AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಅತಿಯಾದ ಮಾತು ಅಪಾಯಕ್ಕೆ ಕಾರಣವಾಗುತ್ತೆ

Horoscope ಆಗಸ್ಟ್ 11, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಅತಿಯಾದ ಮಾತು ಅಪಾಯಕ್ಕೆ ಕಾರಣವಾಗುತ್ತೆ
ದಿನ ಭವಿಷ್ಯ
TV9 Web
| Edited By: |

Updated on: Aug 11, 2021 | 6:38 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಶ್ರಾವಣ ಮಾಸ, ವರ್ಷ ಋತು, ಶುಕ್ಲಪಕ್ಷ, ತದಿಗೆ ತಿಥಿ, ಬುಧವಾರ, ಆಗಸ್ಟ್ 11, 2021. ಪುಬ್ಬೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 12.21 ರಿಂದ ಇಂದು ಮಧ್ಯಾಹ್ನ 1.56 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.58. ಸೂರ್ಯಾಸ್ತ: ಸಂಜೆ 6.44

ತಾ.11-08-2021 ರ ಬುಧವಾರದ ರಾಶಿಭವಿಷ್ಯ

ಮೇಷ: ಅಪಮಾನ, ಅಪವಾದದಂತಹ ಸಮಸ್ಯೆಗೆ ಸಿಲುಕದಂತೆ ಜಾಗರೂಕರಾಗಿರಿ. ಈ ಸಮಯದಲ್ಲಿ ಮಾತನಾಡುವ ಬದಲು ಮಾತು ಕೇಳುವುದು ಉತ್ತಮ. ಮಕ್ಕಳು ಶಾಲಾ ಕಾಲೇಜುಗಳಲ್ಲಿ ಸಾಧನೆ ತೋರುವರು. ಶುಭ ಸಂಖ್ಯೆ: 6

ವೃಷಭ: ಹಾನಿ ತಪ್ಪಿಸಲು ಪ್ರಯತ್ನಿಸುವಿರಿ. ಕಠಿಣ ಆತಂಕದಿಂದ ಪಾರಾಗುವಿರಿ. ಅಧಿಕಾರಿಗಳ ಉಪದ್ರವಕ್ಕೆ ಮಣಿಯದೇ ಡಿಟ್ಟತನದಿಂದ ಕೆಲಸ ನಿರ್ವಹಿಸಿ. ವ್ಯಾಪಾರವೃದ್ಧಿಯಾಗುವುದು. ಆರ್ಥಿಕ ಸಂಕಷ್ಟ ದೂರಾಗುವುದು. ಶುಭ ಸಂಖ್ಯೆ: 2

ಮಿಥುನ: ಅತಿಯಾದ ಮಾತು ಅಪಾಯಕ್ಕೆ ಕಾರಣ. ಆಲಸ್ಯದಿಂದ ಕಾರ್ಯಹಾನಿಯಾಗುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯ ಪಡೆಯಿರಿ. ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆಯ ಆಗುವ ಯೋಗವಿದೆ. ಶುಭ ಸಂಖ್ಯೆ: 8

ಕಟಕ: ಉನ್ನತ ಹುದ್ದೆ ದೊರೆಯುವ ಸಾಧ್ಯತೆ ಇದೆ. ಸಾಧನೆಗೆ ಸೂಕ್ತ ಅವಕಾಶ ದೊರೆಯುವುದು. ಹಣಕಾಸಿನ ತೊಂದರೆಗಳು ಪರಿಹಾರವಾಗುವವು. ವ್ಯವಹಾರಗಳಲ್ಲಿ ಗೌಪ್ಯತೆ ಇರಲಿ. ಹಿತಶತ್ರುಗಳಿಂದ ತೊಂದರೆಯಾಗುವ ಸಧ್ಯತೆ ಇದೆ. ಶುಭ ಸಂಖ್ಯೆ: 1

ಸಿಂಹ: ಅನಿಸಿಕೆಗಿಂತ ವಾಸ್ತವ ಬೇರೆ ಇರುವುದರಿಂದ ತಕ್ಕ ಬದಲಾವಣೆ ಮಾಡಿಕೊಳ್ಳುವಿರಿ. ನಡತೆಯಲ್ಲ ಸೂಕ್ಷತೆ ಇರಲಿ. ವ್ಯವಹಾರವನ್ನು ಪೂರ್ಣವಾಗಿ ಆಲೋಚಿಸಿ ಮಾಡುವುದು ಒಳ್ಳೆಯದು. ಧನಹಾನಿಯ ಸಂಭವವಿದೆ. ಶುಭ ಸಂಖ್ಯೆ: 4

ಕನ್ಯಾ: ಸಾಲಗಾರರ ತೊಂದರೆ ಇರುವುದು. ಅನಾರೋಗ್ಯ, ವ್ಯವಹಾರದಲ್ಲಿ ಹಾನಿ ಕಂಡುಬರುವುದು. ನಿಧಾನಗತಿಯ ಕೆಲಸದಿಂದ ಮನೋಕ್ಷೋಭೆ ಉಂಟಾಗುವ ಸಂಭವವಿದೆ. ಶುಭ ಸಂಖ್ಯೆ: 7

ತುಲಾ: ಆಸ್ತಿ ಖರೀದಿ ಅಥವಾ ಹೊಸ ವ್ಯವಹಾರ ಆರಂಭಕ್ಕೂ ಮೊದಲು ಆತ್ಮೀಯರೊಂದಿಗೆ ಸಮಾಲೋಚನೆ ಮಾಡಿ ಮುಂದುವರಿಯಿರಿ. ಅಡೆತಡೆಗಳ ಮಧ್ಯದಲ್ಲಿಯೂ ನಿರೀಕ್ಷಿತ ಕಾರ್ಯಗಳು ಪೂರ್ಣವಾಗುವವು ಶುಭ ಸಂಖ್ಯೆ: 3

ವೃಶ್ಚಿಕ: ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕಂತೆ ಕೆಲಸಗಳು ಕೈಗೂಡುವವು. ಮಾತು ಕೇಳದ ಜನರಿಂದ ದೂರವಿರಿ. ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವದು. ಆಸ್ತಿ ಖರೀದಿ ಯೋಗವಿದೆ ಪ್ರಯತ್ನಿಸಿ. ಶುಭ ಸಂಖ್ಯೆ: 7

ಧನು: ಯೋಜನಾಬದ್ಧ ಕೆಲಸಗಳೂ ಕೂಡ ಮುಂದೂಡುವ ಪ್ರಸಂಗವಿದೆ. ಆಪ್ತವಲಯದಲ್ಲಿ ಸಮಾಲೋಚಿಸಿರಿ. ಅನಿವಾರ್ಯ ಕರ್ತವ್ಯಗಳಿಗೆ ಸಮಯ ಹೊಂದಾಣಿಕೆ ಮಾಡುವ ಸಾಧ್ಯತೆ ಇದೆ. ಆರ್ಥಕ ಸಂಕಷ್ಟಗಳು ಎದುರಾಗುವವು. ಶುಭ ಸಂಖ್ಯೆ: 4

ಮಕರ: ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು. ಮಾಡದ ತಪ್ಪಿಗೆ ಕ್ಷಮೆಕೇಳುವ ಪ್ರಸಂಗ ಇರುವದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವದು. ಶುಭ ಸಂಖ್ಯೆ: 9

ಕುಂಭ: ಅಪರಿಮಿತ ಖರ್ಚು ತೋರಿದರೂ ಅಡಚಣೆಯಾಗುವ ಸಂಭವವಿಲ್ಲದೆ. ಸ್ಥಾನಮಾನಗಳೂ ಭದ್ರವಾಗಿ ಸಾಂಸಾರಿಕ ದೃಷ್ಟಿಯಲ್ಲೂ ಸುಖದಾಯಕ, ವಿಶೆಷ ಪ್ರಯತ್ನದಿಂದ ವ್ಯವಹಾರ ಸಿದ್ಧಿ ಇರುವುದು. ಶುಭ ಸಂಖ್ಯೆ: 2

ಮೀನ: ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವದು. ಉತ್ಸಾಹ ಮೂಡುವದು. ದೋಷ ಪರಿಹಾರಕ್ಕೆ ಜಲದಾನ ಮಾಡಿರಿ. ಶುಭ ಸಂಖ್ಯೆ: 5

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ