AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today – ದಿನ ಭವಿಷ್ಯ; ಈ ರಾಶಿಯವರ ಉದಾಸೀನತೆಯಿಂದ ಕಾರ್ಯಹಾನಿ ಸಂಭವವಿದೆ

Today Horoscope ಏಪ್ರಿಲ್ 28, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today - ದಿನ ಭವಿಷ್ಯ; ಈ ರಾಶಿಯವರ ಉದಾಸೀನತೆಯಿಂದ ಕಾರ್ಯಹಾನಿ ಸಂಭವವಿದೆ
ದಿನ ಭವಿಷ್ಯ
ಆಯೇಷಾ ಬಾನು
| Edited By: |

Updated on:Apr 28, 2021 | 9:09 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣಪಕ್ಷ, ಬಿದಿಗೆ ತಿಥಿ, ಬುಧವಾರ, ಏಪ್ರಿಲ್ 28, 2021. ವಿಶಾಖ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 12.12 ರಿಂದ ಇಂದು ಮಧ್ಯಾಹ್ನ 1.47 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.51. ಸೂರ್ಯಾಸ್ತ: ಸಂಜೆ 6.35.

ತಾ.28-04-2021 ಬುಧವಾರದ ರಾಶಿಭವಿಷ್ಯ

ಮೇಷ: ಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯೆಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವುದು. ಶುಭ ಸಂಖ್ಯೆ: 5

ವೃಷಭ: ಕೆಲಸಗಳು ನಿಧಾನಗತಿಯಲ್ಲಿ ಸಾಗುವವು ಸೂಕ್ಷ್ಮತೆಯಿಂದ ವ್ಯವಹರಿಸಿರಿ. ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ಮನೋಚಿಂತಿತ ಕಾರ್ಯ ಕೈಗೂಡುವುದು. ಹಳೆಯ ಸಾಲ ತೀರುವುದು. ಶುಭ ಸಂಖ್ಯೆ: 9

ಮಿಥುನ: ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕಂತೆ ಕೆಲಸಗಳು ಕೈಗೂಡುವವು. ಮಾತು ಕೇಳದ ಜನರಿಂದ ದೂರವಿರಿ. ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಆಸ್ತಿ ಖರೀದಿ ಯೋಗವಿದೆ ಪ್ರಯತ್ನಿಸಿ. ಶುಭ ಸಂಖ್ಯೆ: 4

ಕಟಕ: ಉದಾಸೀನತೆಯಿಂದ ಕಾರ್ಯಹಾನಿ ಸಂಭವ. ಅನುಮಾನಗಳು ಮೂಡಿ ಕೈಗೊಂಡ ಕಾರ್ಯಕ್ಕೆ ವಿಘ್ನ ಉಂಟಾಗುವ ಸಂಭವವಿದೆ. ಸಾಮಾಜಿಕ ಗೌರವನ್ನು ಉಳಿಸಿಕೊಳ್ಳುವಲ್ಲಿ ಸಫಲರಾಗುವಿರಿ. ಶುಭ ಸಂಖ್ಯೆ: 7

ಸಿಂಹ: ಶತ್ರುಗಳ ಉಪಟಳವು ಆಗಾಗ ಕಂಡುಬಂದರೂ ಧೈರ್ಯದಿಂದ ಕಾರ್ಯ ಸಾಧಿಸುವಿರಿ. ಇಷ್ಟಸಿದ್ಧಿಯ ಕಾಲ ಇರುವುದರಿಂದ ಅನೇಕ ರೀತಿಯ ಭೋಗಭಾಗ್ಯಗಳು ಕೂಡಿಬರಲಿವೆ. ಸಾಂಸಾರಿಕ ಸಮಸ್ಯೆಗಳು ಪರಿಹಾರವಾಗುವವು. ಶುಭ ಸಂಖ್ಯೆ: 3

ಕನ್ಯಾ: ಹೊಸ ಆಲೋಚನೆಯೊಂದು ಕಾರ್ಯರೂಪಕ್ಕೆ ಬರುವುದು. ಸಹವರ್ತಿಗಳ ಅಸಹಕಾರ ಇದ್ದರೂ ತೊಂದರೆ ಆಗಲಾರದು. ಅನಪೇಕ್ಷಿತ ಸ್ಥಾನ ಬದಲಾವಣೆ ಆಗುವ ಸಾಧ್ಯತೆ ಇದೆ. ಸರಿಯಾದ ಧ್ಯೇಯದಿಂದ ಸಮಾಧಾನ ಇರುವುದು. ಶುಭ ಸಂಖ್ಯೆ: 1

ತುಲಾ: ಧಾರ್ಮಿಕ ಕ್ಷೇತ್ರದಲ್ಲಿ ಗೌರವ ಸಮ್ಮಾನಗಳು ದೊರೆಯುವವು. ಅತಿಯಾದ ನಿರೀಕ್ಷೆಯಿಂದ ಅಸಮಾಧಾನ ಕಂಡುಬರುವುದು. ದೂರುವವರೇ ಹೊಗಳಿದರೂ ನೆಮ್ಮದಿ ಇರಲಾರದು. ಸ್ವಯಂ ಪ್ರತಿಷ್ಟೆಗೆ ಧನವ್ಯಯ ಆಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 2

ವೃಶ್ಚಿಕ: ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವುದು ಒಳಿತು. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವುದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ. ಶುಭ ಸಂಖ್ಯೆ: 8

ಧನು: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವುದು. ವಿದೇಶ ಪ್ರಯಾಣದ ಯೋಗವಿದೆ. ಶುಭ ಸಂಖ್ಯೆ: 4

ಮಕರ: ಹಲವು ರೀತಿಯಿಂದ ಧನಾಗಮನವಿದ್ದು ಐಶ್ವರ್ಯವೃದ್ಧಿ, ಸಂಸಾರ ಸುಖ. ಅಪೇಕ್ಷಿತ ವಸ್ತು, ಪ್ರಾಪ್ತಿ, ಮಿತ್ರಾಗಮನ, ವಿಶೇಷ ಸಂತೋಷ ಪ್ರಸಂಗಗಳು ಒದಗಿ ಬಂದು ಸಂಭ್ರಮವೆನಿಸುತ್ತದೆ. ಶುಭ ಸಂಖ್ಯೆ: 3

ಕುಂಭ: ದಿಟ್ಟತನ, ಮನೋಸ್ಥೈರ್ಯ, ನೇರ, ನಿಷ್ಟುರ ನಡೆಗಳಿಗೆ ಉತ್ತಮ ಫಲಪಾಪ್ತವಾಗುವುದು. ನಿಮ್ಮ ನಿರ್ಧಾರಗಳು ಪರಿವರ್ತನೆಗೆ ಕಾರಣವಾಗುವವು. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರುವುದು. ಶುಭ ಸಂಖ್ಯೆ: 7

ಮೀನ: ಮಹತ್ತರ ಯೋಜನೆಗಳು ಕಾರ್ಯಗತವಾಗಲು ಪ್ರಾಜ್ಞರ ಮಾರ್ಗದರ್ಶನ. ಜೀವನದ ಏಳಿಗೆಗೆ ಚಿಂತನೆ. ಕೆಲಸದ ನಡುವೆ ಮತ್ತೊಂದು ಕಾರ್ಯ ವಹಿಸಿಕೊಳ್ಳಲು ಚೈತನ್ಯ. ಮಹಿಳೆಯರು ಪಶ್ಚಾತಾಪಕ್ಕೆ ಅವಕಾವಿಲ್ಲದಂತೆ ನಡೆದುಕೊಳ್ಳುವುದು ಒಳಿತು. ಶುಭ ಸಂಖ್ಯೆ: 9

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Published On - 6:32 am, Wed, 28 April 21

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!