AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಕೆಲಸ ಕಾರ್ಯಗಳು ಸುಲಭವಾಗಿ ನಿಮ್ಮಿಚ್ಛೆಯಂತೆ ಕೈಗೂಡುವವು

Horoscope ಡಿಸೆಂಬರ್ 04, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಕೆಲಸ ಕಾರ್ಯಗಳು ಸುಲಭವಾಗಿ ನಿಮ್ಮಿಚ್ಛೆಯಂತೆ ಕೈಗೂಡುವವು
ದಿನ ಭವಿಷ್ಯ
TV9 Web
| Edited By: |

Updated on: Dec 04, 2021 | 6:35 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಕಾರ್ತಿಕ ಮಾಸ, ಶರದೃತು, ಕೃಷ್ಣಪಕ್ಷ, ಅಮಾವಾಸ್ಯೆ ತಿಥಿ, ಶನಿವಾರ, ಡಿಸೆಂಬರ್ 04, 2021. ಅನೂರಾಧ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 09.18 ರಿಂದ ಇಂದು ಬೆಳಿಗ್ಗೆ 10.41 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.31. ಸೂರ್ಯಾಸ್ತ: ಸಂಜೆ 5.40

ತಾ.04-12-2021 ರ ಶನಿವಾರದ ರಾಶಿಭವಿಷ್ಯ. ಮೇಷ: ಆಕಸ್ಮಿಕ ಧನಲಾಭವಾಗಲಿದೆ. ಕೆಲಸ ಕಾರ್ಯಗಳು ಸುಲಭವಾಗಿ ನಿಮ್ಮಿಚ್ಛೆಯಂತೆ ಕೈಗೂಡುವವು. ಆತ್ಮೀಯರ ಭೇಟಿ ಮತ್ತು ಸಂತೋಷದ ಸುದ್ದಿ ಕೇಳುವ ಸಾಧ್ಯತೆ. ವಿದ್ಯಾರ್ಥಿಗಳಿಗೆ ಆಟಪಾಠಗಳಲ್ಲಿ ಹಿನ್ನಡೆ. ವ್ಯಾಪಾರದಲ್ಲಿ ಸ್ವಲ್ಪಮಟ್ಟಿನ ನಷ್ಟ. ಶುಭ ಸಂಖ್ಯೆ: 6

ವೃಷಭ: ಊಹಾಪೋಹಗಳು ಬೇಡ. ಕೌಟುಂಬಿಕ ಸುಖ, ಶಾಂತಿಗಳು ನೆಲೆಸಿ ಮಾನಸಿಕ ನೆಮ್ಮದಿ. ಕಾರ್ಯ–ಕಲಾಪಗಳಲ್ಲಿ ಪ್ರಗತಿ. ಕೊಡುಕೊಳ್ಳುವ ವ್ಯವಹಾರಗಳಲ್ಲಿ ಲಾಭ ನಿರೀಕ್ಷಿಸಬಹುದು. ದೂರ ಪ್ರಯಾಣದ ಯೋಜನೆ ರೂಪುಗೊಳ್ಳುವ ಸಾಧ್ಯತೆ. ಶುಭ ಸಂಖ್ಯೆ: 9

ಮಿಥುನ: ಮಾನಸಿಕ ಚಂಚಲದಿಂದ ಭಯದ ವಾತಾವರಣ. ವ್ಯಾಪಾರ ವ್ಯವಹಾರಗಳಲ್ಲಿ ಲಾಭದ ಇಳಿಮುಖ. ಉದ್ಯೋಗಸ್ಥರಿಗೆ ವಿಶ್ವಾಸದ ನಿರ್ಧಾರಗಳಿಂದಾಗಿ ಮುನ್ನಡೆ. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಪ್ರಗತಿ. ಶುಭ ಸಂಖ್ಯೆ: 2

ಕಟಕ: ಕಾರ್ಯಬಾಹುಳ್ಯದಿಂದಾಗಿ ಒತ್ತಡ ಹೆಚ್ಚಾಗಿ ಕೆಲಸ ಕಾರ್ಯಗಳಲ್ಲಿ ಮಂದಗತಿ. ದಾಯಾದಿ ಕಲಹ ಸಂಭವ. ವಾಹನ ಪ್ರಯಾಣದ ಬಗ್ಗೆ ಎಚ್ಚರಿಕೆ ವಹಿಸುವುದು ಸೂಕ್ತ. ಗುರು ಹಿರಿಯರೊಡನೆ ಸಮಾಲೋಚನೆ ಸಾಧ್ಯತೆ. ಶುಭ ಸಂಖ್ಯೆ: 6

ಸಿಂಹ: ಪ್ರೀತಿ ಪಾತ್ರರೊಂದಿಗೆ ಚರ್ಚೆ. ಆರೋಗ್ಯದಲ್ಲಿ ಸುಧಾರಣೆ.y ಉದ್ಯೋಗದಲ್ಲಿ ಪ್ರಗತಿ. ಸಾಮಾಜಿಕ ಕೆಲಸ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಕುಟುಂಬ ಸದಸ್ಯರೊಂದಿಗೆ ದೇವತಾ ದರ್ಶನ. ಶುಭ ಸಂಖ್ಯೆ: 4

ಕನ್ಯಾ: ಕೆಲಸ ಕಾರ್ಯಗಳು ಸುಲಭವಾಗಿ ನೆರವೇರಿ ಸಂತಸ. ಲೇವಾದೇವಿ ಹಣಕಾಸು ವ್ಯವಹಾರಸ್ಥರಿಗೆ ಅಧಿಕ ಲಾಭ. ಉದ್ಯೋಗ ನಿಮಿತ್ತ ವಿದೇಶ ಯಾನದ ಸಾಧ್ಯತೆ. ಹಿರಿಯರ ಆರೋಗ್ಯದ ಬಗ್ಗೆ ಗಮನ ಅಗತ್ಯ. ಶುಭ ಸಂಖ್ಯೆ: 1

ತುಲಾ: ವ್ಯಾಪಾರ, ವ್ಯವಹಾರಗಳಲ್ಲಿ ಯಶಸ್ಸು. ಸಕಾಲದಲ್ಲಿ ಕೆಲಸ ಕಾರ್ಯಗಳು ಪೂರೈಸಿದ ಸಂತಸ. ಸಂಘ ಸಂಸ್ಥೆಗಳಿಂದ ಸಹಾಯ ಸಹಕಾರ ದೊರಕಲಿದೆ. ಹೊಸ ಹೊಸ ವ್ಯವಹಾರಗಳ ಬಗ್ಗೆ ಚಿಂತನೆ. ಶುಭ ಸಂಖ್ಯೆ: 7

ವೃಶ್ಚಿಕ: ನಿರೀಕ್ಷಿತ ಕೆಲಸ ಕಾರ್ಯಗಳು ನಡೆಯದೇ ವ್ಯತಿರಿಕ್ತ ಪರಿಣಾಮಗಳುಂಟಾಗಬಹುದು. ಅಹಿತಕರ ಘಟನೆಗಳಿಂದಾಗಿ ವೃಥಾ ದಂಡ ತೆರಬೇಕಾದೀತು. ಲೇವಾದೇವಿ ವ್ಯವಹಾರವನ್ನು ದಿನದ ಮಟ್ಟಿಗೆ ಮುಂದೂಡಿ. ಶುಭ ಸಂಖ್ಯೆ: 8

ಧನು: ನಿರೀಕ್ಷಿತ ಕೆಲಸ ಕಾರ್ಯಗಳು ಫಲ ನೀಡಿ ಸಂತಸ. ವ್ಯಾಪಾರದಲ್ಲಿ ಲಾಭ. ಆತ್ಮೀಯ ವ್ಯಕ್ತಿಗಳ ಸಂದರ್ಶನ ಸಾಧ್ಯತೆ. ದೂರದಲ್ಲಿರುವ ಮಕ್ಕಳಿಂದ ಸಹಾಯ ಹರಿದು ಬರುವ ಸಾಧ್ಯತೆ. ಉದ್ಯೋಗಸ್ಥರಿಗೆ ಮೇಲಧಿಕಾರಿಗಳಿಂದ ಪ್ರಶಂಸೆ. ಶುಭ ಸಂಖ್ಯೆ: 6

ಮಕರ: ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷೆ ಮೀರಿದ ಲಾಭ. ಆಪ್ತೇಷ್ಟರ ಆಗಮನ ಸಾಧ್ಯತೆ. ಬಹುದಿನಗಳಿಂದ ನಿರೀಕ್ಷೆಯಲ್ಲಿದ್ದ ಸಮಾಚಾರ ಕೇಳಿ ದುಗುಡ ನಿವಾರಣೆ. ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ಅಗತ್ಯ. ಶುಭ ಸಂಖ್ಯೆ: 3

ಕುಂಭ: ಉದ್ಯೋಗ ಕ್ಷೇತ್ರದಲ್ಲಿ ಸಮಾಧಾನ. ಕುಟುಂಬದಲ್ಲಿ ಶಾಂತ ವಾತಾವರಣ. ವಿದ್ಯಾರ್ಥಿಗಳಿಗೆ ಆಟ–ಪಾಠಗಳಲ್ಲಿ ಹೆಚ್ಚಿನ ಪ್ರಗತಿ. ಉದ್ಯೋಗಸ್ಥರಿಗೆ ಕಚೇರಿ ಲೆಕ್ಕಪತ್ರಗಳಲ್ಲಿನ ತೊಡಕುಗಳು ನಿವಾರಣೆಯಾಗಿ ನಿರಾಳತೆ. ಶುಭ ಸಂಖ್ಯೆ: 5

ಮೀನ: ಅನಿರೀಕ್ಷಿತ ಪ್ರಯಾಣ ಸಂಭವಿಸಿ ವೃಥಾ ಖರ್ಚಿಗೆ ನಾಂದಿಯಾಗುವ ಸಾಧ್ಯತೆ. ಆತ್ಮೀಯರ ಆರೋಗ್ಯದಲ್ಲಿ ವ್ಯತ್ಯಯ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ. ಹಿರಿಯರ ಮಾತುಗಳನ್ನು ಕಡೆಗಣಿಸದಿರಿ. ಹಿತಶತ್ರುಗಳ ಭಯ. ಶುಭ ಸಂಖ್ಯೆ: 8

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!