AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಅನವಶ್ಯಕ ಅಲೆದಾಟದ ಸಾಧ್ಯತೆ ಇದೆ

Horoscope ಡಿಸೆಂಬರ್ 03, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಅನವಶ್ಯಕ ಅಲೆದಾಟದ ಸಾಧ್ಯತೆ ಇದೆ
ದಿನ ಭವಿಷ್ಯ
TV9 Web
| Updated By: Vinay Bhat|

Updated on: Dec 03, 2021 | 6:35 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಕಾರ್ತಿಕ ಮಾಸ, ಶರದೃತು, ಕೃಷ್ಣಪಕ್ಷ, ಚತುರ್ದಶಿ ತಿಥಿ, ಶುಕ್ರವಾರ, ಡಿಸೆಂಬರ್ 03, 2021. ವಿಶಾಖ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 10.41 ರಿಂದ ಇಂದು ಬೆಳಿಗ್ಗೆ 12.04 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.31. ಸೂರ್ಯಾಸ್ತ: ಸಂಜೆ 5.40

ತಾ.03-12-2021 ರ ಶುಕ್ರವಾರದ ರಾಶಿಭವಿಷ್ಯ.

ಮೇಷ: ದೂರಾಲೋಚನೆಯಿಂದ ಕಾರ್ಯದಲ್ಲಿ ಯಶಸ್ಸು. ಆಸ್ತಿ ಖರೀದಿ ಸಾಧ್ಯ. ವೈವಾಹಿಕ ಚಿಂತೆ ಇರುವದು. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗವಿದೆ. ಧಾರ್ಮಿಕ ಕ್ಷೇತ್ರಗಳ ದರ್ಶನ ಯೋಗವಿದೆ. ಶುಭ ಸಂಖ್ಯೆ: 6

ವೃಷಭ: ಹಾನಿ ತಪ್ಪಿಸಲು ಪ್ರಯತ್ನಿಸುವಿರಿ. ಕಠಿಣ ಆತಂಕದಿಂದ ಪಾರಾಗುವಿರಿ. ಅಧಿಕಾರಿಗಳ ಉಪದ್ರವಕ್ಕೆ ಮಣಿಯದೇ ಡಿಟ್ಟತನದಿಂದ ಕೆಲಸ ನಿರ್ವಹಿಸಿ. ವ್ಯಾಪಾರವೃದ್ಧಿಯಾಗುವುದು. ಆರ್ಥಿಕ ಸಂಕಷ್ಟ ದೂರಾಗುವುದು. ಶುಭ ಸಂಖ್ಯೆ: 1

ಮಿಥುನ: ಹೊಸ ಕೆಲಸವನ್ನು ಒಪ್ಪಿಕೊಳ್ಳುವ ಮೊದಲು ವಿಚಾರಮಾಡಿ ಮುಂದುವರೆಯಿರಿ. ಉದ್ಯೋಗದ ಸ್ಥಾನ ಬದಲಾವಣೆಯ ಯೋಗವಿದೆ. ಆಮಿಷಕ್ಕೆ ಒಳಗಾಗಿ ಮೋಸಹೋಗುವ ಸಂಭವವಿದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ: 9

ಕಟಕ: ಅಂತಃಶತ್ರುಗಳ ಕಾಟ ಹೆಚ್ಚಾಗುವ ಲಕ್ಷಣವಿದೆ. ಹಳೆಯ ಸಮಸ್ಯೆಗಳು ಮತ್ತೆ ಎದುರಾಗುವ ಸಂಭವವಿದೆ. ಚಂಚಲತೆ ಬೇಡ, ಹಿಡಿದ ಕಾರ್ಯವನ್ನು ಪೂರ್ಣಗೊಳಿಸಿ. ಆರ್ಥಿಕ ಲಾಭವಿದೆ ಆದರೆ ವಿದ್ಯೆಯಲ್ಲಿ ಹಿನ್ನಡೆ ಕಂಡುಬರುವುದು. ಶುಭ ಸಂಖ್ಯೆ: 7

ಸಿಂಹ: ಬರುವ ಕಷ್ಟಗಳನ್ನು ಎದುರಿಸಿ ಸಫಲತೆಯನ್ನು ಹೊಂದುವಿರಿ. ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಶುಭ ಸಂಖ್ಯೆ: 2

ಕನ್ಯಾ: ಅಪೇಕ್ಷಿತ ಸ್ಥಾನಮಾನಗಳು ದೊರೆಯುವವು. ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಭಂಗವಿಲ್ಲ. ಆದಾಯಕ್ಕಿಂತ ಅಧಿಕ ಖರ್ಚು ಇರುವುದು. ಶುಭ ಸಂಖ್ಯೆ: 4

ತುಲಾ: ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಸಹೋದರ ಸಹಕಾರ ತೋರುವುದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವುದು. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 8

ವೃಶ್ಚಿಕ: ಅನವಶ್ಯಕ ಅಲೆದಾಟದ ಸಾದ್ಯತೆ ಇದೆ. ಕರ್ತವ್ಯಕ್ಕೆ ಚ್ಯುತಿಯಾಗದಂತೆ ನಡೆದುಕೊಳ್ಳಲು ಪ್ರಯತ್ನ ಮಾಡುವಿರಿ. ಹಿತಶತ್ರುಗಳಿಂದ ತೊಂದರೆಯಾಗುವ ಸಾಧ್ಯತೆ ಇದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ. ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಶುಭ ಸಂಖ್ಯೆ: 7

ಧನು: ಅನಿರೀಕ್ಷಿತ ಧನ ನಷ್ಟ. ತಿರುಗಾಟ ಒದಗಿಬಂದು, ದೇಹಾಲಸ್ಯವು ತಲೆ ದೋರುವುದು, ಅರ್ಥಾರ್ಜನೆಯ ಮಾರ್ಗವು ಸುಗಮವಿದ್ದು, ಸಾಂಸಾರಿಕ ದೃಷ್ಟಿಯಲ್ಲೂ ಉತ್ತಮವಿರುವುದರಿಂದ ಚಿಂತೆಯ ಅವಶ್ಯಕತೆ ಇಲ್ಲ. ಶುಭ ಸಂಖ್ಯೆ: 3

ಮಕರ: ಹಲವು ರೀತಿಯಿಂದ ಧನಾಗಮನವಿದ್ದು ಐಶ್ವರ್ಯವೃದ್ಧಿ, ಸಂಸಾರ ಸುಖ. ಅಪೇಕ್ಷಿತ ವಸ್ತು, ಪ್ರಾಪ್ತಿ, ಮಿತ್ರಾಗಮನ, ವಿಶೇಷ ಸಂತೋಷ ಪ್ರಸಂಗಗಳು ಒದಗಿ ಬಂದು ಸಂಭ್ರಮವೆನಿಸುತ್ತದೆ. ಶುಭ ಸಂಖ್ಯೆ: 5

ಕುಂಭ: ದೂರ ಪ್ರಯಾಣದ ಅವಶ್ಯಕತೆ ಕಂಡುಬರುವದು. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ. ಅನೇಕ ರೀತಿಯ ಸೌಭಾಗ್ಯಗಳು ದೊರೆಯುವವು.ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್, ಮಶಿನರಿಗಳಿಂದ ತೊಂದರೆ ಸಾಧ್ಯತೆ. ಶುಭ ಸಂಖ್ಯೆ: 9

ಮೀನ: ಸ್ವೀಕೃತ ಕಾರ್ಯವು ಫಲಪ್ರದವಾಗಿ ಗೌರವ ಆದರಗಳು ಪ್ರಾಪ್ತವಾಗುವವು. ಈ ಸಮಯದಲ್ಲಿ ಉತ್ತಮ ಧನಾರ್ಜನೆಯಾಗುವುದು ವಿದೇಶ ಪ್ರಯಾಣ, ಪ್ರೇಮ ಸಂಭಾಷಣೆ, ದೇವ ಬ್ರ್ರಾಹ್ಮಣ, ಧರ್ಮಕಾರ್ಯಗಳು ನಡೆಯುವವು. ಸ್ಥಿರಾಸ್ತಿಗೆ ಸಂಬಂಧಿಸಿದ ವ್ಯಾಜ್ಯ ಪರಿಹಾರವಾಗುವವು. ಶುಭ ಸಂಖ್ಯೆ: 5

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937

ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ