AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today – ದಿನ ಭವಿಷ್ಯ; ತುಲಾ ರಾಶಿಯವರು ಆಮಿಷಕ್ಕೆ ಒಳಗಾಗಿ ಮೋಸಹೋಗುವ ಸಾಧ್ಯತೆ

ಪ್ಲವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಸಪ್ತಮಿ ತಿಥಿ, ಸೋಮವಾರ, ಏಪ್ರಿಲ್ 19, 2021. ಪುನರ್ವಸು ನಕ್ಷತ್ರ.

Horoscope Today - ದಿನ ಭವಿಷ್ಯ; ತುಲಾ ರಾಶಿಯವರು ಆಮಿಷಕ್ಕೆ ಒಳಗಾಗಿ ಮೋಸಹೋಗುವ ಸಾಧ್ಯತೆ
ರಾಶಿ ಭವಿಷ್ಯ
ರಾಜೇಶ್ ದುಗ್ಗುಮನೆ
| Updated By: Digi Tech Desk|

Updated on:Apr 19, 2021 | 10:08 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಸಪ್ತಮಿ ತಿಥಿ, ಸೋಮವಾರ, ಏಪ್ರಿಲ್ 19, 2021. ಪುನರ್ವಸು ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 7:31ರಿಂದ ಇಂದು ಬೆಳಿಗ್ಗೆ 9: 05 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.57. ಸೂರ್ಯಾಸ್ತ: ಸಂಜೆ 6.32.

ತಾ.18-04-2021 ರ ಶನಿವಾರದ ರಾಶಿಭವಿಷ್ಯ.

ಮೇಷ: ಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ ಸಮಾಧಾನ ಚಿತ್ತದಿಂದ ವರ್ತಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವದು. ಹಾನಿ ಇಲ್ಲ ಆದರೆ ಲಾಭವೂ ಇಲ್ಲದ ಸ್ಥಿತಿ ಇರುವದು. ಶುಭಸಂಖ್ಯೆ: 6

ವೃಷಭ: ಯೋಜನೆಗಳಿಗೆ ಪೂರ್ವ ತಯಾರಿ ಮಾಡುವ ಅಗತ್ಯತೆ ಕಂಡುಬರುವದು. ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವದು ಒಳಿತು. ಶುಭಸಂಖ್ಯೆ: 4

ಮಿಥುನ: ಕುಟುಂಬದಲ್ಲಿ ಭಿನ್ನಾಭಿಪ್ರಾಯ ಇರುವದು. ವೈವಾಹಿಕ ಚಿಂತೆ ಇರುವದು. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗವಿದೆ.ಹಿರಿಯರ ಸಲಹೆಗೆ ತಕ್ಕಂತೆ ಮುಂದುವರೆಯಿರಿ. ಶುಭಸಂಖ್ಯೆ: 8

ಕರ್ಕ: ಹೊಟ್ಟೆಕಿಚ್ಚು ಮಾಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರಸರಿಯುವರು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ಶುಭಸಂಖ್ಯೆ: 5

ಸಿಂಹ: ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅರ್ಧಕ್ಕೆನಿಂತ ಕೆಲಸಗಳು ಮುಂದುವರೆಯುವದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಶುಭಸಂಖ್ಯೆ: 9

ಕನ್ಯಾ: ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವದರಿಂದ ಕಾರ್ಯಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡಮೊತ್ತದ ಹಣಹೂಡಿಕೆ ಈಗ ಬೇಡ. ಶುಭಸಂಖ್ಯೆ: 8

ತುಲಾ: ಹೊಸ ಕೆಲಸವನ್ನು ಒಪ್ಪಿಕೊಳ್ಳುವ ಮೊದಲು ವಿಚಾರಮಾಡಿ ಮುಂದುವರೆಯಿರಿ. ಉದ್ಯೋಗದ ಸ್ಥಾನ ಬದಲಾವಣೆಯ ಯೋಗವಿದೆ. ಆಮಿಷಕ್ಕೆ ಒಳಗಾಗಿ ಮೋಸಹೋಗುವ ಸಂಭವವಿದೆ. ಎಚ್ಚರಿಕೆ ವಹಿಸಿರಿ. ಶುಭಸಂಖ್ಯೆ: 7

ವೃಶ್ಚಿಕ: ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆಗಳಿವೆ.ವ್ಯವಹಾರದಲ್ಲಿ ಮಂದಗತಿ ಇರುವದು. ವ್ಯಾಪಾರದಲ್ಲಿ ಜಾಗರೂಕತೆ ಅವಶ್ಯ. ಹಾನಿ ತಡೆಗಟ್ಟುವ ಪ್ರಯತ್ನಕ್ಕೆ ಫಲ ದೊರೆಯಲಿದೆ. ವಿದ್ಯಾರ್ಥಿಗಳಿಗೆ ಶುಭಫಲವಿದೆ. ಶುಭಸಂಖ್ಯೆ: 3

ಧನು: ಸಹನೆ ಇಲ್ಲದ ಆತುರದ ನಡೆಯಿಂದ ಹಾನಿ ಸಂಭವ ಎಚ್ಚರಿಕೆ ವಹಿಸಿರಿ. ಅನೀರೀಕ್ಷಿತವಾಗಿ ಬರುವ ವಿಘ್ನಗಳು ತಾವಾಗಿಯೇ ಪರಿಹಾರ ಕಾಣುವವು. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಶುಭಸಂಖ್ಯೆ: 8

ಮಕರ: ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕಂತೆ ಕೆಲಸಗಳು ಕೈಗೂಡುವವು. ಮಾತು ಕೇಳದ ಜನರಿಂದ ದೂರವಿರಿ. ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವದು. ಆಸ್ತಿ ಖರೀದಿ ಯೋಗವಿದೆ ಪ್ರಯತ್ನಿಸಿ. ಶುಭಸಂಖ್ಯೆ: 6

ಕುಂಭ: ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ಮೊದಲು ಕಷ್ಟ ನಂತರದಲ್ಲಿ ಉತ್ತಮವಾದ ಫಲ ದೊರೆಯುವದು. ಗುರುಬಲ ವೃದ್ಧಿಸುವದು. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವದು. ಶುಭಸಂಖ್ಯೆ: 1

ಮೀನ: ಬಹುಜನರ ಪ್ರಶಂಸೆಗೆ ಪಾತ್ರವಾಗುವ ಆಡಳಿತಾತ್ಮಕ ನಿರ್ಧಾರ. ಇದ್ದಕ್ಕಿದಂತೆ ಶುಭಕರ ಒಲವು. ಸಲ್ಲುವ ವಿಚಾರದಲ್ಲಿ ಕುಟುಂಬದ ಒಗ್ಗಟ್ಟು ವೃದ್ಧಿ. ಆರ್ಥಿಕಾನೂಕೂಲದಿಂದ ಸರಳ ವ್ಯವಹಾರ. ಹೆಂಗಳೆಯರದು ಮೌನವಾದ ಕೆಲಸ. ಆದರೆ ಪರಿಣಾಮ ಜಾಸ್ತಿ . ಶುಭಸಂಖ್ಯೆ: 3

Dina Bhavishya

ದಿನ ಭವಿಷ್ಯಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Published On - 6:45 am, Mon, 19 April 21

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ