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ. ಶುಭ ಸಂಖ್ಯೆ: 3

ಧನು: ಅನಾವಶ್ಯಕ ತಿರುಗಾಟ, ನೌಕರಿಯಲ್ಲಿ ಕಿರಿಕಿರಿ, ಸ್ಥಾನಪಲ್ಲಟ ಸಾಧ್ಯತೆ, ಬಡ್ತಿಯೋಗ, ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುವುದು. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವುದು. ತರಕಾರಿ ದಾನ ಮಾಡಿರಿ. ಶುಭ ಸಂಖ್ಯೆ: 7

ಮಕರ: ಕೆಲಸ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವುದು. ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವುದು. ವಾದ-ವಿವಾದ, ಹಠಸಾಧನೆ ಬೇಡ. ಶುಭ ಸಂಖ್ಯೆ: 1

ಕುಂಭ: ವಾಸಸ್ಥಾನ, ಉದ್ಯೋಗಸ್ಥಾನ ಬದಲಾವಣೆಯ ಯೋಗವಿದೆ. ಕೌಟುಂಬಿಕ ಸಮಸ್ಯೆಗಳು ದೂರಾಗುವವು. ವ್ಯವಹಾರಿಕ ಸೂಕ್ಷ್ಮತೆಯಿಂದ ಹಾನಿ ತಪ್ಪಿಸಿರಿ. ವೃಥಾಚಿಂತೆ ಇರುವುದು. ಹೊಸ ವ್ಯವಹಾರಗಳು ಬೇಡ. ಶುಭ ಸಂಖ್ಯೆ: 5

ಮೀನ: ಏಕಾಂಗಿತನದ ಬೇಸರ ಪರಿಸರದಿಂದ ಹೊರಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ. ನಿರಾಕರಿಸಿದ್ದ ಜವಾಬ್ದಾರಿ ಪುನ: ಸುಪರ್ದಿಗೆ ಬಂದು ಮೆಚ್ಚುಗೆಯಾಗಿ ನಿಭಾವಣೆ. ಬಾಳ ಸಂಗಾತಿ ಜತೆಗಿನ ಚಿಕ್ಕ ಪುಟ್ಟ ಚರ್ಚೆಗಳೇ ಮುಂದೆ ವಿರಸಕ್ಕೆ ದಾರಿಯಾದೀತು. ಶುಭ ಸಂಖ್ಯೆ: 3

Dina Bhavishya

ದಿನ ಭವಿಷ್ಯ

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Weekly Horoscope: ಜುಲೈ 28 ರಿಂದ ಆಗಸ್ಟ್​ 03 ರವರೆಗಿನ ವಾರ ಭವಿಷ್ಯ
Weekly Horoscope: ಜುಲೈ 28 ರಿಂದ ಆಗಸ್ಟ್​ 03 ರವರೆಗಿನ ವಾರ ಭವಿಷ್ಯ
Daily Devotional: ಮಾತುಕತೆ ವೇಳೆ ಒಂಟಿ ಸೀನು ಅಪಶಕುನವೇ?
Daily Devotional: ಮಾತುಕತೆ ವೇಳೆ ಒಂಟಿ ಸೀನು ಅಪಶಕುನವೇ?
ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ