AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today – ದಿನ ಭವಿಷ್ಯ: ಈ ರಾಶಿಯವರಿಗೆ ಬಾಳ ಸಂಗಾತಿ ಜತೆಗಿನ ಚಿಕ್ಕ-ಪುಟ್ಟ ಚರ್ಚೆಗಳೇ ವಿರಸಕ್ಕೆ ದಾರಿಯಾದೀತು

08-04-2021 ರ ಗುರುವಾರದ ರಾಶಿಭವಿಷ್ಯ: ಕರ್ಕ ರಾಶಿಯವರಿಗೆ ಉದ್ಯೋಗ ಬದಲಿ ಮಾಡುವದು ಸದ್ಯ ಬೇಡ. ಹಣದ ಕೊರತೆ ಇರಲಾರದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವದು.

Horoscope Today - ದಿನ ಭವಿಷ್ಯ: ಈ ರಾಶಿಯವರಿಗೆ ಬಾಳ ಸಂಗಾತಿ ಜತೆಗಿನ ಚಿಕ್ಕ-ಪುಟ್ಟ ಚರ್ಚೆಗಳೇ ವಿರಸಕ್ಕೆ ದಾರಿಯಾದೀತು
ದಿನ ಭವಿಷ್ಯ
ರಾಜೇಶ್ ದುಗ್ಗುಮನೆ
| Updated By: ಆಯೇಷಾ ಬಾನು|

Updated on: Apr 08, 2021 | 6:16 AM

Share

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣಪಕ್ಷ, ದ್ವಾದಶಿ ತಿಥಿ, ಗುರುವಾರ, ಏಪ್ರಿಲ್ 07, 2021. ಶತಭಿಷೆ ನಕ್ಷತ್ರ, ರಾಹುಕಾಲ : ರಾಹುಕಾಲ : ಇಂದು ಮಧ್ಯಾಹ್ನ 1:50 ರಿಂದ ಇಂದು ಸಂಜೆ 3:23 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.05. ಸೂರ್ಯಾಸ್ತ: ಸಂಜೆ 6.30.

ತಾ.08-04-2021 ರ ಗುರುವಾರದ ರಾಶಿಭವಿಷ್ಯ

ಮೇಷ: ಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವದು. ಶುಭ ಸಂಖ್ಯೆ: 5

ವೃಷಭ: ಮಾತಿನಂತೆಯೇ ಎಲ್ಲವೂ ನಡೆಯುವದಿಲ್ಲ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಉದಯೋನ್ಮುಖ ಪ್ರತಿಭೆಗಳಿಗೆ ಅವಕಾಶ ದೊರೆಯುವದು.ಲಾಭದಾಯಕ ಹುದ್ದೆ ದೊರೆಯುವದು. ಶುಭ ಸಂಖ್ಯೆ:  3

ಮಿಥುನ: ದೂರಾಲೋಚನೆ ಮಾಡಿ ಕಾರ್ಯ ನಿರ್ವಹಿಸಿರಿ. ವೃತ್ತಿಪರೆತೆಯಿಂದ ಕಾರ್ಯ ಕೈಗೂಡುವದು. ಪರಿವಾರದೊಂದಿಗೆ ದೂರ ಪ್ರವಾಸದ ಯೋಗವಿದೆ. ನೆಮ್ಮದಿಯ ಜೀವನ ಇರುವದು. ಉದ್ಯೋಗವನ್ನು ವಿಸ್ತರಿಸುವ ಕಾಲ ಇರುವದು. ಶುಭ ಸಂಖ್ಯೆ:  9

ಕರ್ಕ: ಉದ್ಯೋಗ ಬದಲಿ ಮಾಡುವದು ಸದ್ಯ ಬೇಡ. ಹಣದ ಕೊರತೆ ಇರಲಾರದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವದು. ಪಿತ್ರಾರ್ಜಿತ ಆಸ್ತಿ ದೊರೆಯುವ ಯೋಗವಿದೆ. ತಂದೆತಾಯಿಯ ವಿಷಯದಲ್ಲಿ ಚಿಂತೆ ಇರುವದು. ಶುಭ ಸಂಖ್ಯೆ:  4

ಸಿಂಹ: ಮಾನಸಮ್ಮಾನಗಳು ದೊರೆಯುವವು. ಕಂಕಣಬಲ ಕೂಡಿಬರುವದು. ಮನೋಭಿಲಾಷೆಗಳು ಈಡೇರುವವು. ಆದರೆ ಉದ್ಯೋಗದಲ್ಲಿ ನಿರಾಸಕ್ತಿಯನ್ನು ಇರುವದು ಮತ್ತು ವ್ಯವಹಾರದಲ್ಲಿ ಅಸಮಾಧಾನ ಕಂಡುಬರುವದು. ಶುಭ ಸಂಖ್ಯೆ:  6

ಕನ್ಯಾ: ದೈಹಿಕ ಸಮಸ್ಯೆಗಳು ಉಲ್ಬಣವಾಗಿ ಕೆಲಸಕ್ಕೆ ತೊಂದರೆ ಉಂಟುಮಾಡುವ ಸಾಧ್ಯತೆ ಇದೆ. ಮನೆಯಲ್ಲಿ ಕಾರ್ಯ ವಿರೋಧ ಇರುವದು. ಹಣಕಾಸಿನ ವಿಷಯದಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಮಾತಿಗಿಂತ ಕೃತಿಗೆ ಮಹತ್ವ ಕೊಡಿ. ಶುಭ ಸಂಖ್ಯೆ:  8

ತುಲಾ: ಕುಟುಂಬದಲ್ಲಿ ಮನಸ್ತಾಪ ಕಂಡುಬರುವದು. ಗೌಪ್ಯ ವ್ಯವಹಾರಗಳನ್ನು ಸರಿದೂಗಿಸಲು ಸಾಧ್ಯವಾಗದೇ ಪರಿತಪಿಸುವಿರಿ. ಆಸಕ್ತಿ ಆಪತ್ತು ತರುವ ಸಂಭವವಿದೆ. ಮಹತ್ವದ ನಿರ್ಧಾರಗಳಿಗೆ ಇದು ಸೂಕ್ತಕಾಲವಲ್ಲ. ಹಣಹೂಡಿಕೆ ಈಗ ಬೇಡ. ಶುಭ ಸಂಖ್ಯೆ:  1

ವೃಶ್ಚಿಕ: ಹೊಸ ಆಲೋಚನೆಯೊಂದು ಕಾರ್ಯರೂಪಕ್ಕೆ ಬರುವದು. ಸಹವರ್ತಿಗಳ ಅಸಹಕಾರ ಇದ್ದರೂ ತೊಂದರೆ ಆಗಲಾರದು. ಅನಪೇಕ್ಷಿತ ಸ್ಥಾನ ಬದಲಾವಣೆ ಆಗುವ ಸಾಧ್ಯತೆ ಇದೆ. ಸರಿಯಾದ ಧ್ಯೇಯದಿಂದ ಸಮಾಧಾನ ಇರುವದು. ಶುಭ ಸಂಖ್ಯೆ:  3

ಧನು: ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವದು. ಮನೋಚಿಂತಿತ ಕಾರ್ಯ ಕೈಗೂಡುವದು. ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವದು. ಪರರ ಸಹಾಯದ ಅನಿವಾರ್ಯತೆ ಇರಲಾರದು. ಆರೋಗ್ಯದ ಕಾಳಜಿ ಇರಲಿ. ಶುಭ ಸಂಖ್ಯೆ:  6

ಮಕರ: ದೂರ ಪ್ರಯಾಣದ ಅವಶ್ಯಕತೆ ಕಂಡುಬರುವದು. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ. ಅನೇಕ ರೀತಿಯ ಸೌಭಾಗ್ಯಗಳು ದೊರೆಯುವವು.ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್, ಮಶಿನರಿಗಳಿಂದ ತೊಂದರೆ ಸಾಧ್ಯತೆ. ಶುಭ ಸಂಖ್ಯೆ:  8

ಕುಂಭ: ಆಗುವುದೆಲ್ಲ ಒಳಿತೆಂಬ ಭಾವನೆ. ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರದ ನೆಲೆ ದೊರಕಿ ಹರ್ಷ. ಮಹಿಳೆಯರಿಗೆ ಮನೆಯಲ್ಲಿನ ಆಂತರಿಕ ವಿರಸ ನೀಗಿ ಸೌಹಾರ್ದತೆ. ನೂತನ ವಿವಾದ ಹುಟ್ಟುಹಾಕದ ಹಾಗೆ ತಾಳ್ಮೆಯಡಿ ವರ್ತನೆ. ಶುಭ ಸಂಖ್ಯೆ: 7

ಮೀನ: ಏಕಾಂಗಿತನದ ಬೇಸರ ಪರಿಸರದಿಂದ ಹೊರಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ. ನಿರಾಕರಿಸಿದ್ದ ಜವಾಬ್ದಾರಿ ಪುನ: ಸುಪರ್ದಿಗೆ ಬಂದು ಮೆಚ್ಚುಗೆಯಾಗಿ ನಿಭಾವಣೆ. ಬಾಳ ಸಂಗಾತಿ ಜತೆಗಿನ ಚಿಕ್ಕ ಪುಟ್ಟ ಚರ್ಚೆಗಳೇ ಮುಂದೆ ವಿರಸಕ್ಕೆ ದಾರಿಯಾದೀತು. ಶುಭ ಸಂಖ್ಯೆ: 7

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ಸುಜಾತ ಭಟ್ ಗೆ ಮಹೇಶ್ ತಿಮರೋಡಿ ಕೆಲದಿನ ಆಶ್ರಯ ನೀಡಿದ್ದರು: ಜಯಂತ್
ಸುಜಾತ ಭಟ್ ಗೆ ಮಹೇಶ್ ತಿಮರೋಡಿ ಕೆಲದಿನ ಆಶ್ರಯ ನೀಡಿದ್ದರು: ಜಯಂತ್
ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್​ಗೆ ಬರಲ್ಲ ಎಂದ ನಟಿ?
ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್​ಗೆ ಬರಲ್ಲ ಎಂದ ನಟಿ?
ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರವನ್ನು ಅಬೆಟರ್ ಅನ್ನೋದು ಸರಿಯಲ್ಲ: ಸಿಎಂ
ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರವನ್ನು ಅಬೆಟರ್ ಅನ್ನೋದು ಸರಿಯಲ್ಲ: ಸಿಎಂ
ರಸ್ತೆ ತಡೆಗೋಡೆ ಮೇಲೆ ಕುಳಿತು ಕ್ಯಾಮೆರಾಗೆ ಪೋಸ್​​ ಕೊಟ್ಟ ಚಿರತೆ
ರಸ್ತೆ ತಡೆಗೋಡೆ ಮೇಲೆ ಕುಳಿತು ಕ್ಯಾಮೆರಾಗೆ ಪೋಸ್​​ ಕೊಟ್ಟ ಚಿರತೆ
ವಿರೇಂದ್ರ ಪಪ್ಪಿ ಜೊತೆ ಕುಸುಮ ಸಹೋದರನ ವ್ಯಾವಹಾರಿಕ ಸಂಬಂಧ ಹಿನ್ನೆಲೆ ದಾಳಿ
ವಿರೇಂದ್ರ ಪಪ್ಪಿ ಜೊತೆ ಕುಸುಮ ಸಹೋದರನ ವ್ಯಾವಹಾರಿಕ ಸಂಬಂಧ ಹಿನ್ನೆಲೆ ದಾಳಿ
ಬಿಹಾರದಲ್ಲಿ ತೆಗೆದುಕೊಂಡ ಯಾವುದೇ ನಿರ್ಧಾರ ವ್ಯರ್ಥವಾಗುವುದಿಲ್ಲ: ಮೋದಿ
ಬಿಹಾರದಲ್ಲಿ ತೆಗೆದುಕೊಂಡ ಯಾವುದೇ ನಿರ್ಧಾರ ವ್ಯರ್ಥವಾಗುವುದಿಲ್ಲ: ಮೋದಿ
ಬಿಹಾರದಲ್ಲಿ 13 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
ಬಿಹಾರದಲ್ಲಿ 13 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ