AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಆಸ್ತಿ ವಿಷಯಕ್ಕೆ ಸಂಬಂಧಿಸಿದಂತೆ ತೊಂದರೆಯಾಗುವ ಸಂಭವವಿದೆ

Horoscope ಆಗಸ್ಟ್ 19, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಆಸ್ತಿ ವಿಷಯಕ್ಕೆ ಸಂಬಂಧಿಸಿದಂತೆ ತೊಂದರೆಯಾಗುವ ಸಂಭವವಿದೆ
ದಿನ ಭವಿಷ್ಯ
TV9 Web
| Edited By: |

Updated on: Aug 19, 2021 | 6:47 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಶ್ರಾವಣ ಮಾಸ, ವರ್ಷ ಋತು, ಶುಕ್ಲಪಕ್ಷ, ದ್ವಾದಶಿ ತಿಥಿ, ಗುರುವಾರ, ಆಗಸ್ಟ್ 19, 2021. ಪೂರ್ವಾಷಾಢ ನಕ್ಷತ್ರ, ರಾಹುಕಾಲ: ಇಂದು ಮಧ್ಯಾಹ್ನ 1.53 ರಿಂದ ಇಂದು ಸಂಜೆ 3.27 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.59. ಸೂರ್ಯಾಸ್ತ: ಸಂಜೆ 6.39

ತಾ.19-08-2021 ರ ಗುರುವಾರದ, ರಾಶಿಭವಿಷ್ಯ.

ಮೇಷ: ಪ್ರತಿಯೊಂದು ಕೆಲಸದಲ್ಲಿಯೂ ವಿಳಂಬ ಉಂಟಾಗುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳು ಹೆಚ್ಚಾಗುವವು. ವೃಥಾ ತಿರುಗಾಟ ಇರುವುದು ಆದರೂ ಕೀರ್ತಿದಾಯಕ ಫಲವಿದೆ. ಶುಭ ಸಂಖ್ಯೆ: 4

ವೃಷಭ: ಆಸ್ತಿ ವಿಷಯಕ್ಕೆ ಸಂಬಂಧಿಸಿದಂತೆ ತೊಂದರೆಯಾಗುವ ಸಂಭವವಿದೆ. ಆದಾಯ ಉತ್ತಮವಾಗಿರುವುದು. ನೌಕರಿಯಲ್ಲಿ ಅಸಹಕಾರ ಎದುರಿಬೇಕಾಗುವುದು. ಗ್ರಹಸೌಖ್ಯವಿದ್ದರೂ ಮಾನಸಿಕ ನೆಮ್ಮದಿ ಇರಲಾರದು. ಶುಭ ಸಂಖ್ಯೆ: 9

ಮಿಥುನ: ಸ್ವಪ್ರತಿಷ್ಟೆ ಬಿಟ್ಟು ಬಲ್ಲವರ ಸಹಾಯ ಪಡೆಯಿರಿ. ಮರೆತು ಹೋದ ವಸ್ತು ಲಾಭದಾಯಕವಾಗಿ ಪರಿಣಮಿಸುವುದು. ಹಳೆಯ ಮಿತ್ರರ ಒಡನಾಟ ಸಂತಸ ತರುವುದು. ಆರ್ಥಿಕ ಸ್ಥಿತಿಯಲ್ಲಿ ಬೆಳವಣಿಗೆ ಇರುವುದು. ಶುಭ ಸಂಖ್ಯೆ: 3

ಕಟಕ: ಉದ್ಯೋಗ ಬದಲಿ ಮಾಡುವುದು ಸದ್ಯ ಬೇಡ. ಹಣದ ಕೊರತೆ ಇರಲಾರದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಪಿತ್ರಾರ್ಜಿತ ಆಸ್ತಿ ದೊರೆಯುವ ಯೋಗವಿದೆ. ತಂದೆತಾಯಿಯ ವಿಷಯದಲ್ಲಿ ಚಿಂತೆ ಇರುವುದು. ಶುಭ ಸಂಖ್ಯೆ: 8

ಸಿಂಹ: ಎಲ್ಲವನ್ನು ಹಗುರವಾಗಿ ಕಾಣುವುದರಿಂದ ಸಣ್ಣ ವಿಷಯವೂ ದೊಡ್ಡ ಸಮಸ್ಯೆಯಾಗುವುದು. ಹಣಕಾಸಿನ ತೊಂದರೆಗಳು ಕಂಡುಬರುವವು. ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ: 2

ಕನ್ಯಾ: ವ್ಯವಹಾರಿಕ ಅಭಿವೃದ್ಧಿ ಇರುವುದು. ನಿಂತ ಕೆಲಸಗಳು ಮುಂದುವರೆಯುವವು. ಕಠಿಣ ಪರಿಶ್ರಮದಿಂದ ಕೆಲಸ ಕೈಗೂಡುವುದು. ಹಾನಿಯ ಪ್ರಮಾಣ ಕಡಿಮೆಯಾಗುವುದು. ಶುಭ ಸಂಖ್ಯೆ: 7

ತುಲಾ: ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು. ಮಾಡದ ತಪ್ಪಿಗೆ ಕ್ಷಮೆಕೇಳುವ ಪ್ರಸಂಗ ಇರುವುದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವುದು. ಶುಭ ಸಂಖ್ಯೆ: 2

ವೃಶ್ಚಿಕ: ಕುಟುಂಬದಲ್ಲಿ ಮನಸ್ತಾಪ ಕಂಡುಬರುವುದು. ಗೌಪ್ಯ ವ್ಯವಹಾರಗಳನ್ನು ಸರಿದೂಗಿಸಲು ಸಾಧ್ಯವಾಗದೇ ಪರಿತಪಿಸುವಿರಿ. ಆಸಕ್ತಿ ಆಪತ್ತು ತರುವ ಸಂಭವವಿದೆ. ಮಹತ್ವದ ನಿರ್ಧಾರಗಳಿಗೆ ಇದು ಸೂಕ್ತಕಾಲವಲ್ಲ. ಹಣಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 6

ಧನು: ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಶುಭ ಸಂಖ್ಯೆ: 1

ಮಕರ: ತಪ್ಪುಗಳನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಅಧಿಕಾರಿಗಳ ಕಿರಿಕಿರಿಗೆ ಮಣಿಯದೇ ಧೈರ್ಯದಿಂದ ಕೆಲಸ ನಿರ್ವಹಿಸಿರಿ. ಮತ್ತೊಬ್ಬರ ಮೇಲೆ ಅತಿಯಾದ ವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಶುಭ ಸಂಖ್ಯೆ: 5

ಕುಂಭ: ಸ್ವೀಕೃತ ಕಾರ್ಯವು ಫಲಪ್ರದವಾಗಿ ಗೌರವ ಆದರಗಳು ಪ್ರಾಪ್ತವಾಗುವವು. ಈ ಸಮಯದಲ್ಲಿ ಉತ್ತಮ ಧನಾರ್ಜನೆಯಾಗುವುದು ವಿದೇಶ ಪ್ರಯಾಣ, ಪ್ರೇಮಸಂಭಾಷಣೆ, ದೇವ ಬ್ರ್ರಾಹ್ಮಣ, ಧರ್ಮಕಾರ್ಯಗಳು ನಡೆಯುವವು. ಸ್ಥಿರಾಸ್ತಿಗೆ ಸಂಬಂಧಿಸಿದ ವ್ಯಾಜ್ಯ ಪರಿಹಾರವಾಗುವವು. ಶುಭ ಸಂಖ್ಯೆ: 9

ಮೀನ: ದಿಟ್ಟತನ, ಮನೋಸ್ಥೈರ್ಯ, ನೇರ, ನಿಷ್ಟುರ ನಡೆಗಳಿಗೆ ಉತ್ತಮ ಫಲಪಾಪ್ತವಾಗುವುದು. ನಿಮ್ಮ ನಿರ್ಧಾರಗಳು ಪರಿವರ್ತನೆಗೆ ಕಾರಣವಾಗುವವು. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರುವುದು. ಶುಭ ಸಂಖ್ಯೆ: 3

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Follow Us
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು